‘ಬಿಗ್ ಬಾಸ್​​ನಿಂದ ಒಂದು ರೂಪಾಯಿಯೂ ಸಿಗಲಿಲ್ಲ’; ವಂಚನೆ ಬಗ್ಗೆ ಅಬ್ದು ರೋಜಿಕ್ ಮಾತು – Kannada News | Abdu Rozik’s Shocking Bigg Boss Truth: No Payment, Management Cheated Me

ಬಿಗ್ ಬಾಸ್​​ಗೆ ತೆರಳುವ ಮೂಲಕ ಅಬ್ದು ರೋಜಿಕ್ ಅವರಿಗೆ (Abdu Rozik) ಭಾರತದಲ್ಲೂ ಸಾಕಷ್ಟು ಫ್ಯಾನ್ಸ್ ಸಿಕ್ಕರು. ಸಲ್ಮಾನ್ ಖಾನ್ ಜೊತೆ ಅವರಿಗೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಆದರೆ, ಈಗ ಅವರು ಬಿಗ್ ಬಾಸ್ ಅಲ್ಲಿ ನಡೆದ ಒಂದು ಶಾಕಿಂಗ್ ವಿಷಯ ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್‌ನಲ್ಲಿ ಭಾಗವಹಿಸಿದ್ದಕ್ಕಾಗಿ ತಮಗೆ ಯಾವುದೇ ಸಂಭಾವನೆ ಸಿಕ್ಕಿಲ್ಲ ಎಂದಿರುವ ಅವರು ತಮ್ಮ ಹಳೆಯ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿರುವ ಅಬ್ದು ರೋಜಿಕ್, ‘ಈ ಜಗತ್ತಿನಲ್ಲಿ ಜನರಿಗೆ ನಿಮ್ಮ ಬಗ್ಗೆ ನಿಜವಾದ ಕಾಳಜಿ ಇರುವುದಿಲ್ಲ. ನಾನು ನನ್ನ ತಂಡದ ಜೊತೆ ಮೂರ್ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದೆ. ಅವರು ನನ್ನ ಬೆಳವಣಿಗೆಗೆ ಸಹಾಯ ಮಾಡಿದ್ದು ನಿಜ. ಆದರೆ ನಾನು ಮಾಡಿದ ಶೋಗಳಿಂದ ಬಂದ ಹಣವನ್ನೆಲ್ಲಾ ಅವರೇ ಜೇಬಿಗೆ ಇಳಿಸಿಕೊಂಡರು. ನಿಮಗೆ ಆಶ್ಚರ್ಯ ಎನಿಸಬಹುದು, ಬಿಗ್ ಬಾಸ್ ಶೋನಿಂದ ನನಗೆ ಒಂದೇ ಒಂದು ಡಾಲರ್ ಹಣವೂ ಸಿಕ್ಕಿಲ್ಲ. ಅವರು ನನಗೆ ವಂಚಿಸಿದರು. ನನ್ನ ಇಡೀ ಸಂಪಾದನೆಯನ್ನು ಲೂಟಿ ಮಾಡಿದರು’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕ್ಯಾಮೆರಾ ಮುಂದೆ ಸದಾ ನಗುತ್ತಾ ಕಾಣಿಸಿಕೊಳ್ಳುವ ಅಬ್ದು ಅವರ ಅಸಲಿ ಜೀವನ ತೀರಾ ಭಿನ್ನವಾಗಿದೆ. ‘ಜನರು ನನ್ನ ಪ್ರಸಿದ್ಧಿಯನ್ನು ನೋಡಿ ನಾನು ಕೋಟ್ಯಧಿಪತಿ ಇರಬಹುದು ಅಂದುಕೊಳ್ಳುತ್ತಾರೆ. ಆದರೆ ನನ್ನ ಹೆಗಲ ಮೇಲೆ ನಾನು ಎಂತಹ ನೋವಿನ ಹೊರೆಯನ್ನು ಹೊತ್ತಿದ್ದೇನೆ ಎಂಬುದು ಯಾರಿಗೂ ಗೊತ್ತಿಲ್ಲ. ಕ್ಯಾಮೆರಾ ಮುಂದೆ ನಾನು ನಗುತ್ತಾ, ಎಲ್ಲರ ಜೊತೆ ಫೋಟೋ ತೆಗೆಸಿಕೊಳ್ಳುತ್ತೇನೆ. ಆದರೆ ಮನೆಗೆ ಹೋದಾಗ ಮಾನಸಿಕ ಒತ್ತಡ ಮತ್ತು ಸಾಲು ಸಾಲು ಸಮಸ್ಯೆಗಳು ನನ್ನನ್ನು ಕಾಡುತ್ತವೆ. ಜನರ ದೃಷ್ಟಿಯಲ್ಲಿ ನಾನು ಶ್ರೀಮಂತ, ಆದರೆ ಸತ್ಯ ಏನೆಂದರೆ ನನ್ನ ಬಳಿ ಇವತ್ತಿಗೂ ಒಂದು ಸ್ವಂತ ಕಾರಾಗಲಿ ಅಥವಾ ಸ್ವಂತ ಮನೆಯಾಗಲಿ ಇಲ್ಲ’ ಎಂದು ಅಬ್ದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಅಬ್ದು ರೋಜಿಕ್ ದುಬೈನಲ್ಲಿ ಅರೆಸ್ಟ್; ಹಣ ಇದ್ರೂ ಹೀಗಾ ಮಾಡೋದು?

‘ನನ್ನ ಹೈಟ್ ನೋಡಿ ಜನ ನನ್ನನ್ನು ಕೀಳಾಗಿ ಕಾಣುತ್ತಾರೆ. ಇವನಿಗೆ ಏನೂ ತಿಳಿಯುವುದಿಲ್ಲ, ಸುಲಭವಾಗಿ ಮೂರ್ಖನನ್ನಾಗಿ ಮಾಡಬಹುದು ಎಂದುಕೊಳ್ಳುತ್ತಾರೆ. ನಾನು ಎಲ್ಲೇ ಕೆಲಸಕ್ಕೆ ಹೋದರೂ ಜನ ನನ್ನೊಂದಿಗೆ ನೇರವಾಗಿ ಮಾತನಾಡುವುದಿಲ್ಲ, ನನ್ನ ಮ್ಯಾನೇಜ್‌ಮೆಂಟ್ ಜೊತೆಯೇ ಮಾತನಾಡುತ್ತಾರೆ. ಆದರೆ ನನಗೆ ಎಲ್ಲವೂ ಅರ್ಥವಾಗುತ್ತದೆ. ನಾನು ಎಲ್ಲರಲ್ಲೂ ಕೇಳಿಕೊಳ್ಳುವುದು ಇಷ್ಟೇ, ದಯವಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿ, ನನಗೆ ಮೋಸ ಮಾಡಬೇಡಿ’ ಎಂದು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತೂಫಾನ್ ಸೆಂಚುರಿ… ವೈಭವ್ ಸೂರ್ಯವಂಶಿ ತಮ್ಮನ ಆರ್ಭಟ ಶುರು! – Kannada News | Vaibhav Sooryavanshi’s Brother Aashirwad Smashes Century

ಪ್ರತಿಭೆ ಎಂಬುದು ರಕ್ತದಲ್ಲೇ ಹರಿದುಬರುತ್ತದೆ ಎಂಬುದಕ್ಕೆ ಸೂರ್ಯವಂಶಿ ಕುಟುಂಬವೇ ಸಾಕ್ಷಿ. ಅಣ್ಣ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಗೆದ್ದು ಭಾರತ ತಂಡಕ್ಕೆ ಆಯ್ಕೆಯಾಗಿದ್ದರೆ, ಅತ್ತ 10 ವರ್ಷದ ತಮ್ಮ ಆಶೀರ್ವಾದ್ ಸೂರ್ಯವಂಶಿ ಬ್ಯಾಟ್ ಹಿಡಿದು ಅಬ್ಬರಿಸಲಾರಂಭಿಸಿದ್ದಾನೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.

87 ಎಸೆತಗಳಲ್ಲಿ 103 ರನ್!

ಬಿಹಾರದ ಸಮಷ್ಟಿಪುರದ ‘ಕ್ರಿಕೆಟ್ ಅಕಾಡೆಮಿ ತಾಜ್‌ಪುರ್’ ತಂಡದ ಪರ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದ ಬಲಗೈ ಬ್ಯಾಟರ್ ಆಶೀರ್ವಾದ್ ಸೂರ್ಯವಂಶಿ , ಎದುರಾಳಿ ಬೌಲರ್‌ಗಳನ್ನು ಧೂಳೀಪಟ ಮಾಡಿದ್ದಾರೆ.

ಕೇವಲ 87 ಎಸೆತಗಳನ್ನು ಎದುರಿಸಿದ ಆಶೀರ್ವಾದ್ 20 ಫೋರ್​ ಹಾಗೂ 1 ಸಿಕ್ಸರ್ ನೆರವಿನೊಂದಿಗೆ 103 ರನ್ ಸಿಡಿಸಿದ್ದಾರೆ. ಅಂದರೆ, ಕೇವಲ ಬೌಂಡರಿಗಳ ಮೂಲಕವೇ 86 ರನ್ ಕಲೆಹಾಕಿದ್ದು ಇವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಸಾಕ್ಷಿಯಾಗಿದೆ.

ಆಶೀರ್ವಾದ್ ಅವರ ಈ ಸ್ಫೋಟಕ ಇನಿಂಗ್ಸ್ ನೆರವಿನಿಂದ ‘ಕ್ರಿಕೆಟ್ ಅಕಾಡೆಮಿ ತಾಜ್‌ಪುರ್’ ತಂಡ 29.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು.

ಅಣ್ಣನಿಂದ ಜೈಕಾರ, ತಂದೆಯ ಹೆಮ್ಮೆ:

ಪ್ರಸ್ತುತ ಭಾರತ ‘ಎ’ ತಂಡದೊಂದಿಗೆ ಶ್ರೀಲಂಕಾ ಪ್ರವಾಸದಲ್ಲಿರುವ ಹಿರಿಯ ಸಹೋದರ ವೈಭವ್ ಸೂರ್ಯವಂಶಿ, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಪಂದ್ಯದ ಸ್ಕೋರ್ ಕಾರ್ಡ್ ಹಂಚಿಕೊಂಡು “ಕಂಗ್ರಾಜುಲೇಷನ್ಸ್ ಆಶೀರ್ವಾದ್” ಎಂದು ಸಹೋದರನಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನು ಇಬ್ಬರು ಗಂಡು ಮಕ್ಕಳ ಯಶಸ್ಸಿನ ಹಿಂದೆ ಶ್ರಮಿಸಿರುವ ತಂದೆ ಹಾಗೂ ಕೋಚ್ ಸಂಜೀವ್ ಸೂರ್ಯವಂಶಿ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ.

“ಸದ್ಯ ನನ್ನ ಸಂಪೂರ್ಣ ಗಮನ ಹಿರಿಯ ಮಗ ವೈಭವ್ ಮೇಲಿದೆ. ಆದರೆ ಆಶೀರ್ವಾದ್ ಕೂಡ ಅತ್ಯಂತ ಕಠಿಣ ಪರಿಶ್ರಮ ಪಡುತ್ತಿದ್ದಾನೆ. ಮುಂದಿನ ಎರಡು ವರ್ಷಗಳಲ್ಲಿ ಆತನನ್ನು ಉನ್ನತ ಮಟ್ಟದ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಸಿದ್ಧಪಡಿಸಲಾಗುವುದು,” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​

ಕ್ರಿಕೆಟ್ ಜಗತ್ತಿನ ಹೊಸ ಆಶಾಕಿರಣಗಳು:

ಐಪಿಎಲ್ 2026 ರಲ್ಲಿ 776 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದು, ಸದ್ಯ ಹಿರಿಯರ ಭಾರತ ತಂಡಕ್ಕೂ ಆಯ್ಕೆಯಾಗಿರುವ ವೈಭವ್ ಸೂರ್ಯವಂಶಿ ಅವರ ಹಾದಿಯಲ್ಲೇ ಈಗ ಆಶೀರ್ವಾದ್ ಕೂಡ ಹೆಜ್ಜೆ ಇಡುತ್ತಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸೂರ್ಯವಂಶಿ ಸಹೋದರರ ಈ ಜೋಡಿ ಮುಂಬರುವ ದಿನಗಳಲ್ಲಿ ದೊಡ್ಡ ಸಂಚಲನ ಸೃಷ್ಟಿಸುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

Source link

ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

ಧಾರವಾಡ, ಜೂನ್ 13: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದಿದ್ದಾರೆ. ಸೆಲ್‌ನಿಂದ ಹೊರಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ತನಿಖೆ ಎದುರಿಸುತ್ತಿರುವ ಆರೋಪಿ (A1) ಮೊಹಮ್ಮದ್ ಖಾಸಿಫ್ ಮತ್ತು ರೆಹಾನ್ ಶರೀಫ್ (A4), ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಗಾಯಾಳು ವಾರ್ಡನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೈದಿಗಳ ವಿರುದ್ಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪುಂಡಾಟಿಕೆಗೆ ಜೈಲರ್ ಕಠಿಣ ಶಿಕ್ಷೆ ವಿಧಿಸಿದ್ದು, ಮುಂದಿನ ಒಂದು ತಿಂಗಳು ಕುಟುಂಬದವರ ಭೇಟಿಗೆ ನಿಷೇಧ ಹೇರಿದ್ದಾರೆ. ಪರಿಣಾಮ, ಶಿವಮೊಗ್ಗದಿಂದ ಕೈದಿಗಳನ್ನು ನೋಡಲು ಬಂದಿದ್ದ ಕುಟುಂಬಸ್ಥರು ಜೈಲಿನಿಂದ ಬರಿಗೈಲಿ ವಾಪಸ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಣ್ಣಾಮಲೈ ಪಕ್ಷ ತೊರೆದಿರುವುದು ವೈಯಕ್ತಿಕ ನಿರ್ಧಾರ: ಯತ್ನಾಳ್, ಈಶ್ವರಪ್ಪ ವಾಪಸಾತಿ ಬಗ್ಗೆ ರಾಧಾ ಮೋಹನ್ ದಾಸ್ ಹೇಳಿದ್ದೇನು? – Kannada News | Agarwal Speaks on Karnataka BJP Leadership, Annamalai’s Move and Sumalatha’s Future

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್Image Credit source: Tv9 kannada

ಮಂಗಳೂರು, ಜೂ.13 : ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷ ತೊರೆದಿರುವ ವಿಚಾರ ಸೇರಿದಂತೆ ಕರ್ನಾಟಕ ರಾಜಕಾರಣದ ಹಲವು ಮಹತ್ವದ ವಿದ್ಯಮಾನಗಳ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಮಂಗಳೂರಿನಲ್ಲಿ ಮಹತ್ವದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದ ಅಣ್ಣಾಮಲೈ ಅವರು ಪಕ್ಷ ತೊರೆದಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿ ಒಂದು ದೊಡ್ಡ ರಾಷ್ಟ್ರೀಯ ಪಕ್ಷ. ನಮಗೆ ನಮ್ಮದೇ ಆದ ಒಂದು ಸ್ಪಷ್ಟ ಕಾರ್ಯಪದ್ಧತಿ ಹಾಗೂ ದೀರ್ಘಾವಧಿಯ ಯೋಜನೆಗಳಿವೆ. ದೇಶದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ನಾವು ಮುನ್ನಡೆಯುತ್ತಿದ್ದೇವೆಯೇ ಹೊರತು, ಅಲ್ಪಾವಧಿ ರಾಜಕಾರಣದ ಬಗ್ಗೆ ನಾವು ಹೆಚ್ಚಿನ ಗಮನ ನೀಡುವುದಿಲ್ಲ. ಅಣ್ಣಾಮಲೈ ಪಕ್ಷ ತೊರೆದಿರುವುದು ಅದು ಅವರ ವೈಯಕ್ತಿಕ ನಿರ್ಧಾರ. ಈ ಸಂದರ್ಭದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ” ಎಂದು ಜಾಣ್ಮೆಯ ಉತ್ತರ ನೀಡಿದರು.

ಇನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ರಾಜ್ಯದಲ್ಲಿ ಕೇಳಿಬರುತ್ತಿರುವ ಚರ್ಚೆಗಳಿಗೆ ತೆರೆ ಎಳೆದ ಅವರು, “ಈ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಕರ್ನಾಟಕದ ಪ್ರಸ್ತುತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಸಂಪೂರ್ಣ ಮಾಹಿತಿ ಇದೆ. ಈಗಿನ ಅಧ್ಯಕ್ಷರ ಒಳ್ಳೆಯ ಕೆಲಸಗಳು ಹಾಗೂ ಅವರ ಕಾರ್ಯವೈಖರಿಯ ಬಗ್ಗೆಯೂ ವರಿಷ್ಠರು ಅರಿತಿದ್ದಾರೆ” ಎಂದು ಹೇಳಿದರು.

ಸುಮಲತಾ ಅಂಬರೀಶ್​​​ಗೆ ಸೂಕ್ತ ಸ್ಥಾನಮಾನ:

ಮಾಜಿ ಸಂಸದೆ ಸುಮಲತಾ ಅವರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿರುವ ಕುರಿತು ಮಾತನಾಡಿದ ಅವರು, “ಸುಮಲತಾ ಅವರೊಂದಿಗೆ ಬಿಜೆಪಿಯ ಒಡನಾಟ ಅತ್ಯಂತ ಚೆನ್ನಾಗಿದೆ. ಅವರು ದೀರ್ಘಕಾಲದಿಂದ ಬಿಜೆಪಿಯ ಸಮರ್ಥಕರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಅವರಿಗೆ ಖಂಡಿತವಾಗಿಯೂ ಸೂಕ್ತ ಸ್ಥಾನಮಾನ ದೊರಕಲಿದೆ” ಎಂದು ಭರವಸೆ ನೀಡಿದ್ದಾರೆ.

ಯತ್ನಾಳ್, ಈಶ್ವರಪ್ಪ ಪಕ್ಷಕ್ಕೆ ವಾಪಸಾತಿ:

ಪಕ್ಷದಿಂದ ಹೊರಗುಳಿದಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕೆ.ಎಸ್. ಈಶ್ವರಪ್ಪ ಅವರನ್ನು ವಾಪಸ್ ಸೇರಿಸಿಕೊಳ್ಳುವ ಕುರಿತು ಉತ್ತರಿಸಿ ಅವರು, “ಯಾರನ್ನೂ ಪಕ್ಷದಿಂದ ಉಚ್ಛಾಟಿಸುವ ಇಚ್ಛೆ ನಮಗಿರುವುದಿಲ್ಲ. ಆದರೆ ಅವರ ಕೆಲವು ವರ್ತನೆ ಹಾಗೂ ನಡವಳಿಕೆಗಳ ಕಾರಣದಿಂದ ಶಿಸ್ತು ಕ್ರಮ ಅನಿವಾರ್ಯವಾಗಿತ್ತು. 6 ವರ್ಷಗಳ ಅವಧಿಯಲ್ಲಿ ಅವರ ವರ್ತನೆಯನ್ನು ವರಿಷ್ಠರು ಗಮನಿಸುತ್ತಾರೆ. ಅವರನ್ನು ಮತ್ತೆ ಪಕ್ಷಕ್ಕೆ ಪುನಃ ಕರೆತರುವ ಅವಕಾಶಗಳು ಯಾವಾಗಲೂ ಇದ್ದೇ ಇರುತ್ತವೆ. ಅಂತಿಮ ನಿರ್ಧಾರವನ್ನು ವರಿಷ್ಠರೇ ಕೈಗೊಳ್ಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರೇ ಪಾಠ ಕಲಿಸ್ತಾರೆ:

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಧಾ ಮೋಹನ್ ದಾಸ್ ಅಗರ್ವಾಲ್, “ಪ್ರಸ್ತುತ ರಾಜ್ಯ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಜನರಲ್ಲಿ ಭಾರಿ ಆಕ್ರೋಶವಿದೆ. ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಆಕ್ರೋಶ ಚುನಾವಣೆಯ ಫಲಿತಾಂಶದಲ್ಲಿ ಗೋಚರಿಸಲಿದೆ. ನಾವು ತಲ್ಲಣ ಮೂಡಿಸುವ ಅಥವಾ ಸಂವೇದನಾತ್ಮಕ ರಾಜಕಾರಣ ಮಾಡುವುದಿಲ್ಲ. ಸರ್ಕಾರದ ಜನವಿರೋಧಿ ನೀತಿ ಹಾಗೂ ವೈಫಲ್ಯಗಳ ವಿರುದ್ಧ ರಾಜ್ಯದ ಬಿಜೆಪಿ ನಾಯಕರು ನಿರಂತರವಾಗಿ ಧ್ವನಿಯೆತ್ತಿ, ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ: ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ – Kannada News | Kasturi Nagar Park Protest: Residents Oppose GBA’s Commercial Use of Green Space

ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ

ಬೆಂಗಳೂರು, ಜೂನ್ 13: ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್‌ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂಬ ನಿಯಮವಿದ್ದರೂ, ಜಿಬಿಎ (GBA) ವತಿಯಿಂದಲೇ ಉದ್ಯಾನವನದ ಅಸ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ.

ಮುಖ್ಯಾಂಶಗಳು

  • ಕಸ್ತೂರಿನಗರದ ಎನ್‌ಜಿಇಎಫ್ ಲೇಔಟ್ ಪಾರ್ಕ್ ಉಳಿಸಲು ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.
  • ಉದ್ಯಾನವನದ ಮುಕ್ಕಾಲು ಭಾಗವನ್ನು ಈಗಾಗಲೇ ಸರ್ಕಾರಿ ಕಟ್ಟಡಗಳಿಗೆ ಬಳಸಲಾಗಿದೆ ಎಂದು ಆರೋಪಿಸಿದ್ದಾರೆ.
  • ಕಸ ಸಂಸ್ಕರಣಾ ಘಟಕ ನಿರ್ಮಾಣದ ವಿರುದ್ಧ ಜಿಬಿಎ ಅಧಿಕಾರಿಗಳಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಆರೋಪಗಳೇನು?

ಸ್ಥಳೀಯರ ಆರೋಪದ ಪ್ರಕಾರ, ಉದ್ಯಾನವನಕ್ಕಾಗಿ ಮೀಸಲಾಗಿದ್ದ ಜಾಗದ ಮುಕ್ಕಾಲು ಭಾಗ ಈಗಾಗಲೇ ವಿವಿಧ ಸರ್ಕಾರಿ ಕಟ್ಟಡಗಳಿಗೆ ಬಳಕೆಯಾಗಿದೆ. ಪಾರ್ಕ್ ಆವರಣದಲ್ಲೇ ವಾರ್ಡ್ ಕಚೇರಿ, ಬೆಂಗಳೂರು ಒನ್ ಕೇಂದ್ರ, ನಮ್ಮ ಕ್ಲಿನಿಕ್ ಹಾಗೂ ಕಸ ವಿಂಗಡಣೆ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಇದೀಗ ಉಳಿದಿರುವ ಅಲ್ಪ ಪ್ರಮಾಣದ ಹಸಿರು ಪ್ರದೇಶದ ಮೇಲೂ ಅಧಿಕಾರಿಗಳ ಕಣ್ಣು ಬಿದ್ದಿದ್ದು, ಅಲ್ಲಿ ಮತ್ತೊಂದು ಕಸ ಸಂಸ್ಕರಣಾ ಘಟಕ ನಿರ್ಮಿಸಲು ಮುಂದಾಗಿದ್ದಾರೆ ಎಂದು ನಿವಾಸಿಗಳು ದೂರಿದ್ದಾರೆ.

ಉದ್ಯಾನವನವನ್ನು ಸಂರಕ್ಷಿ: ರೈತರ ಒತ್ತಾಯ

ಮಕ್ಕಳ ಆಟ, ಹಿರಿಯ ನಾಗರಿಕರ ವಾಯುವಿಹಾರ ಹಾಗೂ ಸಾರ್ವಜನಿಕರ ವಿಶ್ರಾಂತಿಗೆ ಮೀಸಲಾಗಿದ್ದ ಏಕೈಕ ತಾಣ ಸಂಪೂರ್ಣ ಕಣ್ಮರೆಯಾಗುವ ಆತಂಕ ಎದುರಾಗಿದೆ. ಉದ್ಯಾನವನಗಳನ್ನು ಸಂರಕ್ಷಿಸಬೇಕಾದ ಅಧಿಕಾರಿಗಳೇ ಈ ರೀತಿ ನಿಯಮ ಗಾಳಿಗೆ ತೂರುತ್ತಿರುವುದು ಎಷ್ಟು ಕಾನೂನುಬದ್ಧ ಎಂದು ಸ್ಥಳೀಯ ನಿವಾಸಿ ಕೃಷ್ಣ ಪ್ರಶ್ನಿಸಿದ್ದಾರೆ. ಹಸಿರು ವಲಯವನ್ನು ನಾಶಪಡಿಸುವುದನ್ನು ಕೈಬಿಟ್ಟು, ಉಳಿದಿರುವ ಉದ್ಯಾನವನವನ್ನು ತಕ್ಷಣವೇ ಸಂರಕ್ಷಿಸಬೇಕು ಎಂದು ನಿವಾಸಿಗಳು ಜಿಬಿಎ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ – Kannada News | Basanagouda Patil Yatnal is a Monkey Breed: Congress MLA Pradeep Eshwar Blasts BJP Leaders Over Hate Speech Allegations

ಬೆಂಗಳೂರು, ಜೂನ್ 13: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತೀವ್ರ ವಾಗ್ದಾಳಿ ನಡೆಸಿದರು.

ಛಲವಾದಿ ನಾರಾಯಣಸ್ವಾಮಿ ಅವರನ್ನು ಬುದ್ಧಿವಂತರು ಮತ್ತು ಪ್ರಜ್ಞಾವಂತರು ಎಂದು ಭಾವಿಸಿದ್ದೆ. ಆದರೆ, ಅವರು ನೀಡಿದ ದೂರು ನೋಡಿದ ನಂತರ ಅವರಿಗೆ ಜ್ಞಾನವಿಲ್ಲ ಎಂದು ಅನಿಸುತ್ತಿದೆ. ಭಾಷಣದ ವೀಡಿಯೊವನ್ನು ನೋಡದೆ ಹೋಮ್ ಮಿನಿಸ್ಟರ್ ಮತ್ತು ಸಿಎಂ ಅವರಿಗೆ ಪತ್ರ ಬರೆಯುವುದು ಸರಿಯಲ್ಲ. ವಿಡಿಯೋದಲ್ಲಿ, ‘‘ಅಂಧಭಕ್ತರು ಮತ್ತು ದೇಶದ್ರೋಹಿಗಳು ಈ ದೇಶಕ್ಕೆ ಮಾರಕ’’ ಎಂದು ಹೇಳಿದ್ದೇನೆಯೇ ಹೊರತು, ನಿರ್ದಿಷ್ಟವಾಗಿ ಯಾರನ್ನೂ ದೇಶದ್ರೋಹಿಗಳು ಎಂದು ಕರೆದಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರ ಮನಸ್ಸಿನಲ್ಲಿರುವುದನ್ನೇ ಹೊರಹಾಕುತ್ತಿದ್ದಾರೆ ಎಂದು ಪ್ರದೀಪ್ ಈಶ್ವರ್ ಆರೋಪಿಸಿದರು. ದ್ವೇಷ ಭಾಷಣದ ಮೊದಲ ಪಿತಾಮಹರೇ ಛಲವಾದಿ ನಾರಾಯಣಸ್ವಾಮಿ ಮತ್ತು ಎರಡನೇ ಪಿತಾಮಹ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಕಟುವಾಗಿ ಟೀಕಿಸಿದರು. ಅಲ್ಲದೆ, ‘ಆ ಯತ್ನಾಳ್ ನೋಡಿದ್ರೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾನೆ. ಅದು ಯಾವುದೋ ಒಂದು ಕೋತಿಯ ಬ್ರೀಡ್’ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

AI Robots Training: ತಲೆಗೆ ಫೋನ್ ಕಟ್ಟಿಕೊಂಡು AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರು; ಗಂಟೆಗೆ ಸಿಗುತ್ತೆ 250ರೂ. ವೇತನ! – Kannada News | Indians Train AI Robots for Home: Women Earn 250 Rs per Hour Recording Daily Chores

AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರುImage Credit source: R. Satish Babu/AFP

ಭವಿಷ್ಯದ ದಿನಗಳಲ್ಲಿ ಮನೆಯ ಕೆಲಸಗಳನ್ನು ಸುಲಭವಾಗಿ ನಿಭಾಯಿಸಬಲ್ಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲಿತ ರೋಬೋಟ್‌ಗಳ ಅಭಿವೃದ್ಧಿಯಲ್ಲಿ ಭಾರತೀಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ತಲೆಗೆ ಸ್ಮಾರ್ಟ್‌ಫೋನ್ ಅಥವಾ ಕ್ಯಾಮೆರಾ ಕಟ್ಟಿಕೊಂಡು ದೈನಂದಿನ ಕೆಲಸಗಳನ್ನು ವಿಡಿಯೋ ರೂಪದಲ್ಲಿ ದಾಖಲಿಸುವ ಮೂಲಕ ಮಹಿಳೆಯರು ರೋಬೋಟ್‌ಗಳಿಗೆ ಮನುಷ್ಯರಂತೆ ಕೆಲಸ ಮಾಡುವ ತರಬೇತಿ ನೀಡುತ್ತಿದ್ದಾರೆ.

ಒಂದು ಗಂಟೆಯ ವಿಡಿಯೋಗೆ 250ರೂ. ಸಂಭಾವನೆ:

ಅಲ್ ಜಜೀರಾ ವರದಿಯ ಪ್ರಕಾರ, ತಮಿಳುನಾಡಿನ ರಾಜಧಾನಿ ಚೆನ್ನೈನ ಗೃಹಿಣಿಯೊಬ್ಬರು ಅಡುಗೆ ಮನೆಯಲ್ಲಿನ ತಮ್ಮ ದಿನನಿತ್ಯದ ಕೆಲಸಗಳನ್ನು ತಲೆಗೆ ಫೋನ್ ಕಟ್ಟಿಕೊಂಡೇ ವಿಡಿಯೋ ಮಾಡುತ್ತಿದ್ದಾರೆ. ಒಂದು ಗಂಟೆಯ ವಿಡಿಯೋ ರೆಕಾರ್ಡಿಂಗ್‌ಗೆ ಅವರಿಗೆ ₹250 (ಸುಮಾರು 2.6 ಡಾಲರ್) ಪಾವತಿಸಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಮನೆಯ ಕೆಲಸಗಳನ್ನು ಮಾಡುತ್ತಾ ವಿಡಿಯೋ ರೆಕಾರ್ಡ್ ಮಾಡಲು ಗಂಟೆಗೆ ₹250 ನೀಡುತ್ತಾರೆ ಎಂದರೆ ಯಾರಿಗೆ ಇಷ್ಟವಾಗುವುದಿಲ್ಲ? ಭವಿಷ್ಯದಲ್ಲಿ ಇದೇ ಹಣದಿಂದ ನಾನು ಒಂದು ರೋಬೋಟ್ ಖರೀದಿಸಿದರೂ ಆಶ್ಚರ್ಯವಿಲ್ಲ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವಿಶೇಷ ಆ್ಯಪ್ ಮೂಲಕ ಅಮೆರಿಕದ ಕಂಪನಿಗಳಿಗೆ ಡೇಟಾ:

ಸಾಮಾನ್ಯ ವಿಡಿಯೋಗಳಂತೆ ಕಾಣುವ ಈ ದೃಶ್ಯಗಳು ಜಾಗತಿಕ ಟೆಕ್ ಕಂಪನಿಗಳಿಗೆ ಅತ್ಯಮೂಲ್ಯ ಡೇಟಾವಾಗಿ ಪರಿಣಮಿಸಿವೆ. ಮಹಿಳೆಯರು ಸರಿಯಾಗಿ ವಿಡಿಯೋ ರೆಕಾರ್ಡ್ ಮಾಡದಿದ್ದರೆ, ಆ್ಯಪ್‌ನಲ್ಲಿ “Hands Not Detected” ಎಂಬ ಎಚ್ಚರಿಕೆ ಸಂದೇಶ ಕೂಡ ಬರುತ್ತದೆ. ಮನುಷ್ಯರ ಕೈಗಳ ಚಲನೆ, ಕೆಲಸ ಮಾಡುವ ವಿಧಾನ ಹಾಗೂ ವಸ್ತುಗಳನ್ನು ಬಳಸುವ ರೀತಿಯನ್ನು ರೋಬೋಟ್‌ಗಳು ಈ ವಿಡಿಯೋಗಳ ಮೂಲಕ ಕಲಿಯುತ್ತವೆ. ಈ ಮಾಹಿತಿಯನ್ನು ಭಾರತ ಹಾಗೂ ಅಮೆರಿಕದಲ್ಲಿ ಕಚೇರಿಗಳನ್ನು ಹೊಂದಿರುವ ಪ್ರಮುಖ ಎಐ ಡೇಟಾ ಕಂಪನಿಗಳಿಗೆ ವಿಶೇಷ ಆ್ಯಪ್ ಮೂಲಕ ರವಾನಿಸಲಾಗುತ್ತಿದೆ.

ಇದನ್ನೂ ಓದಿ ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ

2050ರ ವೇಳೆಗೆ ವಿಶ್ವದಲ್ಲಿ 100 ಕೋಟಿ ರೋಬೋಟ್‌ಗಳು:

ಹ್ಯೂಮನಾಯ್ಡ್ (ಮನುಷ್ಯರಂತಿರುವ) ರೋಬೋಟ್‌ಗಳ ಮಾರುಕಟ್ಟೆ ಪ್ರಸ್ತುತ ವೇಗವಾಗಿ ವಿಸ್ತರಿಸುತ್ತಿದೆ. ಅಂದಾಜುಗಳ ಪ್ರಕಾರ, 2050ರ ವೇಳೆಗೆ ವಿಶ್ವದಾದ್ಯಂತ 100 ಕೋಟಿಗೂ ಹೆಚ್ಚು ರೋಬೋಟ್‌ಗಳು ಬಳಕೆಗೆ ಬರಲಿವೆ. ಇವುಗಳಲ್ಲಿ ಬಹುತೇಕ ರೋಬೋಟ್‌ಗಳನ್ನು ಕೈಗಾರಿಕೆ, ವಾಣಿಜ್ಯ ಹಾಗೂ ಸೇವಾ ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ.

ಚೆನ್ನೈನ ಗೃಹಿಣಿ ಮಾತ್ರವಲ್ಲದೆ, ಬೆಂಗಳೂರಿನಲ್ಲಿ ಕಳೆದ ಹತ್ತು ವರ್ಷಗಳಿಂದ ರಸ್ತೆ ಬದಿಯಲ್ಲಿ ಹೂವಿನ ಹಾರಗಳನ್ನು ಕಟ್ಟುವ 55 ವರ್ಷದ ಪೊನ್ನಿ ಎಂಬ ಮಹಿಳೆಯೂ ತಲೆಗೆ ಫೋನ್ ಕಟ್ಟಿಕೊಂಡು ಹೂ ಕಟ್ಟುವ ವಿಡಿಯೋಗಳನ್ನು ಮಾಡಿ ಸಂಭಾವನೆ ಪಡೆಯುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 1:27 pm, Sat, 13 June 26

Source link

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – Kannada News | Nirmala Sitharaman Offers Special Prayers at Kapu New Marigudi Temple, Udupi

ಉಡುಪಿ, ಜೂ.13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜೂನ್ 13, 2026) ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಸುಪ್ರಸಿದ್ಧ’ಹೊಸ ಮಾರಿಗುಡಿ’ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರು ಸಚಿವೆಗೆ ಸಾಂಪ್ರದಾಯಿಕ ಸ್ವಾಗತ ಕೋರಿ, ಪ್ರಸಾದ ವಿತರಿಸಿದರು. ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಜೊತೆ ಕೆಲಕಾಲ ಸಮಾಲೋಚನೆ ನಡೆಸಿ, ಕ್ಷೇತ್ರ ಅಭಿವೃದ್ಧಿ ಹಾಗೂ ಮಾರಿಗುಡಿಯ ಇತಿಹಾಸದ ಕುರಿತು ಮಾಹಿತಿ ಪಡೆದುಕೊಂಡರು. ಉಡುಪಿ ಜಿಲ್ಲೆಯಲ್ಲಿ ಇಂದು ಬಿಜೆಪಿ ಆಯೋಜಿಸಲಾಗಿರುವ ‘ಜಿಲ್ಲಾ ಪ್ರಶಿಕ್ಷಣ ವರ್ಗ’ (ಕಾರ್ಯಕರ್ತರ ತರಬೇತಿ ಶಿಬಿರ) ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಕಾಪು ಮಾರಿಗುಡಿಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಕ್ಷೇತ್ರಕ್ಕೆ ಕ್ರಿಕೆಟರ್​​ ಸೂರ್ಯ ಕುಮಾರ್​ ಯಾಧವ್​​ ಅವರು ಕೂಡ ಭೇಟಿ ನೀಡಿದ್ದರು. ಇನ್ನು ಸಚಿವೆ ನಿರ್ಮಲಾ ಸೀತಾರಾಮನ್ ಇಲ್ಲಿಂದ ಉಡುಪಿ ಕೃಷ್ಣ ಮಠಕ್ಕೂ ಭೇಟಿ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ? ಇಲ್ಲಿದೆ ಸಾಕ್ಷಿ – Kannada News | Sunaina Khalid Al Ameri Engagement Broken? Unfollow Sparks Social Media Rumors

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ವರದಿ ಆಗಿತ್ತು. ಆದರೆ, ಗುಟ್ಟಾಗಿ ನಡೆದ ನಿಶ್ಚಿತಾರ್ಥ ಈಗ ಮುರಿದು ಬಿದ್ದ ಬಗ್ಗೆ ವರದಿ ಆಗಿದೆ. ಇದಕ್ಕೆ ನೆಟ್ಟಿಗರು ಬಲವಾದ ಸಾಕ್ಷಿಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ.

ಖಲೀದ್ ಅವರು ಯುಎಇ ಅಲ್ಲಿ ವಾಸ ಮಾಡುತ್ತಾರೆ. ಅವರು ಈ ಮೊದಲು ಸಲಾಮಾ ಮೊಹ್ಮದ್ ಜೊತೆ ಮದುವೆ ಆಗಿದ್ದರು. ಆದರೆ, ಇವರು ಡಿವೋರ್ಸ್ ಪಡೆದಿದ್ದಾರೆ. ಆ ಬಳಿಕ ಖಲೀದ್ ಹಾಗೂ ಸುನೈನಾ ಒಟ್ಟಿಗೆ ಸುತ್ತಾಡಲು ಆರಂಭಿಸಿದ್ದರು. ನಿಶ್ಚಿತಾರ್ಥ ನಡೆದು ವರ್ಷಗಳೇ ಕಳೆದರೂ ಮದುವೆ ವಿಷಯ ಹೊರ ಬಿದ್ದಿಲ್ಲ. ಹೀಗಿರುವಾಗಲೇ ಒಂದು ಪ್ರಮುಖ ಬೆಳವಣಿಗೆ ನಡೆದಿದೆ.

ಯಾರ ಸಂಬಂಧ ಹಾಳಾಗಿದೆ, ಯಾರು ವಿಚ್ಛೇದನ ನೀಡುತ್ತಿದ್ದಾರೆ ಎಂಬುದನ್ನು ತಿಳಿಯುವುದು ಸುಲಭ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ ಎಂದರೆ ಇವರ ಮಧ್ಯೆ ಏನೋ ನಡೆಯುತ್ತಿದೆ ಎಂದು ಖಾತ್ರಿ ಮಾಡಿಕೊಳ್ಳಬಹುದು. ಈ ವಿಷಯ ಈ ಮೊದಲು ಸಾಕಷ್ಟು ಬಾರಿ ನಿಜವಾಗಿದೆ. ಸುನೈನಾ ಹಾಗೂ ಖಲೀದ್ ಅಮೇರಿ ಪರಸ್ಪರ ಒಬ್ಬರನ್ನೊಬ್ಬರು ಅನ್​​ಫಾಲೋ ಮಾಡಿಕೊಂಡಿರುವುದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?

ಇನ್ನು ಸಿನಿಮಾ ವಿಷಯಕ್ಕೆ ಬರೋದಾದರೆ 2025ರಲ್ಲಿ ರಿಲೀಸ್ ಆದ ‘ಕುಬೇರ’ ಸಿನಿಮಾದಲ್ಲಿ ಸುನೈನಾ ನಟಿಸಿದ್ದರು. ಇದಾದ ಬಳಿಕ ಅವರ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಅವರು ಬ್ರೇಕ್ ಪಡೆದಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:05 pm, Sat, 13 June 26

Source link

KRS Back Water: ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣವಾಗಿ ಗೋಚರಿಸುತ್ತಿರುವ ಪುರಾತನ ದೇಗುಲ! – Kannada News | KRS Dam: Submerged Lakshmi Narayanaswamy Temple Emerges as Water Levels Plummet

ಮಂಡ್ಯ, ಜೂನ್ 13: ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಪ್ರಸ್ತುತ 81 ಅಡಿಗೆ ತಲುಪಿದೆ. ಇದರಿಂದಾಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಸಂಪೂರ್ಣವಾಗಿ ಗೋಚರಿಸುತ್ತಿದೆ. 90 ಅಡಿಗೆ ನೀರಿನ ಮಟ್ಟ ಕುಸಿದಾಗ ಈ ದೇವಾಲಯವು ಭಾಗಶಃ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಆನಂದೂರು ಹಿನ್ನೀರಿನ ಪ್ರದೇಶದಲ್ಲಿರುವ ಈ ದೇವಾಲಯವು ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನೀರಿನ ಮಟ್ಟ ಕುಸಿತದಿಂದ ಸ್ಪಷ್ಟವಾಗಿ ಕಾಣಿಸುತ್ತಿರುವ ದೇವಾಲಯದ ಸುತ್ತಮುತ್ತ ಫೋಟೋಶೂಟ್‌ ಮಾಡಿಸಿಕೊಳ್ಳಲು ಜನರು ದೂರದ ಊರುಗಳಿಂದ ಆಗಮಿಸುತ್ತಿದ್ದಾರೆ. ಕೆಆರ್‌ಎಸ್ ಹಿನ್ನೀರಿನಲ್ಲಿ ಈ ಹಿಂದೆ ಮುಳುಗಡೆಯಾಗಿದ್ದ ಸುಮಾರು 10-15 ಗ್ರಾಮಗಳು ಮತ್ತು ಕೆಲವು ದೇವಾಲಯಗಳನ್ನು ಸ್ಥಳಾಂತರಿಸಲಾಗಿತ್ತು. ಆದರೆ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯವನ್ನು ಮಾತ್ರ ಅದೇ ಸ್ಥಳದಲ್ಲಿ ಉಳಿಸಿಕೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version