ಶಾರುಖ್ ಖಾನ್ ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿ. ಅವರಿಗೆ ರಜನಿಕಾಂತ್ ಬಗ್ಗೆ ಅಷ್ಟೇ ಗೌರವ ಇದೆ. ಕಮಲ್ ಹಾಸನ್ ನಿರ್ದೇಶನದ ‘ಹೇ ರಾಮ್’ ಚಿತ್ರದಲ್ಲಿ ಶಾರುಖ್ ಒಂದು ರೂಪಾಯಿ ಸಂಭಾವನೆ ಪಡೆಯದೆ ನಟಿಸಿದರು. ಅದಾದ ನಂತರ, ಕಿಂಗ್ ಖಾನ್ ನಿರ್ಮಿಸಿ ನಟಿಸಿದ ‘ರಾ ಒನ್’ ಚಿತ್ರದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಈಗ ಕಿಂಗ್ ಖಾನ್ ಆ ಸಾಲವನ್ನು ತೀರಿಸಿದ್ದಾರೆ.
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ಮತ್ತು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’ ಭಾರಿ ಯಶಸ್ಸನ್ನು ಕಂಡಿತು. ಶಿವಣ್ಣ, ಮೋಹನ್ ಲಾಲ್, ಜಾಕಿ ಶ್ರಾಫ್ ಮತ್ತು ಇತರ ಕೆಲವು ತಾರೆಯರು ಆ ಚಿತ್ರದಲ್ಲಿ ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ, ‘ಜೈಲರ್ 2’ ಚಿತ್ರೀಕರಣ ನಡೆಯುತ್ತಿದೆ, ಈ ಬಾರಿ ಶಾರುಖ್ ಖಾನ್ ‘ಜೈಲರ್ 2’ನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. 15 ವರ್ಷಗಳ ನಂತರ, ಶಾರುಖ್ ಖಾನ್ ರಜನಿಕಾಂತ್ ಅವರ ಋಣವನ್ನು ತೀರಿಸಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ವೈಯಕ್ತಿಕ ಸ್ಟೈಲಿಸ್ಟ್ ಜಿಶಾದ್ ಶಂಶುದ್ದೀನ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶಾರುಖ್ ಖಾನ್ ಕಾರು ಚಾಲನೆ ಮಾಡುತ್ತಿರುವಾಗ ಮೋಹನ್ ಲಾಲ್ ಅವರ ಪಕ್ಕದಲ್ಲಿ ಮತ್ತು ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಹಿಂದಿನ ಸೀಟಿನಲ್ಲಿ ಕುಳಿತಿರುವ ಎಐ ಫೋಟೋವನ್ನು ಜಿಶಾದ್ ಹಂಚಿಕೊಂಡಿದ್ದಾರೆ. ‘ಇದು ಖಂಡಿತವಾಗಿಯೂ ನಡೆಯಲಿದೆ’ ಎಂದು ಅವರು ಪೋಸ್ಟ್ಗೆ ಶೀರ್ಷಿಕೆ ನೀಡಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಜನಪ್ರಿಯ ನಟ ಮಿಥುನ್ ಚಕ್ರವರ್ತಿ ಕೂಡ ಈ ಬಗ್ಗೆ ಮಾತನಾಡಿದ್ದು, ‘ಜೈಲರ್ 2’ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸುವುದಾಗಿ ಮತ್ತು ರಜನಿಕಾಂತ್, ಮೋಹನ್ ಲಾಲ್, ಶಾರುಖ್ ಖಾನ್, ಶಿವರಾಜ್ಕುಮಾರ್ ಮತ್ತು ರಮ್ಯಾ ಕೃಷ್ಣ ಅವರ ವಿರುದ್ಧ ತೊಡೆ ತಟ್ಟೋದಾಗಿ ಹೇಳಿದ್ದರು.
ರಜನಿಕಾಂತ್ ನಟಿಸಿದ ‘ಕೂಲಿ’ ಚಿತ್ರದಲ್ಲಿ ಆಮಿರ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಆ ಚಿತ್ರದಲ್ಲಿ ಆಮಿರ್ ಖಾನ್ ಜೊತೆ ಉಪೇಂದ್ರ ಕೂಡ ಕೆಲವು ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರ ಚಿತ್ರದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023 ರಲ್ಲಿ ಬಿಡುಗಡೆಯಾದ ‘ಜೈಲರ್’ ಚಿತ್ರದ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಚೆನ್ನಾಗಿ ಕೆಲಸ ಮಾಡಿತು. ಆ ಚಿತ್ರದಲ್ಲಿ ಮುಖ್ಯ ಪಾತ್ರ ಎಷ್ಟು ಜನಪ್ರಿಯವಾಯಿತೋ, ನರಸಿಂಹ ಪಾತ್ರವೂ ಅಷ್ಟೇ ಜನಪ್ರಿಯವಾಯಿತು. ‘ಜೈಲರ್ 2’ ನಲ್ಲಿ ಶಿವಣ್ಣ ನರಸಿಂಹನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಮತ್ತು ಈ ಬಾರಿ ಅವರ ಪಾತ್ರ ಅಷ್ಟೇ ಶಕ್ತಿಶಾಲಿಯಾಗಿರುತ್ತದೆ ಎಂದು ಹೇಳಲಾಗುತ್ತದೆ.
ವಾಷಿಂಗ್ಟನ್, ಮಾರ್ಚ್ 7: ಭಾರತವು (India) ರಷ್ಯಾದ ಕಚ್ಚಾ ತೈಲವನ್ನು (Crude Oil) ಖರೀದಿಸಲು ಅನುಮತಿ ನೀಡಿರುವುದರ ಕಾರಣ ಏನೆಂಬುದನ್ನು ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ (Chris Wright) ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇರಾನ್ನೊಂದಿಗಿನ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ಮಾರುಕಟ್ಟೆಯ ಮೇಲೆ ಒತ್ತಡದ ಸನ್ನಿವೇಶ ಸೃಷ್ಟಿಯಾಗಿದೆ. ತೈಲ ಮಾರುಕಟ್ಟೆಯ ಮೇಲಿನ ಈ ಒತ್ತಡವನ್ನು ಕಡಿಮೆ ಮಾಡುವ ದೃಷ್ಟಿಯಿಂದ ರಷ್ಯಾದ ತೈಲ ಖರೀದಿಸುವಂತೆ ಭಾರತಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಭಾರತವು ರಷ್ಯಾದಿಂದ ಸಂಗ್ರಹಿತ ತೈಲವನ್ನು ಖರೀದಿಸಿ ತನ್ನ ರಿಫೈನರಿಗಳಲ್ಲಿ ಬಳಸಿದರೆ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಇರುವ ಒತ್ತಡ ಕಡಿಮೆಯಾಗುತ್ತದೆ. ಇದರಿಂದ ಇತರ ದೇಶಗಳ ರಿಫೈನರಿಗಳ ಮೇಲಿನ ಒತ್ತಡವೂ ತಗ್ಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲದ ಬೆಲೆ ಸ್ಥಿರವಾಗಲು ಸಹಾಯವಾಗಬಹುದು ಎಂದು ಕ್ರಿಸ್ ರೈಟ್ ಹೇಳಿದ್ದಾರೆ.
ಅಮೆರಿಕದ ಪ್ರಕಾರ, ಭಾರತ ಹೆಚ್ಚು ಪ್ರಮಾಣದಲ್ಲಿ ರಷ್ಯಾ ತೈಲವನ್ನು ಖರೀದಿಸಿದರೆ ಅದು ಭಾರತೀಯ ರಿಫೈನರಿಗಳಲ್ಲಿ ಸಂಸ್ಕರಣೆಗೆ ಹೋಗುತ್ತದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಇತರ ರಿಫೈನರಿಗಳಿಗೆ ಲಭ್ಯವಾಗುವ ತೈಲದ ಒತ್ತಡ ಕಡಿಮೆಯಾಗುತ್ತದೆ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಹೀಗಾಗಿ ನಮ್ಮ ಸ್ನೇಹಿತ ರಾಷ್ಟ್ರವಾದ ಭಾರತದ ಬಳಿ ರಷ್ಯಾದ ತೈಲ ಖರೀದಿಸುವಂತೆ ಕೇಳಿಕೊಂಡಿದ್ದೇವೆ ಎಂದು ಅಮೆರಿಕ ಹೇಳಿದೆ.
ಅಮೆರಿಕ ಇಂಧನ ಸಚಿವ ಕ್ರಿಸ್ ರೈಟ್ ಮಾತಿನ ವಿಡಿಯೋ
Breaking: US has reached out to India for help to reduce oil prices
“We have reached out to our friends in India to buy stored Russian oil. That pulls oil into Indian refineries and releases pressure on other global refineries,” says US Energy Secretary Chris Wright pic.twitter.com/O999HcpNoy
ರಷ್ಯಾದ ತೈಲ ಖರೀದಿಸಲು 30 ದಿನಗಳ ಕಾಲ ಭಾರತಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅಮೆರಿಕ ಮಾರ್ಚ್ 6 ರಂದು ತಿಳಿಸಿತ್ತು. ಆದಾಗ್ಯೂ, ಅಮೆರಿಕ ಅಧಿಕೃತ ಹೇಳಿಕೆ ನೀಡುವುದಕ್ಕೂ ಮುನ್ನವೇ ರಷ್ಯಾದಿಂದ ಕಚ್ಚಾ ತೈಲ ಖರೀದಿ ಬಗ್ಗೆ ಭಾರತ ನಿರ್ಧಾರ ಪ್ರಕಟಿಸಿತ್ತೆಂಬುದು ಗಮನಾರ್ಹ. ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿ ಬಂದ್ ಬೆನ್ನಲ್ಲೇ ಭಾರತಕ್ಕೆ ರಷ್ಯಾ ಹೆಚ್ಚುವರಿ 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಪೂರೈಸಲು ಸಿದ್ಧವಾಗಿದೆ ಎಂದು ಮಾರ್ಚ್ 4 ರಂದು ವರದಿಯಾಗಿತ್ತು. 9.5 ಮಿಲಿಯನ್ ಬ್ಯಾರೆಲ್ ರಷ್ಯನ್ ಕಚ್ಚಾ ತೈಲ ಈಗಾಗಲೇ ಭಾರತೀಯ ಸಮುದ್ರ ಗಡಿಯ ಸಮೀಪದಲ್ಲಿರುವ ಹಡಗುಗಳಲ್ಲಿ ಲಭ್ಯವಿದ್ದು, ಇದು ಕೆಲವು ವಾರಗಳಲ್ಲಿ ಭಾರತಕ್ಕೆ ತಲುಪುವ ಸಾಧ್ಯತೆ ಇದೆ ಎಂದೂ ವರದಿಯಾಗಿತ್ತು.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಾರ್ಚ್ 6 ರಂದು, ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಖರೀದಿಗೆ ಅನುಮತಿ ನೀಡಿರುವುದಾಗಿ ಅಮೆರಿಕ ಹೇಳಿತ್ತು. ಇದು ಭಾರತದಲ್ಲಿ ತೀವ್ರ ರಾಜಕೀಯ ಚರ್ಚೆಗೂ ಗ್ರಾಸವಾಗಿತ್ತು. ಅಮೆರಿಕವು ಭಾರತವನ್ನು ತನಗೆ ಬೇಕಾದಂತೆ ನಡೆಸಿಕೊಳ್ಳುತ್ತಿದೆ ಎಂಬ ಟೀಕೆಗಳೂ ವ್ಯಕ್ತವಾಗಿದ್ದವು. ಆದರೀಗ, ರಷ್ಯಾ ತೈಲ ಖರೀದಿಸುವಂತೆ ಸ್ನೇಹಿತ ರಾಷ್ಟ್ರವಾದ ಭಾರತಕ್ಕೆ ಮನವಿ ಮಾಡಿದ್ದೇವೆ ಎಂದು ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ ಹೇಳಿದ್ದಾರೆ. ಅಲ್ಲದೆ, ಈ ಮನವಿಯ ಹಿಂದಿನ ಕಾರಣವನ್ನೂ ಬಿಚ್ಚಿಟ್ಟಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
‘ಅಮೃತಧಾರೆ’ ಧಾರಾವಾಹಿಯು ಕಳೆದ ಕೆಲವು ಸಮಯದಿಂದ ನಿಧಾನಗತಿಯಲ್ಲಿ ಸಾಗುತ್ತಿತ್ತು ಎಂದರೂ ತಪ್ಪಾಗಲಾರದು. ಆದರೆ, ಈಗ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಸಮಯ ಬಂದಿದೆ. ಈ ಧಾರಾವಾಹಿಯಲ್ಲಿ ಇಷ್ಟು ದಿನ ಗೌತಮ್ ಉದ್ಯಮ ಮಾಡೋದಾಗಿ ಹೇಳುತ್ತಿದ್ದನು ಮತ್ತು ಅದನ್ನು ಆರಂಭಿಸಿರಲಿಲ್ಲ. ಆದರೆ, ಈಗ ಉದ್ಯಮ ಮಾಡಲು ಆತನು ಸಿದ್ಧನಾಗಿದ್ದಾನೆ. ಎದುರಾಳಿ ಜೊತೆಯೇ ಕೈ ಜೋಡಿಸಿದ್ದಾನೆ.
ಕುಟುಂಬದವರೇ ಮಾಡಿದ ಮೋಸದ ಕಾರಣದಿಂದ ಗೌತಮ್ ಸಾಕಷ್ಟು ಬೇಸರ ಮಾಡಿಕೊಂಡಿದ್ದ. ಆತ ಆಸ್ತಿಯನ್ನು ಮಲ ತಮ್ಮನಿಗೆ ಬರೆದುಕೊಟ್ಟಿದ್ದ. ಆದರೂ ಆತನ ದಾಹ ತೀರಿರಲಿಲ್ಲ. ಕೊನೆಯದಾಗಿ ಗೌತಮ್ ಉಳಿಸಿಕೊಂಡಿದ್ದ ತಂದೆಯ ಸಮಾಧಿಯನ್ನು ಕೂಡ ಮೋಸದಿಂದ ಪಡೆದುಕೊಂಡ. ಇದು ಧಾರಾವಾಹಿಗೆ ಮಹತ್ವದ ತಿರುವು ನೀಡಿದೆ ಎಂದೇ ಹೇಳಬಹುದು.
ಈ ಮೊದಲಿನಿಂದಲೂ ಉದ್ಯಮ ಮಾಡುವುದಾಗಿ ಗೌತಮ್ ಹೇಳುತ್ತಲೇ ಬರುತ್ತಿದ್ದನು ಮತ್ತು ಉದ್ಯಮ ಆರಂಭಿಸಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಆತ ಬಿಸ್ನೆಸ್ ಶುರು ಮಾಡಿದ್ದಾನೆ. ಬ್ರೋಕರ್ ಆ್ಯಪ್ ಒಂದನ್ನು ಆರಂಭಿಸಿದ್ದಾನೆ. ಇದು ಸದ್ಯ ಸ್ಟಾರ್ಟ್ಅಪ್. ಆದರೆ, ಇದನ್ನು ದೊಡ್ಡದಾಗಿ ಬೆಳೆಸುವ ಆಲೋಚನೆ ಆತನಿಗೆ ಇದೆ.
ಹೇಳಿಕೇಳಿ ಗೌತಮ್ ದೊಡ್ಡ ಉದ್ಯಮಿ. ಉದ್ಯಮ ಮಾಡೋದು ಅವನ ರಕ್ತದಲ್ಲೇ ಇದೆ. ಈ ಕಾರಣದಿಂದ ಯಾವುದೇ ಅಂಜಿಕೆ ಇಲ್ಲದೆ ಉದ್ಯಮ ಆರಂಭಿಸಿದ್ದಾರೆ. ದೀವಾನ್ ಗ್ರೂಪ್ನ ಎದುರಾಳಿ ಎನಿಸಿಕೊಂಡಿರುವ ಸಂಸ್ಥೆ ಜೊತೆ ಗೌತಮ್ ಕೈ ಜೋಡಿಸಿರುವುದು ವಿಶೇಷ.
ಈ ಎಲ್ಲಾ ಬೆಳವಣಿಗೆಯಿಂದ ಜಯದೇವ್ಗೆ ಭಯ ಶುರುವಾಗಿದೆ. ಇದು ಸ್ಟಾರ್ಟ್ ಮಾತ್ರವೇ ಆಗಿದೆ ಎಂದು ಆತ ಭಯ ಬಿದ್ದಿದ್ದ. ಆದರೆ, ಗೌತಮ್ ಏನೇ ಮಾಡಿದರೂ ಅದರಲ್ಲಿ ಯಶಸ್ಸು ಕಾಣುತ್ತಾನೆ ಎಂಬುದನ್ನು ಆತ ಸರಿಯಾಗಿ ಬಲ್ಲನು. ಹೀಗಾಗಿ, ಈಗಲೇ ಆತನಿಗೆ ಭಯ ಶುರುವಾಗಿದೆ.
ಸಾಮಾನ್ಯವಾಗಿ ಶ್ರೀ ಕೃಷ್ಣ ಪರಮಾತ್ಮನಿಗೆ 16,000 ಗೋಪಿಕಾ ಸ್ತ್ರೀಯರು ಇದ್ದರು ಎಂಬ ಮಾತು ಕೇಳಿಬರುತ್ತದೆ. ಈ ಬಗ್ಗೆ ಟಿವಿ9 ನಿತ್ಯಭಕ್ತ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕೃಷ್ಣನಿಗೆ 16000 ಪತ್ನಿಯರಿದ್ದರು ಎಂಬ ವಿಚಾರ ನಿಜವೇ ಎಂಬ ಪ್ರಶ್ನೆಗೆ ಧರ್ಮಶಾಸ್ತ್ರಗಳು ಸ್ಪಷ್ಟ ಉತ್ತರ ನೀಡುತ್ತವೆ ಎಂದು ಅವರು ಹೇಳಿದ್ದಾರೆ. ಶ್ರೀಕೃಷ್ಣನು ನರಕಾಸುರನನ್ನು ಸಂಹಾರ ಮಾಡಿದಾಗ, ಆತನ ಸೆರೆಯಲ್ಲಿದ್ದ 16,000 ಸ್ತ್ರೀಯರು ಬಂಧಮುಕ್ತರಾದರು. ಈ ಮಹಿಳೆಯರು ವಿವಿಧ ದೇಶಗಳ ಮೂಲೆಗಳಿಂದ ಸೆರೆಹಿಡಿಯಲ್ಪಟ್ಟವರಾಗಿದ್ದರು. ನರಕಾಸುರನ ಬಂಧನದಿಂದ ಮುಕ್ತರಾದಾಗ, ಸಮಾಜದಲ್ಲಿ ತಮ್ಮ ರಕ್ಷಣೆ ಮತ್ತು ಗೌರವದ ಕುರಿತು ಆತಂಕಗೊಂಡರು. ಶ್ರೀ ಕೃಷ್ಣನು ಅವರ ಜವಾಬ್ದಾರಿಯನ್ನು ಹೊತ್ತುಕೊಂಡನು. ಸಮಾಜದಲ್ಲಿ ಅಪಮಾನದಿಂದ ಅವರನ್ನು ರಕ್ಷಿಸಲು, ಶ್ರೀ ಕೃಷ್ಣನು ‘ನೀವು ನನ್ನ ಹೆಸರು ಹೇಳಿಕೊಳ್ಳಿ’ ಎಂದು ಅವರಿಗೆ ಧೈರ್ಯ ತುಂಬಿದನು. ಇದರರ್ಥ, ಭಗವಾನ್ ಕೃಷ್ಣನು ಅವರಿಗೆ ರಾಜನಂತೆ ಆಶ್ರಯ, ರಕ್ಷಣೆ ಮತ್ತು ಗೌರವ ನೀಡಿದನೇ ಹೊರತು, ಅವರನ್ನು ವಿವಾಹವಾಗಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ. ಕೃಷ್ಣ ಅವರನ್ನು ಪ್ರಜೆಯಂತೆ ನೋಡಿಕೊಂಡನು, ಅವರಿಗೆ ಜೀವನಕ್ಕೆ ಅನುಕೂಲ ಮಾಡಿಕೊಟ್ಟನು ಮತ್ತು ಅನಾಥ ರಕ್ಷಕನಾಗಿ, ದೀನಬಂಧುವಾಗಿ ನಿಂತನು ಎದು ಗುರೂಜಿ ಹೇಳಿದ್ದಾರೆ. ಈ ಮೂಲಕ ಈ ವಿಷಯದಲ್ಲಿರುವ ಗೊಂದಲವನ್ನು ದೂರ ಮಾಡುವುದು ಸೂಕ್ತ ಎಂದು ಅವರು ಹೇಳಿದ್ದಾರೆ.
ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಹೋದರ, ನಟ ಅಲ್ಲು ಸಿರೀಶ್ ಈಗ ವಿವಾಹ ಆಗಿದ್ದಾರೆ. ಅವರು ನಯನಿಕಾ ಅವರೊಂದಿಗೆ ಹೊಸ ಜೀವನವನ್ನು ಪ್ರಾರಂಭಿಸಿದರು. ಸಿರೀಶ್-ನಯನಿಕಾ ಅವರ ವಿವಾಹ ಶುಕ್ರವಾರ (ಮಾರ್ಚ್ 06) ರಾತ್ರಿ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ನಡೆಯಿತು.
ಕುಟುಂಬದವರು, ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಅಲ್ಲು ಸಿರೀಶ್ ನಯನಿಕಾ ಅವರ ಕುತ್ತಿಗೆಗೆ ಮೂರು ಗಂಟು ಹಾಕಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು
ಬಂದ ಸೆಲೆಬ್ರಿಟಿಗಳು ನವ ದಂಪತಿಗಳನ್ನು ಆಶೀರ್ವದಿಸಿ ಶುಭ ಹಾರೈಸಿದರು. ಅಲ್ಲು ಅರ್ಜುನ್-ಸ್ನೇಹಾ ರೆಡ್ಡಿ ಅವರ ವಿವಾಹ ವಾರ್ಷಿಕೋತ್ಸವದ ದಿನದಂದೇ (ಮಾರ್ಚ್ 6) ಅಲ್ಲು ಸಿರೀಶ್ ಅವರ ವಿವಾಹ ಸಮಾರಂಭ ನಡೆದಿರುವುದು ವಿಶೇಷ.
ಚಿರಂಜೀವಿ ಮತ್ತು ಸುರೇಖಾ ಸೇರಿದಂತೆ ಮೆಗಾ ಕುಟುಂಬದ ಎಲ್ಲಾ ಸದಸ್ಯರು ವಿವಾಹದಲ್ಲಿ ಭಾಗವಹಿಸಿದ್ದರು. ರಾಮ್ ಚರಣ್-ಉಪಾಸನಾ ಸಮಾರಂಭದಲ್ಲಿ ವಿಶೇಷ ಆಕರ್ಷಣೆಯಾಗಿದ್ದರು. ಕಾಲಿವುಡ್ ಸ್ಟಾರ್ ಹೀರೋ ಕೂಡ ಸಮಾರಂಭದಲ್ಲಿ ಭಾಗವಹಿಸಿ ಸಿರೀಶ್-ನಯನಿಕಾ ಅವರಿಗೆ ಶುಭ ಹಾರೈಸಿದರು.
ಈ ಅದ್ದೂರಿ ವಿವಾಹದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇದನ್ನು ನೋಡಿದ ಅಭಿಮಾನಿಗಳು ನವ ದಂಪತಿಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಲ್ಲು ಸಿರೀಶ್ ಮತ್ತು ನಯನಿಕಾ ಕೆಲವು ಸಮಯದಿಂದ ಪ್ರೀತಿಸುತ್ತಿದ್ದರು.ವರುಣ್ ತೇಜ್ ಮತ್ತು ಲಾವಣ್ಯ ಅವರ ವಿವಾಹದ ಸಂದರ್ಭದಲ್ಲಿ ನೀಡಿದ ಪಾರ್ಟಿಯಲ್ಲಿ ಇಬ್ಬರೂ ಭೇಟಿಯಾದರು
ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ 1,835ಕ್ಕೆ ತಲುಪಿದೆ.
ಈ ನಡುವೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ.
The price of a 14.2-kg domestic LPG cylinder has been increased by Rs 60. In Delhi, 14.2-Kg Domestic LPG Cylinder prices increased from Rs 853 to Rs 913. New rate will be effective from March 7: Sources pic.twitter.com/Mxh7QeIyfl
ಶುಕ್ರವಾರ ಕೇಂದ್ರ ಸರ್ಕಾರವು ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್ಪಿಜಿ ಸಂಸ್ಕರಣಾಗಾರಗಳಿಗೆ ಉತ್ಪಾದನೆಯನ್ನು ಹೆಚ್ಚಿಸುವಂತೆ ಸೂಚಿಸಿತ್ತು. ಈ ಮೂಲಕ ದೇಶದಲ್ಲಿ ಅನಿಲ ಪೂರೈಕೆ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಆತಂಕ ಬೇಡ, ಇಂಧನ ದಾಸ್ತಾನು ಸಾಕಷ್ಟಿದೆ: ಕೇಂದ್ರ
ಏತನ್ಮಧ್ಯೆ, ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಇದ್ದರೂ ಭಾರತದಲ್ಲಿ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸೇರಿದಂತೆ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ಮೂಲಗಳ ಪ್ರಕಾರ, ಭಾರತದಲ್ಲಿ ಇನ್ನೂ ಗಮನಾರ್ಹ ಪ್ರಮಾಣದ ಎಲ್ಪಿಜಿ ಸಂಗ್ರಹವಿದ್ದು, ಅಗತ್ಯವಿದ್ದಲ್ಲಿ ತೈಲ ಕಂಪನಿಗಳು ಗಲ್ಫ್ ಪ್ರದೇಶದ ಹೊರಗಿನ ದೇಶಗಳಿಂದಲೂ ಆಮದು ಮಾಡಿಕೊಳ್ಳಲು ಸಿದ್ಧವಾಗಿವೆ.
ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ
ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಇರಾನ್ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಹಡಗು ಸಾಗಾಟಕ್ಕೆ ನಿರ್ಬಂಧ ಹೇರಿರುವುದರಿಂದ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚಾಗಿದೆ.
ಸಾಮಾನ್ಯವಾಗಿ ಪ್ರತಿ ತಿಂಗಳ ಒಂದನೇ ತಾರೀಖಿನಿಂದ ಎಲ್ಪಿಜಿ ಸಿಲಿಂಡರ್ಗಳ ದರ ಪರಿಷ್ಕರಣೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳ ದರಕ್ಕೆ ಅನುಗುಣವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 110 ರೂ.ನಷ್ಟು ಏರಿಕೆ ಮಾಡಲಾಗಿತ್ತು.
ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ (KGF 2 Movie) ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು. ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ.
‘ಟಾಕ್ಸಿಕ್’ ಸಿನಿಮಾ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದಾರೆ ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಮಧ್ಯೆ ಯಶ್ ಮುಂಬೈನಲ್ಲಿ ಸಮಯ ಕಳೆಯುತ್ತಿದ್ದಾರೆ. ಅವರು ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ಬಗ್ಗೆ ಗಮನಹರಿಸುತ್ತಿದ್ದಾರೆ.
ಯಶ್ ರೆಸ್ಟೋರೆಂಟ್ ಹೊರ ಭಾಗದಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಶಾರ್ಟ್ ಹೇರ್ ಹಾಗೂ ಸಣ್ಣದಾದ ಗಡ್ಡದಲ್ಲಿ ಕಾಣಿಸಿಕೊಂಡರು. ಈ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಯಶ್ ಫ್ಯಾನ್ಸ್ ಖುಷಿಯಾಗಿದ್ದಾರೆ. ಹಲವು ವರ್ಷಗಳ ಬಳಿಕ ಅವರನ್ನು ಹೊಸ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಯಶ್ ಜೊತೆ ರಾಧಿಕಾ ಕೂಡ ಇದ್ದರು.
ಈ ಮೊದಲು ಯಶ್ ಮುಂಬೈ ಬೀದಿಗಳಲ್ಲಿ ಸುತ್ತಾಡಿದ್ದರು. ಆ ವೇಳೆಗಾಗಲೇ ಯಶ್ ಲುಕ್ ಬದಲಸಿಕೊಂಡಾಗಿತ್ತು. ಹೀಗಾಗಿ, ಅದನ್ನು ತೋರಿಸಬಾರದು ಎಂದು ಯಶ್ ಅವರು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದರು. ಆದರೆ, ಈಗ ಟಿಕೆಟ್ ಪಾತ್ರದ ಲುಕ್ ರಿವೀಲ್ ಆಗಿರುವುದರಿಂದ ಅವರು ರಾಜಾರೋಶವಾಗಿ ಹೊಸ ಲುಕ್ ಅಲ್ಲಿ ಓಡಾಡುತ್ತಿದ್ದಾರೆ.
ಯಶ್ ಅವರ ಅಭಿಮಾನಿ ಬಳಗ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿಲ್ಲ. ರಾಕಿ ಭಾಯ್ ಹೆಸರು ಭಾರತಾದ್ಯಂತ ಚರ್ಚೆಯಲ್ಲಿದೆ. ಮುಂಬೈ ಬೀದಿಗಳಲ್ಲಿ ಓಡಾಡಿದರೂ ಪಾಪರಾಜಿಗಳು ಮುತ್ತಿಕೊಂಡು, ‘ಯಶ್ ಸರ್ ಯಶ್ ಸರ್’ ಎಂದು ಕೂಗುತ್ತಾರೆ. ಇದು ಯಶ್ ಅವರ ಜನಪ್ರಿಯತೆಯನ್ನು ತೋರಿಸುತ್ತದೆ.
2026ರ ಮಾರ್ಚ್ 7ರ ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಚಿತ್ತಾ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 9.30 ರಿಂದ 11.00ರ ತನಕ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 2.00 ರಿಂದ 3.29ರ ತನಕ ಇದೆ. ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳಿಗೆ ಇದು ಪರ್ವ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ.
ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಆಪ್ತರನ್ನು ಅಸೂಯೆಯಿಂದ ಕಾಣುವುದು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಎಲ್ಲವನ್ನೂ ತಿಳಿದು ಸುಮ್ಮನಿರುವುದೇ ಲೇಸು ಎಂದೆನಿಸುವುದು.
ವೃಷಭ ರಾಶಿ:
ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ. ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ನಿಮ್ಮ ಚಿಂತನೆಯು ಸಫಲವಾಗಲು ಅಧಿಕ ಸಮಯವು ಬೇಕಾದೀತು. ಬದುಕು ಬಂಧನದಂತೆ ಅನ್ನಿಸಬಹುದು. ಮನಸ್ಸೂ ಸಂಕುಚಿತವಾಗಬಹುದು.
ಮಿಥುನ ರಾಶಿ:
ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ಮಿತವಾದ ಮಾತಿನಿಂದ ನಿಮಗೇ ಒಳ್ಳೆಯದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಬೇಡ ವಿಚಾರಗಳನ್ನು ಅತಿಯಾಗಿ ಆಲೋಚಿಸಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ.
ಕರ್ಕಾಟಕ ರಾಶಿ:
ಸ್ವಾವಲಂಬನೆಯ ಕಾರಣಕ್ಕೆ ನಿಮ್ಮಲ್ಲೊಂದು ಹೊಸ ಆತ್ಮವಿಶ್ವಾಸ ಮೂಡಲಿದೆ. ಉದ್ಯೋಗದಾತರು ನಿಮ್ಮಿಂದ ನಿರೀಕ್ಷೆ ಮಾಡುವ ಬೆಂಬಲ ನೀಡುವಲ್ಲಿ ಸಫಲರಾಗುತ್ತೀರಿ. ಇದರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತವೆ. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ಉತ್ತಮ ಸ್ನೇಹವನ್ನು ನೀವು ಕಳೆದುಕೊಳ್ಳುವಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಯೋಗ್ಯ ಚಿಕಿತ್ಸೆಯ ಅವಶ್ಯಕತೆ ಇರುಬುದು.
ಸಿಂಹ ರಾಶಿ:
ನಿಮಗೆ ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ಕೂಡಿಟ್ಟ ಹಣವನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಿದ್ದೀರಿ. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ.
ಕನ್ಯಾ ರಾಶಿ:
ಹಣಕ್ಕಾಗಿ ಕಾದು ಸಮಯವೂ ಹಾಳು. ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯುವಿರಿ. ಯಾವುದೇ ಸ್ಪಷ್ಟನೆ ನೀಡಿದರೂ ಪ್ರಯೋಜನ ಆಗುವುದಿಲ್ಲ. ಸಹೋದ್ಯೋಗಿಗಳ ಜತೆಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗುತ್ತದೆ. ನಿಮ್ಮ ವಿರುದ್ಧ ದೂರು ಹೇಳುವ ಸಾಧ್ಯತೆ ಕೂಡ ಇದೆ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು.
ತುಲಾ ರಾಶಿ:
ಕ್ರೀಡಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ವೃತ್ತಿಗೆ ಸಂಬಂಧಿಸಿದ ಸಲಹೆಗಳನ್ನು ಪಡೆಯುವಿರಿ. ವಿದ್ಯುತ್ ಉಪಕರಣಗಳನ್ನು ಬಳಕೆ ಮಾಡುತ್ತಿರುವವರು ಇತರರಿಗೆ ಅದನ್ನು ನೀಡಬೇಕಾದೀತು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಸಂಗಾತಿಯ ಜೊತೆ ಸಾಮಾಜಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಆಸ್ತಿಯನ್ನು ಅನ್ಯರಿಗೆ ಕೊಡುವ ಚಿಂತನೆಯೂ ನಿಮ್ಮ ಮನಸ್ಸಿಗೆ ಬರಬಹುದು.
ವೃಶ್ಚಿಕ ರಾಶಿ:
ಸರಿಯಾದ ಸಮಯಕ್ಕೆ ಯೋಗ್ಯ ತೀರ್ಮಾನದಿಂದ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ನಷ್ಟವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮಾತಿನ ಮೂಲಕ ಇತರರನ್ನು ಮೋಡಿ ಮಾಡಲಿದ್ದೀರಿ. ದೈವಾನುಗ್ರಹ ನಿಮ್ಮ ಮೇಲಿರಲಿದೆ. ಆದರೂ ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು. ಮಕ್ಕಳ ವಿಚಾರದಲ್ಲಿ ನಿಷ್ಪಕ್ಷಪಾತಿಯಾಗುವುದು ಒಳ್ಳೆಯದು.
ಧನು ರಾಶಿ:
ಯೋಗ್ಯವಾಗಿ ದುಡಿಯುವ ನಿಮ್ಮ ಗುಣವು ಅಧಿಕಾರಿಗಳ ಗಮನಕ್ಕೆ ಬರಲಿದ್ದು ಮೆಚ್ಚುಗೆಯ ಸಿಗಲಿದೆ. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ. ಸಮೀಪದ ಬಂಧುಗಳ ವಿಯೋಗವೂ ಆಗಬಹುದು. ಸುಲಭಕ್ಕೆ ಸಿಗದ ವಸ್ತುಗಳನ್ನು ಬಲದಿಂದ ಪಡೆಯುವತ್ತ ಚಿಂತಿಸುವಿರಿ.
ಮಕರ ರಾಶಿ:
ಸಣ್ಣ ವಿಷಯಗಳಿಗೆ ಎಲ್ಲರನ್ನೂ ದೂಷಿಸುತ್ತಾ ಇರುವುದು ಉತ್ತಮ ನಾಯಕನ ಲಕ್ಷಣ ಅಲ್ಲ. ಉದ್ಯೋಗ ಸ್ಥಳದಲ್ಲಿನ ದೌರ್ಬಲ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳಬೇಡಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ವಿನೋದಕ್ಕೆಂದು ಆಡಿದ ಮಾತು ಗಂಭೀರಸ್ವರೂಪವನ್ನು ಪಡೆದೀತು. ನಿಮ್ಮವರೇ ನಿಮ್ಮ ಯಶಸ್ಸನ್ನು ಸಹಿಸದೇ ತೊಂದರೆ ಕೊಡುವರು. ಹಣವನ್ನು ಸರಿಯಾಗಿ ಸಂಗ್ರಹಿಸಿ, ಕೂಡಿಡಿ. ಸಾಲದಿಂದ ನೀವು ಬೇಗ ಮುಕ್ತರಾಗುವಿರಿ.
ಕುಂಭ ರಾಶಿ:
ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ನಿಮ್ಮ ಅತಿಯಾದ ಉತ್ಸಾಹದಿಂದ ಮಹತ್ತರ ಮಾಹಿತಿಗಳು ಅಪಾತ್ರರನ್ನು ತಲುಪಿ ಮಹತ್ತರ ಅಪಾಯವನ್ನು ಕೊಡಬಹುದು. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಶ್ರಮದಿಂದ ನ್ಯಾಯಾಲಯಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು. ಹಿರಿಯರಿಂದ ನಿಮ್ಮ ಜೀವನಕ್ಕೆ ಮಾರ್ಗದರ್ಶನ ಸಿಗಲಿದೆ.
ಮೀನ ರಾಶಿ:
ಹೊಸ ಯೋಜನೆಯಲ್ಲಿ ಪುನಃ ಪುನಃ ವಿಘ್ನ ಕಂಡುಬರುವುದು. ನಿಶ್ಚಿತ ಆದಾಯದಲ್ಲಿ ಗಣನೀಯ ಇಳಿಕೆಯಾಗಿ, ಚಿಂತೆಗೆ ಕಾರಣವಾದೀತು. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವೃದ್ಧಿ, ಕರಣ : ಬಾಲವ, ಸೂರ್ಯೋದಯ – 06 – 38 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:37 – 11:06, ಯಮಗಂಡ ಕಾಲ 14:05 – 15:34, ಗುಳಿಕ ಕಾಲ 06:39 – 08:08
ಸ್ನೇಹಿತರು- ಸಂಬಂಧಿಗಳ ಆಹ್ವಾನದ ಮೇಲೆ ಅವರ ಮನೆಗಳಿಗೆ ಊಟ ಅಥವಾ ತಿಂಡಿಗೋ ಅಥವಾ ಗೆಟ್- ಟು- ಗೆದರ್ ಗೆ ತೆರಳುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರು ಈ ದಿನ ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಅದೇ ರೀತಿ ಕೆಲವರು ರೆಸಾರ್ಟ್ ಅಥವಾ ಹೋಮ್ ಸ್ಟೇಗಳಿಗೆ ತೆರಳುವಂಥ ಯೋಗ ಇದೆ. ಅನಿರೀಕ್ಷಿತವಾಗಿ ಹಣದ ಹರಿವು ಉತ್ತಮಗೊಳ್ಳಲಿದೆ.
ಬಹಳ ಸಮಯದಿಂದ ಮಾರಾಟ ಆಗದೆ ಉಳಿದಿದ್ದ ವಸ್ತುಗಳು ವ್ಯಾಪಾರಿಗಳಿಗೆ ಮಾರಾಟ ಆಗುವ ಸಾಧ್ಯತೆಗಳಿವೆ. ಹೊಸದಾಗಿ ಗ್ರಾಹಕರು ದೊರೆಯಲಿದ್ದಾರೆ. ಸ್ವಭಾವತಃ ಸಿಟ್ಟಿನವರಾಗಿದ್ದರೆ ಈ ದಿನ ಸಾಧ್ಯವಾದಷ್ಟೂ ಸಮಾಧಾನದಿಂದ ಇರುವುದು ಉತ್ತಮ. ಹೀಗೆ ಇರುವುದರಿಂದ ಹಲವು ಬಗೆಯಲ್ಲಿ ಅನುಕೂಲಗಳು ಆಗಬಹುದು. ಒಂದೇ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮ ಆಪ್ತರಿಂದ ಎರಡು ವಿಭಿನ್ನ ಅಭಿಪ್ರಾಯ, ದೃಷ್ಟಿಕೋನಗಳು ವ್ಯಕ್ತ ಆಗಬಹುದು.
ನಿಮ್ಮದೇ ತಪ್ಪಿದ್ದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಇರುವುದಿಲ್ಲ. ವಿತಂಡ ವಾದವನ್ನು ಹೂಡಲಿದ್ದೀರಿ. ಹೇಗಿದ್ದರೂ ಸಾಲ ದೊರೆಯುತ್ತದೆ ಎಂಬ ಕಾರಣಕ್ಕೋ ಅಥವಾ ಬಡ್ಡಿ ಇಲ್ಲದ ಆಫರ್ ಏನೋ ಇದೆ ಎಂಬ ಕಾರಣಕ್ಕೋ ಅಗತ್ಯ ಇಲ್ಲದಿದ್ದರೂ ಕೆಲವು ವಸ್ತುಗಳನ್ನು ಖರೀದಿಸುವುದಕ್ಕೆ ಮುಂದಾಗಲಿದ್ದೀರಿ. ಆಪ್ತ ಸ್ನೇಹಿತರೊಬ್ಬರ ಜತೆಗೆ ಮಾತನಾಡುವಾಗ ಬಳಸುವಂಥ ಪದಗಳಿಂದ ಅವರಿಗೆ ಬಹಳ ಬೇಸರ ಆಗಬಹುದು.