Headlines

ಸಾಧನೆಗೆ ಅಡ್ಡಿಯಾಗದ ಅಂಗವೈಕಲ್ಯ: ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ! – Kannada News | Physically Disabled Youth from Mangaluru Builds Online Business Empire

ಮಂಗಳೂರು, ಜನವರಿ 27: ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗುವುದಿಲ್ಲ ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಬೀರ್ ಎಂಬ ಯುವಕ ಸಾಬೀತುಪಡಿಸಿದ್ದಾರೆ. ಅಬ್ಬಾಸ್ ಮತ್ತು ಅಮೀನಾ ದಂಪತಿಯ ಪುತ್ರರಾದ ಕಬೀರ್, ಒಂಭತ್ತು ತಿಂಗಳ ವಯಸ್ಸಿನಲ್ಲಿ ಜ್ವರದಿಂದ ದೇಹದ ಸ್ವಾಧೀನ ಕಳೆದುಕೊಂಡರು. ಪ್ರಸ್ತುತ 25 ವರ್ಷ ವಯಸ್ಸಿನ ಕಬೀರ್, ಕುತ್ತಿಗೆ ಮೇಲ್ಭಾಗದಲ್ಲಿ ಮತ್ತು ಹೆಬ್ಬೆರಳಿನಲ್ಲಿ ಮಾತ್ರ ಚಲನೆಯನ್ನು ಹೊಂದಿದ್ದಾರೆ. ಕೇವಲ ತಮ್ಮ ಹೆಬ್ಬೆರಳಿನ ಸಹಾಯದಿಂದ ಮೊಬೈಲ್‌ನಲ್ಲಿ ಫೋಟೋ ಎಡಿಟಿಂಗ್, ವಿಡಿಯೋ ಎಡಿಟಿಂಗ್ ಕಲಿತ ಇವರು, ಆನ್‌ಲೈನ್ ವ್ಯವಹಾರವನ್ನು ನಡೆಸುತ್ತಿದ್ದಾರೆ….

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Prospects Weekly Horoscope January 11 17, 2026: Challenges and Opportunities

11-01-2026ರಿಂದ 17-01-2026ರವರಗೆ ಉದ್ಯೋಗದಲ್ಲಿ ನಾನಾ ಬಗೆಯ ವಿಷಮತೆಗಳು ಕಂಡುಬಂದರೂ ಅಂತ್ಯದಲ್ಲಿ ಸಮತ್ವ ಉಂಟಾಗಲಿದೆ.‌ ನಿರುದ್ಯೋಗಿಗಳಿಗೆ ಅವರಿಗೆ ಬೇಕಾದ ಕೆಲಸವಿಲ್ಲ ಎಂಬ ಬೇಸರವೇ ಅಧಿಕ. ನಿಮ್ಮ ಮನಸ್ಸಿನ ಮೇಲೆ ಈ ವಾರ ಹೆಚ್ಚು ಪರಿಣಾಮಕಾರಿಯಾದ ಪ್ರಭಾವ ಬೀರಲಿದೆ. ಮೇಷ ರಾಶಿ: ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಈ ವಾರ ಉದ್ಯೋಗದಲ್ಲಿರುವವರಿಗೆ ಹೊಸ ಹೊಣೆಗಾರಿಕೆಗಳಿಂದ ಮೆಚ್ಚುಗೆ ಸಿಗುತ್ತದೆ, ನಿರುದ್ಯೋಗಿಗಳಿಗೆ ಅವಕಾಶ ಸೂಚನೆ ಇದ್ದರೂ ಆತುರದ ನಿರ್ಧಾರ ಮತ್ತು ಅಸಮಾಧಾನ ಪ್ರಗತಿಯನ್ನು ಸ್ವಲ್ಪ ತಡೆಯಬಹುದು. ವೃಷಭ ರಾಶಿ: ಈ ವಾರದಲ್ಲಿ ಉದ್ಯೋಗಸ್ಥರಿಗೆ…

Read More

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು…

Read More

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ – Kannada News | Elephant playing with dog while splashing water

ಆನೆಗಳು (Elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ಆಟ ತುಂಟಾಟದ ವಿಡಿಯೋಗಳನ್ನು ನೀವು ನೋಡಿರುತ್ತೀರಿ.  ಆದರೆ ಇಲ್ಲಿ ತನ್ನ ಸ್ನೇಹಿತನ ಜತೆಗೆ ಆನೆಯೊಂದು ತುಂಟಾಟವಾಡುವುದರಲ್ಲಿ ಬ್ಯುಸಿಯಾಗಿದೆ. ಗಜರಾಜನು ಸೊಂಡಿಲಿನಿಂದ ನೀರು ಎರಚುತ್ತಾ ಶ್ವಾನದೊಂದಿಗೆ ಆಟ ಆಡಿದೆ. ಮುಗ್ಧ ಜೀವಿಗಳ ಈ ಪರಿಶುದ್ಧ ಗೆಳೆತನಕ್ಕೆ ನೆಟಿಗರು ಫುಲ್‌ ಫಿದಾ ಆಗಿದ್ದಾರೆ. ಮೈಸೂರುಕೆಎ09ವೈಲ್ಡ್‌ ಲೈಫ್‌ (MYSOREKA09WILDLIFE) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮಾಣಿಕ್ಯ ತನ್ನ ಸ್ನೇಹಿತ ಡಾಲಿ ಜತೆಗೆ ಆಟ ಎಂದು…

Read More

ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ – Kannada News | Arnataka Govt Revokes BJP Leader Bhookant’s Cabinet Rank Amidst Congress Backlash

ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರImage Credit source: Tv9 Kannada ಬೆಂಗಳೂರು, ಫೆಬ್ರವರಿ 11: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್​​ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್​​ ಸರ್ಕಾರದಿಂದ ಈ…

Read More

ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ – Kannada News | 150 people dead in West Bengal due to SIR pressure CM Mamata Banerjee Tells in Supreme Court

ನವದೆಹಲಿ, ಫೆಬ್ರವರಿ 4: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಇಂದು ಸುಪ್ರೀಂ ಕೋರ್ಟ್​ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಾದ ಮಂಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್​ಐಆರ್ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ ದೀದಿ ಹೇಳಿದ್ದಾರೆ. ಹೀಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ ಅಪರೂಪದ ಘಟನೆ ಇಂದು ನಡೆಯಿತು. ಎಸ್​ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ…

Read More

CUET UG 2026: CUET UG ನೋಂದಣಿ ಪ್ರಾರಂಭ; ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಲ್ಲಿ ತಿಳಿಯಿರಿ – Kannada News | CUET UG 2026 Application Open: NTA Registration Dates, Eligibility and Fees

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2026ರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಪದವಿಪೂರ್ವ (CUET-UG) ಕ್ಕೆ ಜನವರಿ 3ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NTA ಯ ಅಧಿಕೃತ ವೆಬ್‌ಸೈಟ್ cuet.nta.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. CUET UG ನೋಂದಾಯಿಸಲು ಕೊನೆಯ ದಿನಾಂಕ ಜನವರಿ 30, ಮತ್ತು ಅಭ್ಯರ್ಥಿಗಳು ಜನವರಿ 31 ರವರೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ಅರ್ಜಿ ನಮೂನೆಯಲ್ಲಿ ತಿದ್ದುಪಡಿಗಳನ್ನು ಮಾಡಲು ತಿದ್ದುಪಡಿ ವಿಂಡೋ ಫೆಬ್ರವರಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ – Kannada News | Bengaluru temperature: clear sky and cold weather in Bengaluru, Dry weather all over Karnataka

ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast)  ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್,…

Read More

Chikkaballapur: ಕುಡಿದ ಅಮಲಿನಲ್ಲಿ ಕದಿಯಲು ಹೋದ ಮನೆಯಲ್ಲೇ ಬೆಚ್ಚಗೆ ಮಲಗಿದ ಕಳ್ಳ! – Kannada News | Drunk Thief Naps in Stolen House: Chikkaballapur’s Bizarre Burglary

ಚಿಕ್ಕಬಳ್ಳಾಪುರ, ಫೆಬ್ರವರಿ 09: ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ ಅದೆಷ್ಟೋ ಪ್ರಕರಣಗಳ ಬಗ್ಗೆ ನಾವು ಕೇಳಿದ್ದೇವೆ. ಒಂದೇ ಒಂದು ಸಾಕ್ಷಿಯೂ ಪೊಲೀಸರಿಗೆ ಸಿಗದಂತೆ ಎಸ್ಕೇಪ್​​ ಆಗುವ ಘಟನೆಗಳ ಬಗ್ಗೆಯೂ ತಿಳಿದಿದ್ದೇವೆ. ಆದ್ರೆ ಇಲ್ಲೊಬ್ಬ ಖದೀಮ ಎಣ್ಣೆ ನಶೆಯಲ್ಲಿ ಕಳ್ಳತನಕ್ಕೆಂದು ಮನೆಗೆ ನುಗ್ಗಿದ್ದ ವೇಳೆ ನಿದ್ದೆ ಬಂದ ಕಾರಣ ಅಲ್ಲೇ…

Read More

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು? – Kannada News | Raichur: Chaos during landing of CM Siddaramaiah helicopter; what exactly happened

ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್​​ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್​ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ….

Read More