Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ

ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 7ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ದೇವಸ್ಥಾನಕ್ಕೆ ತೆರಳಿ ದರ್ಶನವನ್ನು ಮಾಡಿ. ಈ ದಿನ ಸಾಧ್ಯವಾದರೆ ಕೆಂಪು ಬಣ್ಣದ ಬಟ್ಟೆ ಧರಿಸಬೇಡಿ ಮತ್ತು ಮೌನವಾಗಿರಲು ಪ್ರಯತ್ನಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಅನಾರೋಗ್ಯ ಸಮಸ್ಯೆಗಳು ಆತಂಕಕ್ಕೆ ಕಾರಣ ಆಗಬಹುದು. ಒಂದು ವೇಳೆ ಈಗಾಗಲೇ ವೈದ್ಯರ ಬಳಿ ತೋರಿಸಿಕೊಂಡಿದ್ದರೂ ಸಮಸ್ಯೆ ಉಲ್ಬಣ ಆಗಿ, ಆತಂಕ ಸೃಷ್ಟಿ ಆಗಬಹುದು. ನಿರಾಂತಕವಾಗಿ ಆಗಬಹುದು ಎಂದುಕೊಂಡಿದ್ದ ಕೆಲವು ಕೆಲಸಗಳಿಗೆ ಅಡೆತಡೆಗಳು ಕಾಣಿಸಿಕೊಳ್ಳಬಹುದು….

Read More

ಕಲ್ಲು ತೂರಾಟ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಮತ್ತೊಂದು ವಿವಾದ: ಮಸೀದಿ ಕಾಂಪೌಂಡ್‌ ಮೇಲೆ ಮಗನಿಂದ ಜೈ ಶ್ರೀರಾಮ್‌ ಬರಹ ಬರೆಸಿದ ತಂದೆ

ಬಾಗಲಕೋಟೆ, (ಮಾರ್ಚ್ 03): ಶಿವಾಜಿ ಜಯಂತಿ ಮೆರವಣಿ ವೇಳೆ ಕಲ್ಲು ತೂರಾಟ ಪ್ರಕರಣ (Stone Pelting Case) ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ (Bagalkot) ಮತ್ತೊಂದು ಕೋಮು ಸೌಹಾರ್ದತೆ ಹಾಳುವ ಮಾಡುವ ಘಟನೆ ನಡೆದಿದೆ. ಹೌದು… ಮಸೀದಿ ಗೋಡೆ ಮೇಲೆ ವ್ಯಕ್ತಿಯೋರ್ವ ತನ್ನ ಮಗನ ಕೈಯಿಂದ ಜೈ ಶ್ರೀರಾಮ್‌ ಎಂದು ಬರೆಯಿಸಿದ್ದು, ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ. ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್‌ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,…

Read More

ಕೇರಳದ ಕೊಚ್ಚಿಯಲ್ಲಿ ನಿಂತಿದೆ ಇರಾನ್​ನ ಐರಿಸ್ ಲವನ್ ಹಡಗು; ಐರಿಸ್ ದೇನಾ ದಾಳಿಗೂ ಮುನ್ನ ಆಗಿದ್ದೇನು?

ನವದೆಹಲಿ, ಮಾರ್ಚ್ 6: ಶ್ರೀಲಂಕಾದ ಬಳಿ ಅಮೆರಿಕ ಇರಾನಿನ ಐರಿಸ್ ದೇನಾ (IRIS Dena) ಹಡಗಿನ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸಾಕಷ್ಟು ಜನರು ಮೃತಪಟ್ಟಿದ್ದರು. ಇದಕ್ಕೂ ಕೆಲವು ದಿನಗಳ ಮೊದಲು ಇರಾನ್ (Iran War) ಕೇರಳದ ಕೊಚ್ಚಿಯಲ್ಲಿ ಮತ್ತೊಂದು ಇರಾನಿನ ಹಡಗಾದ ಐರಿಸ್ ಲವನ್ ಅನ್ನು ನಿಲ್ಲಿಸಲು (ಡಾಕ್ ಮಾಡಲು) ಭಾರತವನ್ನು ಸಂಪರ್ಕಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೊಚ್ಚಿಯಲ್ಲಿ ಆ ಹಡಗಿನ ಡಾಕಿಂಗ್​ಗೆ ಭಾರತವೂ ಅವಕಾಶ ನೀಡಿತ್ತು. ಈಗಲೂ ಇರಾನಿನ ಆ ಹಡಗು ಕೊಚ್ಚಿಯಲ್ಲಿಯೇ…

Read More

IND vs NZ: ಭಾರತ- ನ್ಯೂಜಿಲೆಂಡ್ ಫೈನಲ್ ಕಾಳಗ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

2026 ರ ಟಿ20 ವಿಶ್ವಕಪ್ ಫೈನಲ್ (T20 World Cup 2026 Final) ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾದುಕುಳಿತಿದ್ದಾರೆ. ಆರಂಭದಿಂದಲೂ ಪ್ರಶಸ್ತಿ ಸ್ಪರ್ಧಿ ಎಂದು ಪರಿಗಣಿಸಲಾಗಿರುವ ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ…

Read More

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ಹಾಸನ, ಮಾರ್ಚ್​ 06: ಬಾರ್ ಎದುರು ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್​​​ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ ಆಗಿತ್ತು. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಂಬಂಧಿಕರು ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ…

Read More

ಮತ್ತೆ ಕಿರಿಕ್ ಮಾಡಿಕೊಂಡ ರಜತ್ ಕಿಶನ್; ಎಫ್​ಐಆರ್​ ದಾಖಲು

ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ (Rajath Kishan) ಅವರು ಪದೇಪದೇ ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ಡಾಗ್ ಸತೀಶ್ (Dog Sathish) ವಿಷಯದಲ್ಲಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಸತೀಶ್ ಜೊತೆ ಸ್ನೇಹ ಮಾಡಿದವರಿಗೆ ಬೆದರಿಕೆ ಸಂದೇಶ ಕಳಿಸಿದ ಆರೋಪ ರಜತ್ ಮೇಲೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR) ದಾಖಲಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪದ ಮೇಲೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರು…

Read More

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ವಿಜಯಪುರ, ಮಾರ್ಚ್​ 06: ಐದು ವರ್ಷದ ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ (Father) ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ತಂದೆಯೇ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನಡೆದಿದ್ದೇನು? ಹೆಂಡತಿ ಮೇಲಿನ ವೈಮನಸ್ಸಿನಿಂದಾಗಿ ತನ್ನ ಐದು…

Read More

ಸುಖೋಯ್ ಯುದ್ಧವಿಮಾನ ಅಪಘಾತ; ಆಪರೇಷನ್ ಸಿಂಧೂರ್​​ನಲ್ಲಿ ಭಾಗಿಯಾಗಿದ್ದ ಪೈಲಟ್ ಸೇರಿ ಇಬ್ಬರು ಸಾವು

ನವದೆಹಲಿ, ಮಾರ್ಚ್ 6: ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಸುಖೋಯ್ (Su-30MKI) ಫೈಟರ್ ಜೆಟ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಆ ಯುದ್ಧವಿಮಾನಕ್ಕಾಗಿ ಐಎಎಫ್​ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಆ ಯುದ್ಧವಿಮಾನ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಅಪಘಾತಕ್ಕೀಡಾಗಿರುವುದು ದೃಢಪಟ್ಟಿದೆ. ಇಬ್ಬರು ಭಾರತೀಯ ವಾಯುಪಡೆಯ (IAF) ಪೈಲಟ್‌ಗಳಾದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಸಾವನ್ನಪ್ಪಿದ್ದಾರೆ. ಸುಖೋಯ್ ಯುದ್ಧವಿಮಾನದ ಅಪಘಾತದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಮೃತಪಟ್ಟಿರುವ…

Read More

ನಾಯಿ ವಾಕಿಂಗ್ ವಿಚಾರಕ್ಕೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಶ್ವಾನ ಜಗಳ

ಬೆಂಗಳೂರು, (ಮಾರ್ಚ್ 06): ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ, ನೋಡ-ನೋಡ್ತಿದ್ದಂತೆ ಬಡಿದಾಡುವ ಹಂತಕ್ಕೆ ಹೋಗಿದೆ. ವ್ಯಾಯಾಮ ಮಾಡ್ತಿದ್ದ ಏಳೆಂಟು ಜನ ಹಿರಿಯ ನಾಗರೀಕರು(senior citizen)  ಏಕಾಏಕಿ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಕೆಳಕ್ಕೆ ಉರುಳಿ ಬಿದ್ದರೂ ಸಹ ಬಿಡದೆ ಕಾಲಿನಿಂದ ಒದ್ದು ದೌರ್ಜನ್ಯ ನಡೆಸಿದ್ದಾರೆ. ಈ ಘಟನೆ ಬೆಂಗಳೂರಿನ (Bengaluru)  ವರ್ತೂರಿನ ಬ್ರಿಗೇಡ್ ಈಥೋಪಿಯ ಈಸ್ಟ್ ಆಂಟೊಪಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದ್ದು, ಗಲಾಟೆ ವೇಳೆ ಹಲ್ಲೆಗೊಳಗಾಗಿ ನೊಂದ ತರಣ್ ಎನ್ನುವರು…

Read More