Headlines

Samudrika Shastra: ಅಂಗೈಯ ಈ ಭಾಗದಲ್ಲಿ ಮಚ್ಚೆ ಇದ್ದರೆ, ನಿಮಗೆ ಎಂದಿಗೂ ಸಂಪತ್ತಿನ ಕೊರತೆ ಇರುವುದಿಲ್ಲ!

ಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈ ಮತ್ತು ಮುಖದ ಮೇಲಿನ ಮಚ್ಚೆಗಳು ವ್ಯಕ್ತಿಯ ಅದೃಷ್ಟ, ಸಂಪತ್ತು ಮತ್ತು ಜೀವನದ ಯಶಸ್ಸಿನ ಪಥವನ್ನು ಸೂಚಿಸುತ್ತವೆ. ವಿಶೇಷವಾಗಿ ಅಂಗೈಯಲ್ಲಿರುವ ಮಚ್ಚೆಗಳು ಅಪಾರ ಐಶ್ವರ್ಯದ ಸಂಕೇತವೆಂದು ನಂಬಲಾಗಿದೆ. ಹಾಗಾದರೆ, ಈ ಮಚ್ಚೆಗಳು ವ್ಯಕ್ತಿಯ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅಂಗೈಯ ಮಧ್ಯಭಾಗದ ಮಚ್ಚೆ: ಅದೃಷ್ಟದ ಲಕ್ಷಣ: ಅಂಗೈಯ ಮಧ್ಯಭಾಗದಲ್ಲಿ ಮಚ್ಚೆ ಇರುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಇಂತಹ ವ್ಯಕ್ತಿಗಳು ಜೀವನದಲ್ಲಿ ಬಹಳ ಬೇಗನೆ ಆರ್ಥಿಕ ಸ್ಥಿರತೆಯನ್ನು ಮತ್ತು…

Read More

ಬಿಹಾರದಲ್ಲಿ ಶೀಘ್ರದಲ್ಲೇ ಬಿಜೆಪಿಗೆ ಸಿಎಂ ಸ್ಥಾನ; ಏಪ್ರಿಲ್ 10ರ ಬಳಿಕ ಅಂತಿಮ ನಿರ್ಧಾರ ಸಾಧ್ಯತೆ

ಪಾಟ್ನಾ, ಮಾರ್ಚ್ 6: ಬಿಹಾರದಲ್ಲಿ ಹೊಸ ರಾಜ್ಯ ಸರ್ಕಾರ ರಚನೆ ಕುರಿತು ಚರ್ಚೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಭದ್ರಪಡಿಸಿಕೊಳ್ಳಲು ಸಜ್ಜಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ತಕ್ಷಣ ರಾಜೀನಾಮೆ ನೀಡುವ ಸಾಧ್ಯತೆಯಿಲ್ಲ. ಏಪ್ರಿಲ್ 10ರವರೆಗೆ ಅವರು ಅಧಿಕಾರದಲ್ಲಿ ಮುಂದುವರಿಯಬಹುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ನಡುವೆ ರಾಜಕೀಯ ಪರಿವರ್ತನೆಯ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ನಂತರವೇ ಸಿಎಂ ಸ್ಥಾನದ ಬದಲಾವಣೆಯಾಗುವ…

Read More

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್: ಸರ್ಕಾರದ ನಡೆಗೆ ಬಿಜೆಪಿ ರಾಜ್ಯಸಭೆ ಸದಸ್ಯ ಮೆಚ್ಚುಗೆ

ಬೆಂಗಳೂರು, ಮಾರ್ಚ್​​ 06: ಕರ್ನಾಟಕದ ಇತಿಹಾಸದಲ್ಲೇ ಐತಿಹಾಸಿಕ 17ನೇ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ್ದಾರೆ. ರೈತರು, ಮಹಿಳೆಯರು ಸೇರಿದಂತೆ ಮಕ್ಕಳಿಗೂ ಆದ್ಯತೆ ನೀಡಲಾಗಿದೆ. ಅದರಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್​ (Social Media Ban) ಮಾಡಲಾಗಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ (Lahar Singh Siroya) ಸ್ವಾಗತಿಸಿದ್ದಾರೆ. ಸರ್ಕಾರದ ನಡೆಗೆ ಲಹರ್ ಸಿಂಗ್ ಸಿರೋಯಾ…

Read More

ಹಣದಾಸೆಗೆ ಗೆಳೆಯನ ಕೊಲೆ: ಸ್ನೇಹಿತನ ದುಡ್ಡಲ್ಲೇ 2ನೇ ಪತ್ನಿಗೆ ಟಿವಿ ಗಿಫ್ಟ್ ನೀಡಿದ್ದ ಆಸಾಮಿ ಅರೆಸ್ಟ್

ತುಮಕೂರು, ಮಾರ್ಚ್​​ 06: ಜಿಲ್ಲೆಯ ತಿಪಟೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವ ಪ್ರಕರಣಕ್ಕೆ ಇದೀಗ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಮೂರು ಲಕ್ಷ ರೂ ಹಣದಾಸೆಗೆ 7 ವರ್ಷದ ಸ್ನೇಹಕ್ಕೆ ಗೆಳೆಯ ಕೊಳ್ಳಿ ಇಟ್ಟಿದ್ದಾನೆ. ಕೊಲೆ (murder) ಬಳಿಕ ಗೆಳೆಯನ ಹಣದಲ್ಲೇ ಎರಡನೇ ಪತ್ನಿಗೆ ಹೊಸ ಟಿವಿ ಖರೀದಿಸಿ ಗಿಫ್ಟ್ ನೀಡಿದ್ದ. ಅಷ್ಟೇ ಅಲ್ಲದೆ ಪತ್ನಿಯೊಂದು ಲಾಡ್ಜ್​ನಲ್ಲಿ ಮಸ್ತಿ ಮಾಡಿ ಪರಾರಿಯಾಗಿದ್ದ ಭೂಪನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹೊನ್ನವಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಡೆದಿದ್ದೇನು?…

Read More

2026 T20 WC Final Prize Money: ಗೆದ್ದ ತಂಡದ ಮೇಲೆ ಹಣದ ಮಳೆ; ಸೋತ ತಂಡಕ್ಕೂ ಸಿಗಲಿದೆ ಕೋಟಿ

ಫೆಬ್ರವರಿ 7 ರಿಂದ ಆರಂಭವಾಗಿದ್ದ 2026 ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದೆಡೆ ಭಾರತ ಸತತ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗಾಗಿ ಎದುರು ನೋಡುತ್ತಿದೆ. ಇದರ ಜೊತೆಗೆ ಚಾಂಪಿಯನ್ ತಂಡದ ಮೇಲೆ ಕೋಟಿಗಳ ಮಳೆ ಸುರಿಸಲು ಐಸಿಸಿ ತಯಾರಿ ಮಾಡಿಕೊಂಡಿದೆ. ಹಿಂದಿನ ಒಂಬತ್ತು ಟಿ20 ವಿಶ್ವಕಪ್…

Read More

UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ

ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ದೇಶದಾದ್ಯಂತ ಕುತೂಹಲಕ್ಕೆ ತೆರೆ ಎಳೆದಿದೆ. ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅನುಜ್ ಅಗ್ನಿಹೋತ್ರಿ ಅವರು ಮೊದಲ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ಅವರ ಬೆನ್ನಲ್ಲೇ ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ. ಕಳೆದ ವರ್ಷದ ಮೇ 25 ರಂದು ಪೂರ್ವಭಾವಿ ಪರೀಕ್ಷೆ ಆರಂಭವಾಗಿತ್ತು. ನಂತರ ಆಗಸ್ಟ್ 22 ರಿಂದ…

Read More

ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ

ಬೆಂಗಳೂರು, (ಮಾರ್ಚ್ 06): ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನದ ನೀಡದಿದ್ದರಿಂದ ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿರುವ ಚೊಂಬು ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ಬಜೆಟ್​…

Read More

Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ  ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್​​ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ…

Read More

Karnataka Budget 2026: ಕರ್ನಾಟಕದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು. ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ…

Read More

ತ್ರಿಷಾ, ವಿಜಯ್ ಖುಲ್ಲಂ ಖುಲ್ಲಾ ತಿರುಗಾಡಿದ್ದು ಸರಿಯೇ? ಖಾರವಾಗಿ ಪ್ರತಿಕ್ರಿಯಿಸಿದ ಫ್ಯಾನ್ಸ್

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ (Trisha Krishnan) ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ (Thalapathy Vijay) ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು,…

Read More