ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ – Kannada News | Alliance rift In Kolar after Malur Leader hoodi Vijaykumar Joins JDS

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್​​ಡಿ ದೇವೇಗೌಡ, ನಿಖಿಲ್​ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡ ಬಳಿಕ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ವಿಜಯ್ ಕುಮಾರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ. ಮುಂದೆ ಒಂದು ದಿನ ಪಕ್ಷ ಸೇರುವ ಸಮಯ ಬರುತ್ತೆ ಎಂದು ಹೇಳಿದ್ದೆ. ದುಡಿಕೆ ರಾಜಕೀಯ ಜೀವನವನ್ನ ಹಾಳು ಮಾಡಬಾರದು.ಒಳ್ಳೆಯ ಉದ್ದೇಶಕ್ಕೆ ನಾವು ಕೈ ಜೋಡಿಸೊದ್ದೇವೆ. ಮಾಲೂರು ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಬೇಕು. ವಿಧಾನಸಭಾ ಚುನಾವಣೆ ಇನ್ನೂ ದೂರ ಇದೆ. ಅದಕ್ಕೂ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಅದು ಕಾರ್ಯಕರ್ತರ ಚುನಾವಣೆಯಾಗಿದೆ. ಮಾಲೂರು ಕ್ಷೇತ್ರದ ಕೆಲವರು ಕಾರಣಾಂತರದಿಂದ ಪಕ್ಷವನ್ನ ಬಿಟ್ಟು ಹೋಗಿದ್ರು. ಇವತ್ತು ಎಲ್ಲರು ಮತ್ತೆ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

ಇದನ್ನೂ ಓದಿ: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ

ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ವಿಜಯಕುಮಾರ್​!

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೆತ್ರದ ಬಿಜೆಪಿ ಟಿಕೆಟ್​ ಹೂಡಿ ವಿಜಯ್ ಕುಮಾರ್ ಅವರ ಬದಲಿಗೆ ಕೆ.ಎಸ್. ಮಂಜುನಾಥ್ ಗೌಡ ಅವರಿಗೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡು ಹೂಡಿ ವಿಜಯ್ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರ ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾಕಂದ್ರೆ, ಕಾಂಗ್ರೆಸ್​​​ನ ನಂಜೇಗೌಡ ಅವರು ಕೇವಲ 250 ಮತಗಳಿಂದ ಮಾತ್ರ ಗೆದ್ದಿದ್ದರು. ಒಂದು ವೇಳೆ ಹೂಡಿ ವಿಜಯ್ ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡದಿದ್ದರೆ ಬಿಜೆಪಿ ಗೆಲ್ಲುತ್ತಿತ್ತು.

ಮೈತ್ರಿಯಲ್ಲಿ ಬಿರುಕು!

ಹೂಡಿ ವಿಜಯ್​​ ಕುಮಾರ್​​ ಜೆಡಿಎಸ್​​ ಸೇರ್ಪಡೆಗೆ ಸ್ಥಳೀಯ ಬಿಜೆಪಿ ನಾಯಕರು, ಮಂಜುನಾಥ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮವನ್ನು ಮುರಿಯುತ್ತಿದ್ದಾರೆ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆ ಇದು ಬಿರುಕು ಉಂಟುಮಾಡಿದೆ ಎಂಬ ಆತಂಕ ವ್ಯಕ್ತವಾಗಿದೆ.ಮಿತ್ರ ಪಕ್ಷ ಬಿಜೆಪಿ​ ವಿರೋಧದ ನಡುವೆಯೂ ಹೂಡಿ ವಿಜಯ್ ಕುಮಾರ್ ಅವರನ್ನು ಜೆಡಿಎಸ್​​​ಗೆ ಸೇರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಮಿತ್ರ ಪಕ್ಷಗಳ ನಡುವೆ ಸಂಬಂಧ ಹೇಗಿರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ – Kannada News | Verbal war between The Kerala Story director Sudipto Sen and Producer Vipul Amrutlal Shah

2023ರಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದರು. ವಿಪುಲ್ ಅಮೃತ್​ಲಾಲ್ ಶಾ (Vipul Amrutlal Shah) ಅವರು ಬಂಡವಾಳ ಹೂಡಿದ್ದರು. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾದಿಂದ ಸುದೀಪ್ತೋ ಸೇನ್ ಅವರು ಹೊರಗೆ ಉಳಿದರು. ಅವರ ಬದಲು ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದರು. ಈಗ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾ ಮತ್ತು ನಿರ್ದೇಶಕ ಸುದೀಪ್ತೋ ಸೇನ್ (Sudipto Sen) ನಡುವೆ ಜಗಳ ಶುರುವಾಗಿದೆ.

ಸುದೀಪ್ತೋ ಸೇನ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಬಗ್ಗೆ ಕೆಲವು ದಿನಗಳ ಹಿಂದೆ ತಕರಾರು ತೆಗೆದಿದ್ದರು. ವಾಟ್ಸಪ್ ಸಂದೇಶಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ ಎಂದು ಅವರು ಆರೋಪ ಮಾಡಿದ್ದರು. ಅದಕ್ಕೆ ಈಗ ವಿಪುಲ್ ಅಮೃತ್​ಲಾಲ್ ಶಾ ಅವರು ತಿರುಗೇಟು ನೀಡಿದ್ದಾರೆ. ‘ಸುದೀಪ್ತೋ ಸೇನ್ ಅವರ ಸ್ಕ್ರಿಪ್ಟ್ ಕಸದ ಬುಟ್ಟಿಗೆ ಸೇರುವಂತಿತ್ತು’ ವಿಪುಲ್ ಅಮೃತ್​ಲಾಲ್ ಶಾ ವಾಗ್ದಾಳಿ ಮಾಡಿದ್ದಾರೆ.

‘ಅವರ ಪರಿಸ್ಥಿತಿ ನೋಡಿದರೆ ದ್ರಾಕ್ಷಿ ಹಣ್ಣು ಹುಳಿ ಎಂಬಂತಿದೆ. ನಿಜ ಹೇಳಬೇಕೆಂದರೆ, ಸುದೀಪ್ತೋ ಅವರು ದಿ ಕೇರಳ ಸ್ಟೋರಿ 2ಗಾಗಿ ಒಂದು ಸ್ಕ್ರಿಪ್ಟ್ ಬರೆದುಕೊಟ್ಟಿದ್ದರು. ಆದರೆ ಅದು ಸಂಪೂರ್ಣವಾಗಿ ಕಸದ ಬುಟ್ಟಿಗೆ ಸೇರುವಂತಿತ್ತು. ಹಾಗಾಗಿಯೇ ನಾನು ಹೊಸ ನಿರ್ದೇಶಕ ಕಾಮಾಕ್ಯ ನಾರಾಯಣ್ ಸಿಂಗ್ ಅವರ ಜೊತೆ ಸೀಕ್ವೆಲ್ ಮಾಡಲು ನಿರ್ಧರಿಸಿದೆ’ ಎಂದು ವಿಪುಲ್ ಹೇಳಿದ್ದಾರೆ.

‘ನಾವು ಎಂತಹ ಸಂಶೋಧನೆ ನಡೆಸಿದ್ದೇವೆ ಎಂಬುದು ಅವರಿಗೆ ತಿಳಿದೇ ಇಲ್ಲ. ಸಂಶೋಧನಾ ಪ್ರಕ್ರಿಯೆಯಲ್ಲಿ ಅವರು ಭಾಗಿಯಾಗಿರಲಿಲ್ಲ. ಹಾಗಿರುವಾಗ ಟೀಕೆ ಮಾಡುವುದು ಎಷ್ಟು ಸರಿ? ನನ್ನ ಸಿನಿಮಾ ಮೇಲೆ ದಾಳಿಯಾದಾಗ ನಾನು ಸುಮ್ಮನಿರಲು ಸಾಧ್ಯವಿಲ್ಲ. ಅವರ ಹೇಳಿಕೆಗಳು ಆಧಾರರಹಿತವಾಗಿವೆ’ ಎಂದು ವಿಪುಲ್ ಅಮೃತ್​ಲಾಲ್ ಶಾ ಅವರು ಗುಡುಗಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ

ಸುದೀಪ್ತೋ ಸೇನ್ ಹೇಳಿದ್ದಿಷ್ಟು..
ಮೊದಲ ಭಾಗಕ್ಕೆ 10 ವರ್ಷಗಳ ಕಾಲ ಸಂಶೋಧನೆ ನಡೆಸಿದ್ದಾಗಿ ಹೇಳುವ ಸುದೀಪ್ತೋ ಸೇನ್ ಅವರು, ‘ಸೀಕ್ವೆಲ್ ಎನ್ನುವುದು ಸೂಕ್ಷ್ಮ ವಿಷಯ. ಕೇರಳದಿಂದ ಹೊರಗಿನ ರಾಜ್ಯಗಳ ಕಥೆಯನ್ನು ಹೇಳುವಾಗ ಆಳವಾದ ಅಧ್ಯಯನ ಬೇಕು. ಕೇವಲ ವಾಟ್ಸಾಪ್ ಸಂದೇಶಗಳು ಅಥವಾ ಪತ್ರಿಕಾ ವರದಿಗಳನ್ನು ನಂಬಿ ಸಿನಿಮಾ ಮಾಡಲು ನಾನು ತಯಾರಿಲ್ಲ. ಜವಾಬ್ದಾರಿಯುತ ನಿರ್ದೇಶಕನಾಗಿ ನಾನು ಅಂತಹ ಕೆಲಸ ಮಾಡುವುದಿಲ್ಲ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ.

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’ ಭಾರಿ ದೊಡ್ಡ ಹಿಟ್ ಆಗಿದ್ದು ಗೊತ್ತೇ ಇದೆ. ಆ ಸಿನಿಮಾನಲ್ಲಿ ಶಿವಣ್ಣ, ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವು ಕಲಾವಿದರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಇದೀಗ ‘ಜೈಲರ್ 2’ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈ ಬಾರಿ ‘ಜೈಲರ್ 2’ ಸಿನಿಮಾನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. 15 ವರ್ಷಗಳ ಬಳಿಕ ರಜನೀಕಾಂತ್ ಋಣ ತೀರಿಸಿದ್ದಾರೆ ಶಾರುಖ್ ಖಾನ್.

ಈ ಕುರಿತು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ವೈಯಕ್ತಿಕ ಸ್ಟೈಲಿಸ್ಟ್ ಜಿಶಾದ್ ಶಂಸುದ್ದೀನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಐ ಫೋಟೋವೊಂದನ್ನು ಜಿಶಾದ್ ಹಂಚಿಕೊಂಡಿದ್ದು, ಅದರಲ್ಲಿ ಶಾರುಖ್ ಖಾನ್ ಕಾರು ಚಲಾಯಿಸುತ್ತಿದ್ದರೆ, ಅವರ ಪಕ್ಕದಲ್ಲಿ ಮೋಹನ್ ಲಾಲ್ ಹಾಗೂ ಹಿಂಬದಿಯ ಸೀಟಿನಲ್ಲಿ ರಜನಿಕಾಂತ್ ಮತ್ತು ಶಿವರಾಜ್‌ಕುಮಾರ್ ಕುಳಿತಿದ್ದಾರೆ. ಈ ಪೋಸ್ಟ್‌ಗೆ ‘ಖಂಡಿತವಾಗಿಯೂ ಇದು ಸಂಭವಿಸಲಿದೆ’ ಎಂದು ಬರೆಯುವ ಮೂಲಕ ಚಿತ್ರಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.

ಇದನ್ನೂ ಓದಿ:ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ

ಕಳೆದ ಡಿಸೆಂಬರ್‌ನಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಕೂಡ ಈ ಬಗ್ಗೆ ಮಾತನಾಡುತ್ತಾ, ‘ಜೈಲರ್ 2’ ಚಿತ್ರದಲ್ಲಿ ತಾವು ವಿಲನ್ ಪಾತ್ರ ನಿರ್ವಹಿಸುತ್ತಿರುವುದಾಗಿ ಹಾಗೂ ರಜನಿಕಾಂತ್, ಮೋಹನ್ ಲಾಲ್, ಶಾರುಖ್ ಖಾನ್, ಶಿವರಾಜ್‌ಕುಮಾರ್ ಮತ್ತು ರಮ್ಯಾ ಕೃಷ್ಣ ಅವರ ಪಾತ್ರಗಳು ತಮ್ಮ ವಿರುದ್ಧ ಹೋರಾಡಲಿವೆ ಎಂದು ಸುಳಿವು ನೀಡಿದ್ದರು. ಈಗ ಮತ್ತೊಮ್ಮೆ ಈ ಸುದ್ದಿ ಖಾತ್ರಿ ಆಗಿದೆ.

ಶಾರುಖ್ ಖಾನ್ ಪಾತ್ರ ರಜನೀಕಾಂತ್ ಅವರೊಟ್ಟಿಗೆ ಮಾತ್ರವೇ ಇರಲಿದೆಯೇ ಅಥವಾ ಶಿವರಾಜ್ ಕುಮಾರ್ ಅವರೊಟ್ಟಿಗೂ ಇರಲಿದೆಯೇ ಎಂಬ ಕುತೂಹಲ ಇದೆ. ಇದೇ ರಜನೀಕಾಂತ್ ಅವರ ‘ಕೂಲಿ’ ಸಿನಿಮಾನಲ್ಲಿ ಆಮಿರ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆ ಸಿನಿಮಾನಲ್ಲಿ ಉಪೇಂದ್ರ ಸಹ ಆಮಿರ್ ಖಾನ್ ಅವರೊಟ್ಟಿಗೆ ಕೆಲ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈಗ ರಜನೀಕಾಂತ್ ಅವರದ್ದೇ ಸಿನಿಮಾನಲ್ಲಿ ಶಾರುಖ್ ಖಾನ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಸಹ ನಟಿಸುತ್ತಿದ್ದಾರೆ. ಶಾರುಖ್ ಖಾನ್ ಹಿಂದಿಯ ‘ಎಸ್​​ಆರ್ಕೆ’ ಆದರೆ ಶಿವರಾಜ್ ಕುಮಾರ್ ಕನ್ನಡದ ‘ಎಸ್​​ಆರ್​​ಕೆ’.

2023 ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಮೊದಲ ಭಾಗದಲ್ಲಿ ಶಿವಣ್ಣ ಅವರ ಅತಿಥಿ ಪಾತ್ರ ಸಖತ್ ಟ್ರೆಂಡ್ ಆಗಿತ್ತು. ಸಿನಿಮಾದ ನಾಯಕ ಪಾತ್ರಕ್ಕೆ ಸಿಕ್ಕಷ್ಟೆ ಜನಪ್ರೀತಿ ಶಿವಣ್ಣನ ನರಸಿಂಹ ಪಾತ್ರಕ್ಕೆ ಸಿಕ್ಕಿತ್ತು. ‘ಜೈಲರ್ 2’ ನಲ್ಲಿಯೂ ಶಿವಣ್ಣ, ನರಸಿಂಹ ಪಾತ್ರದಲ್ಲಿ ನಟಿಸಲಿದ್ದು, ಈ ಬಾರಿಯೂ ಅಷ್ಟೇ ಪವರ್​​ಫುಲ್ ಆಗಿ ಅವರ ಪಾತ್ರ ಮೂಡಿಬರಲಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs ENG, T20 Semi Final Live Score: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುವುದಲ್ಲದೆ ಅಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿ ಇದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿನ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2024 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಅಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಇದೀಗ ಈ ಪಂದ್ಯದಲ್ಲಿ ಗೆದ್ದ ತಂಡವು ಮೇಲುಗೈ ಸಾಧಿಸಲಿದೆ.

Source link

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Source link

ಈ 5 ರಾಶಿಗೆ ಶುಕ್ರ ಹಾಗೂ ಶನಿಯ ಸಂಯೋಗ: ಧೈರ್ಯದಲ್ಲಿ ಯಾವುದೇ ಕೆಲಸಕ್ಕೂ ಕೈ ಹಾಕಬಹುದು – Kannada News | Shani Shukra Conjunction in Pisces: March 2 14 Astrology Predictions and Lucky Signs

ಮಾರ್ಚ್ 02ರಿಂದ 14ರವರೆಗೆ ಮೀನ ರಾಶಿಯಲ್ಲಿ ಶನಿ ಮತ್ತು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನಗಳು ಏರ್ಪಡಲಿವೆ. ಶನಿಯು ಶಿಸ್ತು ಮತ್ತು ಕರ್ಮದ ಕಾರಕನಾದರೆ, ಶುಕ್ರನು ತನ್ನ ಉಚ್ಚರಾಶಿಯಲ್ಲಿ ಇರುವ ಕಾರಣ ಐಷಾರಾಮಿ, ಪ್ರೀತಿ ಮತ್ತು ಕಲೆಗೆ ವಿಶೇಷ ಮಹತ್ತ್ವ ಸಿಗಲಿದೆ. ಈ ಇಬ್ಬರು ಗ್ರಹಗಳು ಗುರುಗ್ರಹದ ಮನೆಯಾದ ಮೀನ ರಾಶಿಯಲ್ಲಿ ಇರುವಾಗ 12 ರಾಶಿಗಳ ಮೇಲೆ ಅನೇಕ ರೀತಿಯ ಫಲಿತಾಂಶಗಳು ಪ್ರಕಟವಾಗಲಿವೆ.

​ಈ ಸಂಯೋಗದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಎಚ್ಚರಿಕೆ ಅಗತ್ಯ ಎಂಬ ವಿವರ ಇಲ್ಲಿದೆ.

​ಶುಭ ರಾಶಿಗಳು

​ವೃಷಭ ರಾಶಿ:

ಈ ಸಂಯೋಗವು ನಿಮಗೆ ಆರ್ಥಿಕವಾಗಿ ಲಾಭದಾಯಕವಾಗಿರಲಿದೆ. ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ಬರಬಹುದು. ಸಾಮಾಜಿಕ ಗೌರವ ಹೆಚ್ಚಾಗಲಿದ್ದು, ವಿದೇಶಿ ಮೂಲಗಳಿಂದ ಧನಲಾಭವಾಗುವ ಸಾಧ್ಯತೆ ಇದೆ.

​ಮಿಥುನ ರಾಶಿ:

ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ ಇದೆ. ಕಲಾತ್ಮಕ ಕ್ಷೇತ್ರದಲ್ಲಿ ಇರುವವರಿಗೆ ಹೆಚ್ಚಿನ ಮನ್ನಣೆ ದೊರೆಯಲಿದೆ. ತಂದೆಯ ಕಡೆಯಿಂದ ಬೆಂಬಲ ಸಿಗಲಿದೆ.

​ಕನ್ಯಾ ರಾಶಿ:

ನಿಮ್ಮ ಸಂಗಾತಿಯೊಂದಿಗೆ ಸಂಬಂಧ ಸುಧಾರಿಸುತ್ತದೆ. ಹೊಸ ವ್ಯಾಪಾರ ಒಪ್ಪಂದಗಳಿಗೆ ಇದು ಪೂರಕ ಸಮಯ. ಸಾರ್ವಜನಿಕ ಜೀವನದಲ್ಲಿ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ.

​ವೃಶ್ಚಿಕ ರಾಶಿ:

ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಸಿಗಲಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಏಕಾಗ್ರತೆ ಮತ್ತು ಸೃಜನಾತ್ಮಕ ಕೆಲಸಗಳಲ್ಲಿ ಆಸಕ್ತಿ ಮೂಡಲಿದೆ. ಷೇರು ಮಾರುಕಟ್ಟೆಯಲ್ಲಿ ಎಚ್ಚರಿಕೆಯಿಂದ ಹೂಡಿಕೆ ಮಾಡಿದರೆ ಲಾಭ ಪಡೆಯಬಹುದು.

ಕುಂಭ ರಾಶಿ :

​​ಆರ್ಥಿಕವಾಗಿ ಇದು ನಿಮಗೆ ಬಹಳ ಅನುಕೂಲಕರ ಸಮಯ. ಸಿಕ್ಕಿಬಿದ್ದಿದ್ದ ಹಣ ವಾಪಸ್ ಬರಬಹುದು ಅಥವಾ ಹೊಸ ಆದಾಯದ ಮೂಲಗಳು ತೆರೆಯಬಹುದು. ಕುಟುಂಬದ ಸದಸ್ಯರೊಂದಿಗೆ ಸಂತೋಷದ ಸಮಯ ಕಳೆಯುವಿರಿ. ಶುಭ ಕಾರ್ಯಗಳು ಜರುಗುವ ಸಾಧ್ಯತೆ ಇದೆ.

ಮಿಶ್ರ ರಾಶಿಗಳು

ಮೇಷ ರಾಶಿ :

​ಮೇಷ ರಾಶಿಯವರಿಗೆ ಈ ಸಂಯೋಗವು ನಿಮ್ಮ ರಾಶಿಯಿಂದ 12ನೇ ಮನೆಯಲ್ಲಿ ನಡೆಯುತ್ತಿದೆ.​ಐಷಾರಾಮಿ ವಸ್ತುಗಳಿಗಾಗಿ ಅಥವಾ ವಿದೇಶಿ ಪ್ರಯಾಣಕ್ಕಾಗಿ ಹೆಚ್ಚಿನ ಖರ್ಚು ಬರಬಹುದು. ಹಣಕಾಸಿನ ಹರಿವು ಇದ್ದರೂ, ಉಳಿತಾಯ ಮಾಡುವುದು ಸ್ವಲ್ಪ ಕಷ್ಟವಾಗಬಹುದು. ವಿದೇಶಕ್ಕೆ ಹೋಗಲು ಬಯಸಿ ವ್ಯವಹಾರ ಮಾಡುವವರಿಗೆ ಇದು ಸುವರ್ಣ ಕಾಲ.

​ಮೀನ ರಾಶಿ:

ಸಂಯೋಗವು ನಿಮ್ಮದೇ ರಾಶಿಯಲ್ಲಿ ನಡೆಯುತ್ತಿರುವುದರಿಂದ ಮಾನಸಿಕ ದ್ವಂದ್ವಗಳು ಉಂಟಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ.

​ಸಿಂಹ ರಾಶಿ:

ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಆರೋಗ್ಯ ಸಂಬಂಧಿ ಸಮಸ್ಯೆಗಳು ಅಥವಾ ಗುಪ್ತ ಶತ್ರುಗಳ ಕಾಟವಿರಬಹುದು. ಈ ಸಮಯದಲ್ಲಿ ತಾಳ್ಮೆಯಿಂದ ಇರುವುದು ಒಳಿತು.

ಮಕರ ರಾಶಿ

ಶನಿಯು ರಾಶ್ಯಾಧಿಪತಿಯಾಗಿದ್ದು, ಈ ಸಂಯೋಗವು ನಿಮ್ಮ ರಾಶಿಯಿಂದ 3ನೇ ಮನೆಯಲ್ಲಿ ನಡೆಯುತ್ತಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಕಠಿಣ ಸವಾಲುಗಳನ್ನು ಎದುರಿಸಿ ಗೆಲ್ಲುವ ಶಕ್ತಿ ನಿಮ್ಮಲ್ಲಿ ಮೂಡುತ್ತದೆ. ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಸಣ್ಣ ಪ್ರವಾಸಗಳು ಲಾಭದಾಯಕವಾಗಿರುತ್ತವೆ. ಸಹೋದರಿಯರೊಂದಿಗೆ ಸಂಬಂಧ ಸುಧಾರಿಸುತ್ತದೆ.

ಧನು ರಾಶಿ:

ಕೌಟುಂಬಿಕ ವಿಷಯಗಳಲ್ಲಿ ಅಸಮಾಧಾನ ಮೂಡಬಹುದು. ಮನೆಯ ರಿಪೇರಿ ಅಥವಾ ಆಸ್ತಿ ವಿಚಾರದಲ್ಲಿ ವಿಳಂಬವಾಗಬಹುದು. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ.

ಸಾಮಾನ್ಯ ಫಲ

​ಶುಕ್ರನ ಪ್ರಭಾವ:

ಕಲೆ, ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಇರುವವರಿಗೆ ಇದು ಸುವರ್ಣ ಕಾಲ.

​ಶನಿಯ ಪ್ರಭಾವ:

ನ್ಯಾಯಾಲಯದ ವ್ಯವಹಾರಗಳಲ್ಲಿ ಜಯ ಸಿಗಬಹುದು, ಆದರೆ ಅದಕ್ಕೆ ಕಠಿಣ ಪರಿಶ್ರಮ ಅಗತ್ಯ.

​ಆಧ್ಯಾತ್ಮ:

ಮೀನ ರಾಶಿಯು ಮೋಕ್ಷದ ಸ್ಥಾನವಾದ್ದರಿಂದ, ಈ ಸಮಯದಲ್ಲಿ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗುವುದು ಮಾನಸಿಕ ಶಾಂತಿ ನೀಡುತ್ತದೆ.

​ಶನಿವಾರದಂದು ಕಪ್ಪು ಎಳ್ಳು, ಎಣ್ಣೆ ಅಥವಾ ಕಬ್ಬಿಣದ ವಸ್ತುಗಳನ್ನು ದಾನ ಮಾಡುವುದು ಶನಿಯ ಕೃಪೆಗೆ ಪಾತ್ರವಾಗಲು ಸಹಕಾರಿ. ಶುಕ್ರವಾರದಂದು ಬಿಳಿ ಬಣ್ಣದ ಸಿಹಿತಿಂಡಿಗಳನ್ನು ಅಥವಾ ಅಕ್ಕಿಯನ್ನು ಹಂಚುವುದು ಶುಕ್ರನ ಬಲವನ್ನು ಹೆಚ್ಚಿಸುತ್ತದೆ. ಶನಿಯು ಕರ್ಮದೇವನಾದ್ದರಿಂದ, ಮನೆಯ ಹಿರಿಯರನ್ನು ಮತ್ತು ಕೆಲಸಗಾರರನ್ನು ಗೌರವಿಸುವುದು ಅತ್ಯಂತ ದೊಡ್ಡ ಪರಿಹಾರವಾಗಿದೆ. ಈ ಅವಧಿಯಲ್ಲಿ ಶಿವ ಕವಚ, ಲಕ್ಷ್ಮೀ ಅಷ್ಟೋತ್ತರ ಪಠಿಸುವುದು ಮನಸ್ಸಿಗೆ ಶಾಂತಿ ನೀಡುತ್ತದೆ.

– ಲೋಹಿತ ಹೆಬ್ಬಾರ್

Source link

‘ಕೈ’ ಮನೆಯಲ್ಲಿ ಒಳ ಮೀಸಲಾತಿ ಗದ್ದಲ: ಹೈಕಮಾಂಡ್​​ ತಲುಪಿದ ವಿವಾದ; ಸಚಿವ ಸಂಪುಟ ಸಭೆಯತ್ತ ಎಲ್ಲರ ಚಿತ್ತ – Kannada News | Internal Reservation Row: Dalit Left Hand leaders in Congress angry with the Karnataka State Government

ಬೆಂಗಳೂರು, ಮಾರ್ಚ್​​ 05: ರಾಜ್ಯ ಸರ್ಕಾರ ಇತ್ತೀಚೆಗೆ 56 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಐತಿಹಾಸಿಕ ನಿರ್ಧಾರ ಪ್ರಕಟಿಸಿದೆ. ಆದರೆ, ಈ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಗ್ಗೆ ಸ್ಪಷ್ಟ ನಿಲುವು ತಾಳದಿದ್ದಕ್ಕೆ ಸ್ವತಃ ಕಾಂಗ್ರೆಸ್‌ನ ದಲಿತ ಎಡಗೈ ಸಚಿವರು ಮತ್ತು ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆಗೆ ಮಣಿದು ನೇಮಕಾತಿ ಮಾಡುತ್ತಿರುವ ಸರ್ಕಾರ, ಒಳ ಮೀಸಲಾತಿ ಕಡೆಗಣಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರತಿಭಟನೆಯ ಎಚ್ಚರಿಕೆ

ಒಳ ಮೀಸಲಾತಿ ವಿಚಾರದಲ್ಲಿ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವಿನ ಸಂಘರ್ಷ ಈಗ ಬೀದಿಗೆ ಬಂದಿದ್ದು, ಎಸ್‌ಸಿ ಸಮುದಾಯಕ್ಕೆ ಸಿಗುವ ಶೇ.15 ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡಲು ಸಚಿವರಾದ ಮುನಿಯಪ್ಪ, ತಿಮ್ಮಾಪುರ ಮತ್ತು ಎಡಗೈ ನಾಯಕರಾದ ಆಂಜನೇಯ, ಚಂದ್ರಪ್ಪ ಅವರಿಂದ ಒತ್ತಡ ಹೆಚ್ಚಾಗಿದೆ. ಒಂದು ವೇಳೆ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳದಿದ್ದರೆ ಮಾದಿಗ ಒಕ್ಕೂಟವು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.

ಇದನ್ನೂ ಓದಿ: ಕೆಲವು ಗೊಂದಲಗಳ ಮಧ್ಯೆಯೂ ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ

ಎಐಸಿಸಿ ಅಂಗಳ ತಲುಪಿದ ಮೀಸಲಾತಿ ಕಿಚ್ಚು!

ಇನ್ನು ಈ ವಿವಾದ ಈಗ ಹೈಕಮಾಂಡ್ ಮಟ್ಟಕ್ಕೂ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿರುವ ಎಡಗೈ ಮತ್ತು ಬಲಗೈ ನಾಯಕರು ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ವಿಶೇಷವಾಗಿ ದಲಿತ ಬಲಗೈ ನಾಯಕರಾದ ಪರಮೇಶ್ವರ್ ಮತ್ತು ಮಹದೇವಪ್ಪ ಅವರ ವಿರುದ್ಧ ಎಡಗೈ ನಾಯಕರು ಅಸಮಾಧಾನಗೊಂಡಿದ್ದಾರೆ. ಪಕ್ಷದ ಒಳಗೆ ಹೊತ್ತಿಕೊಂಡಿರುವ ಈ ಬೆಂಕಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಎಡಗೈ ನಾಯಕರು ಮೀಸಲಾತಿಗಾಗಿ ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ದಲಿತ ಬಲಗೈ ಸಮುದಾಯದ ಒಕ್ಕೂಟವು ಒಳ ಮೀಸಲಾತಿಗೆ ಒಳಗೊಳಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಜ್ಞಾನಪ್ರಕಾಶ್ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ನ್ಯಾ. ನಾಗಮೋಹನ್ ದಾಸ್ ವರದಿಯನ್ನು ಅವೈಜ್ಞಾನಿಕ ಎಂದು ಕರೆದಿದ್ದಾರೆ. ಕಾನೂನು ಅಡೆತಡೆಗಳು ನಿವಾರಣೆಯಾಗುವವರೆಗೂ ಹಳೆ ಪದ್ಧತಿಯಲ್ಲೇ ನೇಮಕಾತಿ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಈ ನಡುವೆ ಸಂಪುಟ ಸಭೆಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂಬ ಭರವಸೆ ಗೃಹ ಸಚಿವ ಪರಮೇಶ್ವರ್ ಅವರಿಂದ ವ್ಯಕ್ತವಾಗಿದೆ. ಒಳ ಮೀಸಲಾತಿ ಕೊಡಲು ಸರ್ಕಾರ ಈಗಾಗಲೇ ಒಪ್ಪಿಕೊಂಡಿದೆ. ರೋಸ್ಟರ್ ಸಿದ್ಧಪಡಿಸುವಾಗ ಆಗಿರುವ ಗೊಂದಲಗಳ ಬಗ್ಗೆ ಚರ್ಚೆ ಅಗತ್ಯವಿದೆ. ಎಸ್‌ಸಿ ಸಮುದಾಯಕ್ಕೆ ಶೇ. 17 ಮತ್ತು ಅಲೆಮಾರಿಗಳಿಗೆ ಶೇ.1ರಷ್ಟು ನೀಡುವ ಬಗ್ಗೆ ಚರ್ಚೆ ನಡೆಯಲಿದೆ ಎಂದವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆಯ ನಿರ್ಧಾರದ ಮೇಲೆ ರಾಜ್ಯದ ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಮತ್ತು ದಲಿತ ಸಮುದಾಯಗಳ ಭವಿಷ್ಯ ಅಡಗಿದೆ. ಸರ್ಕಾರ ಸಮತೋಲನದ ನಿರ್ಧಾರ ತೆಗೆದುಕೊಳ್ಳುತ್ತಾ ಅಥವಾ ಈ ವಿವಾದ ಮತ್ತಷ್ಟು ಉಲ್ಬಣಗೊಳ್ಳುತ್ತಾ ಎಂಬುದು ಕಾದು ನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:50 pm, Thu, 5 March 26

Source link

‘ಟಾಕ್ಸಿಕ್’, ‘ಧುರಂಧರ್ 2’ ಕಾರಣಕ್ಕೆ ರಿಲೀಸ್ ದಿನಾಂಕ ಬದಲಿಸಿದ ಸಿನಿಮಾಗಳೆಷ್ಟು? – Kannada News | Many movies changed their release date to Toxic and Dhurandhar 2

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 4ಕ್ಕೆ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾದ ಜೊತೆಗೆ ಮಾರ್ಚ್ 19ರಂದೇ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮುಂದೂಡಲ್ಪಟ್ಟಿರುವ ಕಾರಣ ಈಗ ‘ಧುರಂಧರ್ 2’ ಮಾತ್ರವೇ ಬಿಡುಗಡೆ ಆಗುತ್ತಿದೆ. ಅಸಲಿಗೆ ಮಾರ್ಚ್ 19ಕ್ಕೆ ಮತ್ತು ಅದರ ಆಸು-ಪಾಸು ಹಲವು ದಕ್ಷಿಣದ ಸಿನಿಮಾಗಳು ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಕಾರಣದಿಂದಾಗಿ ಹಲವು ಸಿನಿಮಾಗಳು ಬಿಡುಗಡೆ ದಿನಾಂಕ ಬದಲಾಯಿಸಿಕೊಂಡಿದ್ದವು.

ಮಾರ್ಚ್ ತಿಂಗಳು ಸಿನಿಮಾ ಬಿಡುಗಡೆಗೆ ಒಳ್ಳೆಯ ತಿಂಗಳೆಂಬ ಅನಿಸಿಕ ಚಿತ್ರರಂಗದಲ್ಲಿದೆ. ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವ ಸಮಯ ಇದು. ಅಲ್ಲದೆ ಯುಗಾದಿ ಅಂಥಹಾ ಪ್ರಮುಖ ಹಬ್ಬವಿದೆ. ರಂಜಾನ್ ಸಹ ಇರುತ್ತದೆ. ಅಲ್ಲದೆ, ಮಾರ್ಚ್ ಮುಗಿಯಿತೆಂದರೆ ಏಪ್ರಿಲ್​​ನಲ್ಲಿ ಐಪಿಎಲ್ ಶುರುವಾಗುತ್ತದೆ, ಆಗ ಐಪಿಎಲ್ ಮುಂದೆ ದೊಡ್ಡ ಸಿನಿಮಾಗಳು ಸಹ ನಿಲ್ಲುವುದಿಲ್ಲ ಇದೇ ಕಾರಣಕ್ಕೆ ಹಲವು ಸಿನಿಮಾಗಳು ಮಾರ್ಚ್ ತಿಂಗಳಲ್ಲೇ ಬಿಡುಗಡೆ ಮಾಡುತ್ತವೆ.

ಅಂತೆಯೇ ಈ ಬಾರಿಯೂ ಸಹ ಹಲವು ದಕ್ಷಿಣದ ಸಿನಿಮಾಗಳು ಮಾರ್ಚ್ ತಿಂಗಳ ಬಿಡುಗಡೆಗೆ ಯೋಜನೆ ಹಾಕಿದ್ದವು, ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಎರಡು ಅತಿ ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವ ಕಾರಣ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಅವುಗಳಲ್ಲಿ ಮುಖ್ಯದಾದುದು ರಾಮ್ ಚರಣ್ ನಟನೆಯ ‘ಪೆದ್ದಿ’. ಈ ಸಿನಿಮಾ ಮಾರ್ಚ್ 26ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಹವಾ ಹೆಚ್ಚಿದ್ದ ಕಾರಣಕ್ಕೆ ಸಿನಿಮಾದ ಬಿಡುಗಡೆ ಮುಂದೂಡಲಾಯ್ತು. ಈಗ ಈ ಸಿನಿಮಾ ಏಪ್ರಿಲ್ 20ಕ್ಕೆ ಬಿಡುಗಡೆ ಆಗಲಿದೆ.

ಇದನ್ನೂ ಓದಿ:‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್?

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 19ರಂದೇ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಇದ್ದ ಕಾರಣಕ್ಕೆ ಆ ಸಿನಿಮಾ ಮಾರ್ಚ್ 26ಕ್ಕೆ ಆಗುವುದಾಗಿ ಘೋಷಿಸಲಾಗಿತ್ತು. ಆದರೆ ಈಗ ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದ ಕಾರಣ ಈಗ ಮತ್ತೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾವನ್ನು ಮಾರ್ಚ್ 19ಕ್ಕೇ ಬಿಡುಗಡೆ ಮಾಡಲಾಗುತ್ತಿದೆ. ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಯಾಗಿ ನಿಲ್ಲಲಿದೆ ಈ ಸಿನಿಮಾ.

ಇನ್ನು ಅಡವಿ ಶೇಷ್ ಮತ್ತು ಮೃಣಾಲ್ ಠಾಕೂರ್ ನಟನೆಯ ‘ಡಕೈಟ್’ ಸಿನಿಮಾ ಮಾರ್ಚ್ 19ರಂದೇ ಬಿಡುಗಡೆ ಆಗಬೇಕಿತ್ತು. ‘ನಾವು ದೊಡ್ಡ ಸಿನಿಮಾದ ಎದುರೇ ಬಿಡುಗಡೆ ಮಾಡಿ ಗೆಲ್ಲುತ್ತೇವೆ ಎಂದು ಅಡವಿ ಶೇಷ್ ಆತ್ಮವಿಶ್ವಾಸದಿಂದ ಹೇಳಿದ್ದರು. ಆದರೆ ಆ ಬಳಿಕ ವಾಸ್ತವ ಅರಿವಾಗಿ ಸಿನಿಮಾದ ಬಿಡುಗಡೆ ಮುಂದಕ್ಕೆ ಹಾಕಿದ್ದು, ಇದೀಗ ಈ ಸಿನಿಮಾ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ.

ನಾನಿ ನಟನೆಯ ‘ಪ್ಯಾರಡೈಸ್’ ಸಿನಿಮಾ ಸಹ ಮಾರ್ಚ್ 26ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಕಾರಣಕ್ಕೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದ್ದು ಸಿನಿಮಾ ಆಗಸ್ಟ್​​ನಲ್ಲಿ ಬಿಡುಗಡೆ ಆಗಲಿದೆ. ಇದೆಲ್ಲದರ ಜೊತೆಗೆ ಸ್ವತಃ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಯೇ ಮುಂದೂಡಲ್ಪಟ್ಟಿದೆ. ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ಸಿನಿಮಾ ಈಗ ಜೂನ್ 4ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಡಾಲರ್ ಎದುರು ತುಸು ಚೇತರಿಕೆ ಕಂಡ ರುಪಾಯಿ; ಗುರುವಾರ 45 ಪೈಸೆ ಏರಿಕೆ – Kannada News | Rupee recovers 45 paise in Thursday, after setback for 2 days this week

ನವದೆಹಲಿ, ಮಾರ್ಚ್ 5: ಡಾಲರ್ ಎದುರು 92ರ ಮಟ್ಟಕ್ಕಿಂತ ಮೇಲೆ ಹೋಗಿದ್ದ ರುಪಾಯಿ (Dollar vs Rupee) ಇವತ್ತಿನ ವಹಿವಾಟಿನಲ್ಲಿ 45 ಪೈಸೆ ಚೇತರಿಸಿಕೊಂಡಿದೆ. ಇಂಟರ್​ಬ್ಯಾಂಕ್ ಫಾರೀನ್ ಎಕ್ಸ್​ಚೇಂಜ್ ಟ್ರೇಡಿಂಗ್​ನಲ್ಲಿ ಬುಧವಾರ ಸಂಜೆ ಡಾಲರ್ ಎದುರು 92.05ರಲ್ಲಿ ಅಂತ್ಯಗೊಂಡಿದ್ದ ರುಪಾಯಿ, ಗುರುವಾರ ಬೆಳಗ್ಗೆ 92.16ರಲ್ಲಿ ಆರಂಭ ಕಂಡಿತು. ರುಪಾಯಿ ಮೌಲ್ಯ ಒಂದು ಹಂತದಲ್ಲಿ 92.30ಕ್ಕೆ ಹೋಗಿತ್ತು. ಬಳಿಕ 91.60ರಲ್ಲಿ ಅಂತ್ಯಗೊಂಡಿತು. ಬುಧವಾರದ ಕೊನೆಯಲ್ಲಿದ್ದ ಮೌಲ್ಯಕ್ಕೆ ಹೋಲಿಸಿದರೆ ರುಪಾಯಿ 45 ಪೈಸೆಯಷ್ಟು ಚೇತರಿಕೆ ಕಂಡಿದೆ.

ಫಾರೆಕ್ಸ್ ಮಾರುಕಟ್ಟೆ ಮಂಗಳವಾರ ಹೋಳಿ ಪ್ರಯುಕ್ತ ಕಾರ್ಯನಿರ್ವಹಿಸಿರಲಿಲ್ಲ. ಸೋಮವಾರ ಡಾಲರ್ ಎದುರು ರುಪಾಯಿ 41 ಪೈಸೆ ಕುಸಿದರೆ, ಬುಧವಾರ ಬರೋಬ್ಬರಿ 56 ಪೈಸೆ ಕುಸಿದಿತ್ತು. ಗುರುವಾರವೂ ರುಪಾಯಿ ಕುಸಿಯಬಹುದು ಎಂದೇ ಹೆಚ್ಚಿನವರ ಎಣಿಕೆಯಾಗಿತ್ತು. ಆದರೆ, ಕೆಲ ವರದಿಗಳ ಪ್ರಕಾರ ಆರ್​ಬಿಐ ಒಂದಷ್ಟು ಡಾಲರ್​​ಗಳನ್ನು ಮಾರುವುದು ಇತ್ಯಾದಿ ಕ್ರಮಗಳ ಮೂಲಕ ರುಪಾಯಿ ಕುಸಿತವನ್ನು ತಡೆಯಿತು ಎನ್ನಲಾಗಿದೆ.

ಹಾಗೆಯೇ, ರುಪಾಯಿ ಚೇತರಿಕೆಗೆ ಮತ್ತೊಂದು ಸಂಭಾವ್ಯ ಕಾರಣವೆಂದರೆ, ಈಕ್ವಿಟಿ ಮಾರುಕಟ್ಟೆಗಳಲ್ಲಿ ಷೇರುಗಳನ್ನು ಖರೀದಿಸುವ ಟ್ರೆಂಡ್ ನಡೆದಿದೆ. ಗುರುವಾರ ಸಾಂಸ್ಥಿಕ ಹೂಡಿಕೆದಾರರಿಂದ ಸಾಕಷ್ಟು ಷೇರುಗಳ ಖರೀದಿ ಆಗಿದೆ. ಇವತ್ತು ಷೇರು ಮಾರುಕಟ್ಟೆ ಹಸಿರು ಬಣ್ಣಕ್ಕೆ ತಿರುಗಲು ಇದೂ ಒಂದು ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು

ಡಾಲರ್ ಬಲ ಹೆಚ್ಚಳ, ಕಚ್ಚಾ ತೈಲ ಬೆಲೆ ಹೆಚ್ಚಳ, ವಿದೇಶೀ ಹೂಡಿಕೆಗಳ ಹೊರಹರಿವು ಈ ಅಂಶಗಳು ರುಪಾಯಿಯನ್ನು ದುರ್ಬಲ ಸ್ಥಿತಿಗೆ ತಳ್ಳಿವೆ. ಆರ್​​ಬಿಐ ಹೆಚ್ಚು ದಿನ ರುಪಾಯಿ ಕುಸಿತ ತಡೆಯಲು ಕ್ರಮ ತೆಗೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ, ಶುಕ್ರವಾರ ಡಾಲರ್ ಎದುರು ರುಪಾಯಿ ಪ್ರದರ್ಶನ ಹೇಗಿರುತ್ತೆ ಎಂದು ನಿಶ್ಚಿತವಾಗಿ ಹೇಳಲು ಆಗುವುದಿಲ್ಲ. ತಜ್ಞರ ಪ್ರಕಾರ ಶುಕ್ರವಾರ ರುಪಾಯಿ 91.30ರಿಂದ 92.10 ಶ್ರೇಣಿಯಲ್ಲಿ ಟ್ರೇಡಿಂಗ್ ಕಾಣಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Faculty Recruitment: ಚಿತ್ರದುರ್ಗದ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ – Kannada News | Chitradurga Teaching Jobs 2026: Amrutha Ayurveda College Faculty Recruitment

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಅಧಿಕೃತ ಅಧಿಸೂಚನೆಯ ಮೂಲಕ ಬೋಧನಾ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವಿಶೇಷವಾಗಿ ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಮೊದಲು ಇ-ಮೇಲ್ ಮೂಲಕ ಅರ್ಜಿಯನ್ನು ಕಳುಹಿಸಬೇಕು.

ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
  • ಉದ್ಯೋಗ ಸ್ಥಳ: ಚಿತ್ರದುರ್ಗ
  • ಹುದ್ದೆಯ ಹೆಸರು: ಬೋಧನಾ ಸಿಬ್ಬಂದಿ

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, principalamrutha2016@gmail.com , amruthaayurtca@gmail.com ಗೆ ಮಾರ್ಚ್ 12ರ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬೇಕು.

ಅಧಿಕೃತ ಅಧಿಸೂಚನೆಯ ಪಿಡಿಎಫ್​​ ಪತ್ರಿ ಇಲ್ಲಿದೆ:Amrutha-Ayurveda-Medical-College-Hospital-Notification-for-Various-Teaching-Staff-Post

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್​ ಮಾಡಿ: 

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version