ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ; ಸಿಡಿದೆದ್ದ ಕರವೇ – Kannada News | Allegations of neglecting Kannada in Railway examinations resurface

ಬೆಂಗಳೂರು, ಡಿಸೆಂಬರ್​​ 18: ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ (exam) ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna) ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ

ಈ ಕುರಿತಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಮಾತನಾಡಿದ್ದು, ರೈಲ್ವೆ ಬಡ್ತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಹುಬ್ಬಳ್ಳಿ, ಮೈಸೂರಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಮೂರು ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ ಬೆಂಗಳೂರಲ್ಲಿ ಹಿಂದಿ, ಇಂಗ್ಲಿಷ್​​ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಈ ತಾರತಮ್ಯ ಕನ್ನಡದ ಕಡೆಗಣನೆ ತುಂಬಾ ನೋವಿನ ಸಂಗತಿ. ಈ ಕೂಡಲೇ ಪರೀಕ್ಷೆ ರದ್ದುಗೊಳಿಸಿ ಎಲ್ಲಾ ಪ್ರಾದೇಶಿಕ ಭಾಷೆಯಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು, ಇಲ್ಲವಾದಲ್ಲಿ ಕರವೇ ಮತ್ತೆ ಪರೀಕ್ಷಾ ಸ್ಥಳಕ್ಕೆ ನುಗ್ಗಿ ಪರೀಕ್ಷೆ ನಡೆಸದಂತೆ
ತಡೆಯುವ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ಕಾರ್ಯಾಗಾರ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜುಲೈ 2009ನೇ ಇಸವಿಯಲ್ಲಿ ಬೆಂಗಳೂರಿನ ಕಮಲ ಬಾಯಿ ಶಾಲೆಯಲ್ಲಿ ಡಿ ಗ್ರೂಪ್ ಹುದ್ದೆಗಾಗಿ ನಡೆಯುತ್ತಿದ್ದ ಪರೀಕ್ಷಾ ಕೊಠಡಿಗೆ ನುಗ್ಗಿ ಪ್ರಶ್ನೆ ಪ್ರತ್ರಿಕೆಯನ್ನು ಹರಿದು ಹಾಕಿದ್ದರು. ಈ ಹಿನ್ನಲೆ ಲಾಟಿ ಏಟು ಹಾಗೂ ಸೆರೆವಾಸ ಅನುಭವಿಸಿದ್ದ ಫಲವಾಗಿ ನಮ್ಮ ಹೋರಾಟಕ್ಕೆ ಮಣಿದು ಆ ಸಂದರ್ಭದಲ್ಲಿ ರೈಲ್ವೆ ಸಚಿವರಾಗಿದ್ದ ಮಮತಾ ಬ್ಯಾನರ್ಜಿ ಅವರು ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಟ್ಟಿದ್ದರು ಎಂದರು.

ಇದನ್ನೂ ಓದಿ: ಧಾರವಾಡ ಸರ್ಕಾರಿ ಹುದ್ದೆಗಳ ಭರ್ತಿ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿಗೆ ಅವಕಾಶ ನೀಡಿ ಹೈಕೋರ್ಟ್​ ಆದೇಶ

ಈಗ ನಮ್ಮ ರಾಜ್ಯದವರೇ ಆದ ವಿ.ಸೋಮಣ್ಣ ಮಂತ್ರಿಗಳಾಗಿದ್ದರು ಕೂಡ ಈ ತಾರತಮ್ಯ ಕನ್ನಡದ ಕಡೆಗಣನೆ ತುಂಬಾ ನೋವಿನ ಸಂಗತಿ. ಈ ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತು ತಮ್ಮ ನಿಲುವನ್ನು ಹಿಂತೆಗೆದುಕೊಂಡು ಈ ಕೂಡಲೇ ಪರೀಕ್ಷೆ ರದ್ದುಗೊಳಿಸಿ ಎಲ್ಲಾ ಪ್ರಾದೇಶಿಕ ಭಾಷೆಯಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:10 pm, Thu, 18 December 25

Source link

Margashira Amavasya: ನಾಳೆ ವರ್ಷದ ಕೊನೆಯ ಅಮಾವಾಸ್ಯೆ; ಮಾರ್ಗಶಿರ ಅಮಾವಾಸ್ಯೆಯ ಮಹತ್ವ ಮತ್ತು ಪೂಜಾ ವಿಧಾನ ತಿಳಿಯಿರಿ – Kannada News | Margashira Amavasya: Significance, Rituals and Dosha Remedies

ಹಿಂದೂ ಸಂಸ್ಕೃತಿಯ ಪ್ರಕಾರ ಮಾರ್ಗಶಿರ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಈ ಶುಭ ದಿನದಂದು, ತಮ್ಮ ಪೂರ್ವಜರ ಆತ್ಮಗಳಿಗೆ ಶಾಂತಿ ಸಿಗಲು ಶ್ರಾದ್ಧ ಮತ್ತು ತರ್ಪಣಗಳನ್ನು ಮಾಡಲಾಗುತ್ತದೆ. ಕಾಲ ಸರ್ಪದೋಷದಿಂದ ಬಳಲುತ್ತಿರುವವರು ಈ ದಿನದಂದು ಉಪವಾಸ ಮಾಡಬೇಕು ಎಂದು ವಿದ್ವಾಂಸರು ಹೇಳುತ್ತಾರೆ. ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಮಾರ್ಗಶಿರ ಅಮಾವಾಸ್ಯೆಯ ದಿನದಂದು ಅಶ್ವತ್ಥ ಮರದ ಬಳಿ ದೀಪ ಹಚ್ಚಬೇಕು. ಈ ವರ್ಷ ಮಾರ್ಗಶಿರ ಅಮಾವಾಸ್ಯೆ ಡಿಸೆಂಬರ್ 19, ಶುಕ್ರವಾರದಂದು ಬಂದಿದೆ.

ಮಾರ್ಗಶಿರ ಅಮಾವಾಸ್ಯೆಯ ಶುಭ ಸಮಯ:

ಮಾರ್ಗಶಿರ ಅಮಾವಾಸ್ಯೆ ತಾ.19-12-25 ರಂದು ಬೆಳಗ್ಗೆ 4:59 ಕ್ಕೆ ಪ್ರಾರಂಭವಾಗಿ ಮರುದಿನ 20 ರಂದು ಬೆಳಗ್ಗೆ 07:12 ಕ್ಕೆ ಮುಕ್ತಾಯಗೊಳ್ಳುತ್ತದೆ. ಆದ್ದರಿಂದ ಡಿಸೆಂಬರ್ 19ರಂದು ಮಾರ್ಗಶಿರ ಅಮಾವಾಸ್ಯೆ ಆಚರಿಸಲಾಗುತ್ತದೆ.

ಮಾರ್ಗಶಿರ ಅಮಾವಾಸ್ಯೆಯ ಪೂಜಾ ವಿಧಾನ:

ಈ ದಿನದಂದು ಸೂರ್ಯೋದಯಕ್ಕೆ ಮೊದಲು ಎಚ್ಚರಗೊಂಡು ನದಿಯಲ್ಲಿ ಸ್ನಾನ ಮಾಡುವುದರಿಂದ ವಿಶೇಷ ಫಲಿತಾಂಶ ಬರುತ್ತದೆ. ಈ ದಿನದಂದು ವಿಷ್ಣುವನ್ನು ಪೂಜಿಸಬೇಕು. ವಿಷ್ಣುವನ್ನು ಗಂಗಾ ನೀರಿನಿಂದ ಪೂಜಿಸಬೇಕು. ವಿಷ್ಣುವಿನ ವಿಗ್ರಹಕ್ಕೆ ನೈವೇದ್ಯ ಅರ್ಪಿಸಿ ಆರತಿ ಮಾಡಬೇಕು. ಮಾರ್ಗಶಿರ ಅಮಾವಾಸ್ಯೆಯಂದು ವಿಷ್ಣುವನ್ನು ಅತ್ಯಂತ ಭಕ್ತಿಯಿಂದ ಪೂಜಿಸಿ ಉಪವಾಸ ಮಾಡುವುದರಿಂದ ಜಾತಕದಲ್ಲಿನ ಕಾಲಸರ್ಪ ದೋಷ ದೂರವಾಗುತ್ತದೆ. ಈ ದಿನದಂದು ಸೂರ್ಯನನ್ನು ಪ್ರಾರ್ಥಿಸುವುದು ಶುಭ. ಅಲ್ಲದೆ, ಈ ದಿನದಂದು ಹಿಟ್ಟಿನ ದೀಪಗಳು ಮತ್ತು ಕುಂಭ ದೀಪಗಳನ್ನು ಬೆಳಗಿಸಬೇಕು.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಶನಿ ದೋಷ ಮತ್ತು ಪಿತೃ ದೋಷ ಇರುವವರು ಬಡವರಿಗೆ ಕಂಬಳಿ, ಎಳ್ಳು ಮತ್ತು ಇತರ ಆಹಾರ ಧಾನ್ಯಗಳನ್ನು ದಾನ ಮಾಡಬೇಕು. ಅಮಾವಾಸ್ಯೆಯನ್ನು ಆಧ್ಯಾತ್ಮಿಕವಾಗಿ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಈ ಶುಭ ದಿನದಂದು ಉಪವಾಸ ಮಾಡುವುದರಿಂದ ಪೂರ್ವಜರ ಆತ್ಮಗಳಿಗೆ ಶಾಂತಿ ಸಿಗುವುದಲ್ಲದೆ, ಬ್ರಹ್ಮ, ಇಂದ್ರ, ದೆವ್ವ, ಸೂರ್ಯ, ಬೆಂಕಿ, ಗಾಳಿ, ಋಷಿಗಳು, ಪಕ್ಷಿಗಳು ಮತ್ತು ಪ್ರಾಣಿಗಳಿಗೂ ಶಾಂತಿ ಸಿಗುತ್ತದೆ. ಅಮಾವಾಸ್ಯ ಪೂಜೆ ಮಾಡುವಾಗ, ಗಜೇಂದ್ರ ಮೋಕ್ಷ ಕಥೆಯನ್ನು ಓದಬೇಕು. ಈ ದಿನ ಆಹಾರವನ್ನು ದಾನ ಮಾಡುವುದರಿಂದ ಪೂರ್ವಜರ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗಿದೆ.

ಲೇಖನ: ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings

ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill)  ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ.

ವಿರೋಧ ಪಕ್ಷದ ಸಂಸದರು ಭಾರಿ ಗದ್ದಲ ಎಬ್ಬಿಸಿದರು. ಸರ್ಕಾರವು ಮಹಾತ್ಮ ಗಾಂಧಿಯವರನ್ನು ಅವಮಾನಿಸಿದೆ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (MGNREGA) ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದವು.

2009 ರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಹಾತ್ಮಾ ಗಾಂಧಿಯವರ ಹೆಸರನ್ನು NREGA ಯೋಜನೆಗೆ ಸೇರಿಸಲಾಗಿತ್ತು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಕ್ರಮವನ್ನು ಸಮರ್ಥಿಸಿಕೊಂಡರು.

ಮತ್ತಷ್ಟು ಓದಿ: Video: ಸಂಸತ್ತಿನ ಒಳಗೆ ಸಿಗರೇಟ್ ಸೇದಿದ್ರಾ ಟಿಎಂಸಿ ಸಂಸದ? ಬಿಜೆಪಿ ಹಂಚಿಕೊಂಡ ವಿಡಿಯೋದಲ್ಲೇನಿದೆ?

ಮೋದಿ ಸರ್ಕಾರವು ಯೋಜನೆಗಳನ್ನು ನಿರಂಕುಶವಾಗಿ ಮರುನಾಮಕರಣ ಮಾಡುತ್ತದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಹಿರಿಯ ಬಿಜೆಪಿ ನಾಯಕರು, ನೆಹರು-ಗಾಂಧಿ ಅವರ ಹೆಸರಿನ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದ್ದಾರೆ.

ಗ್ರಾಮೀಣ ಉದ್ಯೋಗ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿದ್ದಕ್ಕಾಗಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಯಲ್ಲಿ ಗದ್ದಲ ಎಬ್ಬಿಸಿದರು, ಮಸೂದೆಯ ಪ್ರತಿಗಳನ್ನು ಹರಿದು ಸ್ಪೀಕರ್ ಕುರ್ಚಿಯ ಕಡೆಗೆ ಎಸೆದರು.

ಹಾಗಾದರೆ ಹಳೆಯ ಯೋಜನೆಗಿಂತ ಈ ಹೊಸ ಮಸೂದೆಯಲ್ಲಿ ಏನಿದೆ? ಜನಸಾಮಾನ್ಯರಿಗೆ ಇದರಿಂದ ಲಾಭವೇ ಅಥವಾ ನಷ್ಟವೇ? ವಿರೋಧ ಪಕ್ಷಗಳು ಇದನ್ನು ಏಕೆ ವಿರೋಧಿಸುತ್ತಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಏನಿದು  MGNREGA?
ಹೊಸ ಮಸೂದೆಯ ಬಗ್ಗೆ ತಿಳಿಯುವ ಮುನ್ನ, ಇಷ್ಟು ವರ್ಷ ನಮ್ಮ ಹಳ್ಳಿಗಳಲ್ಲಿ ಚಾಲ್ತಿಯಲ್ಲಿದ್ದ ಯೋಜನೆಯ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ (MGNREGA) ಎನ್ನುವುದು ಭಾರತದ ಗ್ರಾಮೀಣ ಭಾಗದ ಜನರ ಜೀವನೋಪಾಯ ಭದ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಒಂದು ಕ್ರಾಂತಿಕಾರಿ ಯೋಜನೆಯಾಗಿದೆ.
ಇದು ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಪಡಿಸಿದ ಕೂಲಿ ಉದ್ಯೋಗವನ್ನು ನೀಡುವ ಗುರಿ ಹೊಂದಿದೆ.

ಏನಿದು ಹೊಸ ಮಸೂದೆ?
ಈಗ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಹೊಸ ಮಸೂದೆಯನ್ನು ಮಂಡಿಸಿದ್ದಾರೆ. ಇದರ ಪ್ರಮುಖ ಉದ್ದೇಶ ಮೇಲೆ ವಿವರಿಸಿದ 2005ರ ಹಳೆಯ MGNREGA ಕಾಯ್ದೆಯನ್ನು ರದ್ದುಗೊಳಿಸಿ, ಹೊಸ ನಿಯಮಗಳೊಂದಿಗೆ ‘VB-G RAM G’ ಕಾಯ್ದೆಯನ್ನು ಜಾರಿಗೆ ತರುವುದಾಗಿದೆ.

125 ದಿನಗಳ ಉದ್ಯೋಗ ಗ್ಯಾರಂಟಿ: ಪ್ರಸ್ತುತ MGNREGA ಅಡಿಯಲ್ಲಿ ವಾರ್ಷಿಕ 100 ದಿನಗಳ ಕೆಲಸ ನೀಡಲಾಗುತ್ತಿದೆ. ಹೊಸ ಮಸೂದೆಯ ಪ್ರಕಾರ ಇದನ್ನು 125 ದಿನಗಳಿಗೆ ಹೆಚ್ಚಿಸಲಾಗುವುದು.
ಕೆಲಸದ ಸ್ವರೂಪ: ಕೇವಲ ಗುಂಡಿ ತೆಗೆಯುವುದಲ್ಲದೆ ನಾಲ್ಕು ಭಾಗಗಳಿರುತ್ತವೆ
ಜಲ ಭದ್ರತೆ
ಗ್ರಾಮೀಣ ಮೂಲಸೌಕರ್ಯ
ಜೀವನೋಪಾಯ ಸಂಬಂಧಿತ ಮೂಲಸೌಕರ್ಯ
ಹವಾಮಾನ ವೈಪರೀತ್ಯ ತಡೆಗಟ್ಟುವ ಕಾಮಗಾರಿಗಳು

ಕೃಷಿ ಕೆಲಸಕ್ಕೆ ಅಡ್ಡಿಯಿಲ್ಲ:  ಬಿತ್ತನೆ ಸಮಯದಲ್ಲಿ ರೈತರಿಗೆ ಕೂಲಿ ಕಾರ್ಮಿಕರ ಕೊರತೆಯಾಗದಂತೆ ನೋಡಿಕೊಳ್ಳಲು, ವರ್ಷದಲ್ಲಿ ಗರಿಷ್ಠ 60 ದಿನಗಳ ಕಾಲ ಈ ಯೋಜನೆಯಡಿ ಕೆಲಸವನ್ನು ಸ್ಥಗಿತಗೊಳಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇರುತ್ತದೆ.

ಈ ಯೋಜನೆಯಿಂದ ಯಾರಿಗೆ ಹೆಚ್ಚು ಲಾಭ?
ಹೊಸ ಮಸೂದೆಯು ಜಾರಿಯಾದರೆ ಗ್ರಾಮೀಣ ಭಾಗದ ಈ ಕೆಳಗಿನ ವರ್ಗಗಳಿಗೆ ನೇರ ಲಾಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.

ಗ್ರಾಮೀಣ ಕೂಲಿ ಕಾರ್ಮಿಕರು: ವರ್ಷಕ್ಕೆ ಹೆಚ್ಚುವರಿ 25 ದಿನಗಳ ಕೆಲಸ ಸಿಗುವುದರಿಂದ, ಪ್ರತಿ ಕುಟುಂಬದ ವಾರ್ಷಿಕ ಆದಾಯದಲ್ಲಿ ಏರಿಕೆಯಾಗಲಿದೆ.

ರೈತರು: ಸುಗ್ಗಿ ಮತ್ತು ಬಿತ್ತನೆ ಸಮಯದಲ್ಲಿ (Harvest Season) ಈ ಯೋಜನೆಯ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸುವುದರಿಂದ, ರೈತರಿಗೆ ಕೃಷಿ ಚಟುವಟಿಕೆಗಳಿಗೆ ಕೂಲಿ ಕಾರ್ಮಿಕರು ಸುಲಭವಾಗಿ ಸಿಗಲಿದ್ದಾರೆ.

ಗ್ರಾಮ ಪಂಚಾಯಿತಿಗಳು: ಕೇವಲ ಮಣ್ಣಿನ ಕೆಲಸ ಮಾಡುವ ಬದಲು, ರಸ್ತೆ, ಕೆರೆ, ಮತ್ತು ಕಾಲುವೆಗಳಂತಹ ‘ಶಾಶ್ವತ ಆಸ್ತಿ’ಗಳನ್ನು ನಿರ್ಮಿಸುವುದರಿಂದ ಹಳ್ಳಿಗಳ ಮೂಲಸೌಕರ್ಯ ಅಭಿವೃದ್ಧಿಯಾಗಲಿದೆ.

ಮಹಿಳೆಯರು: MGNREGA ದಂತೆಯೇ ಈ ಯೋಜನೆಯಲ್ಲೂ ಮಹಿಳೆಯರಿಗೆ ಆದ್ಯತೆ ಮುಂದುವರೆಯಲಿದ್ದು, ಮನೆಯ ಹತ್ತಿರವೇ ಉದ್ಯೋಗ ದೊರೆಯಲಿದೆ.

ಇದಕ್ಕೂ ಮುನ್ನ ಅವರು ಮಸೂದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಸಂಸತ್ತಿನ ಸಂಕೀರ್ಣದೊಳಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಕಾನೂನನ್ನು ಗಾಂಧಿಯವರಿಗೆ ಮಾಡಿದ ಅವಮಾನ ಮತ್ತು ಗ್ರಾಮೀಣ ಭಾರತಕ್ಕೆ ಸಾಮಾಜಿಕ-ಆರ್ಥಿಕ ಪರಿವರ್ತನೆಯನ್ನು ತಂದ ಕೆಲಸ ಮಾಡುವ ಹಕ್ಕಿನ ಮೇಲಿನ ದಾಳಿ ಎಂದು ಕರೆದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

3 ದಿನದ ಹಸುಗೂಸನ್ನು ಬೀದಿಯಲ್ಲಿ ಬಿಟ್ಟು ಹೋದ ಪೋಷಕರು – Kannada News | Karnataka Child Abandonment Crisis: 3 Day Old Baby Found in Shivamogga Roadside

ಶಿವಮೊಗ್ಗ, ಡಿ.18: ಮಕ್ಕಳಿಲ್ಲ ಎಂದು ಕೂರಗುತ್ತಿರುವ ಅದೆಷ್ಟೋ ದಂಪತಿಗಳು ಇಂದಿಗೂ ಮಕ್ಕಳಿಗಾಗಿ ಹಂಬಲಿಸುತ್ತಿದ್ದಾರೆ. ಇನ್ನು ಕೆಲವೊಂದು ಜನ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದಾರೆ. ಮಕ್ಕಳು ಬೇಡ ಎಂದ ಮೇಲೆ ಯಾಕೆ ಮಗು ಮಾಡಿಕೊಳ್ಳಬೇಕು. ಮಕ್ಕಳನ್ನು ಹೆತ್ತು ಹೀಗೆ ಬೀದಿಯಲ್ಲಿ ಎಸೆಯುವ ಪ್ರವೃತ್ತಿ ಕರ್ನಾಟಕದ ಹಲವೆಡೆ ನಡೆಯುತ್ತಿದೆ. ರಾಜ್ಯದಲ್ಲಿ ಇತ್ತೀಚಿಗೆ ಅನಾಥ ಮಕ್ಕಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದರ ನಡುವೆ ನವಜಾತ ಶಿಶುಗಳನ್ನು ಬೀದಿಯಲ್ಲಿ ಎಸೆದು ಹೋಗಿರುವ ಸುಮಾರು ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಘಟನೆ ಸೇರಿಕೊಂಡಿದೆ. ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.

ಮಲ್ಲಾಪುರ ಗ್ರಾಮದಲ್ಲಿ 3 ದಿನದ ಹಸುಗೂಸನ್ನು ರಸ್ತೆ ಪಕ್ಕದಲ್ಲಿ ಬಿಟ್ಟು ಹೋಗಿದ್ದಾರೆ. ಕುಶ ದೊಡ್ಡಪ್ಪ ಎಂಬುವವರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ತಮ್ಮ ಮಗ ತಿಪ್ಪೇಶ್​ಗೆ ಚಿಕಿತ್ಸೆ ಕೊಡಿಸಿ ಊರಿಗೆ ತೆರಳ್ತಿದ್ದ ವೇಳೆ, ಮಲ್ಲಾಪುರ ಬಳಿ ಮೂತ್ರ ವಿಸರ್ಜನೆಗೆಂದು ವಾಹನ ನಿಲ್ಲಿಸಿದ್ದಾರೆ. ಸೋಮವಾರ ರಾತ್ರಿ ಗಂಟೆ 10.45ಕ್ಕೆ ಈ ಘಟನೆ ನಡೆದಿದೆ. ಈ ವೇಳೆ ರಸ್ತೆ ಪಕ್ಕದಲ್ಲಿ ಮಗು ಅಳುತ್ತಿದ್ದ ಶಬ್ದ ಕೇಳಿದೆ. ತಕ್ಷಣ ಕುಶ ಅವರು ತಮ್ಮ ಅತ್ತಿಗೆಯ ಜತೆಗೆ ಸ್ಥಳಕ್ಕೆ ಹೋಗಿದ್ದಾರೆ. ಅಲ್ಲಿ ಹೋಗಿ ನೋಡಿದಾಗ ಅವರಿಗೊಂದು ಶಾಕ್​​​ ಕಾದಿತ್ತು. ಕಲ್ಲು, ಮುಳ್ಳಿನ ರಾಶಿಯಲ್ಲಿ ಗಂಡು ಶಿಶುವೊಂದು ಪತ್ತೆಯಾಗಿದೆ.

ಇದನ್ನೂ ಓದಿ: ಕರ್ನಾಟಕ ಅಡಕೆ ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಕೈಗೊಂಡ ಕ್ರಮಗಳೇನು? ಕೇಂದ್ರ ಕೃಷಿ ಸಚಿವ ಹೇಳಿದ್ದೇನು?

ಇನ್ನು ಈ ಶಿಶುವನ್ನು ಒಬ್ಬಂಟಿಯಾಗಿ ಯಾರೋ ಬಿಟ್ಟು ಹೋಗಿದ್ದಾರೆ ಎಂದು ಅಲ್ಲಿಯೇ ಮನೆಯವರನ್ನು ಹುಡುಕಾಡಿದ್ದಾರೆ. ಮಗುವಿನ ಬಗ್ಗೆ ಸುತ್ತಮುತ್ತಲಿನ ಮನೆಗಳಲ್ಲಿಯೂ ವಿಚಾರಿಸಿದ್ದಾರೆ. ಆದರೆ ಯಾರು ಕೂಡ ಮಗುವಿನ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದೀಗ ಈ ಬಗ್ಗೆ ಹೊಳೆಹೊನ್ನೂರು ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಗುವಿನ ಕುಟುಂಬಕ್ಕಾಗಿ ಹುಡುಕಾಟ ನಡೆಯುತ್ತಿದೆ. ಪೊಲೀಸರು ಕೂಡ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ತನಿಖೆಯನ್ನು ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Google Internship 2026: ಗೂಗಲ್​ ಕಂಪನಿಯಲ್ಲಿ ಕೆಲಸ ಪಡೆಯುವುದು ನಿಮ್ಮ ಕನಸೇ? ಹಾಗಿದ್ರೆ ಈ ಕೂಡಲೇ ಈ ಇಂಟರ್ನ್‌ಶಿಪ್​ಗೆ ಅರ್ಜಿ ಸಲ್ಲಿಸಿ – Kannada News | Google 2026 Student Research Internship: Apply Now! Eligibility and Process

ಗೂಗಲ್ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್

ಗೂಗಲ್ 2026ರ ಸ್ಟೂಡೆಂಟ್ ರಿಸರ್ಚ್ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಇಂಟರ್ನ್‌ಶಿಪ್​​ಗೆ ಫೆಬ್ರವರಿ 26ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಜ್ಯೂರಿಚ್, ಬರ್ಲಿನ್, ಮ್ಯೂನಿಚ್, ಗ್ರೆನೋಬಲ್, ಫ್ರಾನ್ಸ್, ಪ್ಯಾರಿಸ್, ಅಕ್ರಾ, ನೈರೋಬಿ, ಲಂಡನ್‌ನಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಾರೆ. ಇದರರ್ಥ ಗೂಗಲ್ ರಿಸರ್ಚ್ ಇಂಟರ್ನ್‌ಶಿಪ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳು ಫ್ರಾನ್ಸ್, ಜರ್ಮನಿ, ಸ್ವಿಟ್ಜರ್‌ಲ್ಯಾಂಡ್ ಮತ್ತು ಯುಕೆಯಲ್ಲಿ ಗೂಗಲ್‌ನೊಂದಿಗೆ ಕೆಲಸ ಮಾಡುತ್ತಾರೆ. ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು, ಯಾರು ಅರ್ಜಿ ಸಲ್ಲಿಸಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು Google ವಿದ್ಯಾರ್ಥಿ ಸಂಶೋಧನಾ ಇಂಟರ್ನ್‌ಶಿಪ್​​ಗೆ ಅರ್ಜಿ ಸಲ್ಲಿಸಲು ತಯಾರಿ ನಡೆಸುತ್ತಿದ್ದರೆ, ಮೊದಲು ನಿಮ್ಮ CV ಅಥವಾ ರೆಸ್ಯೂಮ್ ಅಪ್ಡೇಟ್​ ಮಾಡಿ. ನಂತರ, ನೀವು ಈ ಕೆಳಗಿನಂತೆ ಅರ್ಜಿ ಸಲ್ಲಿಸಬಹುದು.

ಇಂಟರ್ನ್‌ಶಿಪ್‌ಗಳಿಗೆ ಅರ್ಜಿಗಳನ್ನು ಗೂಗಲ್ ಕೆರಿಯರ್ಸ್ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಸಲ್ಲಿಸಬಹುದು. Google Careers ವೆಬ್‌ಸೈಟ್‌ನ ಮುಖಪುಟದಲ್ಲಿ ‘Apply’ ವಿಭಾಗದ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ತೋರಿಸಿರುವ ರೆಸ್ಯೂಮ್ ವಿಭಾಗದಲ್ಲಿ ನವೀಕರಿಸಿದ ಸಿವಿ ಅಥವಾ ರೆಸ್ಯೂಮ್ ಅನ್ನು ಅಪ್‌ಲೋಡ್ ಮಾಡಿ. ನಂತರ ಸಿದ್ಧಪಡಿಸಿದ ಪ್ರತಿಲಿಪಿಯನ್ನು ಶಿಕ್ಷಣ ವಿಭಾಗದಲ್ಲಿ ಅಪ್‌ಲೋಡ್ ಮಾಡಿ.

ಪದವಿ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರು:

ಪದವೀಧರ ವಿದ್ಯಾರ್ಥಿಗಳು ಗೂಗಲ್ ವಿದ್ಯಾರ್ಥಿ ಸಂಶೋಧನಾ ಇಂಟರ್ನ್‌ಶಿಪ್‌ಗಳಿಗೂ ಅರ್ಜಿ ಸಲ್ಲಿಸಬಹುದು. ಉದಾಹರಣೆಗೆ, ಕಂಪ್ಯೂಟರ್ ವಿಜ್ಞಾನ, ಭಾಷಾಶಾಸ್ತ್ರ, ಅಂಕಿಅಂಶಗಳು, ಬಯೋಸ್ಟಾಟಿಸ್ಟಿಕ್ಸ್, ಅನ್ವಯಿಕ ಗಣಿತ, ಕಾರ್ಯಾಚರಣೆ ಸಂಶೋಧನೆ, ಅರ್ಥಶಾಸ್ತ್ರ ಅಥವಾ ನೈಸರ್ಗಿಕ ವಿಜ್ಞಾನಗಳಲ್ಲಿ ಪದವಿ, ಸ್ನಾತಕೋತ್ತರ ಅಥವಾ ಪಿಎಚ್‌ಡಿ ಪದವಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಗೂಗಲ್ ವಿದ್ಯಾರ್ಥಿ ಸಂಶೋಧನಾ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಬಹುದು. ಆದಾಗ್ಯೂ, ಅರ್ಜಿದಾರರು ಕಂಪ್ಯೂಟರ್ ವಿಜ್ಞಾನದ ಕನಿಷ್ಠ ಒಂದು ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.

ಗೂಗಲ್ ವಿದ್ಯಾರ್ಥಿ ಸಂಶೋಧನಾ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಗೂಗಲ್ ಡೀಪ್‌ಮೈಂಡ್, ಗೂಗಲ್ ರಿಸರ್ಚ್ ಮತ್ತು ಗೂಗಲ್ ಕ್ಲೌಡ್‌ನಂತಹ ಸಂಶೋಧನಾ ತಂಡಗಳೊಂದಿಗೆ ಕೆಲಸ ಮಾಡಲು ಅವಕಾಶವನ್ನು ಹೊಂದಿರುತ್ತಾರೆ. ವಿದ್ಯಾರ್ಥಿ ಸಂಶೋಧಕರು ಗೂಗಲ್ ಸಂಶೋಧಕರು, ಎಂಜಿನಿಯರ್‌ಗಳು ಮತ್ತು ವಿಜ್ಞಾನಿಗಳೊಂದಿಗೆ ಮುಂದುವರಿದ ತಂತ್ರಜ್ಞಾನಗಳ ಅಭಿವೃದ್ಧಿಗೆ ಸಹಾಯ ಮಾಡುವ ಪರಿಶೋಧನಾ ಯೋಜನೆಗಳಲ್ಲಿ ಕೆಲಸ ಮಾಡುತ್ತಾರೆ.

ಇದನ್ನೂ ಓದಿ: ಐಪಿಎಸ್ ಅಧಿಕಾರಿಯಾಗಲು 15 ಸರ್ಕಾರಿ ಉದ್ಯೋಗ ತೊರೆದ ತೃಪ್ತಿ ಭಟ್; ಯಶಸ್ಸಿನ ಕಥೆ ಇಲ್ಲಿದೆ

ಇಂಟರ್ನ್‌ಶಿಪ್ ನಂತರ ಗೂಗಲ್‌ನಲ್ಲಿ ಕೆಲಸ:

ಗೂಗಲ್ ಇಂಟರ್ನ್‌ಶಿಪ್ ಪೂರ್ಣಗೊಳಿಸಿದ ನಂತರ, ವಿದ್ಯಾರ್ಥಿಗಳು ಗೂಗಲ್‌ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಪಡೆಯಬಹುದು. ವಾಸ್ತವವಾಗಿ, ವೈಜ್ಞಾನಿಕ ಪ್ರಗತಿಯಲ್ಲಿ ಕಂಪನಿಯ ಆದ್ಯತೆಗಳಿಗೆ ಅನುಗುಣವಾಗಿ ಸಂಶೋಧನಾ ಯೋಜನೆಗಳಿಗೆ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳುವ ಮೂಲಕ ಗೂಗಲ್ ಶೈಕ್ಷಣಿಕ ಸಹಯೋಗವನ್ನು ಉತ್ತೇಜಿಸುತ್ತದೆ. ವಿದ್ಯಾರ್ಥಿ ಸಂಶೋಧಕ ಕಾರ್ಯಕ್ರಮವು ಸಂಶೋಧನೆ, ಎಂಜಿನಿಯರಿಂಗ್ ಮತ್ತು ವಿಜ್ಞಾನ ಪಾತ್ರಗಳಲ್ಲಿ ತಂಡಗಳಲ್ಲಿ ಭರವಸೆಯ ಇಂಟರ್ನ್‌ಶಿಪ್ ಅಭ್ಯರ್ಥಿಗಳಿಗೆ ನಿಯೋಜನೆಗಳನ್ನು ಒದಗಿಸುತ್ತದೆ.

ಗೂಗಲ್ ಸ್ಟೂಡೆಂಟ್ ಇಂಟರ್ನ್‌ಶಿಪ್ ಪ್ರೋಗ್ರಾಂ ಬಗ್ಗೆ ತಿಳಿದುಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ – Kannada News | Nidhhi Agerwal Faces Crowd Harassment at Lulu Mall The Raja saab Event in Hyderabad

ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಎಲ್ಲರೂ ಸೆಲ್ಫಿಗೆ ಮುಗಿ ಬೀಳುತ್ತಾರೆ. ಆದರೆ, ಕೆಲವೊಮ್ಮೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾಗ ಅಲ್ಲಿ ಬೇರೆಯದೇ ರೀತಿಯ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಸಿಕ್ಕಿದ್ದೇ ಚಾನ್ಸ್ ಎಂದು ಕಂಡ ಕಂಡಲ್ಲಿ ಮುಟ್ಟುವ ಕಿಡಿಗೇಡಿಗಳೂ ಇದ್ದಾರೆ. ಈಗ ತೆಲುಗು ನಟಿ ನಿಧಿ ಅಗರ್​ವಾಲ್ (Nidhi Agerwal) ಅವರಿಗೂ ಇದೇ ರೀತಿಯ ಅನುಭವ ಆಗಿದೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆ ಹುಟ್ಟುಹಾಕಿದೆ.

ನಿಧಿ ಅವರು ಹುಟ್ಟಿದ್ದು ಆಂಧ್ರದಲ್ಲಿ. ಅವರು ತಮ್ಮ ಶಿಕ್ಷಣವನ್ನು ಬೆಂಗಳೂರಿನಲ್ಲಿ ಮಾಡಿದ್ದಾರೆ. ಹೀಗಾಗಿ, ಅವರಿಗೆ ಕರ್ನಾಟಕದ ಲಿಂಕ್ ಇದೆ. 2017ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಇಸ್ಮಾರ್ಟ್ ಶಂಕರ್’ ಚಿತ್ರದ ಮೂಲಕ ಅವರು ಜನಪ್ರಿಯತೆ ಪಡೆದರು. ಈಗ ಪ್ರಭಾಸ್ ನಟನೆಯ ‘ರಾಜಾಸಾಬ್’ ಸಿನಿಮಾಗೆ ನಾಯಕಿ ಆಗಿದ್ದಾರೆ. ಈ ಚಿತ್ರದ ಈವೆಂಟ್​​ನಲ್ಲಿ ಅವರು ತೊಂದರೆ ಅನುಭವಿಸಿದ್ದಾರೆ.

ಇದನ್ನೂ ಓದಿ: ಪವನ್​ ಕಲ್ಯಾಣ್​ ಜತೆಗಿನ ಮೊದಲ ಶಾಟ್​ ನೆನೆದು ಖುಷಿಪಟ್ಟ ನಿಧಿ ಅಗರ್​ವಾಲ್​

‘ರಾಜಾಸಾಬ್’ ಚಿತ್ರದ ಪ್ರಮೋಷನ್ ಈವೆಂಟ್ ಹೈದರಾಬಾದ್​ನ ಲೂಲು ಮಾಲ್​​ನಲ್ಲಿ ನಡೆದಿದೆ. ಈ ವೇಳೆ ಸಿನಿಮಾದ ನಿರ್ದೇಶಕ ಮಾರುತಿ ಹಾಗೂ ನಟಿ ನಿಧಿ ಭಾಗಿ ಆಗಿದ್ದರು. ಊಹಿಸಿದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅವರು ಈವೆಂಟ್ ಮುಗಿಸಿ ಬರುವಾಗ ಎಲ್ಲರೂ ಅವರನ್ನು ಮುತ್ತಿಕೊಂಡಿದ್ದಾರೆ. ಅವರ ದೇಹವನ್ನು ಟಚ್ ಮಾಡಲು ಕೆಲವರು ಪ್ರಯತ್ನಿಸಿದ್ದಾರೆ. ಇದರಿಂದ ಅವರಿಗೆ ಮುಜುಗರ ಆಗಿದೆ. ನಿಧಿಗೆ ಇದು ಕಿರುಕುಳದಂತೆ ಕಾಣಿಸಿದೆ.

ಬೌನ್ಸರ್​​ಗಳು ಶ್ರಮ ಹಾಕಿದರೂ ಜನರು ಮುತ್ತಿಕೊಳ್ಳೋದನ್ನು ತಡೆಯಲು ಸಾಧ್ಯವಾಗಲೇ ಇಲ್ಲ. ಕೊನೆಗೂ ಅವರು ಕಾರನ್ನು ಏರಿದ್ದಾರೆ. ಈ ವೇಳೆ ಅವರ ಡ್ರೆಸ್​ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಕಾರಿನಲ್ಲಿ ಬಂದು ಕುಳಿತ ಬಳಿಕ ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ವೈರಲ್ ಮಾಡಲಾಗುತ್ತಿದೆ. ನಟಿಯ ಜೊತೆ ಅಲ್ಲಿ ನೆರೆದಿದ್ದವರು ನಡೆದುಕೊಂಡಿದ್ದು ಸರಿ ಅಲ್ಲ ಎಂದಿದ್ದಾರೆ. ಇನ್ನೂ ಕೆಲವರು ನಿಜವಾದ ಅಭಿಮಾನಿಗಳು ಈ ರೀತಿ ಮಾಡೋದಿಲ್ಲ ಎನ್ನುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 2:23 pm, Thu, 18 December 25

Source link

IND vs SA: ಟಾಸ್ ಕೂಡ ನಡೆಯದೆ 4ನೇ ಟಿ20 ಪಂದ್ಯ ರದ್ದು; ಟಿಕೆಟ್ ಖರೀದಿಸಿದವರ ಕಥೆ ಏನು? – Kannada News | IND vs SA 4th T20 Match Washed Out: Fans Get Ticket Refunds? BCCI Rules

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa)  ನಡುವಿನ 4ನೇ ಟಿ20 ಪಂದ್ಯ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ( Lucknow Cricket) ಡಿಸೆಂಬರ್ 17 ರಂದು ನಡೆಯಬೇಕಿತ್ತು. ಆದರೆ ಮೈದಾನದ ತುಂಬ ದಟ್ಟ ಮಂಜು ಆವರಿಸಿದ ಕಾರಣ ಪಂದ್ಯವನ್ನು ರದ್ದುಗೊಳಿಸಬೇಕಾಯಿತು. ತಲಾ ಐದು ಓವರ್ ಪಂದ್ಯವನ್ನು ಆಡಿಸುವ ಸಲುವಾಗಿ ಅಂಪೈರ್​ಗಳು 6 ಬಾರಿ ಟಾಸ್ ಮುಂದೂಡಿದರು. ಆದರೆ ಸಮಯ ಮೀರಿದ ಕಾರಣ ರಾತ್ರಿ 9:30 ಕ್ಕೆ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರವನ್ನು ಅಂಪೈರ್​ಗಳು ಪ್ರಕಟಿಸಿದರು. ಹೀಗಾಗಿ 4ನೇ ಟಿ20 ಪಂದ್ಯ ಒಂದು ಎಸೆತವನ್ನು ಎಸೆಯಲು ಸಾಧ್ಯವಾಗದೆ ರದ್ದಾಯಿತು. ಆದರೆ ದುಬಾರಿ ಹಣ ನೀಡಿ ಟಿಕೆಟ್ ಖರೀದಿಸಿದ ಅಭಿಮಾನಿಗಳಿಗೆ ಟಿಕೆಟ್ ಹಣ ಮರುಪಾವತಿಯಾಯಿತಾ? ಇದಕ್ಕೆ ಬಿಸಿಸಿಐ (BCCI) ನಿಯಮ ಏನು ಹೇಳುತ್ತದೆ ಎಂಬುದನ್ನು ನೋಡಿದಾಗ..

ಟಾಸ ಕೂಡ ನಡೆಯದೆ 4ನೇ ಟಿ20 ರದ್ದು

ವಾಸ್ತವವಾಗಿ ಈ ರೀತಿಯ ದಟ್ಟ ಮಂಜಿನ ಕಾರಣದಿಂದಾಗಿ ಪಂದ್ಯವನ್ನು ರದ್ದುಗೊಳಿಸುತ್ತಿರುವುದು ತೀರ ಅಪರೂಪದ ಘಟನೆಯಾಗಿದೆ. ಮಳೆಯಿಂದಾಗಿ ಹಾಗೂ ಕೆಟ್ಟ ಹವಾಮಾನದಿಂದಾಗಿ ಪಂದ್ಯವನ್ನು ರದ್ದುಗೊಳಿಸಿದ ಘಟನೆಗಳು ಭಾರತದಲ್ಲಿ ಸಾಕಷ್ಟು ಭಾರಿ ನಡೆದಿವೆ. ಅಂತಹ ಸಮಯದಲ್ಲಿ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಭಿಮಾನಿಗಳಿಗೆ ನಿರಾಸೆಯಾಗದಂತೆ ಬಿಸಿಸಿಐ ಕೂಡ ಟಿಕೆಟ್ ಹಣವನ್ನು ಮರುಪಾವತಿಸಿತ್ತು. ಆದರೆ 4ನೇ ಟಿ20 ಪಂದ್ಯ ಮಂಜಿನ ಕಾರಣದಿಂದ ರದ್ದಾಗಿರುವುದರಿಂದ ಟಿಕೆಟ್ ಹಣ ಮರುಪಾವತಿಯಾಗುತ್ತಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಅದಕ್ಕೆ ಉತ್ತರ ಹೌದು..

ಟಿಕೆಟ್ ಹಣ ಮರುಪಾವತಿಯಾಗುತ್ತಾ?

ಈ ರೀತಿಯ ಪ್ರಕೃತಿ ವೈಪರಿತ್ಯಗಳಿಂದ ಪಂದ್ಯ ರದ್ದಾದರೆ ಟಿಕೆಟ್ ಹಣವನ್ನು ಮರುಪಾವತಿ ಮಾಡುವ ಸಲುವಾಗಿ ಬಿಸಿಸಿಐ ಎರಡು ಪ್ರಮುಖ ನಿಯಮಗಳನ್ನು ಜಾರಿ ಮಾಡಿದೆ. ಮೊದಲ ನಿಯಮದ ಪ್ರಕಾರ, ಒಂದೇ ಒಂದು ಚೆಂಡು ಎಸೆಯದೆ ಪಂದ್ಯ ರದ್ದಾದರೆ, ಟಿಕೆಟ್ ಬುಕಿಂಗ್ ಶುಲ್ಕವನ್ನು ಕಡಿತಗೊಳಿಸಿದ ನಂತರ ಸಂಪೂರ್ಣ ಹಣವನ್ನು ಕ್ರಿಕೆಟ್ ಅಭಿಮಾನಿಗಳಿಗೆ ಹಿಂತಿರುಗಿಸಲಾಗುತ್ತದೆ. ಎರಡನೇ ನಿಯಮದ ಪ್ರಕಾರ, ಪಂದ್ಯ ಪ್ರಾರಂಭವಾಗಿ ನಂತರ ಹವಾಮಾನ ವೈಪರೀತ್ಯದಿಂದಾಗಿ ರದ್ದಾದರೆ, ಯಾವುದೇ ಟಿಕೆಟ್ ಹಣವನ್ನು ಮರುಪಾವತಿಸಲಾಗುವುದಿಲ್ಲ. ಅಂದರೆ ಲಕ್ನೋದಲ್ಲಿ ಟಾಸ್ ಕೂಡ ನಡೆಯದ ಕಾರಣ, ಟಿಕೆಟ್ ಖರೀದಿಸಿ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬಂದಿದ್ದ ಅಭಿಮಾನಿಗಳಿಗೆ ಟಿಕೆಟ್ ಬುಕಿಂಗ್ ಶುಲ್ಕವನ್ನು ಕಡಿತಗೊಳಿಸಿ ಉಳಿದ ಪೂರ ಹಣವನ್ನು ಮರುಪಾವತಿ ಮಾಡಲಾಗುತ್ತದೆ.​

IND vs SA: ದಟ್ಟ ಮಂಜಿನಿಂದ 4ನೇ ಟಿ20 ಪಂದ್ಯ ರದ್ದು; ಸರಣಿಯಲ್ಲಿ ಭಾರತದ ಮೇಲುಗೈ

ಸರಣಿಯ ಸ್ಥಿತಿ ಏನು?

ಮೊದಲ ನಾಲ್ಕು ಪಂದ್ಯಗಳ ನಂತರ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ ಗೆದ್ದರೆ, ಮುಲ್ಲನ್‌ಪುರದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದುಕೊಂಡಿತು. ಧರ್ಮಶಾಲಾದಲ್ಲಿ ನಡೆದ ಮೂರನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ನಾಲ್ಕನೇ ಟಿ20 ಪಂದ್ಯ ರದ್ದಾದ ನಂತರ, ಡಿಸೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉಭಯ ತಂಡಗಳ ನಡುವೆ ಐದನೇ ಮತ್ತು ಅಂತಿಮ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಈ ಪಂದ್ಯವನ್ನು ಭಾರತ ಗೆದ್ದರೆ ಸರಣಿ ಅದರ ಕೈಸೇರಲಿದೆ, ಒಂದು ವೇಳೆ ಸೋತರೆ ಸರಣಿ 2-2 ರಿಂದ ಸಮಬಲಗೊಳ್ಳಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:05 pm, Thu, 18 December 25

Source link

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ರಾಮನಗರ, ಡಿಸೆಂಬರ್​​ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು ಹೇಳಿದ್ದ. ಆ ನಂತರ ಮೂವರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿದೆ. ಅದಕ್ಕೂ ಮುನ್ನ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ ಎಂಬಿತ್ಯಾದಿ ವಿವರವನ್ನು ತಿಳಿದುಕೊಳ್ಳೋಣ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಡಿಸೆಂಬರ್ 19, 2025 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20ಪಂದ್ಯ ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಮೊಬೈಲ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಡಿ ಕಾಕ್, ಹೆಂಡ್ರಿಕ್ಸ್, ಬ್ರೆವಿಸ್, ಮಿಲ್ಲರ್, ಸ್ಟಬ್ಸ್, ಫೆರೀರಾ, ಜೆನ್ಸನ್, ಲುಥೊ ಸಿಪಾಮ್ಲಾ, ಒಟ್ನೀಲ್ ಬಾರ್ಟ್‌ಮನ್, ಅನ್ರಿಚ್ ನೋಕಿಯಾ, ಲುಂಗಿ ಎನ್‌ಗಿಡಿ, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಜಾರ್ಜ್ ಲಿಂಡೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್​​ಬಾಸ್​​ನಲ್ಲಿ ‘ಆ ವಿಷಯ’ ಏಕೆ ಚರ್ಚಿಸಲಿಲ್ಲ: ಕಾರಣ ತಿಳಿಸಿದ ಸುದೀಪ್ – Kannada News | Sudeep talks about why he did not addressed Ashwini Gowda’s S statement

ಸಿನಿಮಾಗಳ ರೀತಿಯೇ ಬಿಗ್​​ಬಾಸ್ ಸಹ ಸುದೀಪ್ (Sudeep) ಅವರ ವೃತ್ತಿ ಜೀವನದ ಭಾಗವಾಗಿದೆ. ಸುದೀಪ್ ಅವರು ಸಿನಿಮಾ ಪ್ರಚಾರಕ್ಕೆ ಹೋದರೂ ಸಹ ಬಿಗ್​​ಬಾಸ್ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಹ ಸುದೀಪ್ ಅವರು ಬಿಗ್​​ಬಾಸ್ ಮನೆಯಲ್ಲಿ ಆಡಿದ ಮಾತುಗಳ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ಸುದೀಪ್ ಮಾತನಾಡಿದ್ದು ಸರಿ, ತಪ್ಪು ಹೀಗೆ ವಿಶ್ಲೇಷಣೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಸುದೀಪ್ ಅವರು, ಈ ಸೀಸನ್​​ನ ಬಿಗ್​​ಬಾಸ್​​ನಲ್ಲಿ ಸ್ಪರ್ಧಿಯೊಬ್ಬರು ಆಡಿದ ಮಾತೊಂದರ ಬಗ್ಗೆ ಏಕೆ ವಿಶ್ಲೇಷಣೆ ಮಾಡಲಿಲ್ಲ ಎಂಬುದನ್ನು ಇದೀಗ ವಿವರಿಸಿದ್ದಾರೆ.

ಬಿಗ್​​ಬಾಸ್ ಆರಂಭವಾದ ಕೆಲ ವಾರದ ಬಳಿಕ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿಯ ಜೊತೆ ಜಗಳ ಆಡುತ್ತಾ, ‘ನಿನ್ನ ಬಟ್ಟೆ, ನಿನ್ನ ಅವತಾರ ನೋಡಿದರೆ ನೀನು ಎಲ್ಲಿಂದ ಬಂದವಳು, ನೀನೊಬ್ಬ ‘ಎಸ್’ ಎಂದಿದ್ದರು. ಅಶ್ವಿನಿಯ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು. ರಕ್ಷಿತಾ ವಿರುದ್ಧ ಜಾತಿ ನಿಂದಕ ಪದ ಬಳಸಿದ್ದಾರೆ ಎಂದು ಕೆಲವರು ಹೇಳಿದರು. ಇನ್ನು ಕೆಲವರು ರಕ್ಷಿತಾರನ್ನು ‘ಸ್ಲಂ’ ಎಂದು ಕರೆಯಲಾಗಿದೆ ಎಂದರು. ಅಸಲಿಗೆ ಅಶ್ವಿನಿ ಅವರು ರಕ್ಷಿತಾ ಬಗ್ಗೆ ಅವಮಾನಕರ, ಕೀಳು ಪದವನ್ನೇ ಬಳಸಿದ್ದಾರೆಂಬುದು ನೋಡುಗರಿಗೆ ಖಾತ್ರಿ ಆಗಿತ್ತು.

ಅಶ್ವಿನಿ ಅವರು ರಕ್ಷಿತಾರ ಮೇಲೆ ಜಗಳ ಮಾಡಿದ್ದು, ನಿಂದಿಸಿದ್ದನ್ನು ಖಂಡಿಸಿ, ಸುದೀಪ್ ಮಾತನಾಡಿದ್ದರು. ಆದರೆ ‘ಎಸ್’ ಪದದ ಬಗ್ಗೆ ಹೆಚ್ಚಾಗಿ ಚರ್ಚೆ ಆಗಲಿಲ್ಲ. ಈ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಇದೀಗ ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿರುವ ಸುದೀಪ್, ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದು, ‘ಒಂದೊಮ್ಮೆ ನಾನು ‘ಎಸ್’ ಎಂದು ಏಕೆ ಹೇಳಿದಿರಿ ಎಂದು ಕೇಳಿದೆ ಎಂದುಕೊಳ್ಳಿ, ಆಗ ಆ ಸ್ಪರ್ಧಿ, ‘ಇಲ್ಲ ಅಣ್ಣ, ಎಸ್ ಎಂದರೆ ಸಿಲ್ಲಿ, ಆ ಹುಡುಗಿ ರಕ್ಷಿತಾ ತುಂಬ ಸಿಲ್ಲಿ, ಹಾಗಾಗಿ ನಾನು ‘ಎಸ್’ ಅಂದೆ’ ಎಂದರು ಅಂದುಕೊಳ್ಳೋಣ. ಆಗ ನಾನೇನು ಮಾಡಬೇಕು, ಇಲ್ಲ, ಇಲ್ಲ, ‘ಎಸ್’ ಎಂದರೆ ನನ್ನ ತಲೆಯಲ್ಲಿ ಬೇರೆ ಏನೋ ಅರ್ಥ ಇದೆ, ನನ್ನ ತಲೆಯಲ್ಲಿ ಇರುವ ಆ ಕೆಟ್ಟ ಅರ್ಥದ ಪದವನ್ನೇ ನೀವು ಬಳಸಿದ್ದೀರಿ ಎಂದು ಹೇಳಲು ಆಗುತ್ತದೆಯೇ? ಏಕೆಂದರೆ ಹೇಳಿದವರು ಅದನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ ನೋಡುಗರಿಗೆ ನಮಗೆ ಗೊತ್ತಿದೆ ಅದು ಏನೆಂಬುದು’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ:ಬಿಗ್​ಬಾಸ್ ಗೌತಮಿ, ರಿಷಿ ನಟನೆಯ ಹೊಸ ಸಿನಿಮಾ ಮುಹೂರ್ತ: ವಿಡಿಯೋ

‘ಆ ‘ಟಿ ಗಾಂಚಾಲಿ’ ವಿಷಯದಲ್ಲಿಯೂ ಹಾಗೆಯೇ ಆಯ್ತು. ‘ಟಿ ಗಾಂಚಲಿ’ ಎಂದರೆ ಏನೆಂದು ನಮಗೆಲ್ಲ ಗೊತ್ತು, ಆದರೆ ನಾನು ಪ್ರಶ್ನೆ ಮಾಡಿದಾಗ ಆ ವ್ಯಕ್ತಿ ‘ಟಿ ಗಾಂಚಲಿ’ ಎಂದರೆ ತಲೆ ಗಾಂಚಲಿ ಎಂದರು. ಏನು ಮಾಡೋಣ, ಇಲ್ಲ ನೀವು ಇದೇ ಅರ್ಥದಲ್ಲಿಯೇ ಹೇಳಿದ್ದೀರಿ ಎಂದು ವಾದ ಮಾಡಲು ಆಗುತ್ತದೆ? ಆದರೆ ನಾನು ಅದನ್ನು ಅವರಿಗೆ ಹೇಗೆ ಅರ್ಥ ಮಾಡಿಸಬೇಕೊ ಹಾಗೆ ಮಾಡಿಸಿದ್ದೀನಿ’ ಎಂದಿದ್ದಾರೆ ಸುದೀಪ್. ಮುಂದುವರೆದು, ‘ಜನ ಮಾತನಾಡುತ್ತಾರೆ, ಆದರೆ ಅಲ್ಲಿ ವೇದಿಕೆ ಮೇಲೆ ನಿಂತು ಸ್ಪರ್ಧಿಗಳೊಟ್ಟಿಗೆ ವಾದ ಮಾಡುವುದು ಸುಲಭವಾಗಿರುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಇರುತ್ತಾರೆ, ಒಬ್ಬೊಬ್ಬರ ಮನಸ್ಥಿತಿ ಒಂದೊಂದು ರೀತಿಯದ್ದಾಗಿರುತ್ತದೆ’ ಎಂದಿದ್ದಾರೆ ಕಿಚ್ಚ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 1:17 pm, Thu, 18 December 25

Source link

Exit mobile version