ತಮಿಳುನಾಡಲ್ಲಿ ಧಾರ್ಮಿಕ ಸ್ಥಳಗಳು, ಶಾಲೆಗಳ ಬಳಿ ಇದ್ದ 717 ಮದ್ಯದಂಗಡಿ ಮುಚ್ಚಲು ವಿಜಯ್‌ ಆದೇಶ: ಸಿಎಂ ಆದ ಬೆನ್ನಲ್ಲೇ ಮಹತ್ವದ ಕ್ರಮ – Kannada News | CM Vijay Orders Closure of 717 TASMAC Liquor Shops in Tamil Nadu; First Major Move as Chief Minister

ತಮಿಳುನಾಡು ಸಿಎಂ ದಳಪತಿ ವಿಜಯ್Image Credit source: tv9

ಚೆನ್ನೈ, ಮೇ 12: ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಳಪತಿ ವಿಜಯ್ (Joseph Vijay) ಮೊದಲ ಭಾಷಣದಲ್ಲೇ ರಾಜ್ಯದ ಸಾಲದ ಬಗ್ಗೆ ಮಾತನಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮೊದಲ ಮಹತ್ವದ ನಿರ್ಧಾರವನ್ನೂ ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ದೇವಸ್ಥಾನಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಒಟ್ಟು 717 ಸರ್ಕಾರಿ ಸ್ವಾಮ್ಯದ ಟಾಸ್ಮಾಕ್ (TASMAC) ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ.

ಮುಖ್ಯಾಂಶಗಳು

  • ಶಾಲೆ, ದೇವಸ್ಥಾನ ಮತ್ತು ಬಸ್ ನಿಲ್ದಾಣದ ಬಳಿಯಿರುವ 717 ಮದ್ಯದ ಅಂಗಡಿಗಳು ಎರಡು ವಾರದಲ್ಲಿ ಬಂದ್.
  • ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಸಿಟಿ (VCK) ಬೆಂಬಲದೊಂದಿಗೆ ಸರ್ಕಾರ ರಚಿಸಿದ ಬಳಿಕ ವಿಜಯ್ ಮೊದಲ ನಿರ್ಧಾರ.
  • ‘ವ್ಯಸನ ಮುಕ್ತ ತಮಿಳುನಾಡು’ ನಿರ್ಮಾಣದತ್ತ ಸಿಎಂ ವಿಜಯ್ ಅವರ ಮೊದಲ ಹೆಜ್ಜೆ.

ರಾಜಕೀಯ ಹೈಡ್ರಾಮಾ ಮತ್ತು ಅಧಿಕಾರ ಸ್ವೀಕಾರ

ತಮಿಳುನಾಡಿನ 234 ಸ್ಥಾನಗಳ ಪೈಕಿ 108 ಸೀಟುಗಳನ್ನು ಗೆದ್ದ ವಿಜಯ್ ಟಿವಿಕೆ ಪಕ್ಷವು ಬಹುಮತಕ್ಕೆ 10 ಸ್ಥಾನಗಳ ಕೊರತೆಯನ್ನು ಎದುರಿಸಿತ್ತು. ಒಂದು ವಾರ ನಡೆದ ರಾಜಕೀಯ ಹಗ್ಗಜಗ್ಗಾಟದ ನಂತರ ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಸಿಕೆ ಪಕ್ಷದ ಬೆಂಬಲದೊಂದಿಗೆ ವಿಜಯ್ ಸರ್ಕಾರ ರಚಿಸಿದರು. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಜನಸಾಮಾನ್ಯರ ಹಿತದೃಷ್ಟಿಯಿಂದ ಈ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದ್ದಾರೆ.

TASMAC ಸದ್ಯ ರಾಜ್ಯಾದ್ಯಂತ 4,765 ಅಂಗಡಿಗಳನ್ನು ನಡೆಸುತ್ತಿದ್ದು, ಅದರಲ್ಲಿ ಮಂದಿರಗಳ ಸಮೀಪವಿರುವ 276, ಶಿಕ್ಷಣ ಸಂಸ್ಥೆಗಳ ಬಳಿಯಿರುವ 186 ಮತ್ತು ಬಸ್ ನಿಲ್ದಾಣಗಳ ಸಮೀಪವಿರುವ 255 ಅಂಗಡಿಗಳನ್ನು ಮುಚ್ಚಲು 2 ವಾರಗಳ ಗಡುವು ನೀಡಲಾಗಿದೆ.

ತಮಿಳುನಾಡು ಸರ್ಕಾರಕ್ಕೆ TASMAC ಸಾರಾಯಿ ಮಾರಾಟದಿಂದ ದೊಡ್ಡ ಪ್ರಮಾಣದ ಆದಾಯ ಹರಿದುಬರುತ್ತಿದೆ. 2025ರಲ್ಲಿ ರಾಜ್ಯದ ಒಟ್ಟು ಆದಾಯ 48,000 ಕೋಟಿ ರೂಪಾಯಿ ದಾಟಿತ್ತು. ಇಷ್ಟೊಂದು ದೊಡ್ಡ ಮಟ್ಟದ ಆದಾಯವಿದ್ದರೂ ವಿಜಯ್ ಅವರು ಸಾರ್ವಜನಿಕ ಹಿತಾಸಕ್ತಿಗೆ ಮಣೆ ಹಾಕಿದ್ದಾರೆ. ಕಳೆದ ವರ್ಷ ಟಾಸ್ಮಾಕ್ ಕಾರ್ಯಾಚರಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಸುಮಾರು 1,000 ಕೋಟಿ ರೂಪಾಯಿಯಷ್ಟು ಅಕ್ರಮ ಹಣದ ವಹಿವಾಟು ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಹಳೆಯ ಅಕ್ರಮಗಳಿಗೆ ಬ್ರೇಕ್

ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ TASMAC ಮದ್ಯದ ಬಾಟಲಿಗಳ ಮೇಲೆ ಅನಧಿಕೃತವಾಗಿ 10 ರಿಂದ 30 ರೂಪಾಯಿಗಳ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಇಡಿ ಮಾಡಿತ್ತು. ಟೆಂಡರ್ ಪ್ರಕ್ರಿಯೆಯಲ್ಲೂ ದೊಡ್ಡ ಮಟ್ಟದ ಮೋಸ ನಡೆದಿದೆ ಎಂದು ತನಿಖಾ ಸಂಸ್ಥೆ ಹೇಳಿತ್ತು. ಈ ಎಲ್ಲ ವಿವಾದಗಳ ನಡುವೆ ಸಿಎಂ ವಿಜಯ್ ಅವರು ಮದ್ಯದ ಅಂಗಡಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಮೂಲಕ ‘ವ್ಯಸನ ಮುಕ್ತ ತಮಿಳುನಾಡು’ ಎಂಬ ತಮ್ಮ ಚುನಾವಣಾ ಭರವಸೆಯನ್ನು ಈಡೇರಿಸುವತ್ತ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್ – Kannada News | Supreme Court Stays Recounting Process in Sringeri Assembly Constituency Case, Jeevraj Reaction

ಬೆಂಗಳೂರು, ಮೇ 12: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ನಿಗದಿಪಡಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದು ಕೇವಲ ಮಧ್ಯಂತರ ಆದೇಶವಾಗಿದ್ದು, ಅಂತಿಮ ತೀರ್ಪಲ್ಲ. ತಡೆಯಾಜ್ಞೆ ನೀಡಿದ ಕಾರಣ, ಹಾಲಿ ಶಾಸಕರೇ ಮುಂದುವರಿಯಲಿದ್ದಾರೆ. ರಾಜಕೀಯದಲ್ಲಿ ಗೆಲುವು-ಸೋಲು ಸಾಮಾನ್ಯ. ಕೋರ್ಟ್ ಆದೇಶವನ್ನು ಎದುರು ನೋಡುತ್ತಿದ್ದೇನೆ ಮತ್ತು ಅಕ್ಟೋಬರ್ 21ರ ನಂತರ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಜೀವರಾಜ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vasthu Tips: ಹೊಸ ಮನೆಗೆ ಶಿಫ್ಟ್ ಆಗ್ತಾ ಇದ್ದೀರಾ? ಹಾಗಿದ್ರೆ ತಪ್ಪಿಯೂ ಈ ವಸ್ತು ಕೊಂಡೊಯ್ಯಬೇಡಿ – Kannada News | Vastu Tips: Don’t Carry These 7 Old Items to Your New Home for Prosperity and Peace

ಹೊಸ ಮನೆಗೆ ಹೋಗುವುದು ಹೊಸ ಭರವಸೆ ಮತ್ತು ಸಂತೋಷದ ಸಂಕೇತ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಹಳೆಯ ಮನೆಯ ಕೆಲವು ವಸ್ತುಗಳನ್ನು ಹೊಸ ಮನೆಗೆ ಕೊಂಡೊಯ್ಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹಳೆಯ ಪೊರಕೆ (Old Broom):

ವಾಸ್ತು ಶಾಸ್ತ್ರದಲ್ಲಿ ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದರೆ ಹೊಸ ಮನೆಗೆ ಹಳೆಯ ಪೊರಕೆಯನ್ನು ಕೊಂಡೊಯ್ಯಬಾರದು. ಹಳೆಯ ಪೊರಕೆಯು ಹಳೆಯ ಮನೆಯ ನಕಾರಾತ್ಮಕತೆ ಮತ್ತು ದಾರಿದ್ರ್ಯವನ್ನು ಹೊಂದಿರುತ್ತದೆ ಎಂದು ನಂಬಲಾಗಿದೆ. ಹೊಸ ಮನೆಗೆ ಯಾವಾಗಲೂ ಹೊಸ ಪೊರಕೆಯನ್ನೇ ಬಳಸಬೇಕು.

ಒಡೆದ ಪಾತ್ರೆ ಮತ್ತು ಗಾಜು (Broken Utensils and Glass):

ಸ್ವಲ್ಪವೇ ಬಿರುಕು ಬಿಟ್ಟ ಪಾತ್ರೆ ಅಥವಾ ಕನ್ನಡಿಗಳನ್ನು ಹೊಸ ಮನೆಗೆ ಕೊಂಡೊಯ್ಯಬೇಡಿ. ಒಡೆದ ಗಾಜು ಮತ್ತು ಪಾತ್ರೆಗಳು ರಾಹು ದೋಷಕ್ಕೆ ಕಾರಣವಾಗುತ್ತವೆ, ಇದು ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟವನ್ನು ತರುತ್ತದೆ.

ನಿಂತಿರುವ ಗಡಿಯಾರ (Stopped Clocks):

ನಿಂತುಹೋದ ಗಡಿಯಾರಗಳು ವಾಸ್ತು ಪ್ರಕಾರ ಅತ್ಯಂತ ಅಶುಭ. ಇವು ಕುಟುಂಬದ ಸದಸ್ಯರ ಪ್ರಗತಿಗೆ ಅಡ್ಡಿಪಡಿಸುತ್ತವೆ. ರಿಪೇರಿ ಮಾಡಲಾಗದ ಗಡಿಯಾರಗಳನ್ನು ಹೊಸ ಮನೆಗೆ ಒಯ್ಯುವ ಬದಲು ವಿಲೇವಾರಿ ಮಾಡುವುದು ಉತ್ತಮ.

ಮುಳ್ಳಿನ ಗಿಡಗಳು (Thorny Plants):

ಕ್ಯಾಕ್ಟಸ್ ಅಥವಾ ಮುಳ್ಳಿನ ಗಿಡಗಳನ್ನು ಅಲಂಕಾರಕ್ಕಾಗಿ ಹೊಸ ಮನೆಗೆ ಕೊಂಡೊಯ್ಯಬೇಡಿ. ಇವು ಸಂಬಂಧಗಳಲ್ಲಿ ಕಹಿ ಮತ್ತು ಮನೆಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ. ಇವುಗಳ ಬದಲಿಗೆ ತುಳಸಿ, ಮನಿ ಪ್ಲಾಂಟ್ ಅಥವಾ ಅಪರಾಜಿತಾ ಗಿಡಗಳನ್ನು ಬೆಳೆಸಬಹುದು.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ತುಕ್ಕು ಹಿಡಿದ ಕಬ್ಬಿಣ ಮತ್ತು ಹಳೆಯ ಕಬಾಡ್ (Rusted Iron and Scrap):

ತುಕ್ಕು ಹಿಡಿದ ಕಬ್ಬಿಣದ ವಸ್ತುಗಳು ಅಥವಾ ಹಳೆಯ ಕಸದಂತಹ ವಸ್ತುಗಳು ಶನಿ ಮತ್ತು ರಾಹುವಿನ ಪ್ರಭಾವವನ್ನು ಹೆಚ್ಚಿಸುತ್ತವೆ. ಹೊಸ ಮನೆಗೆ ಹೋಗುವ ಮುನ್ನ ಇಂತಹ ಅನಗತ್ಯ ವಸ್ತುಗಳನ್ನು ಹೊರಹಾಕುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ.

ಶುಭ ಆರಂಭಕ್ಕಾಗಿ ಏನು ಮಾಡಬೇಕು?

ಹೊಸ ಮನೆಗೆ ಪ್ರವೇಶಿಸುವಾಗ ಮೊದಲು ಗಣೇಶನ ಮೂರ್ತಿ, ಗಂಗಾಜಲ, ತುಳಸಿ ಗಿಡ ಮತ್ತು ಪೂರ್ಣ ಕುಂಭದೊಂದಿಗೆ (ಕಲಶ) ಪ್ರವೇಶಿಸಿ. ಮನೆಯ ಹೊಸ್ತಿಲ ಮೇಲೆ ಹಳದಿ ಮತ್ತು ಕುಂಕುಮದಿಂದ ‘ಸ್ವಸ್ತಿಕ’ ಚಿಹ್ನೆಯನ್ನು ಬರೆಯಲು ಮರೆಯಬೇಡಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಕ್‌ಗಳ ಮುಂದೆ ಮತ್ತೆ ಶುರುವಾಗುತ್ತಾ ಕ್ಯೂ? ಕೈಗಾರಿಕೆಗಳ ‘ಬಲ್ಕ್’ ಖರೀದಿಯಿಂದ ಸಾಮಾನ್ಯ ಗ್ರಾಹಕರಿಗೆ ಡೀಸೆಲ್ ಸಂಕಷ್ಟ! – Kannada News | India Diesel Shortage Alert: Petroleum Dealers Complain to PMO Over Fuel Supply Crisis

ಕೈಗಾರಿಕೆಗಳ ‘ಬಲ್ಕ್’ ಖರೀದಿಯಿಂದ ಸಾಮಾನ್ಯ ಗ್ರಾಹಕರಿಗೆ ಡೀಸೆಲ್ ಸಂಕಷ್ಟ!
Image Credit source: google Gemini

ಬೆಂಗಳೂರು, ಮೇ 12: ಎರಡು ದಿನಗಳ ಹಿಂದೆ ಪ್ರಧಾನಿ ಮೋದಿಯವರು (Narendra Modi) ಚಿನ್ನ, ಇಂಧನ ಖರೀದಿ ಮಿತಗೊಳಿಸಿ ಎಂದು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟಿಹಾಕಿದೆ.  ಈ ಬೆನ್ನಲ್ಲೇ ದೇಶದಲ್ಲಿ ಡೀಸೆಲ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಚಿಲ್ಲರೆ ಪೆಟ್ರೋಲ್ ಬಂಕ್‌ಗಳಲ್ಲಿ ಹೈ ಸ್ಪೀಡ್ ಡೀಸೆಲ್ (HSD) ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ‘ನಮ್ಮ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್’ ಪ್ರಧಾನ ಮಂತ್ರಿಗಳ ಕಚೇರಿಗೆ (PMO) ದೂರು ಸಲ್ಲಿಸಿದೆ.

ಮುಖ್ಯಾಂಶಗಳು

  • ಕೈಗಾರಿಕೆಗಳ ಅತಿಯಾದ ಖರೀದಿಯಿಂದ ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್ ಪೂರೈಕೆ ಕೊರತೆ ಉಂಟಾಗಿದೆ.
  •  ಬಲ್ಕ್ ಮತ್ತು ಚಿಲ್ಲರೆ ದರ ವ್ಯತ್ಯಾಸದಿಂದಾಗಿ ಇಂಧನ ಸರಬರಾಜಿನಲ್ಲಿ ತೀವ್ರ ಅಸ್ಥಿರತೆ.
  •  ಡೀಸೆಲ್ ಬಿಕ್ಕಟ್ಟು ನಿವಾರಿಸಲು ಪೆಟ್ರೋಲಿಯಂ ಡೀಲರ್ಸ್ ಸಂಘದಿಂದ ಪ್ರಧಾನಿ ಮೋದಿಗೆ ದೂರು.

ಸಮಸ್ಯೆಗೆ ಮುಖ್ಯ ಕಾರಣವೇನು?

ಬಲ್ಕ್ (ಸಗಟು) ಸರಬರಾಜು ದರ ಮತ್ತು ಚಿಲ್ಲರೆ ಮಾರಾಟ ದರದ ನಡುವೆ ಭಾರಿ ವ್ಯತ್ಯಾಸ ಉಂಟಾಗಿರುವುದು ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ. ಕೈಗಾರಿಕೆಗಳು ಮತ್ತು ದೊಡ್ಡ ಸಂಸ್ಥೆಗಳು ಈ ಹಿಂದೆ ಬಲ್ಕ್ ಸರಬರಾಜು ಮೂಲಕ ಡೀಸೆಲ್ ಪಡೆಯುತ್ತಿದ್ದವು. ಆದರೆ ಈಗ ಅಲ್ಲಿ ದರ ಹೆಚ್ಚಾಗಿರುವುದರಿಂದ, ಕೈಗಾರಿಕಾ ಮಟ್ಟದ ಖರೀದಿಗಳು ಚಿಲ್ಲರೆ ಪೆಟ್ರೋಲ್ ಬಂಕ್‌ಗಳತ್ತ ತಿರುಗಿವೆ. ಇದರಿಂದಾಗಿ ಸಾಮಾನ್ಯ ಗ್ರಾಹಕರಿಗೆ ಮೀಸಲಿಟ್ಟ ಇಂಧನವು ಕೈಗಾರಿಕೆಗಳ ಪಾಲಾಗುತ್ತಿದೆ.

ಡೀಲರ್‌ಗಳ ಆತಂಕ ಮತ್ತು ಪ್ರಮುಖ ಸಮಸ್ಯೆಗಳಿವು

  •  ಚಿಲ್ಲರೆ ಮಾರಾಟ ಸರಾಸರಿಗಳ ಕೃತಕ ಏರಿಕೆ
  •  ಇಂಧನ ಸರಬರಾಜು ಯೋಜನೆ ಮತ್ತು ಲಾಜಿಸ್ಟಿಕ್ಸ್‌ನಲ್ಲಿ ವ್ಯತ್ಯಯ
  •  OMCಗಳಿಂದ ಇಂಧನ ಸರಬರಾಜಿನ ಕಡಿತ ಮತ್ತು ನಿರ್ಬಂಧ
  •  ಪೆಟ್ರೋಲ್ ಬಂಕ್‌ಗಳಲ್ಲಿ ‘ನೋ ಸ್ಟಾಕ್’ ಪರಿಸ್ಥಿತಿಗಳ ಹೆಚ್ಚಳ
  • ನೈಜ ಚಿಲ್ಲರೆ ಗ್ರಾಹಕರಿಗೆ ತೊಂದರೆ
  • ಟ್ಯಾಂಕರ್ ಸಂಚಾರದ ಮೇಲಿನ ಒತ್ತಡ ಹಾಗೂ ಸರಬರಾಜಿನ ಅಸ್ಥಿರತೆ
  • ಡೀಲರ್‌ಗಳಿಗೆ ಆರ್ಥಿಕ ಮತ್ತು ಕಾರ್ಯಾಚರಣಾ ಅನಿಶ್ಚಿತತೆ

ಇದಕ್ಕೆ ಮುಖ್ಯ ಕಾರಣ ಸಂಸ್ಥಾತ್ಮಕ ಗ್ರಾಹಕರು ಚಿಲ್ಲರೆ ಬಂಕ್‌ಗಳಿಂದ ಖರೀದಿ ಮಾಡುತ್ತಿರುವುದು. ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ OMCಗಳನ್ನು ಒಳಗೊಂಡ ಸಮಗ್ರ ಪರಿಶೀಲನೆ ಅಗತ್ಯವಾಗಿದೆ.

ಈ ಪರಿಶೀಲನೆಯಲ್ಲಿ ಕೆಳಗಿನ ಮಾಹಿತಿಗಳನ್ನು ಸಂಗ್ರಹಿಸಬೇಕೆಂದು ಸಂಘದ ಮನವಿ

  • ದೇಶದಾದ್ಯಂತದ ಕೈಗಾರಿಕಾ ಮತ್ತು ಸಂಸ್ಥಾತ್ಮಕ HSD ಬಳಕೆದಾರರ ವಿವರಗಳು
  •  ಹಿಂದಿನ ಬಳಕೆ ಮತ್ತು ಖರೀದಿ ಮಾದರಿಗಳು
  • ಸಂಸ್ಥಾತ್ಮಕ ಸರಬರಾಜು ಮಾರ್ಗಗಳಿಂದ ಚಿಲ್ಲರೆ ಬಂಕ್‌ಗಳಿಗೆ ಖರೀದಿ ತಿರುಗಿರುವ ಪ್ರಮಾಣ
  • ಬಲ್ಕ್ ಮತ್ತು ಚಿಲ್ಲರೆ ಸರಬರಾಜು ದರಗಳ ಹೋಲಿಕೆ
  • ಪ್ರದೇಶವಾರು ಅಸಾಮಾನ್ಯ HSD ಚಿಲ್ಲರೆ ಮಾರಾಟ ಏರಿಕೆ ವಿವರಗಳು

ಇದನ್ನೂ ಓದಿ ಅಗತ್ಯ ಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಕಾರಣ, ದೇಶೀಯವಾಗಿಯೂ ಇಂಧನ ದರಗಳು ಏರುಗತಿಯಲ್ಲಿವೆ. ಇದರ ನಡುವೆ ಈಗ ಡೀಸೆಲ್ ಅಭಾವ ಸೃಷ್ಟಿಯಾಗಿರುವುದು ಆತಂಕ ಮೂಡಿಸಿದೆ. ಸರ್ಕಾರ ತಕ್ಷಣ ಮಧ್ಯಪ್ರವೇಶಿಸದಿದ್ದರೆ ಸಾರಿಗೆ ಮತ್ತು ಕೃಷಿ ವಲಯದ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ಲೇ-ಆಫ್ ರೇಸ್‌ನಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್; ಸೋಲಿಗೆ ಅಯ್ಯರ್ ದೂರಿದ್ದು ಯಾರನ್ನ? – Kannada News | PBKS Playoff Hopes Dim: Iyer Blames Poor Bowling After Delhi Capitals Defeat

ಧರ್ಮಶಾಲಾದಲ್ಲಿ ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋತಿದೆ. ಆರಂಭದಲ್ಲಿ ಒಂದೇ ಒಂದು ಸೋಲನ್ನು ಕಾಣದೆ ನಾಗಾಲೋಟ ಮುಂದುವರಿಸಿದ್ದ ಈ ತಂಡ ಈಗ ಸತತ ನಾಲ್ಕನೇ ಸೋಲನ್ನು ಕಂಡಿದೆ. ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ತಂಡದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಮಾತನಾಡಿದ ಅವರು, ಸೋಲಿಗೆ ತಂಡದ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ಪ್ರದರ್ಶನವೇ ನೇರ ಕಾರಣ ಎಂದು ಮುಚ್ಚುಮರೆಯಿಲ್ಲದೆ ಒಪ್ಪಿಕೊಂಡಿದ್ದಾರೆ.

ಮೊದಲು ಬ್ಯಾಟ್ ಮಾಡಿದ ಪಂಜಾಬ್, ಪ್ರಿಯಾಂಶ್ ಆರ್ಯ (56) ಮತ್ತು ಶ್ರೇಯಸ್ ಅಯ್ಯರ್ (ಅಜೇಯ 59) ಅವರ ಅಬ್ಬರದ ಆಟದ ನೆರವಿನಿಂದ 210 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ ಡೆಲ್ಲಿ ತಂಡ ಡೇವಿಡ್ ಮಿಲ್ಲರ್ ಮತ್ತು ಅಕ್ಷರ್ ಪಟೇಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಈ ಗುರಿಯನ್ನು 19 ಓವರ್‌ಗಳಲ್ಲೇ ತಲುಪಿತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 3 ವಿಕೆಟ್‌ಗಳ ಸೋಲು ಅನುಭವಿಸಿದೆ.

ಸೋಲಿನ ಬಳಿಕ ಮಾತನಾಡಿದ ಅಯ್ಯರ್, ‘ನಾನು ಸುತ್ತಿಬಳಸಿ ಮಾತನಾಡಲು ಬಯಸುವುದಿಲ್ಲ. ನಮ್ಮ ಸೋಲಿಗೆ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ಪ್ರದರ್ಶನವೇ ಕಾರಣ. ಈ ಪಿಚ್‌ನಲ್ಲಿ 210 ರನ್ ಎನ್ನುವುದು
ದೊಡ್ಡ ಮೊತ್ತವೇ. ಪಿಚ್‌ನಲ್ಲಿ ವೇಗಿಗಳಿಗೆ ನೆರವಾಗುವ ರೀತಿ ಇತ್ತು. ಬೌನ್ಸ್ ಕೂಡ ಅಸ್ಥಿರವಾಗಿತ್ತು. ಇಷ್ಟಿದ್ದರೂ ನಾವು ರನ್ ಕಾಯ್ದುಕೊಳ್ಳಲು ವಿಫಲವಾಗಿದ್ದೇವೆ’ ಎಂದರು. ಈ ಮೂಲಕ ಬ್ಯಾಟಿಂಗ್​​ನ ಮೆಚ್ಚಿಕೊಂಡು, ಬೌಲಿಂಗ್​​ ತಂಡವನ್ನು ದೂರಿದ್ದಾರೆ.

ಇಂಪ್ಯಾಕ್ಟ್ ಸಬ್‌ಸ್ಟಿಟ್ಯೂಟ್ ಆಗಿ ಯುಜ್ವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುವ ಆಲೋಚನೆ ಇತ್ತು ಎಂದು ಅಯ್ಯರ್ ತಿಳಿಸಿದರು. ‘ಪಿಚ್ ವೇಗಿಗಳಿಗೆ ಪೂರಕವಾಗಿದ್ದರಿಂದ ಚಹಲ್ ಅವರನ್ನು ಕರೆತರಲಿಲ್ಲ. ಹಾರ್ಡ್ ಲೆಂತ್‌ನಲ್ಲಿ ಬೌಲಿಂಗ್ ಮಾಡಿದ್ದರೆ ವಿಕೆಟ್ ಪಡೆಯುವ ಅವಕಾಶವಿತ್ತು. ಹೊಸ ಬ್ಯಾಟರ್‌ಗಳು ಬಂದಾಗ ನಿಖರವಾದ ಲೈನ್ ಮತ್ತು ಲೆಂತ್ ಕಾಯ್ದುಕೊಳ್ಳುವುದು ಮುಖ್ಯ. ಆದರೆ ನಾವು ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಡೆಲ್ಲಿ ನಾಯಕನ ಸಂತಸ:

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ತಮ್ಮ ತಂಡದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಹಿಂದಿನ ಪಂದ್ಯಗಳಲ್ಲಿ ನಾವು ನಿರ್ಣಾಯಕ ಕ್ಷಣಗಳಲ್ಲಿ ಎಡವುತ್ತಿದ್ದೆವು. ಆದರೆ ಈ ಪಂದ್ಯದಲ್ಲಿ ಮಧ್ಯಮ ಓವರ್‌ಗಳಲ್ಲಿ ಮುಖೇಶ್ ಮತ್ತು ಮಾಧವ್ ಅದ್ಭುತವಾಗಿ ಬೌಲಿಂಗ್ ಮಾಡಿ ಪಂದ್ಯವನ್ನು ನಮ್ಮತ್ತ ತಿರುಗಿಸಿದರು. ಬ್ಯಾಟಿಂಗ್‌ನಲ್ಲಿ ಮಿಲ್ಲರ್ ಮತ್ತು ಅಶುತೋಷ್ ಉತ್ತಮ ಸಾಥ್ ನೀಡಿದರು’ ಎಂದು ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್

ಸೋಲಿನ ಭೀತಿ

ಸತತ ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ಈಗ ಪ್ಲೇ-ಆಫ್ ರೇಸ್‌ನಿಂದ ಹೊರಬೀಳುವ ಭೀತಿಯಲ್ಲಿದೆ. ಪಂಜಾಬ್​​ಗೆ ಬಾಕಿ ಉಳಿದಿರೋದು ಮೂರು ಪಂದ್ಯಗಳು ಮಾತ್ರ. ಸದ್ಯ 13 ಅಂಕ ಪಡೆದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇದೆ. ಸಿಎಸ್​​ಕೆ ಹಾಗೂ ಆರ್​​ಆರ್​ ತಂಡಗಳು 12 ಅಂಕ ಪಡೆದು ಐದು ಹಾಗೂ ಆರನೇ ಸ್ಥಾನದಲ್ಲಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

International Nurses Day 2026: ರೋಗಿಗಳ ಆರೈಕೆಗಾಗಿ ಹಗಲಿರುಳು ಶ್ರಮಿಸುವ ದಾದಿಯರಿಗೆ ನಮನ – Kannada News | International Nurses Day 2026: Why is Nurses Day celebrated on May 12th?

ಅಂತಾರಾಷ್ಟ್ರೀಯ ದಾದಿಯರ ದಿನImage Credit source: png magic

ಅಮೂಲ್ಯವಾದ ಜೀವಗಳನ್ನು ಉಳಿಸುವಲ್ಲಿ ವೈದ್ಯರಷ್ಟೇ ನರ್ಸ್‌ಗಳು (Nurses) ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಹೌದು ರೋಗಿಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಔಷಧಿಗಳು ಮತ್ತು  ವೈದ್ಯರ ಸೂಕ್ತ ಚಿಕಿತ್ಸೆಯು ಮಹತ್ವದ ಪಾತ್ರ ವಹಿಸುವಂತೆ ರೋಗಿಗಳು ಬೇಗನೇ ಚೇತರಿಸಿಕೊಳ್ಳಲು ಸರಿಯಾದ ಆರೈಕೆಯೂ ಮುಖ್ಯ. ರೋಗಿಗಳಿಗೆ ಈ ಸರಿಯಾದ ಆರೈಕೆ, ಉಪಚಾರ ನೀಡುವವರು ದಾದಿಯರು. ಇವರು ಅತ್ಯಂತ ನಿಷ್ಠೆಯಿಂದ ಪ್ರಾಮಾಣಿಕವಾಗಿ ಜೀವ ರಕ್ಷಣೆ ಮಾಡುವ ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ದಾದಿಯರು ಆರೋಗ್ಯ ವ್ಯವಸ್ಥೆಯ ಆಧಾರಸ್ತಂಭ ಇದ್ದಂತೆ. ಜನರ ಆರೋಗ್ಯ ರಕ್ಷಣೆಗಾಗಿ ಹಗಲು ರಾತ್ರಿಯೆನ್ನದೆ ಶ್ರಮಿಸುವ, ಸೇವೆ ಸಲ್ಲಿಸುವ ದಾದಿಯರಿಗೆ ಹಾಗೂ ಅವರ ಸೇವೆಗೆ ಗೌರ ಸಲ್ಲಿಸಲು ಪ್ರತಿ ವರ್ಷ ಮೇ 12 ರಂದು ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವ ಏನೆಂಬುದನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ದಾದಿಯರ ದಿನದ ಇತಿಹಾಸವೇನು?

ಪ್ರತಿ ವರ್ಷ ಮೇ 12 ರಂದೇ  ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತದೆ. 1820 ರ ಮೇ 12 ರಂದು  ಆಧುನಿಕ ನರ್ಸಿಂಗ್‌ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಜನಿಸಿದರು. ಇವರ ಜನ್ಮ ದಿನದ ಸವಿ ನೆನಪಿಗಾಗಿಯೇ 1974 ರಲ್ಲಿ ಅಂತಾರಾಷ್ಟ್ರೀಯ ದಾದಿಯರ ಮಂಡಳಿಯು ದಾದಿಯರ ದಿನವನ್ನು ಆಚರಿಸಲು ಪ್ರಾರಂಭಿಸಿತು.

ಅಮೆರಿಕದ ಆರೋಗ್ಯ, ಶಿಕ್ಷಣ ಮತ್ತು ಕಲ್ಯಾಣ ಇಲಾಖೆಯ ಅಧಿಕಾ ಡೊರೊಥಿ ಸದರ್ಲ್ಯಾಂಡ್‌ ಈ ದಿನವನ್ನು ಆಚರಿಸುವ ಕಲ್ಪನೆಯನ್ನು ಬಹು ಹಿಂದೆಯೇ ಪ್ರಸ್ತಾಪಿಸಿದ್ದರು. ನಂತರ 1974 ರಲ್ಲಿ ಸಮಾಜ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಕೊಡುಗೆಯನ್ನು ಸ್ಮರಿಸಲು, ಈ ವೃತ್ತಿಯನ್ನು ಉತ್ತೇಜಿಸಲು ಮತ್ತು ದಾದಿಯರನ್ನು ಗೌರವಿಸಲು ಇಂಟರ್‌ನ್ಯಾಶನಲ್‌ ಕೌನ್ಸಿಲ್‌ ಆಫ್‌ ನರ್ಸಸ್‌ ಮಂಡಳಿ ಈ ದಿನವನ್ನು ಆಚರಿಸಲು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ಅಂತಾರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ

ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?

  • ಅಂತಾರಾಷ್ಟ್ರೀಯ ದಾದಿಯರ ದಿನವು ಸಮಾಜದಲ್ಲಿ ದಾದಿಯರ ಮಹತ್ವ ಮತ್ತು ರೋಗಿಗಳ ಜೀವನದಲ್ಲಿ ಬದಲಾವಣೆ, ಹೊಸ ಬೆಳಕು ತರುವಲ್ಲಿ ದಾದಿಯರ ಪಾತ್ರದ ಬಗ್ಗೆ ತಿಳಿಸುತ್ತದೆ.
  • ಅಂತರರಾಷ್ಟ್ರೀಯ ದಾದಿಯರ ದಿನವು ದಾದಿಯರ ಪ್ರಯತ್ನಗಳು ಮತ್ತು ಕೊಡುಗೆಗಳನ್ನು ಗೌರವಿಸುವ ಸಂದರ್ಭ ಮಾತ್ರವಲ್ಲದೆ, ದಾದಿಯರ ವೃತ್ತಿಯ ಮಹತ್ವವನ್ನು ಉತ್ತೇಜಿಸುವ ಸಂದರ್ಭವಾಗಿದೆ.
  • ಈ ದಿನದ ಮೂಲಕ ದಾದಿಯರ ಕಠಿಣ ಪರಿಶ್ರಮ, ಸೇವೆ, ಸಮರ್ಪಣೆಗೆ ಧನ್ಯವಾದ ತಿಳಿಸಬಹದು
  • ಈ ವಿಶೇಷ ದಿನ ಪ್ರಪಂಚದಾದ್ಯಂತ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳು ದಾದಿಯರನ್ನು ಅಥವಾ ನರ್ಸಿಂಗ್‌ ವೃತ್ತಿಪರರನ್ನು ಗೌರವಿಸಲು ಹಲವಾರು ಸನ್ಮಾನ ಕಾರ್ಯಕ್ರಮಗಳು, ಸೆಮಿನಾರ್‌ಗಳು, ಅಭಿಯಾನಗಳನ್ನು ಆಯೋಜಿಸುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Baldness and Luck: ಬೋಳುತಲೆ ಅದೃಷ್ಟವೇ? ಜ್ಯೋತಿಷ್ಯಶಾಸ್ತ್ರ ಹೇಳುವುದೇನು ಗೊತ್ತಾ? – Kannada News | The Astrological and Spiritual Significance of Baldness; Checkout the details here

ಮನುಷ್ಯನ ಜೀವನದಲ್ಲಿ ಬಾಲ್ಯದಿಂದ ವೃದ್ಧಾಪ್ಯದವರೆಗೂ ದೇಹದಲ್ಲಿ ಅನೇಕ ಬದಲಾವಣೆಗಳು ನಡೆಯುತ್ತವೆ. ಈ ಬದಲಾವಣೆಗಳಲ್ಲಿ ಕೂದಲು ಉದುರಿ ಬೋಳುತಲೆ ಆಗುವುದು ಸಾಮಾನ್ಯ. ಸಮಾಜದಲ್ಲಿ ಕೆಲವರು ಬೋಳುತಲೆಯನ್ನು ಸಂಕೋಚದ ವಿಷಯವೆಂದು ಪರಿಗಣಿಸಿ, ವಿಗ್ ಅಥವಾ ಇತರ ಮಾರ್ಪಾಡುಗಳ ಮೂಲಕ ಮರೆಮಾಚಲು ಪ್ರಯತ್ನಿಸುತ್ತಾರೆ. ಆದರೆ, ವೈಜ್ಞಾನಿಕವಾಗಿ, ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಈ ಬೋಳುತಲೆಯನ್ನು ವಿಭಿನ್ನ ದೃಷ್ಟಿಕೋನಗಳಿಂದ ವಿಶ್ಲೇಷಿಸಲಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ವೈಜ್ಞಾನಿಕವಾಗಿ, ಕೂದಲು ಉದುರುವಿಕೆಗೆ ಆಹಾರ ಪದ್ಧತಿ, ಪರಿಸರ, ವಾಸಿಸುವ ಜಾಗ ಮತ್ತು ವಂಶಪಾರಂಪರ್ಯ ಕಾರಣಗಳು ಪ್ರಮುಖವಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ ಗ್ರಹ, ಮಂಗಳ ಗ್ರಹ ಮತ್ತು ಕೇತು ಗ್ರಹಗಳ ಪ್ರಭಾವವು ಬೋಳುತಲೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ. ಜಾತಕದ ಹನ್ನೆರಡು ಮನೆಗಳಲ್ಲಿ ಮೊದಲನೆಯದಾದ ಲಗ್ನವನ್ನು ಶಿರಸ್ಸಿಗೆ ಪ್ರಾಶಸ್ತ್ಯ ನೀಡಲಾಗುತ್ತದೆ. ಈ ಲಗ್ನದಲ್ಲಿ ರವಿ, ಮಂಗಳ, ಕೇತು ಗ್ರಹಗಳ ನೀಚ ಅಥವಾ ದುಷ್ಟ ಗ್ರಹಗಳ ದೃಷ್ಟಿ ಇದ್ದಾಗ ಕೂದಲು ಉದುರುವಿಕೆ ಹೆಚ್ಚಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ ಗ್ರಹದ (ರವಿ ಗ್ರಹ) ಪ್ರಭಾವದ ಹೆಚ್ಚಳವೆಂದು ಪರಿಗಣಿಸಲಾಗುತ್ತದೆ. ಸೂರ್ಯನ ಪ್ರಭಾವ ಹೆಚ್ಚಾದಾಗ ವ್ಯಕ್ತಿಗಳಲ್ಲಿ ಬುದ್ಧಿಶಕ್ತಿ, ಜ್ಞಾನ, ಐಶ್ವರ್ಯ ಮತ್ತು ಅದೃಷ್ಟ ಹೆಚ್ಚುತ್ತದೆ. ಬೋಳುತಲೆ ಹೊಂದಿದವರಿಗೆ ಸಾಮಾನ್ಯವಾಗಿ ಅಪಾರವಾದ ಜ್ಞಾನ, ಸಂಪತ್ತಿನ ಯೋಗ, ಮನೆ ಕಟ್ಟುವಿಕೆ, ವಾಹನ ಖರೀದಿಸುವಂತಹ ಅದೃಷ್ಟಗಳು ದೊರೆಯುತ್ತವೆ. ರಾಜಕೀಯ ಪ್ರಭಾವವೂ ಇವರಲ್ಲಿ ಅಧಿಕವಾಗಿರುತ್ತದೆ. ಅನೇಕ ದೊಡ್ಡ ರಾಜಕೀಯ ವ್ಯಕ್ತಿಗಳು ಬೋಳುತಲೆಯನ್ನು ಹೊಂದಿದ್ದು, ಉನ್ನತ ಸ್ಥಾನಗಳನ್ನು ಅಲಂಕರಿಸಿರುವುದನ್ನು ನಾವು ಗಮನಿಸಬಹುದು. ಕೃತಕವಾಗಿ ವಿಗ್ ಅಥವಾ ಇತರ ಸಾಧನಗಳನ್ನು ಬಳಸಿ ಬೋಳುತಲೆಯನ್ನು ಮರೆಮಾಚುವುದು ಅದೃಷ್ಟವನ್ನು ಕಡಿಮೆ ಮಾಡುತ್ತದೆ ಎಂದು ನಂಬಲಾಗಿದೆ.

ಬೋಳುತಲೆ ಇರುವ ವ್ಯಕ್ತಿಗಳಲ್ಲಿ ವಾಕ್ ಶಕ್ತಿ, ಆಲೋಚನಾ ಶಕ್ತಿ, ಗಾಂಭೀರ್ಯ ಮತ್ತು ಪ್ರಬುದ್ಧತೆ ಹೆಚ್ಚಾಗಿ ಕಂಡುಬರುತ್ತದೆ. ಇವರು ತಮ್ಮ ಮಾತಿನಲ್ಲಿ ಹೆಚ್ಚು ಗಾಂಭೀರ್ಯವನ್ನು ಕಾಪಾಡಿಕೊಳ್ಳುತ್ತಾರೆ. ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಒಂದನೇ ಮನೆ ಮತ್ತು ಹತ್ತನೇ ಮನೆ ಬಲವಾಗಿರುವವರಿಗೆ ಬೋಳುತಲೆಯ ಮಾರ್ಪಾಡು ಆಗುವ ಸಾಧ್ಯತೆ ಇರುತ್ತದೆ. ಇಂತಹ ಸ್ಥಿತಿಯನ್ನು ಕಲ್ವಟ ಯೋಗ ಎಂದು ಕರೆಯಲಾಗುತ್ತದೆ. ಕಲ್ವಟ ಯೋಗವು ವ್ಯಕ್ತಿಯು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸಿದರೂ, ಕೊನೆಯ ಕಾಲದಲ್ಲಿ ಆಶ್ರಯ ದೊರಕಿ, ರಾಜಕೀಯ ಪ್ರಗತಿ, ವಿದೇಶ ಪ್ರಯಾಣ, ಮತ್ತು ಆಕಸ್ಮಿಕವಾಗಿ ಅಧಿಕಾರ ಪ್ರಾಪ್ತಿಯಂತಹ ಶುಭ ಫಲಗಳನ್ನು ನೀಡುತ್ತದೆ. ಸಿನಿಮಾ ರಂಗದಿಂದ ರಾಜಕೀಯಕ್ಕೆ ಬಂದು ಯಶಸ್ಸು ಕಂಡ ಅನೇಕ ವ್ಯಕ್ತಿಗಳಲ್ಲೂ ಇಂತಹ ಮಾರ್ಪಾಡುಗಳನ್ನು ಕಾಣಬಹುದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:44 am, Tue, 12 May 26

Source link

ಜೈಲುಗಳಲ್ಲಿ ಅಕ್ರಮಕ್ಕೆ ಬ್ರೇಕ್: ಕೈದಿಗಳು ಮತ್ತು ಅಧಿಕಾರಿಗಳ ಮೇಲೆ ನಿಗಾ ಇಡಲು ‘ಪ್ರಿಸನರ್ಸ್ ಟ್ರ್ಯಾಕಿಂಗ್’ ಸಿಸ್ಟಮ್! – Kannada News | Prison Tracking System in Karnataka: DGP Alok Kumar Implements Biometrics for Inmates and Staff to Curb Illegal Activities

ಬೆಂಗಳೂರು, ಮೇ 12: ಪರಪ್ಪನ ಅಗ್ರಹಾರ ಜೈಲು (Parappana Agrahara Jail) ಸೇರಿದಂತೆ ರಾಜ್ಯದ ಕಾರಾಗೃಹಗಳಲ್ಲಿ ಸರಣಿ ಅಕ್ರಮಗಳು ಬಯಲಾದ ಬೆನ್ನಲ್ಲೇ, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (DGP Alok Kumar) ಅವರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲಿ ಕೈದಿಗಳು ಮತ್ತು ಸಿಬ್ಬಂದಿಯ ಪ್ರತಿಯೊಂದು ಚಲನವಲನವನ್ನು ಪತ್ತೆಹಚ್ಚಲು ‘ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್‌ಮೆಂಟ್’ ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈ ತಂತ್ರಜ್ಞಾನ ಆಧಾರಿತ ಕಣ್ಗಾವಲು ವ್ಯವಸ್ಥೆ ಜಾರಿಗೆ ಬಂದಿದ್ದು, ಇನ್ನು ಮುಂದೆ ಜೈಲಿನೊಳಗೆ ಯಾರು, ಎಲ್ಲಿ ಹೋಗುತ್ತಿದ್ದಾರೆಂಬುದು ಸೆಕೆಂಡ್ ಟು ಸೆಕೆಂಡ್ ದಾಖಲಾಗಲಿದೆ.

ಮುಖ್ಯಾಂಶಗಳು

  • ಬ್ಯಾರಕ್, ಆಸ್ಪತ್ರೆ, ಕ್ಯಾಂಟೀನ್ ಸೇರಿ ಜೈಲಿನ ಪ್ರತಿ ವಿಭಾಗದಲ್ಲೂ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ.
  • ಕೈದಿಗಳಷ್ಟೇ ಅಲ್ಲ, ಜೈಲು ಅಧಿಕಾರಿ ಮತ್ತು ಸಿಬ್ಬಂದಿಯ ಚಲನವಲನದ ಮೇಲೂ ಡಿಜಿಟಲ್ ನಿಗಾ.
  • ಒಬ್ಬ ಕೈದಿ ಮತ್ತೊಬ್ಬನನ್ನು ಭೇಟಿ ಮಾಡಲು ಅಥವಾ ಸಂದರ್ಶಕರ ಭೇಟಿಗೂ ಬಯೋಮೆಟ್ರಿಕ್ ದಾಖಲೆ ಅನಿವಾರ್ಯ.

ಅಕ್ರಮಗಳಿಗೆ ತಂತ್ರಜ್ಞಾನದ ಮದ್ದು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಈ ಹಿಂದೆ ನಡೆದಿದ್ದ ಆತಂಕಕಾರಿ ಘಟನೆಗಳು ಈ ಕಠಿಣ ನಿರ್ಧಾರಕ್ಕೆ ಪ್ರೇರಣೆಯಾಗಿವೆ. ಇತ್ತೀಚೆಗಷ್ಟೇ ಜೈಲಿನ ಮೇಲೆ ದಾಳಿ ನಡೆದಾಗ ಕೈದಿಗಳು ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಅಲ್ಲದೆ, ದಾಳಿಯ ವೇಳೆ 200ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿ ಜೈಲಿನ ಭದ್ರತೆಯನ್ನು ಅಣಕಿಸಿದ್ದವು. ಮಗದೊಂದು ಪ್ರಕರಣದಲ್ಲಿ ಕೈದಿಗಳು ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸಿ ಡಿಜಿಪಿ ಹೆಸರನ್ನೇ ಪ್ರಸ್ತಾಪಿಸಿ ವೈರಲ್ ಮಾಡಿದ್ದರು. ಇಂತಹ ಘಟನೆಗಳಿಂದ ಜೈಲು ಅಧಿಕಾರಿಗಳ ಶಾಮೀಲಾತಿ ಸಾಬೀತಾದ ಹಿನ್ನೆಲೆಯಲ್ಲಿ, ಈಗ ಸಿಬ್ಬಂದಿಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ.

ಹೇಗಿರಲಿದೆ ‘ಪ್ರಿಸನರ್ಸ್ ಟ್ರ್ಯಾಕಿಂಗ್’ ವ್ಯವಸ್ಥೆ?

ಈ ಹೊಸ ವ್ಯವಸ್ಥೆಯಡಿ ಜೈಲಿನ ಪ್ರತಿ ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ ಮತ್ತು ಸಂದರ್ಶಕರ ಕೊಠಡಿಗಳಲ್ಲಿ ಬಯೋಮೆಟ್ರಿಕ್ ಯಂತ್ರಗಳನ್ನು ಅಳವಡಿಸಲಾಗಿದೆ. ಕೈದಿಯು ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ಹೋಗಬೇಕಾದರೆ ಹೆಬ್ಬೆಟ್ಟಿನ ಗುರುತು ನೀಡಬೇಕು. ಇದರಿಂದ ಯಾವ ಕೈದಿ ಎಷ್ಟೊತ್ತು ಕ್ಯಾಂಟೀನ್‌ನಲ್ಲಿದ್ದ ಅಥವಾ ಎಷ್ಟು ಸಮಯ ಆಸ್ಪತ್ರೆಯಲ್ಲಿದ್ದ ಎಂಬ ಮಾಹಿತಿ ಕಂಪ್ಯೂಟರ್‌ನಲ್ಲಿ ದಾಖಲಾಗುತ್ತದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ!

ಈ ವ್ವವಸ್ಥೆಯು ಕೈದಿಗಳು ಅಕ್ರಮವಾಗಿ ಗುಂಪು ಸೇರುವುದನ್ನು ಮತ್ತು ಮೊಬೈಲ್ ಬಳಸಲು ಸಿಬ್ಬಂದಿ ನೆರವಾಗುವುದನ್ನು ತಡೆಯಲಿದೆ. ಅಲೋಕ್ ಕುಮಾರ್ ಅವರ ಈ ಹೊಸ ‘ಡಿಜಿಟಲ್ ಲಾಕ್’ ಜೈಲು ಹಕ್ಕಿಗಳ ಅಕ್ರಮ ದರ್ಬಾರ್‌ಗೆ ಅಂತ್ಯ ಹಾಡುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್, 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ – Kannada News | Vijayanagara Police Arrest Two Notorious Burglars; Gold Worth Rs 14 Lakh Recovered in Kudligi Sub Division

ವಿಜಯನಗರ, ಮೇ 12: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಉಪವಿಭಾಗದಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ಕು ಪ್ರಮುಖ ಮನೆಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕೂಡ್ಲಿಗಿ ಉಪವಿಭಾಗದ ಪೊಲೀಸರು ನಡೆಸಿದ ಸತತ ಕಾರ್ಯಾಚರಣೆಯಲ್ಲಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದ್ದು, ಕಳುವಾಗಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡಿರುವ ಆಭರಣಗಳ ಮೌಲ್ಯ 14.06 ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ, ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳು, ತಂಬ್ರಹಳ್ಳಿ ಪೊಲೀಸ್ ಠಾಣೆಯ 23/2026ನೇ ಕೇಸು ಮತ್ತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯ 62/2026ನೇ ಕೇಸು ಸೇರಿದಂತೆ ಒಟ್ಟು ನಾಲ್ಕು ಮನೆಗಳ್ಳತನ ಪ್ರಕರಣಗಳನ್ನು ಭೇದಿಸಿದಂತಾಗಿದೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕೂಡ್ಲಿಗಿ ಡಿವೈಎಸ್ಪಿ, ಹಗರಿಬೊಮ್ಮನಹಳ್ಳಿ ಸಿಪಿಐ ಮತ್ತು ಅವರ ತಂಡ, ತಂಬ್ರಹಳ್ಳಿ ಪಿಎಸ್ಐ ಮತ್ತು ಅವರ ತಂಡ, ಹಾಗೂ ಮರಿಯಮ್ಮನಹಳ್ಳಿ ಪಿಎಸ್ಐ ಮತ್ತು ಅವರ ತಂಡದ ಶ್ರಮವನ್ನು ಪೊಲೀಸ್ ಇಲಾಖೆ ಶ್ಲಾಘಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್ – Kannada News | Agnisakshi Kannada Serial new Promo Shamanth Bro Gowda And Varshni Gowda

‘ಅಗ್ನಿಸಾಕ್ಷಿ’ ಧಾರಾವಾಹಿ ಮತ್ತೆ ಬರೋಕೆ ರೆಡಿ ಆಗಿದೆ. ಈ ಧಾರಾವಾಹಿಯಲ್ಲಿ ಶಮಂತ್ ಬ್ರೋ ಗೌಡ ಹಾಗೂ ವರ್ಷಿಣಿ ಗೌಡ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್ ಆಗಿದೆ. ‘ಹಠ ಇಬ್ಬರನ್ನೂ ಹತ್ತಿರ ಆಗೋಕೆ ಬಿಡ್ತಿಲ್ಲ , ಆದರೆಮ ಮನಸ್ಸು ದೂರ ಆಗೋಕೆ ಒಪ್ಪುತ್ತಿಲ್ಲ’ ಎನ್ನುವ ಕ್ಯಾಪ್ಶನ್ ನೀಡಲಾಗಿದೆ. ಸಂಪೂರ್ಣ ಪ್ರೋಮೋ ಕೂಡ ಅದೇ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version