ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಇನ್ನೂ ಕೆಲ ದಿನ ಇದೇ ಪರಿಸ್ಥಿತಿ – Kannada News | Bengaluru temperature: Dry weather in Karnataka, raise in temperature

ಬೆಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಇನ್ನೂ ಕೆಲ ದಿನ ಇದೇ ಪರಿಸ್ಥಿತಿ

ಬೆಂಗಳೂರು, ಮಾರ್ಚ್​ 06: ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ  (Weather Forecast) ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಒಣ ಹವೆ?

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸತೀಶ್; ಸುತ್ತಿಕೊಂಡು ಬಂದ ಕರ್ಮ – Kannada News | Big Boss Satish Dog Controversy: Breeder Faces Legal Action Over Derogatory Animal Comments

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ತಮ್ಮನ್ನು ತಾವು ಡಾಗ್ ಬ್ರೀಡರ್ ಎಂದು ಕರೆದುಕೊಂಡಿದ್ದಾರೆ. ಲಕ್ಷದಿಂದ ಹಿಡಿದು ಕೋಟಿವರೆಗಿನ ಡಾಗ್ ತಳಿಗಳನ್ನು ಖರೀದಿಸಿದ್ದಾಗಿ ಅವರು ಹೇಳುತ್ತಾರೆ. ಆದರೆ, ಅವರಿಗೆ ಪ್ರಾಣಿಗಳ ಮೇಲೆ ಸ್ವಲ್ಪವೂ ಪ್ರೀತಿ ಇದ್ದಂತೆ ಇಲ್ಲ. ಈ ವಿಷಯ ಪದೇ ಪದೇ ಸಾಬೀತಾಗುತ್ತಲೇ ಇದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ಮಾಡಲಾಗಿದೆ.

ಸತೀಶ್ ಹಾಗೂ ಸೋಶಿಯಲ್ ಮೀಡಿಯಾ ಇನ್​​ಫ್ಲುಯೆನ್ಸರ್ ನಕ್ಕನ್​ಲೇ ಸುಭಾಷ್ ವಿಡಿಯೋ ಒಂದನ್ನು ಮಾಡಿದ್ದರು. ಈ ಸಂದರ್ಭದಲ್ಲಿ ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಸುಭಾಷ್ ಕೇಳಿದ ಪ್ರಶ್ನೆ ಅಸಹ್ಯವಾಗಿದ್ದರೆ, ಸತೀಶ್ ಕೊಟ್ಟ ಉತ್ತರ ಕೂಡ ಅಷ್ಟೇ ಕೆಟ್ಟದಾಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸುಭಾಷ್​ ಅವರಿಗಂತೂ ಪ್ರಾಣಿಗಳ ಬಗ್ಗೆ ಗೌರವ ಇಲ್ಲ. ಸತೀಶ್ ಡಾಗ್ ಬ್ರೀಡರ್. ಅವರಿಗಾದರೂ ಪ್ರಾಣಿಗಳ ಮೇಲೆ ಪ್ರೀತಿ ಬೇಡವೇ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ‘ನಿಜವಾದ ಡಾಗ್​ ಬ್ರೀಡರ್​​ಗಳು ಶ್ವಾನಗಳ ಮೇಲೆ ಯಾವ ರೀತಿ ಪ್ರೀತಿ ತೋರಿಸುತ್ತಾರೆ, ಅವುಗಳನ್ನು ಎಷ್ಟು ಗೌರವಿಸುತ್ತಾರೆ ಎಂಬುದನ್ನು ನೋಡಿಲ್ಲ ಎಂದು ಎಲ್ಲಾದರೂ ನೋಡಿ ಕಲಿತಿಕೊಳ್ಳಿ’ ಎಂದು ಕೆಲವರು ಸತೀಶ್​​ಗೆ ಕಿವಿಮಾತು ಹೇಳಿದ್ದರು. ಈಗ ಸತೀಶ್ ತಮ್ಮ ಹೇಳಿಕೆಯಿಂದ ಸಂಕಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್

ಅನಿಮಲ್​ ವೆಲ್​​ಫೇರ್ ಸಪೋರ್ಟ್​ ಲಕ್ಷ್ಮೀ ಅವರು ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಲಾಯರ್ ಕಿರಣ್ ಅವರು ಮಾಹಿತಿ ನೀಡಿದ್ದಾರೆ. ‘ಸೋಶಿಯಲ್ ಮೀಡಿಯದಲ್ಲಿ ಕೆಟ್ಟ ಕೆಟ್ಟ ವಿಡಿಯೋಗಳನ್ನು ಮಾಡಿ ಹಾಕುವ ಮುನ್ನ ಎಚ್ಚರ’ ಎಂದು ಅವರು ಕಿವಿ ಮಾತು ಹೇಳಿದ್ದಾರೆ. ಸತೀಶ್ ಅವರು ಏನೇ ಆದರೂ ಸರಿ ಪ್ರಚಾರ ಸಿಗಲಿ ಎಂದು ಬಯಸುತ್ತಾರೆ.ಅದು ಕೆಲವೊಮ್ಮೆ ಮಿತಿ ಮೀರಿದ್ದು ಇದೆ. ಈಗ ಅವರು ಮಾಡಿದ ತಪ್ಪಿಗೆ ತೊಂದರೆ ಅನುಭವಿಸುವಂತಾಗಿದೆ.

ಇತ್ತೀಚೆಗೆ ಮೂತ್ರ ಮಾಡುವಾಗಿನ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದ ಸತೀಶ್, ಅದಕ್ಕೆ ಸುದೀಪ್ ಹಾಡು ಹಾಕಿದ್ದರು. iದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಆದರೆ, ಈ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಈಗ ಅವರು ಬೇರೆ ಪ್ರಕರಣದಲ್ಲಿ ಸಂಕಷ್ಟ ಎದುರಿಸುವಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:10 am, Fri, 6 March 26

Source link

Sanju Samson: ನನಗಲ್ಲ, ಈ ಪ್ರಶಸ್ತಿ ಅವರಿಗೆ ಕೊಡ್ಬೇಕಿತ್ತು..! – Kannada News | Sanju Samson Says Jasprit Bumrah deserves the POTM award

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ ವಿರೋಚಿತವಾಗಿ 7 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು. ಈ ಸೋಲಿನೊಂದಿಗೆ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಯ್ತು. ಅತ್ತ ಗೆದ್ದು ಬೀಗಿದ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ.

ಇನ್ನು ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ಯಾಮ್ಸನ್, ಈ ಗೌರವಕ್ಕೆ ಜಸ್​ಪ್ರೀತ್ ಬುಮ್ರಾ ಹೆಚ್ಚು ಅರ್ಹರು. ಹೀಗಾಗಿ ಅವರಿಗೆ ನೀಡಬೇಕಿತ್ತು ಎಂದರು.

ಬ್ಯಾಟಿಂಗ್‌ಗೆ ಪೂರಕವಾಗಿದ್ದ ಪಿಚ್‌ನಲ್ಲಿ ಜಸ್​ಪ್ರೀತ್ ಬುಮ್ರಾ ತಮ್ಮ 4 ಓವರ್‌ಗಳಲ್ಲಿ ಕೇವಲ 33 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಅದರಲ್ಲೂ ವಿಶೇಷವಾಗಿ 16ನೇ ಓವರ್​ನಲ್ಲಿ ಕೇವಲ 8 ರನ್​ ನೀಡಿದ್ದರು. ಇದಾದ ಬಳಿಕ 18ನೇ ಓವರ್‌ನಲ್ಲಿ ಕೇವಲ 6 ರನ್ ಮಾತ್ರ ನೀಡಿ ಇಡೀ ಪಂದ್ಯದ ಗತಿಯನ್ನು ಬದಲಿಸಿದ್ದರು.

ಜಸ್​ಪ್ರೀತ್ ಬುಮ್ರಾ ಅವರ ಈ ಬೌಲಿಂಗ್​​ನಿಂದಾಗಿ ನಾವು ಇಂದು ಪಂದ್ಯ ಗೆದ್ದಿದ್ದೇವೆ. ಅವರು ಅಂತಹ ಬೌಲಿಂಗ್ ಮಾಡದಿದ್ದರೆ ನಾವು ಈ ಪಂದ್ಯ ಗೆಲ್ಲುತ್ತಿರಲಿಲ್ಲ. ಅವರು ‘ಒಂದು ಪೀಳಿಗೆಯ ಅಪರೂಪದ ಬೌಲರ್’. ಹಾಗಾಗಿ ಈ ಪ್ರಶಸ್ತಿ ಅವರಿಗೆ ಸಲ್ಲಬೇಕಿತ್ತು ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಇದೀಗ ತನ್ನ ಭರ್ಜರಿ ಇನಿಂಗ್ಸ್​ಗೆ ದೊರಕಿದ್ದ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಜಸ್​ಪ್ರೀತ್ ಬುಮ್ರಾಗೆ ಅರ್ಪಿಸುವ ಮೂಲಕ ಸಂಜು ಸ್ಯಾಮ್ಸನ್ ಎಲ್ಲರ ಮನ ಗೆದ್ದಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಎರಡು ಗೆಲುವುಗಳಲ್ಲಿ ಸ್ಯಾಮ್ಸನ್ ಪ್ರಮುಖ ಪಾತ್ರವಹಿಸಿದ್ದಾರೆ.

ಇದನ್ನೂ ಓದಿ: IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..!

ಇದಕ್ಕೂ ಮುನ್ನ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಬಾರಿಸಿ ಟೀಮ್ ಇಂಡಿಯಾಗೆ ಗೆಲುವು ತಂದು ಕೊಟ್ಟಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ನಿರ್ಣಾಯಕ ಇನಿಂಗ್ಸ್ ಆಡುವ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ.

Source link

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ? – Kannada News | Naga Chaitanya Falldown From Chair in film Vrushakarma Event

ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುರ್ಚಿ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು ಹಾಗೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ! ಇಲ್ಲಿದೆ ಲಿಸ್ಟ್ – Kannada News | India Governor Reshuffle 2026: Major Governor and LG Transfers in Delhi, Ladakh, Telangana and More

ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ!

ನವದೆಹಲಿ, ಮಾರ್ಚ್​ 06: ಭಾರತದ ರಾಷ್ಟ್ರಪತಿ ಭವನವು ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಮಹತ್ವದ ರಾಜ್ಯಪಾಲರ (Governors) ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಸಂಬಂಧಿತ ಅಧಿಕಾರಿಗಳು ತಮ್ಮ ಹುದ್ದೆಗಳನ್ನು ಸ್ವೀಕರಿಸುವ ದಿನಾಂಕದಿಂದ ಈ ನೇಮಕಾತಿಗಳು ಜಾರಿಗೆ ಬರಲಿವೆ ಎಂದು ತಿಳಿಸಲಾಗಿದೆ.

ಎಲ್ಲೆಲ್ಲಿ  ಗವರ್ನರ್ ವರ್ಗಾವಣೆ?

ದೆಹಲಿಯ ಪ್ರಸ್ತುತ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾರನ್ನು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಅಮೆರಿಕಾದಲ್ಲಿ ಭಾರತದ ಮಾಜಿ ರಾಯಭಾರಿಯಾಗಿದ್ದ ತರಣ್ಜಿತ್ ಸಿಂಗ್ ಸಂಧುರನ್ನು ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿರುವ ಶಿವ ಪ್ರತಾಪ್ ಶುಕ್ಲಾ ಅವರನ್ನು ತೆಲಂಗಾಣ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಪ್ರಸ್ತುತ ತೆಲಂಗಾಣ ರಾಜ್ಯಪಾಲರಾಗಿರುವ ಜಿಷ್ಣು ದೇವ್ ವರ್ಮಾರನ್ನು ಮಹಾರಾಷ್ಟ್ರ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದೇ ವೇಳೆ, ನಂದ ಕಿಶೋರ್ ಯಾದವ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ನಿವೃತ್ತ ಸೇನಾ ಅಧಿಕಾರಿಯಾದ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಅವರನ್ನು ಬಿಹಾರ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ತಮಿಳುನಾಡಿನ ರಾಜ್ಯಪಾಲರಾಗಿರುವ ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಕೇರಳದ ಪ್ರಸ್ತುತ ರಾಜ್ಯಪಾಲರಾಗಿರುವ ರಾಜೇಂದ್ರ ವಿಶ್ವನಾಥ ಅರ್‌ಲೆಕರ ಅವರು ತಮಿಳುನಾಡು ರಾಜ್ಯಪಾಲರ ಕಾರ್ಯಭಾರವನ್ನು ವಹಿಸಲಿದ್ದಾರೆ. ಅಲ್ಲದೇ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕವೀಂದರ್ ಗುಪ್ತಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ನೇಮಕಾತಿ/ವರ್ಗಾವಣೆಗಳ ಪಟ್ಟಿ

  • ವಿನಯ್ ಕುಮಾರ್ ಸಕ್ಸೇನಾ – ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ (ಪ್ರಸ್ತುತ ದೆಹಲಿ ಎಲ್‌ಜಿ)
  • ತರಣ್ಜಿತ್ ಸಿಂಗ್ ಸಂಧು – ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ
  • ಶಿವ ಪ್ರತಾಪ್ ಶುಕ್ಲಾ – ತೆಲಂಗಾಣ ರಾಜ್ಯಪಾಲರಾಗಿ ನೇಮಕ (ಪ್ರಸ್ತುತ ಹಿಮಾಚಲ ಪ್ರದೇಶ ರಾಜ್ಯಪಾಲ)
  • ಜಿಷ್ಣು ದೇವ್ ವರ್ಮಾ – ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕ (ಪ್ರಸ್ತುತ ತೆಲಂಗಾಣ ರಾಜ್ಯಪಾಲ)
  • ನಂದ ಕಿಶೋರ್ ಯಾದವ್ – ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಕ
  • ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ – ಬಿಹಾರ ರಾಜ್ಯಪಾಲರಾಗಿ ನೇಮಕ
  • ಆರ್.ಎನ್. ರವಿ – ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ನೇಮಕ (ಪ್ರಸ್ತುತ ತಮಿಳುನಾಡು ರಾಜ್ಯಪಾಲ)
  • ರಾಜೇಂದ್ರ ವಿಶ್ವನಾಥ ಅರ್‌ಲೆಕರ – ತಮಿಳುನಾಡು ರಾಜ್ಯಪಾಲರ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ (ಪ್ರಸ್ತುತ ಕೇರಳ ರಾಜ್ಯಪಾಲ)
  • ಕವೀಂದರ್ ಗುಪ್ತಾ – ಹಿಮಾಚಲ ಪ್ರದೇಶ ರಾಜ್ಯಪಾಲರಾಗಿ ನೇಮಕ (ಪ್ರಸ್ತುತ ಲಡಾಖ್ ಎಲ್‌ಜಿ)

ಈ ಬದಲಾವಣೆಗಳು ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳ ಆಡಳಿತ ವ್ಯವಸ್ಥೆಯಲ್ಲಿ ಸಮತೋಲನ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಕೈಗೊಂಡ ಕ್ರಮವೆಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಾರೆ, ಆದ್ರೂ ಗಾಯವಾಗಲ್ಲ ರಕ್ತ ಬರಲ್ಲ! – Kannada News | Devotees Break Coconuts on Heads Without Injury: Unique Mugumaramma Festival Tradition in Chamarajanagar

ಭಕ್ತರ ತಲೆ ಮೇಲೆಯೇ ತೆಂಗಿನ ಕಾಯಿ ಒಡೆಯುತ್ತಿರುವುದುImage Credit source: tv9

ಚಾಮರಾಜನಗರ, ಮಾರ್ಚ್ 6: ದೇವರಿಗೆ ಪೂಜೆ ಸಲ್ಲಿಸುವ ವೇಳೆ ತೆಂಗಿನಕಾಯಿ ಒಡೆಯುವುದು ಸಾಮಾನ್ಯ ಸಂಪ್ರದಾಯ. ಆದರೆ ಚಾಮರಾಜನಗರ (Chamarajanagar) ಜಿಲ್ಲೆಯ ಒಂದು ಗ್ರಾಮದಲ್ಲಿ ನಡೆಯುವ ಹಬ್ಬದಲ್ಲಿ ಭಕ್ತರ ತಲೆಯ ಮೇಲೆಯೇ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ಧತಿ ಇಂದಿಗೂ ಆಚರಣೆಯಲ್ಲಿದೆ. ಈ ಅಪರೂಪದ ಆಚರಣೆ ಗಡಿ ನಾಡು ಚಾಮರಾಜನಗರ ಜಿಲ್ಲೆಯ ಕಮರವಾಡಿ ಗ್ರಾಮದಲ್ಲಿ ನಡೆಯುವ ಗ್ರಾಮದೇವತೆ ಮೂಗುಮಾರಮ್ಮ ಜಾತ್ರೆಯ ವಿಶೇಷವಾಗಿದೆ.

ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಪ್ರತಿ ವರ್ಷ ಮೂಗುಮಾರಮ್ಮ ದೇವಿಯ ಜಾತ್ರೆ ಮೂರು ದಿನಗಳ ಕಾಲ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಈ ಜಾತ್ರೆಯ ಪ್ರಮುಖ ಆಕರ್ಷಣೆ ಎಂದರೆ ಹರಕೆ ಹೊತ್ತ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆದು ದೇವಿಗೆ ಪೂಜೆ ಸಲ್ಲಿಸುವುದು. ಜಾತ್ರೆಯ ಮೊದಲ ದಿನ ದೇವಿಯ ಮೆರವಣಿಗೆ ನಡೆಯುವ ವೇಳೆ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ಮೂಲಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ತಲೆಯ ಮೇಲೆ ತೆಂಗಿನ ಕಾಯಿ ಒಡೆಯುವ ವಿಡಿಯೋ


ಜಾತ್ರೆಯ ಎರಡನೇ ದಿನ ದೇವಿಗೆ ವಿವಿಧ ವಿಶೇಷ ಪೂಜೆಗಳು ಮತ್ತು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತವೆ. ಮೂರನೇ ದಿನ ಗ್ರಾಮಸ್ಥರು ಮನೆ ಮನೆಗೆ ತೆರಳಿ ಅಕ್ಕಿ, ಬೆಲ್ಲ ಸೇರಿದಂತೆ ಪಡಿತರ ಸಂಗ್ರಹಿಸುವ ಸಂಪ್ರದಾಯ ಇದೆ. ಈ ಸಂದರ್ಭದಲ್ಲಿ ಹರಕೆ ಹೊತ್ತ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ಪದ್ಧತಿ ಕೂಡ ನಡೆಯುತ್ತದೆ. ಗ್ರಾಮದ ಪ್ರತಿಯೊಂದು ಮನೆಯ ಮುಂದೆಯೇ ಈ ಪೂಜೆ ನೆರವೇರಿಸಲಾಗುತ್ತದೆ.

ಗಾಯವಾಗಲ್ಲ, ರಕ್ತ ಬರಲ್ಲ!

ಆಶ್ಚರ್ಯಕರ ಸಂಗತಿ ಏನೆಂದರೆ, ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆದರೂ ಅವರಿಗೆ ಯಾವುದೇ ರೀತಿಯ ಗಾಯವಾಗುವುದಿಲ್ಲ, ರಕ್ತವೂ ಹರಿಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಾರೆ. ಇದು ಗ್ರಾಮದೇವತೆ ಮೂಗುಮಾರಮ್ಮನ ಪವಾಡ ಎಂದು ಭಕ್ತರು ನಂಬಿಕೆ ವ್ಯಕ್ತಪಡಿಸುತ್ತಾರೆ. ತಲೆಯ ಮೇಲೆ ಹೊಡೆಯುವ ತೆಂಗಿನಕಾಯಿ ಒಂದೇ ಹೊಡೆತದಲ್ಲಿ ಎರಡು ಭಾಗಗಳಾಗಿ ಒಡೆಯುವುದು ಈ ಆಚರಣೆಯ ವಿಶೇಷವಾಗಿದೆ.

ಇದನ್ನೂ ಓದಿ: ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ಚಾಮರಾಜನಗರ ಗೂಳಿಪುರದಲ್ಲಿ ವಿಶೇಷ ಹಬ್ಬ, ವಿಡಿಯೋ ಇಲ್ಲಿದೆ ನೋಡಿ

ತಲೆತಲಾಂತರಗಳಿಂದ ನಡೆದುಬರುತ್ತಿರುವ ಈ ಅಪರೂಪದ ಸಂಪ್ರದಾಯವನ್ನು ಇಂದಿಗೂ ಗ್ರಾಮಸ್ಥರು ಭಕ್ತಿಭಾವದಿಂದ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈ ವಿಶಿಷ್ಟ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದ್ದು, ಜನರ ಗಮನ ಸೆಳೆಯುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ENG: ಟೀಮ್ ಇಂಡಿಯಾ ಗೆಲುವಿಗೆ ಇವರೇ ಕಾರಣ..! – Kannada News | Reasons why India beat England in the semi final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ಗೆ ಸೋಲುಣಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ರಣರೋಚಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 253 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೋಲಿನ ಅಂತರ ಕೇವಲ 7 ರನ್​ಗಳು ಮಾತ್ರ. ಈ ಅಂತರ ಸೃಷ್ಟಿಯಾಗಿದ್ದು ಹೇಗೆ? ಈ ಗೆಲುವಿಗೆ ಕಾರಣಕರ್ತರು ಯಾರೆಂದು ನೋಡುವುದಾದರೆ….

  • ಸಂಜು ಸ್ಯಾಮ್ಸನ್ ಅಬ್ಬರ: ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರನಾಗಿ ಬಂದ ಸಂಜು ಸ್ಯಾಮ್ಸನ್ ಕೇವಲ 42 ಎಸೆತಗಳಲ್ಲಿ 89 ರನ್ (7 ಸಿಕ್ಸರ್, 8 ಬೌಂಡರಿ) ಸಿಡಿಸಿ ಭಾರತಕ್ಕೆ ಬೃಹತ್ ಮೊತ್ತದ ಅಡಿಪಾಯ ಹಾಕಿಕೊಟ್ಟಿದ್ದರು. ಈ ಒಂದು ಭರ್ಜರಿ ಇನಿಂಗ್ಸ್ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಲು ಕಾರಣವಾಯಿತು.
  • ತಿಲಕ್ ವರ್ಮಾ 3 ಸಿಕ್ಸ್​: ಟೀಮ್ ಇಂಡಿಯಾ ಪರ ಎಲ್ಲಾ ಬ್ಯಾಟರ್​ಗಳು ಅಬ್ಬರಿಸಿದರೂ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ತಿಲಕ್ ವರ್ಮಾ ಅವರ ಮೂರು ಸಿಕ್ಸ್​. ಏಕೆಂದರೆ 18ನೇ ಓವರ್​ನ ಮುಕ್ತಾಯದ ವೇಳೆಗೆ ಕ್ರೀಸ್​ಗೆ ಆಗಮಿಸಿದ ತಿಲಕ್ ವರ್ಮಾ ಜೋಫ್ರಾ ಅರ್ಚರ್ ಎಸೆದ 19ನೇ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ 7 ಎಸೆತಗಳಲ್ಲಿ 21 ರನ್​ಗಳ ಕೊಡುಗೆ ನೀಡಿದ್ದರು.
  • ಬುಮ್ರಾ ಮ್ಯಾಜಿಕ್ ಸ್ಪೆಲ್: ಇಂಗ್ಲೆಂಡ್ ತಂಡವು ಗೆಲುವಿನ ಹಾದಿಯಲ್ಲಿದ್ದಾಗಜಸ್ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅಂದರೆ ಅಂತಿಮ ಎರಡು ಓವರ್​ಗಳಲ್ಲಿ ಬುಮ್ರಾ ನೀಡಿದ್ದರು ಕೇವಲ 14 ರನ್​ಗಳು ಮಾತ್ರ.
  • 16ನೇ ಓವರ್​ನಲ್ಲಿ 8 ರನ್ ನೀಡಿದ್ದ ಬುಮ್ರಾ 18ನೇ ಓವರ್​ನಲ್ಲಿ ಬಿಟ್ಟುಕೊಟ್ಟಿದ್ದು ಕೇವಲ 6 ರನ್​​ಗಳು ಮಾತ್ರ. ಈ ಎರಡು ಓವರ್​ಗಳು ಇಂಗ್ಲೆಂಡ್​ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿತು.
  • ಅಕ್ಷರ್ ಪಟೇಲ್ ಕೈಚಳಕ: ಅಕ್ಷರ್ ಪಟೇಲ್ ಹಿಡಿದ ಎರಡು ಅದ್ಭುತ ಕ್ಯಾಚ್‌ಗಳು ಪಂದ್ಯದ ಗತಿಯನ್ನು ಬದಲಿಸಿದವು. ಮೊದಲಿಗೆ ಹ್ಯಾರಿ ಬ್ರೂಕ್ ಅವರ ಅದ್ಭುತ ಕ್ಯಾಚ್ ಹಿಡಿದಿದ್ದ ಅಕ್ಷರ್ ಪಟೇಲ್, ಆ ಬಳಿಕ ಡೇಂಜರಸ್ ವಿಲ್ ಜ್ಯಾಕ್ಸ್ ಅವರ ರಿಲೇ ಕ್ಯಾಚ್ ಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ಅಂದರೆ ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ 7 ರನ್​ಗಳ ವ್ಯತ್ಯಾಸಕ್ಕೆ ಪ್ರಮುಖ ಕಾರಣವಾಗಿದ್ದು ಅಕ್ಷರ್ ಪಟೇಲ್ ಅವರ ಅತ್ಯದ್ಭುತ ಫೀಲ್ಡಿಂಗ್ ಹಾಗೂ ಜಸ್​ಪ್ರೀತ್ ಬುಮ್ರಾ ಅವರ ಮಿಂಚಿನ ದಾಳಿ ಎನ್ನಬಹುದು.

ಇದನ್ನೂ ಓದಿ: IND vs ENG: ಒಬ್ಬ ಮಾಡಿದ ತಪ್ಪಿಗೆ ಭಾರೀ ಬೆಲೆ ತೆತ್ತ ಇಂಗ್ಲೆಂಡ್

ಅದರಲ್ಲೂ ನಿರ್ಣಾಯಕ ಹಂತದಲ್ಲಿ 2 ಓವರ್​ಗಳಲ್ಲಿ ಕೇವಲ 14 ರನ್ ನೀಡುವ ಮೂಲಕ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟಿದ್ದರು. ಬುಮ್ರಾ ಅವರ ಈ ಬುಮ್ರಾಸ್ತ್ರದಿಂದ ಭಾರತ ತಂಡವು 7 ರನ್​ಗಳ ಜಯ ಸಾಧಿಸಲು ಸಾಧ್ಯವಾಯಿತು ಎಂದರೂ ತಪ್ಪಾಗಲಾರದು.

Source link

‘ಪತ್ನಿ ಜೊತೆ ಬಂದು ಸ್ಪಷ್ಟನೆ ಕೊಡಬೇಕು, ಸಂಬಂಧ ಇಟ್ಟುಕೊಂಡವರ ಜೊತೆಯಲ್ಲ’ – Kannada News | Thalapathy Vijay, Trisha Spotted: Divorce Rumors Amidst Wife’s Affair Allegations

ದಳಪತಿ ವಿಜಯ್ (Vijay) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರ ಜೊತೆ ಅವರಿಗೆ ಅಕ್ರಮ ಸಂಬಂಧ ಇದೆ ಎಂದು ಪತ್ನಿ ಕಡೆಯಿಂದಲೇ ಆರೋಪ ಬಂದಿತ್ತು. ಈ ವಿಷಯವಾಗಿ ದಳಪತಿ ವಿಜಯ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ದಳಪತಿ ವಿಜಯ್ ಅವರು ಒಂದು ದೊಡ್ಡ ಬಾಂಬ್ ಹಾಕಿದ್ದಾರೆ. ತ್ರಿಷಾ ಜೊತೆ ಅವರು ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದರು. ಇದನ್ನು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ವಿಜಯ್ ಎಲ್ಲರಿಗೂ ಉತ್ತರ ಕೊಟ್ಟು ಎಂದು ಹೇಳುತ್ತಿದ್ದಾರೆ. ಇದಕ್ಕೆ ಕೆಲವರು ಉತ್ತರಿಸಿದ್ದು, ‘ಪತ್ನಿ ಜೊತೆ ಬಂದು ಸ್ಪಷ್ಟನೆ ಕೊಡಬೇಕು, ಸಂಬಂಧ ಇಟ್ಟುಕೊಂಡವರ ಜೊತೆಯಲ್ಲ’ ಎಂದು ಹೇಳಿದ್ದಾರೆ.

ವಿಜಯ್ ಅವರು ತಮ್ಮ ಕೊನೆಯ ಸಿನಿಮಾ ‘ಜನ ನಾಯಗನ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಸೆನ್ಸಾರ್ ತೊಡಕು ಚಿತ್ರಕ್ಕೆ ಉಂಟಾಗಿದೆ. ಈ ಬೆಳವಣಿಗೆ ಮಧ್ಯೆ ವಿಜಯ್ ಅವರಿಗೆ ಸಮಸ್ಯೆ ತಂದಿದ್ದು ಅವರ ಪತ್ನಿ ಸಂಗೀತಾ ಸಲ್ಲಿಕೆ ಮಾಡಿರೋ ಡಿವೋರ್ಸ್ ಅರ್ಜಿ. ಪತಿಗೆ ನಟಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ.

ದಳಪತಿ ವಿಜಯ್ ಹಾಗೂ ತ್ರಿಷಾ ಮಧ್ಯೆ ಏನೋ ನಡೆಯುತ್ತಿದೆ ಎಂಬ ಚರ್ಚೆ ಮೊದಲಿನಿಂದಲೂ ದೆ. ಇಬ್ಬರೂ ಒಟ್ಟಿಗೆ ಇದ್ದರು ಎಂಬುದಕ್ಕೆ ಪೂರಕವಾದ ಸಾಕ್ಷಿಗಳನ್ನು ಕೆಲವರು ತಂದಿದ್ದಾರೆ. ಆದರೆ, ವಿಜಯ್ ಆಗಲಿ, ತ್ರಿಷಾ ಆಗಲಿ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಹೀಗಿರುವಾಗಲೇ ಚೆನ್ನೈನಲ್ಲಿ ಗುರುವಾರ (ಮಾರ್ಚ್ 5) ಸಂಜೆ ನಡೆದ ಎಸ್‌. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅವರು ಒಂದೇ ಕಾರಲ್ಲಿ ಬಂದರು ಎನ್ನಲಾಗುತ್ತಿದೆ.

ಈ ವಿಡಿಯೋ ಟ್ವೀಟ್ ಮಾಡಿದ್ದ ಅಭಿಮಾನಿ, ‘ವಿಜಯ್ ಅವರು ತಮ್ಮ ಸ್ಟೈಲ್ ಅಲ್ಲಿ ಎಲ್ಲರಿಗೂ ಉತ್ತರ ನೀಡಿದ್ದಾರೆ. ಎಲ್ಲಾ ವದಂತಿಗೆ ತೆರೆ ಎಳೆದಿದ್ದಾರೆ. ಅವರಿಗೆ ಧೈರ್ಯ ಇದೆ’ ಎಂದು ಮೋಹನ್ ಕ್ಷತ್ರೀಯಾ ಎಂಬುವವರು ಟ್ವೀಟ್ ಮಾಡಿದ್ದರು. ಇದಕ್ಕೆ ವ್ಯಕ್ತಿಯೋರ್ವ ಉತ್ತರಿಸಿದ್ದಾನೆ.

ಇದನ್ನೂ ಓದಿ:  ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ

‘ನೀವು ಬೇರೊಬ್ಬರೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದೀರಿ ಎಂದು ಯಾರಾದರೂ ಆರೋಪಿಸಿದಾಗ, ನೀವು ನಿಮ್ಮ ಹೆಂಡತಿಯೊಂದಿಗೆ ಸಮಾರಂಭಗಳಿಗೆ ಕಾಣಿಸಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆಯಬೇಕೆ ಹೊರತೂ, ನೀವು ಸಂಬಂಧ ಹೊಂದಿದ್ದೀರಿ ಎಂದು ಆರೋಪಿಸುವ ಮಹಿಳೆಯೊಂದಿಗೆ ಬಂದು ಅಲ್ಲ’ ಎಂದು ಉತ್ತರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?

ಬೆಂಗಳೂರು, ಮಾರ್ಚ್​​ 06​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ತವರು ಮನೆಯು ಯಾವುದೇ ಹೆಣ್ಣುಮಗುವಿಗೆ ಸದಾ ವಿಶೇಷ ಬಾಂಧವ್ಯದ ತಾಣ. ಆದರೆ, ಶಾಸ್ತ್ರಗಳು ಮತ್ತು ಧರ್ಮಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶುಭಕರವಲ್ಲ ಎಂದು ಹೇಳಲಾಗುತ್ತದೆ.

ಶನಿವಾರವು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ದಿನವಾದರೂ, ಈ ದಿನ ಪ್ರಯಾಣಿಸುವುದರಿಂದ ಒಂದಷ್ಟು ಸಂಕುಚಿತ ಭಾವನೆಗಳು ಮನಸ್ಸನ್ನು ಆವರಿಸಬಹುದು ಎಂಬ ವೈಜ್ಞಾನಿಕ ಅಭಿಪ್ರಾಯವೂ ಇದೆ. ಹಿಂದೂ ಸಂಸ್ಕೃತಿಯಲ್ಲಿ ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿದೆ. ಶನಿವಾರದಂದು ವ್ರತ ಅಥವಾ ಪೂಜೆಗಳನ್ನು ಆಚರಿಸುವವರಿಗೆ ದೈಹಿಕವಾಗಿ ಸ್ವಲ್ಪ ತೊಂದರೆಯಾಗಬಹುದು. ಅಲ್ಲದೆ, ಪೂರ್ವಿಕರ ಅನುಭವದಂತೆ, ಈ ದಿನದ ಭೇಟಿಯು ಅತ್ತೆಯ ಮನೆಯಲ್ಲಿ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಹುದು ಅಥವಾ ಎರಡೂ ಕಡೆ ಮಾನಸಿಕ ಒತ್ತಡವನ್ನು ಸೃಷ್ಟಿಸಬಹುದು. ಈ ಎಲ್ಲಾ ಅಂಶಗಳು ನಂಬಿಕೆಗಳ ಆಧಾರದ ಮೇಲೆ ಶನಿವಾರದ ಪ್ರಯಾಣವನ್ನು ಅಷ್ಟು ಪ್ರಾಶಸ್ತ್ಯವಲ್ಲ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

Horoscope Today 6​​th​​ March​: ಇಂದು ಈ ರಾಶಿಯವರ ಆಕಸ್ಮಿಕ ಪ್ರಯಾಣ ಯೋಗ – Kannada News | Daily Horoscope for March​ ​6​​th​​ 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 6​​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ತದಿಗೆ, ಹಸ್ತಾ ನಕ್ಷತ್ರ, ಗಂಡ ಯೋಗ ಮತ್ತು ಭದ್ರಕರ್ಣದಿಂದ ಕೂಡಿದೆ.

ಬೆಳಗಿನ ಜಾವ 11:03 ರಿಂದ 12:30ರ ವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 12:31 ರಿಂದ 2:02ರ ವರೆಗೆ ಸರ್ವ ಸಿದ್ದಿ ಕಾಲ, ಸಂಕಲ್ಪ ಕಾಲ ಮತ್ತು ಶುಭ ಕಾಲವಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ ರಾಶಿಯಲ್ಲಿ ಹಸ್ತಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಸಂಕಷ್ಟ ಚತುರ್ಥಿ ಇರತಕ್ಕಂತಹ ವಿಶೇಷ ದಿನವಾಗಿದೆ. ಜೊತೆಗೆ ಉಳ್ಳಾಲ ರಥ, ಕದನೂರಿನ ಉತ್ಸವ, ನವವೃಂದಾವನ ವ್ಯಾಸರಾಯ ತೀರ್ಥರ ಆರಾಧನೆ, ಕಳಲೆಯ ಜಾತ್ರೆ ಮಹೋತ್ಸವದಂತಹ ವಿಶೇಷ ಕಾರ್ಯಕ್ರಮಗಳ ದಿನವಾಗಿದೆ ಎಂದು ಗುರೂಜಿ ವಿವರಣೆ ನೀಡಿದ್ದಾರೆ.

 

 

 

Source link

Exit mobile version