Headlines

2 ತಿಂಗಳ ಮಗು ಬಾವಿಯಲ್ಲಿ ಪತ್ತೆ: ತಾಯಿ ಮೇಲೆಯೇ ಡೌಟ್, ನಿಗೂಢ ಸಾವಿನ ರಹಸ್ಯ ಬೆನ್ನತ್ತಿದ ಪೊಲೀಸ್ರು – Kannada News | 2 Month Old Baby Found Dead in Well: Suspicion Falls on Mother as Police Probe Mysterious Death

ಪ್ರಾತಿನಿಧಿಕ ಚಿತ್ರImage Credit source: Getty images ಬೀದರ್​​, ಆಗಸ್ಟ್​​ 10: ಬೀದರ್‌ (bidar) ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದಲ್ಲಿ ಭಾನುವಾರ ಎರಡು ತಿಂಗಳ  ಹಸುಗೂಸಿನ (baby) ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಗುವನ್ನ ತಾಯಿಯೇ ಕೊಂದು ಬಾವಿಯಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಔರಾದ್ ತಾಲೂಕಿನ ಸಂತಪುರ ಪೊಲೀಸರು ತಾಯಿ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಡೆದಿದ್ದೇನು? ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಾವಲಗುಡ್ಡ ಗ್ರಾಮದ ಸಂಜಯ್…

Read More

ಬೆಂಗಳೂರಿನ ಮಕ್ಕಳಲ್ಲಿ ಹೆಚ್ಚುತ್ತಿದೆ ‘ಐಬಿಡಿ’ ಜಠರಗಾತ್ರ ಸಮಸ್ಯೆ: ಜಂಕ್ ಫುಡ್‌, ಜೀವನಶೈಲಿಯೇ ಪ್ರಮುಖ ಕಾರಣ – Kannada News | IBD in Bengaluru Children Rises: Diet, Lifestyle, Early Detection and Solutions

ಬೆಂಗಳೂರು, ಆ.10 : ರಾಜಧಾನಿಯಲ್ಲಿ ಆರೋಗ್ಯ ಇಲಾಖೆ ಬೀದಿ ಬದಿ ಆಹಾರಗಳು ಹಾಗೂ 5 ಸ್ಟಾರ್​ ಹೋಟೆಲ್​​​ಗಳ ಮೇಲೆ ದಾಳಿಯನ್ನು ಮಾಡಿರುವ ವೇಳೆ ಮತ್ತೊಂದು ಮಹತ್ವದ ವರದಿಯೊಂದನ್ನು ನೀಡಲಾಗಿದೆ. ಬೆಂಗಳೂರಿನ ಮಕ್ಕಳಲ್ಲಿ ಜಠರಗಾತ್ರ ಉರಿಯೂತ (Inflammatory Bowel Disease – IBD) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಒಂದು ದಶಕದಿಂದ ಈ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ ಎಂದು ತಜ್ಞ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರೋಗದ ಬಗ್ಗೆ ಹೆಚ್ಚುತ್ತಿರುವ ಜಾಗೃತಿ ಹಾಗೂ…

Read More

ಬರೋಬ್ಬರಿ 15 ವಿಕೆಟ್; ಆಂಗ್ಲರ ನಾಡಿನಲ್ಲಿ ಚಾಹಲ್ ಚಮತ್ಕಾರ – Kannada News | Yuzvendra Chahal’s County Cricket Dominance: A Strong Bid for India Recall

ಇತ್ತೀಚೆಗೆ ನಡೆದ ಸೋಮರ್‌ಸೆಟ್ ವಿರುದ್ಧದ ಪಂದ್ಯದಲ್ಲಿ, ಚಾಹಲ್ ಮತ್ತೊಮ್ಮೆ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 10 ಓವರ್‌ಗಳಲ್ಲಿ ಕೇವಲ 35 ರನ್‌ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಚಾಹಲ್ ಅವರ ಈ ಮ್ಯಾಜಿಕ್​ನಿಂದಾಗಿ ನಾರ್ಥಾಂಪ್ಟನ್‌ಶೈರ್, ಸೋಮರ್‌ಸೆಟ್ ತಂಡವನ್ನು ಕೇವಲ 185 ರನ್‌ಗಳಿಗೆ ಆಲೌಟ್ ಮಾಡಿ ಆ ನಂತರ ಏಳು ವಿಕೆಟ್‌ಗಳ ಸುಲಭ ಜಯ ದಾಖಲಿಸಿತು(PC-County). Source link

Read More

ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ, ಲಿಫ್ಟಿಕ್, ಕ್ರಿಮ್ ಎಷ್ಟು ಸೇಫ್?

ಬೆಂಗಳೂರು, (ಆಗಸ್ಟ್ 10): ಬೆಂಗಳೂರಿನಲ್ಲಿ ಸ್ಟಾರ್​​​ ಹೋಟೆಲ್​​​ಗಳ ಮೇಲೆ ಆಹಾರ ಸುರಕ್ಷಾ ಅಧಿಕಾರಿಗಳು ದಾಳಿ ನಡೆಸಿದ್ದು, ಹೋಟೆಲ್​​​ಗಳಲ್ಲಿನ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕಳಪೆ ಗುಣಮಟ್ಟದ ಸೌಮದರ್ಯವರ್ಧಕಗಳನ್ನು ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಧಿಕಾರಿಗಳು ಬೆಂಗಳುರಿನ 10 ಕಡೆ ಕಾಸ್ಮಟಿಕ್ಸ್​ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲಿಫ್ಟಿಕ್, ಸೆರಮ್, ಪೌಡರ್ ಹಾಗೂ ಕ್ರಿಮಗಳನ್ನು ವಶಕ್ಕೆ ಪಡೆದು ಟೆ್ಸ್ಟ್​ ಮಾಡಲು ಲ್ಯಾಬ್​​​ಗೆ ಕಳುಹಿಸಿದ್ದಾರೆ. ಒಂದು ವೇಳೆ ಟೆಸ್ಟಿಂಗ್​​​​ನಲ್ಲಿ ಅನ್​​…

Read More

ಜಾರ್ಖಂಡ್​ನಲ್ಲಿ 17ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ; ಜಲಫಿರಂಗಿಗೂ ಬೆದರದ ಯುವಜನರು – Kannada News | Jharkhand students breaks barricades to march towards Assembly building, leader Devendra Mahto join hands

ವಿದ್ಯಾರ್ಥಿಗಳ ಪ್ರತಿಭಟನೆImage Credit source: PTI ರಾಂಚಿ, ಆಗಸ್ಟ್ 10: ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ 17ನೇ ದಿನಕ್ಕೆ ಕಾಲಿಟ್ಟಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಸಾವಿರಾರು ವಿದ್ಯಾರ್ಥಿಗಳು ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಜಾರ್ಖಂಡ್ ವಿಧಾನಸಭೆಯತ್ತ ಮೆರವಣಿಗೆಯನ್ನು (Jharkhand Students Protest) ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳು ಮುನ್ನುಗ್ಗುವುದನ್ನು ತಡೆಯಲು ಪೊಲೀಸರು ನೀರಿನ ಕ್ಯಾನಾನ್​ಗಳನ್ನು ಬಳಸಿ, ಗುಂಪು ಚದುರಿಸಲು ಯತ್ನಿಸುತ್ತಿದ್ಧಾರೆ. ಬೃಹತ್ ವಾಟರ್ ಗನ್​ಗಳಿಂದ ವೇಗವಾಗಿ ರಾಚುತ್ತಿರುವ ನೀರಿನ ಮಧ್ಯದಲ್ಲೇ…

Read More

ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ! – Kannada News | Bengaluru Drug Bust: Police Seize Rs 55.8 Crore Drugs Under Mission RISE, 39 Arrested

ಬೆಂಗಳೂರು, ಆಗಸ್ಟ್ 10: ನಗರದಲ್ಲಿ (Bengaluru) ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ನಗರ ಪೊಲೀಸರು ಕೈಗೊಂಡಿರುವ ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಭಾರಿ ಯಶಸ್ಸು ಸಿಕ್ಕಿದೆ. ಸಿಸಿಬಿ ಸೇರಿದಂತೆ ಒಟ್ಟು 16 ಪೊಲೀಸ್ ಯೂನಿಟ್‌ಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 55.8 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, 8 ಮಂದಿ ವಿದೇಶಿಯರು ಹಾಗೂ 21 ಅನ್ಯರಾಜ್ಯದವರು ಸೇರಿದಂತೆ ಒಟ್ಟು 39 ಆರೋಪಿಗಳನ್ನು ಬಂಧಿಸಲಾಗಿದೆ. 16 ಠಾಣಾ…

Read More

ದೇಶಪ್ರೇಮ ಮೆರೆಯುವುದು ಎಂದಿಗೂ ಅಪರಾಧವಲ್ಲ; ಆರ್ ಮಾಧವನ್ – Kannada News | R Madhavan Responds to Propaganda Allegations Against Dhurandhar and Rocketry

ಭಾರತೀಯನಾಗಿರುವುದು ತಪ್ಪು ಎನ್ನುವುದು ಹೇಗೆ? ಹೀಗಂತ ಹಿರಿಯ ನಟ ಹಾಗೂ ನಿರ್ದೇಶಕ ಆರ್. ಮಾಧವನ್ ಖಡಕ್ ಪ್ರಶ್ನೆ ಎತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಧುರಂಧರ್’ ಹಾಗೂ ಅವರ ನಿರ್ದೇಶನದ ‘ರಾಕೆಟ್ರಿ’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭಾರೀ ಯಶಸ್ಸು ಕಂಡವು. ಆದರೆ ಈ ಚಿತ್ರಗಳ ವಿರುದ್ಧ ಪ್ರೊಪಗಾಂಡಾ ಅಥವಾ ರಾಜಕೀಯ ಪ್ರಚಾರದ ಆರೋಪಗಳು ಕೇಳಿಬಂದಿದ್ದವು. ಈ ಎಲ್ಲಾ ವಿಮರ್ಶೆಗಳಿಗೆ ಮಾಧವನ್ ಈಗ ನೇರವಾಗಿ ಉತ್ತರ ನೀಡಿದ್ದಾರೆ. ಸಿನಿಮಾ ಹಾಗೂ ಪಾತ್ರಗಳ ಆಯ್ಕೆಯ ಕುರಿತು ಮಾಧವನ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪ್ರತಿಯೊಬ್ಬ…

Read More

ಕರ್ನಾಟಕ ಬಂದ್‌ಗೆ ಬ್ರೇಕ್? ಆಗಸ್ಟ್ 13ರ ಬಂದ್ ಬಹುತೇಕ ರದ್ದು ಸಾಧ್ಯತೆ – Kannada News | Karnataka Bandh on August 13 Likely to Be Cancelled Amid Cauvery Protest

ಬೆಂಗಳೂರು, ಆಗಸ್ಟ್ 10: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಪ್ರತಿಭಟಿಸಿ (Cauvery Dispute) ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ (Karnataka Bandh) ಇದೀಗ ಅನಿಶ್ಚಿತತೆ ಎದುರಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಸಮಸ್ಯೆ ಸದ್ಯಕ್ಕೆ ತೀವ್ರವಾಗಿಲ್ಲ ಎಂಬ ಕಾರಣ ನೀಡಿ, ಕೆಲ ಕನ್ನಡ ಪರ ಹಾಗೂ ರೈತಪರ ಸಂಘಟನೆಗಳು ಬಂದ್‌ನಿಂದ ಹಿಂದೆ ಸರಿಯುವ ಸೂಚನೆ ನೀಡಿವೆ. ವಾಟಾಳ್ ನಾಗರಾಜ್ ಬಣದೊಂದಿಗೆ ಗುರುತಿಸಿಕೊಂಡಿರುವ ಸಾರಾ ಗೋವಿಂದ್, ಬಂದ್‌ಗೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಆಪರೇಷನ್ ಮುಕ್ತ: ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ – Kannada News | Operation Mukta: 105 Illegal Bangladeshi Nationals Detected in Bengaluru Police Sweep

ಬೆಂಗಳೂರು, ಆಗಸ್ಟ್​​ 10: ಆಪರೇಷನ್ ಮುಕ್ತ ಕಾರ್ಯಾಚರಣೆ ಅಡಿಯಲ್ಲಿ 105 ಮಂದಿ ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಲಾಗಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಮೂರು ವಿಭಾಗದಲ್ಲಿ ಅಕ್ರಮ ವಲಸಿಗರ ಪರಿಶೀಲನೆ ನಡೆಸಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ 1909 ಜನರ ಪರಿಶೀಲನೆ ನಡೆಸಿ, 43 ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಪತ್ತೆ ಮಾಡಲಾಗಿದೆ. ಅದೇ ರೀತಿ, ವೈಟ್‌ಫೀಲ್ಡ್ ವಿಭಾಗದಲ್ಲಿ 1035 ಜನರ ಪರಿಶೀಲನೆ ನಡೆಸಿದಾಗ, 62 ಅಕ್ರಮ ಬಾಂಗ್ಲಾದೇಶ ವಲಸಿಗರು ಪತ್ತೆಯಾಗಿದ್ದಾರೆ. ಪತ್ತೆಯಾದ ಒಟ್ಟು…

Read More

ಸಂಗೀತ ನಿರ್ದೇಶಕ ಗುರುಕಿರಣ್ ತಾಯಿ ರತ್ನಕಾಂತಿ ಶೆಟ್ಟಿ ನಿಧನ – Kannada News | Music Director Gurukiran Mother Ratnakanti Shetty Passes Away; Industry Mourns The Loss

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯಿಂದ ತೀವ್ರ ದುಃಖಿತರಾಗಿರುವ ಗುರುಕಿರಣ್, ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಮಾತೃವಂದನೆ ಸಲ್ಲಿಸಿದ್ದಾರೆ. ಅವರಿಗೆ ಎಲ್ಲರೂ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕೆಲವರು ತಾಯಿ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘ನನ್ನ ಪ್ರೀತಿಯ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ ಎಂಬ ಹೃದಯವಿದ್ರಾವಕ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇನೆ. ಜೀವನದಲ್ಲಿ ಏನೇ ಆಗಿದ್ದರೂ, ಏನೇ ಸಾಧಿಸಿದ್ದರೂ ಅದಕ್ಕೆಲ್ಲಾ ನನ್ನ…

Read More