Vasthu Tips: ಬೆಳಿಗ್ಗೆ ಎದ್ದ ತಕ್ಷಣ ಆಲಸ್ಯ ಅಥವಾ ಕಿರಿಕಿರಿ ಉಂಟಾಗುತ್ತಿದೆಯೇ? ಬೆಡ್‌ರೂಮ್‌ನ ಈ ವಾಸ್ತು ದೋಷವೇ ಕಾರಣವಿರಬಹುದು! – Kannada News | Vastu Tips for Better Sleep: Fix Bedroom Bathroom Defects Easily

ದಿನವಿಡೀ ಕಚೇರಿ ಕೆಲಸ, ಟ್ರಾಫಿಕ್ ಕಿರಿಕಿರಿ ಎದುರಿಸಿ ಮನೆಗೆ ಬಂದಾಗ ನಮಗೆ ಬೇಕಿರುವುದು ನೆಮ್ಮದಿಯ ನಿದ್ರೆ. ಆದರೆ, ಸಾಕಷ್ಟು ನಿದ್ರೆ ಮಾಡಿದರೂ ಮರುದಿನ ಬೆಳಿಗ್ಗೆ ಉತ್ಸಾಹವಿಲ್ಲದೆ, ಆಲಸ್ಯ ಅಥವಾ ಕಿರಿಕಿರಿ ಅನುಭವಿಸುತ್ತಿದ್ದರೆ ಅದು ನಿಮ್ಮ ತಪ್ಪಲ್ಲ; ನಿಮ್ಮ ಮನೆಯ ವಿನ್ಯಾಸದ ದೋಷವಿರಬಹುದು!

ಹಾಸಿಗೆಯ ಎದುರು ಬಾತ್‌ರೂಮ್ ಬಾಗಿಲು:

ಆಧುನಿಕ ಅಪಾರ್ಟ್‌ಮೆಂಟ್‌ಗಳಲ್ಲಿ ಜಾಗದ ಮಿತಿಯಿಂದಾಗಿ ಹಾಸಿಗೆಯ ಎದುರಿಗೇ ಶೌಚಾಲಯದ ಬಾಗಿಲು ಇರುವ ವಿನ್ಯಾಸ ಸಾಮಾನ್ಯವಾಗಿದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಇದು ದೊಡ್ಡ ದೋಷ. ಶೌಚಾಲಯವು ಅಶುದ್ಧ ಸ್ಥಳವಾಗಿದ್ದು, ಅಲ್ಲಿಂದ ಹೊರಹೊಮ್ಮುವ ನಕಾರಾತ್ಮಕ ಶಕ್ತಿಯು ನೇರವಾಗಿ ನಿಮ್ಮ ಹಾಸಿಗೆಯ ಮೇಲೆ ಪ್ರಭಾವ ಬೀರುತ್ತದೆ. ಇದರಿಂದ ನಿದ್ರಾಹೀನತೆ ಮತ್ತು ಮಾನಸಿಕ ಅಸ್ಥಿರತೆ ಉಂಟಾಗಬಹುದು. ಇದಲ್ಲದೇ ಜೀರ್ಣಕ್ರಿಯೆ ತೊಂದರೆ ಮತ್ತು ಮೂಳೆ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ದಂಪತಿಗಳ ನಡುವೆ ಅನಗತ್ಯ ಮನಸ್ತಾಪ ಮತ್ತು ಕಹಿಯನ್ನು ಇದು ಉಂಟುಮಾಡಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ವಾಸ್ತು ದೋಷ ನಿವಾರಣೆಗೆ ಇಲ್ಲಿವೆ 5 ಸರಳ ಮಾರ್ಗಗಳು

ಮನೆಯ ಗೋಡೆಗಳನ್ನು ಒಡೆಯಲು ಅಥವಾ ವಿನ್ಯಾಸ ಬದಲಿಸಲು ಸಾಧ್ಯವಾಗದಿದ್ದಾಗ, ಈ ಸುಲಭ ಉಪಾಯಗಳನ್ನು ಅನುಸರಿಸಿ ನಕಾರಾತ್ಮಕ ಶಕ್ತಿಯನ್ನು ತಡೆಯಬಹುದು.

ಪರದೆಯ ಬಳಕೆ:

ಶೌಚಾಲಯದ ಬಾಗಿಲನ್ನು ಯಾವಾಗಲೂ ಮುಚ್ಚಿಡಿ. ಅಷ್ಟೇ ಅಲ್ಲದೆ, ಬಾಗಿಲಿನ ಮೇಲೆ ದಪ್ಪನೆಯ ಮತ್ತು ಗಾಢ ಬಣ್ಣದ ಪರದೆಯನ್ನು ನೇತುಹಾಕಿ. ಇದು ನಕಾರಾತ್ಮಕ ಶಕ್ತಿಯ ವಿರುದ್ಧ ಗುರಾಣಿಯಂತೆ ಕಾರ್ಯನಿರ್ವಹಿಸುತ್ತದೆ. ಶೌಚಾಲಯವನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ತೇವವಿಲ್ಲದಂತೆ ಒಣಗಿಸಿಡಿ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಸಮುದ್ರದ ಉಪ್ಪಿನ ಶಕ್ತಿ:

ಒಂದು ಗಾಜಿನ ಬಟ್ಟಲಿನಲ್ಲಿ ಕಲ್ಲು ಉಪ್ಪನ್ನು (ಸಮುದ್ರದ ಉಪ್ಪು) ತುಂಬಿಸಿ ಸ್ನಾನಗೃಹದ ಮೂಲೆಯಲ್ಲಿಡಿ. ಇದು ಗಾಳಿಯಲ್ಲಿರುವ ವಿಷಕಾರಿ ಅಂಶಗಳನ್ನು ಹೀರಿಕೊಳ್ಳುತ್ತದೆ. ಆದರೆ ನೆನಪಿಡಿ, ಪ್ರತಿ 15 ದಿನಕ್ಕೊಮ್ಮೆ ಈ ಉಪ್ಪನ್ನು ಬದಲಿಸಬೇಕು.

ಕನ್ನಡಿಯ ತಂತ್ರ:

ಸ್ನಾನಗೃಹದ ಬಾಗಿಲಿನ ಹೊರಭಾಗದಲ್ಲಿ ಒಂದು ಸಣ್ಣ ಕನ್ನಡಿಯನ್ನು ಅಳವಡಿಸಿ. ಇದು ರೂಮಿನೊಳಗೆ ಬರಲು ಪ್ರಯತ್ನಿಸುವ ನಕಾರಾತ್ಮಕ ಶಕ್ತಿಯನ್ನು ಪ್ರತಿಫಲಿಸಿ ಮರಳಿ ಕಳುಹಿಸುತ್ತದೆ.

ಬೆಳಕು ಮತ್ತು ಸುಗಂಧ:

ಕತ್ತಲೆಯಾದ ಬಾತ್‌ರೂಮ್ ನಕಾರಾತ್ಮಕತೆಯ ಕೇಂದ್ರ. ಆದ್ದರಿಂದ ಅಲ್ಲಿ ಪ್ರಕಾಶಮಾನವಾದ ಬಿಳಿ ಎಲ್ಇಡಿ ದೀಪಗಳನ್ನು ಬಳಸಿ. ಧನಾತ್ಮಕತೆ ಹೆಚ್ಚಿಸಲು ಕರ್ಪೂರ ಅಥವಾ ಲೆಮನ್ ಗ್ರಾಸ್ (ನಿಂಬೆ ಹುಲ್ಲು) ಎಣ್ಣೆಯ ಸುಗಂಧವನ್ನು ಬಳಸಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್; ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳ – Kannada News | Good News for central government employees; Modi Cabinet approves 2 per cent DA hike

ನವದೆಹಲಿ, ಏಪ್ರಿಲ್ 18: ಕೇಂದ್ರ ಸಚಿವ ಸಂಪುಟವು (Cabinet Meeting) ಕೇಂದ್ರ ಸರ್ಕಾರಿ ನೌಕರರು ಮತ್ತು ಕೇಂದ್ರ ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಒಟ್ಟು ತುಟ್ಟಿ ಭತ್ಯೆ (Dearness Allowance) ಶೇ. 58ರಿಂದ ಮೂಲ ವೇತನದ ಶೇ. 60ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ಡಿಎ ಜನವರಿ 2026ರಿಂದ ಅನ್ವಯವಾಗಲಿದೆ. ಪಿಂಚಣಿದಾರರಿಗೂ ಇದು ಅನ್ವಯಿಸುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೈಗಾರಿಕಾ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕದಲ್ಲಿನ (ಸಿಪಿಐ-ಐಡಬ್ಲ್ಯೂ) ಬದಲಾವಣೆಗಳ ಆಧಾರದ ಮೇಲೆ ವರ್ಷಕ್ಕೆ 2 ಬಾರಿ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುವುದು. ಜನವರಿಯಲ್ಲಿ ಒಮ್ಮೆ ಮತ್ತು ಜುಲೈನಲ್ಲಿ ಮತ್ತೊಮ್ಮೆ ತುಟ್ಟಿ ಭತ್ಯೆಯನ್ನು ಪರಿಷ್ಕರಿಸಲಾಗುತ್ತದೆ. ಈ ತುಟ್ಟಿ ಭತ್ಯೆ ಹೆಚ್ಚಳವು ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡಲಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ವಾರ್ಷಿಕವಾಗಿ ಹೆಚ್ಚುವರಿಯಾಗಿ 6,791 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಇದನ್ನೂ ಓದಿ: ಬೆಂಗಳೂರಿಗೆ 11 ಎಲಿವೇಟೆಡ್ ಕಾರಿಡಾರ್, ಪ್ರಮುಖ ಆಸ್ತಿಗಳಿಗೆ ತೆರಿಗೆ ವಿನಾಯಿತಿ! ಸಚಿವ ಸಂಪುಟ ಮಹತ್ವದ ನಿರ್ಧಾರ

ಈ ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳದಿಂದ 30,000 ರೂ. ಮೂಲ ವೇತನ ಹೊಂದಿರುವ ಉದ್ಯೋಗಿಗೆ ಪರಿಷ್ಕರಣೆಯ ನಂತರ ತಿಂಗಳಿಗೆ 600 ರೂ. ಹೆಚ್ಚಳವಾಗುತ್ತದೆ. ನೌಕರರ ಗುಂಪುಗಳು ವೇತನ ರಚನೆಯಲ್ಲಿ ವ್ಯಾಪಕ ಬದಲಾವಣೆಗಳಿಗೆ ಕರೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ. ಈ ಬೇಡಿಕೆಗಳು ಪ್ರಸ್ತಾವಿತ 8ನೇ ವೇತನ ಆಯೋಗಕ್ಕೆ ಸಂಬಂಧಿಸಿವೆ.

ಸಂಪುಟದ ಪ್ರಕಟಣೆಯ ಪ್ರಕಾರ, ಈ ವರ್ಷದ ಜನವರಿ 1ರಿಂದ ಈ ಹೆಚ್ಚಳ ಅನ್ವಯವಾಗಲಿದೆ. ಅಂದರೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಕೆಲವು ತಿಂಗಳ ಬಾಕಿ ವೇತನವನ್ನು ಕೂಡ ಪಡೆಯಲಿದ್ದಾರೆ. ಹಣದುಬ್ಬರದ ಪರಿಣಾಮವನ್ನು ಸರಿದೂಗಿಸುವ ಗುರಿಯನ್ನು ಹೊಂದಿರುವ ಈ ಹೆಚ್ಚಳವು ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗಿಗಳಿಗೆ ಖುಷಿ ಸುದ್ದಿ; 8ನೇ ವೇತನ ಆಯೋಗ ಜಾರಿಯಾದರೆ ಶೇ. 34ರಷ್ಟು ಸಂಬಳ ಹೆಚ್ಚಳ?

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟವು ಅಕ್ಟೋಬರ್ 2025ರಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿತ್ತು. ಈ ನಿರ್ಧಾರವು ಜುಲೈ 1, 2025ರಿಂದ ಜಾರಿಗೆ ಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs DC: ಡೆಲ್ಲಿ ಎದುರು 20 ರನ್ ಗಡಿ ದಾಟದ ಆರ್​​ಸಿಬಿಯ 8 ಬ್ಯಾಟರ್ಸ್ – Kannada News | IPL 2026: Phil Salt’s Fifty Powers RCB to 175 vs Delhi Capitals; Batting Struggles Persist

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026 ರ 26ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗಳನ್ನು ಕಳೆದುಕೊಂಡು ಕೇವಲ 175 ರನ್ ಕಲೆಹಾಕಿತು. ಆರ್​​ಸಿಬಿ ಪರ ಇಬ್ಬರು ಬ್ಯಾಟ್ಸ್‌ಮನ್​ಗಳನ್ನು ಹೊರತುಪಡಿಸಿ ಉಳಿದ 8 ಬ್ಯಾಟ್ಸ್‌ಮನ್​ಗಳಿಗೆ 20 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಇತ್ತ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಆರ್​ಸಿಬಿ ಬ್ಯಾಟರ್​ಗಳನ್ನು ಕಟ್ಟಿಹಾಕುವಲ್ಲಿ ಡೆಲ್ಲಿ ಬೌಲರ್ಸ್​ಗಳು ಯಶಸ್ವಿಯಾದರು. ಇದರೊಂದಿಗೆ ಆರ್​ಸಿಬಿ ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ 200 ರನ್​ಗಳ ಗಡಿ ದಾಟದೆ ಇರುವುದು ಇದೇ ಮೊದಲ ಬಾರಿ.

ಎಂದಿನಂತೆ ಈ ಪಂದ್ಯದಲ್ಲೂ ಆರ್​ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಮೊದಲ ವಿಕೆಟ್​ಗೆ 52 ರನ್​ಗಳ ಜೊತೆಯಾಟ ನೀಡಿದರು. ಆದರೆ ವಿರಾಟ್ ಕೊಹ್ಲಿಯ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದುಬಿತ್ತು. ಕೊಹ್ಲಿ 19 ರನ್​ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕೊಹ್ಲಿ ಬಳಿಕ ಬಂದ ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟಿದರ್​ಗೆ ಈ ಪಂದ್ಯದಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗಲಿಲ್ಲ.

ತವರಿನಲ್ಲಿ ಆಡುತ್ತಿದ್ದ ಪಡಿಕ್ಕಲ್ ಕೇವಲ 18 ರನ್​​ಗಳಿಗೆ ಸುಸ್ತಾದರೆ, ನಾಯಕ ರಜತ್ ಪಾಟಿದರ್ ಕೇವಲ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಆರಂಭಿಕರಾಗಿ ಕಣಕ್ಕಿಳಿದಿದ್ದ ಸಾಲ್ಟ್ ತನ್ನ ಎಂದಿನ ಆಟವನ್ನು ಮುಂದುವರೆಸಿ ಸತತ ಎರಡನೇ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 38 ಎಸೆತಗಳನ್ನು ಎದುರಿಸಿದ ಸಾಲ್ಟ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅತ್ಯಧಿಕ 63 ರನ್​ಗಳ ಕೊಡುಗೆ ನೀಡಿದರು.

Source link

50 ಕೋಟಿ ಗಳಿಸಿದ ‘ಡಕಾಯತ್’ ಬೆಂಗಳೂರಲ್ಲಿ ಹೀಗಿತ್ತು ಸಂಭ್ರಮಾಚರಣೆ

Source link

ಮಧುಮೇಹಿಗಳಿಗೆ ಸಿಹಿ ಸುದ್ದಿ: ನೀಡಲ್ ಸಹಾಯವಿಲ್ಲದೆ ಉಸಿರಿನಿಂದಲೇ ಶುಗರ್ ಪರೀಕ್ಷೆ! – Kannada News | Nagpur University Develops Needle Free Diabetes Testing Device

ಮಧುಮೇಹ (Diabetes) ರೋಗಿಗಳಿಗೆ ದಿನನಿತ್ಯ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಲು ಸೂಜಿ ಚುಚ್ಚುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ ಇದು ನೋವು ಹಾಗೂ ಕಿರಿಕಿರಿ ಉಂಟುಮಾಡುತ್ತದೆ. ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯದ (RTMNU) ಸಂಶೋಧಕರು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಸಾಧನದ ಮೂಲಕ ಕೇವಲ ಉಸಿರಿನ ಸಹಾಯದಿಂದಲೇ ಶುಗರ್ ಮಟ್ಟವನ್ನು ಪರೀಕ್ಷಿಸಬಹುದಾಗಿದೆ. ಹೌದು, ಕೇಳುವಾಗ ಆಶ್ಚರ್ಯ ಹುಟ್ಟಿಸಿದರೂ ಕೂಡ ಇದರಿಂದ ಅನೇಕರಿಗೆ ಅನುಕೂಲವಾಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಈ ಹೊಸ ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತದೆ ಎಂಬಿತ್ಯಾದಿ ಮಾಹಿತಿಗಳನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೊಸ ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತದೆ?

ಈ ಸಾಧನವು ‘ನಾನ್- ಇನ್ವೇಸಿವ್’ ತಂತ್ರಜ್ಞಾನವನ್ನು ಆಧರಿಸಿದೆ. ಅಂದರೆ ದೇಹಕ್ಕೆ ಯಾವುದೇ ರೀತಿಯ ಹಾನಿ ಮಾಡದೇ ಪರೀಕ್ಷೆ ನಡೆಸಬಹುದು. ವ್ಯಕ್ತಿಯ ಉಸಿರಿನಲ್ಲಿರುವ ರಾಸಾಯನಿಕ ಅಂಶಗಳನ್ನು ವಿಶ್ಲೇಷಿಸಿ, ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಅಂದಾಜು ಮಾಡುತ್ತದೆ. ಈ ತಂತ್ರಜ್ಞಾನವು ಶುದ್ಧ, ವೇಗವಾದ ಮತ್ತು ನೋವಿಲ್ಲದ ಪರೀಕ್ಷೆಗೆ ಸಹಾಯ ಮಾಡುತ್ತದೆ. ಈ ಆವಿಷ್ಕಾರಕ್ಕೆ ಯುಕೆ ಡಿಸೈನ್ ಪ್ರಮಾಣಪತ್ರ ದೊರೆತಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಸಂಶೋಧನೆಯ ಮಹತ್ವವನ್ನು ತೋರಿಸುತ್ತದೆ. ಈ ಸಾಧನ ಅಭಿವೃದ್ಧಿಯಲ್ಲಿ ಡಾ. ವರ್ಷಾ ಧುರ್ವೆ, ಹರ್ಷ ತಿವಾರಿ, ಸಬ್ರೀನ್ ಬಾನು ಸೇರಿದಂತೆ ಹಲವು ತಜ್ಞರು ಪ್ರಮುಖ ಪಾತ್ರವಹಿಸಿದ್ದಾರೆ. ಇತರ ದೇಶಗಳ ವಿಜ್ಞಾನಿಗಳ ಸಹಕಾರವೂ ಇದರಲ್ಲಿ ಇದೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ: ಪದೇ ಪದೇ ಹಸಿವಾಗುವುದು ಮಧುಮೇಹದ ಆರಂಭಿಕ ಲಕ್ಷಣವೇ? ಇಲ್ಲಿದೆ ತಜ್ಞರ ಉತ್ತರ

ಭವಿಷ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ;

ಈ ಸಾಧನವು ಯಶಸ್ವಿಯಾಗಿ ಮಾರುಕಟ್ಟೆಗೆ ಬಂದರೆ, ಮಧುಮೇಹಿಗಳಿಗೆ ದಿನನಿತ್ಯದ ಪರೀಕ್ಷೆ ಸುಲಭವಾಗುತ್ತದೆ. ಮನೆಲ್ಲಿಯೇ ಸರಳವಾಗಿ ಪರೀಕ್ಷೆ ನಡೆಸಬಹುದು ಮತ್ತು ಆಸ್ಪತ್ರೆಗೆ ಹೋಗುವ ಅಗತ್ಯ ಕಡಿಮೆಯಾಗುತ್ತದೆ. ಇದರಿಂದ ಚಿಕಿತ್ಸೆ ಪ್ರಕ್ರಿಯೆ ಹೆಚ್ಚು ಸುಗಮವಾಗುವ ಸಾಧ್ಯತೆ ಇದೆ. ಪ್ರಸ್ತುತ ಈ ಸಾಧನದ ಶುದ್ಧತೆ ಮತ್ತು ನಿಖರತೆಯನ್ನು ಖಚಿತಪಡಿಸಲು ವಿವಿಧ ಪರೀಕ್ಷೆಗಳು ನಡೆಯುತ್ತಿವೆ. ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದ ನಂತರ ಇದು ಸಾರ್ವಜನಿಕರಿಗೆ ಲಭ್ಯವಾಗಲಿದೆ. ಒಟ್ಟಿನಲ್ಲಿ, ಈ ಹೊಸ ತಂತ್ರಜ್ಞಾನ ಮಧುಮೇಹಿಗಳ ಜೀವನವನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಲಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | PM Modi will address the nation tonight at 8.30 after womens reservation bill defeat in Lok Sabha

ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಮಹಿಳಾ ಮೀಸಲಾತಿ (Women’s Quota Bill) ಜಾರಿಗೆ ತರುವ ಮಸೂದೆ ಲೋಕಸಭೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಿಳಾ ಮೀಸಲಾತಿ ಅನುಷ್ಠಾನದ ವಿಷಯ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯ ವಿರುದ್ಧ ಮತ ಚಲಾಯಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಇಂದು ರಾತ್ರಿ ಚರ್ಚಿಸುವ ನಿರೀಕ್ಷೆಯಿದೆ.

2011ರ ಜನಗಣತಿಯ ಆಧಾರದ ಮೇಲೆ ನಡೆದ ಸೀಮಾ ನಿರ್ಣಯದ ನಂತರ 2029ರ ಸಂಸತ್ ಚುನಾವಣೆಗೆ ಮುಂಚಿತವಾಗಿ ಮಹಿಳಾ ಮೀಸಲಾತಿ ಕಾನೂನನ್ನು ಕಾರ್ಯಗತಗೊಳಿಸಲು ಈ ಮಸೂದೆಯಡಿಯಲ್ಲಿ ಲೋಕಸಭಾ ಸ್ಥಾನಗಳನ್ನು ಪ್ರಸ್ತುತ 543ರಿಂದ 816ಕ್ಕೆ ಹೆಚ್ಚಿಸಬೇಕಾಗಿತ್ತು. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಸ್ಥಾನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ

ಈ ನಿರ್ಣಾಯಕ ಮಸೂದೆಯನ್ನು ಅಂಗೀಕರಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿತ್ತು. ಆದರೆ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್​ಡಿಎ ಬಹುಮತದ ಸಂಖ್ಯೆಗಳನ್ನು ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಶುಕ್ರವಾರ ರಾತ್ರಿ ಲೋಕಸಭೆಯಲ್ಲಿ ಮಸೂದೆಯ ಮೇಲಿನ ಮತದಾನದ ಸಮಯದಲ್ಲಿ 298 ಸದಸ್ಯರು ಈ ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 230 ಸಂಸದರು ಅದರ ವಿರುದ್ಧ ಮತ ಚಲಾಯಿಸಿದರು. ಮತ ಚಲಾಯಿಸಿದ 528 ಸದಸ್ಯರಲ್ಲಿ ಮಸೂದೆಗೆ ಮೂರನೇ ಎರಡರಷ್ಟು ಬಹುಮತಕ್ಕೆ 352 ಮತಗಳು ಬೇಕಾಗಿದ್ದವು. ಹೀಗಾಗಿ, ಈ ಮಸೂದೆ ಅಂಗೀಕಾರವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಿವರ್ ಡಿಟಾಕ್ಸ್ ಡ್ರಿಂಕ್ಸ್: ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಕೇವಲ ಟ್ರೆಂಡಿ ಪಾನೀಯವೇ? – Kannada News | Do Liver Cleanse Drinks Work? Doctors Explain the Truth

ಇತ್ತೀಚಿನ ವರ್ಷಗಳಲ್ಲಿ ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು (Liver Detox Drinks) ಆರೋಗ್ಯಕಾಡುವ ನಿಟ್ಟಿನಲ್ಲಿ ಹೊಸ ಟ್ರೆಂಡ್ ಸೃಷ್ಠಿ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಪಾನೀಯಗಳು ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಿ ಲಿವರ್‌ನ್ನು ಶುದ್ಧಗೊಳಿಸುತ್ತವೆ ಎಂದು ಹೇಳುತ್ತಿದ್ದಾರೆ. ಈ ಡ್ರಿಂಕ್ಸ್‌ನಲ್ಲಿರುವ ನಿಂಬೆ, ಶುಂಠಿ, ಅರಿಶಿನ ಮತ್ತು ಜೇನು ಮುಂತಾದ ನೈಸರ್ಗಿಕ ಪದಾರ್ಥಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೂ ಕೂಡ ಇದರಿಂದ ಲಿವರ್‌ (Liver) ಸಂಪೂರ್ಣವಾಗಿ ಶುದ್ಧಗೊಳ್ಳುತ್ತದೆಯೇ, ಇಲ್ಲವೇ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿಲ್ಲ. ಹಾಗಾಗಿ ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದುಕೊಳ್ಳುವುದು ಬಹಳ ಒಳ್ಳೆಯದು. ಏಕೆಂದರೆ ಟ್ರೆಂಡ್ ಹಿಂದೆ ಹೋಗುವ ಮೊದಲು ಸತ್ಯ ಏನು ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಲಿವರ್ ಸ್ವತಃ ಡಿಟಾಕ್ಸ್ ಮಾಡುವ ಶಕ್ತಿ ಹೊಂದಿದೆ!

ಲಿವರ್ ದೇಹದ ಪ್ರಮುಖ ಅಂಗವಾಗಿದ್ದು, ಇದು ಸ್ವಾಭಾವಿಕವಾಗಿ ಡಿಟಾಕ್ಸ್ ಪ್ರಕ್ರಿಯೆಯನ್ನು ನಡೆಸುತ್ತದೆ. ದೇಹಕ್ಕೆ ಹಾನಿಕಾರಕ ಪದಾರ್ಥಗಳನ್ನು ಫಿಲ್ಟರ್ ಮಾಡಿ ಹೊರಹಾಕುವ ಕಾರ್ಯವನ್ನು ಲಿವರ್ ಸ್ವತಃ ಮಾಡುತ್ತದೆ. ಹೀಗಾಗಿ, ಲಿವರ್‌ನ್ನು ಶುದ್ಧಗೊಳಿಸಲು ಪ್ರತ್ಯೇಕ ಡಿಟಾಕ್ಸ್ ಡ್ರಿಂಕ್ಸ್ ಅಗತ್ಯವಿಲ್ಲ. ಈ ಡಿಟಾಕ್ಸ್ ಡ್ರಿಂಕ್ಸ್‌ಗಳ ಜನಪ್ರಿಯತೆಗೆ ಪ್ರಮುಖ ಕಾರಣ ಮಾರ್ಕೆಟಿಂಗ್ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವವಾಗಿದೆ. ಅನೇಕ ಕಂಪನಿಗಳು ಈ ಉತ್ಪನ್ನಗಳನ್ನು ಆರೋಗ್ಯಕರವೆಂದು ಪ್ರಚಾರ ಮಾಡುತ್ತಿವೆ, ಆದರೆ ವೈದ್ಯಕೀಯ ದೃಷ್ಟಿಯಿಂದ ಇದು ಸಂಪೂರ್ಣವಾಗಿ ದೃಢಪಟ್ಟಿಲ್ಲ.

ಇದನ್ನೂ ಓದಿ: ಲಿವರ್ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನೀವು ಈ ಮೂರು ಆಹಾರಗಳಿಂದ ದೂರವಿರಲೇಬೇಕು!

ಲಿವರ್ ಆರೋಗ್ಯಕ್ಕೆ ಸರಿಯಾದ ಮಾರ್ಗ ಯಾವುದು?

ಸಾಮಾನ್ಯವಾಗಿ ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲನಯುತ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನೀರು ಕುಡಿಯುವುದು ಮತ್ತು ಮದ್ಯಪಾನವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಜೊತೆಗೆ, ಪ್ರಾಸೆಸ್ಡ್ ಮತ್ತು ಕೊಬ್ಬುಯುಕ್ತ ಆಹಾರವನ್ನು ತಪ್ಪಿಸುವುದು ಅಗತ್ಯ. ಒಟ್ಟಿನಲ್ಲಿ, ಲಿವರ್ ಡಿಟಾಕ್ಸ್ ಡ್ರಿಂಕ್ಸ್‌ಗಳು ಹೆಚ್ಚು ಜನಪ್ರಿಯವಾಗಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ನೈಸರ್ಗಿಕ ಮತ್ತು ಸಮತೋಲನಯುತ ಜೀವನಶೈಲಿಯೇ ಅತ್ಯುತ್ತಮ ಮಾರ್ಗ ಎಂದು ತಜ್ಞರು ಸಲಹೆ ನೀಡುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಸಚಿವ ಮಹದೇವಪ್ಪ – Kannada News | Minister H.C. Mahadevappa Defends CM Siddaramaiah: A Strong Leader, Not Weak

ಬೆಂಗಳೂರು, ಏಪ್ರಿಲ್​ 18: ಸಿಎಂ ಯಾವಾಗ ದುರ್ಬಲ ಆಗಿದ್ದಾರೆ. ಯಾವಾಗಲೂ ಗಟ್ಟಿನೇ ಅವರು. ಟಗರು ಟಗರೆ ಅಲ್ವಾ? ಯಾವಾಗ ಗುದ್ದಬೇಕೋ ಗುದ್ದುತ್ತದೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಸಿಎಂ ಅಸಹಾಯಕರು ಎಂಬ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರು, ದಲಿತರು ಮತ್ತು ಹಿಂದುಳಿದ ವರ್ಗಗಳು ಬೆನ್ನೆಲುಬಾಗಿದ್ದಾರೆ. ರಾಜಣ್ಣ ಅವರಿಗೆ ಸಿಎಂ ಮೇಲೆ‌ ಪ್ರೀತಿ ಇದೆಯಲ್ಲ, ಹಾಗಾಗಿ ಅವರು ಜೋರಾಗಿ ಮಾತಾಡಬೇಕು ಅಂತಾರೆ. ಟಗರು ಸುಮ್ ಸುಮ್ಮನೆ ಗುದ್ದ ಬೇಕು ಅಂತಿಲ್ವಲ್ಲ. ಈಗ ಗುರಾಯಿಸುತ್ತಿದೆ. ಯಾವ ಕಾಲಕ್ಕೆ ಏನು ಮಾಡಬೇಕೋ ಮಾಡುತ್ತದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್! – Kannada News | Hassan Cops’ 15 Year Hunt Ends: Sakaleshpur Jail Escapee Channakeshav Recaptured from Goa

ಹಾಸನ, ಏ.18: ಪೊಲೀಸರು ತಮ್ಮ ಕಾರ್ಉಕ್ಷಮತೆಯಲ್ಲಿ ದೊಡ್ಡ ಸಾಧನೆಯೊಂದನ್ನು ಮಾಡಿದ್ದಾರೆ. ಇದೀಗ ಪೊಲೀಸ್​​ ಇಲಾಖೆಯ ಈ ಸಾಧನೆ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.2011ರಲ್ಲಿ ಸಕಲೇಶಪುರ ಜೈಲಿನಿಂದ ನಾಪತ್ತೆಯಾಗಿದ್ದ ವಿಚಾರಣಾಧೀನ ಖೈದಿಯನ್ನು ಹದಿನೈದು ವರ್ಷಗಳ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ನಲ್ಲುಲ್ಲಿ ಗ್ರಾಮದ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಎಂದು ಗುರುತಿಸಲಾಗಿದೆ.

ಈತ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಕಲೇಶಪುರ ಜೈಲು ಸೇರಿದ್ದನು. 2011ರಲ್ಲಿ ಸಕಲೇಶಪುರ ಜೈಲಿನಲ್ಲಿದ್ದ ಈತ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದನು. ಅಂದಿನಿಂದ ಪೊಲೀಸರು ಈತನ ಪತ್ತೆಗಾಗಿ ಬಲೆ ಬೀಸಿದ್ದರು.

ಜೈಲಿನಿಂದ ತಪ್ಪಿಸಿಕೊಂಡ ನಂತರ ಚನ್ನಕೇಶವ ತನ್ನ ಗುರುತು ಸಿಗದಂತೆ ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಅಲೆದಾಡಿದ್ದನು. ಈ ವೇಳೆ ವಿವಿಧ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡಿದ್ದ ಈತ, ಇತ್ತೀಚೆಗೆ ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು.

ಇದನ್ನೂ ಓದಿ: ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ

ಆರೋಪಿ ಗೋವಾದಲ್ಲಿರುವ ಬಗ್ಗೆ ಹಾಸನ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್ ತಂಡ ಗೋವಾಕ್ಕೆ ಧಾವಿಸಿ, ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಚನ್ನಕೇಶವನನ್ನು ವಶಕ್ಕೆ ಪಡೆದಿದೆ. ಸದ್ಯ ಆರೋಪಿಯನ್ನು ಹಾಸನಕ್ಕೆ ಕರೆತಂದು ಮತ್ತೆ ಜೈಲಿಗಟ್ಟಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

Source link

Exit mobile version