IPL 2026: ಮುಸ್ತಾಫಿಜುರ್ ರೆಹಮಾನ್ ಬದಲಿಗೆ ಕೆಕೆಆರ್ ಸೇರಿದ ಮಾಜಿ ಆರ್​ಸಿಬಿ ವೇಗಿ

Source link

ಮಾರ್ಚ್ 19ರಿಂದ ಜೀ5 ಒಟಿಟಿಯಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಪ್ರಸಾರ

ಜನವರಿ 23ರಂದು ‘ಲ್ಯಾಂಡ್​ಲಾರ್ಡ್’ ಸಿನಿಮಾ (Landlord Kannada Movie) ಬಿಡುಗಡೆ ಆಗಿತ್ತು. ದುನಿಯಾ ವಿಜಯ್, ರಚಿತಾ ರಾಮ್, ಶಿಶಿರ್ ಬೈಕಾಡಿ, ರಿತನ್ಯ ವಿಜಯ್, ಉಮಾಶ್ರೀ, ರಾಜ್ ಬಿ. ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿರುವ ಈ ಸಿನಿಮಾಗೆ ಚಿತ್ರಮಂದಿರಗಳಲ್ಲಿ ಜನರ ಮೆಚ್ಚುಗೆ ಸಿಕ್ಕಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ಈಗ ‘ಲ್ಯಾಂಡ್​ಲಾರ್ಡ್’ ಚಿತ್ರ ಒಟಿಟಿಗೆ ಬರುತ್ತಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಜೀ5 ಒಟಿಟಿ (Zee5 OTT) ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಮಾರ್ಚ್ 19ಕ್ಕೆ ಜೀ5ನಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ ಪ್ರಸಾರ ಆರಂಭ ಆಗಲಿದೆ. ಜಡೇಶ್ ಕೆ. ಹಂಪಿ ನಿರ್ದೇಶನದ ಈ ಸಿನಮಾ 1980ರಲ್ಲಿ ಗ್ರಾಮೀಣ ಕರ್ನಾಟಕದಲ್ಲಿ ನಡೆಯುವ ಕಥೆಯನ್ನು ಹೇಳುತ್ತದೆ. ‘ಸಾರಥಿ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಸಂಪತ್ ಮೈತ್ರೇಯ, ಭಾವನಾ ರಾವ್ ಕೂಡ ಈ ಚಿತ್ರದಲ್ಲಿ ಗಮನಾರ್ಹ ಪಾತ್ರಗಳನ್ನು ಮಾಡಿದ್ದಾರೆ.

‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಕೊಡಲಿ ರಾಚಯ್ಯ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರದ ಕುರಿತು ಮಾತನಾಡಿದ ಅವರು, ‘ನಾನು ರಾಚಯ್ಯ ಎಂಬ ಪಾತ್ರವನ್ನು ವಹಿಸಿದ್ದೇನೆ. ರಾಚಯ್ಯನು ಒಬ್ಬ ಅಂತರ್ಮುಖಿ‌. ಹೆಚ್ಚು ಮಾತನಾಡದೇ ಒಳಗಿನ ಭಾವನೆಗಳನ್ನು ವ್ಯಕ್ತಪಡಿಸುವ ಈ ಪಾತ್ರ ನನಗೆ ಒಂದು ಸವಾಲಾಗಿತ್ತು. ಇದೀಗ ಜೀ5ನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ನನಗೆ ಸಂತಸ ತಂದಿದೆ. ಪ್ರೇಕ್ಷಕರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ.

ಸಿನಿಮಾದ ಬಗ್ಗೆ ಮತ್ತು ತಮ್ಮ ಪಾತ್ರದ ಕುರಿತು ಮಾತನಾಡಿದ ನಟಿ ರಚಿತಾ ರಾಮ್, ‘ಚಿತ್ರವು ಸರಳವಾಗಿದ್ದರೂ, ಕಥೆಯಲ್ಲಿರುವ ಭಾವನೆಗಳ ಆಳ ದೊಡ್ಡದಾಗಿದೆ. ಅಗಾಧವಾದ ಭಾವನೆಗಳನ್ನು ವ್ಯಕ್ತಪಡಿಸುವ ಕಥೆಯೇ ಲ್ಯಾಂಡ್​ಲಾರ್ಡ್. ಇದರಲ್ಲಿ ನನ್ನದು ಬಹಳ ವಿಶೇಷವಾದ ಪಾತ್ರ’ ಎಂದಿದ್ದಾರೆ. ಉಮಾಶ್ರೀ ಅವರ ಪಾತ್ರ ಕೂಡ ಗಮನ ಸೆಳೆಯುಂತಿದೆ.

ಇದನ್ನೂ ಓದಿ: Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

‘ಲ್ಯಾಂಡ್​ಲಾರ್ಡ್​’ ಸಿನಿಮಾದಲ್ಲಿನ ಎಲ್ಲ ಕಲಾವಿದರ ನಟನೆಗೆ ಚಿತ್ರಮಂದಿರದಲ್ಲಿ ಜನರು ಭೇಷ್ ಎಂದಿದ್ದರು. ವಿಲನ್ ಪಾತ್ರದಲ್ಲಿ ಅಬ್ಬರಿಸಿದ ರಾಜ್ ಬಿ. ಶೆಟ್ಟಿ ಅವರು ಚಪ್ಪಾಳೆ ಗಿಟ್ಟಿಸಿದರು. ಈಗ ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಸಮಯ ಸಮೀಪಿಸಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫ್ರೀ ಬಸ್​​ ಗದ್ದಲದಿಂದ ಬೇಸತ್ತಿರುವ ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್

ಬೆಂಗಳೂರು, (ಮಾರ್ಚ್ 13): ಮಹಿಳೆಯರಿಗೆ (Women)  ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ  (shakthi yojana)ಜಾರಿ ಬಂದಾಗಿನಿಂದ ಬಸ್ (Bus)​ ಓಡಾಟ ಕಡಿಮೆಯಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ಹೊಸ ಬಸ್ಸುಗಳು ರಸ್ತೆಗಿಳಿದಿವೆ. ಹೌದು.. ಕೆಎಸ್‌ಆರ್‌ಟಿಸಿ 45 ಸಾಮಾನ್ಯ ಹಾಗೂ 70 ಪಲ್ಲಕ್ಕಿ ಸ್ಲೀಪರ್ ಬಸ್‌ಗಳು ಸೇರಿದಂತೆ ಒಟ್ಟು 115 ನೂತನ ಬಸ್‌ಗಳಿಗೆ ಇಂದು (ಮಾರ್ಚ್ 13) ಸಚಿವ ರಾಮಲಿಂಗರೆಡ್ಡಿ ಹಸಿರು ನಿಶಾನೆ ತೋರಿಸಿದ್ದು, ಈ ಹೊಸ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಹಲವು ಪ್ರಮುಖ ಮಾರ್ಗಗಳಿಗೆ ಸಂಚಾರ ನಡೆಸಲಿವೆ.

ಒಟ್ಟು 115 ಬಸ್​ಗಳು ಪೈಕಿ 70 ಬಸ್​ಗಳು ಪ್ರೀಮಿಯಂ ಪಲ್ಲಕ್ಕಿ ಬಸ್​ಗಳು ಹಾಗೂ 45 ಬಸ್​ಗಳು ನಾರ್ಮಲ್​ ಬಸ್​ಗಳಾಗಿದ್ವು.ಈ ಪಲ್ಲಕ್ಕಿ ಬಸ್​ಗಳ ವಿಶೇಷತೆ ಏನಂದ್ರೆ, ಈ ಬಸ್​ಗಳಲ್ಲಿ ಹೈಟೆಕ್​ ಸೀಟಿನ ವ್ಯವಸ್ಥೆ ಸೇರಿದಂತೆ ಅನೇಕ ಅನುಕೂಲಗಳಿವೆ.  ಪಲ್ಲಕ್ಕಿ ಬಸ್​ಗಳಲ್ಲಿ ಹೆಣ್ಣು ಮಕ್ಕಳೂ ಸಹ ಹಣ ಕೊಟ್ಟು ಪ್ರಯಾಣ ಮಾಡಬೇಕು. ಇನ್ನು 45 ನಾರ್ಮಲ್​ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಸಂಚಾರ ಮಾಡಬಹುದು.

ಇದನ್ನೂ ಓದಿ: ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು

45 ಸಾಮಾನ್ಯ ಬಸ್‌ಗಳು, 70 ಪಲ್ಲಕ್ಕಿ ಬಸ್‌ಗಳು

ಈ ಹಂತದಲ್ಲಿ ಒಟ್ಟು 115 ಬಸ್‌ಗಳನ್ನು ಸೇವೆಗೆ ಸೇರಿಸಲಾಗಿದೆ, ಅದರಲ್ಲಿ 45 ಸಾಮಾನ್ಯ ಬಸ್‌ಗಳು ಮತ್ತು 70 ಪಲ್ಲಕ್ಕಿ (ಸ್ಲೀಪರ್) ಬಸ್‌ಗಳು ಸೇರಿವೆ. ವಿಶೇಷವಾಗಿ ದೀರ್ಘ ದೂರ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಈ ಪಲ್ಲಕ್ಕಿ ಬಸ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.

ಈ ನೂತನ ಸ್ಲೀಪರ್ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ವಿನ್ಯಾಸ ಮಾಡಲಾಗಿದೆ. ಇವುಗಳಲ್ಲಿ ಒಟ್ಟು ಐದು ಬಾಗಿಲುಗಳನ್ನು (ಡೋರ್‌ಗಳು) ಅಳವಡಿಸಲಾಗಿದೆ. ಇದಕ್ಕೂ ಮೊದಲು ಸಾಮಾನ್ಯವಾಗಿ ಎರಡು ಬಾಗಿಲುಗಳು ಮತ್ತು ಒಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ಮಾತ್ರ ಇದ್ದವು. ಆದರೆ ಹೊಸ ಮಾದರಿಯ ಸ್ಲೀಪರ್ ಬಸ್‌ಗಳಲ್ಲಿ ಬಸ್‌ನ ಮೇಲ್ಭಾಗದಲ್ಲಿಯೂ ಎರಡು ಹೆಚ್ಚುವರಿ ಬಾಗಿಲುಗಳನ್ನು ಅಳವಡಿಸಲಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ಹೊರಬರಲು ಈ ವ್ಯವಸ್ಥೆ ಸಹಾಯಕವಾಗಲಿದೆ.

ಹೊಸ ಬಸ್‌ಗಳು ಎಲ್ಲಿಂದ ಎಲ್ಲಿಗೆ ಸಂಚಾರ?

ಹೊಸ ಪಲ್ಲಕ್ಕಿ ಸ್ಲೀಪರ್ ಬಸ್‌ಗಳನ್ನು ರಾಜ್ಯದ ಹಾಗೂ ಹೊರರಾಜ್ಯಗಳ ಪ್ರಮುಖ ಧಾರ್ಮಿಕ ಮತ್ತು ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಂಚಾರಕ್ಕೆ ಬಿಡಲಾಗಿದೆ. ಪಲ್ಲಕ್ಕಿ ನಾನ್‌ ಎಸಿ ಬಸ್‌ಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಸಂಚರಿಸುತ್ತವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನಾಳೆಯಿಂದ ವಿಮಾನ ಪ್ರಯಾಣ ದುಬಾರಿ; ಇಂಧನದ ಬೆಲೆ ಹೆಚ್ಚಾಗಿದ್ದರಿಂದ ಟಿಕೆಟ್ ದರ ಏರಿಸಿದ ಇಂಡಿಗೋ

ನವದೆಹಲಿ, ಮಾರ್ಚ್ 13: ನಾಳೆಯಿಂದ ಇಂಡಿಗೋ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನದ ಟಿಕೆಟ್‌ಗಳ ಮೇಲೆ ಇಂಧನ ಸರ್‌ಚಾರ್ಜ್ ಅನ್ನು ಪರಿಚಯಿಸಲಿದೆ. ವಾಯುಯಾನ ಟರ್ಬೈನ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆಯೇ ಈ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ತಿಳಿಸಿದೆ. ಪ್ರಯಾಣದ ಮಾರ್ಗ ಮತ್ತು ದೂರವನ್ನು ಅವಲಂಬಿಸಿ ಪ್ರತಿ ಪ್ರಯಾಣಿಕರಿಗೆ 425 ರೂ.ನಿಂದ 2,300 ರೂ.ವರೆಗೆ ಸರ್‌ಚಾರ್ಜ್ ವಿಧಿಸಲಾಗುತ್ತದೆ. ಜಾರಿಗೆ ಬರುವ ದಿನಾಂಕದಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ಬುಕಿಂಗ್‌ಗಳಿಗೆ ಹೆಚ್ಚುವರಿ ಶುಲ್ಕ ಅನ್ವಯಿಸುತ್ತದೆ.

ನಾಳೆಯಿಂದ (ಮಾರ್ಚ್ 14) ಜಾರಿಗೆ ಬರುವಂತೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಇಂಡಿಗೋ ಇಂಧನ ಶುಲ್ಕವನ್ನು ಹೇರಲಿದೆ. ಇಂಡಿಗೋ ವಿಮಾನಗಳಲ್ಲಿನ ಎಲ್ಲಾ ಹೊಸ ಬುಕಿಂಗ್‌ಗಳಿಗೆ ಒಟ್ಟಾರೆ ಬೆಲೆಗಳು ಈ ಕೆಳಗಿನ ಹೆಚ್ಚುವರಿ ಇಂಧನ ಶುಲ್ಕವನ್ನು ಒಳಗೊಂಡಿರುತ್ತವೆ. ಭಾರತದೊಳಗೆ 425 ರೂ., ಮಧ್ಯಪ್ರಾಚ್ಯಕ್ಕೆ 900 ರೂ., ಆಗ್ನೇಯ ಏಷ್ಯಾ ಮತ್ತು ಚೀನಾಗೆ 1800 ರೂ., ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾ 1800 ರೂ. ಮತ್ತು ಯುರೋಪ್​ಗೆ 2,300 ರೂ. ಟಿಕೆಟ್ ದರ ಹೆಚ್ಚಳವಾಗಲಿದೆ.

ಇದನ್ನೂ ಓದಿ: ಮಧ್ಯಪ್ರಾಚ್ಯದಿಂದ ಭಾರತೀಯರ ಕರೆತರಲು ಕೇಂದ್ರದಿಂದ ವಿಶೇಷ ಕಾರ್ಯಾಚರಣೆ, ತೆರಳಲಿವೆ 10 ಇಂಡಿಗೋ ವಿಮಾನ

“ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಸಮಸ್ಯೆಗಳ ನಂತರ ಇಂಧನ ಬೆಲೆಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ USD 100ರಷ್ಟು ಹೆಚ್ಚಾಗಿದೆ. ಏರ್ ಇಂಡಿಯಾ ನಂತರ ಇಂಧನ ಶುಲ್ಕವನ್ನು ಘೋಷಿಸಿದ ಎರಡನೇ ಭಾರತೀಯ ವಿಮಾನಯಾನ ಸಂಸ್ಥೆ ಇಂಡಿಗೋ ಆಗಿದೆ.

ಹೆಚ್ಚುವರಿ ಶುಲ್ಕವು ಮಾರ್ಚ್ 14ರ ಮಧ್ಯರಾತ್ರಿಯಿಂದಲೇ (ಇಂದು ರಾತ್ರಿ 12 ಗಂಟೆ) ಜಾರಿಗೆ ಬರಲಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಆರ್ಥಿಕ ಸುಳಿಯೊಳಗೆ ಸಿಲುಕಿದ 58 ವರ್ಷ ಇತಿಹಾಸವಿರುವ ಶಾಲೆ; ಬಂದ್​​ಗೆ ನಿರ್ಧಾರ

ಬೆಂಗಳೂರು, ಮಾರ್ಚ್​ 13: ಸುಮಾರು 350 ಮಕ್ಕಳು ವ್ಯಾಸಂಗ ಮಾಡುತ್ತಿರುವ ಈಸ್ಟ್ ವೆಸ್ಟ್ ಅಕಾಡೆಮಿ ಶಾಲೆಯನ್ನ (East West Academy school) ಮುಚ್ಚುವುದಕ್ಕೆ ಆಡಳಿತ ಮಂಡಳಿ ನಿರ್ಧಾರ ಮಾಡಿದೆ. ತೀವ್ರ ಆರ್ಥಿಕ ಸಂಕಷ್ಟವೇ ಇದಕ್ಕೆ ಕಾರಣವೆನ್ನಲಾಗುತ್ತಿದೆ. ಹೀಗಾಗಿ ಮಕ್ಕಳ ಭವಿಷ್ಯವೇ ಅತಂತ್ರವಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೋಷಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪೋಷಕರು ಆಕ್ರೋಶ

ರಾಜಾಜಿನಗರ ಮಾರುತಿ ಎಕ್ಸ್​​ಟೆನ್ಷನ್​ನಲ್ಲಿರುವ 58 ವರ್ಷಗಳ ಇತಿಹಾಸವಿರುವ ಈಸ್ಟ್ ವೆಸ್ಟ್ ಅಕಾಡೆಮಿ ಶಾಲೆಗೆ ಇಂದು ಪೋಷಕರು ದೌಡಾಯಿಸಿದ್ದರು. ಏಕೆಂದರೆ ಶಾಲೆಯನ್ನೇ ಬಂದ್​ ಮಾಡುವುದಕ್ಕೆ ಆಡಳಿತ ಮಂಡಳಿ ನಿರ್ಧಾರ ಮಾಡಿರುವುದೇ ಇದಕ್ಕೆ ಕಾರಣ. ಹೀಗಾಗಿ ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಓದುತ್ತಿರುವ 350ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿರುವ ಹಿನ್ನೆಲೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Karnataka Budget 2026: ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ

ಇನ್ನು ಶಾಲೆಯು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ನಿರ್ವಹಣೆ ಕಷ್ಟವಾಗಿದೆ ಎಂದು ಹೇಳುತ್ತಿರುವ ಆಡಳಿತ ಮಂಡಳಿ, ಸಿಬ್ಬಂದಿಗೆ ಸಂಬಳ ಕೊಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಈ ಶೈಕ್ಷಣಿಕ ವರ್ಷಗಳ ಪರೀಕ್ಷೆಗಳು ಮುಗಿದ ಬಳಿಕ ಮಕ್ಕಳನ್ನ ಬೇರೆ ಶಾಲೆಗೆ ದಾಖಲು ಮಾಡಿ ಅಂತಾ ಪೋಷಕರಿಗೆ ಸೂಚನೆ ನೀಡಿದ್ದಾರೆ. ಆದರೆ ಪೋಷಕರು ಇದಕ್ಕೆ ಸುತಾರಾಂ ಒಪ್ಪುತ್ತಿಲ್ಲ. ಫೀಸ್ ಸ್ವಲ್ಪ ಹೆಚ್ಚಿಗೆ ಮಾಡಿ, ಇನ್ನೊಂದು ವರ್ಷ ಶಾಲೆ ನಡೆಸಿ ಅಂತಾ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Karnataka Budget 2026: ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಸಿಎಂ

ಇನ್ನು ಈ ಬಗ್ಗೆ ಸ್ಥಳೀಯ ಶಿಕ್ಷಣಾಧಿಕಾರಿ ಕೂಡ ಗಮನ ವಹಿಸದೇ ನಿರ್ಲಕ್ಷ್ಯ ತೋರಿದ್ದಾರಂತೆ. ಮ್ಯಾನೇಜ್​ಮೆಂಟ್ ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಪೋಷಕರು ಕಿಡಿಕಾರಿದ್ದು, ಶಿಕ್ಷಣ ಇಲಾಖೆ ಈ ಬಗ್ಗೆ ಗಮನ ಹರಿಸಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಬಿಡುಗಡೆಗೆ ಕೆಲವೇ ದಿನ ಬಾಕಿ ಇದೆ. ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ಈ ಸಿನಿಮಾದ ಟ್ರೇಲರ್ ಈಗಾಗಲೇ ಧೂಳೆಬ್ಬಿಸಿದೆ. ಸದ್ಯಕ್ಕೆ ಪೇಯ್ಡ್ ಪ್ರೀಮಿಯರ್ ಶೋ ಬುಕಿಂಗ್ ಮಾತ್ರ ಶುರುವಾಗಿದೆ. ಅದಕ್ಕೆ ಅತ್ಯುತ್ತಮ ರೆಸ್ಪಾನ್ಸ್ ಬಂದಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾದ ಟಿಕೆಟ್ ಬುಕಿಂಗ್ ಆರಂಭಿಸಲು ವಿಳಂಬ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳಿವೆ.

ಮಾರ್ಚ್ 18ರಂದು ಸಂಜೆ 5 ಗಂಟೆಯಿಂದ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಆರಂಭವಾಗಲಿವೆ. ಈ ಪ್ರದರ್ಶನಗಳ ಟಿಕೆಟ್ ದರ ಗಗನಕ್ಕೇರಿದ್ದರೂ ಕೂಡ ದೆಹಲಿ, ಮುಂಬೈ ಬೆಂಗಳೂರು ಮುಂತಾದ ನಗರಗಳಲ್ಲಿ ಟಿಕೆಟ್‌ಗಳು ಬಿಸಿ ಬಿಸಿ ಕಜ್ಜಾಯದಂತೆ ಮಾರಾಟವಾಗುತ್ತಿವೆ. ಆದರೆ, ವಾರಾಂತ್ಯದ ಸಾಮಾನ್ಯ ಪ್ರದರ್ಶನಗಳ ಬುಕಿಂಗ್ ಇನ್ನೂ ಓಪನ್ ಆಗಿಲ್ಲ.

ಸಿನಿಮಾ ನಿರ್ಮಾಣ ಸಂಸ್ಥೆ ‘ಜಿಯೋ ಸ್ಟುಡಿಯೋಸ್’ ಚಿತ್ರಮಂದಿರಗಳ ಮಾಲೀಕರಿಂದ ಒಂದು ಕಠಿಣ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮೊದಲ 4 ವಾರಗಳ ಕಾಲ ಕೇವಲ ‘ಧುರಂಧರ್ 2’ ಚಿತ್ರವನ್ನೇ ಪ್ರದರ್ಶಿಸಬೇಕು ಮತ್ತು ಬೇರೆ ಯಾವುದೇ ಸಿನಿಮಾಗೆ ಶೋಗಳನ್ನು ಹಂಚಬಾರದು ಎಂಬುದು ಇವರ ಶರತ್ತು. ಆದರೆ, ಈ ಚಿತ್ರ ಬಿಡುಗಡೆಯಾದ 4ನೇ ವಾರದಲ್ಲಿ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ ಸಿನಿಮಾ ತೆರೆಗೆ ಬರಲಿದೆ. ಹೀಗಾಗಿ, ಚಿತ್ರಮಂದಿರಗಳ ಮಾಲೀಕರು ಅಕ್ಷಯ್ ಚಿತ್ರಕ್ಕೆ ಶೋ ನೀಡಲು ಬಯಸುತ್ತಿದ್ದು, ಈ ಕುರಿತು ತಿಕ್ಕಾಟ ನಡೆಯುತ್ತಿದೆ.

ವಿತರಕರ ಜೊತೆ ಲಾಭದ ಹಂಚಿಕೆಯಲ್ಲಿ ಮಾತುಕಥೆ ಅಂತಿಮವಾಗಿಲ್ಲ. ‘ಧುರಂಧರ್’ ಮೊದಲ ಭಾಗವು ನಿಧಾನವಾಗಿ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು. ಆಗ ವಿತರಕರಿಗೆ ಸರಿಯಾದ ಲಾಭದ ಪಾಲು ಸಿಕ್ಕಿರಲಿಲ್ಲ ಎನ್ನಲಾಗಿದೆ. ಆದ್ದರಿಂದ, ಈ ಬಾರಿ ವಿತರಕರು ಹೆಚ್ಚಿನ ಶೇಕಡವಾರು ಲಾಭದ ಪಾಲನ್ನು ಕೇಳುತ್ತಿದ್ದಾರೆ. ಈ ಮಾತುಕತೆಗಳು ಇತ್ಯರ್ಥವಾಗದ ಕಾರಣ ಪೂರ್ಣ ಪ್ರಮಾಣದ ಬುಕಿಂಗ್ ವಿಳಂಬ ಆಗಿದೆ.

ಇದನ್ನೂ ಓದಿ: ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ಪೂರ್ಣ ಪ್ರಮಾಣದಲ್ಲಿ ಬುಕಿಂಗ್ ಆರಂಭವಾಗದ ಕಾರಣ, ಪ್ರೇಕ್ಷಕರು ಅನಿವಾರ್ಯವಾಗಿ ಹೆಚ್ಚಿನ ಹಣ ಕೊಟ್ಟು ಪೇಯ್ಡ್ ಪ್ರಿವ್ಯೂಗಳ ಟಿಕೆಟ್ ಖರೀದಿಸುತ್ತಿದ್ದಾರೆ. ಇದು ಪ್ರಿವ್ಯೂ ಪ್ರದರ್ಶನಗಳಿಗೆ ಲಾಭ ತಂದರೂ, ಸಾಮಾನ್ಯ ಪ್ರೇಕ್ಷಕರಿಗೆ ಹೊರೆಯಾಗುತ್ತಿದೆ. ಒಟ್ಟಿನಲ್ಲಿ ‘ಧುರಂಧರ್ 2’ ಸಿನಿಮಾದಿಂದ ಬಾಕ್ಸ್ ಆಫೀಸ್​​ನಲ್ಲಿ ಹಣದ ಹೊಳೆ ಹರಿಯುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಾವಣಗೆರೆ ಬೈ ಎಲೆಕ್ಷನ್: ಬಿಜೆಪಿ ಮನೆಯೊಂದು 3 ಬಾಗಿಲು, ಕಾಂಗ್ರೆಸ್​​​​ ಮನೆಯೊಂದು ಎರಡು ಬಾಗಿಲು

ದಾವಣಗೆರೆ, (ಮಾರ್ಚ್ 13): ಜಿಲ್ಲೆಯಲ್ಲಿ ಭಿನ್ನಾಭಿಪ್ರಾಯ ಸರಿಪಡಿಸಲು ಹೋರಾಡುತ್ತಿರುವ ಬಿಜೆಪಿ (BJP) ಈಗ ಉಪಚುನಾವಣೆಯನ್ನು (Davanagere South By Election)  ಗೆದ್ದು ಕೊಳ್ಳುವ ನೆಪದಲ್ಲಾದರೂ ಭಿನ್ನಮತಕ್ಕೆ ಕೊನೆ ಹಾಡಲು ಸರ್ಕಸ್ ಮುಂದುವರಿಸಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯ ಜೊತೆಗೆ ಎರಡೂ ಬಣಗಳನ್ನು ಕೂರಿಸಿ ಚರ್ಚೆ ನಡೆಸಲಾಗಿದೆ. ಇನ್ನು ಕಾಂಗ್ರೆಸ್​​​ನಲ್ಲೂ (Congress) ಸಹ ಅಭ್ಯರ್ಥಿ ಆಯ್ಕೆಯಲ್ಲಿ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರೆ ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಸಮಿತಿ ಸಹ ಎರಡು ಕಡೆಯವರನ್ನು ಕೂರಿಸಿ ಸಭೆ ಮಾಡಿದೆ.

ಐವರು ಆಕಾಂಕ್ಷಿಗಳ ಬಗ್ಗೆ ಚರ್ಚಿಸಿದ ಬಿಜೆಪಿ

ಕಳೆದೆರಡು ವರ್ಷಗಳಿಂದಲೂ ಭಿನ್ನಮತದಿಂದ ಬಳಲುತ್ತಿರುವ ದಾವಣಗೆರೆ ಜಿಲ್ಲಾ ಬಿಜೆಪಿ ಉಪಚುನಾವಣೆಯಿಂದಲಾದರೂ ಒಗ್ಗೂಡುವ ವಿಶ್ವಾಸವಿಟ್ಟುಕೊಂಡು ಈಗ ಪ್ರಯತ್ನ ಶುರುವಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಅಂತಿಮಗೊಳಿಸಲು ಬಿಜೆಪಿ ರಾಜ್ಯ ಕೋರ್ ಕಮಿಟಿ ಇಂದು (ಮಾರ್ಚ್ 13) ಚರ್ಚೆ ನಡೆಸಿದೆ. ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಐವರು ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಚರ್ಚೆ ನಡೆಸಲಾಗಿದೆ. ಯಶವಂತ್ ರಾವ್ ಜಾಧವ್, ಬಿ.ಜಿ. ಅಜಯ್ ಕುಮಾರ್, ಶ್ರೀನಿವಾಸ್ ದಾಸ್ ಕರಿಯಪ್ಪ, ದೇವಮುನಿ ಮತ್ತು ರಾಜನಹಳ್ಳಿ ಶಿವಕುಮಾರ್ ಆಕಾಂಕ್ಷಿಗಳಾಗಿದ್ದು, ಎರಡು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸುಗೊಳ್ಳಲಿದೆ.

ಇದನ್ನೂ ಓದಿ: ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

ಬಿಜೆಪಿಯ ಎರಡೂ ಬಣಗಳ ಜತೆ ಚರ್ಚೆ

ಕೋರ್ ಕಮಿಟಿ ಸಭೆಯ ಬಳಿಕವೂ ಸಹ ದಾವಣಗೆರೆಯ ಎರಡೂ ಬಣಗಳನ್ನು ಬೆಂಗಳೂರಿಗೆ ಕರೆಸಿಕೊಂಡು ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ,‌ ಶಾಸಕ ಬಿ.ಪಿ. ಹರೀಶ್ ಮತ್ತು ದಾವಣಗೆರೆ ಜಿಲ್ಲಾಧ್ಯಕ್ಷ ರಾಜಶೇಖರ್ ಸೇರಿದಂತೆ ಎರಡೂ ಬಣಗಳ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲಾ ವ್ಯತ್ಯಾಸಗಳನ್ನೂ ಪಕ್ಕಕ್ಕಿಟ್ಟು ಉಪಚುನಾವಣೆಯನ್ನು ಎದುರಿಸಬೇಕೆಂದು ಸೂಚನೆ ನೀಡಲಾಗಿದೆ. ನಾಯಕರ ಸೂಚನೆಗೆ ಒಪ್ಪಿಕೊಂಡಂತಿರುವ ಎರಡೂ ಬಣ ಪಕ್ಷದ ಕೆಲಸ ಮಾಡುವುದಾಗಿ ಒಪ್ಪಿಕೊಂಡಿವೆ.

ಈ ಮಧ್ಯೆ ಕೋರ್ ಕಮಿಟಿ ಸಭೆಗೂ ಮುನ್ನ ಜಿ.ಎಂ‌. ಸಿದ್ದೇಶ್ವರ ಬಣವನ್ನು ಸಮಾಧಾನಿಸುವ ಕೆಲಸವನ್ನೂ ಬಿಜೆಪಿ ಮಾಡಿದೆ. ಹಾಲಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ರೇಣುಕಾಚಾರ್ಯ ಬಣದಲ್ಲಿ ಗುರುತಿಸಿಕೊಂಡಿದ್ದು, ಸಿದ್ದೇಶ್ವರ ಬಣದ ರಾಜನಹಳ್ಳಿ ಶಿವಕುಮಾರ್, ಬಾತಿ ವೀರೇಶ್ ಮತ್ತು ಶಿವಪ್ರಕಾಶ್ ಅವರಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಗಳನ್ನು ನೀಡಲಾಗಿದೆ.

ಕಾಂಗ್ರೆಸ್ ನಲ್ಲೂ ಅಭ್ಯರ್ಥಿ ಆಯ್ಕೆ ಗೊಂದಲ

ಇನ್ನು ಕಾಂಗ್ರೆಸ್ ನಲ್ಲಿ ಕೂಡಾ ಅಭ್ಯರ್ಥಿ ಆಯ್ಕೆಯ ಸರ್ಕಸ್ ಮುಂದುವರಿದಿದೆ. ಒಂದೆಡೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮಿರ್ ಅಹಮ್ಮದ್ ಖಾನ್ ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ತಮ್ಮ ಪುತ್ರಿನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹೀಗಾಗಿ ಕಾಂಗ್ರೆಸ್​​​ನಲ್ಲೂ ಸಹ ಟಿಕೆಟ್​​ಗಾಗಿ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ. ಈ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ನೇತೃತ್ವದಲ್ಲಿ ನಿನ್ನೆ (ಮಾರ್​ 12) ವಿಧಾನಸೌಧದಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಸಭೆ ನಡೆದಿದೆ. ಮತ್ತೊಂದೆಡೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ಪರವಾಗಿ ದಾವಣಗೆರೆಯಿಂದ ಒಂದು ತಂಡ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ಟಿಕೆಟ್ ನೀಡುವಂತೆ ಒತ್ತಾಯಿಸಿದೆ.

ಒಟ್ಟಿನಲ್ಲಿ ದಾವಣಗೆರೆ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಗೊಂದಲ ಉದ್ಭವಿಸಿದ್ದು, ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತೋ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಸ್ಟ್ರೋಕ್ (Stroke) ಸಮಸ್ಯೆ ಕೇವಲ ವೃದ್ಧರಲ್ಲಿ ಮಾತ್ರವಲ್ಲದೆ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೂ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಮೆದುಳಿಗೆ ರಕ್ತದ ಹರಿವು ನಿಂತಾಗ ಅಥವಾ ರಕ್ತನಾಳ ಒಡೆದಾಗ ಸಂಭವಿಸುವ ತುರ್ತು ವೈದ್ಯಕೀಯ ಸ್ಥಿತಿಯಾಗಿದೆ, ಇದು ಮೆದುಳಿನ ಕೋಶಗಳನ್ನು ನಿಮಿಷಗಳಲ್ಲಿ ಸಾಯಿಸುತ್ತದೆ. ಇದಕ್ಕೆ ಕಾರಣಗಳು ಸ್ಪಷ್ಟವಾಗಿ ತಿಳಿಯದಿದ್ದರೂ ಕೂಡ ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಇವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಂಡಿರುವುದು ಬಹಳ ಒಳ್ಳೆಯದು ಏಕೆಂದರೆ ಅವುಗಳನ್ನು ತಕ್ಷಣ ಗುರುತಿಸುವುದರಿಂದ ಅಪಾಯವನ್ನು ತಡೆಯಬಹುದಾಗಿದೆ.

ಅಚಾನಕ್ ಆಗಿ ಕಂಡುಬರುವ ಲಕ್ಷಣಗಳು:

ವೈದ್ಯರ ಪ್ರಕಾರ, ಬ್ರೇನ್ ಸ್ಟ್ರೋಕ್‌ನ ಲಕ್ಷಣಗಳು ಸಾಮಾನ್ಯವಾಗಿ ಅಚಾನಕ್ ಆಗಿ ಕಾಣಿಸಿಕೊಳ್ಳುತ್ತವೆ. ಮಾತನಾಡಲು ಕಷ್ಟವಾಗುವುದು, ಮುಖದ ಒಂದು ಭಾಗ ಅಥವಾ ದೇಹದ ಒಂದು ಭಾಗದಲ್ಲಿ ದುರ್ಬಲತೆ ಅಥವಾ ಸುಣ್ಣವಾಗುವುದು, ತೀವ್ರ ತಲೆನೋವು, ತಲೆ ಸುತ್ತುವುದು, ನಡೆಯಲು ಅಥವಾ ನೋಡಲು ಕಷ್ಟವಾಗುವುದು ಮುಂತಾದವು ಸ್ಟ್ರೋಕ್‌ನ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಬಹಳ ಅಗತ್ಯ.

ಯುವಕರಲ್ಲಿ ಸ್ಟ್ರೋಕ್ ಹೆಚ್ಚಾಗಲು ಕಾರಣಗಳು:

ದೆಹಲಿ ನಗರದ ಜಿ.ಬಿ. ಪಂತ್ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ಮಾಜಿ ನಿರ್ದೇಶಕ ಡಾ. ದಲ್ಜೀತ್ ಸಿಂಗ್ ಅವರು ಹೇಳುವ ಪ್ರಕಾರ, ಯುವಕರಲ್ಲಿ ಬ್ರೇನ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಲು ಪ್ರಮುಖ ಕಾರಣ ಧೂಮಪಾನ ಮತ್ತು ಸಿಗರೆಟ್ ಮತ್ತು ತಂಬಾಕಿನ ಸೇವನೆ. ಇವುಗಳಲ್ಲಿರುವ ಹಾನಿಕರ ರಾಸಾಯನಿಕಗಳು ರಕ್ತನಾಳಗಳಿಗೆ ಹಾನಿ ಉಂಟುಮಾಡಿ ರಕ್ತದ ಗಡ್ಡೆಗಳು ರೂಪುಗೊಳ್ಳುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ. ಇದರ ಜೊತೆಗೆ ಹೆಚ್ಚು ಒತ್ತಡ, ಹೈ ಬ್ಲಡ್ ಪ್ರೆಷರ್, ಅಸ್ವಸ್ಥ ಆಹಾರ ಪದ್ಧತಿ ಮತ್ತು ಶಾರೀರಿಕ ಚಟುವಟಿಕೆಗಳ ಕೊರತೆ ಕೂಡ ಅಪಾಯವನ್ನು ಹೆಚ್ಚಿಸುತ್ತವೆ.

ಇದನ್ನೂ ಓದಿ: ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

ಸ್ಟ್ರೋಕ್ ತಡೆಯಲು ಏನು ಮಾಡಬೇಕು?

ವೈದ್ಯರ ಪ್ರಕಾರ, ಬ್ರೇನ್ ಸ್ಟ್ರೋಕ್‌ ಬರದಂತೆ ತಡೆಯಲು ಆರೋಗ್ಯಕರ ಜೀವನಶೈಲಿ ಅನುಸರಿಸುವುದು ಮುಖ್ಯ. ಧೂಮಪಾನದಿಂದ ದೂರವಿರುವುದು, ನಿಯಮಿತವಾಗಿ ವ್ಯಾಯಾಮ ಮಾಡುವುದು, ಸಮತೋಲನಯುತ ಆಹಾರ ಸೇವಿಸುವುದು ಮತ್ತು ಬ್ಲಡ್ ಪ್ರೆಷರ್, ಶುಗರ್ ಹಾಗೂ ಕೊಲೆಸ್ಟ್ರಾಲ್ ಮಟ್ಟಗಳನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳುವುದು ಅಗತ್ಯ. ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಜೀವ ಉಳಿಸಲು ಸಹಾಯಕವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿತ್ತೀಯ ಅರೋಗ್ಯವಿರುವ ಟಾಪ್-10 ರಾಜ್ಯಗಳಲ್ಲಿ ಕರ್ನಾಟಕ; ನಂ. 1 ಯಾವುದು?

ನವದೆಹಲಿ, ಮಾರ್ಚ್ 13: ನೀತಿ ಆಯೋಗ್​ನ ವಿತ್ತೀಯ ಆರೋಗ್ಯ ಸೂಚ್ಯಂಕ 2026ರ ಪಟ್ಟಿಯಲ್ಲಿ (NITI Aayog Fiscal Health Index) ಕರ್ನಾಟಕ 9ನೇ ಸ್ಥಾನ ಪಡೆದಿದೆ. 18 ಪ್ರಮುಖ ರಾಜ್ಯಗಳನ್ನು ಈ ಇಂಡೆಕ್ಸ್​ನಲ್ಲಿ ಸೇರಿಸಲಾಗಿದೆ. ಇದರಲ್ಲಿ ಅಚೀವರ್, ಫ್ರಂಟ್ ರನ್ನರ್, ಪರ್ಫಾರ್ಮರ್, ಆಸ್ಪಿರೇಶನಲ್ ಎನ್ನುವ ನಾಲ್ಕು ಶ್ರೇಣಿಗಳನ್ನು ಮಾಡಲಾಗಿದೆ. ಅಗ್ರ ಮೂರು ರಾಜ್ಯಗಳು ಅಚೀವರ್ ಶ್ರೇಣಿ ಪಡೆದರೆ, 4ರಿಂದ 9ನೇ ಸ್ಥಾನದಲ್ಲಿರುವ ರಾಜ್ಯಗಳು ಫ್ರಂಟ್ ರನ್ನರ್ ಶ್ರೇಣಿಯಲ್ಲಿವೆ. 10-14ರ ಸ್ಥಾನದಲ್ಲಿರುವ ಐದು ರಾಜ್ಯಗಳು ಪರ್ಫಾರ್ಮರ್ ಎನಿಸಿವೆ. ಉಳಿದವು ಆಸ್ಪಿರೇಶನಲ್ ರಾಜ್ಯಗಳಾಗಿವೆ.

ಹಿಂದುಳಿದ ರಾಜ್ಯಗಳಲ್ಲೊಂದೆಂದು ಕರೆಯಿಸಿಕೊಳ್ಳುವ ಒಡಿಶಾ ಹಣಕಾಸು ಆರೋಗ್ಯ ಸೂಚ್ಯಂಕದಲ್ಲಿ ಅಗ್ರಸ್ಥಾನ ಪಡೆದು ಅಚ್ಚರಿ ಮೂಡಿಸಿದೆ. ಒಡಿಶಾ ಜೊತೆ ಗೋವಾ ಮತ್ತು ಜಾರ್ಖಂಡ್ ರಾಜ್ಯಗಳು ಅಚೀವರ್ ಶ್ರೇಣಿ ಪಡೆದಿವೆ. ಪಂಜಾಬ್ ರಾಜ್ಯ ಕೊನೆಯ ಸ್ಥಾನ ಪಡೆದಿದೆ. ಈ 18 ರಾಜ್ಯಗಳನ್ನು ಹೊರತುಪಡಿಸಿ, ಉಳಿದ ಈಶಾನ್ಯ ಮತ್ತು ಹಿಮಾಲಯ ಭಾಗದ ರಾಜ್ಯಗಳನ್ನು ಪ್ರತ್ಯೇಕ ಪಟ್ಟಿಗೆ ಸೇರಿಸಲಾಗಿದೆ. ಈ ಪ್ರತ್ಯೇಕ ಪಟ್ಟಿಯಲ್ಲಿ ಅರುಣಾಚಲಪ್ರದೇಶ ಅಗ್ರಕ್ರಮಾಂಕ ಪಡೆದಿದೆ. 2023-24ರ ಸಾಲಿನ ವರ್ಷದ ದತ್ತಾಂಶದ ಆಧಾರದ ಮೇಲೆ ಫಿಸ್ಕಲ್ ಹೆಲ್ತ್ ಇಂಡೆಕ್ಸ್ 2026 ರೂಪಿಸಲಾಗಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿ ಹೊಂದಿರುವ ಕರ್ನಾಟಕದಲ್ಲಿ 470 ಹಳ್ಳಿಗಳಲ್ಲಿ ಈಗಲೂ ಇಲ್ಲ ಮೊಬೈಲ್ ಸಂಪರ್ಕ

ನೀತಿ ಆಯೋಗ್ ಫಿಸ್ಕಲ್ ಹೆಲ್ತ್ ಇಂಡೆಕ್ಸ್ 2026, ರಾಜ್ಯಗಳು ಹಾಗೂ ಫಿಸ್ಕಲ್ ಸ್ಕೋರ್

  1. ಒಡಿಶಾ: 73.1
  2. ಗೋವಾ: 54.7
  3. ಜಾರ್ಖಂಡ್: 50.5
  4. ಗುಜರಾತ್: 49.9
  5. ಮಹಾರಾಷ್ಟ್ರ: 45
  6. ಛತ್ತೀಸ್​ಗಡ್: 44.3
  7. ತೆಲಂಗಾಣ: 44.3
  8. ಉತ್ತರಪ್ರದೇಶ: 41.9
  9. ಕರ್ನಾಟಕ: 41.7
  10. ಮಧ್ಯಪ್ರದೇಶ: 37.8
  11. ಹರ್ಯಾಣ: 34.5
  12. ಬಿಹಾರ: 30.9
  13. ತಮಿಳುನಾಡು: 29.8
  14. ರಾಜಸ್ಥಾನ್: 27.6
  15. ಕೇರಳ: 24.8
  16. ಪಶ್ಚಿಮ ಬಂಗಾಳ: 23.8
  17. ಆಂಧ್ರಪ್ರದೇಶ: 23.1
  18. ಪಂಜಾಬ್: 12.4

ವಿತ್ತೀಯ ಆರೋಗ್ಯಕ್ಕೆ ಐದು ಮಾನದಂಡಗಳು

ಫಿಸ್ಕಲ್ ಹೆಲ್ತ್ ಇಂಡೆಕ್ಸ್ ರಚಿಸಲು ಐದು ಪ್ರಮುಖ ಮಾನದಂಡಗಳನ್ನು ಇಡಲಾಗಿದೆ. ಕಂದಾಯ ಕ್ರೋಢೀಕರಣ, ವೆಚ್ಚದ ಗುಣಮಟ್ಟ, ಹಣಕಾಸು ಕಾಳಜಿ, ಸಾಲ ನಿರ್ವಹಣೆ, ಸಾಲ ಸುಸ್ಥಿರತೆ, ಈ ಐದು ವಿಚಾರಗಳಲ್ಲಿ ರಾಜ್ಯಗಳು ಎಷ್ಟು ಜವಾಬ್ದಾರಿಯುತವಾಗಿ ವರ್ತಿಸುತ್ತವೆ ಎಂಬುದನ್ನು ಗಮನಿಸಿ ಸ್ಕೋರ್ ಕೊಡಲಾಗುತ್ತದೆ.

ಇದನ್ನೂ ಓದಿ: 18 ವರ್ಷ ಅಡೋಬ್ ಸಿಇಒ ಆಗಿದ್ದ ಭಾರತ ಮೂಲದ ಶಾಂತನು ನಾರಾಯಣ್ ರಾಜೀನಾಮೆ

ಕರ್ನಾಟಕದ ಹಣಕಾಸು ಶಿಸ್ತು ಹೇಗಿದೆ?

ನೀತಿ ಆಯೋಗ್​ನ ಈ ಫಿಸ್ಕಲ್ ಹೆಲ್ತ್ ಇಂಡೆಕ್ಸ್ ಪ್ರಕಾರ 2023-24ರಲ್ಲಿ ಕರ್ನಾಟಕದ ಹಣಕಾಸು ಆರೋಗ್ಯ ಪರಿಸ್ಥಿತಿಯಲ್ಲಿ ಹೆಚ್ಚೇನೂ ವ್ಯತ್ಯಯ ಆಗಿಲ್ಲ. ಸರ್ಕಾರದ ವೆಚ್ಚದ ಗುಣಮಟ್ಟವು ಇತರ ಉನ್ನತ ರಾಜ್ಯಗಳಿಗಿಂತ ಉತ್ತಮವಾಗಿದೆ. ಕಂದಾಯ ಕ್ರೋಢೀಕರಣವೂ ಕೂಡ ಸಮರ್ಪಕವಾಗಿದೆ.

ಆದರೆ, ಜಿಡಿಪಿ ಮತ್ತು ವಿತ್ತೀಯ ಕೊರತೆ ಅಂತರ 2022-23ರಲ್ಲಿ ಶೇ. 2.05 ಇದ್ದದ್ದು 2023-24ರಲ್ಲಿ ಶೇ. 2.55ಕ್ಕೆ ಏರಿದೆ. ಆ ವರ್ಷ ಕಂದಾಯ ಕ್ರೋಢೀಕರಣ ಕಡಿಮೆಗೊಂಡಿದ್ದು ಅದಕ್ಕೆ ಕಾರಣ ಎನ್ನಲಾಗಿದೆ. ಇನ್ನು ಜಿಡಿಪಿ ಮತ್ತು ಸಾಲದ ಅನುಪಾತ 2023-24ರಲ್ಲಿ ಹೆಚ್ಚಾಗಿದೆ. ಬಾಕಿ ಇರುವ ಸಾಲ ಜಿಡಿಪಿಯ ಶೇ. 23.49ರಷ್ಟಿದೆ. ಆದರೆ, 2026-27ನೇ ಸಾಲಿನ ಬಜೆಟ್​ನಲ್ಲಿ ಈ ಸಾಲ ಮತ್ತು ಜಿಡಿಪಿ ಅನುಪಾ ಶೇ. 25ಕ್ಕಿಂತ ಹೆಚ್ಚಿನ ಮಟ್ಟಕ್ಕೆ ಹೋಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಏಕಕಾಲದಲ್ಲಿ ಎರಡು ಸರಣಿಗಳನ್ನು ಆಡಲಿದೆ ಟೀಂ ಇಂಡಿಯಾ

Source link

Exit mobile version