Headlines

IND vs NZ: ಟಿ20 ವಿಶ್ವಕಪ್ ಫೈನಲ್​ಗೆ ಮೋದಿ ಮೈದಾನದಲ್ಲಿ ಏನೆಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಗೊತ್ತಾ?

ಮಾರ್ಚ್ 8 ರಂದು 2026 ರ ಟಿ20 ವಿಶ್ವಕಪ್​ನ ಫೈನಲ್ (T20 World Cup 2026 Final) ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗುತ್ತಿವೆ. ಭಾರತ ತಂಡ ಫೈನಲ್​ಗೇರಿರುವುದರಿಂದ ಕ್ರೀಡಾಂಗಣ ಅಭಿಮಾನಿಗಳಿಂದ ತುಂಬಿತುಳುಕುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ ಬರುವ ಅಭಿಮಾನಿಗಳಿಗೆ ಯಾವುದೇ ತೊಂದರೆಯಾಗದಂತೆ ಮತ್ತು ಪಂದ್ಯ ಆರಂಭಕ್ಕೂ ಮುನ್ನ ಅವರಿಗೆ ವಿವಿದ ಕಾರ್ಯಕ್ರಮಗಳ ಮೂಲಕ ರಂಜಿಸುವ ಸಲುವಾಗಿ…

Read More

IND vs ENG: 65 ಕೋಟಿಗೂ ಅಧಿಕ; ವಿಶ್ವ ದಾಖಲೆ ಬರೆದ ಭಾರತ- ಇಂಗ್ಲೆಂಡ್ ಪಂದ್ಯ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ (T20 World Cup Semi-Final) ಪಂದ್ಯ ಕ್ರಿಕೆಟ್ ಇತಿಹಾಸದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಎರಡೂ ತಂಡಗಳು ಒಟ್ಟಾರೆಯಾಗಿ ಬರೋಬ್ಬರಿ 499 ರನ್ ಕಲೆಹಾಕಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 253 ರನ್ ಗಳಿಸಿತು. ಈ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕೌಟ್ ಸುತ್ತಿನಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ…

Read More

ಕಾರ್ಖಾನೆಗಳಿಗೆ ಸಿಹಿ ಕೊಟ್ಟ ಅನ್ನದಾತರ ಬಾಯಿಗೆ ಕಹಿ: ಸಂಕಷ್ಟಕ್ಕೆ ಸಿಲುಕಿದ ಬೀದರ್ ಕಬ್ಬು ಬೆಳೆಗಾರರು

ಬೀದರ್​, ಮಾರ್ಚ್​ 06: ಕಬ್ಬು (Sugarcane) ಬೆಳೆದು ಖುಷಿಯಿಂದ ಸಕ್ಕರೆ ಕಾರ್ಖಾನೆಗೆ ರೈತರು (Farmers) ಕಬ್ಬು ಹಾಕುತ್ತಿದ್ದಾರೆ. ಆದರೆ ಸಕ್ಕರೆ ಕಾರ್ಖಾನೆಯಿಂದ ಬರಬೇಕಾದ ಹಣ ಮಾತ್ರ ರೈತರ ಕೈ ಸೇರುತ್ತಿಲ್ಲ. ವರ್ಷವಿಡೀ ಕಷ್ಟಪಟ್ಟು ಬೆಳೆದ ಕಬ್ಬನ್ನ ಕಾರ್ಖಾನೆಗೆ ಹಾಕಿದರೆ ಕಾರ್ಖಾನೆ ಮಾಲೀಕರು ಮಾತ್ರ ರೈತರಿಗೆ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕಬ್ಬು ಹಾಕಿದ ರೈತರಿಗೆ ಹಣ ಜಮೆ ಮಾಡಿ ಎಂದು ಜಿಲ್ಲಾಧಿಕಾರಿಗಳು ನೋಟಿಸ್​ ಕೊಟ್ಟರು ಸಕ್ಕರೆ ಕಾರ್ಖಾನೆಯವರು ಮಾತ್ರ ಹಣ ಹಾಕುತ್ತಿಲ್ಲ. ಹೀಗಾಗಿ ಅನ್ನದಾತರು ಹಣಕ್ಕಾಗಿ ಪರದಾಡುವಂತಾಗಿದೆ. ರೈತರ…

Read More

ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್​​ಗೆ ಪ್ರಹ್ಲಾದ ಜೋಶಿ ವ್ಯಂಗ್ಯ

ನವದೆಹಲಿ, (ಮಾರ್ಚ್ 06): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ 17ನೇ ಬಜೆಟ್ 4.48 ಲಕ್ಷ ಕೋಟಿ ರೂಪಾಯಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅಂತೆಯೇ ರಾಜ್ಯದ ಸಾಲ ಹೆಚ್ಚಳ ಮತ್ತು ವಿತ್ತೀಯ ಕೊರತೆಯಲ್ಲಿ ಸಹ ದಾಖಲೆ ನಿರ್ಮಿಸಿದ್ದಲ್ಲದೆ, “ವೋಟ್ ಬ್ಯಾಂಕ್” ಪ್ರೇರಿತ ಎಂಬಂತಿದೆ. ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಈ ಬಜೆಟ್ ನಲ್ಲಿ (Karnataka Budget) ರಾಜ್ಯವನ್ನು ಆರ್ಥಿಕ ಪ್ರಗತಿಯತ್ತ ಕೊಂಡೊಯ್ಯುವ ಬದಲು ಆರ್ಥಿಕ ಸಂಕಷ್ಟವನ್ನು ತೆರೆದಿಟ್ಟಿದೆ. ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಕೆಲವೇ ಕೆಲವು ಸಮಾಜಗಳಿಗೆ…

Read More

‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ (Nayanthara) ಮತ್ತು ಅವರ ಪತಿ ವಿಘ್ನೇಶ್ ಶಿವನ್ ಅವರು ತಮಿಳುನಾಡಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಚೆನ್ನೈನ ಪೋಯಸ್ ಗಾರ್ಡನ್ನಲ್ಲಿ ಬೃಹತ್ ಐಷಾರಾಮಿ ಡ್ಯುಪ್ಲೆಕ್ಸ್ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದರ ಒಟ್ಟು ಮೌಲ್ಯ ಬರೋಬ್ಬರಿ 31.5 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಾಪರ್ಟಿ ಅನಾಲಿಟಿಕ್ಸ್ ಪ್ಲಾಟ್‌ಫಾರ್ಮ್ ಜ್ಯಾಪ್‌ಕೀ (Zapkey) ಮೂಲಕ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಈ ಮನೆಯು ಚೆನ್ನೈನ ತೇನಾಂಪೇಟೆ ವ್ಯಾಪ್ತಿಯ ‘ಲೆಗಸಿ’ ಎಂಬ ಪ್ರೀಮಿಯಂ ವಸತಿ ಸಂಕೀರ್ಣದಲ್ಲಿದೆ. ಅಪಾರ್ಟ್‌ಮೆಂಟ್ ಕಟ್ಟಡದ…

Read More

ಎಷ್ಟು ದುರಹಂಕಾರ ನೋಡಿ! ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು

ಜೈಪುರ, ಮಾರ್ಚ್ 6: ಹಳ್ಳಿಗಳಲ್ಲಿ ರಸ್ತೆಯ ಮೇಲೆ ಹಸುಗಳು ಮಲಗಿರುವುದು ಸಾಮಾನ್ಯ ದೃಶ್ಯ. ವೈರಲ್ (Viral Video) ಆಗಿರುವ ದೃಶ್ಯವೊಂದರಲ್ಲಿ ರಸ್ತೆಯ ಮೇಲೆ ಮಲಗಿದ್ದ ಹಸುವಿಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಆ ಹಸುವನ್ನು ಕಾರಿನಲ್ಲಿ ತಳ್ಳಿಕೊಂಡು ಹೋಗಿದ್ದಾನೆ. ಈ ಘಟನೆ ರಾಜಸ್ಥಾನದ ಬುಂಡಿ ಪ್ರದೇಶದಲ್ಲಿ ನಡೆದಿದೆ. ಈ ವೀಡಿಯೊವನ್ನು ನೋಡಿದ ಜನರು ಕಾರು ಚಾಲಕನ ದುರಹಂಕಾರವನ್ನು ಟೀಕಿಸಿದ್ದಾರೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಸಹ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್​ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ…

Read More

ಬೆಂಗಳೂರಿನ ಹೊರೆ ಇಳಿಸಲು ಬಜೆಟ್​ನಲ್ಲಿ ದೊಡ್ಡ ಘೋಷಣೆ: ರಾಜ್ಯದ 2ನೇ ಐಟಿ ಸಿಟಿಯಾಗಲಿದೆ ಮೈಸೂರು

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರಿನ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಬೆಂಗಳೂರು ಹೊರತುಪಡಿಸಿ, ಇತರೆ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ, ಮೈಸೂರನ್ನು 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದು ಸಹ ಪ್ರಮುಖವಾದದ್ದಾಗಿದೆ. ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ…

Read More

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

‘ಟಟೀರೀ’ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ವಿವಾದಕ್ಕೆ ಸಿಲುಕಿದ ಗಾಯಕ ಬಾದ್​ಶಾ

ಖ್ಯಾತ ಗಾಯಕ ಬಾದ್‌ಶಾ (Badshah) ಅವರು ಮತ್ತೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹರಿಯಾಣ್ವಿ ಭಾಷೆಯಲ್ಲಿ ಅವರ ಹೊಸ ಹಾಡು ‘ಟಟೀರಿ’ (Tateeree) ಇತ್ತೀಚೆಗೆ ಬಿಡುಗಡೆ ಆಯಿತು. ಈ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನ ಮಾಡುವ ಮತ್ತು ಅಶ್ಲೀಲ ಸಾಹಿತ್ಯ ಬಳಸಲಾಗಿದೆ ಎಂಬ ಆರೋಪದ ಮೇಲೆ ಹರಿಯಾಣ ರಾಜ್ಯ ಮಹಿಳಾ ಆಯೋಗ (HSCW) ಸಮನ್ಸ್ ಜಾರಿ ಮಾಡಿದೆ. ಈ ಮೊದಲು ಕೂಡ ಬಾದ್​ಶಾ ಅವರ ಹಾಡುಗಳ ಸಾಹಿತ್ಯದ ಬಗ್ಗೆ ಅನೇಕರಿಂದ ತಕರಾರು ವ್ಯಕ್ತವಾಗಿತ್ತು. ಕೆಲವೇ ದಿನಗಳ ಹಿಂದಷ್ಟೇ ಬಿಡುಗಡೆಯಾದ ‘ಟಟೀರಿ’…

Read More