Headlines

NEET Exam 2026 Cancelled: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು! – Kannada News | NEET Exam Cancelled Over Paper Leak: CBI Probe Ordered for Rajasthan Paper Leak Case

ನವದೆಹಲಿ, ಮೇ 12: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಸಂಸ್ಥೆ ರದ್ದು ಮಾಡಿದೆ. ರಾಜಸ್ಥಾನದ ಸೀಕರ್​ನಲ್ಲಿ ಕೈ ಬರಹದಲ್ಲಿದ್ದ 140 ಪ್ರಶ್ನೆಗಳಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಇದೇ ಹಿನ್ನೆಲೆ ಈಗ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರ್ಧಾರ ಮಾಡಲಾಗಿದೆ. (ಮಾಹಿತಿ ಅಪ್ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 12:29 pm, Tue, 12…

Read More

ವಿಜಯ್ ಸೂಟು-ಸ್ಟಾಲಿನ್ ಪಂಚೆ: ಅಣ್ಣಾಮಲೈ ಸಖತ್ ಟಾಂಗ್ – Kannada News | K Annamalai constructive criticism about DMK’s family politics and Vijay’s suit

ದಳಪತಿ ವಿಜಯ್ (Thalapathy Vijay) ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 60 ವರ್ಷಗಳ ಡಿಎಂಕೆ ಮತ್ತು ಎಐಎಡಿಎಂಕೆಯ ಸತತ ಪ್ರಾಬಲ್ಯವನ್ನು ವಿಜಯ್ ಮುರಿದಿದ್ದಾರೆ. ವಿಜಯ್ ಅವರು ತಮ್ಮ ಪ್ರಮಾಣ ವಚನಕ್ಕೆ ಕಪ್ಪು ಬಣ್ಣದ ಸೂಟು ಧರಿಸಿ ಆಗಮಿಸಿದ್ದರು. ಸಾಮಾನ್ಯವಾಗಿ ರಾಜಕಾರಣಿಗಳು, ಬಿಳಿ ಬಣ್ಣದ ಶರ್ಟ್ ಪಂಚೆ ಅಥವಾ ಧೋತಿಗಳನ್ನು ಉಡುವುದು ರೂಢಿ ಆದರೆ ವಿಜಯ್ ಅವರ ಸಂಪ್ರದಾಯ ಮರಿದು ಕಪ್ಪು ಬಣ್ಣದ ಸೂಟು, ಬಿಳಿ ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟು ಧರಿಸಿ ಬಂದಿದ್ದರು….

Read More

Video: ಚಾಲಕನ ಕಿರುನಿದ್ದೆ, ಅಪ್ಪಳಿಸಿದ ಟ್ರಕ್; ಮೈ ಜುಂ ಎನಿಸುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral Drowsy Driving Accident: Truck Hits Divider, 3M Views – Road Safety Alert

ನಿದ್ದೆಯ ಮಂಪರಿನಲ್ಲಿ ಟ್ರಕ್ ಚಲಾಯಿಸಿದ ಚಾಲಕನೋರ್ವ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್​​ಗೆ ಗುದ್ದಿರುವ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. @anilsawajdm ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಚಾಲಕರ ಬೇಜವಾಬ್ದಾರಿಗೆ ಸಾಕ್ಷಿಯಾಗಿದ್ದು, ಈಗಾಗಲೇ 30 ಲಕ್ಷಕ್ಕೂ (3 ಮಿಲಿಯನ್) ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಚಾಲಕನ ಕಿರುನಿದ್ದೆ ಅಥವಾ ಆಲಸ್ಯದ ಕಾರಣದಿಂದ ಸಂಭವಿಸಿದ ಈ ಅಪಘಾತವು ದಾರಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುವಂತಿದ್ದು, ನೆಟ್ಟಿಗರು ಈ ವಿಡಿಯೋ ನೋಡಿ ಸಂಚಾರ ನಿಯಮಗಳ ಪಾಲನೆ…

Read More

ಮತ್ತೆ ಆನ್​ಲೈನ್ ಕ್ಲಾಸ್ ವ್ಯವಸ್ಥೆ ಬಳಸಲು ಶಾಲಾ ಕಾಲೇಜುಗಳಿಗೆ ಪ್ರಧಾನಿ ಸಲಹೆ – Kannada News | PM Modi’s Fuel Saving Plea: Online Classes, WFH Amidst West Asia Crisis

ವಡೋದರಾ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತು ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಇಂಧನ ಉಳಿಸಲು ವರ್ಕ್ ಫ್ರಂ ಹೋಮ್, ಸಾರ್ವಜನಿಕ ಸಾರಿಗೆ ಬಳಕೆ ಇತ್ಯಾದಿ ಸಲಹೆ ಕೊಟ್ಟಿದ್ದಾರೆ. ಇದೇ ವೇಳೆ, ಶಾಲಾ ಕಾಲೇಜುಗಳಿಗೂ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುವ ಕುರಿತು ಮತ್ತು ಇಂಧನ ಉಳಿತಾಯಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಅನುಸರಿಸಿದಂತೆ,…

Read More

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! – Kannada News | Anjanadri Temple Gold Donation Controversy: Kolar Administration Re verifies Documents of Mahesh Reddy

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! ಕೊಪ್ಪಳ, ಮೇ 12: ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೀಡಿದ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ವಿಚಾರದಲ್ಲಿ ಈಗ ಗೊಂದಲ ಮೂಡಿದ್ದು, ಜಿಲ್ಲಾಡಳಿತವು ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ. ಪಂಚನಾಮ ಪ್ರಕ್ರಿಯೆಯ ನಂತರ ಎಲ್ಲಾ ಆಭರಣಗಳನ್ನು ದೇವಸ್ಥಾನದ ಸಮಿತಿಯ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ….

Read More

ವಿರಾಟ್ ಕೊಹ್ಲಿ ಟೆಸ್ಟ್​ ನಿವೃತ್ತಿಗೆ ಒಂದು ವರ್ಷ; ಕಂಬ್ಯಾಕ್ ಅಸಾಧ್ಯ – Kannada News | Virat Kohli Test Legacy: One Year Since His Absence; Unlikely Comeback and Records

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ (ಮೇ 12) ಸರಿಯಾಗಿ ಒಂದು ವರ್ಷ ಕಳೆದಿದೆ. ಆಧುನಿಕ ಕ್ರಿಕೆಟ್‌ನ ‘ರನ್ ಮಷೀನ್’ ಎಂದೇ ಖ್ಯಾತರಾಗಿದ್ದ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಹೊಸ ಆಕ್ರಮಣಕಾರಿ ಗುಣವನ್ನು ತಂದುಕೊಟ್ಟವರು. ಈ ದಿನವನ್ನು ಎಲ್ಲರೂ ನೆನಪಿಸಿಕೊಳ್ಳಿತ್ತಿದ್ದಾರೆ. ವಿರಾಟ್ ಕೊಹ್ಲಿ ಕೇವಲ ಒಬ್ಬ ಬ್ಯಾಟರ್ ಆಗಿ ಮಾತ್ರವಲ್ಲದೆ, ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಒಟ್ಟು 123 ಪಂದ್ಯಗಳನ್ನು ಆಡಿರೋ ಅವರು, 9,230 ರನ್​ ಬಾರಿಸಿದ್ದಾರೆ. ಬ್ಯಾಟಿಂಗ್ ಸರಾಸರಿ 49.15…

Read More

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ – Kannada News | AIADMK Faces Split as Shanmugam Faction Backs CM Vijays TVK

ಚೆನ್ನೈ, ಮೇ 12: ತಮಿಳುನಾಡು ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ಪಕ್ಷವು ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಇಬ್ಭಾಗವಾಗಿದೆ. ಸಿ.ವಿ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಮುಖ್ಯಮಂತ್ರಿ ವಿಜಯ್​ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಅಣ್ಣಾ ಡಿಎಂಕೆ ಸ್ಥಾಪನಾ ತತ್ವಗಳಿಗೆ ವಿರುದ್ಧವಾಗಿ, ಎಡಪ್ಪಾಡಿ ಪಳನಿಸ್ವಾಮಿ ಅವರು ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು ಎಂಬ ಆರೋಪವೇ ಈ ಬಂಡಾಯಕ್ಕೆ ಮುಖ್ಯ ಕಾರಣ. ಡಿಎಂಕೆಯನ್ನು ಸೈದ್ಧಾಂತಿಕ ವಿರೋಧಿ ಎಂದು ಪರಿಗಣಿಸುವ ಷಣ್ಮುಗಂ ಬಣ, ಜನಾಭಿಪ್ರಾಯವು ಸಿಎಂ ವಿಜಯ್​ ಅವರ ಪರವಾಗಿದೆ…

Read More

Assam CM Himanth Biswa Sharma Oath Taking Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ – Kannada News | Assam CM Oath Ceremony Live: Himanta Biswa Sarma Sworn In as CM for Second Term in Guwahati

ಅಸ್ಸಾಂ, ಮೇ 12: ಇಂದು ಅಸ್ಸಾಂನ ಖಾನಪಾರ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಹಿಮಂತ ಬಿಸ್ವ ಶರ್ಮಾ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅಂತಹ ಗಣ್ಯರು ಉಪಸ್ಥಿತರಿದ್ದು, ಖಾನಾಪಾರ ಮೈದಾನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಸಚಿವರು…

Read More

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆರೋಪ: ಎಫ್​ಎಸ್​ಎಲ್​ನಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದ ಪರಮೇಶ್ವರ್ – Kannada News | Sringeri Vote Tampering Allegations: G Parameshwara Says FSL Report Will Reveal the Truth; Investigation Underway

ಬೆಂಗಳೂರು, ಮೇ 12: ಶೃಂಗೇರಿ ಎಂಎಲ್ಎ ಸ್ಥಾನದ ಗೊಂದಲದ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ವೋಟ್ ಟ್ಯಾಂಪರಿಂಗ್ ಆರೋಪ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಟ್ಯಾಂಪರಿಂಗ್ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ದೂರು ದಾಖಲಿಸಿಕೊಂಡು ಎಫ್ಐಆರ್ ನೊಂದಾಯಿಸಲಾಗಿದೆ. ರಾಜ್ಯ ಪೊಲೀಸರು ಈ ಟ್ಯಾಂಪರಿಂಗ್ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎಫ್ಎಸ್ಎಲ್ (Forensic Science…

Read More

ಧರ್ಮಸ್ಥಳ ಬುರುಡೆ ಕೇಸ್​​: ಉತ್ಖನನ ನಡೆದು 10 ತಿಂಗಳಾದರೂ ಕೆಲಸಗಾರರ ಕೈ ಸೇರದ ಕೂಲಿ ಹಣ, ವಾಹನಗಳ ಬಾಡಿಗೆ – Kannada News | 10 Months After Dharmasthala Excavation, Labourers Still Await Pending Payments

ಧರ್ಮಸ್ಥಳದಲ್ಲಿ ನಡೆದಿದ್ದ ಉತ್ಖನನ ಮಂಗಳೂರು, ಮೇ 12: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನೂರಾರು ಹೆಣಗಳನ್ನು ಹೂತಿದ್ದೇನೆ ಎಂಬ ಚಿನ್ನಯ್ಯ ಆರೋಪ ಹಿನ್ನೆಲೆ ಒಟ್ಟು 17 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಸಲಾಗಿತ್ತು. ದುರ್ದೈವ ಅಂದರೆ ಇದು ನಡೆದು 10 ತಿಂಗಳಾದರೂ ಉತ್ಖನನ ಕೆಲಸ ಮಾಡಿದ್ದ ಕಾರ್ಮಿಕರಿಗೆ ಕೂಲಿ ಮತ್ತು ಯಂತ್ರೋಪಕರಣಗಳ ಬಾಡಿಗೆ ಹಣ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಎಸ್‌ಐಟಿ (SIT) ಸೂಚನೆಯಂತೆ ಅಹೋರಾತ್ರಿ ದುಡಿದರೂ ಬಿಲ್…

Read More