ದೆಹಲಿಯಲ್ಲಿ ತಪ್ಪಿದ ದುರಂತ; ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ 4 ಉಗ್ರರ ಬಂಧನ – Kannada News | 4 terror suspects arrested IED seized in Delhi who were planning to attacks using toy cars

ನವದೆಹಲಿ, ಏಪ್ರಿಲ್ 18: ದೆಹಲಿ ಪೊಲೀಸರು ಇಂದು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅವರು ದೆಹಲಿಯಲ್ಲಿ (Delhi) ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಯೋಜಿಸಿದ್ದರು. ಅದಕ್ಕಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇತರರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮತ್ತು ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಲು ಐಇಡಿ ಅಳವಡಿಸಲಾದ ರಿಮೋಟ್-ಕಂಟ್ರೋಲ್ ಆಟಿಕೆ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ಭಾಗಿಯಾಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ತಪ್ಪಿದ ಭಾರೀ ದುರಂತ; ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್

ಈ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಇಬ್ಬರು, ಒಡಿಶಾ ಮತ್ತು ಬಿಹಾರದಿಂದ ತಲಾ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಎನ್‌ಕ್ರಿಪ್ಟ್ ಮಾಡಲಾದ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಸಕ್ರಿಯರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಜಿಹಾದ್, ಉಗ್ರಗಾಮಿ ಸಿದ್ಧಾಂತ ಮತ್ತು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಳ್ಳಲಾದ ಎನ್‌ಕ್ರಿಪ್ಟ್ ಮಾಡಲಾದ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಆರೋಪಿಗಳು ಸಕ್ರಿಯರಾಗಿದ್ದರು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs DC: W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ

ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​​ಸಿಬಿ 175 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್​ಗೆ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲೇ ಶಾಕ್ ನೀಡಿದರು. ಈ ಓವರ್​ನ ನಾಲ್ಕನೇ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಪಾತುಮ್ ನಿಸ್ಸಾಂಕ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಸಿಸ್ಸಾಂಕ ಕೇವಲ 1 ರನ್​ಗೆ ಸುಸ್ತಾದರು.

ಆ ನಂತರ ಇನ್ನಿಂಗ್ಸ್​ನ ಮೂರನೇ ಓವರ್ ಬೌಲ್ ಮಾಡಲು ಬಂದ ಭುವನೇಶ್ವರ್ ಈ ಓವರ್‌ನಲ್ಲಿ ಕರುಣ್ ನಾಯರ್ ಮತ್ತು ಸಮೀರ್ ರಿಜ್ವಿ ಅವರನ್ನು ಔಟ್ ಮಾಡಿದರು. ಓವರ್​ನ ಎರಡನೇ ಎಸೆತದಲ್ಲಿ ಸಾಲ್ಟ್ ಹಿಡಿದ ಅದ್ಭುತ ಕ್ಯಾಚ್​ಗೆ 5 ರನ್ ಬಾರಿಸಿದ್ದ ಕರುಣ್ ನಾಯರ್ ಬಲಿಯಾದರೆ, ಆ ನಂತರ ಬಂದ ಸಮೀರ್ ರಿಜ್ವಿ ಕೂಡ ಓವರ್​ನ ಐದನೇ ಎಸೆತದಲ್ಲಿ ವಿಕೆಟ್‌ಕೀಪರ್‌ ಜಿತೇಶ್ ಶರ್ಮಾ ಹಿಡಿದ ಸೂಪರ್​ಮ್ಯಾನ್ ಕ್ಯಾಚ್​ಗೆ ಕೇವಲ 2 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು.

Source link

‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ – Kannada News | Ex contestant Sonali Raut sends legal notice to Bigg Boss Marathi

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ ಸ್ವಚ್ಛತೆ ಇಲ್ಲದೇ ಇರುವ ಕಾರಣಕ್ಕೆ ಚರ್ಮ ರೋಗ ಬಂದಿದೆ. ಇದರಿಂದಾಗಿ ತಮಗೆ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಿಗ್​​ಬಾಸ್​​ಗೆ ನೊಟೀಸ್ ಕಳಿಸಿದ್ದಾರೆ.

ಬಿಗ್​​ಬಾಸ್ ಮರಾಠಿಯಲ್ಲಿ ಭಾಗಿ ಆಗಿರುವ ಸ್ಪರ್ಧಿ ಸೊನಾಲಿ ರೌತ್ ಇದೀಗ ‘ಬಿಗ್ ಬಾಸ್ ಮರಾಠಿ 6’ಗೆ ನೊಟೀಸ್ ಕಳಿಸಿದ್ದಾರೆ. ಬಿಗ್​​ಬಾಸ್ ಮರಾಠಿ 6 ರಿಯಾಲಿಟಿ ಶೋ ಪ್ರಸ್ತುತ ಚಾಲ್ತಿಯಲ್ಲಿದ್ದು, ಇನ್ನೇನು ಅಂತಿಮ ಹಂತದಲ್ಲಿದೆ. ಇದೇ ಸೀಸನ್​​ನ ಸ್ಪರ್ಧಿ ಆಗಿದ್ದ ಸೋನಾಲಿ ರಾವತ್ ಹೊರಗೆ ಬಂದ ಬಳಿಕ ಬಿಗ್​ಬಾಸ್ ಮನೆಯೊಳಗಿನ ಪರಿಸ್ಥಿತಿಯ ಮಾಹಿತಿ ಹಂಚಿಕೊಂಡಿರುವುದು ಇದು ಆತಂಕಕ್ಕೆ ಕಾರಣವಾಗಿದೆ. ಕೇವಲ ಮನರಂಜನೆಗಾಗಿ ಸ್ಪರ್ಧಿಗಳ ಆರೋಗ್ಯದ ಜೊತೆ ಆಟವಾಡಲಾಗುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿನ ಸ್ವಲ್ಪವೂ ಸ್ವಚ್ಛತೆ ಇಲ್ಲ. ಅನೈರ್ಮಲ್ಯದಿಂದಾಗಿ ತಮಗೆ ‘ಸ್ಕ್ಯಾಬೀಸ್’ ಎಂಬ ಚರ್ಮದ ಕಾಯಿಲೆ ಬಂದಿದೆ ಎಂದಿರುವ ಸೊನಾಲಿ ಅದಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಹ ಹಂಚಿಕೊಂಡಿದ್ದಾರೆ. ಸೊನಾಲಿ ಹಂಚಿಕೊಂಡಿರುವ ವಿಡಿಯೋನಲ್ಲಿ ಸೊನಾಲಿ ಅವರಿಗೆ ದೇಹದ ಹಲವು ಕಡೆ ಗುಳ್ಳೆಗಳು, ಗಾಯಗಳು ಆಗಿವೆ.

ಇದನ್ನೂ ಓದಿ:ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಅಡುಗೆ ಮನೆಯಲ್ಲಿ ದೊಡ್ಡ ದೊಡ್ಡ ಇಲಿಗಳು ಓಡಾಡುತ್ತಿರುತ್ತವೆ. ಅವು ತಿಂದು ಉಳಿಸಿದ ಆಹಾರ ಪದಾರ್ಥಗಳನ್ನೇ ಸ್ಪರ್ಧಿಗಳಿಗೆ ಅಡುಗೆ ಮಾಡಲು ಬಳಸಲಾಗುತ್ತಿತ್ತು ಎಂದು ವಿಡಿಯೋನಲ್ಲಿ ಸೊನಾಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ವೀಕೆಂಡ್‌ನಲ್ಲಿ ಬರುವ ಆಹಾರದಲ್ಲಿ ಜಿರಳೆಗಳು ಪತ್ತೆಯಾಗುತ್ತಿದ್ದವು ಎಂದು ಕಿಡಿಕಾರಿದ್ದಾರೆ. 17 ಜನ ಸ್ಪರ್ಧಿಗಳಿಗೆ ಕೆಲವೇ ವಾಶ್‌ರೂಮ್ ಬಳಸಲು ನೀಡಲಾಗಿತ್ತು. ಸ್ಪರ್ಧಿಗಳು ಅಲ್ಲಿಯೇ ಸಿಗರೇಟ್ ಸೇದುವುದು ಮಾಡುತ್ತಿದ್ದರು. ಟವೆಲ್‌ಗಳು ಮತ್ತು ರೇಜರ್‌ಗಳಂತಹ ವೈಯಕ್ತಿಕ ವಸ್ತುಗಳನ್ನು ಸಹ ಪರಸ್ಪರ ಹಂಚಿಕೊಳ್ಳುವಂತೆ ಒತ್ತಾಯಿಸಲಾಗುತ್ತಿತ್ತು ಎಂದಿದ್ದಾರೆ ನಟಿ. ಈ ಎಲ್ಲ ದೈಹಿಕ ಮತ್ತು ಮಾನಸಿಕ ಕಿರುಕುಳದ ವಿರುದ್ಧ ಸೋನಾಲಿ ರಾವತ್ ಈಗಾಗಲೇ ಶೋನ ನಿರ್ಮಾಣ ಸಂಸ್ಥೆಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಸೋನಾಲಿ ರಾವತ್ ಅವರು ಈ ಹಿಂದೆ ‘ಬಿಗ್ ಬಾಸ್ ಹಿಂದಿ 8’ ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಮರಾಠಿ ಸೀಸನ್ 6 ಕ್ಕೆ ಅವರು ವೈಲ್ಡ್ ಕಾರ್ಡ್ ಅಥವಾ ವಿಶೇಷ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆದರೆ ಆರೋಗ್ಯ ಸಮಸ್ಯೆಗಳಿಂದಾಗಿ ಅವರು ಶೀಘ್ರವೇ ಮನೆಯಿಂದ ಹೊರಬರಬೇಕಾಯಿತು. ಹೊರಬಂದ ಬಳಿಕ ಇದೀಗ ಮರಾಠಿ ಬಿಗ್​​ಬಾಸ್​​ನ ಅವ್ಯವಸ್ಥೆಯನ್ನು, ಅನೈರ್ಮಲ್ಯವನ್ನು ಬಯಲಿಗೆಳೆಯುತ್ತಿದ್ದಾರೆ. ನಿರೂಪಕ ರಿತೇಶ್ ದೇಶ್​ಮುಖ್ ವಿರುದ್ಧವೂ ಅವರು ಅಸಮಾಧಾನ ಹೊರಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:46 pm, Sat, 18 April 26

Source link

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ – Kannada News | BJP MLA CC Patil expresses regret over use his statements following anger from Kuruba community

ಗದಗ, ಏಪ್ರಿಲ್​ 18: ಉಪಚುನಾವಣೆಯ ಪ್ರಚಾರದ ವೇಳೆ ಕುರುಬ ಸಮುದಾಯದ ಕುರಿತು ವಿವಾದಾತ್ಮಕ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಸಿಸಿ ಪಾಟೀಲ್​​, ಸಮುದಾಯದ ಆಕ್ರೋಶಕ್ಕೆ ಮಣಿದು ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಹಂಚಿಕೊಂಡಿರುವ ಅವರು, ಉಪಚುನಾವಣೆಯ ಪ್ರಚಾರ ವೇಳೆ ಹಾಲುಮತ, ಅಲ್ಪಸಂಖ್ಯಾತ ಸಮಾಜದ ಒಗ್ಗಟ್ಟು ನೋಡಿ ಕಲಿಯಿರಿ ಎಂಬ ಭರದಲ್ಲಿ ಹೇಳಿದ್ದೆ ಎಂದಿದ್ದಾರೆ. ಶಾಸಕರ ಹೇಳಿಕೆ ಕುರುಬ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಪರಿಗಣಿಸಿದ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಗೊಂಬೆಯಂತಿದ್ದ ಹೆಂಡತಿಯನ್ನು ಬಿಟ್ಟು ಪರಸ್ತ್ರೀ ಜತೆಗೆ ಸಂಬಂಧ: ಪೆನ್ ಡ್ರೈವ್​​ನಲ್ಲಿತ್ತು ಗಂಡನ ರಾಸಲೀಲೆ, ಕಿರುಕುಳದ ಸಾಕ್ಷಿ! – Kannada News | Davangere Murder: Govt Employee Kills Wife; Dowry Harassment, Affair Suspected

ದಾವಣಗೆರೆ ಪತ್ನಿ ಕೊಲೆ,Image Credit source: tv9 kannada

ದಾವಣಗೆರೆ, ಏ.18: ಮದುವೆಯ ಹೊತ್ತಿನಲ್ಲಿ ಆ ದಂಪತಿಗಳು ಸ್ವರ್ಗದಿಂದ ಇಳಿದು ಬಂದ ಜೋಡಿಯಂತೆ ಕಂಡಿದ್ದರು. ಎಲ್ಲರೂ, ವಾವ್ಹ್ ಏನ್ ಚೆನ್ನಾಗಿದೆ ಜೋಡಿ, ಅದರಲ್ಲೂ ಹುಡುಗಿಯನ್ನು ಸುಂದರ ಹುಡುಗಿ ಎಂದು ಹೇಳಿದ್ದರು. ಅವರು ಅದ್ಧೂರಿ ಪ್ರೀ ವೆಡ್ಡಿಂಗ್ ಶೂಟಿಂಗ್, ಮದುವೆ ಮಾಡಿಕೊಂಡಿದ್ದರು. ಎಲ್ಲವೂ ಸುಖಾಂತ್ಯ ಕಾಣಬೇಕಿತ್ತು. ಆದರೆ, ಎರಡೇ ವರ್ಷಕ್ಕೆ ಆ ಸುಂದರ ಸಂಸಾರ ಚಿತೆಯೇರಿದೆ. ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ, ತನ್ನನ್ನೇ ನಂಬಿ ಬಂದ ಪತ್ನಿಯನ್ನು ಚಿತ್ರಹಿಂಸೆ ನೀಡಿ ಕೊಂದಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದಾವಣಗೆರೆ ತಾಲೂಕಿನ ಮಂಡಲೂರು ಗ್ರಾಮದ ಬಡ ಕುಟುಂಬದ ಕನ್ಯೆ ಕಾವ್ಯಾ ಹಾಗೂ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದ ಮನು ಎಂಬುವವರಿಗೆ ಎರಡು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮನು ಅಂಚೆ ಇಲಾಖೆಯಲ್ಲಿ ಸರ್ಕಾರಿ ನೌಕರನಾಗಿದ್ದ ಎಂಬ ಕಾರಣಕ್ಕೆ, ಕಾವ್ಯಾ ಪೋಷಕರು ಸಾಲಸೋಲ ಮಾಡಿ 2.50 ಲಕ್ಷ ರೂಪಾಯಿ ನಗದು ಮತ್ತು 70 ಗ್ರಾಂ ಚಿನ್ನ ನೀಡಿ ಮದುವೆ ಮಾಡಿದ್ದರು. ಈ ದಂಪತಿ ದಾವಣಗೆರೆ ನಗರದ ಅರಸು ಬಡಾವಣೆಯ ಕ್ವಾರ್ಟರ್ಸ್‌ನಲ್ಲಿ ವಾಸವಿದ್ದರು.

ನಿನ್ನೆ (ಏಪ್ರಿಲ್ 17) ಕಾವ್ಯಾ ತನ್ನ ತಾಯಿಯೊಂದಿಗೆ ಮಂತ್ರಾಲಯಕ್ಕೆ ಹೋಗಲು ಸಿದ್ಧತೆ ನಡೆಸಿದ್ದಳು. ಮನೆಯ ಮುಂದೆ ವಾಹನ ನಿಂತು ಎಲ್ಲರೂ ಕಾಯುತ್ತಿದ್ದರು. ಮಧ್ಯಾಹ್ನದಿಂದ ಕಾವ್ಯಾಳ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿ ವೇಳೆ ಮನು ತನ್ನ ಅತ್ತೆಗೆ ಫೋನ್ ಮಾಡಿ “ಕಾವ್ಯಾ ಮಾತನಾಡುತ್ತಿಲ್ಲ” ಎಂದು ತಿಳಿಸಿದ್ದಾನೆ. ಗಾಬರಿಗೊಂಡ ಸಂಬಂಧಿಕರು ಧಾವಿಸಿದಾಗ ಕಾವ್ಯಾ ನಿಶ್ಚಲವಾಗಿ ಮಲಗಿದ್ದಳು. ಮನು ಅಲ್ಲಿಂದ ಪರಾರಿಯಾಗಿದ್ದನು. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲೇ ಕಾವ್ಯಾ ಸಾವನ್ನಪ್ಪಿದ್ದಳು.

ಕಾವ್ಯಾಳ ಪತಿ ಮನುಗೆ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿತ್ತು ಮತ್ತು ಆತ ಮಾದಕ ಚಟಕ್ಕೆ ಬಲಿಯಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಕಾವ್ಯಾ ತನ್ನ ಪೋಷಕರಿಗೆ ತಿಳಿಸಿ ಅಳಲು ತೋಡಿಕೊಂಡಿದ್ದಳು. ಪತಿ ನೀಡುತ್ತಿದ್ದ ಕಿರುಕುಳ ಮತ್ತು ಆತನ ಅನೈತಿಕ ಸಂಬಂಧದ ಸಾಕ್ಷ್ಯಗಳನ್ನು ಕಾವ್ಯಾ ಒಂದು ಪೆನ್ ಡ್ರೈವ್ ನಲ್ಲಿ ಸಂಗ್ರಹಿಸಿಟ್ಟಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಈ ಪೆನ್ ಡ್ರೈವ್ ಈಗ ಈ ಕೊಲೆ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ನ್ಯಾಯಕ್ಕಾಗಿ ಆಗ್ರಹಿಸಿ ಕಾವ್ಯಾಳ ಸಂಬಂಧಿಕರು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಮಗಳ ಸಾವಿನಿಂದ ತಾಯಿ ಶಶಿಕಲಾ ಪ್ರಜ್ಞೆ ತಪ್ಪಿ ಆಸ್ಪತ್ರೆ ಸೇರಿದ್ದಾರೆ. ಸದ್ಯ ಪೊಲೀಸರು ಆರೋಪಿ ಮನು ನನ್ನು ವಶಕ್ಕೆ ಪಡೆದಿದ್ದು, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಶಂಕೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ! – Kannada News | Peresandra Tragedy: 18 Year Old Suicide After Kitchen Advice; Youth Mental Health Crisis

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ

ಚಿಕ್ಕಬಳ್ಳಾಪುರ, ಏ, 18: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ (18) ಎಂಬ ಯುವತಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾಳೆ. ಅತ್ತೆ ಮನೆಯಲ್ಲಿ ಇರುವಾಗ ಸ್ವಲ್ಪ ಕೆಲಸ ಮಾಡಬೇಕಮ್ಮ, ನನಗೂ ಸ್ವಲ್ಪ ಸಹಾಯ ಆಗುತ್ತದೆ. ಸುಮ್ಮನೆ ಇರುವ ಬದಲು ಅಡುಗೆ ಮಾಡುವುದನ್ನು ಕಲಿ ಎಂದು ಹೇಳಿದರು. ಅತ್ತೆ ಹೇಳಿದ ರೀತಿ ಇಲ್ಲ ಎಂದು ಶ್ರುತಿ ಅಪಾರ್ಥ ಮಾಡಿಕೊಂಡು ಇದರಿಂದ ತೀವ್ರವಾಗಿ ಮನನೊಂದುಕೊಂಡಿದ್ದಾಳೆ.

ಇದನ್ನೂ ಓದಿ: “ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ!

ಅತ್ತೆಯ ಮಾತನ್ನು ತುಂಬಾ ಮನಸ್ಸಿಗೆ ತೆಗೆದುಕೊಂಡು, ಮನೆಯಲ್ಲಿದ್ದ ವಿಷಸೇವನೆ ಮಾಡಿದ್ದಾಳೆ. ತಕ್ಷಣ ಶೃತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಸಾರದ ಸಣ್ಣಪುಟ್ಟ ವಿಚಾರಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಇಂತಹ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದು ತಪ್ಪು, ಇಂತಹ ಕ್ಷುಲ್ಲಕ ಕಾರಣಕ್ಕೆ ಜೀವ ಕಳೆದುಕೊಳ್ಳುವುದು ಸರಿಯಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RCB vs DC: 74 ಸಿಕ್ಸರ್‌, 64 ಬೌಂಡರಿ.! 560 ಎಸೆತಗಳಲ್ಲಿ ಇತಿಹಾಸ ಸೃಷ್ಟಿಸಿದ ಟಿಮ್ ಡೇವಿಡ್

Source link

Akshaya Tritiya: ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಅನುಗುಣವಾಗಿ ಇಲ್ಲಿದೆ ಬಣ್ಣಗಳ ಆಯ್ಕೆ! – Kannada News | Akshaya Tritiya Vehicle Purchase: Astrological Guide for Lucky Colors and Blessings

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯವನ್ನು ವರ್ಷದ ಅತ್ಯಂತ ಶ್ರೇಷ್ಠ ಮತ್ತು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಮಾಡಿದ ಯಾವುದೇ ಹೂಡಿಕೆ ಅಥವಾ ಖರೀದಿ ಅಕ್ಷಯವಾಗಿ ಬೆಳೆಯುತ್ತದೆ ಎಂಬ ಅಚಲ ನಂಬಿಕೆಯಿದೆ. ಸಾಮಾನ್ಯವಾಗಿ ಜನರು ಈ ದಿನ ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ಖರೀದಿಸಲು ಆದ್ಯತೆ ನೀಡುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಶುಭ ಮುಹೂರ್ತದಲ್ಲಿ ಹೊಸ ವಾಹನವನ್ನು ಮನೆಗೆ ತರುವುದು ಕೂಡ ಅಷ್ಟೇ ಅದೃಷ್ಟದಾಯಕವಾಗಿದೆ. ವಾಹನವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದ್ದು, ಈ ಪವಿತ್ರ ದಿನದಂದು ಅದನ್ನು ಖರೀದಿಸುವುದರಿಂದ ಪ್ರಯಾಣ ಸುಖಕರವಾಗುವುದಲ್ಲದೆ, ಜೀವನದಲ್ಲಿ ಪ್ರಗತಿ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

ವಾಹನ ಖರೀದಿಸುವಾಗ ಬಣ್ಣದ ಆಯ್ಕೆಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರತಿಯೊಂದು ರಾಶಿಯು ಒಂದು ನಿರ್ದಿಷ್ಟ ಗ್ರಹದ ಆಧಿಪತ್ಯಕ್ಕೆ ಒಳಪಟ್ಟಿರುತ್ತದೆ. ಆದ್ದರಿಂದ ಆಯಾ ರಾಶಿಗೆ ಒಪ್ಪುವ ಬಣ್ಣದ ವಾಹನವನ್ನು ಆರಿಸಿಕೊಂಡಾಗ ಅದು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಉದಾಹರಣೆಗೆ, ಮೇಷ ರಾಶಿಯವರು ಕೆಂಪು ಅಥವಾ ಹೊಳೆಯುವ ಬಣ್ಣದ ವಾಹನಗಳನ್ನು ಖರೀದಿಸಿದರೆ, ವೃಷಭ ಮತ್ತು ಕರ್ಕ ರಾಶಿಯವರಿಗೆ ಬಿಳಿ ಅಥವಾ ಕೆನೆ ಬಣ್ಣದ ವಾಹನಗಳು ಶ್ರೇಯಸ್ಕರ. ಮಿಥುನ ಮತ್ತು ಕನ್ಯಾ ರಾಶಿಯವರು ಹಸಿರು ಬಣ್ಣದ ಛಾಯೆಗಳನ್ನು ಆರಿಸಿಕೊಳ್ಳುವುದು ಉತ್ತಮವಾದರೆ, ಸಿಂಹ ರಾಶಿಯವರಿಗೆ ಮೆರೂನ್ ಅಥವಾ ಚಾಕೊಲೇಟ್ ಬಣ್ಣಗಳು ಹೆಚ್ಚು ಅದೃಷ್ಟವನ್ನು ತರುತ್ತವೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಇನ್ನುಳಿದ ರಾಶಿಗಳಾದ ವೃಶ್ಚಿಕದವರಿಗೆ ಗಾಢ ಕೆಂಪು, ಧನು ರಾಶಿಯವರಿಗೆ ಹಳದಿ ಮತ್ತು ಮಕರ ಹಾಗೂ ಕುಂಭ ರಾಶಿಯವರಿಗೆ ನೀಲಿ ಅಥವಾ ಕಂದು ಬಣ್ಣದ ವಾಹನಗಳು ಪ್ರಶಸ್ತವೆಂದು ಪರಿಗಣಿಸಲಾಗಿದೆ. ಅಕ್ಷಯ ತೃತೀಯವು ‘ಅಬೂಜ ಮುಹೂರ್ತ’ವಾಗಿರುವುದರಿಂದ ಅಂದು ವಾಹನ ಖರೀದಿಸಲು ಯಾವುದೇ ವಿಶೇಷ ಘಳಿಗೆಯನ್ನು ಕಾಯುವ ಅಗತ್ಯವಿಲ್ಲ, ದಿನವಿಡೀ ಶುಭಫಲಗಳೇ ಲಭಿಸುತ್ತವೆ. ವಾಹನವನ್ನು ಖರೀದಿಸಿದ ನಂತರ ಈ ಪುಣ್ಯ ದಿನದಂದು ಶಾಸ್ತ್ರೋಕ್ತವಾಗಿ ಪೂಜೆ ಮಾಡಿಸುವುದರಿಂದ ವಾಹನ ದೋಷಗಳು ನಿವಾರಣೆಯಾಗಿ, ದೇವಿಯ ಅನುಗ್ರಹ ಸದಾಕಾಲ ನಿಮ್ಮ ಮೇಲಿರುತ್ತದೆ ಎಂಬ ನಂಬಿಕೆಯಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಲೋಕಾಯುಕ್ತದ 40 ವರ್ಷಗಳ ಸಾರ್ಥಕ ಪಯಣ: ಸಾಧನೆಯ ಹಾದಿ ಮೆಲುಕು ಹಾಕಿದ ನ್ಯಾಯಮೂರ್ತಿಗಳು – Kannada News | Karnataka Lokayukta: 40 Years of Anti Corruption Service and Good Governance

ಕರ್ನಾಟಕ ಲೋಕಾಯುಕ್ತ Image Credit source: lokayukta.karnataka.gov.in

ಬೆಂಗಳೂರು, ಏಪ್ರಿಲ್​ 18: ಕರ್ನಾಟಕ ಲೋಕಾಯುಕ್ತ (Karnataka Lokayukta) ಸಂಸ್ಥೆಯು ತನ್ನ ಅರ್ಥಪೂರ್ಣ ಹಾಗೂ ಅವಿರತ ಸೇವೆಯ 40 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಾಲ್ಕು ದಶಕಗಳ ಕಾರ್ಯಸೇವೆ ಮೆಲುಕು ಹಾಕುವ ಮೂಲಕ ವಿವಿಧ ಗೋಷ್ಠಿ ಹಾಗೂ ವಿಚಾರ ಸಂಕೀರ್ಣಕ್ಕೆ ಇಂದಿನ ಕಾರ್ಯಕ್ರಮ ಸಾಕ್ಷಿಯಾಗಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಿಷ್ಟು 

ಕರ್ನಾಟಕ ಲೋಕಾಯುಕ್ತದ 4 ದಶಕಗಳ ಸಾರ್ಥಕ ಪಯಣ ಪೂರೈಸಿದೆ. ಹೀಗಾಗಿ ಶಕ್ತಿಸೌಧ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಲೋಕಾಯುಕ್ತದ 40 ವರ್ಷದ ಸಾಧನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಖುಷಿ ತಂದಿದೆ. ಕರ್ನಾಟಕದ ಲೋಕಾಯುಕ್ತ ಒಳ್ಳೆಯ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಲೋಕಾಯುಕ್ತ ಕೆಲಸ ಮಾಡುತ್ತಿದೆ. ಭ್ರಷ್ಟಾಚಾರದ ವಿರುದ್ಧ ಏನು ಕ್ರಮ ಆಗಲಿದೆ ನಾಗರಿಕರು ಗಮನಿಸಿರುತ್ತಾರೆ. ಸಮಾಜದ ಅಂಕುಕೊಂಡುಗಳನ್ನ ತಿದ್ದುವ ಕೆಲಸ ಮಾಡ್ತಿದೆ. ರಿಮೋಟ್ ಏರಿಯಾಗಳಲ್ಲೂ ಲೋಕಾಯುಕ್ತ ಸೇವೆ ಅಗ್ರಗಣ್ಯ. ಉತ್ತಮ ಸ್ವತಂತ್ರ ಸಂಸ್ಥೆಯಾಗಿ ಕರ್ನಾಟಕದ ಲೋಕಾಯುಕ್ತ ಕೆಲಸ ನಿರ್ವಹಿಸುತ್ತಿದೆ ಅಂತ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ನಾಟಕದ ಲೋಕಾಯುಕ್ತ ಒಳ್ಳೆಯ ಕೆಲಸ ಮಾಡುತ್ತಿದೆ: ಮುಖ್ಯ ನ್ಯಾ.ಅರವಿಂದ್ ಕುಮಾರ್

ಮುಖ್ಯ ನ್ಯಾ.ಅರವಿಂದ್ ಕುಮಾರ್ ಮಾತನಾಡಿ, 40 ವರ್ಷಗಳ ಸಾಧನೆ ಸಾಮಾನ್ಯವಾದದ್ದಲ್ಲ. 1984ರಲ್ಲಿ ಕರ್ನಾಟಕದಲ್ಲಿ ಲೋಕಾಯುಕ್ತ ಪ್ರಾರಂಭ ಆಯ್ತು. ಕರ್ನಾಟಕದಲ್ಲೇ ಮೊದಲ ಬಾರಿಗೆ ಪ್ರಾರಂಭ ಆದ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ. ಕಾವಲು ನಾಯಿಯಂತೆ ಕೆಲಸ ಮಾಡುವುದು ಸುಲಭವಲ್ಲ. ಸಂತೋಷ್ ಹೆಗಡೆ ಸೇರಿ ಹಲವರು ಪಾರದರ್ಶಕತೆಯಿಂದ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರವನ್ನ ಬಯಲಿಗೆ ಎಳೆದು ಪಾರದರ್ಶಕತೆ ಎತ್ತಿ ಹಿಡಿದಿದ್ದಾರೆ. ರಾಜಕೀಯ ಒತ್ತಡ ಬಾರದೇ ಲೋಕಾಯುಕ್ತ ತನ್ನನ್ನ ರಕ್ಷಿಸಿಕೊಂಡಿದೆ ಎಂದರು. 

ಕರ್ನಾಟಕ ಲೋಕಾಯುಕ್ತ ಬಿ.ಎಸ್.ಪಾಟೀಲ್ ಹೇಳಿದ್ದಿಷ್ಟು 

ಇನ್ನು ಕಾರ್ಯಕ್ರಮವನ್ನ ಉದ್ದೇಶಿಸಿ ಭಾಷಣ ಮಾಡಿದ ಕರ್ನಾಟಕ ಲೋಕಾಯುಕ್ತ ಬಿ.ಎಸ್.ಪಾಟೀಲ್, ನಂಬಿಕೆ ಮತ್ತು ವಿಶ್ವಾಸಾರ್ಹ ಸಂಸ್ಥೆ ಲೋಕಾಯುಕ್ತ ಸಂಸ್ಥೆ. ಲೋಕಾಯುಕ್ತ, ಉಪ ಲೋಕಾಯುಕ್ತ ದೂರುಗಳ ಬಂದ ಕೂಡಲೇ ತ್ವರಿತ ಗತಿಯಲ್ಲಿ‌ ಕೆಲಸ ಮಾಡುತ್ತಿದೆ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಅನೇಕ ಕಾರ್ಯಾಗಾರ ಹಮ್ಮಿಕೊಂಡಿದೆ. ಸುಮಾರು 9,800 ಎಕರೆ ಜಮೀನು ಒತ್ತುವರಿ, ಕೆರೆ ಒತ್ತುವರಿ ತೆರವು ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ ಉತ್ತಮ ಕೆಲಸ ಮಾಡಲಾಗುತ್ತಿದೆ. ಬೆಂಗಳೂರಿನ 83 ಹಾಸ್ಟೆಲ್​​ಗೆ ದಿಢೀರ್ ಭೇಟಿ ಕೊಟ್ಟಿದ್ದೇವೆ. ತಾಲ್ಲೂಕು, ಪಂಚಾಯತ್ ಹಂತದ ಕೇಸ್​ಗಳನ್ನ ಗಮನಿಸಿ ಕೂಡಲೇ ಕ್ರಮ ಜರುಗಿಸಲಾಗಿದೆ. ರಾಜ್ಯಾದ್ಯಂತ ಉತ್ತಮ ಕೆಲಸ ಮಾಡಲಾಗಿದೆ ಅಂತ ನಾಲ್ಕು ದಶಕಗಳ ಸೇವೆಯನ್ನ ಮೆಲುಕು ಹಾಕಿದರು.

ಇದನ್ನೂ ಓದಿ: 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

ಭಾರತದ ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್, ಲೋಕಾಯುಕ್ತ ನಿಯತಕಾಲಿಕೆಯನ್ನು ಬಿಡುಗಡೆ ಮಾಡಿ, ಬಳಿಕ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳ ಹೊಸ ಪೋರ್ಟಲ್ ಹಾಗೂ ಆನ್‍ಲೈನ್ ತನಿಖಾ ಮಾಡ್ಯೂಲ್‍ಗೆ ಚಾಲನೆ ನೀಡಿದರು. ಬಳಿಕ‌ ಮಾಜಿ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರನ್ನು ಮುಖ್ಯ ನ್ಯಾ‌. ಸೂರ್ಯ ಕಾಂತ್ ಸನ್ಮಾನಿಸಿದರು.

ಭ್ರಷ್ಟಾಚಾರ ಮತ್ತು ದುರಾಡಳಿತ ವಿರುದ್ಧ ಹೋರಾಟದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾತನಾಡಿದ್ರು. ಲೋಕಾಯುಕ್ತ ಕಾಯ್ದೆಯಡಿ ಕುಂದುಕೊರತೆಗಳ ಪರಿಹಾರ ವಿಷಯದ ಮೇಲೆ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮಾಹಿತಿ ಹಂಚಿಕೊಂಡ್ರೆ, ಭ್ರಷ್ಟಾಚಾರ ತಡೆಗಟ್ಟುವುದು ಹೇಗೆ? ಎಂಬುದರ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ವಿಚಾರಗೋಷ್ಠಿ ನಡೆಸಿದರು.

ಒಟ್ಟಾರೆ ಪ್ರಾಮಾಣಿಕ ವ್ಯಕ್ತಿಗಳನ್ನು ಬೆಳೆಸುವಲ್ಲಿ ನಾವು ವಿಫಲವಾದರೆ ಅನ್ಯಾಯವು ಗೆದ್ದು, ನ್ಯಾಯವು ಮರೆಯಾಗುವ ಅಪಾಯವಿದೆ ಎಂದು ಸಂಸ್ಥೆ ಎಚ್ಚರಿಸಿದೆ. ಸವಾಲುಗಳೇ ವ್ಯಕ್ತಿಯನ್ನು ಪರಿಪೂರ್ಣಗೊಳಿಸುತ್ತವೆ ಎಂಬ ಧ್ಯೇಯವಾಕ್ಯದೊಂದಿಗೆ ಲೋಕಾಯುಕ್ತವು ನಾಲ್ಕು ದಶಕಗಳನ್ನು ದಾಟಿ ಮುಂದಿನ ಹೆಜ್ಜೆಯನ್ನು ಇಡುತ್ತಿದೆ.

ಇದನ್ನೂ ಓದಿ: 1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ

ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಕರ್ನಾಟಕದ ಲೋಕಾಯುಕ್ತ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹಾಗೂ ಕರ್ನಾಟಕದ ಐಎಎಸ್‌ ಹಾಗೂ ಐಪಿಎಸ್ ಅಧಿಕಾರಿಗಳು ಸೇರಿ ಹಲವರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 6:06 pm, Sat, 18 April 26

Source link

“ವಾಸ್ತು ಹೇಳುವ ನೆಪದಲ್ಲಿ ನನ್ನ ಎದೆಯ ಭಾಗ ಮುಟ್ಟಿದ್ದಾರೆ”: ಮಹಿಳೆಯ ಗಂಭೀರ ಆರೋಪ, ಇದು ಹನಿಟ್ರಾಪ್ ಎಂದ ಮಾಲೀಕ! – Kannada News | Vijayanagar FIRs: Vastu Consultant Faces Assault Charge, Alleges Extortion and Attack

ವಾಸ್ತು ಹೇಳುವವನ ಮೇಲೆ ದೌರ್ಜನ್ಯದ ಆರೋಪ

ಬೆಂಗಳೂರು, ಏ.18: ನಗರದ ವಿಜಯನಗರದಲ್ಲಿರುವ ‘ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ ಕಚೇರಿಯಲ್ಲಿ ನಡೆದ ಘಟನೆಯೊಂದು ಈಗ ಪೊಲೀಸ್ ಮೆಟ್ಟಿಲೇರಿದೆ. ವಾಸ್ತು ಕೇಳಲು ಹೋದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಇದು ಹಣಕ್ಕಾಗಿ ನಡೆಸಿದ ಬ್ಲ್ಯಾಕ್‌ಮೇಲ್ ತಂತ್ರ ಎಂದು ಆರೋಪಿಗಳು ಮರುದೂರು ನೀಡಿದ್ದಾರೆ.

ಸಂತ್ರಸ್ತ ಮಹಿಳೆಯು ಏಪ್ರಿಲ್ 4ರಂದು ತನ್ನ ಮನೆಯ ವಾಸ್ತು ಕೇಳಲು ಶಾಂತಕುಮಾರ್ ಎಂಬುವವರ ಕಚೇರಿಗೆ ತೆರಳಿದ್ದರು. ಈ ವೇಳೆ ಶಾಂತಕುಮಾರ್ ಅವರು ವಾಸ್ತು ಹೇಳುವ ನೆಪದಲ್ಲಿ ತನ್ನ ಎದೆಯ ಭಾಗ ಹಾಗೂ ಹೊಟ್ಟೆಯನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ಅಲ್ಲಿದ್ದ ಭರತ್, ಶಾಂತಕುಮಾರ್ ಪತ್ನಿ ಮತ್ತು ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಾಸ್ತು ಸಲಹೆಗಾಗಿ 15 ಸಾವಿರ ರೂಪಾಯಿ ನಗದು ಪಡೆದೂ ದೌರ್ಜನ್ಯ ಎಸಗಿದ್ದಾರೆ ಎಂಬುದು ಇವರ ಆರೋಪ.

ಇದನ್ನೂ ಓದಿ: ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಮಹಿಳೆಯ ಆರೋಪವನ್ನು ತಳ್ಳಿಹಾಕಿರುವ ಶಾಂತರಾಜು, ಇದೊಂದು ವ್ಯವಸ್ಥಿತ ಬ್ಲ್ಯಾಕ್‌ಮೇಲ್ ದಂಧೆ ಎಂದು ದೂರಿದ್ದಾರೆ. ಸುನೀಲತಾ ಎಂಬ ಮಹಿಳೆ ತನ್ನನ್ನು ಮೀಡಿಯಾ ಮತ್ತು ಪೊಲೀಸ್ ಎಂದು ಪರಿಚಯಿಸಿಕೊಂಡು, ಜಮಾಲ್ ಮತ್ತು ಅಮೃತಲಿಂಗಂ ಎಂಬುವವರ ಜೊತೆ ಬಂದು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಹಣ ನೀಡದಿದ್ದರೆ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಶಾಂತರಾಜು ಅವರ ಪತ್ನಿಯ ಮೇಲೆಯೂ ಹಲ್ಲೆ ನಡೆಸಿ, ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗೋವಿಂದರಾಜನಗರ ಪೊಲೀಸರು ಎರಡೂ ಕಡೆಯ ದೂರುಗಳನ್ನು ಆಧರಿಸಿ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಒಂದು ಕಡೆ ಲೈಂಗಿಕ ದೌರ್ಜನ್ಯದ ಆರೋಪವಿದ್ದರೆ, ಮತ್ತೊಂದು ಕಡೆ ಸುಲಿಗೆ, ಹಲ್ಲೆ ಮತ್ತು ಬ್ಲ್ಯಾಕ್‌ಮೇಲ್ ಆರೋಪಗಳಿವೆ.

ವರದಿ: ವಿಕಾಸ್​​​ ಟಿವಿ9 ಕ್ರೈಂ 

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:25 pm, Sat, 18 April 26

Source link

Exit mobile version