Headlines

‘ನಾನು, ವಿಜಯ್, ಸ್ಪೀಕರ್ ಒಂದೇ ಕಾಲೇಜಲ್ಲಿ ಓದಿದವರು’: ಕಾಲೇಜು ದಿನಗಳ ವಿಧಾನಸಭೆಯಲ್ಲಿ ನೆನಪಿಸಿದ ಉದಯನಿಧಿ ಹೇಳಿದ್ದೇನು ನೋಡಿ!

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಳೆಯ ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ್ದು ಗಮನ ಸೆಳೆದಿದೆ. ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ವಿಜಯ್ ಅವರ ಕಾಲೆಳೆಯುತ್ತಲೇ, ತಮಿಳುನಾಡು ರಾಜಕೀಯದಲ್ಲಿ ಡಿಎಂಕೆ ಎಷ್ಟು ಅನುಭವಿ ಪಕ್ಷ ಎಂಬ ಸಂದೇಶವನ್ನೂ ರವಾನಿಸಿದರು. ‘ನಾನು, ಸಿಎಂ ವಿಜಯ್ ಮತ್ತು ಸ್ಪೀಕರ್ ಪ್ರಭಾಕರ್ ಎಲ್ಲರೂ ಒಂದೇ ಕಾಲೇಜಿನಲ್ಲಿ ಓದಿದವರು. ಆದರೆ ಆಡಳಿತದ ವಿಷಯಕ್ಕೆ ಬಂದರೆ ಡಿಎಂಕೆ ‘ಸೀನಿಯರ್ ಬ್ಯಾಚ್’. ಆಡಳಿತ…

Read More

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ! – Kannada News | Public Positively Responds To PM Modi’s Appeal To Save Fuel, Uses Public Transport

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ತಮ್ಮ ಬೈಕ್ ಬಿಟ್ಟು ಮೆಟ್ರೋದಲ್ಲಿ ಕಚೇರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ಬಳಸುವುದರಿಂದ ವೈಯಕ್ತಿಕವಾಗಿ ಸಮಯ ಮತ್ತು ಹಣ…

Read More

ಮದ್ರಾಸ್ ಹೈಕೋರ್ಟ್‌ನಿಂದ TVK ಶಾಸಕ ಶ್ರೀನಿವಾಸ ಸೇತುಪತಿಗೆ ಶಾಕ್: ವಿಶ್ವಾಸ ಮತ ಯಾಚನೆಯಲ್ಲಿ ಭಾಗವಹಿಸದಂತೆ ನಿರ್ಬಂಧ – Kannada News | Madras High Court Restrains TVK MLA Srinivasa Sethupathi From Floor Test Amidst Ballot Irregularity Claims

ಚೆನ್ನೈ, ಮೇ 12: ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮದ್ರಾಸ್ ಹೈಕೋರ್ಟ್ ತಿರುಪತ್ತೂರು ಕ್ಷೇತ್ರದ ಟಿವಿಕೆ ಶಾಸಕ ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ವಿಶ್ವಾಸ ಮತ ಯಾಚನೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದೆ. ಈ ಆದೇಶವು ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಮಹತ್ವ ಪಡೆದಿದೆ. ಪೆರಿಯಾ ಕೃಪನ್ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಶ್ರೀನಿವಾಸ ಸೇತುಪತಿ ವಿರುದ್ಧ ಅಂಚೆ ಮತಪತ್ರಗಳಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿದ್ದರು. ತಿರುಪತ್ತೂರು ವಿಧಾನಸಭಾ ಕ್ಷೇತ್ರ ಸಂಖ್ಯೆ 185ರ ಮತಗಳನ್ನು ಬೆಲ್ಲೂರು…

Read More

‘ರಾಜ ಸಾಬ್’ ಸಣ್ಣ ಸಿನಿಮಾ ಎಂದ ಕಾಮಿಡಿಯನ್; ಶುರುವಾಯ್ತು ಟೀಕೆ – Kannada News | Sapthagiri’s ‘Small Film’ Comment on Prabhas’s ‘The Raja Saab’ Sparks Major Fan Outcry

ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯನಟ ಸಪ್ತಗಿರಿ ಅವರು ಇತ್ತೀಚೆಗೆ ತಮ್ಮ ‘ಪುರುಷ’ ಚಿತ್ರದ ಪ್ರಚಾರದ ವೇಳೆ ನೀಡಿದ ಹೇಳಿಕೆಯೊಂದು ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ. ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ದಿ ರಾಜಾ ಸಾಬ್’ ಚಿತ್ರವನ್ನು ಸಪ್ತಗಿರಿ ಅವರು ‘ಸಣ್ಣ ಸಿನಿಮಾ’ ಎಂದು ಕರೆದಿದ್ದಾರೆ. ಪ್ರಭಾಸ್ ಅವರಂತಹ ಪ್ಯಾನ್ ಇಂಡಿಯಾ ಸ್ಟಾರ್ ಚಿತ್ರವನ್ನು ಹೀಗೆ ಹಗುರವಾಗಿ ಬಿಂಬಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಧ್ಯಮಗೋಷ್ಠಿಯಲ್ಲಿ ತಮ್ಮ ಸಿನಿಮಾ ಜರ್ನಿ ಬಗ್ಗೆ ಮಾತನಾಡಿದ ಸಪ್ತಗಿರಿ, ‘ನಾನು ಈಗ…

Read More

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ್​​ ಪ್ರಮಾಣ: ಸತತ ಎರಡು ಅವಧಿಗೆ ಕಾಂಗ್ರೆಸೇತರ ಮೊದಲ ಸಿಎಂ ಎಂಬ ಹೆಗ್ಗಳಿಕೆ – Kannada News | Himanta biswa sarma sworn in as assam cm for second term

ಗುವಾಹಟಿ, ಮೇ 12: ಬಿಜೆಪಿ ನಾಯಕ ಹಿಮಂತ್​​ ಬಿಸ್ವಾ ಶರ್ಮಾ ಅವರು ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುವಾಹಟಿಯ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್​ ಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ಹಿಮಂತ್ ಜೊತೆ ಸಚಿವರಾಗಿ ನಾಲ್ವರು ಶಾಸಕರು ಕೂಡ ಇದೇ ವೇಳೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ದಾಖಲೆ ಬರೆದ ಹಿಮಂತ್​​ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ 126 ಸ್ಥಾನಗಳ ಪೈಕಿ 82 ಸ್ಥಾನಗಳನ್ನು ಗೆದ್ದು ಬಿಜೆಪಿ ಭರ್ಜರಿ…

Read More

NEET Exam 2026 Cancelled: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು! – Kannada News | NEET Exam Cancelled Over Paper Leak: CBI Probe Ordered for Rajasthan Paper Leak Case

ನವದೆಹಲಿ, ಮೇ 12: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಸಂಸ್ಥೆ ರದ್ದು ಮಾಡಿದೆ. ರಾಜಸ್ಥಾನದ ಸೀಕರ್​ನಲ್ಲಿ ಕೈ ಬರಹದಲ್ಲಿದ್ದ 140 ಪ್ರಶ್ನೆಗಳಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಇದೇ ಹಿನ್ನೆಲೆ ಈಗ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರ್ಧಾರ ಮಾಡಲಾಗಿದೆ. (ಮಾಹಿತಿ ಅಪ್ಡೇಟ್ ಆಗುತ್ತಿದೆ) ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 12:29 pm, Tue, 12…

Read More

ವಿಜಯ್ ಸೂಟು-ಸ್ಟಾಲಿನ್ ಪಂಚೆ: ಅಣ್ಣಾಮಲೈ ಸಖತ್ ಟಾಂಗ್ – Kannada News | K Annamalai constructive criticism about DMK’s family politics and Vijay’s suit

ದಳಪತಿ ವಿಜಯ್ (Thalapathy Vijay) ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 60 ವರ್ಷಗಳ ಡಿಎಂಕೆ ಮತ್ತು ಎಐಎಡಿಎಂಕೆಯ ಸತತ ಪ್ರಾಬಲ್ಯವನ್ನು ವಿಜಯ್ ಮುರಿದಿದ್ದಾರೆ. ವಿಜಯ್ ಅವರು ತಮ್ಮ ಪ್ರಮಾಣ ವಚನಕ್ಕೆ ಕಪ್ಪು ಬಣ್ಣದ ಸೂಟು ಧರಿಸಿ ಆಗಮಿಸಿದ್ದರು. ಸಾಮಾನ್ಯವಾಗಿ ರಾಜಕಾರಣಿಗಳು, ಬಿಳಿ ಬಣ್ಣದ ಶರ್ಟ್ ಪಂಚೆ ಅಥವಾ ಧೋತಿಗಳನ್ನು ಉಡುವುದು ರೂಢಿ ಆದರೆ ವಿಜಯ್ ಅವರ ಸಂಪ್ರದಾಯ ಮರಿದು ಕಪ್ಪು ಬಣ್ಣದ ಸೂಟು, ಬಿಳಿ ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟು ಧರಿಸಿ ಬಂದಿದ್ದರು….

Read More

Video: ಚಾಲಕನ ಕಿರುನಿದ್ದೆ, ಅಪ್ಪಳಿಸಿದ ಟ್ರಕ್; ಮೈ ಜುಂ ಎನಿಸುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral Drowsy Driving Accident: Truck Hits Divider, 3M Views – Road Safety Alert

ನಿದ್ದೆಯ ಮಂಪರಿನಲ್ಲಿ ಟ್ರಕ್ ಚಲಾಯಿಸಿದ ಚಾಲಕನೋರ್ವ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್​​ಗೆ ಗುದ್ದಿರುವ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. @anilsawajdm ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಚಾಲಕರ ಬೇಜವಾಬ್ದಾರಿಗೆ ಸಾಕ್ಷಿಯಾಗಿದ್ದು, ಈಗಾಗಲೇ 30 ಲಕ್ಷಕ್ಕೂ (3 ಮಿಲಿಯನ್) ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಚಾಲಕನ ಕಿರುನಿದ್ದೆ ಅಥವಾ ಆಲಸ್ಯದ ಕಾರಣದಿಂದ ಸಂಭವಿಸಿದ ಈ ಅಪಘಾತವು ದಾರಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುವಂತಿದ್ದು, ನೆಟ್ಟಿಗರು ಈ ವಿಡಿಯೋ ನೋಡಿ ಸಂಚಾರ ನಿಯಮಗಳ ಪಾಲನೆ…

Read More

ಮತ್ತೆ ಆನ್​ಲೈನ್ ಕ್ಲಾಸ್ ವ್ಯವಸ್ಥೆ ಬಳಸಲು ಶಾಲಾ ಕಾಲೇಜುಗಳಿಗೆ ಪ್ರಧಾನಿ ಸಲಹೆ – Kannada News | PM Modi’s Fuel Saving Plea: Online Classes, WFH Amidst West Asia Crisis

ವಡೋದರಾ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತು ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಇಂಧನ ಉಳಿಸಲು ವರ್ಕ್ ಫ್ರಂ ಹೋಮ್, ಸಾರ್ವಜನಿಕ ಸಾರಿಗೆ ಬಳಕೆ ಇತ್ಯಾದಿ ಸಲಹೆ ಕೊಟ್ಟಿದ್ದಾರೆ. ಇದೇ ವೇಳೆ, ಶಾಲಾ ಕಾಲೇಜುಗಳಿಗೂ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುವ ಕುರಿತು ಮತ್ತು ಇಂಧನ ಉಳಿತಾಯಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಅನುಸರಿಸಿದಂತೆ,…

Read More

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! – Kannada News | Anjanadri Temple Gold Donation Controversy: Kolar Administration Re verifies Documents of Mahesh Reddy

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! ಕೊಪ್ಪಳ, ಮೇ 12: ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೀಡಿದ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ವಿಚಾರದಲ್ಲಿ ಈಗ ಗೊಂದಲ ಮೂಡಿದ್ದು, ಜಿಲ್ಲಾಡಳಿತವು ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ. ಪಂಚನಾಮ ಪ್ರಕ್ರಿಯೆಯ ನಂತರ ಎಲ್ಲಾ ಆಭರಣಗಳನ್ನು ದೇವಸ್ಥಾನದ ಸಮಿತಿಯ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ….

Read More