Headlines

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ…

Read More

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! – Kannada News | Devanahalli Gold Scam: Man got robbed in the name of Cheap gold; looses Rs.20 lakhs

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! ದೇವನಹಳ್ಳಿ, ಮಾರ್ಚ್​ 05: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ವ್ಯಕ್ತಿಯನ್ನು ಕರೆಸಿಕೊಂಡು 20 ಲಕ್ಷ ರೂ. ಹಣ ದೋಚಿದ (Robbery) ಘಟನೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬಾತನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದೊಣ್ಣೆಯಿಂದ ಹೊಡೆದು, ಬ್ಯಾಗ್ ಕಸಿದು ಪರಾರಿ ವಿಶ್ವಪ್ರಸಾದ್ ರೆಡ್ಡಿಗೆ ಕುಮಾರ್ ಎಂಬಾತ ಪರಿಚಯವಾಗಿ,…

Read More

ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಬಂಡಾಯ ಏಳ್ತಾರಾ ಎಐಎಡಿಎಂಕೆಯ ಕೆಲ ಶಾಸಕರು? – Kannada News | AIADMK Divided Over TVK Support: Vijays Pivotal Role in Tamil Nadu Government Formation

ಚೆನ್ನೈ, ಮೇ 06: ತಮಿಳುನಾಡು ಸರ್ಕಾರ ರಚನೆ ಸಂಬಂಧ ಟಿವಿಕೆ ಬೆಂಬಲಿಸುವ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಟಿಪಿಎಸ್ (TPS) ಬಣ ಮತ್ತು ಷಣ್ಮುಗಂ ಬಣಗಳ ನಡುವೆ ಈ ಕುರಿತು ಒಡಕು ಕಾಣಿಸಿಕೊಂಡಿದ್ದು, ಇದು ಎಐಎಡಿಎಂಕೆಗೆ ದೊಡ್ಡ ಆಘಾತ ನೀಡುವ ಸಾಧ್ಯತೆಯಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಐಎಡಿಎಂಕೆ ಪಕ್ಷದಲ್ಲಿ 35 ಶಾಸಕರು ಬಂಡಾಯ ಎದ್ದರೆ ಸಂಕಷ್ಟ ಎದುರಾಗಲಿದೆ. ಮಹಾರಾಷ್ಟ್ರದ ಶಿವಸೇನೆ ವಿಭಜನೆಯ ಉದಾಹರಣೆಯ ಆಧಾರದಲ್ಲಿ ಹೊಸ ಲೆಕ್ಕಾಚಾರಗಳು ತಮಿಳುನಾಡಲ್ಲೀಗ ಶುರುವಾಗಿವೆ. ಮತ್ತಷ್ಟು ವಿಡಿಯೋ ನೋಡಲು…

Read More

ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ – Kannada News | Iran will not back down Supreme Leader Ayatollah Khamenei vows

ಟೆಹ್ರಾನ್, ಜನವರಿ 9: ಇಂದು ಇರಾನ್​ ದೇಶವನ್ನುದ್ದೇಶಿಸಿ ಮಾತನಾಡಿದ ಇರಾನ್​​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Khamenei), ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಎಚ್ಚರಿಕೆ ನೀಡಿದ್ದಾರೆ. ದುರಹಂಕಾರ ಮತ್ತು ಹೆಮ್ಮೆಯಿಂದ ಕುಳಿತು ಇಡೀ ಪ್ರಪಂಚದ ಮೇಲೆ ತೀರ್ಪು ನೀಡುವ ಟ್ರಂಪ್ ಬಗ್ಗೆ ಹೇಳುವುದಾದರೆ, ಸಾಮಾನ್ಯವಾಗಿ ವಿಶ್ವದ ನಿರಂಕುಶಾಧಿಕಾರಿಗಳು ಮತ್ತು ದುರಹಂಕಾರಿ ಶಕ್ತಿಗಳಾದ ಫರೋ, ನಿಮ್ರೋಡ್, ರೆಜಾ ಖಾನ್, ಮೊಹಮ್ಮದ್ ರೆಜಾ ಮತ್ತು ಅವರಂಥವರು ದುರಹಂಕಾರದ ಉತ್ತುಂಗದಲ್ಲಿದ್ದಾಗಲೇ ಅವರ ಪತನವಾಯಿತು ಎಂಬುದನ್ನು ಟ್ರಂಪ್ ತಿಳಿಯುವುದು ಒಳ್ಳೆಯದು….

Read More

CSK vs PBKS Record Alert: ಚೆಪಾಕ್ ಮೈದಾನದಲ್ಲಿ ಇತಿಹಾಸ ಸೃಷ್ಟಿಸಿದ ಆಯುಷ್ ಮ್ಹಾತ್ರೆ

ಚೆನ್ನೈ ಸೂಪರ್ ಕಿಂಗ್ಸ್‌ನ ತವರು ಮೈದಾನವಾದ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಏಳನೇ ಪಂದ್ಯದಲ್ಲಿ, ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಪಂಜಾಬ್ ಕಿಂಗ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅರ್ಧಶತಕದ ಹಾದಿಯಲ್ಲಿ ಅವರು ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಅಂತಿಮವಾಗಿ ಆಯುಷ್ 43 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 73 ರನ್ ಬಾರಿಸಿ…

Read More

ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ – Kannada News | Bengaluru Anekal College Row: Protests Erupt After Hostel Warden Threatens Students for Speaking Kannada

ಬೆಂಗಳೂರು, ಜನವರಿ 5: ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು. ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ. ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ…

Read More

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಚಿತ್ರದುರ್ಗ, ಏಪ್ರಿಲ್ 03: ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8ರಂದು ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಭಾವನಾ ಪೋಷಕರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥೇಶ್ವರ…

Read More

GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ! – Kannada News | GBA Election Delay: State Election Commission Seeks Extension Until September 30

ನವದೆಹಲಿ, ಏಪ್ರಿಲ್ 25: ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಯ ಕುರಿತಾಗಿ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ. ಜಾತಿಗಣತಿಯಲ್ಲೇ ನಿರತರಾಗಿರುವ ಸಿಬ್ಬಂದಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಗಡುವಿನೊಳಗೆ ಚುನಾವಣೆಯನ್ನು ಪೂರ್ಣಗೊಳಿಸಲು ಸಿಬ್ಬಂದಿ ಮತ್ತು ಹಣದ ಕೊರತೆ ಇದೆ ಎಂದು ಆಯೋಗ ತಿಳಿಸಿದೆ. ಇದೇ ವೇಳೆ ಜನಗಣತಿ ಕಾರ್ಯಗಳು…

Read More

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್ – Kannada News | Chitradurga Bus Accident: Cleaner Recounts Horror as Bus Catches Fire After Crash

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ತಡರಾತ್ರಿ ಸುಮಾರು 1.30 ರಿಂದ 2 ಗಂಟೆಯ ನಡುವೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ‘ರಾತ್ರಿ ನಾನು ಬಸ್‌ನಲ್ಲಿ ಮಲಗಿದ್ದೆ. ಅಷ್ಟರಲ್ಲಿ ಭಾರೀ ಡಿಕ್ಕಿ ಹೊಡೆದ ರಭಸಕ್ಕೆ ನಾನು ಬಸ್‌ನಿಂದ ಹೊರ ಬಿದ್ದೆ. ಏನಾಗಿದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿ ಇದ್ದೆ. ನೋಡ ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯತೊಡಗಿತು’ ಎಂದು…

Read More

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ? – Kannada News | Chinnaswamy Stadium IPL Matches: RCB Matches Almost Confirmed, Cabinet Decision Pending

ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನು ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧಿಕಾರಿಗಳು…

Read More