ವಿಜಯ್ ಸೂಟು-ಸ್ಟಾಲಿನ್ ಪಂಚೆ: ಅಣ್ಣಾಮಲೈ ಸಖತ್ ಟಾಂಗ್ – Kannada News | K Annamalai constructive criticism about DMK’s family politics and Vijay’s suit

ದಳಪತಿ ವಿಜಯ್ (Thalapathy Vijay) ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 60 ವರ್ಷಗಳ ಡಿಎಂಕೆ ಮತ್ತು ಎಐಎಡಿಎಂಕೆಯ ಸತತ ಪ್ರಾಬಲ್ಯವನ್ನು ವಿಜಯ್ ಮುರಿದಿದ್ದಾರೆ. ವಿಜಯ್ ಅವರು ತಮ್ಮ ಪ್ರಮಾಣ ವಚನಕ್ಕೆ ಕಪ್ಪು ಬಣ್ಣದ ಸೂಟು ಧರಿಸಿ ಆಗಮಿಸಿದ್ದರು. ಸಾಮಾನ್ಯವಾಗಿ ರಾಜಕಾರಣಿಗಳು, ಬಿಳಿ ಬಣ್ಣದ ಶರ್ಟ್ ಪಂಚೆ ಅಥವಾ ಧೋತಿಗಳನ್ನು ಉಡುವುದು ರೂಢಿ ಆದರೆ ವಿಜಯ್ ಅವರ ಸಂಪ್ರದಾಯ ಮರಿದು ಕಪ್ಪು ಬಣ್ಣದ ಸೂಟು, ಬಿಳಿ ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟು ಧರಿಸಿ ಬಂದಿದ್ದರು. ಈ ಬಗ್ಗೆ ತಮಿಳುನಾಡು ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಇದೀಗ ತಮಿಳುನಾಡಿ ಬಿಜೆಪಿ ಮುಖಂಡ ಅಣ್ಣಾಮಲೈ ವಿಜಯ್ ಸೂಟನ್ನು ಸ್ಟಾಲಿನ್ ಅವರ ಪಂಚೆಯೊಂದಿಗೆ ಹೋಲಿಸಿ ತಮಾಷೆ ಮಾಡಿದ್ದು, ಅಣ್ಣಾಮಲೈ ಅವರ ಟೀಕೆ ಬಹಳ ರಚನಾತ್ಮಕವಾಗಿದೆ.

ಅಣ್ಣಾಮಲೈ ಅವರು ಯುಎಸ್​​ನಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಒಂದೇ ವಾಕ್ಯದಲ್ಲಿ ತಮಿಳುನಾಡಿನ ಕುಟುಂಬ ರಾಜಕಾರಣ ಮತ್ತು ವಿಜಯ್ ಅವರ ಮುಂದಿರುವ ಸವಾಲುಗಳ ಬಗ್ಗೆ ತಮಾಷೆಯ ಧಾಟಿಯಲ್ಲಿ ವಿವರಿಸಿದರು. ‘1970ರಲ್ಲಿ ತಮಿಳುನಾಡಿನ ಪ್ರವಾಹದ ಒಂದು ಜನಪ್ರಿಯ ಫೊಟೊ ಇದೆ, ಫೋಟೊನಲ್ಲಿ ಕರುಣಾನಿಧಿ ಅವರು ಪ್ರವಾಹದ ನೀರಿನಲ್ಲಿ ತಮ್ಮ ಪಂಚೆಯನ್ನು ಮೊಳಕಾಲಿನ ವರೆಗೆ ಎತ್ತಿಕೊಂಡು ನಡೆಯುತ್ತಿದ್ದಾರೆ. ಬಳಿಕ 2000 ರಲ್ಲಿ ಪ್ರಹಾವದಲ್ಲಿ ಅವರ ಮಗ ಸ್ಟಾಲಿನ್ (ಮಾಜಿ ಸಿಎಂ) ಅವರು ಪ್ರವಾಹದ ನೀರಿನಲ್ಲಿ ಪಂಚೆ ಎತ್ತಿ ನಡೆಯುತ್ತಿರುವ ಫೋಟೊ ಸಹ ಇದೆ. ಇತ್ತೀಚೆಗೆ ಬಂದ ಪ್ರವಾಹದಲ್ಲಿ ಸ್ಟಾಲಿನ್ ಅವರ ಮಗ ಉದಯನಿಧಿ (ಮಾಜಿ ಡಿಸಿಎಂ) ಪ್ರವಾಹದ ನೀರಿನಲ್ಲಿ ನಿಂತಿರುವ ಫೋಟೊ ಇದೆ. ಈಗ ವಿಜಯ್ ಅವರ ಸೂಟು ಧರಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಪ್ರವಾಹದ ನೀರಿನಲ್ಲಿ ಹೇಗೆ ನಡೆಯುತ್ತಾರೆಯೋ ನೋಡಬೇಕು’ ಎಂದಿದ್ದಾರೆ.

ಇದನ್ನೂ ಓದಿ:‘ದ್ರಾವಿಡ’ ರಾಜಕಾರಣದ ‘ಯೂನಿಫಾರ್ಮ್’ ಬದಲಿಸಿದ ವಿಜಯ್

ಮೇಲ್ನೋಟಕ್ಕೆ ಇದು ವಿಜಯ್ ಅವರು ಸೂಟು ಧರಿಸಿ ಸಿಎಂ ಆಗಿದ್ದಾರೆ ಅವರು ಪ್ರವಾಹದ ಸಮಯದಲ್ಲಿ ನೀರಿಗಿಳಿಯುವುದು ಕಷ್ಟವಾಗುತ್ತದೆ ಅಥವಾ ನೀರಿಗೆ ಇಳಿಯಲಾರರೇನೋ ಎಂದು ಅಣ್ಣಾಮಲೈ ಹೇಳಿದಂತೆ ತೋರುತ್ತಿದೆ. ಆದರೆ ಅಣ್ಣಾಮಲೈ ಅವರು ತಮಿಳುನಾಡಿನ ಕುಟುಂಬ ರಾಜಕಾರಣ ಮತ್ತು ಅವರು ಜನರ ಸಮಸ್ಯೆಗಳನ್ನು ನಿರ್ಲಕ್ಷಿಸಿರುವ ರೀತಿ ಹಾಗೂ ವಿಜಯ್ ಅವರ ಮುಂದಿರುವ ಸವಾಲುಗಳ ಬಗ್ಗೆ ಹೇಳಿದ್ದಾರೆ.

ಕಳೆದ 50 ವರ್ಷದಿಂದಲೂ ಚೆನ್ನೈನಲ್ಲಿ ಪ್ರವಾಹಗಳು ಬರುತ್ತಲೇ ಇವೆ. ಕರುಣಾನಿಧಿ, ಅವರ ಬಳಿಕ ಸ್ಟಾಲಿನ್, ಅವರ ಜೊತೆಗೆ ಉದಯನಿಧಿ ಸ್ಟಾಲಿನ್ ಅವರುಗಳು ಪ್ರವಾಹದ ಸಮಯದಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದಾರೆಯೇ ಹೊರತು ಆ ಪ್ರವಾಹದಿಂದ ಆಗುತ್ತಿರುವ ಹಾನಿಯನ್ನು ತಡೆಯಲು ಅವರಿಗೆ ಸಾಧ್ಯವಾಗಿಲ್ಲ. ಈಗ ವಿಜಯ್ ಅವರ ಮುಂದೆ ಅದೇ ಸವಾಲು ಇದೆ, ಅದನ್ನು ಅವರು ಹೇಗೆ ಎದುರಿಸುತ್ತಾರೋ ನೋಡಬೇಕಿದೆ ಎಂಬ ಒಳ ಅರ್ಥ ಅಣ್ಣಾಮಲೈ ಅವರ ಮಾತುಗಳಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಚಾಲಕನ ಕಿರುನಿದ್ದೆ, ಅಪ್ಪಳಿಸಿದ ಟ್ರಕ್; ಮೈ ಜುಂ ಎನಿಸುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral Drowsy Driving Accident: Truck Hits Divider, 3M Views – Road Safety Alert

ನಿದ್ದೆಯ ಮಂಪರಿನಲ್ಲಿ ಟ್ರಕ್ ಚಲಾಯಿಸಿದ ಚಾಲಕನೋರ್ವ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್​​ಗೆ ಗುದ್ದಿರುವ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. @anilsawajdm ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಚಾಲಕರ ಬೇಜವಾಬ್ದಾರಿಗೆ ಸಾಕ್ಷಿಯಾಗಿದ್ದು, ಈಗಾಗಲೇ 30 ಲಕ್ಷಕ್ಕೂ (3 ಮಿಲಿಯನ್) ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಚಾಲಕನ ಕಿರುನಿದ್ದೆ ಅಥವಾ ಆಲಸ್ಯದ ಕಾರಣದಿಂದ ಸಂಭವಿಸಿದ ಈ ಅಪಘಾತವು ದಾರಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುವಂತಿದ್ದು, ನೆಟ್ಟಿಗರು ಈ ವಿಡಿಯೋ ನೋಡಿ ಸಂಚಾರ ನಿಯಮಗಳ ಪಾಲನೆ ಮತ್ತು ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: 

Source link

ಮತ್ತೆ ಆನ್​ಲೈನ್ ಕ್ಲಾಸ್ ವ್ಯವಸ್ಥೆ ಬಳಸಲು ಶಾಲಾ ಕಾಲೇಜುಗಳಿಗೆ ಪ್ರಧಾನಿ ಸಲಹೆ – Kannada News | PM Modi’s Fuel Saving Plea: Online Classes, WFH Amidst West Asia Crisis

ವಡೋದರಾ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟು ಮತ್ತು ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಇಂಧನ ಉಳಿಸಲು ವರ್ಕ್ ಫ್ರಂ ಹೋಮ್, ಸಾರ್ವಜನಿಕ ಸಾರಿಗೆ ಬಳಕೆ ಇತ್ಯಾದಿ ಸಲಹೆ ಕೊಟ್ಟಿದ್ದಾರೆ. ಇದೇ ವೇಳೆ, ಶಾಲಾ ಕಾಲೇಜುಗಳಿಗೂ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುವ ಕುರಿತು ಮತ್ತು ಇಂಧನ ಉಳಿತಾಯಕ್ಕಾಗಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ಅವರು ಸೂಚಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಅನುಸರಿಸಿದಂತೆ, ಶಾಲಾ-ಕಾಲೇಜುಗಳು ತಾತ್ಕಾಲಿಕವಾಗಿ ಆನ್‌ಲೈನ್ ತರಗತಿಗಳನ್ನು ನಡೆಸುವ ಬಗ್ಗೆ ಆಲೋಚಿಸಬೇಕು ಎಂದು ಪ್ರಧಾನಿ ಸಲಹೆ ನೀಡಿದ್ದಾರೆ. ಇದು ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಯ ಪ್ರಯಾಣವನ್ನು ಕಡಿಮೆ ಮಾಡಿ ಇಂಧನ ಉಳಿತಾಯಕ್ಕೆ ಸಹಕಾರಿಯಾಗಲಿದೆ ಎಂಬುದು ಅವರ ಆಶಯ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ಗುಜರಾತ್‌ನ ವಡೋದರಾದಲ್ಲಿ ಸರ್ದಾರ್‌ಧಾಮ್ ಭವನ-3 ಮತ್ತು ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವಂತೆ ದೇಶವಾಸಿಗಳಲ್ಲಿ ವಿನಂತಿಸಿದರು. ಮೆಟ್ರೋ ರೈಲು, ಎಲೆಕ್ಟ್ರಿಕ್ ಬಸ್‌ಗಳು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸುವಂತೆ ಹಾಗೂ ಕಾರುಗಳನ್ನು ಹಂಚಿಕೊಂಡು ಪ್ರಯಾಣಿಸುವ (Car-pooling) ಮೂಲಕ ಇಂಧನ ಉಳಿಸಲು ಸಹಕರಿಸಬೇಕು ಎಂದು ಹೇಳಿದರು.

ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ವರ್ಚುವಲ್ ಮೀಟಿಂಗ್‌ಗಳನ್ನು ನಡೆಸಲು ಮತ್ತು ಸಾಧ್ಯವಿರುವ ಕಡೆಗಳಲ್ಲಿ ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ (Work from home) ಸೌಲಭ್ಯವನ್ನು ನೀಡಲು ಆದ್ಯತೆ ನೀಡಬೇಕು ಎಂದು ತಿಳಿಸಿದರು. ಇಂಧನ ಮಾತ್ರವಲ್ಲದೆ, ಖಾದ್ಯ ತೈಲದ ಬಳಕೆಯನ್ನು ಮಿತಗೊಳಿಸುವುದು, ಚಿನ್ನದ ಖರೀದಿಯನ್ನು ಮುಂದೂಡುವುದು ಮತ್ತು ಅನಗತ್ಯ ವಿದೇಶಿ ಪ್ರವಾಸಗಳನ್ನು ತಪ್ಪಿಸುವ ಮೂಲಕ ದೇಶದ ವಿದೇಶಿ ವಿನಿಮಯ ಮೀಸಲು ಉಳಿಸಲು ಸಹಕರಿಸಬೇಕು ಎಂದು ಅವರು ದೇಶದ ಜನತೆಯನ್ನು ಕೋರಿದ್ದಾರೆ.

ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಹಾಗೂ ಪಶ್ಚಿಮ ಏಷ್ಯಾದಲ್ಲಿನ ಯುದ್ಧದಂತಹ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಪೂರೈಕೆ ಸರಪಳಿಗೆ ಧಕ್ಕೆಯಾಗಿದೆ ಮತ್ತು ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ. ಈ ಆರ್ಥಿಕ ಸವಾಲನ್ನು ಎದುರಿಸಲು, ಮತ್ತು ಆಮದು ವೆಚ್ಚ ತಗ್ಗಿಸಲು ಪ್ರಧಾನಿಯವರು ಈ “ಕಠಿಣ ಕ್ರಮಗಳ” (Austerity measures) ಮೊರೆ ಹೋಗಿದ್ದಾರೆ.

ಒಟ್ಟಾರೆಯಾಗಿ, ರಾಷ್ಟ್ರೀಯ ಹಿತದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕನು ಇಂಧನ ಮತ್ತು ಸಂಪನ್ಮೂಲಗಳನ್ನು ಉಳಿಸುವ ಮೂಲಕ ದೇಶದ ಆರ್ಥಿಕತೆಗೆ ಬೆಂಬಲವಾಗಿ ನಿಲ್ಲಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! – Kannada News | Anjanadri Temple Gold Donation Controversy: Kolar Administration Re verifies Documents of Mahesh Reddy

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ!

ಕೊಪ್ಪಳ, ಮೇ 12: ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೀಡಿದ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ವಿಚಾರದಲ್ಲಿ ಈಗ ಗೊಂದಲ ಮೂಡಿದ್ದು, ಜಿಲ್ಲಾಡಳಿತವು ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ. ಪಂಚನಾಮ ಪ್ರಕ್ರಿಯೆಯ ನಂತರ ಎಲ್ಲಾ ಆಭರಣಗಳನ್ನು ದೇವಸ್ಥಾನದ ಸಮಿತಿಯ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮುಖ್ಯಾಂಶಗಳು

  • ಉದ್ಯಮಿ ನೀಡಿದ ಬಂಗಾರದ ತೂಕದ ಬಗ್ಗೆ ಮೌಲ್ಯಮಾಪಕರಿಂದ ಭಿನ್ನ ವರದಿ ಸಲ್ಲಿಕೆ.
  •  ದಾನಿಗಳು ನೀಡಿದ ದಾಖಲೆಗಳನ್ನು ಮರುಪರಿಶೀಲಿಸಲು ಕೊಪ್ಪಳ ಜಿಲ್ಲಾಡಳಿತದ ಮಹತ್ವದ ನಿರ್ಧಾರ.
  •  ಬಿಲ್ ಹಾಗೂ ದಾಖಲೆಗಳ ಆಧರಿಸಿ ಆಭರಣಗಳನ್ನು ದೇವಸ್ಥಾನದ ಸುಪರ್ದಿಗೆ ಪಡೆಯುವ ಪ್ರಕ್ರಿಯೆ.

ಪ್ರಕರಣದ ಹಿನ್ನೆಲೆ

ಜನಾರ್ದನ ರೆಡ್ಡಿ ಅವರ ಆಪ್ತರೆನ್ನಲಾದ ಎಎಂಆರ್ ಪ್ರೈವೇಟ್ ಲಿಮಿಟೆಡ್‌ನ ಉದ್ಯಮಿ ಮಹೇಶ್ ರೆಡ್ಡಿ ಅವರು ಕಳೆದ ಮೇ 8ರಂದು ದೇವಸ್ಥಾನಕ್ಕೆ ವಿವಿಧ ಆಭರಣ ಹಾಗೂ ಕವಚಗಳನ್ನು ದೇಣಿಗೆಯಾಗಿ ನೀಡಿದ್ದರು. ಈ ಕವಚಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಇವುಗಳಿಗೆ ಬಂಗಾರದ ಲೇಪನಕ್ಕಾಗಿ 60 ಗೇಜ್ ಉಳ್ಳ ಬಂಗಾರದ ಹಾಳೆಗಳನ್ನು ಬಳಸಲಾಗಿದೆ ಎಂದು ದಾನಿಗಳ ಪರವಾಗಿ ಹಾಜರಿದ್ದ ವಾಸ್ತುಶಿಲ್ಪಿ ಗುಂಡಾಚಾರಿ ಸ್ಥಪತಿ ತಿಳಿಸಿದ್ದರು. ಅವರ ಪ್ರಕಾರ ಈ ಬಂಗಾರದ ಅಂದಾಜು ತೂಕ 1280 ಗ್ರಾಂ ಆಗಿತ್ತು.

ಟ್ವಿಸ್ಟ್ ನೀಡಿದ ಮೌಲ್ಯಮಾಪನ

ಆದರೆ ಸರ್ಕಾರದ ಪರವಾಗಿ ಆಭರಣಗಳನ್ನು ಪರಿಶೀಲಿಸಿದ ಅಕ್ಕಸಾಲಿಗರು ಮತ್ತು ಬ್ಯಾಂಕ್ ಮೌಲ್ಯಮಾಪಕರು ಭಿನ್ನವಾದ ವರದಿ ನೀಡಿದ್ದಾರೆ. ತಾಮ್ರದ ಕವಚಗಳಿಗೆ ಲೇಪನ ಮಾಡಲಾದ ಬಂಗಾರದ ತೂಕವು ಅಂದಾಜು 250 ಗ್ರಾಂನಿಂದ 300 ಗ್ರಾಂ ಮಾತ್ರ ಇರಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಾನಿಗಳು ಹೇಳಿದ ತೂಕಕ್ಕೂ ಮತ್ತು ತಜ್ಞರ ಅಂದಾಜಿಗೂ ಭಾರಿ ವ್ಯತ್ಯಾಸ ಕಂಡುಬಂದಿರುವುದರಿಂದ ಗೊಂದಲ ಉಂಟಾಗಿದೆ.

ಇದನ್ನೂ ಓದಿ ಅಂಜನಾದ್ರಿಗೆ 2 ಕೋಟಿ ರೂ. ಚಿನ್ನಾಭರಣ ಕಾಣಿಕೆ: ಹಲವು ಅನುಮಾನಗಳಿಗೆ ಕಾರಣವಾಯ್ತು ಉದ್ಯಮಿಯ ಬಿಲ್

ಜಿಲ್ಲಾಧಿಕಾರಿಗಳ ಕ್ರಮ

ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಆಭರಣಗಳಿಗೆ ಸಂಬಂಧಿಸಿದ ಬಿಲ್, ಇನ್‌ವಾಯ್ಸ್ ಮತ್ತು ಪ್ರಮಾಣಪತ್ರಗಳನ್ನು ಸಲ್ಲಿಸಲು ಮೇ 12ರ ಗಡುವು ನೀಡಿದ್ದರು. ಅದರಂತೆ ಉದ್ಯಮಿಯ ಪರವಾಗಿ ಗುಂಡಾಚಾರಿ ಸ್ಥಪತಿ ಅವರು ಮೇ 11ರಂದು ಅಗತ್ಯ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ. ಈಗ ದಾನಿಗಳು ನೀಡಿದ ಬಿಲ್‌ಗಳು ಮತ್ತು ಮಜೂರಿ ವಿವರಗಳನ್ನು ಆಧರಿಸಿ, ಜಿಲ್ಲಾಡಳಿತವು ಎಲ್ಲಾ ದಾಖಲೆಗಳನ್ನು ಪುನಃ ಪರಿಶೀಲಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿರಾಟ್ ಕೊಹ್ಲಿ ಟೆಸ್ಟ್​ ನಿವೃತ್ತಿಗೆ ಒಂದು ವರ್ಷ; ಕಂಬ್ಯಾಕ್ ಅಸಾಧ್ಯ – Kannada News | Virat Kohli Test Legacy: One Year Since His Absence; Unlikely Comeback and Records

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿ ಇಂದಿಗೆ (ಮೇ 12) ಸರಿಯಾಗಿ ಒಂದು ವರ್ಷ ಕಳೆದಿದೆ. ಆಧುನಿಕ ಕ್ರಿಕೆಟ್‌ನ ‘ರನ್ ಮಷೀನ್’ ಎಂದೇ ಖ್ಯಾತರಾಗಿದ್ದ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಹೊಸ ಆಕ್ರಮಣಕಾರಿ ಗುಣವನ್ನು ತಂದುಕೊಟ್ಟವರು. ಈ ದಿನವನ್ನು ಎಲ್ಲರೂ ನೆನಪಿಸಿಕೊಳ್ಳಿತ್ತಿದ್ದಾರೆ. ವಿರಾಟ್ ಕೊಹ್ಲಿ ಕೇವಲ ಒಬ್ಬ ಬ್ಯಾಟರ್ ಆಗಿ ಮಾತ್ರವಲ್ಲದೆ, ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ.

ಒಟ್ಟು 123 ಪಂದ್ಯಗಳನ್ನು ಆಡಿರೋ ಅವರು, 9,230 ರನ್​ ಬಾರಿಸಿದ್ದಾರೆ. ಬ್ಯಾಟಿಂಗ್ ಸರಾಸರಿ 49.15 ಇದೆ. ಇದರಲ್ಲಿ, 30 ಶತಕ ಹಾಗೂ, 31 ಅರ್ಧಶತಕ ಇದೆ. ದಕ್ಷಿಣ ಆಫ್ರಿಕಾ ವಿರುದ್ಧ 254 ರನ್ ಬಾರಿಸಿದ್ದರು. ಇದು ಟೆಸ್ಟ್ ಅಲ್ಲಿ ಅವರು ಬಾರಿಸಿದ ಗರಿಷ್ಠ ರನ್. ಕೊಹ್ಲಿ ಭಾರತ ತಂಡವನ್ನು 68 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ್ದು, ಅದರಲ್ಲಿ 40 ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಇದು ಭಾರತೀಯ ಟೆಸ್ಟ್ ಇತಿಹಾಸದಲ್ಲೇ ಒಬ್ಬ ನಾಯಕನ ಶ್ರೇಷ್ಠ ಸಾಧನೆ. ಆಸ್ಟ್ರೇಲಿಯಾ ಮಣ್ಣಿನಲ್ಲಿ ಟೆಸ್ಟ್ ಸರಣಿ (2018-19) ಗೆದ್ದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆ ಇವರದ್ದು. ಇವರ ಅವಧಿಯಲ್ಲಿ ಭಾರತ ತಂಡ ವಿದೇಶಗಳಲ್ಲಿ ಎದುರಾಳಿಗಳಿಗೆ ಸಿಂಹಸ್ವಪ್ನವಾಗಿತ್ತು.

ಭಾರತದ ಪರ ಅತಿ ಹೆಚ್ಚು ಟೆಸ್ಟ್ ದ್ವಿಶತಕಗಳನ್ನು ಬಾರಿಸಿದ ದಾಖಲೆ ಕೊಹ್ಲಿ ಹೆಸರಲ್ಲಿದೆ. ಸುಮಾರು 42 ತಿಂಗಳುಗಳ ಕಾಲ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತ ತಂಡವನ್ನು ನಂಬರ್ 1 ಸ್ಥಾನದಲ್ಲಿರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಫಿಟ್‌ನೆಸ್ ಮತ್ತು ಆಕ್ರಮಣಕಾರಿ ಗುಣಕ್ಕೆ ಹೊಸ ಭಾಷ್ಯ ಬರೆದ ಕೊಹ್ಲಿ, ಐಪಿಎಲ್ ಹಾಗೂ ಏಕದಿನದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಟಿ20 ಫಾರ್ಮ್ಯಾಟ್ ಮಾತ್ರ ನೋಡುತ್ತೇನೆ ಎನ್ನುವವರಿಗೆ ಟೆಸ್ಟ್ ಕ್ರಿಕೆಟ್ ಬಗ್ಗೆಯೂ ಆಸಕ್ತಿ ಮೂಡುವಂತೆ ಮಾಡಿದ ಖ್ಯಾತಿ ಕೊಹ್ಲಿಗೆ ಇದೆ. ಅವರ ಅನುಪಸ್ಥಿತಿ ಟೆಸ್ಟ್ ಕ್ರಿಕೆಟ್ ಪ್ರಿಯರಲ್ಲಿ ಇಂದಿಗೂ ಒಂದು ರೀತಿಯ ಶೂನ್ಯತೆಯನ್ನು ಮೂಡಿಸಿರುವುದು ಸುಳ್ಳಲ್ಲ.

ಕಂಬ್ಯಾಕ್ ಸುದ್ದಿ

ಟೀಂ ಇಂಡಿಯಾ ಟೆಸ್ಟ್​​​ನಲ್ಲಿ ಹೀನಾಯವಾಗಿ ಸೋಲುತ್ತಿದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಟೆಸ್ಟ್​​ಗೆ ಮರಳುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಅವರು ನಾಯತಕ್ವಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಅವರು ಅತಿಯಾಗಿ ಪ್ರೀತಿಸುವ ಫಾರ್ಮ್ಯಾಟ್ ಎಂದರೆ ಟೆಸ್ಟ್. ಆದರೆ, ಕೊಹ್ಲಿಗೆ ಟೆಸ್ಟ್​ಗೆ ಕಂಬ್ಯಾಕ್ ಮಾಡೋದು ಸದ್ಯ ವಾಸ್ತವಕ್ಕೆ ದೂರವಾದ ಮಾತು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ – Kannada News | AIADMK Faces Split as Shanmugam Faction Backs CM Vijays TVK

ಚೆನ್ನೈ, ಮೇ 12: ತಮಿಳುನಾಡು ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ಪಕ್ಷವು ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಇಬ್ಭಾಗವಾಗಿದೆ. ಸಿ.ವಿ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಮುಖ್ಯಮಂತ್ರಿ ವಿಜಯ್​ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಅಣ್ಣಾ ಡಿಎಂಕೆ ಸ್ಥಾಪನಾ ತತ್ವಗಳಿಗೆ ವಿರುದ್ಧವಾಗಿ, ಎಡಪ್ಪಾಡಿ ಪಳನಿಸ್ವಾಮಿ ಅವರು ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು ಎಂಬ ಆರೋಪವೇ ಈ ಬಂಡಾಯಕ್ಕೆ ಮುಖ್ಯ ಕಾರಣ. ಡಿಎಂಕೆಯನ್ನು ಸೈದ್ಧಾಂತಿಕ ವಿರೋಧಿ ಎಂದು ಪರಿಗಣಿಸುವ ಷಣ್ಮುಗಂ ಬಣ, ಜನಾಭಿಪ್ರಾಯವು ಸಿಎಂ ವಿಜಯ್​ ಅವರ ಪರವಾಗಿದೆ ಎಂದು ಹೇಳಿದೆ. ಈ ಬೆಂಬಲದಿಂದ ವಿಜಯ್​ ಸರ್ಕಾರದ ಬಲವು 150 ಶಾಸಕರಿಗಿಂತ ಹೆಚ್ಚಾಗಲಿದೆ. ಈ ನಡುವೆ ಪಳನಿಸ್ವಾಮಿ ನೇತೃತ್ವದಲ್ಲಿ ಕೇವಲ 17 ಶಾಸಕರು ಮಾತ್ರ ಉಳಿದಿದ್ದಾರೆ. ಅಣ್ಣಾ ಡಿಎಂಕೆ ಮುಂದಿನ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಷಣ್ಮುಗಂ ಬಣ ಸ್ಪಷ್ಟಪಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Assam CM Himanth Biswa Sharma Oath Taking Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ – Kannada News | Assam CM Oath Ceremony Live: Himanta Biswa Sarma Sworn In as CM for Second Term in Guwahati

ಅಸ್ಸಾಂ, ಮೇ 12: ಇಂದು ಅಸ್ಸಾಂನ ಖಾನಪಾರ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಹಿಮಂತ ಬಿಸ್ವ ಶರ್ಮಾ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅಂತಹ ಗಣ್ಯರು ಉಪಸ್ಥಿತರಿದ್ದು, ಖಾನಾಪಾರ ಮೈದಾನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನದ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆರೋಪ: ಎಫ್​ಎಸ್​ಎಲ್​ನಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದ ಪರಮೇಶ್ವರ್ – Kannada News | Sringeri Vote Tampering Allegations: G Parameshwara Says FSL Report Will Reveal the Truth; Investigation Underway

ಬೆಂಗಳೂರು, ಮೇ 12: ಶೃಂಗೇರಿ ಎಂಎಲ್ಎ ಸ್ಥಾನದ ಗೊಂದಲದ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ವೋಟ್ ಟ್ಯಾಂಪರಿಂಗ್ ಆರೋಪ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಟ್ಯಾಂಪರಿಂಗ್ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ದೂರು ದಾಖಲಿಸಿಕೊಂಡು ಎಫ್ಐಆರ್ ನೊಂದಾಯಿಸಲಾಗಿದೆ. ರಾಜ್ಯ ಪೊಲೀಸರು ಈ ಟ್ಯಾಂಪರಿಂಗ್ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎಫ್ಎಸ್ಎಲ್ (Forensic Science Laboratory) ಸಹಾಯ ಪಡೆಯಲಾಗುತ್ತಿದ್ದು, ಇದು ಕೌಂಟಿಂಗ್ ಪ್ರಕ್ರಿಯೆಯ ಒಂದು ಭಾಗವಾಗಿಯೂ ಪರಿಶೀಲನೆಗೆ ಒಳಪಡಲಿದೆ. ಕಾನೂನು ಪ್ರಕಾರ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧರ್ಮಸ್ಥಳ ಬುರುಡೆ ಕೇಸ್​​: ಉತ್ಖನನ ನಡೆದು 10 ತಿಂಗಳಾದರೂ ಕೆಲಸಗಾರರ ಕೈ ಸೇರದ ಕೂಲಿ ಹಣ, ವಾಹನಗಳ ಬಾಡಿಗೆ – Kannada News | 10 Months After Dharmasthala Excavation, Labourers Still Await Pending Payments

ಧರ್ಮಸ್ಥಳದಲ್ಲಿ ನಡೆದಿದ್ದ ಉತ್ಖನನ

ಮಂಗಳೂರು, ಮೇ 12: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನೂರಾರು ಹೆಣಗಳನ್ನು ಹೂತಿದ್ದೇನೆ ಎಂಬ ಚಿನ್ನಯ್ಯ ಆರೋಪ ಹಿನ್ನೆಲೆ ಒಟ್ಟು 17 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಸಲಾಗಿತ್ತು. ದುರ್ದೈವ ಅಂದರೆ ಇದು ನಡೆದು 10 ತಿಂಗಳಾದರೂ ಉತ್ಖನನ ಕೆಲಸ ಮಾಡಿದ್ದ ಕಾರ್ಮಿಕರಿಗೆ ಕೂಲಿ ಮತ್ತು ಯಂತ್ರೋಪಕರಣಗಳ ಬಾಡಿಗೆ ಹಣ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಎಸ್‌ಐಟಿ (SIT) ಸೂಚನೆಯಂತೆ ಅಹೋರಾತ್ರಿ ದುಡಿದರೂ ಬಿಲ್ ಪಾವತಿಗೆ ಮೀನಾಮೇಷ ಎಣಿಸಲಾಗುತ್ತಿದ್ದು, ಎರಡು ಲಕ್ಷಕ್ಕೂ ಅಧಿಕ ಮೊತ್ತ ಬಾಕಿ ಇದೆ ಎನ್ನಲಾಗಿದೆ.

2025ರ ಜುಲೈ 29ರಿಂದ ಆಗಸ್ಟ್ 13ರವರೆಗೆ 17 ಪಾಯಿಂಟ್‌ಗಳಲ್ಲಿ ಉತ್ಖನನ ನಡೆದಿದ್ದು, ಈ ವೇಳೆ ಕೂಲಿಯಾಳುಗಳು ಮಳೆ-ಬಿಸಿಲಿಗೆ ಮೈಯೊಡ್ಡಿ ದುಡಿದಿದ್ದರು. ಹೀಗಿದ್ದರೂ ಜೆಸಿಬಿ ಬಾಡಿಗೆಯ 71,500 ರೂ. ಮತ್ತು ಕಾರ್ಮಿಕರ ಕೂಲಿ ಮೊತ್ತ 80,000 ಸೇರಿದಂತೆ ಒಟ್ಟು 2 ಲಕ್ಷಕ್ಕೂ ಅಧಿಕ ಬಿಲ್ ಬಾಕಿ ಇದೆ. ಶಾಮಿಯಾನ, ಹಾರೆ, ಪಿಕಾಸು, ಕುಡಿಯುವ ನೀರು ಹಾಗೂ ವಾಹನಗಳ ಬಾಡಿಗೆ ಹಣಕ್ಕಾಗಿ ಮಾಲೀಕರು ಅಲೆದಾಡಬೇಕಾದ ಪ್ರಸಂಗ ಎದುರಾಗಿದೆ.

ಇದನ್ನೂ ಓದಿ:  ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​; SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಹಣ ಪಾವತಿ ವಿಚಾರವಾಗಿ ಗೊಂದಲ

ಇನ್ನು ಬಿಲ್​​ ಪಾವತಿ ವಿಚಾರವಾಗಿ ಪಂಚಾಯತ್​​ ಮತ್ತು ಎಸ್​​ಐಟಿ ನಡುವೆಯೇ ಗೊಂದಲ ಇದೆ ಎನ್ನಲಾಗಿದೆ. ಬಾಕಿ ಹಣದ ಬಗ್ಗೆ ವಿಚಾರಿಸಿದರೆ ಧರ್ಮಸ್ಥಳ ಗ್ರಾಮ ಪಂಚಾಯತ್ ಎಸ್​​ಐಟಿಯತ್ತ ಬೆರಳು ತೋರಿಸಿ ನುಣುಚಿ ಕೊಳ್ಳುತ್ತಿದೆ. ಇತ್ತ SIT ಅಧಿಕಾರಿಗಳನ್ನು ವಿಚಾರಿಸಿದರೆ, ನವೆಂಬರ್​​ನಲ್ಲಿಯೇ ಬಿಲ್​​ ಪಾವತಿಯಾಗಿದೆ ಎಂಬ ಉಡಾಫೆ ಉತ್ತರ ಬರುತ್ತಿದೆ. ನಮ್ಮ ಬಳಿ ಯಂತ್ರಗಳನ್ನು ಬಾಡಿಗೆಗೆ ಕೇಳಿದ್ದು ಗ್ರಾಮ ಪಂಚಾಯತ್​​. ಹೀಗಾಗಿ ಎಸ್​ಐಟಿ ಬಳಿ ಬಾಡಿಗೆ ಕೇಳುವ ಹಕ್ಕು ನಮಗಿಲ್ಲ ಎಂದು ಮಾಲಕರು ಅಲವತ್ತುಕೊಂಡಿದ್ದಾರೆ.

ಜುಲೈ 29, 2025ರಿಂದ ನಿರಂತರವಾಗಿ ಉತ್ಖನನ ಕಾರ್ಯಾಚರಣೆಯಲ್ಲಿ ಸುನೀಲ್ ಕನ್ಯಾಡಿ ಎಂಬವರ ಹಿಟಾಚಿಯನ್ನು ಉತ್ಖನನ ಕಾರ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಕೇವಲ 10 ದಿನ ಮಾತ್ರ ಹಿಟಾಚಿ ಮೂಲಕ ಉತ್ಖನನ ನಡೆಸಿದ್ದು, 15 ದಿನ ಹಾಗೆ ನಿಂತಿದ್ದ ಕಾರಣ ಕೆಲಸಕ್ಕೆ ಬಳಸಿಕೊಂಡಿದ್ದಷ್ಟೇ ದಿನಗಳ ಬಿಲ್​ ನೀಡುವಂತೆ ಮಾಲಕರು ಕೇಳಿದ್ದರು. ಹೀಗಿದ್ದರೂ ಕಳೆದ 9 ತಿಂಗಳಿನಿಂದ ಬಾಕಿ ಬಿಲ್​​ಗಾಗಿ ಅಲೆದಾಟ ನಡೆಸುತ್ತಿದ್ದಾರೆ. ಉತ್ಖನನ ಕಾರ್ಯದ ವೇಳೆ ಇದ್ದ ಧರ್ಮಸ್ಥಳ ಪಂಚಾಯತ್​​ ಪಿಡಿಒ ಕೂಡ ಈಗ ನಿವೃತ್ತರಾಗಿದ್ದು, ಬಾಕಿ ಹಣವನ್ನು ಸಂಬಂಧಪಟ್ಟವರು ಆದಷ್ಟು ಬೇಗ ನೀಡಿ ಎಂಬ ಆಗ್ರಹ ಕೂಲಿ ಕಾರ್ಮಿಕರು, ಯಂತ್ರೋಪಕರಣ ಮತ್ತು ವಾಹನಗಳ ಮಾಲಕರಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:40 am, Tue, 12 May 26

Source link

Video: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕಂದಮ್ಮ ನಡೆಯುತ್ತಿದ್ದಂತೆ ಭಾವುಕಳಾದ ತಾಯಿ – Kannada News | Mother reacts cutely as little girl takes tiny steps

ತಾಯಿಯ (mother love) ಪ್ರೀತಿಯೇ ಹಾಗೇ, ಮಕ್ಕಳ ಆರೈಕೆಯಲ್ಲೇ ಖುಷಿ ಕಾಣುವ ಜೀವವದು. ಮಗುವಿಗೆ ಎಣ್ಣೆ ಹಚ್ಚಿ ಸ್ನಾನ ಮಾಡಿಸುವುದು, ಆಹಾರ ನೀಡುವುದು ಆಕೆಯ ದಿನನಿತ್ಯ ರೂಟೀನ್ ಆಗಿರುತ್ತದೆ. ಮಗುವಿನ ತೊದಲು ನುಡಿ ಕೇಳುತ್ತ ತನ್ನೆಲ್ಲಾ ನೋವುಗಳನ್ನು ಮರೆಯುತ್ತಾಳೆ. ಇದೀಗ ಪುಟಾಣಿಯೊಂದು  ಮೊದಲ ಬಾರಿಗೆ ಹೆಜ್ಜೆ ಇಟ್ಟು ನಡೆಯುತ್ತಿದ್ದರೆ, ತಾಯಿ ತನ್ನ ಮಗಳ ಮೊದಲ ನಡಿಗೆಯನ್ನು ಕಣ್ತುಂಬಿಸಿಕೊಂಡು ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

fun_factorss ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ ಕ್ಲಿಪಿಂಗ್‌ನಲ್ಲಿ ತಾಯಿಯೊಬ್ಬಳು ಕುರ್ಚಿ ಮೇಲೆ ಕುಳಿತುಕೊಂಡು ಮೊಬೈಲ್ ನೋಡುತ್ತಿದ್ದಾಳೆ. ಅಲ್ಲೇ ಇದ್ದ ಪುಟಾಣಿಯೊಂದು ಪುಟ್ಟ ಪುಟ್ಟ ಹೆಜ್ಜೆ ಇಟ್ಟು ನಡೆಯಲು ಶುರು ಮಾಡಿದೆ. ತನ್ನ ಕಂದಮ್ಮನು ಮೊದಲ  ಬಾರಿಗ ನಡೆಯುವುದನ್ನು ನೋಡಿ ತಾಯಿ ಭಾವುಕಳಾಗಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಹದಿನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮುದ್ದಾದ ವಿಡಿಯೋ ಎಂದರೆ, ಇನ್ನೊಬ್ಬರು, ಮೊಬೈಲ್ ನಲ್ಲಿ ಈ ತರಹ ದೃಶ್ಯವನ್ನು ಯಾಕೆ ಸೆರೆ ಹಿಡಿಯಬೇಕು ಎಂದು ಕೇಳಿದ್ದಾರೆ. ಮತ್ತೊಬ್ಬರು, ಹೆತ್ತ ತಾಯಿಗೆ ಇದಕ್ಕಿಂತ ಖುಷಿ ಏನಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:31 am, Tue, 12 May 26

Source link

Exit mobile version