ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ರಾಮನಗರ, ಡಿಸೆಂಬರ್​​ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು ಹೇಳಿದ್ದ. ಆ ನಂತರ ಮೂವರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿದೆ. ಅದಕ್ಕೂ ಮುನ್ನ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ ಎಂಬಿತ್ಯಾದಿ ವಿವರವನ್ನು ತಿಳಿದುಕೊಳ್ಳೋಣ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಡಿಸೆಂಬರ್ 19, 2025 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20ಪಂದ್ಯ ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಮೊಬೈಲ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಡಿ ಕಾಕ್, ಹೆಂಡ್ರಿಕ್ಸ್, ಬ್ರೆವಿಸ್, ಮಿಲ್ಲರ್, ಸ್ಟಬ್ಸ್, ಫೆರೀರಾ, ಜೆನ್ಸನ್, ಲುಥೊ ಸಿಪಾಮ್ಲಾ, ಒಟ್ನೀಲ್ ಬಾರ್ಟ್‌ಮನ್, ಅನ್ರಿಚ್ ನೋಕಿಯಾ, ಲುಂಗಿ ಎನ್‌ಗಿಡಿ, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಜಾರ್ಜ್ ಲಿಂಡೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್​​ಬಾಸ್​​ನಲ್ಲಿ ‘ಆ ವಿಷಯ’ ಏಕೆ ಚರ್ಚಿಸಲಿಲ್ಲ: ಕಾರಣ ತಿಳಿಸಿದ ಸುದೀಪ್ – Kannada News | Sudeep talks about why he did not addressed Ashwini Gowda’s S statement

ಸಿನಿಮಾಗಳ ರೀತಿಯೇ ಬಿಗ್​​ಬಾಸ್ ಸಹ ಸುದೀಪ್ (Sudeep) ಅವರ ವೃತ್ತಿ ಜೀವನದ ಭಾಗವಾಗಿದೆ. ಸುದೀಪ್ ಅವರು ಸಿನಿಮಾ ಪ್ರಚಾರಕ್ಕೆ ಹೋದರೂ ಸಹ ಬಿಗ್​​ಬಾಸ್ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಹ ಸುದೀಪ್ ಅವರು ಬಿಗ್​​ಬಾಸ್ ಮನೆಯಲ್ಲಿ ಆಡಿದ ಮಾತುಗಳ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ಸುದೀಪ್ ಮಾತನಾಡಿದ್ದು ಸರಿ, ತಪ್ಪು ಹೀಗೆ ವಿಶ್ಲೇಷಣೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಸುದೀಪ್ ಅವರು, ಈ ಸೀಸನ್​​ನ ಬಿಗ್​​ಬಾಸ್​​ನಲ್ಲಿ ಸ್ಪರ್ಧಿಯೊಬ್ಬರು ಆಡಿದ ಮಾತೊಂದರ ಬಗ್ಗೆ ಏಕೆ ವಿಶ್ಲೇಷಣೆ ಮಾಡಲಿಲ್ಲ ಎಂಬುದನ್ನು ಇದೀಗ ವಿವರಿಸಿದ್ದಾರೆ.

ಬಿಗ್​​ಬಾಸ್ ಆರಂಭವಾದ ಕೆಲ ವಾರದ ಬಳಿಕ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿಯ ಜೊತೆ ಜಗಳ ಆಡುತ್ತಾ, ‘ನಿನ್ನ ಬಟ್ಟೆ, ನಿನ್ನ ಅವತಾರ ನೋಡಿದರೆ ನೀನು ಎಲ್ಲಿಂದ ಬಂದವಳು, ನೀನೊಬ್ಬ ‘ಎಸ್’ ಎಂದಿದ್ದರು. ಅಶ್ವಿನಿಯ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು. ರಕ್ಷಿತಾ ವಿರುದ್ಧ ಜಾತಿ ನಿಂದಕ ಪದ ಬಳಸಿದ್ದಾರೆ ಎಂದು ಕೆಲವರು ಹೇಳಿದರು. ಇನ್ನು ಕೆಲವರು ರಕ್ಷಿತಾರನ್ನು ‘ಸ್ಲಂ’ ಎಂದು ಕರೆಯಲಾಗಿದೆ ಎಂದರು. ಅಸಲಿಗೆ ಅಶ್ವಿನಿ ಅವರು ರಕ್ಷಿತಾ ಬಗ್ಗೆ ಅವಮಾನಕರ, ಕೀಳು ಪದವನ್ನೇ ಬಳಸಿದ್ದಾರೆಂಬುದು ನೋಡುಗರಿಗೆ ಖಾತ್ರಿ ಆಗಿತ್ತು.

ಅಶ್ವಿನಿ ಅವರು ರಕ್ಷಿತಾರ ಮೇಲೆ ಜಗಳ ಮಾಡಿದ್ದು, ನಿಂದಿಸಿದ್ದನ್ನು ಖಂಡಿಸಿ, ಸುದೀಪ್ ಮಾತನಾಡಿದ್ದರು. ಆದರೆ ‘ಎಸ್’ ಪದದ ಬಗ್ಗೆ ಹೆಚ್ಚಾಗಿ ಚರ್ಚೆ ಆಗಲಿಲ್ಲ. ಈ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಇದೀಗ ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿರುವ ಸುದೀಪ್, ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದು, ‘ಒಂದೊಮ್ಮೆ ನಾನು ‘ಎಸ್’ ಎಂದು ಏಕೆ ಹೇಳಿದಿರಿ ಎಂದು ಕೇಳಿದೆ ಎಂದುಕೊಳ್ಳಿ, ಆಗ ಆ ಸ್ಪರ್ಧಿ, ‘ಇಲ್ಲ ಅಣ್ಣ, ಎಸ್ ಎಂದರೆ ಸಿಲ್ಲಿ, ಆ ಹುಡುಗಿ ರಕ್ಷಿತಾ ತುಂಬ ಸಿಲ್ಲಿ, ಹಾಗಾಗಿ ನಾನು ‘ಎಸ್’ ಅಂದೆ’ ಎಂದರು ಅಂದುಕೊಳ್ಳೋಣ. ಆಗ ನಾನೇನು ಮಾಡಬೇಕು, ಇಲ್ಲ, ಇಲ್ಲ, ‘ಎಸ್’ ಎಂದರೆ ನನ್ನ ತಲೆಯಲ್ಲಿ ಬೇರೆ ಏನೋ ಅರ್ಥ ಇದೆ, ನನ್ನ ತಲೆಯಲ್ಲಿ ಇರುವ ಆ ಕೆಟ್ಟ ಅರ್ಥದ ಪದವನ್ನೇ ನೀವು ಬಳಸಿದ್ದೀರಿ ಎಂದು ಹೇಳಲು ಆಗುತ್ತದೆಯೇ? ಏಕೆಂದರೆ ಹೇಳಿದವರು ಅದನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ ನೋಡುಗರಿಗೆ ನಮಗೆ ಗೊತ್ತಿದೆ ಅದು ಏನೆಂಬುದು’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ:ಬಿಗ್​ಬಾಸ್ ಗೌತಮಿ, ರಿಷಿ ನಟನೆಯ ಹೊಸ ಸಿನಿಮಾ ಮುಹೂರ್ತ: ವಿಡಿಯೋ

‘ಆ ‘ಟಿ ಗಾಂಚಾಲಿ’ ವಿಷಯದಲ್ಲಿಯೂ ಹಾಗೆಯೇ ಆಯ್ತು. ‘ಟಿ ಗಾಂಚಲಿ’ ಎಂದರೆ ಏನೆಂದು ನಮಗೆಲ್ಲ ಗೊತ್ತು, ಆದರೆ ನಾನು ಪ್ರಶ್ನೆ ಮಾಡಿದಾಗ ಆ ವ್ಯಕ್ತಿ ‘ಟಿ ಗಾಂಚಲಿ’ ಎಂದರೆ ತಲೆ ಗಾಂಚಲಿ ಎಂದರು. ಏನು ಮಾಡೋಣ, ಇಲ್ಲ ನೀವು ಇದೇ ಅರ್ಥದಲ್ಲಿಯೇ ಹೇಳಿದ್ದೀರಿ ಎಂದು ವಾದ ಮಾಡಲು ಆಗುತ್ತದೆ? ಆದರೆ ನಾನು ಅದನ್ನು ಅವರಿಗೆ ಹೇಗೆ ಅರ್ಥ ಮಾಡಿಸಬೇಕೊ ಹಾಗೆ ಮಾಡಿಸಿದ್ದೀನಿ’ ಎಂದಿದ್ದಾರೆ ಸುದೀಪ್. ಮುಂದುವರೆದು, ‘ಜನ ಮಾತನಾಡುತ್ತಾರೆ, ಆದರೆ ಅಲ್ಲಿ ವೇದಿಕೆ ಮೇಲೆ ನಿಂತು ಸ್ಪರ್ಧಿಗಳೊಟ್ಟಿಗೆ ವಾದ ಮಾಡುವುದು ಸುಲಭವಾಗಿರುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಇರುತ್ತಾರೆ, ಒಬ್ಬೊಬ್ಬರ ಮನಸ್ಥಿತಿ ಒಂದೊಂದು ರೀತಿಯದ್ದಾಗಿರುತ್ತದೆ’ ಎಂದಿದ್ದಾರೆ ಕಿಚ್ಚ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 1:17 pm, Thu, 18 December 25

Source link

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್ ಮನೆಯಲ್ಲಿ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಇವ್ನೆಂಥಾ ಮಗ, ಹೆತ್ತ ತಂದೆ ತಾಯಿಯನ್ನು ಹೊಡೆದು ಕೊಂದು, ದೇಹಗಳನ್ನು ಕತ್ತರಿಸಿ ನದಿಗೆಸೆದ ಮಗ – Kannada News | Jaunpur: Engineer Son Kills Parents, Chops Bodies Over Muslim Wife and Alimony

ಮಗ ಹಾಗೂ ಕೊಲೆಯಾದ ಪೋಷಕರು Image Credit source: NDTV

ಜೌನ್​ಪುರ, ಡಿಸೆಂಬರ್ 18: ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಕೊಲೆ (Murder)ಮಾಡಿ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಾಣೆಯಾದ ದಂಪತಿಯ ಹುಡುಕಾಟವು ಪೊಲೀಸರನ್ನು ಅವಳಿ ಕೊಲೆವರೆಗೆ ಕೊಂಡೊಯ್ದಿತ್ತು. ತಂದೆಯ ಹಠಮಾರಿತನ ಹಾಗೂ ಮಗನ ಕೋಪ ಹೇಗೆ ಒಂದು ದುರಂತಕ್ಕೆ ಕಾರಣಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಎಂಜಿನಿಯರ್ ಆಗಿರುವ ಅಂಬೇಶ್ ತನ್ನ ತಂದೆ ಶ್ಯಾಮ್ ಬಹದ್ದೂರ್(62), ತಾಯಿ ಬಬಿತಾ(60) ಅವರನ್ನು ಕೊಲೆ ಮಾಡಿ, ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದ ಆರೋಪದ ಮೇಲೆ ಬಂಧಿಸಿದ್ದಾರೆ.

ಅಂಬೇಷ್ ಮತ್ತು ಆತನ ಹೆತ್ತವರ ನಡುವೆ ಮುಸ್ಲಿಂ ಪತ್ನಿಯ ವಿಷಯವಾಗಿ ಜಗಳ ನಡೆಯುತ್ತಿತ್ತು, ಅವರು ಆಕೆಯನ್ನು ಮನೆಯೊಳಗೆ ಸೇರಿಸಲು ನಿರಾಕರಿಸಿದ್ದರು. ಅಂಬೇಷ್ ಮತ್ತು ಆತನ ಪತ್ನಿ ಅಂತಿಮವಾಗಿ ಬೇರೆಯಾಗಲು ನಿರ್ಧರಿಸಿದ್ದರು. ಮತ್ತು ಜೀವನಾಂಶ ಪಾವತಿಸಲು ಅವರಿಗೆ ಹಣದ ಅಗತ್ಯವಿತ್ತು. ಆತ ತನ್ನ ತಂದೆಯನ್ನು ಕೇಳಿದ್ದ, ಆದರೆ ಅವರು ನಿರಾಕರಿಸಿದ್ದಾಗಿ ಹೇಳಲಾಗಿದೆ. ಇದು ಅವರ ಕೊನೆಯ ಜಗಳಕ್ಕೆ ಕಾರಣವಾಯಿತು, ಅದು ಎರಡು ಸಾವುಗಳಲ್ಲಿ ಕೊನೆಗೊಂಡಿತು.

ಡಿಸೆಂಬರ್ 13 ರಂದು, ಅಂಬೇಷ್ ಅವರ ಸಹೋದರಿ ವಂದನಾ, ಜೌನ್‌ಪುರದ ಜಫರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಷಕರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಅವರ ಪೋಷಕರು ಮತ್ತು ಸಹೋದರ ಕಾಣೆಯಾಗಿದ್ದಾರೆ ಎಂದು ಅವರು ಹೇಳಿದ್ದರು.

ನಿವೃತ್ತ ರೈಲ್ವೆ ಉದ್ಯೋಗಿ ಶ್ಯಾಮ್ ಬಹದ್ದೂರ್ ಮತ್ತು ಅವರ ಪತ್ನಿ ಬಬಿತಾ ಅವರಿಗೆ ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ . ಮಗ ಅಂಬೇಶ್ ಸುಮಾರು ಐದು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯನ್ನು ವಿವಾಹವಾಗಿದ್ದ. ಅವರ ಪೋಷಕರು ಈ ವಿವಾಹವನ್ನು ಒಪ್ಪಲಿಲ್ಲ ಮತ್ತು ತಮ್ಮ ಮುಸ್ಲಿಂ ಸೊಸೆಯನ್ನು ತಮ್ಮ ಮನೆ ಒಳಗೆ ಬರಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ತಂದೆ ಶ್ಯಾಮ್ ಬಹದ್ದೂರ್ ಹೆಂಡತಿಯಿಂದ ದೂರಾಗುವಂತೆ ಕೇಳುತ್ತಲೇ ಇದ್ದರು ಎಂದು ಅಂಬೇಶ್ ಹೇಳಿದ್ದಾರೆ. ಕೊನೆಗೆ, ಆಕೆ ಒಪ್ಪಿಕೊಂಡು 5 ಲಕ್ಷ ರೂಪಾಯಿ ಜೀವನಾಂಶ ಕೇಳಿದ್ದಳು.

ಮತ್ತಷ್ಟು ಓದಿ: ದೆಹಲಿ: 48 ಸುತ್ತು ಗುಂಡು ಹಾರಿಸಿ ಇಬ್ಬರು ಸಹೋದರರ ಹತ್ಯೆ, ಬೈಕ್​ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ

ಹಣಕ್ಕಾಗಿ ಜಗಳ ಮತ್ತು 2 ಕೊಲೆ

ತನ್ನ ಹೆತ್ತವರ ಒತ್ತಾಯದ ಮೇರೆಗೆ ಅಂಬೇಶ್ ತನ್ನ ಮದುವೆಯನ್ನು ಕೊನೆಗೊಳಿಸಲು ಒಪ್ಪಿಕೊಂಡಿದ್ದ. ಜೀವನಾಂಶಕ್ಕಾಗಿ 5 ಲಕ್ಷ ರೂ. ಬೇಕಾಗಿತ್ತು. ಎರಡು ತಿಂಗಳಿನಿಂದ ಜೌನ್‌ಪುರದಲ್ಲಿ ವಾಸಿಸುತ್ತಿದ್ದ ಆತ ಡಿಸೆಂಬರ್ 8 ರಂದು ತನ್ನ ತಂದೆಯ ಬಳಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದ. ಶ್ಯಾಮ್ ಬಹದ್ದೂರ್ ನಿರಾಕರಿಸಿದ್ದರು ಮತ್ತು ಇದು ಅಂಬೇಶ್ ಮತ್ತು ಅವನ ಹೆತ್ತವರ ನಡುವೆ ಜಗಳಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ, ಅಂಬೇಶ್ ತನ್ನ ತಾಯಿ ಬಬಿತಾಳಿಗೆ ರುಬ್ಬುವ ಕಲ್ಲಿನಿಂದ ಹೊಡೆದಿದ್ದ, ಇದನ್ನು ನೋಡಿ ಶ್ಯಾಮ್ ಕೂಗಿಕೊಂಡಾಗ ಅವರ ತಲೆಗೂ ಹೊಡೆದಿದ್ದಾನೆ. ಸ್ವಲ್ಪ ಸಮಯದ ನಂತರ ಇಬ್ಬರೂ ಸಾವನ್ನಪ್ಪಿದ್ದಾರೆ.

ತನ್ನ ಹೆತ್ತವರನ್ನು ಕೊಂದ ನಂತರ, ಅಂಬೇಶ್ ಸಾಕ್ಷ್ಯಗಳನ್ನು ನಾಶಮಾಡಲು ಮುಂದಾಗಿದ್ದ. ಶವಗಳನ್ನು ವಿಲೇವಾರಿ ಮಾಡಲು ಅವನು ದೊಡ್ಡ ಚೀಲವನ್ನು ಹುಡುಕಲು ಪ್ರಾರಂಭಿಸಿದ್ದ, ಆದರೆ ಅದು ಸಿಗಲಿಲ್ಲ. ಗ್ಯಾರೇಜ್‌ನಲ್ಲಿ ಕೆಲವು ಸಣ್ಣ ಚೀಲಗಳು ಇದ್ದವು, ಇದಕ್ಕಾಗಿ ಆತ ಶವಗಳನ್ನು ತುಂಡುಗಳಾಗಿ ಕತ್ತರಿಸಿ ಚೀಲಕ್ಕೆ ತುಂಬಿ  ಮುಂಜಾನೆ ನದಿಗೆ ಎಸೆದಿದ್ದ.

ನಂತರ ಅವನು ತನ್ನ ಸಹೋದರಿ ವಂದನ್ ಗೆ ಕರೆ ಮಾಡಿ, ಅವರ ಹೆತ್ತವರು ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದಾರೆ ಮತ್ತು ಅವರನ್ನು ಹುಡುಕಲು ಹೋಗುತ್ತಿರುವುದಾಗಿ ತಿಳಿಸಿ, ನಂತರ ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದ. ವಂದನಾಗೆ ಕರೆ ಮಾಡಿದ ಆರು ದಿನಗಳ ನಂತರ ಅಂಬೇಶ್ ಕಾಣೆಯಾಗಿದ್ದ. ಈ ಸಮಯದಲ್ಲಿ, ಅವನು ಎಲ್ಲೆಡೆ ಸುತ್ತಾಡುತ್ತಾ ತನ್ನ ಫೋನ್ ಅನ್ನು ಆಫ್ ಮಾಡಿಕೊಂಡಿದ್ದ. ಡಿಸೆಂಬರ್ 14 ರಂದು, ಅವನು ಇದ್ದಕ್ಕಿದ್ದಂತೆ ಜಾನ್‌ಪುರಕ್ಕೆ ಹಿಂತಿರುಗಿದ್ದ.ಬಳಿಕ ಪೊಲೀಸರ ತನಿಖೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Source link

Shivamogga: ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು! – Kannada News | Thieves stole ASIs mangalsutra during a protest in Shivamogga

ಶಿವಮೊಗ್ಗ, ಡಿಸೆಂಬರ್​​ 18: ಕರ್ತವ್ಯ ನಿರತ ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್​​​ಗೆಂದು ASI ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್​​ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಜ್ಯದಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್​​: ವಿಧಾನ ಪರಿಷತ್​​ನಲ್ಲಿ ಗೃಹ ಸಚಿವ ಪರಮೇಶ್ವರ್​​ ಮಾಹಿತಿ – Kannada News | Over the last three years, 88 police personnel in Karnataka were linked to criminal acts

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್​​ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಈ ನಡುವೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಬೆಚ್ಚಿಬೀಳಿಸಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​​ನ ಜೆಡಿಎಸ್​​ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್​​, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಇದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗುತ್ತಿದೆ. ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್ ಕೇಸ್​; ಪೊಲೀಸಪ್ಪ ಸೇರಿ 8 ಮಂದಿ ಅರೆಸ್ಟ್​​

ಶರವಣ ಅವರ ಮಾತಿಗೆ ಉತ್ತರಿಸಿದ ಗೃಹ ಸಚಿವರು, ಎಲ್ಲಾ ಪೊಲೀಸರು ಕಳ್ಳರು ಎನ್ನಲು ಸಾಧ್ಯವಿಲ್ಲ. ಬೇಲಿಯೇ ಎದ್ದು ಹೊಲ ಮೇಯ್ತು, ರಕ್ಷಕರು ಭಕ್ಷಕರೆಂದು ಹೇಳಿದ್ರಿ. ಆದರೆ ಅಪರಾಧ ಕೃತ್ಯಗಳಲ್ಲಿ ಪೊಲೀಸರು ಶಾಮೀಲಾಗಿದ್ರೆ ಸುಮ್ಮನೆ ಬಿಡಲ್ಲ. ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮಕೈಗೊಂಡಿದ್ದೇವೆ. ಏನೂ ಮಾಡಿಲ್ಲವೆಂದು ಹೇಳಲು ಹೋಗಬೇಡಿ. ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿಮಾಡಿದ್ದೇವೆ. ಪೊಲೀಸರು ಕಟ್ಟುನಿಟ್ಟಾಗಿ ಇರುವುದರಿಂದ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ವಜಾ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಅವತಾರ್’ ಮ್ಯಾಜಿಕ್ ಕಡಿಮೆ ಆಯ್ತೆ, ಮುಂಗಡ ಬುಕಿಂಗ್ ಮಂಕು – Kannada News | Avatar 3 movie not getting good response in Indian box office

‘ಅವತಾರ್’ ಸಿನಿಮಾ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಮತ್ತು ಅತಿ ಹೆಚ್ಚು ಹಣ ಗಳಿಸಿದ ಸಿನಿಮಾಗಳಲ್ಲಿ ಒಂದು. ಇದೀಗ ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ನಾಳೆ (ಡಿಸೆಂಬರ್ 19) ಬಿಡುಗಡೆ ಆಗಲಿದೆ. ಪ್ರತಿ ಬಾರಿ ‘ಅವತಾರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಭಾರಿ ಕ್ರೇಜ್ ಸೃಷ್ಟಿಯಾಗುತ್ತಿತ್ತು. ಇದಕ್ಕೆ ಭಾರತ ಸಹ ಹೊರತಾಗಿರಲಿಲ್ಲ. ಆದರೆ ಈ ಬಾರಿ ಯಾಕೋ ಕ್ರೇಜ್ ಅಷ್ಟಾಗಿ ಕಾಣುತ್ತಿಲ್ಲ. ಇದೀಗ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ನಲ್ಲಿ ಇದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ಭಾರತದಲ್ಲಿ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ನಾಳೆ (ಡಿಸೆಂಬರ್ 19) ಬಿಡುಗಡೆ ಆಗಲಿದ್ದು, ಡಿಸೆಂಬರ್ 17ರ ವರೆಗೆ ಈ ಸಿನಿಮಾದ 2.25 ಲಕ್ಷಕ್ಕೂ ಹೆಚ್ಚು ಟಿಕೆಟ್​​ಗಳು ಮುಂಗಡವಾಗಿ ಬುಕಿಂಗ್ ಆಗಿವೆ. ಕೇಳಲು ಇದು ದೊಡ್ಡ ಸಂಖ್ಯೆಯಂತೆ ಕಂಡರೂ ಸಹ ‘ಅವತಾರ್ 2’ ಸಿನಿಮಾಕ್ಕೆ ಆಗಿದ್ದ ಮುಂಗಡ ಬುಕಿಂಗ್ ಮುಂದೆ ಇದು ಕಡಿಮೆ. 2022 ರ ಡಿಸೆಂಬರ್ ತಿಂಗಳಲ್ಲಿ ‘ಅವತಾರ್ 2’ ಸಿನಿಮಾ ಬಿಡುಗಡೆಗೆ ಮುಂಚೆಯೇ 3.30 ಲಕ್ಷ ಟಿಕೆಟ್​​ಗಳನ್ನು ಮಾರಾಟ ಮಾಡಿತ್ತು. ಅದಕ್ಕೆ ಹೋಲಿಸಿದರೆ ‘ಅವತಾರ್ 3’ಗೆ ದೊಡ್ಡ ಮಟ್ಟದ ಪ್ರತಿಕ್ರಿಯೆ ದೊರೆತಿಲ್ಲ.

ಇದನ್ನೂ ಓದಿ:‘ವಾರಣಾಸಿ’ ಸಿನಿಮಾದಲ್ಲಿ ಕನ್ನಡದ ಖ್ಯಾತ ಹೀರೋಗೆ ಅವಕಾಶ ಕೊಟ್ಟ ರಾಜಮೌಳಿ

ಕೋವಿಡ್ ಬಳಿಕ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂದರೆ ಅದು ‘ಸ್ಪೈಡರ್​ಮ್ಯಾನ್: ನೋ ವೇ ಹೋಮ್’ ಈ ಸಿನಿಮಾ ಬಿಡುಗಡೆಗೆ ಮುಂಚೆ 5.50 ಲಕ್ಷ ಟಿಕೆಟ್​​ಗಳನ್ನು ಮುಂಗಡವಾಗಿ ಮಾರಾಟ ಮಾಡಿತ್ತು. ‘ಅವತಾರ್’ ಸಿನಿಮಾಕ್ಕೆ ಭಾರತದಲ್ಲಿ ಭಾರಿ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದರೆ ‘ಅವತಾರ್ 2’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಚೆನ್ನಾಗಿರಲಿಲ್ಲವಾದ್ದರಿಂದ ಈಗ ‘ಅವತಾರ್ 3’ ಸಿನಿಮಾದ ಬಗ್ಗೆ ಭಾರತದ ಪ್ರೇಕ್ಷಕರು ಹೆಚ್ಚಿನ ಆಸಕ್ತಿ ತೋರುತ್ತಿದ್ದಂತಿಲ್ಲ.

‘ಟೈಟ್ಯಾನಿಕ್’, ‘ಟರ್ಮಿನೇಟರ್’, ‘ರ್ಯಾಂಬೊ’, ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಜೇಮ್ಸ್ ಕ್ಯಾಮರನ್, 2009 ರ ಬಳಿಕ ‘ಅವತಾರ್’ ಸಿನಿಮಾದ ಹೊರತಾಗಿ ಇನ್ಯಾವುದೇ ಸಿನಿಮಾ ನಿರ್ದೇಶಿಸಿಲ್ಲ. ತಮ್ಮ ಉಳಿದ ವೃತ್ತಿ ಜೀವನವನ್ನು ಅವರು ‘ಅವತಾರ್’ ಸಿನಿಮಾ ಸರಣಿಯ ಮೇಲೆಯೇ ಕಳೆಯಲು ನಿರ್ಧರಿಸಿದ್ದಾರೆ. ‘ಅವತಾರ್ 3’ ಸಿನಿಮಾದ ಬಳಿಕ ಇದೇ ಸರಣಿಯ ಇನ್ನೂ ಎರಡು ಸಿನಿಮಾಗಳು ಬಿಡುಗಡೆ ಆಗಲಿವೆ. ‘ಅವತಾರ್ 4’ ಸಿನಿಮಾ 2029 ರಲ್ಲಿ ಹಾಗೂ ‘ಅವತಾರ್ 5’ ಸಿನಿಮಾ 2031ರಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

India is world’s worst dope offender: Tops list for third straight time | More sports News


India is world's worst dope offender: Tops list for third straight time

NEW DELHI: Indian athletes have claimed the top rank in dope violations once again. The country’s athletes notched up a record 260 involvements in dope-related activities in the year 2024, as revealed by the latest World Anti-Doping Agency (Wada) report. According to the report published on Wada’s website late on Tuesday, it has listed India as the worst doping offender globally for the third consecutive time.The findings emerged on the backdrop of India’s preparations to host the centenary edition of the Commonwealth Games in 2030 and is aggressively pushing for a bid to host the 2036 Olympics. The Inter national Olympic Committee (IOC) had red-flagged concerns over rampant doping when an Indian delegation visited its headquarters in the Swiss city of Lausanne in July to assess the feasibility of hosting the Olympic and Paralympic Games.

Why the cricket maidaans of Mumbai are dying | Bombay Sport Exchange with Nadim Memon

Wada says, India accounted for 260 adverse analytical findings (AAFs), reflecting a positivity rate of 3.6 per cent — the highest among all countries that conducted 5,000 or more tests. The Delhi-headquartered National Anti-Doping Agency (Nada) conducted 7,113 tests last year, comprising 6,576 urine samples and 537 blood samples. Of these, 253 urine samples (196 in-competition and 57 out of-competition) returned positive for prohibited substances, while seven blood samples (four in-competition and three out-of-competition) failed the dope test. Nada insisted that the latest figures reflected the anti doping watchdog’s more aggressive testing approach, when a total of 213 cases returned dope positive from 5,606 samples collected in 2023.However, several leading sporting nations recorded far lower positivity rates despite more extensive testing. France tested 11,744 samples and recorded 91 anti-doping rule violations (ADRVs), a 0.8 per cent positivity rate. Russia accounted for 76 ADRVs from 10,514 samples, a 0.7 per cent rate, after leading the global doping charts until 2021. China had just 43 dope failures, with a minimal 0.2 percent positivity rate from 24,214 samples. The US anti-doping agency did a lesser number of tests than India, 6592 in total, and had a positivity rate of 1.1 per cent.

The report highlights how deep the menace runs in the Indian sporting culture and again emphasised on the need to have a robust scientific and research system in the country. The figures also highlighted that Indian coaches, doctors and physiotherapists – attached with teams of different disciplines – lack basic knowledge of the use of performance-enhancing supplements and medicines. “While this position may appear concerning at both national and international levels, it is essential to underscore that the figures are a direct outcome of India’s intensified anti-doping efforts, marked by expanded testing and stronger detection mechanisms rather than a surge in doping prevalence,” stated a statement from Nada as it explained the continued high rate of positivity.In 2025, Nada has said it has so far conducted 7068 tests with a positivity rate of 1.5 per cent after a relatively lower adverse results count of 110.To tackle the doping menace, the Indian Olympic Association (IOA) recently formed a new anti-doping panel while the govt has passed a national anti-doping bill aiming to ensure the highest standards of integrity in sports.



Source link

From Garry to Greatness: Nathan Lyon surpasses McGrath in Adelaide, spins himself into Ashes history | Cricket News


From Garry to Greatness: Nathan Lyon surpasses McGrath in Adelaide, spins himself into Ashes history
Australia’s Nathan Lyon, left, celebrates with teammate Mitchell Starc after dismissing England’s Ben Duckett. (AP Photo)

Nathan Lyon etched his name deeper into cricket history on Thursday as the evergreen off-spinner surpassed Glenn McGrath on the all-time Test wickets list, delivering a decisive blow to England on the second day of the third Ashes Test in Adelaide.Go Beyond The Boundary with our YouTube channel. SUBSCRIBE NOW!Lyon claimed his 564th Test wicket when he bowled Ben Duckett with a drifting off-break, moving clear of fellow Australian great McGrath and into outright sixth place among Test cricket’s leading wicket-takers. The milestone came in Lyon’s 141st Test and capped a sensational opening spell that underlined his enduring value to Australia at the age of 38.

Prashant Veer’s parents react after their son gets a Rs 14.20 crore IPL deal

Introduced in the 10th over with England cruising at 37 without loss, Lyon struck twice in four balls to turn the contest sharply Australia’s way. First, Ollie Pope pushed forward to a turning delivery and offered a sharp catch to Josh Inglis at midwicket. That dismissal brought Lyon level with McGrath’s career haul of 563 wickets. Moments later, Duckett misread the flight and line, and Lyon’s delivery clipped off stump to spark celebrations around Adelaide Oval — and playful mock outrage from McGrath, watching on from the commentary box.England slumped to 42 for three and reached lunch at 59 for three, suddenly under pressure in a must-win Test to keep the Ashes alive. Earlier, captain Pat Cummins had broken the opening stand by removing Zak Crawley, triggering the collapse that Lyon so emphatically accelerated.Only Shane Warne, with 708 wickets, now sits above Lyon on Australia’s all-time list. Ahead globally, Sri Lanka’s Muttiah Muralitharan (800), Warne, and England’s Jimmy Anderson (704) remain the benchmark figures, while Stuart Broad (604) and Anil Kumble (619) are next in Lyon’s sights.Australia were earlier bowled out for 371 after resuming at 326 for eight, with Jofra Archer completing a five-wicket haul. Mitchell Starc struck a rapid 54 before becoming Archer’s fifth victim.Affectionately known as “Garry,” Lyon made his Test debut in 2011 and owns best figures of 8 for 50. Having stepped away from international white-ball cricket in 2019, he recently said he feels in some of the best form of his career — and Thursday’s spell was compelling proof that his remarkable journey is far from over.



Source link

Exit mobile version