Headlines

ಇಂಧನ ಬಿಕ್ಕಟ್ಟು; ವರ್ಕ್ ಫ್ರಂ ಹೋಂ, ಪೆಟ್ರೋಲ್ ಖರೀದಿಮಿತಿ ಇತ್ಯಾದಿ ಕ್ರಮ ಜಾರಿಯಲ್ಲಿರುವ ದೇಶಗಳು – Kannada News | Global Energy Crisis: Nations Combat Rising Oil Prices & Fuel Shortages

ನವದೆಹಲಿ, ಮೇ 12: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಮತ್ತು ಆಮದು ವಸ್ತುಗಳ ಬಳಕೆ ಕಡಿಮೆ ಮಾಡಲು ವಿವಿಧ ಮಾರ್ಗೋಪಾಯಗಳನ್ನು ತಿಳಿಸಿ, ಅದನ್ನು ಪಾಲಿಸುವಂತೆ ಜನತೆ ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಮನವಿ ಮಾಡಿದ್ದು ಹೌದು. ಈ ರೀತಿ, ತೈಲ ಬೆಲೆ ಏರಿಕೆ ಮತ್ತು ಪೂರೈಕೆಯಲ್ಲಿನ ವ್ಯತ್ಯಯವನ್ನು ನಿಭಾಯಿಸಲು ವಿಶ್ವದ ಅನೇಕ ದೇಶಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ. 4 ದಿನಗಳ ಕೆಲಸದ…

Read More

ಇದುವೇ ನನ್ನ ಏಕೈಕ ಗುರಿ: ಮನದಿಂಗಿತ ಬಿಟ್ಟಿಟ್ಟ ಕೃನಾಲ್ ಪಾಂಡ್ಯ – Kannada News | Krunal Pandya Sets Sights on 2027 ODI World Cup Comeback

ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮ್ಯಾಚ್-ವಿನ್ನರ್ ಆಗಿ ಹೊರಹೊಮ್ಮುತ್ತಿರುವ ಕೃನಾಲ್ ಪಾಂಡ್ಯ, ರಾಷ್ಟ್ರೀಯ ತಂಡಕ್ಕೆ ಮರಳುವ ಇಚ್ಛೆಯನ್ನು ಬಹಿರಂಗಪಡಿಸಿದ್ದಾರೆ. 2027ರಲ್ಲಿ ಆಫ್ರಿಕಾ ಮಣ್ಣಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದೇ ನನ್ನ ಪರಮ ಗುರಿ ಎಂದು ಘೋಷಿಸಿರುವ ಅವರ ಈ ಹೇಳಿಕೆ ಈಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಕೃನಾಲ್ ಪಾಂಡ್ಯ, ನನಗೆ 6-7 ವಯಸ್ಸಿದ್ದಾಗಿನಿಂದಲೂ ದೇಶಕ್ಕಾಗಿ ಆಡುವ ಕನಸು ಕಂಡಿದ್ದೆ. ಆ ಕನಸು ಇಂದಿಗೂ ಬದಲಾಗಿಲ್ಲ….

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಸಿಬಿಐನಿಂದ ಮಹತ್ವದ ಸಾಕ್ಷಿ ಪತ್ತೆ – Kannada News | NEET UG Scam: CBI Raids Nashik, Major Breakthrough in Paper Leak Investigation

ದೆಹಲಿ, ಮೇ.12: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಈಗ ಮಹಾರಾಷ್ಟ್ರದ ನಾಸಿಕ್ ನಗರದ ಲಿಂಕ್ ಇರುವುದು ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ (CBI) ಅಧಿಕಾರಿಗಳು ನಾಸಿಕ್‌ನಲ್ಲಿ ಕಾರ್ಯಾಚರಣೆ ನಡೆಸಿ ಓರ್ವ ಪ್ರಮುಖ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ…

Read More

ವಿಜಯಪುರ: ಬೀದಿನಾಯಿಗಳ ಹಾವಳಿ ಬೆನ್ನಲ್ಲೇ ದುಷ್ಕರ್ಮಿಗಳಿಂದ ವಿಷಪ್ರಾಶನ; 6 ಶ್ವಾನಗಳು ಸಾವು – Kannada News | Vijayapura Stray Dog Menace Sparks Outrage After Miscreants Poison 6 Dogs

ವಿಜಯಪುರ, ಮೇ 12: ನಗರದಲ್ಲಿ ಬೀದಿನಾಯಿಗಳ (street dogs) ಹಾವಳಿ ಮುಂದುವರಿದಿರುವ ಬೆನ್ನಲ್ಲೇ ದುಷ್ಕರ್ಮಿಗಳು ಬೀದಿನಾಯಿಗಳಿಗೆ ವಿಷಾಹಾರ ನೀಡಿದ್ದು, ಆರು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿರುವ (death) ಆತಂಕಕಾರಿ ಘಟನೆ ಶಾಂತಿ ನಗರದಲ್ಲಿ ನಡೆದಿದೆ. ಎರಡು ನಾಯಿಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಶಾಂತಿ ನಗರದಲ್ಲಿ ಈವರೆಗೆ ನಾಯಿಗಳ ದಾಳಿ ಪ್ರಕರಣ ವರದಿಯಾಗದಿದ್ದರೂ ವಿಷಾಹಾರ ನೀಡಿರುವುದು ಮಾತ್ರ ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಷ ಹಾಕಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಮುಖ್ಯಾಂಶಗಳು ವಿಜಯಪುರದಲ್ಲಿ ಬೀದಿನಾಯಿಗಳಿಗೆ…

Read More

ಗದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ: ಸಾರ್ವಜನಿಕರು, ಸಿಬ್ಬಂದಿ ಮೊಬೈಲ್​​ ಟಾರ್ಚೇ ಇಲ್ಲಿ ಬೆಳಕು! – Kannada News | Electricity Cut Over Rupees 3,000 Dues, Gadag Government Office Left in Darkness for 8 Months

ದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ ಗದಗ, ಮೇ 12: ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ, ಇದರಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ರಾಜ್ಯ ಸರ್ಕಾರವೇನೋ ಗರ್ವದಿಂದ ಹೇಳಿಕೊಳ್ಳುತ್ತಿದೆ. ಆದರೆ ಇದೇ ಸರ್ಕಾರದ ಅಡಿಯಲ್ಲಿ ಬರುವ ಗದಗದ ಕಚೇರಿಯೊಂದು ಒಂದೆರಡಲ್ಲ ಬರೋಬ್ಬರಿ 8 ತಿಂಗಳಿನಿಂದ ಕತ್ತಲೆ ಭಾಗ್ಯದಲ್ಲಿದೆ. ಬಿಲ್​​ ಪಾವತಿಸದೇ ಇರುವ ಕಾರಣ ವಿದ್ಯುತ್​​ ಸಂಪರ್ಕ ಕಡಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿಯೇ ದಿನನಿತ್ಯದ ವ್ಯವಹಾರ ನಿರ್ವಹಿಸಬೇಕಾದ ಸ್ಥಿತಿ…

Read More

ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು – Kannada News | Mouni Roy and Suraj Nambiar unfollow each other on Instagram Divorce rumours viral

ಖ್ಯಾತ ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಈ ದಂಪತಿ, ತಮ್ಮ ಪ್ರವಾಸ ಮತ್ತು ಸಂತೋಷದ ಕ್ಷಣಗಳ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಈಗ ದಿಢೀರನೆ ಅನ್‌ಫಾಲೋ ಮಾಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೌನಿ ಮತ್ತು ಸೂರಜ್ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಸೂರಜ್ ಅವರು ತಮ್ಮ ಪ್ರೊಫೈಲ್‌ನಿಂದ ಮದುವೆಯ…

Read More

ಪ್ರಧಾನಿ ಮೋದಿ ನೀಡಿದ ‘ಮಿತವ್ಯಯ ಮಂತ್ರ’ದ ಹಿಂದಿನ ಲೆಕ್ಕಾಚಾರವೇನು? 23 ಲಕ್ಷ ಕೋಟಿ ರೂ. ಉಳಿತಾಯಕ್ಕೆ ಸಜ್ಜಾಗುತ್ತಿದೆ ಭಾರತ! – Kannada News | Indias Forex Challenge: Modis Plan to Curb Gold, Fuel Imports

ದೆಹಲಿ, ಮೇ.12: ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿರುವ ಆರ್ಥಿಕ ಶಿಸ್ತಿನ ಕರೆ ಕೇವಲ ಸಲಹೆಯಲ್ಲ, ಅದು 23 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಉಳಿತಾಯದ ಮಾಸ್ಟರ್ ಪ್ಲಾನ್. ಜಾಗತಿಕ ಯುದ್ಧ ಮತ್ತು ಅನಿಶ್ಚಿತತೆಯ ನಡುವೆ ಭಾರತದ ವಿದೇಶಿ ವಿನಿಮಯ ಸಂಗ್ರಹವನ್ನು ರಕ್ಷಿಸಲು ಪ್ರಧಾನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಆರ್‌ಬಿಐ ದತ್ತಾಂಶದಂತೆ, ಫೆಬ್ರವರಿಯಲ್ಲಿ 728 ಶತಕೋಟಿ ಡಾಲರ್ ಇದ್ದ ವಿದೇಶಿ ವಿನಿಮಯ ಸಂಗ್ರಹವು ಏಪ್ರಿಲ್ ವೇಳೆಗೆ 691 ಶತಕೋಟಿ ಡಾಲರ್ಗೆ ಕುಸಿದಿದೆ….

Read More

ಲಾರೆನ್ಸ್ ಬಿಷ್ಣೋಯಿ ಕುರಿತ ಡಾಕ್ಯುಸೀರೀಸ್, ಹೈಕೋರ್ಟ್ ಮಹತ್ವದ ಆದೇಶ – Kannada News | Docuseries about criminal Lawrence Bishnoi HC gives order

ಹಲವು ಕೊಲೆ, ಸುಲಿಗೆ, ಬೆದರಿಕೆ ಇನ್ನೂ ಹತ್ತು ಹಲವು ಪ್ರಕರಣಗಳಲ್ಲಿ ಆರೋಪಿ ಮತ್ತು ಕೆಲ ಪ್ರಕರಣಗಳಲ್ಲಿ ಅಪರಾಧಿ ಸಹ ಆಗಿರುವ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಜೀವನವನ್ನು ಆಧರಿಸಿದ ಸಾಕ್ಷ್ಯಚಿತ್ರ (Docuseries) ಬಿಡುಗಡೆ ಕುರಿತಂತೆ ಪಂಜಾಬ್ ಮತ್ತು ಹರಿಯಾಣ ನ್ಯಾಯಾಲಯ ಆದೇಶವೊಂದನ್ನು ನೀಡಿದೆ. ‘ಲಾರೆನ್ಸ್ ಆಫ್ ಪಂಜಾಬ್’ (Lawrence of Punjab) ಡಾಕ್ಯು ಸೀರೀಸ್ ಕಳೆದ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಖುದ್ದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಪಂಜಾಬ್ ಪೊಲೀಸರು ಈ ಡಾಕ್ಯು ಸೀರೀಸ್…

Read More

ಶ್ರೇಯಸ್ ಅಯ್ಯರ್ ಅವರ ಒಂದು ನಿರ್ಧಾರ ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣವಾಯಿತೇ? – Kannada News | Shreyas Iyer explains why Chahal didn’t bowl a single over vs Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 210 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್​ ಗಳಿಸಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | NEET Paper Leak Case: 45 Detained for Questioning; CM Vijay Closes 717 Liquor Shops and Other Major News Updates

ಜೈಪುರ/ನವದೆಹಲಿ, ಮೇ 12: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ…

Read More