ಮುಲಾಜಿಲ್ಲದೇ ‘ಏಕ್ ದಿನ್’ ಸಿನಿಮಾದ ಸೋಲು ಒಪ್ಪಿಕೊಂಡ ಆಮಿರ್ ಖಾನ್ ಪುತ್ರ ಜುನೈದ್ ಖಾನ್ – Kannada News | Junaid Khan reveals Aamir Khan upset over Ek Din Box Office failure Sai Pallavi Hindi Film

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಟನೆಯ ಎರಡನೇ ಸಿನಿಮಾ ‘ಏಕ್ ದಿನ್’ (Ek Din) ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾ ಮೇಲೆ ಅವರಿಗೆ ಬಹಳ ನಿರೀಕ್ಷೆ ಇತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಮಕಾಡೆ ಮಲಗಿದೆ. ‘ಏಕ್ ದಿನ್’ ಚಿತ್ರದ ಸೋಲು ಸ್ವತಃ ಜುನೈದ್‌ ಖಾನ್​ ಅವರಿಗಿಂತಲೂ ಅಮೀರ್ ಖಾನ್ ಅವರನ್ನೇ ಹೆಚ್ಚು ಕಾಡುತ್ತಿದೆ ಎಂಬ ವಿಷಯ ಈಗ ಹೊರಬಿದ್ದಿದೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜುನೈದ್ ಖಾನ್ (Junaid Khan) ಅವರು ಚಿತ್ರದ ವೈಫಲ್ಯದ ಬಗ್ಗೆ ಮಾತನಾಡಿದ್ದಾರೆ.

‘ಏಕ್ ದಿನ’ ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮಿಶ್ರ ಹಾಗೂ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ಮೇ 1ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ದಿನ ಕೇವಲ 1 ಕೋಟಿ ರೂಪಾಯಿ ಗಳಿಸಿತು. ನಂತರದ ದಿನಗಳಲ್ಲಿ ಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿತು. ವರದಿಗಳ ಪ್ರಕಾರ, 11 ದಿನಗಳಲ್ಲಿ ಈ ಚಿತ್ರವು ವಿಶ್ವದಾದ್ಯಂತ ಕೇವಲ 5.44 ಕೋಟಿ ರೂಪಾಯಿ ಮತ್ತು ಭಾರತದಲ್ಲಿ 4.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಿನಿಮಾವನ್ನು ನಿರ್ಮಾಣ ಮಾಡಿದ್ದ ಆಮಿರ್ ಖಾನ್ ಅವರಿಗೆ ಚಿತ್ರದ ಮೇಲೆ ಅಪಾರ ನಂಬಿಕೆ ಇತ್ತು. ಆದರೆ ಸಿನಿಮಾ ಸೋತಾಗ ಅವರು ತುಂಬಾ ಭಾವುಕರಾಗಿದ್ದಾರೆ ಎಂದು ಜುನೈದ್ ಹೇಳಿದ್ದಾರೆ. ಇದು ಸಾಯಿ ಪಲ್ಲವಿ ಅವರು ಬಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ಆಗಿದ್ದರೂ ಕೂಡ ಅಭಿಮಾನಿಗಳನ್ನು ಸೆಳೆಯುವಲ್ಲಿ ವಿಫಲ ಆಯಿತು. ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಕಲೆಕ್ಷನ್ ಆಯಿತು.

‘ನನ್ನ ತಂದೆ ಇನ್ನೂ ಆ ಸೋಲಿನ ನೋವಿನಲ್ಲಿದ್ದಾರೆ. ಇಷ್ಟು ವರ್ಷಗಳ ಅನುಭವದ ನಂತರವೂ ಚಿತ್ರದ ವೈಫಲ್ಯ ಅವರನ್ನು ತುಂಬಾ ಕಾಡುತ್ತದೆ. ಅವರು ಸಿನಿಮಾವನ್ನು ತುಂಬಾ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ. ವಿಶೇಷವಾಗಿ ಆ ಸಿನಿಮಾ ಅವರಿಗೆ ಇಷ್ಟವಾಗಿದ್ದರೆ ಅದರ ಸೋಲು ಅವರಿಗೆ ಅತಿಯಾಗಿ ನೋವು ನೀಡುತ್ತದೆ’ ಎಂದು ಜುನೈದ್ ವಿವರಿಸಿದ್ದಾರೆ.

ಇದನ್ನೂ ಓದಿ: ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್

ಜುನೈದ್ ಖಾನ್ ಅವರ ಮೊದಲ ಚಿತ್ರ ‘ಮಹಾರಾಜ್’ ಒಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಆದರೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅವರ ‘ಲವ್ಯಪ’ ಮತ್ತು ‘ಏಕ್ ದಿನ್’ ಸಿನಿಮಾಗಳು ಸತತವಾಗಿ ಸೋಲು ಕಂಡಿವೆ. ಮುಂದಿನ ದಿನಗಳಲ್ಲಿ ಜುನೈದ್ ‘ರಾಗಿಣಿ MMS 3’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಳ್ಳಾರಿ: ಜಿಂದಾಲ್‌ನಿಂದ ಕೋಟಿ ಕೋಟಿ ತೆರಿಗೆ ಬಾಕಿ; ವಸೂಲಿಗೆ ಸ್ಥಳೀಯ ಆಡಳಿತ ಸರ್ಕಸ್ – Kannada News | JSW Jindal’s 20 Cr Unpaid Tax Row: Ballari Gram Panchayats Demand Pending Dues Since 2018

ಬಳ್ಳಾರಿ, ಮೇ 12: ಸಂಡೂರು ತಾಲೂಕಿನ ತೋರಣಗಲ್ ಬಳಿ ಸ್ಥಾಪನೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಖಾಸಗಿ ಉಕ್ಕು ಉತ್ಪಾದಕ ಕಂಪನಿ JSW ಜಿಂದಾಲ್ (JSW Jindal), 2018ರಿಂದಲೂ ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ಅಭಿವೃದ್ಧಿ ತೆರಿಗೆಯನ್ನು (Tax) ಬಾಕಿ ಉಳಿಸಿಕೊಂಡಿದೆ. ತೋರಣಗಲ್ಲು, ವಡ್ಡು, ಬನ್ನಿಹಟ್ಟಿ ಗ್ರಾಮ ಪಂಚಾಯಿತಿಗಳಿಗೆ ಸರಿಸುಮಾರು 20 ಕೋಟಿ ರೂ.ಗೂ ಅಧಿಕ ತೆರಿಗೆ ಪಾವತಿಸದೆ ಜಿಂದಾಲ್ ಕಂಪನಿ ಗಪ್‌ಚುಪ್ ಕುಳಿತಿದೆ. ಹಲವು ಬಾರಿ ನೋಟಿಸ್ ನೀಡಿದರೂ ಕಂಪನಿ ಡೋಂಟ್ ಕೇರ್ ಧೋರಣೆ ತಾಳಿರುವುದು ಸ್ಥಳೀಯ ಆಡಳಿತ ಅಸಮಾಧಾನಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • 2018ರಿಂದ ಈವರಗೆ ತೆರಿಗೆ ಬಾಕಿ ಉಳಿಸಿಕೊಂಡ ಜಿಂದಾಲ್ ಕಂಪನಿ
  • ತೆರಿಗೆ ವಸೂಲಿ ಮಾಡಲು ಸ್ಥಳೀಯ ಆಡಳಿತಗಳು ಸರ್ಕಸ್​​
  • ಜಿಂದಾಲ್ ವಿರುದ್ಧ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಕ್ರೋಶ

ಗ್ರಾಮ ಪಂಚಾಯತ್​ವಾರು ಬಾಕಿ ವಿವರ

  • ತೋರಣಗಲ್ಲು ಗ್ರಾಪಂ: 2018-19ರಿಂದ ಇಲ್ಲಿಯವರೆಗೆ 20,23,94,216 ರೂ
  • ಬನ್ನಿಹಟ್ಟಿ ಗ್ರಾಪಂ: 2024-25ರಿಂದ 2025-26ರವರೆಗೆ 60,53,036 ರೂ
  • ವಡ್ಡು ಗ್ರಾಪಂ: 2018-19ರಿಂದ 2025-26ರವರೆಗೆ ಕೋಟ್ಯಂತರ ರೂ ತೆರಿಗೆ ಪಾವತಿ ಬಾಕಿ ಇದೆ.

ತೋರಣಗಲ್ಲು, ವಡ್ಡು, ಬನ್ನಿಹಟ್ಟಿ ಗ್ರಾಮ ಪಂಚಾಯತ್​​ಗಳಿಗೆ ಪಾವತಿಸಬೇಕಿರುವ ತೆರಿಗೆಯ ವಸೂಲಿಗೆ ನೋಟಿಸ್ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: ಗದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ: ಸಾರ್ವಜನಿಕರು, ಸಿಬ್ಬಂದಿ ಮೊಬೈಲ್​​ ಟಾರ್ಚೇ ಇಲ್ಲಿ ಬೆಳಕು!

1994ರಲ್ಲಿ ವಿಜಯನಗರ ಸ್ಟೀಲ್ ಲಿಮಿಟೆಡ್ ಹೆಸರಲ್ಲಿ ಆರಂಭವಾದ ಜಿಂದಾಲ್, ಸಾವಿರಾರು ಎಕರೆಯಲ್ಲಿ ಕಬ್ಬಿಣ, ಸಿಮೆಂಟ್, ಪೇಂಟ್ ಸೇರಿ ಹಲವು ಉದ್ಯಮಗಳನ್ನು ನಡೆಸುತ್ತಿದೆ. ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಹೆಗ್ಗಳಿಕೆ ಇದ್ದರೂ, ತೆರಿಗೆ ವಸೂಲಿ ಮಾಡುವುದು ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗೆ ಸವಾಲಾಗಿದೆ.

ಜಿಂದಾಲ್ ಕಾರ್ಯವೈಖರಿ ಬಗ್ಗೆ ಸಿಎಂ ಮತ್ತು ಡಿಸಿಎಂ ಗಮನಕ್ಕೆ ತರುತ್ತೇನೆ ಎಂದ ಶಾಸಕ ಭರತ್ ರೆಡ್ಡಿ

ಇನ್ನು ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ, ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ, ಇದೀಗ ತೆರಿಗೆಯನ್ನೂ ಪಾವತಿಸುತ್ತಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. JSW ಕಾರ್ಯವೈಖರಿಯನ್ನು ಸಿಎಂ ಮತ್ತು ಡಿಸಿಎಂ ಗಮನಕ್ಕೆ ತರುತ್ತೇನೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ: ಐತಿಹಾಸಿಕ ಸಾಧನೆ ಮಾಡಿದ ಬೆಂಗಳೂರಿನ ದಂಪತಿ – Kannada News | Bengaluru Couple’s Historic Swim: Sri Lanka to India in 10h 45m

10.45 ಗಂಟೆಯಲ್ಲಿ ಶ್ರೀಲಂಕಾದಿಂದ ಭಾರತಕ್ಕೆ ಈಜಿದ ಜೋಡಿ

ಬೆಂಗಳೂರು, ಮೇ 12: ಶ್ರೀಲಂಕಾದಿಂದ ಭಾರತಕ್ಕೆ ಐತಿಹಾಸಿಕ ರಾಮಸೇತು ಮಾರ್ಗದ ಮೂಲಕ ಈಜಿ ಬೆಂಗಳೂರಿನ (Bengaluru) ದಂಪತಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಮೂಲಕ ಡ್ಯಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದ್ ಈ ಮಾರ್ಗದ ಮೂಲಕ ಓಪನ್ ವಾಟರ್ ಈಜು ಪೂರ್ಣಗೊಳಿಸಿದ ಮೊದಲ ಜೋಡಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಮೇ 7ರಂದು ಶ್ರೀಲಂಕಾದ ತಲೈಮನ್ನಾರ್‌ನಿಂದ ಬೆಳಗ್ಗೆ ಸುಮಾರು 4.30ಕ್ಕೆ ಈಜು ಆರಂಭಿಸಿದ್ದ ದಂಪತಿ, ತಮಿಳುನಾಡಿನ ಧನುಷ್ಕೋಡಿಗೆ ಮಧ್ಯಾಹ್ನ ಸುಮಾರು 3.15ಕ್ಕೆ ತಲುಪಿದ್ದಾರೆ. ಪಾಲ್ಕ್ ಜಲಸಂಧಿಯಲ್ಲಿ ಸುಮಾರು 32 ಕಿಲೋಮೀಟರ್ ದೂರವನ್ನು ಈ ಸಮಯದಲ್ಲಿ ಅವರು ಈಜಿದ್ದಾರೆ. ಈ ಸವಾಲಿನ ಈಜು ಪೂರ್ಣಗೊಳಿಸಲು ಅವರಿಗೆ 10 ಗಂಟೆ 45 ನಿಮಿಷಗಳು ತಗುಲಿವೆ.

ಮುಖ್ಯಾಂಶಗಳು

  • ಶ್ರೀಲಂಕಾದಿಂದ ಭಾರತಕ್ಕೆ ಒಟ್ಟಾಗಿ ಈಜಿದ ದಂಪತಿ
  • ಬೆಂಗಳೂರಿನ ದಂಪತಿಯಿಂದ ಐತಿಹಾಸಿಕ ಸಾಧನೆ
  • 10 ಗಂಟೆ 45 ನಿಮಿಷದಲ್ಲಿ 32 ಕಿ.ಮೀ. ಈಜಿದ ಜೋಡಿ

ಇದನ್ನೂ ಓದಿ: 30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

ಸೋಶಿಯಲ್​ ಮೀಡಿಯಾ ಪೋಸ್ಟ್​​ ಮೂಲಕ ಸಂತಸ

ಸಾಹಸ ಯಶಸ್ವಿಯಾದ ಬಳಿಕ ಇನ್‌ಸ್ಟಾಗ್ರಾಂನಲ್ಲಿ ಈ ಬಗ್ಗೆ ದಂಪತಿ ಸಂತಸ ಹಂಚಿಕೊಂಡಿದ್ದು, ನಾವು ಸಾಧಿಸಿದ್ದೇವೆ! ಶ್ರೀಲಂಕಾದಿಂದ ಭಾರತಕ್ಕೆ. 10 ಗಂಟೆ 45 ನಿಮಿಷದ ನೀರಿನ ಹಾದು ಅತ್ಯಂತ ಕಠಿಣವಾಗಿತ್ತು. ಈಗ 12 ಗಂಟೆಗಳ ಅಲಾರ್ಮ್ ಇಲ್ಲದ ನಿದ್ರೆ ಬೇಕಾಗಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ನಂತರ ಮತ್ತೊಂದು ಪೋಸ್ಟ್‌ನಲ್ಲಿ, ಕೇವಲ ನಾಲ್ಕು ವರ್ಷಗಳ ಹಿಂದೆ ಈಜು ಕಲಿಯಲು ಆರಂಭಿಸಿದ್ದೇವೆ. ಇಷ್ಟು ದೂರ ಬಂದಿದ್ದೇವೆ ಎಂಬುದನ್ನು ಇನ್ನೂ ನಂಬಲಾಗುತ್ತಿಲ್ಲ. ಈ ಸಾಹಸದಲ್ಲಿ ಒಬ್ಬರ ಜೊತೆಗೊಬ್ಬರು ಇದ್ದದ್ದು ನಮಗೆ ಮಾನಸಿಕ ಹಾಗೂ ಭಾವನಾತ್ಮಕ ಶಕ್ತಿಯಾಯಿತು. ನಮ್ಮ ಕೋಚ್‌ಗಳಾದ ಸತೀಶ್ ಮತ್ತು ಯಾಕೂಬ್ ಅವರು ನೀಡಿದ ತರಬೇತಿಯೇ ಈ ದೊಡ್ಡ ಸವಾಲನ್ನು ಎದುರಿಸಲು ಸಹಾಯ ಮಾಡಿತು ಎಂದು ತಿಳಿಸಿದ್ದಾರೆ. ಈಜಿನ ವೇಳೆ ಭಾರತೀಯ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ, ವೈದ್ಯಕೀಯ ತಂಡ ಹಾಗೂ ಸಹಾಯಕ ದೋಣಿಗಳು ಸಂಪೂರ್ಣ ಸುರಕ್ಷತಾ ವ್ಯವಸ್ಥೆ ಒದಗಿಸಿದ್ದವು.

ದಂಪತಿಯ ಸಾಧನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಿಮ್ಮ ಸಾಧನೆ ಅನೇಕರಿಗೆ ಪ್ರೇರಣೆಯಾಗಿದೆ, ಎಂದು ಒಬ್ಬರು ಕಾಮೆಂಟ್ ಮಾಡಿದ್ದರೆ, ಮತ್ತೊಬ್ಬರು ಅಸಾಧ್ಯವೆನ್ನುವುದೇ ಇಲ್ಲ ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ ಎಂದು ಹೇಳುವ ಮೂಲಕ ದಂಪತಿಯನ್ನು ಅಭಿನಂದಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಾನು ಹೇಳಿದ್ದು ಹಂಗಲ್ಲ, ಹಿಂಗೆ: ಎಸ್​. ಬದರಿನಾಥ್ ಸ್ಪಷ್ಟನೆ! – Kannada News | S badrinath clarification about krunal pandya commentary

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯದ ವೇಳೆ ತಮಿಳು ಕಾಮೆಂಟರಿಯಲ್ಲಿ ಮಾಜಿ ಕ್ರಿಕೆಟಿಗ ಎಸ್. ಬದರಿನಾಥ್ ಅವರು ಕೃನಾಲ್ ಪಾಂಡ್ಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ವಿವಾದ ತಾರಕ್ಕೇರುತ್ತಿದ್ದಂತೆ ಬದರಿನಾಥ್ ಅವರು ತಮ್ಮ ಮಾತಿನ ಹಿಂದಿನ ಅಸಲಿ ಉದ್ದೇಶವನ್ನು ವಿವರಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ವಿವಾದದ ಹಿನ್ನೆಲೆ:

ರಾಯ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾಗ  ಸ್ನಾಯು ಸೆಳೆತಕ್ಕೆ  ಒಳಗಾಗಿ ಮೈದಾನದಲ್ಲಿ ಕುಸಿದಿದ್ದರು. ಈ ವೇಳೆ ಮುಂಬೈ ಇಂಡಿಯನ್ಸ್​ ವಿಕೆಟ್ ಕೀಪರ್ ರಯಾನ್ ರಿಕೆಲ್ಟನ್ ಅವರು ಕೃನಾಲ್ ಪಾಂಡ್ಯ ಅವರ ಕಾಲುಗಳನ್ನು ಸ್ಟ್ರೆಚ್ ಮಾಡುವ ಮೂಲಕ ಕ್ರೀಡಾ ಮನೋಭಾವ ಮೆರೆದಿದ್ದರು.

ಈ ಸಂದರ್ಭದಲ್ಲಿ ಕಾಮೆಂಟ್ರಿ ಮಾಡುತ್ತಿದ್ದ ಬದರಿನಾಥ್, ಇದು ಸೆಳೆತ ಅಲ್ಲ, ಮುಂಬೈ ಇಂಡಿಯನ್ಸ್ ತಂಡವರು ನೀ ಅಲ್ಲೇ ಸಾಯಿ ಎಂದರೂ ತಪ್ಪೇನಿಲ್ಲ ಎಂಬಾರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಆಕ್ಷೇಪಾರ್ಹ ಕಾಮೆಂಟ್ರಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಬದರಿನಾಥ್ ನೀಡಿದ ಸ್ಪಷ್ಟೀಕರಣ:

ತಮ್ಮ ಹೇಳಿಕೆ ತಪ್ಪಾಗಿ ಅರ್ಥೈಸಲ್ಪಟ್ಟಿದೆ ಎಂದು ತಿಳಿಸಿರುವ ಬದರಿನಾಥ್, ಈ ಬಗ್ಗೆ ಈ ಕೆಳಗಿನ ಅಂಶಗಳನ್ನು ಹಂಚಿಕೊಂಡಿದ್ದಾರೆ:

  • ನಾನು ಬಳಸಿದ “ಸಾಯಿ” ಎನ್ನುವುದು ತಮಿಳಿನ ಒಂದು ಆಡುಭಾಷೆಯ ಶೈಲಿಯಾಗಿದೆ (Colloquial Expression). ಇದನ್ನು ನಾವು ಯಾವುದನ್ನಾದರೂ ಅತಿಯಾಗಿ ಹೇಳುವಾಗ ಅಥವಾ ತಮಾಷೆಯ ಸಂದರ್ಭದಲ್ಲಿ ಬಳಸುತ್ತೇವೆ ಹೊರತು ಯಾರಿಗೂ ಹಾನಿಯಾಗಲಿ ಎಂದು ಬಯಸುವುದಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
  • ನನ್ನ ಮಾತಿನ ನಿಜವಾದ ಉದ್ದೇಶ ರಯಾನ್ ರಿಕೆಲ್ಟನ್ ಅವರ ಮಾನವೀಯತೆಯನ್ನು ಹೊಗಳುವುದಾಗಿತ್ತು. “ಎದುರಾಳಿ ತಂಡದ ಅಪಾಯಕಾರಿ ಆಟಗಾರ ನೋವಿನಲ್ಲಿದ್ದಾಗಲೂ, ಪಂದ್ಯದ ಫಲಿತಾಂಶದ ಬಗ್ಗೆ ಯೋಚಿಸದೆ ಸಹಾಯ ಮಾಡಿದ ರಿಕೆಲ್ಟನ್ ಅವರ ಗುಣಕ್ಕೆ ಮುಂಬೈ ಇಂಡಿಯನ್ಸ್ ತಂಡಕ್ಕೆ ‘ಫೇರ್ ಪ್ಲೇ’ ಅಂಕಗಳನ್ನು ನೀಡಬೇಕು” ಎಂಬುದು ತಮ್ಮ ಆಶಯವಾಗಿತ್ತು ಎಂದು ಅವರು ತಿಳಿಸಿದ್ದಾರೆ.
  •  ಎದುರಾಳಿ ಬ್ಯಾಟರ್ ಔಟ್ ಆದರೆ ಸಾಕು ಎಂದು ತಂಡಗಳು ಬಯಸುವ ಸಂದರ್ಭದಲ್ಲಿ, ರಿಕೆಲ್ಟನ್ ಸಹಾಯ ಮಾಡಿದ್ದನ್ನು ಅತಿರಂಜಿತವಾಗಿ ವಿವರಿಸಲು ಆ ಪದ ಬಳಸಿದ್ದಾಗಿ ಎಸ್​ ಬದರಿನಾಥ್ ಹೇಳಿದ್ದಾರೆ.


ಒಟ್ಟಾರೆಯಾಗಿ, ಕಾಮೆಂಟರಿ ಬಾಕ್ಸ್‌ನಲ್ಲಿ ನಡೆಯುವ ಸಣ್ಣ ಸಂವಹನವೂ ಸಹ ಎಷ್ಟೊಂದು ದೊಡ್ಡ ಪರಿಣಾಮ ಬೀರುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬದರಿನಾಥ್ ಅವರು ತಮ್ಮ ಮಾತಿನ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸಿದ್ದರೂ, ಆಟಗಾರರ ನಡುವಿನ ಪರಸ್ಪರ ಗೌರವ ಮತ್ತು ಪದಬಳಕೆಯ ವಿಚಾರದಲ್ಲಿ ಈ ವಿವಾದ ಹೊಸದೊಂದು ಚರ್ಚೆಗೆ ನಾಂದಿ ಹಾಡಿರುವುದಂತು ಸುಳ್ಳಲ್ಲ.

Source link

ಟಿವಿಕೆ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿಯನ್ನೇ ಸರ್ಕಾರದ ವಿಶೇಷ ಅಧಿಕಾರಿಯಾಗಿ ನೇಮಿಸಿದ ಸಿಎಂ ವಿಜಯ್ – Kannada News | Tamil Nadu CM Vijay appoints astrologer Radhan Pandit Vettrivel as Political Special Duty Officer who predicted TVK win

ಚೆನ್ನೈ, ಮೇ 12: ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ (Joseph Vijay) ಅವರ ಗೆಲುವಿನ ಬಗ್ಗೆ ಚುನಾವಣೆಗೂ ಮುನ್ನವೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಇಂದು ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯ ಅಧಿಕಾರಿ (OSD) ಆಗಿ ನೇಮಿಸಲಾಗಿದೆ. ಈ ನೇಮಕ ಭಾರೀ ಚರ್ಚೆಗೆ ಕಾರಣವಾಗಿದೆ. ಟಿವಿಕೆ (TVK) ಪಕ್ಷವನ್ನು ಕೇವಲ 2 ವರ್ಷಗಳ ಹಿಂದೆ ಸ್ಥಾಪಿಸಲಾಗಿತ್ತು. 2024ರಲ್ಲಿ ನಟ ವಿಜಯ್ ಅವರ ರಾಜಕೀಯ ಉದಯದ ಬಗ್ಗೆ ಖ್ಯಾತ ಜ್ಯೋತಿಷಿಯಾದ ರಾಧನ್ ಪಂಡಿತ್ ಭವಿಷ್ಯ ನುಡಿದಿದ್ದರು.

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ವೈಯಕ್ತಿಕ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ವಿಜಯ್ ಮೇ 10ರಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ರಾಧನ್ ಪಂಡಿತ್ ಯಾರು?:

ವೈದಿಕ ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಆಧಾರಿತ ಮಾರ್ಗದರ್ಶನದಲ್ಲಿ ಸುಮಾರು 4 ದಶಕಗಳ ಅನುಭವ ಹೊಂದಿರುವ ರಾಧನ್ ಪಂಡಿತ್ ವೆಟ್ರಿವೇಲ್ ಭಾರತದ ಅತ್ಯಂತ ಉನ್ನತ ಮಟ್ಟದ ಸೆಲೆಬ್ರಿಟಿ ಮತ್ತು ರಾಜಕೀಯ ಜ್ಯೋತಿಷಿಗಳಲ್ಲಿ ಒಬ್ಬರು. ಪಂಡಿತ್ ವೆಟ್ರಿವೇಲ್ ಎಂದು ಕರೆಯಲ್ಪಡುವ ಈ ಜ್ಯೋತಿಷಿ 2008ರಲ್ಲಿ ದೆಹಲಿಗೆ ತೆರಳಿದ್ದರು. ಅಲ್ಲಿ ಅವರು ತಮ್ಮ ಹೆಸರನ್ನು ರಾಧನ್ ಪಂಡಿತ್ ಎಂದು ಬದಲಾಯಿಸಿಕೊಂಡರು.

ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ

ಮಾಧ್ಯಮ ವರದಿಗಳ ಪ್ರಕಾರ, ಬಿಜೆಪಿ, ಕಾಂಗ್ರೆಸ್, ಡಿಎಂಕೆ ಮತ್ತು ಎಐಎಡಿಎಂಕೆಯಾದ್ಯಂತ ರಾಧನ್ ಪಂಡಿತ್ ಅವರ ಕ್ಲೈಂಟ್‌ಗಳು ಹೆಚ್ಚಾಗಿ ಭಾರತೀಯ ರಾಜಕಾರಣಿಗಳೇ ಆಗಿದ್ದಾರೆ. ಪಂಡಿತ್ ರಾಧನ್ ಪಂಡಿತ್ ನಟ-ರಾಜಕಾರಣಿ ವಿಜಯ್ ಮತ್ತು ಟಿವಿಕೆಯ ಪ್ರಮುಖ ಬೆಂಬಲಿಗರಲ್ಲಿ ಒಬ್ಬರು. ಏಪ್ರಿಲ್‌ನಲ್ಲಿ ತಮಿಳುನಾಡಿನಲ್ಲಿ ನಡೆದ ಚುನಾವಣೆಗೆ ಬಹಳ ಮುಂಚೆಯೇ ವಿಜಯ್ ಅವರ ಜಾತಕದ ಪ್ರಕಾರ ಅವರಿಗೆ ರಾಜಕೀಯದಲ್ಲಿ ಭರ್ಜರಿ ಯಶಸ್ಸು ಸಿಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದರು. ತಮಿಳುನಾಡಿನಲ್ಲಿ 150ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ವಿಜಯ್ ಮುಖ್ಯಮಂತ್ರಿಯಾಗುತ್ತಾರೆ ಎಂದು ರಾಧನ್ ಪಂಡಿತ್ ಭವಿಷ್ಯ ನುಡಿದಿದ್ದರು.

ತಮಿಳುನಾಡಿನಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗದರ್ಶಕರಾಗಿರುವ ರಾಧನ್ ಪಂಡಿತ್ ಚುನಾವಣೆಗೂ ಬಹಳ ಮೊದಲೇ ವಿಜಯ್ ಅವರ ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದರು. ವಿಜಯ್ ಮಾತ್ರವಲ್ಲದೆ, ಮಾಜಿ ಸಿಎಂ ಜಯಲಲಿತಾ ಸೇರಿದಂತೆ ಹಲವಾರು ಪ್ರಮುಖ ರಾಜಕಾರಣಿಗಳು ರಾಧನ್ ಪಂಡಿತ್ ಅವರ ಕಚೇರಿಯ ಮುಂದೆ ಸಾಲುಗಟ್ಟಿ ನಿಂತಿದ್ದರು. 4 ದಶಕಗಳಿಂದ ಜ್ಯೋತಿಷ್ಯ ಕ್ಷೇತ್ರದಲ್ಲಿದ್ದು, ಹಲವಾರು ರಾಜಕೀಯ ದಿಗ್ಗಜರ ಭವಿಷ್ಯ ನುಡಿದಿರುವ ವ್ಯಕ್ತಿ ಇದೀಗ ಮುಖ್ಯಮಂತ್ರಿಗಳ ವಿಶೇಷ ರಾಜಕೀಯ ಕರ್ತವ್ಯ ಅಧಿಕಾರಿಯಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ

ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪ್ರಮುಖ ಗೆಲುವು ಸಾಧಿಸಿತ್ತು. ಈ ಮೂಲಕ ಟಿವಿಕೆ 108 ಸ್ಥಾನಗಳೊಂದಿಗೆ ತಮಿಳುನಾಡಿನ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳ ಬೆಂಬಲದೊಂದಿಗೆ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಸಿಎಂ ಆಗುವ ಕನಸು ಇಂದು, ನಿನ್ನೆಯದಲ್ಲ; 15 ವರ್ಷಗಳ ಹಿಂದೆಯೇ ಸೂಚನೆ ಕೊಟ್ಟಿದ್ದ ನಟ – Kannada News | Thalapathy Vijay’s 15 Year Old Viral Video Predicts His CM Journey: Hints of TVK Entry Uncovered!

ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ.

ಅಂದು ವಿಜಯ್ ಹೇಳಿದ್ದೇನು?

ವಿಜಯ್ ಆಗಿನ್ನೂ ಸಿನಿಮಾದಲ್ಲಿ ಸ್ಟಾರ್ ಆಗಿ ಬೆಳೆದಿದ್ದರು. ಅಂದಿನ ದಿನಗಳ ಸಂದರ್ಶನವೊಂದರಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ವಿಜಯ್, ‘ಸದ್ಯಕ್ಕೆ ನನ್ನ ಗಮನ ಸಿನಿಮಾದ ಮೇಲಿದೆ. ಆದರೆ, ತಮಿಳುನಾಡಿನ ಜನರಿಗಾಗಿ ಏನಾದರೂ ಮಾಡಬೇಕು ಎಂಬ ಆಸೆಯಿದೆ. ಸೂಕ್ತ ಸಮಯ, ಸಂದರ್ಭ ಬಂದಾಗ ಕಾಲವೇ ನನ್ನನ್ನು ಆ ಜಾಗದಲ್ಲಿ ತಂದು ಕೂರಿಸುತ್ತದೆ. ಅದಕ್ಕಾಗಿ ಅಡಿಪಾಯವನ್ನು ಗಟ್ಟಿಗೊಳಿಸುತ್ತಿದ್ದೇನೆ’ ಎಂದು ಹೇಳಿದ್ದರು.

ಅಂದು ನುಡಿದಂತೆ ಇಂದು ನಡೆದಿದೆ:

ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.

ಇದನ್ನೂ ಓದಿ: ವಿಜಯ್ ಫಿಟ್​​ನೆಸ್​​ ಗುಟ್ಟೇನು? ಖಾಸಗಿ ಟ್ರೈನರ್ ಹಂಚಿಕೊಂಡ ಕುತೂಹಲಕಾರಿ ಮಾಹಿತಿ

ವಿಜಯ್ ಪ್ಲ್ಯಾನ್:

ವಿಜಯ್ ಅವರು ಪಕ್ಷ ಕಟ್ಟಿದ್ದು ಕೆಲ ವರ್ಷಗಳ ಹಿಂದೇ ಆಗಿದ್ದರೂ ಅವರು ಇದಕ್ಕಾಗಿ ಸಾಕಷ್ಟು ಪ್ಲ್ಯಾನ್ ಮಾಡಿದ್ದರು. ಅಭಿಮಾನಿಗಳನ್ನು ಸಂಘಟಿಸಿ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಮೂಲಕ ಜನರಿಗೆ ಹತ್ತಿರವಾದರು. ಈಗ ಅವರು ಗೆದ್ದು ಸಿಎಂ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ – Kannada News | Thalapathy Vijay first speech at Tamil Nadu assembly

ದಳಪತಿ ವಿಜಯ್ (Thalapathy Vijay) ಸಿಎಂ ಆಗಿ ಇತ್ತೀಚೆಗಷ್ಟೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಇಂದು (ಮೇ 15) ಮೊದಲ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲ ಶಾಸಕರು ಇಂದು ಸ್ಪೀಕರ್ ಎದುರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ವಿಜಯ್ ಅವರು ಸದನವನ್ನು ಉದ್ದೇಶಿಸಿ ಇದೇ ಮೊದಲ ಬಾರಿಗೆ ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಅವರು ತಾವು ಚುನಾವಣೆಗೆ ಮುಂಚೆ ಕೊಟ್ಟಿದ್ದ ಮಾತುಗಳನ್ನು ಉಳಿಸಿಕೊಳ್ಳಲಿದ್ದೇವೆ ಎಂದು ಸಹ ಹೇಳಿದ್ದಾರೆ. ವಿಡಿಯೋ ನೋಡಿ..

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇಂಧನ ಬಿಕ್ಕಟ್ಟು; ವರ್ಕ್ ಫ್ರಂ ಹೋಂ, ಪೆಟ್ರೋಲ್ ಖರೀದಿಮಿತಿ ಇತ್ಯಾದಿ ಕ್ರಮ ಜಾರಿಯಲ್ಲಿರುವ ದೇಶಗಳು – Kannada News | Global Energy Crisis: Nations Combat Rising Oil Prices & Fuel Shortages

ನವದೆಹಲಿ, ಮೇ 12: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮತ್ತು ಆಮದು ವಸ್ತುಗಳ ಬಳಕೆ ಕಡಿಮೆ ಮಾಡಲು ವಿವಿಧ ಮಾರ್ಗೋಪಾಯಗಳನ್ನು ತಿಳಿಸಿ, ಅದನ್ನು ಪಾಲಿಸುವಂತೆ ಜನತೆ ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಮನವಿ ಮಾಡಿದ್ದು ಹೌದು. ಈ ರೀತಿ, ತೈಲ ಬೆಲೆ ಏರಿಕೆ ಮತ್ತು ಪೂರೈಕೆಯಲ್ಲಿನ ವ್ಯತ್ಯಯವನ್ನು ನಿಭಾಯಿಸಲು ವಿಶ್ವದ ಅನೇಕ ದೇಶಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ.

4 ದಿನಗಳ ಕೆಲಸದ ಅವಧಿ (4-Day Work Week): ಇಂಧನ ಉಳಿತಾಯಕ್ಕಾಗಿ ಶ್ರೀಲಂಕಾ ಮತ್ತು ಫಿಲಿಪೈನ್ಸ್‌ನಂತಹ ದೇಶಗಳು ಸರ್ಕಾರಿ ಕಚೇರಿಗಳಲ್ಲಿ ವಾರಕ್ಕೆ ಕೇವಲ 4 ದಿನಗಳ ಕೆಲಸದ ಅವಧಿಯನ್ನು ಘೋಷಿಸಿವೆ. ಇದು ಸಾರಿಗೆಗಾಗಿ ಬಳಕೆಯಾಗುವ ಇಂಧನವನ್ನು ಗಣನೀಯವಾಗಿ ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ

ಇಂಧನ ಖರೀದಿ ಮಿತಿ (Fuel Rationing): ಪೆಟ್ರೋಲ್ ಮತ್ತು ಡೀಸೆಲ್ ವ್ಯರ್ಥವಾಗುವುದನ್ನು ತಡೆಯಲು ಅನೇಕ ದೇಶಗಳಲ್ಲಿ ಫುಯೆಲ್ ರೇಷನಿಂಗ್ ಅಥವಾ ಖರೀದಿ ಮಿತಿಯನ್ನು ಜಾರಿಗೆ ತರಲಾಗಿದೆ. ವಾಹನ ಸವಾರರು ನಿಗದಿತ ಪ್ರಮಾಣದ ಇಂಧನವನ್ನು ಮಾತ್ರ ಖರೀದಿಸಲು ಅವಕಾಶ ನೀಡಲಾಗುತ್ತಿದೆ.

ಮನೆಯಿಂದಲೇ ಕೆಲಸ (Work From Home): ಹಲವು ದೇಶಗಳು ಇಂಧನ ಬಳಕೆಯನ್ನು ತಗ್ಗಿಸಲು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಧ್ಯವಿರುವ ಕಡೆಗಳಲ್ಲಿ ‘ವರ್ಕ್ ಫ್ರಮ್ ಹೋಮ್’ ನೀಡುವಂತೆ ಸೂಚಿಸಿವೆ.

ಶಾಲಾ-ಕಾಲೇಜುಗಳ ಮೇಲೆ ಪರಿಣಾಮ: ಬಾಂಗ್ಲಾದೇಶ ಮತ್ತು ಲಾವೋಸ್‌ನಂತಹ ದೇಶಗಳಲ್ಲಿ ವಿದ್ಯುತ್ ಮತ್ತು ಇಂಧನ ಉಳಿಸಲು ಶಾಲಾ-ಕಾಲೇಜುಗಳ ರಜೆಯನ್ನು ಹೆಚ್ಚಿಸಲಾಗಿದೆ ಅಥವಾ ತರಗತಿಗಳ ಅವಧಿಯನ್ನು ಕಡಿತಗೊಳಿಸಲಾಗಿದೆ.

ವಿದ್ಯುತ್ ಉಳಿತಾಯ ಕ್ರಮಗಳು: ಸರ್ಕಾರಿ ಕಚೇರಿಗಳಲ್ಲಿ ಎಸಿ (AC) ಬಳಕೆಯನ್ನು ಸೀಮಿತಗೊಳಿಸುವುದು, ರಾತ್ರಿ ವೇಳೆ ಅನಗತ್ಯ ದೀಪಗಳನ್ನು ಆರಿಸುವುದು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸಲು ಜನರನ್ನು ಪ್ರೇರೇಪಿಸುವಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಎಐನಿಂದ ಉದ್ಯೋಗಗಳು ಹೋಗೋದು ಸುಳ್ಳಾ? ಕೆಲಸ ಸೇರುವ ಸಮಯ ಇದು ಎನ್ನುತ್ತಾರೆ ಜೆನ್ಸೆನ್ ಹುವಾಂಗ್

ವಿಶ್ವದ ಪ್ರಮುಖ ತೈಲ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೇಲೆ ಇರಾನ್ ಯುದ್ಧದ ಪರಿಣಾಮ ಬೀರಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದ್ದು, ಬೆಲೆಗಳು ದಾಖಲೆ ಮಟ್ಟಕ್ಕೆ ಏರುತ್ತಿವೆ.

ಒಟ್ಟಾರೆಯಾಗಿ, ಯುದ್ಧದ ಕಾರಣದಿಂದ ಉಂಟಾಗಿರುವ ಆರ್ಥಿಕ ಹೊಡೆತವನ್ನು ತಗ್ಗಿಸಲು ವಿಶ್ವದ ಹಲವು ದೇಶಗಳು ತಮ್ಮದೇ ರೀತಿಯಲ್ಲಿ ಪ್ರಯತ್ನಗಳನ್ನು ಮಾಡುತ್ತಿವೆ. ಭಾರತ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಆಲೋಚನೆಗಳನ್ನು ಮಾಡಿ, ಪ್ರಯತ್ನ ಶುರುವಿಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ – Kannada News | Krunal Pandya Sets Sights on 2027 ODI World Cup Comeback

ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮ್ಯಾಚ್-ವಿನ್ನರ್ ಆಗಿ ಹೊರಹೊಮ್ಮುತ್ತಿರುವ ಕೃನಾಲ್ ಪಾಂಡ್ಯ, ರಾಷ್ಟ್ರೀಯ ತಂಡಕ್ಕೆ ಮರಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದಾರೆ. 2027ರಲ್ಲಿ ಆಫ್ರಿಕಾ ಮಣ್ಣಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದೇ ನನ್ನ ಪರಮ ಗುರಿ ಎಂದು ಘೋಷಿಸಿರುವ ಅವರ ಈ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿದ ಕೃನಾಲ್ ಪಾಂಡ್ಯ, ನನಗೆ 6-7 ವಯಸ್ಸಿದ್ದಾಗಿನಿಂದಲೂ ದೇಶಕ್ಕಾಗಿ ಆಡುವ ಕನಸು ಕಂಡಿದ್ದೆ. ಆ ಕನಸು ಇಂದಿಗೂ ಬದಲಾಗಿಲ್ಲ. ದೇಶಕ್ಕಾಗಿ ಆಡುವುದು ನನ್ನ ಏಕೈಕ ಗುರಿ. ಅದರಂತೆ 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಕೃನಾಲ್ ಪಾಂಡ್ಯ 2021ರ ಜುಲೈನಲ್ಲಿ ಕೊನೆಯ ಬಾರಿಗೆ ಭಾರತ ತಂಡದ ಪರ ಆಡಿದ್ದರೂ, ರಾಷ್ಟ್ರೀಯ ತಂಡಕ್ಕೆ ಮರಳುವ ಹಂಬಲ ಅವರಲ್ಲಿ ಇನ್ನೂ ಬಲವಾಗಿದೆ. ಈ ಹಂಬಲಕ್ಕೆ ಬೆಂಬಲವಾಗಿ ಅವರ ಐಪಿಎಲ್ ಪ್ರದರ್ಶನ ನಿಂತಿದೆ.

ಕೃನಾಲ್ ಭರ್ಜರಿ ಪ್ರದರ್ಶನ:

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2026ರಲ್ಲಿ ಕೃಣಾಲ್ ಪಾಂಡ್ಯ ಆರ್‌ಸಿಬಿ ಪರ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಈ ಫಾರ್ಮ್​​ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

  • ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ ವಿರುದ್ಧದ ಕಠಿಣ ಪರಿಸ್ಥಿತಿಯಲ್ಲಿ ಕೇವಲ 46 ಎಸೆತಗಳಲ್ಲಿ 73 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಈ ಮೂಲಕ ಆರ್​ಸಿಬಿ ತಂಡಕ್ಕೆ ರೋಚಕ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
  • ಬೌಲಿಂಗ್: ಈ ಸೀಸನ್​ನಲ್ಲಿ 10 ವಿಕೆಟ್‌ಗಳನ್ನು ಕಬಳಿಸಿರುವ ಕೃನಾಲ್, ಸ್ಪಿನ್ ವಿಭಾಗದಲ್ಲಿ ಆರ್‌ಸಿಬಿಗೆ ಸಮತೋಲನ ನೀಡುತ್ತಿದ್ದಾರೆ.
  •  ದಾಖಲೆ: ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ಫೈನಲ್‌ನಲ್ಲಿ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿ ಪಡೆದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನೂ ಅವರು ಹೊಂದಿದ್ದಾರೆ (2017 ಮತ್ತು 2025).

ಇದನ್ನೂ ಓದಿ: ಕೃನಾಲ್ ಪಾಂಡ್ಯ ಅಲ್ಲೇ ಸಾಯಬೇಕಿತ್ತು… ಇದೆಂತಹ ನೀಚತನ..!

ಸವಾಲುಗಳು ಮತ್ತು ಸಾಧ್ಯತೆಗಳು:

2027ರ ವಿಶ್ವಕಪ್ ವೇಳೆಗೆ ಕೃನಾಲ್ ಪಾಂಡ್ಯ ಅವರಿಗೆ 36-37 ವರ್ಷ ವಯಸ್ಸಾಗಲಿದ್ದು, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರಂತಹ ಅನುಭವಿಗಳ ಜೊತೆ ಸ್ಪರ್ಧಿಸಬೇಕಾಗುತ್ತದೆ. ಆದಾಗ್ಯೂ, ಆರ್‌ಸಿಬಿ 2025ರಲ್ಲಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೃನಾಲ್, ಒತ್ತಡದ ಸಮಯದಲ್ಲಿ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದಾರೆ.

“ಮುಂದಿನ ವರ್ಷ ವಿಶ್ವಕಪ್ ಬರುತ್ತಿದೆ. ನಾನು ಉತ್ತಮ ಪ್ರದರ್ಶನ ಮುಂದುವರಿಸುತ್ತೇನೆ ಎಂದು ನಂಬಿದ್ದೇನೆ. ಅವಕಾಶ ಸಿಕ್ಕರೆ ಅದು ನನಗೆ ಮತ್ತು ನನ್ನ ಕುಟುಂಬಕ್ಕೆ ವಿಶೇಷ ಕ್ಷಣವಾಗಿರಲಿದೆ” ಎಂದು ಕೃನಾಲ್ ಪಾಂಡ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source link

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ – Kannada News | NEET UG Scam: CBI Raids Nashik, Major Breakthrough in Paper Leak Investigation

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವಲ್ಲಿ ಅಥವಾ ಹಣಕಾಸಿನ ವ್ಯವಹಾರ ಕುದುರಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ನಾಸಿಕ್‌ನಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಪತ್ರಿಕೆಯು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗದೆ, ನಾಸಿಕ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಹಂಚಿಕೆಯಾಗಿರುವ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಶಂಕಿತನ ಮೊಬೈಲ್ ಮತ್ತು ಲಾಪ್ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಾಟ್ಸಾಪ್ ಸಂದೇಶಗಳ ಮೂಲಕ ಪತ್ರಿಕೆ ಸೋರಿಕೆಯಾಗಿರುವ ದತ್ತಾಂಶಗಳನ್ನು ಸಿಬಿಐ ಸಂಗ್ರಹಿಸುತ್ತಿದೆ. ಈಗಾಗಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಹೊಸ ನಂಟಿನಿಂದಾಗಿ ಇನ್ನಷ್ಟು ದೊಡ್ಡ ವ್ಯಕ್ತಿಗಳು ಸಿಬಿಐ ಬಲೆಗೆ ಬೀಳುವ ಸಾಧ್ಯತೆಯಿದೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version