ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ – Kannada News | Diljit Dosanjh sold out his live concert show in Chicago US

ಖ್ಯಾತ ಗಾಯಕ, ನಟ ದಿಲ್ಜೀತ್ ದೊಸ್ಸಾಂಜ್ (Diljit Dosanjh) ತಮ್ಮ ಲೈವ್ ಕಾನ್ಸರ್ಟ್​​ಗಳಿಂದ ಭಾರಿ ಜನಪ್ರಿಯತೆ ಪಡೆಯುತ್ತಿದ್ದಾರೆ. ಅವರ ಕಾನ್ಸರ್ಟ್​​ಗಳು ಹೋದಲ್ಲೆಲ್ಲ ಸೂಪರ್ ಹಿಟ್ ಆಗುತ್ತಿವೆ. ಜನ ಮುಗಿಬಿದ್ದು ಅವರ ಶೋಗೆ ಟಿಕೆಟ್ಟುಗಳನ್ನು ಖರೀದಿಸುತ್ತಿದ್ದಾರೆ. ಇದೀಗ ದಿಲ್ಜೀತ್ ದೊಸ್ಸಾಂಜ್ ಅಮೆರಿಕದಲ್ಲಿ ಶೋ ಮಾಡುತ್ತಿದ್ದು, ಅಮೆರಿಕದ ಶಿಕಾಗೋನಲ್ಲಿ ಫುಲ್ ಪ್ಯಾಕ್ ಶೋ ಮಾಡಿದ್ದಾರೆ. ಭಾರಿ ಜನ ದಿಲ್ಜೀತ್ ಶೋ ನೋಡಲು ಆಗಮಿಸಿದ್ದರು. ಅದರ ಕೆಲ ವಿಡಿಯೋಗಳನ್ನು ದಿಲ್ಜೀತ್ ದೊಸ್ಸಾಂಜ್ ಹಂಚಿಕೊಂಡಿದ್ದು ಅವುಗಳಲ್ಲಿ ಒಂದು ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಲೆನಾಡಲ್ಲಿ ವರುಣನ ಆರ್ಭಟ: ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ; ಮಂಜಿನ ನಗರಿಯಾದ ಕಾಫಿನಾಡು! – Kannada News | Heavy Rain Lashes Chikkamagaluru Malenadu; Moodigere, Kalasa Hit Hard, Ghat Travel Caution

ಚಿಕ್ಕಮಗಳೂರು, ಮೇ.12: ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕಳೆದ ಕೆಲವು ಗಂಟೆಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಮೂಡಿಗೆರೆ ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ. ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸವಾರರು ದೀಪಗಳನ್ನು ಉರಿಸಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ಕೊಟ್ಟಿಗೆಹಾರ ಮತ್ತು ಬಣಕಲ್ ಭಾಗದಲ್ಲಿಯೂ ಸಹ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಲೆನಾಡಿನ ಭಾಗದಲ್ಲಿ ಸುರಿಯುತ್ತಿರುವ ಈ ಮಳೆಯು ಕಾಫಿ ಮತ್ತು ಅಡಿಕೆ ಬೆಳೆಗಾರರಲ್ಲಿ ಸಂತಸ ತಂದಿದೆ. ವಾಹನ ಸವಾರರು ಮತ್ತು ಪ್ರವಾಸಿಗರು ಘಾಟ್ ಪ್ರದೇಶಗಳಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದ ಚೀನಾಗೆ ಭಾರತದ ಖಡಕ್ ಸಂದೇಶ – Kannada News | India’s sharp message to China over helping Pakistan during Operation Sindoor

ನವದೆಹಲಿ, ಮೇ 12: ಭಾರತ ಮತ್ತು ಪಾಕ್ ನಡುವಿನ 3 ದಿನಗಳ ಯುದ್ಧದ ಸಮಯದಲ್ಲಿ ಪಾಕಿಸ್ತಾನಕ್ಕೆ (Pakistan) ಚೀನಾ ತಾಂತ್ರಿಕ ಸಹಾಯವನ್ನು ನೀಡಿತ್ತು ಎಂದು ಚೀನಾದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಮೂಲಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಬೆಂಬಲಕ್ಕೆ ಚೀನಾ ನಿಂತಿದ್ದು ಬಹಿರಂಗವಾಗಿತ್ತು. ಇದಕ್ಕೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಭಯೋತ್ಪಾದನೆಯನ್ನು ಹರಡುವ ದೇಶಗಳಿಗೆ ಬೆಂಬಲ ನೀಡುವುದು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಕುರಿತು ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು ಕರೆದುಕೊಳ್ಳುವ ದೇಶಗಳು ಯೋಚಿಸಬೇಕು ಎಂದು ಭಾರತ ಚೀನಾದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡಿದೆ ಎಂಬ ವರದಿಗಳಿಗೆ ಭಾರತ ಇಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾದಾಗ, ಭಾರತದೊಂದಿಗಿನ ಯುದ್ಧದ ಸಮಯದಲ್ಲಿ ಚೀನಾ ಪಾಕಿಸ್ತಾನಕ್ಕೆ ತಾಂತ್ರಿಕ ಬೆಂಬಲವನ್ನು ನೀಡಿದೆ ಎಂದು ಚೀನಾದ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದರು.

ಇದನ್ನೂ ಓದಿ: 9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ: ಟ್ರಂಪ್-ಕ್ಸಿ ಜಿನ್‌ಪಿಂಗ್ ಮಹತ್ವದ ಮಾತುಕತೆ!

“ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆಪರೇಷನ್ ಸಿಂಧೂರ್ ಒಂದು ನಿಖರವಾದ, ಟಾರ್ಗೆಟ್ ಮಾಡಿದ ಪ್ರತಿಕ್ರಿಯೆಯಾಗಿತ್ತು. ಇದು ಪಾಕಿಸ್ತಾನದಿಂದ ಮತ್ತು ಅದರ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಪ್ರಾಯೋಜಿತ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ ಗುರಿಯನ್ನು ಹೊಂದಿತ್ತು. ಆದರೆ, ಭಯೋತ್ಪಾದನಾ ಮೂಲಸೌಕರ್ಯವನ್ನು ರಕ್ಷಿಸುವ ಪ್ರಯತ್ನಗಳನ್ನು ಬೆಂಬಲಿಸುವುದು ತಮ್ಮ ಘನತೆ ಮತ್ತು ಸ್ಥಾನಮಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಯೋಚಿಸುವುದು ತಮ್ಮನ್ನು ಜವಾಬ್ದಾರಿ ಎಂದು ಪರಿಗಣಿಸುವ ರಾಷ್ಟ್ರಗಳ ಜವಾಬ್ದಾರಿಯಾಗಿದೆ” ಎಂದು ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಹೇಳಿದ್ದಾರೆ.

ಇದನ್ನೂ ಓದಿ: ವೋಟರ್​ ಐಡಿ, ಚಾಕೊಲೇಟ್​ಗಳು ಸಿಕ್ಕಿವೆ ಪಹಲ್ಗಾಮ್​ ದಾಳಿಕೋರರು ಪಾಕ್​​ನವರು ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ?: ಅಮಿತ್ ಶಾ

ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಲಷ್ಕರ್ ಸಂಬಂಧಿತ ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಯಿತು. ಇದಾದ ನಂತರ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

GT vs SRH IPL 2026 Live Score: ಟೈಟಾನ್ಸ್​ vs ಸನ್​ರೈಸರ್ಸ್​​

ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡವು 14 ಪಾಯಿಂಟ್ಸ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 16 ಅಂಕಗಳೊಂದಿಗೆ ಅಗ್ರಸ್ಥಾನ ಸ್ವಾಧೀನಪಡಿಸಿಕೊಳ್ಳಲಿದೆ.

ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಗುಜರಾತ್ ಟೈಟಾನ್ಸ್ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಸನ್​ರೈಸರ್ಸ್ ಹೈದರಾಬಾದ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಇನ್ನು ಒಂದು ಮ್ಯಾಚ್ ಕಾರಣಾಂತರದಿಂದ ರದ್ದಾಗಿತ್ತು.

ಗುಜರಾತ್ ಟೈಟಾನ್ಸ್ ತಂಡ: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್​, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್​ಸ್ಟೋನ್ಸ್, ಶಿವಂ ಮಾವಿ, ಜ್ಯಾಕ್ ಎಡ್ವರ್ಡ್ಸ್.

Source link

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ – Kannada News | Karnataka Transport Employees Get 12.5% Salary Hike, State Government Announces

ಸಾರಿಗೆ ನೌಕರರ ವೇತನ ಹೆಚ್ಚಳImage Credit source: google

ಬೆಂಗಳೂರು, ಮೇ 12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು – Kannada News | Hantavirus Pulmonary Syndrome: What ICMR’s 165 Lab Surveillance Means for You

ಎಂವಿ ಹೋಡಿಯಸ್ ಕ್ರೂಸ್ ಹಡಗಿನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಹಂಟಾವೈರಸ್ (Hantavirus) ಸೋಂಕಿನ ಬಳಿಕ ವಿಶ್ವದ ಹಲವು ದೇಶಗಳು ಎಚ್ಚೆತ್ತುಕೊಂಡಿದೆ. ಈ ವೈರಸ್‌ ಕೆಲವರ ಸಾವಿಗೂ ಕಾರಣವಾಗಿರುವುದರಿಂದ ಭಾರತವೂ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣಗೊಳಿಸಿದೆ. ವಿಶೇಷವಾಗಿ ಹಡಗಿನಲ್ಲಿ ಭಾರತೀಯರು ಇದ್ದ ಕಾರಣ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೇಶದಾದ್ಯಂತ ಇರುವ ಸುಮಾರು 165 ವೈರಸ್ ರಿಸರ್ಚ್ ಮತ್ತು ಡಯಗ್ನೋಸ್ಟಿಕ್ ಲ್ಯಾಬ್‌ಗಳನ್ನು ಸಕ್ರಿಯಗೊಳಿಸಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಹಂಟಾವೈರಸ್ ಲಕ್ಷಣಗಳು ಕಂಡುಬಂದರೆ, ಅವರ ಮಾದರಿಗಳನ್ನು ತಕ್ಷಣ ಪರೀಕ್ಷಿಸಲು ಈ ಲ್ಯಾಬ್‌ಗಳನ್ನು ಸಿದ್ಧವಾಗಿರಿಸಲಾಗಿದೆ.

ಹಂಟಾವೈರಸ್ ಎಂದರೇನು?

ಹಂಟಾವೈರಸ್ ಸಾಮಾನ್ಯವಾಗಿ ಸೋಂಕಿತ ಇಲಿ ಮತ್ತು ಅದರ ಮಲ–ಮೂತ್ರ, ಲಾಲಾರಸದ ಸಂಪರ್ಕದಿಂದ ಮನುಷ್ಯರಿಗೆ ಹರಡುತ್ತದೆ. ಈ ವೈರಸ್‌ನ ಕೆಲವು ರೂಪಗಳು ಅಪಾಯಕಾರಿ ಆಗಿದ್ದು, ವಿಶೇಷವಾಗಿ “ಆಂಡೀಸ್ ಸ್ಟ್ರೇನ್” ಬಗ್ಗೆ ವಿಜ್ಞಾನಿಗಳು ಹೆಚ್ಚು ಕಳವಳ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಈ ಸ್ಟ್ರೇನ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಭಾರತದಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ?

ಐಸಿಎಂಆರ್ ತಜ್ಞರ ಪ್ರಕಾರ, ಕೊರೋನಾ ಸಮಯದಲ್ಲಿ ಬಳಸಿದ್ದಂತೆ RT-PCR ಪರೀಕ್ಷೆಯ ಮೂಲಕವೇ ಹಂಟಾವೈರಸ್ ಪತ್ತೆ ಮಾಡಲಾಗುತ್ತದೆ. ಸೋಂಕಿತ ವ್ಯಕ್ತಿಯ ಮಾದರಿಯಿಂದ ವೈರಲ್ ಆರ್ ಏನ್ ಎ (RNA) ಅನ್ನು ತೆಗೆದು ಅದರ ಜನ್ಯ ಅಂಶಗಳನ್ನು ಪರೀಕ್ಷಿಸಲಾಗುತ್ತದೆ. ವಿದೇಶಗಳಿಂದ ಬರುವವರಲ್ಲಿ ಯಾವುದೇ ಲಕ್ಷಣಗಳು ಕಂಡುಬಂದರೆ ವಿಮಾನ ನಿಲ್ದಾಣದಲ್ಲೇ ತಪಾಸಣೆ ನಡೆಸುವ ಸಾಧ್ಯತೆಯಿದೆ. ಈಗಾಗಲೇ ಸ್ಪೇನ್‌ನಿಂದ ಇಬ್ಬರು ಭಾರತೀಯರನ್ನು ಸುರಕ್ಷತಾ ಕ್ರಮವಾಗಿ ನೆದರ್‌ಲ್ಯಾಂಡ್ಸ್‌ಗೆ ಕಳುಹಿಸಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಸದ್ಯ ಅವರಿಗೆ ಯಾವುದೇ ಲಕ್ಷಣಗಳು ಕಾಣಿಸಿಲ್ಲ ಎಂದು ವರದಿಯಾಗಿದೆ.

ಹಂಟಾವೈರಸ್‌ನ ಪ್ರಮುಖ ಲಕ್ಷಣಗಳು:

  • ಜ್ವರ
  • ತಲೆನೋವು
  • ಸ್ನಾಯು ನೋವು
  • ಹೊಟ್ಟೆನೋವು
  • ವಾಂತಿ
  • ಉಸಿರಾಟದ ತೊಂದರೆ

ಇದನ್ನೂ ಓದಿ: ಹಂಟಾವೈರಸ್ ಎಂದರೇನು? ಇದು ಕೊರೊನಾದ ರೀತಿ ಹರಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು?

ಈ ಬಗ್ಗೆ ತಜ್ಞರ ಅಭಿಪ್ರಾಯವೇನು?

ಆರೋಗ್ಯ ತಜ್ಞರ ಪ್ರಕಾರ, ಭಾರತದಲ್ಲಿ ಇನ್ನೂ ಹಂಟಾವೈರಸ್ ಪ್ರಕರಣಗಳು ವರದಿಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಅನುಸರಿಸುವುದು ಬಹಳ ಮುಖ್ಯ. ಸ್ವಚ್ಛತೆ ಕಾಪಾಡುವುದು, ಇಲಿ ಸಂಚಾರ ಇರುವ ಪ್ರದೇಶಗಳಿಂದ ದೂರವಿರುವುದು ಮತ್ತು ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಷೇರುಬಜಾರು ಅಲುಗಾಟ, 4-5 ದಿನದಲ್ಲಿ ಹೂಡಿಕೆದಾರರಿಗೆ 11 ಲಕ್ಷ ಕೋಟಿ ರೂ ನಷ್ಟ; ಬೇರೆ ದೇಶಗಳಲ್ಲಿ ಹೆಚ್ಚಿದರೂ ಭಾರತದಲ್ಲಿ ಕುಸಿತ ಯಾಕೆ? – Kannada News | Indian Stock Market Crash: Sensex Nifty Plunge, ₹11 Lakh Cr Investor Loss. Why it’s Falling?

ಭಾರತೀಯ ಷೇರು ಮಾರುಕಟ್ಟೆImage Credit source: Shutterstock

ನವದೆಹಲಿ, ಮೇ 12: ಕಳೆದ ನಾಲ್ಕು ವಹಿವಾಟು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯು (Stock Market) ತೀವ್ರ ಕುಸಿತವನ್ನು ಕಾಣುತ್ತಿದ್ದು, ಹೂಡಿಕೆದಾರರು ಸುಮಾರು 11 ಲಕ್ಷ ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಕಳೆದುಕೊಂಡಿದ್ದಾರೆ. ಅಮೆರಿಕ ಮತ್ತು ಏಷ್ಯಾದ ಇತರ ಮಾರುಕಟ್ಟೆಗಳು ಏರಿಕೆ ಕಾಣುತ್ತಿದ್ದರೂ, ಭಾರತದ ಮಾರುಕಟ್ಟೆ ಮಾತ್ರ ಹಿನ್ನಡೆ ಕಾಣುತ್ತಿದೆ. ಐದು ಸೆಷನ್ಸ್ ಅಥವಾ ಟ್ರೇಡಿಂಗ್ ದಿನಗಳಲ್ಲಿ ಸೆನ್ಸೆಕ್ಸ್ ಮತ್ತಿತರ ಪ್ರಮುಖ ಸೂಚ್ಯಂಕಗಳು ಬರೋಬ್ಬರಿ 2,500ಕ್ಕೂ ಅಧಿಕ ಅಂಕಗಳ ನಷ್ಟ ಕಂಡಿವೆ. ಸೆನ್ಸೆಕ್ಸ್ 75,000 ಅಂಕಗಳ ಮಟ್ಟಕ್ಕಿಂತ ಕೆಳಗಿಳಿದು 74,559 ತಲುಪಿದೆ. ನಿಫ್ಟಿ 23,379 ಅಂಕಗಳ ಮಟ್ಟಕ್ಕೆ ಕುಸಿದಿದೆ. ಭಾರತದ ಮಾರುಕಟ್ಟೆ ಈ ಕೆಳಗಿನ ಸಂಭಾವ್ಯ ಕಾರಣಗಳಿಂದಾಗಿ ಹಿನ್ನಡೆ ಅನುಭವಿಸುತ್ತಿದೆ:

ವಿದೇಶಿ ಹೂಡಿಕೆದಾರರ ಹೊರಹರಿವು (FII Selling)

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ದೊಡ್ಡ ಮಟ್ಟದಲ್ಲಿ ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ. ಚೀನಾ ಮಾರುಕಟ್ಟೆಯು ಚೇತರಿಸಿಕೊಳ್ಳುತ್ತಿರುವುದು ಮತ್ತು ಅಲ್ಲಿನ ಶೇರುಗಳು ಅಗ್ಗವಾಗಿ ಲಭ್ಯವಿರುವುದು ಹೂಡಿಕೆದಾರರು ಭಾರತದಿಂದ ಚೀನಾದತ್ತ ಮುಖ ಮಾಡಲು ಪ್ರೇರೇಪಿಸಿದೆ.

ಕಂಪನಿಗಳ ತ್ರೈಮಾಸಿಕ ಫಲಿತಾಂಶ

ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ (Q2) ಹಲವು ಪ್ರಮುಖ ಭಾರತೀಯ ಕಂಪನಿಗಳ ಲಾಭಾಂಶವು ನಿರೀಕ್ಷಿತ ಮಟ್ಟದಲ್ಲಿಲ್ಲ. ವಿಶೇಷವಾಗಿ ಐಟಿ ಮತ್ತು ಬ್ಯಾಂಕಿಂಗ್ ವಲಯದ ಕಂಪನಿಗಳ ಮಂದಗತಿಯ ಬೆಳವಣಿಗೆಯು ಮಾರುಕಟ್ಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.

ಇದನ್ನೂ ಓದಿ: ತೈಲ ಶೋಧಕರಿಗೆ ರಾಯಲ್ಟಿ ರಿಯಾಯಿತಿ; ಇಂಧನ ಕೊರತೆ ಕಡಿಮೆ ಮಾಡಲು ಸರ್ಕಾರ ಕಸರತ್ತು

ಬಾಂಡ್ ಇಳುವರಿ ಏರಿಕೆ

ಅಮೆರಿಕಾದಲ್ಲಿ ಬಾಂಡ್ ಇಳುವರಿ (Bond Yields) ಹೆಚ್ಚಾಗುತ್ತಿರುವುದು ಉದಯೋನ್ಮುಖ ಮಾರುಕಟ್ಟೆಗಳಾದ ಭಾರತದ ಮೇಲೆ ಒತ್ತಡ ಹೇರುತ್ತಿದೆ. ಇದು ಹೂಡಿಕೆದಾರರು ಶೇರು ಮಾರುಕಟ್ಟೆಯಂತಹ ಅಪಾಯಕಾರಿ ಹೂಡಿಕೆಯಿಂದ ಸುರಕ್ಷಿತ ಬಾಂಡ್‌ಗಳತ್ತ ತೆರಳುವಂತೆ ಮಾಡುತ್ತಿದೆ.

ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ

ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಸಂಘರ್ಷಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದ್ದು, ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ.

ಹಣದುಬ್ಬರ ಮತ್ತು ಬಡ್ಡಿದರ

ಭಾರತದಲ್ಲಿನ ಹಣದುಬ್ಬರದ ಏರಿಕೆ ಮತ್ತು ಆರ್‌ಬಿಐ (RBI) ಬಡ್ಡಿದರ ಕಡಿತಗೊಳಿಸುವ ಸಾಧ್ಯತೆಗಳು ಸದ್ಯಕ್ಕೆ ಕಾಣದಿರುವುದು ಮಾರುಕಟ್ಟೆಯ ಉತ್ಸಾಹವನ್ನು ಕುಗ್ಗಿಸಿದೆ.

ಬಿಎಸ್‌ಇ (BSE) ಲಿಸ್ಟೆಡ್ ಕಂಪನಿಗಳ ಒಟ್ಟು ಮಾರುಕಟ್ಟೆ ಮೌಲ್ಯವು ಗಣನೀಯವಾಗಿ ಇಳಿಕೆಯಾಗಿದ್ದು, ಸಣ್ಣ ಹೂಡಿಕೆದಾರರು ಈ ಹಠಾತ್ ಕುಸಿತದಿಂದ ಕಂಗಾಲಾಗಿದ್ದಾರೆ. ಮಾರುಕಟ್ಟೆಯು ಚೇತರಿಸಿಕೊಳ್ಳಲು ಜಾಗತಿಕ ಮಾರುಕಟ್ಟೆಗಳ ಸ್ಥಿರತೆ ಮತ್ತು ಕಂಪನಿಗಳ ಮುಂದಿನ ಆರ್ಥಿಕ ವರದಿಗಳು ನಿರ್ಣಾಯಕವಾಗಲಿವೆ.

ಇದನ್ನೂ ಓದಿ: ಇಂಧನ ಬಿಕ್ಕಟ್ಟು; ವರ್ಕ್ ಫ್ರಂ ಹೋಂ, ಪೆಟ್ರೋಲ್ ಖರೀದಿಮಿತಿ ಇತ್ಯಾದಿ ಕ್ರಮ ಜಾರಿಯಲ್ಲಿರುವ ದೇಶಗಳು

ಇತರ ಶೇರು ಮಾರುಕಟ್ಟೆಗಳು ಧನಾತ್ಮಕವಾಗಿರುವುದು ಹೇಗೆ?

ಅಮೆರಿಕದ ನಾಸ್ಡಾಕ್, ಜಪಾನ್​ನ ನಿಕ್ಕೀ, ಸೌತ್ ಕೊರಿಯಾದ ಕೋಸ್ಪಿ ಮೊದಲಾದ ಷೇರು ಮಾರುಕಟ್ಟೆಗಳ ಸೂಚ್ಯಂಕಗಳು ಇದೇ ವೇಳೆ ಸಕಾರಾತ್ಮಕವಾಗಿವೆ. ಎಐ, ಟೆಕ್ನಾಲಜಿ, ಸೆಮಿಕಂಡಕ್ಟರ್ ಕಂಪನಿಗಳ ಷೇರುಗಳಿಗೆ ಭರ್ಜರಿ ಬೇಡಿಕೆ ಇದೆ. ಇಂತಹ ಕಂಪನಿಗಳಿರುವ ದೇಶಗಳ ಮಾರುಕಟ್ಟೆಯು ಇದೇ ಕಾರಣಕ್ಕೆ ಪಾಸಿಟಿವ್ ಇವೆ. ಭಾರತದಲ್ಲಿ ಬಲವಾದ ತಂತ್ರಜ್ಞಾನ ಕಂಪನಿಗಳು ಇಲ್ಲದಿರುವುದು ಅಥವಾ ಲಿಸ್ಟ್ ಆಗಿಲ್ಲದೇ ಇರುವುದರಿಂದ ಹೂಡಿಕೆದಾರರಿಗೆ ಅವಕಾಶ ಇಲ್ಲದಂತಾಗಿರಬಹುದು ಎನ್ನುವ ಅನಿಸಿಕೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಾಯಿ ಸಾವಿನ ನೋವಲ್ಲಿ 20 ದಿನಗಳ ಮಗು ಬಿಟ್ಟು ಎಂಜಿನಯರ್​​ ಆತ್ಮಹತ್ಯೆ: ಬೆಟ್ಟದ ಮೇಲಿಂದ ಜಿಗಿದು ದಾರುಣ ಅಂತ್ಯ – Kannada News | Tumakuru Tragedy: PWD Engineer Jumps from Devarayanadurga Hill Over Mother’s Death Grief

ತುಮಕೂರು, ಮೇ 12: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪಿಡಬ್ಲ್ಯೂಡಿ ಎಂಜಿನಿಯರ್​​ ಓರ್ವ 20 ದಿನಗಳ ಮಗು ಮತ್ತು ಪತ್ನಿಯನ್ನು ಬಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಲ್ಲಿ (Tumakuru) ನಡೆದಿದೆ. ಮಂಜುಪ್ರಸಾದ್ ಮೃತ ವ್ಯಕ್ತಿಯಾಗಿದ್ದು, ದೇವರಾಯನದುರ್ಗ ಬೆಟ್ಟದ ಮೇಲಿಂದ ಜಿಗಿದು ದುರಂತ ಅಂತ್ಯ ಕಂಡಿದ್ದಾರೆ. ತಾಯಿಯ ಅಗಲುವಿಕೆಯ ನೋವಿನಲ್ಲಿ ಅವರಿದ್ದರು ಎನ್ನಲಾಗಿದ್ದು, ಮಂಜುಪ್ರಸಾದ್ ಸಾವು ಪತ್ನಿ ಸೇರಿ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ಸ್ನೇಹಿತರಿಗೂ ಆಘಾತ ತಂದಿದೆ.

ಮೂಲತಃ ತುಮಕೂರಿನ ಸತ್ಯಮಂಗಲದ ನಿವಾಸಿಯಾದ ಮಂಜುಪ್ರಸಾದ್ ಎಂಟೆಕ್​​ ಮುಗಿಸಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ತಾಯಿಯ ಕನಸಿನಂತೆ ಕಳೆದ ಮೂರು ವರ್ಷಗಳ ಹಿಂದೆ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿ ಕೆಲಸಗಿಟ್ಟಿಸಿಕೊಂಡಿದ್ದರು. ಪ್ರಸ್ತುತ ಪಾವಗಡ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ತಾಯಿ ಮತ್ತು ಹೆಂಡತಿ ಜೊತೆಗೆ ಸುಖವಾಗಿದ್ದ ಮಂಜುಪ್ರಸಾದ್ ಒಂದುವರೆ ವರ್ಷದ ಹಿಂದೆ ಅಮ್ಮ ಮೃತಪಟ್ಟ ಬಳಿಕ ಮಾನಸಿಕವಾಗಿ ತೀವ್ರ ನೊಂದಿದ್ದರು. ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದ ಇವರಿಗೆ ತಾಯಿ ಮೇಲೆ ಅಪಾರ ಪ್ರೀತಿ ಇತ್ತು. ಆಕೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದು ಬೆಟ್ಟದಷ್ಟು ಕನಸು ಕೂಡ ಕಂಡಿದ್ದರು. ಆದರೆ ದುರದೃಷ್ಟವಶಾತ್​​ ಅನಾರೋಗ್ಯದಿಂದ ಅವರ ತಾಯಿ ಮೃತಪಟ್ಟಿದ್ದರು. ಆಕೆಯ ಅಗಲಿಕೆಯ ನೋವು ಸಹಿಸಲಾಗದ ಮಂಜುಪ್ರಸಾದ್ ಮನೆ ಮುಂದೆಯೇ ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ್ದರು. ಆ ಬಳಿಕ ಪ್ರತಿದಿನವೂ ಬೆಳಿಗ್ಗೆ ಎದ್ದ ಬಳಿಕ ಆಕೆಯ ಸಮಾಧಿಯನ್ನು ಮಂಜುಪ್ರಸಾದ್ ನೋಡುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.

ಇದನ್ನೂ ಓದಿ: ನಾಪತ್ತೆಯಾಗಿದ್ದ ದಲಿತ ಮಹಿಳೆ ಮೂರು ದಿನದ ಬಳಿಕ ಶವವಾಗಿ ಪತ್ತೆ; ಸಾವಿನ ಸುತ್ತ ಹತ್ತಾರು ಅನುಮಾನ

ಮಗುವಾದ ಕ್ಷಣದಲ್ಲಿ ಖುಷಿಯಾಗಿದ್ದ ಮಂಜುಪ್ರಸಾದ್, ತಾಯಿಯನ್ನು ಮಗುವಿನಲ್ಲಿ ನೋಡೊ ಪ್ರಯತ್ನ ಮಾಡಿದ್ದರು. ಆ ಮಗುವಿಗೂ ತಾಯಿ ಹೆಸರಾದ ಪುಟ್ಟಮ್ಮ ಎಂದೇ ಕರೆಯುತಿದ್ದರು. ಮೊನ್ನೆ ದೇವಸ್ಥಾನಕ್ಕೆ ಹೊಗಿದ್ದು, ದೇವರಿಗೆ ಮುಡಿ ಕೊಟ್ಟು ನಿನ್ನೆ ಬೆಳಿಗ್ಗೆ ಪತ್ನಿಯ ಕೊರಟಗೆರೆ ನಿವಾಸಕ್ಕೆ ಬಂದ ಮಂಜು, ನಂತರ ಕೆಲಸ ಇದೆ ಬರ್ತಿನಿ ಎಂದು ಹೊದವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಈ ದುಡುಕಿನ ನಿರ್ಧಾರದಿಂದಾಗಿ ನಾಲ್ಕು ವರ್ಷಗಳ ಹಿಂದೆ ಕೈಹಿಡಿದಿದ್ದ ಪತ್ನಿ ದಿಕ್ಕುತೋಚದ ಸ್ಥಿತಿಗೆ ತಲುಪಿದ್ದಾರೆ. 20 ದಿನಗಳ ಪುಟ್ಟ ಕಂದಮ್ಮನಿಗೂ ತಂದೆ ಇಲ್ಲದಂತಾಗಿದ್ದು, ಈ ಸಾವು ಸ್ನೇಹಿತರಿಗೂ ಕಣ್ಣೀರು ತರಿಸಿದೆ.

ಅಸಲಿಗೆ ತಾಯಿ ಕಳೆದುಕೊಂಡಿದ್ದ ಮಂಜುಪ್ರಸಾದ್ ಈ ಹಿಂದೆ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಎರಡು ತಿಂಗಳ ಹಿಂದೆ ಸಹ ಹುಬ್ಬಳ್ಳಿಗೆ ತೆರಳಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇನ್ನು ಮಾನಸಿಕ ಸಮಸ್ಯೆಯಿಂದ ಬಳಲುತಿದ್ದ ಮಂಜು ವೈದ್ಯರ ಬಳಿ ಚಿಕಿತ್ಸೆ ಸಹ ಪಡೆಯುತಿದ್ದರು. ಆದರೆ ಈ ನಡುವೆ ಅದೇನಾಯ್ತೋ ಗೊತ್ತಿಲ್ಲ ಏಕಾಏಕಿ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ಸಂಬಂಧಿಕರ ಮಾತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

27 ವರ್ಷಗಳ ಹಿಂದೆಯೇ ‘ಸಿಎಂ’ ಆಗಬೇಕಿತ್ತು ದಳಪತಿ ವಿಜಯ್, ಕೈತಪ್ಪಿದ್ದು ಹೇಗೆ? – Kannada News | Thalapathy Vijay missed the Shankar’s Political Thriller movie Mudhalvan

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿನಿಮಾ ಸ್ಟಾರ್ ಆಗಿ ದೊರೆತಿದ್ದ ಭಾರಿ ಜನಪ್ರಿಯತೆ ಮತಗಳಾಗಿ ಪರಿವರ್ತನೆ ಆಗಿದ್ದು, ಕಾಂಗ್ರೆಸ್ ಮತ್ತು ಇನ್ನಿತರೆ ಕೆಲ ಪಕ್ಷಗಳ ಜೊತೆಗೂಡಿ ಸರ್ಕಾರ ರಚನೆ ಮಾಡಿದ್ದಾರೆ. ವಿಜಯ್ ಅವರಿಗೆ ರಾಜಕೀಯ ಎಂಟ್ರಿಯ ಕನಸು ವರ್ಷಗಳಿಂದಲೂ ಇತ್ತು. ಸುಮಾರು ಎರಡು ದಶಕದಿಂದಲೂ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹಲವು ಬಾರಿ ತಮಿಳುನಾಡಿನ ಸಾಮಾಜಿಕ ವಿಷಯಗಳ ಬಗ್ಗೆ ಸಿನಿಮಾ ಮೂಲಕ ಧ್ವನಿ ಎತ್ತಿದ್ದರು. ಕೊನೆಗೂ ಈಗ ಸಿಎಂ ಆಗಿದ್ದಾರೆ. ಆದರೆ ವಿಜಯ್ ಅವರು 27 ವರ್ಷಗಳ ಹಿಂದೆ ‘ಸಿಎಂ’ ಆಗಬೇಕಿತ್ತು! ಅದು ಹೇಗೆ?

1999 ರಲ್ಲಿ ತಮಿಳಿನಲ್ಲಿ ಸಿನಿಮಾ ಒಂದು ಬಿಡುಗಡೆ ಆಗಿತ್ತು. ಸಿನಿಮಾದ ಹೆಸರು ‘ಮೊದಲ್ವನ್’. ಸಿನಿಮಾನಲ್ಲಿ ಅರ್ಜುನ್ ಸರ್ಜಾ ನಾಯಕ. ಮೊನಿಷಾ ಕೊಯಿರಾಲ ನಾಯಕಿ. ಸಿನಿಮಾ ನಿರ್ದೇಶಿಸಿದ್ದು ಆಗಿನ ಬ್ಲಾಕ್ ಬಸ್ಟರ್ ಸಿನಿಮಾ ನಿರ್ದೇಶಕ ಶಂಕರ್. ಅಸಲಿಗೆ ಆ ಸಿನಿಮಾದ ಕತೆಯನ್ನು ಶಂಕರ್ ಬರೆದಿದ್ದು ದಳಪತಿ ವಿಜಯ್ ಅವರಿಗಾಗಿ. ಆದರೆ ಅನಿವಾರ್ಯ ಕಾರಣಗಳಿಂದ ವಿಜಯ್ ಅವರು ‘ಮುದಲ್ವನ್’ ಸಿನಿಮಾನಲ್ಲಿ ನಟಿಸಲಾಗಲಿಲ್ಲ.

ಇದನ್ನೂ ಓದಿ:ಸಿಎಂ ಆಗಾಯ್ತು, ಚಿತ್ರರಂಗದ ಈ ಸಂಪ್ರದಾಯ ಬದಲಿಸ್ತಾರಾ ದಳಪತಿ ವಿಜಯ್?

‘ಮುದಲ್ವನ್’ ಸಿನಿಮಾ, ಪತ್ರಕರ್ತನೊಬ್ಬ ಒಂದು ದಿನದ ಮಟ್ಟಿಗೆ ಸಿಎಂ ಆಗಿ ಭ್ರಷ್ಟರನ್ನು ಜೈಲಿಗೆ ಅಟ್ಟುವ ಕತೆಯನ್ನು ಒಳಗೊಂಡಿದೆ. ಅರ್ಜುನ್ ಸರ್ಜಾ ಆ ಸಿನಿಮಾನಲ್ಲಿ ಒಂದು ದಿನದ ಮಟ್ಟಿಗೆ ಸಿಎಂ ಆಗುತ್ತಾರೆ. ಒಂದೊಮ್ಮೆ ವಿಜಯ್ ಅವರು ಆ ಸಿನಿಮಾನಲ್ಲಿ ನಟಿಸಿದ್ದರೆ 1999ರಲ್ಲೇ ‘ಸಿಎಂ’ ಆಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ತೆರೆಯ ಮೇಲೆ ಸಿಎಂ ಆಗುವುದನ್ನು ತಪ್ಪಿಸಿಕೊಂಡಿದ್ದ ವಿಜಯ್, ಈಗ ನಿಜ ಜೀವನದಲ್ಲಿ ಸಿಎಂ ಆಗಿದ್ದಾರೆ. ಸಿನಿಮಾನಲ್ಲಿ ನಾಯಕ ಮಾಡಿದ ಕ್ರಾಂತಿಯನ್ನು ಈಗ ನಿಜವಾಗಿಯೂ ಮಾಡುವ ಅವಕಾಶ ವಿಜಯ್ ಮುಂದಿದೆ.

ಶಂಕರ್ ಅವರ ‘ಮುದಲ್ವನ್’ ಸಿನಿಮಾ ಹಿಂದಿಗೆ ‘ನಾಯಕ್’ ಆಗಿ ರೀಮೇಕ್ ಆಯ್ತು. ಅಲ್ಲಿ ಅನಿಲ್ ಕಪೂರ್ ನಾಯಕ, ರಾಣಿ ಮುಖರ್ಜಿ ನಾಯಕಿ. ಶಂಕರ್ ಜೊತೆಗೆ ‘ಮೊದಲ್ವನ್’ ಸಿನಿಮಾನಲ್ಲಿ ನಟಿಸುವುದು ಮಿಸ್ ಮಾಡಿಕೊಂಡಿದ್ದ ವಿಜಯ್ ಬಹಳ ವರ್ಷಗಳ ಬಳಿಕ ಶಂಕರ್ ನಿರ್ದೇಶನ ಮಾಡಿದ ‘ನನ್ಬ’ ಸಿನಿಮಾನಲ್ಲಿ ನಟಿಸಿದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ‘ನನ್ಬ’ ಸಿನಿಮಾ ಹಿಂದಿಯ ‘3 ಇಡಿಯಟ್ಸ್’ ಸಿನಿಮಾದ ರೀಮೇಕ್ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ – Kannada News | Chanakya Niti: Peace and happiness reign in the home of a woman with these qualities

ಹೆಣ್ಣನ್ನು ಮನೆಯ ಕಣ್ಣು, ಮನೆಯ (home) ನಂದಾದೀಪ ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ, ಏಕೆಂದರೆ ಕುಟುಂಬವನ್ನು ಮುನ್ನಡೆಸುವಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಕುಟುಂಬದ ಉನ್ನತಿ-ಅವನತಿ ಕೂಡ ಅವರ ಮೇಲೆಯೇ ನಿಂತಿರುತ್ತದೆ. ಅದಕ್ಕಾಗಿಯೇ ಉತ್ತಮ ಗುಣವುಳ್ಳ ಹೆಣ್ಣನ್ನೇ ಮದುವೆಯಾಗಬೇಕು ಎಂದು ಹಿರಿಯರು ಹೇಳೋದು. ಅಂತಹ ಮಹಿಳೆಯರು ಮನೆಯನ್ನು ಸ್ವರ್ಗವನ್ನಾಗಿಸುತ್ತಾರೆ. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಹೆಣ್ಣು ಇರುವಂತಹ ಮನೆಯಲ್ಲಿ ಹೊಂದಾಣಿಕೆ ಶಾಂತಿ, ಸಂತೋಷ, ನೆಮ್ಮದಿಗೆ ಯಾವುದೇ ಕೊರತೆಯಿಲ್ಲ ಎಂದು ಆಚಾರ್ಯ ಚಾಣಕ್ಯರು ವರ್ಣಿಸಿದ್ದಾರೆ. ಹಾಗಿದ್ರೆ ಮಹಿಳೆಯ ಯಾವ ಗುಣಗಳು ಮನೆಯನ್ನು ಸ್ವರ್ಗವನ್ನಾಗಿಸುತ್ತದೆ ಎಂಬುದನ್ನು ನೋಡೋಣ ಬನ್ನಿ.

ಈ ಗುಣಗಳನ್ನು ಹೊಂದಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ:

ತಾಳ್ಮೆ ಮತ್ತು ಸಹಿಷ್ಣುತೆ: ಪ್ರತಿಯೊಬ್ಬರ ಮನೆಯಲ್ಲೂ ಉದ್ವಿಗ್ನತೆ, ಆರ್ಥಿಕ ತೊಂದರೆಗಳು ಅಥವಾ ಸಂಬಂಧದಲ್ಲಿ ಹದಗೆಡುವುದು ಇತ್ಯಾದಿ ಸಮಸ್ಯೆಗಳು ಉದ್ಭವಿಸುತ್ತಲೇ ಇರುತ್ತವೆ. ಇಂತಹ ಸಂದರ್ಭಗಳಲ್ಲಿ ಯಾವ ಹೆಣ್ಣು ತಾಳ್ಮೆಯಿಂದ ಇರುತ್ತಾಳೋ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೇ ತಾಳ್ಮೆಯಿಂದಲೇ ಪರಿಸ್ಥಿತಿಯನ್ನು ನಿಭಾಯಿಸುತ್ತಾಳೋ, ಆಕೆಯ ಮನೆಯಲ್ಲಿ ಎಂತಹ ಕಠಿಣ ಸಂದರ್ಭಗಳಲ್ಲೂ ಶಾಂತಿ ಹದಗೆಡುವುದಿಲ್ಲ. ಮಹಿಳೆಯ ಈ ಗುಣ ಮನೆಯಲ್ಲಿ ಸುರಕ್ಷಿತ ಮತ್ತು ಶಾಂತಿಯುತ ವಾತಾವರಣವನ್ನು ಸೃಷ್ಟಿಸಲು  ಸಹಾಯ ಮಾಡುತ್ತದೆ.

ಪ್ರೀತಿ ಮತ್ತು ಹೊಂದಾಣಿಕೆ: ಮಹಿಳೆಗೆ ತನ್ನ ಕುಟುಂಬವನ್ನು ಪ್ರೀತಿಸುವ  ಮತ್ತು ಹೊಂದಾಣಿಕೆಯ ಗುಣ ಇರಬೇಕು. ಮಹಿಳೆಯ ಈ ಗುಣ ಕುಟುಂಬ ಸದಸ್ಯರ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ. ಇದಲ್ಲದೆ ಈ ಗುಣವನ್ನು ಹೊಂದಿರುವ ಹೆಣ್ಣಿನ ಮನೆಯಲ್ಲಿ ಜಗಳ, ಮನಸ್ತಾಪಗಳು ಸಹ ಇರೋದಿಲ್ಲ. ಹೆಣ್ಣಿನ ಈ ಗುಣ ಮನೆಯ ವಾತಾವರಣವನ್ನು ಸಕಾರಾತ್ಮಕ ರೀತಿಯಲ್ಲಿ ಬದಲಾಯಿಸುತ್ತದೆ.

ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಬುದ್ಧಿವಂತಿಕೆ ಮತ್ತು ಸಾಮರ್ಥ್ಯ: ಮನೆಯ ನಿಜವಾದ ಶಕ್ತಿ ಬುದ್ಧಿವಂತ ಮಹಿಳೆ. ಬುದ್ಧಿವಂತ ಮಹಿಳೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅದು ಸರಿಯೋ ತಪ್ಪೋ ಎಂದು ಎರಡು ಬಾರಿ ಯೋಚಿಸುತ್ತಾಳೆ. ಅಲ್ಲದೆ ಆಕೆ ಯಾವುದೇ ಪರಿಸ್ಥಿತಿಯನ್ನೂ ಸಹ ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಾಳೆ. ಈ ಗುಣವು ಮನೆಯಲ್ಲಿ ಅನಗತ್ಯ ಉದ್ವಿಗ್ನತೆ ಹೆಚ್ಚಾಗುವುದನ್ನು ತಡೆಯುತ್ತದೆ. ಮಹಿಳೆಯ ಈ ಬುದ್ಧಿವಂತಿಕೆಯು ಇಡೀ ಕುಟುಂಬ ತಪ್ಪು ದಿಕ್ಕಿನಲ್ಲಿ ಹೋಗದಂತೆ ತಡೆಯುತ್ತದೆ.

ಇದನ್ನೂ ಓದಿ: ಪುರುಷರೇ… ಇಂತಹ ಹೆಣ್ಣನ್ನು ಯಾವ ಕಾರಣಕ್ಕೂ ಮದುವೆಯಾಗಬೇಡಿ

ಸಕಾರಾತ್ಮಕ ಚಿಂತನೆ ಮತ್ತು ಆತ್ಮವಿಶ್ವಾಸ: ಜೀವನದಲ್ಲಿ ಏರಿಳಿತಗಳು ಇದ್ದೇ ಇರುತ್ತವೆ. ಹೀಗಿರುವಾಗ ಕಷ್ಟದ ಸಮಯದಲ್ಲಿ ಭರವಸೆ ಕಳೆದುಕೊಳ್ಳದೆ, ಧೃತಿಗೆಡದೆ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುತ್ತಾಳೋ ಅಂತಹ ಸಂದರ್ಭಗಳಲ್ಲಿ ಆಕೆಯ ಸದಸ್ಯರು ಸಹ ಧೈರ್ಯವನ್ನು ಕಳೆದುಕೊಳ್ಳುವುದಿಲ್ಲ. ಅಲ್ಲದೆ, ಅವಳ ಆತ್ಮವಿಶ್ವಾಸವು ಅವಳಿಗೆ ಪ್ರತಿಯೊಂದು ಸವಾಲನ್ನು ಎದುರಿಸಲು ಶಕ್ತಿಯನ್ನು ನೀಡುತ್ತದೆ. ಮಹಿಳೆಯ ಈ ಗುಣ ಕುಟುಂಬದ ಶಕ್ತಿ ಎನ್ನುತ್ತಾರೆ ಆಚಾರ್ಯ ಚಾಣಕ್ಯ.

ಜವಾಬ್ದಾರಿ ಮತ್ತು ಬದ್ಧತೆ: ಮನೆ ಅಂದ್ಮೆಲೇ  ಒಂದಷ್ಟು ಜವಾಬ್ದಾರಿಗಳು ಇದ್ದೇ ಇರುತ್ತವೆ ಮತ್ತು ಅವುಗಳನ್ನು ಪೂರೈಸಲು ಬದ್ಧತೆ ಬಹಳ ಮುಖ್ಯ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವ ಮಹಿಳೆಯ ಮನೆ ಸ್ವರ್ಗಕ್ಕೆ ಸಮಾನ ಎನ್ನುತ್ತಾರೆ ಆಚಾರ್ಯ ಚಾಣಕ್ಯರು. ಜವಾಬ್ದಾರಿಯುತ ಮಹಿಳೆ ತನ್ನ ಕೆಲಸವನ್ನು ಕೇವಲ ಕರ್ತವ್ಯವೆಂದು ಪರಿಗಣಿಸುವುದಿಲ್ಲ, ಬದಲಾಗಿ ಅದನ್ನು ಪೂರ್ಣ ಹೃದಯದಿಂದ ನಿರ್ವಹಿಸುತ್ತಾಳೆ. ಮಕ್ಕಳಿಗೆ ಶಿಕ್ಷಣ ನೀಡುವುದು, ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳುವುದು, ಮನೆಯಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ಹೀಗೆ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಾಳೆ. ಈ ಸಮರ್ಪಣೆ ಕುಟುಂಬಕ್ಕೆ ವಿಶ್ವಾಸ ಮತ್ತು ಸ್ಥಿರತೆಯನ್ನು ತರುತ್ತದೆ. ಕುಟುಂಬದ ಅಡಿಪಾಯವನ್ನು ಮತ್ತಷ್ಟು ಬಲಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version