ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ! – Kannada News | India’s First Agri Clinic Proposed in Kolar to Cure Crop Diseases and Improve Soil Health

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್Image Credit source: google Gemini

ಕೋಲಾರ, ಮೇ 12: ಮನುಷ್ಯರಿಗೆ ರೋಗ ಬಂದರೆ ಆಸ್ಪತ್ರೆಗೆ ಹೋಗುತ್ತೇವೆ. ಆದರೆ ರೈತರು ಬೆಳೆಯುವ ಬೆಳೆಗಳಿಗೆ ರೋಗ ಬಂದರೆ ಏನು ಮಾಡಬೇಕು? ಈ ಪ್ರಶ್ನೆಗೆ ಉತ್ತರಿಸಲು ಕೋಲಾರ (Kolar) ಜಿಲ್ಲಾಡಳಿತವು ದೇಶದಲ್ಲೇ ಮೊದಲ ಬಾರಿಗೆ ರೈತರಿಗಾಗಿ ‘ಅಗ್ರಿ ಕ್ಲಿನಿಕ್’ (Agri Clinic) ಆರಂಭಿಸುವ ಅದ್ಭುತ ಯೋಜನೆಯನ್ನು ರೂಪಿಸಿದೆ.

ಮುಖ್ಯಾಂಶಗಳು

  • ಬೆಳೆಗಳ ರೋಗ ನಿವಾರಣೆಗೆ ಕೋಲಾರದಲ್ಲಿ ದೇಶದ ಮೊದಲ ಅಗ್ರಿ ಕ್ಲಿನಿಕ್ ಸ್ಥಾಪನೆ
  •  ಪ್ರತಿ ರೈತ ಸಂಪರ್ಕ ಕೇಂದ್ರಕ್ಕೆ ಕೃಷಿ ತಜ್ಞರ ನೇಮಕ ಮತ್ತು ಮಾರ್ಗದರ್ಶನ
  •  ಮಣ್ಣಿನ ಸತ್ವ ರಕ್ಷಣೆಗಾಗಿ 1.36 ಕೋಟಿ ರೂ. ವೆಚ್ಚದ ಬೃಹತ್ ಯೋಜನೆ ಸಿದ್ಧ

ಯೋಜನೆಯ ಹಿನ್ನೆಲೆ

ಕೃಷಿ ಪ್ರಧಾನ ಜಿಲ್ಲೆಯಾದ ಕೋಲಾರದಲ್ಲಿ ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅವೈಜ್ಞಾನಿಕ ಬಳಕೆಯಿಂದ ಮಣ್ಣಿನ ಸತ್ವ ಕಡಿಮೆಯಾಗುತ್ತಿದೆ. ತರಕಾರಿಗಳಲ್ಲಿ ಲೆಡ್ ಹಾಗೂ ಇತರೆ ವಿಷಕಾರಿ ಅಂಶಗಳು ಪತ್ತೆಯಾಗುತ್ತಿರುವುದು ಮತ್ತು ಬೆಳೆಗಳು ನಿರಂತರವಾಗಿ ರೋಗಕ್ಕೆ ತುತ್ತಾಗುತ್ತಿರುವುದು ಕೃಷಿ ವಲಯಕ್ಕೆ ಆತಂಕ ತಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು, ತಜ್ಞರೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಸುಮಾರು 1.36 ಕೋಟಿ ರೂ. ಯೋಜನಾ ವರದಿಯನ್ನು ಸಲ್ಲಿಸಿದ್ದಾರೆ.

ಅಗ್ರಿ ಕ್ಲಿನಿಕ್ ಹೇಗೆ ಕೆಲಸ ಮಾಡಲಿದೆ?

ಪ್ರತಿ ರೈತ ಸಂಪರ್ಕ ಕೇಂದ್ರದಲ್ಲಿ ಒಬ್ಬ ಕೃಷಿ ತಜ್ಞರನ್ನು ನೇಮಕ ಮಾಡಲಾಗುತ್ತದೆ. ತಜ್ಞರು ರೈತರ ಹೊಲಗಳಿಗೆ ಭೇಟಿ ನೀಡಿ, ಮಣ್ಣಿನ ಪೌಷ್ಠಿಕಾಂಶ ಮತ್ತು ಬೆಳೆಗಳಿಗೆ ಬಂದಿರುವ ರೋಗಗಳನ್ನು ಪರಿಶೀಲಿಸಿ ಸೂಕ್ತ ಚಿಕಿತ್ಸೆ ಸೂಚಿಸಲಿದ್ದಾರೆ. ರೈತರಿಗೆ ಅಗತ್ಯವಿರುವ ತಾಂತ್ರಿಕ ಮಾಹಿತಿ, ಹವಾಮಾನ ಮುನ್ಸೂಚನೆ ಮತ್ತು ಕೀಟನಾಶಕಗಳ ಸರಿಯಾದ ಬಳಕೆಯ ಬಗ್ಗೆ ಒಂದೇ ಸ್ಥಳದಲ್ಲಿ ಮಾಹಿತಿ ಸಿಗಲಿದೆ.

ಇದನ್ನೂ ಓದಿ ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಕೋಲಾರದ ರೈತರು ಟೊಮ್ಯಾಟೊ, ಮಾವು, ಪಪ್ಪಾಯ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲು ಪ್ರಸಿದ್ಧರಾಗಿದ್ದಾರೆ. ಆದರೆ ಸಾವಯವ ಗೊಬ್ಬರದ ಬಳಕೆ ಕಡಿಮೆಯಾಗಿ ಮಣ್ಣಿನಲ್ಲಿ ಇಂಗಾಲದ ಪ್ರಮಾಣ ಕ್ಷೀಣಿಸುತ್ತಿದೆ. ಈ ಯೋಜನೆಯು ಮಣ್ಣನ್ನು ವಿಷಮುಕ್ತಗೊಳಿಸಿ, ಮುಂದಿನ ಪೀಳಿಗೆಗೆ ಉತ್ತಮ ಬೇಸಾಯ ಪದ್ಧತಿಯನ್ನು ಪರಿಚಯಿಸುವ ಗುರಿ ಹೊಂದಿದೆ. ಒಟ್ಟಾರೆಯಾಗಿ, ಈ ‘ಅಗ್ರಿ ಕ್ಲಿನಿಕ್’ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದರೆ, ಇದು ಕೃಷಿ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದಲ್ಲದೆ ರಾಜ್ಯದ ಇತರ ಜಿಲ್ಲೆಗಳಿಗೂ ಮಾದರಿಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೆಲುಗಿನಲ್ಲಿ ಅದ್ದೂರಿಯಾಗಿ ರಿಲೀಸ್ ಆಗೋಕೆ ರೆಡಿ ಆಯ್ತು ‘ರಾಕ್ಷಸಪುರದೊಳ್’

ಕನ್ನಡದ ಚಿರಪರಿಚಿತ ನಟ ರಾಜ್ ಬಿ. ಶೆಟ್ಟಿ ಅವರ ಅಭಿನಯದ ‘ರಾಕ್ಷಸಪುರದೊಳ್’ ಚಿತ್ರವು ಈಗ ತೆಲುಗು ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ರಾಕ್ಷಸಪುರಂ’ ಎಂದು ಹೆಸರಿಡಲಾಗಿದ್ದು, ಖ್ಯಾತ ನಿರ್ಮಾಪಕ ಕೆ.ಎಸ್. ರಾಮರಾವ್ ಅವರು ಇದನ್ನು ಪ್ರಸ್ತುತಪಡಿಸುತ್ತಿದ್ದಾರೆ. ತೆಲುಗು ಸೆನ್ಸಾರ್ ಪೂರ್ಣಗೊಂಡಿದೆ ಎಂದು ಚಿತ್ರದ ವಿತರಕ ಕೆ.ಎಸ್. ರಾಮರಾವ್ ಇತ್ತೀಚೆಗೆ ಘೋಷಿಸಿದರು. ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರವನ್ನು ಪಡೆಯಲಾಗಿದೆ ಎಂದಿದ್ದಾರೆ ಅವರು.

ಮೇ 15 ರಂದು ತೆಲುಗು ಚಿತ್ರಮಂದಿರಗಳಲ್ಲಿ ಈ ಚಿತ್ರವು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಕೆ.ಎಸ್. ರಾಮರಾವ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ತಮ್ಮ ವೈವಿಧ್ಯಮಯ ನಟನೆಯಿಂದ ವಿಶೇಷ ಛಾಪು ಮೂಡಿಸಿರುವ ಕನ್ನಡ ತಾರೆ ರಾಜ್ ಬಿ. ಶೆಟ್ಟಿ ಈ ಚಿತ್ರದಲ್ಲಿ ಶಕ್ತಿಶಾಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಾತ್ರವನ್ನು ನಿರ್ವಹಿಸುತ್ತಾರೆ. ರವಿ ವರ್ಮ ನಿರ್ಮಿಸಿರುವ ಈ ಚಿತ್ರವು ರೋಮಾಂಚಕ ಕೊಲೆ ನಿಗೂಢ ಥ್ರಿಲ್ಲರ್ ಆಗಿದೆ. ಇನ್ವೆಸ್ಟಿಗೇಷನ್ ಥ್ರಿಲ್ಲರ್ ಹಿನ್ನೆಲೆಯಲ್ಲಿ ತೆರೆದುಕೊಳ್ಳುವ ಕಥೆಯು ಪ್ರತಿ ಹಂತದಲ್ಲೂ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತದೆ.

ಸೆನ್ಸಾರ್ ಮಂಡಳಿ ಪೂರ್ಣಗೊಂಡ ನಂತರ ಚಿತ್ರದ ಬಗ್ಗೆ ಮಾತನಾಡಿದ ಕೆ.ಎಸ್. ರಾಮರಾವ್, ‘ಈ ಚಿತ್ರದ ಮೇಕಿಂಗ್ ಮೌಲ್ಯಗಳು ಮತ್ತು ಸಸ್ಪೆನ್ಸ್ ಅಂಶಗಳಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಅದಕ್ಕಾಗಿಯೇ ನಾವು ಈ ಚಿತ್ರವನ್ನು ತೆಲುಗು ಪ್ರೇಕ್ಷಕರಿಗೆ ಯಾವುದೇ ರಾಜಿ ಮಾಡಿಕೊಳ್ಳದೆ ಪ್ರಸ್ತುತಪಡಿಸಲು ನಿರ್ಧರಿಸಿದ್ದೇವೆ. ಚಿತ್ರವನ್ನು ಆರಂಭದಲ್ಲಿ ಮೇ 7 ರಂದು ಬಿಡುಗಡೆ ಮಾಡಲು ಯೋಜಿಸಲಾಗಿದ್ದರೂ, ಹೆಚ್ಚು ಪ್ರೇಕ್ಷಕರನ್ನು ತಲುಪುವಂತೆ ನೋಡಿಕೊಳ್ಳಲು ನಾವು ಅದನ್ನು ಮೇ 15ರಂದು ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿ: ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ

‘ಬೇಸಿಗೆ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡು ಈ ದಿನಾಂಕ ಚಿತ್ರಕ್ಕೆ ಸೂಕ್ತವಾಗಿರುತ್ತದೆ ಎಂದು ನಾವು ಭಾವಿಸುತ್ತೇವೆ. ಪ್ರಸ್ತುತ ಐಪಿಎಲ್ ಬಝ್ ಮತ್ತು ಒಟಿಟಿಗಳಿಂದ ಸ್ಪರ್ಧೆಯ ಹೊರತಾಗಿಯೂ, ಪ್ರೇಕ್ಷಕರು ಯಾವಾಗಲೂ ಬಲವಾದ ವಿಷಯವನ್ನು ಹೊಂದಿರುವ ಚಲನಚಿತ್ರಗಳನ್ನು ಮೆಚ್ಚುತ್ತಾರೆ ಎಂದು ನಾವು ನಂಬುತ್ತೇವೆ. ‘ರಾಕ್ಷಸಪುರಂ’ ಖಂಡಿತವಾಗಿಯೂ ಆ ವರ್ಗಕ್ಕೆ ಸೇರುತ್ತದೆ. ಇದು ಸೆನ್ಸಾರ್ ಮಂಡಳಿಯಿಂದ ಉತ್ತಮ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಈ ಚಿತ್ರ ಎಲ್ಲರನ್ನೂ ಮೆಚ್ಚಿಸುತ್ತದೆ’ ಎಂದು ರಾಮರಾವ್ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category

ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ

Image Credit source: google Gemini

ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನೆಲ್ಲೆಡೆ ವಾಯು ಗುಣಮಟ್ಟ ಹೇಗಿದೆ?

ನಗರದ ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಕೆಲವು ಜನನಿಬಿಡ ಪ್ರದೇಶಗಳಲ್ಲಿ AQI ಮಟ್ಟವು 138 ರವರೆಗೆ ಏರಿಕೆಯಾಗಿದ್ದು, ಇದು ಸೂಕ್ಷ್ಮ ಆರೋಗ್ಯ ಸಮಸ್ಯೆ ಉಳ್ಳವರಿಗೆ (Sensitive Groups) ಹಾನಿಕಾರಕವಾಗಿದೆ. ಗಾಳಿಯಲ್ಲಿನ ಅತಿ ಸೂಕ್ಷ್ಮ ಧೂಳಿನ ಕಣಗಳಾದ PM2.5 ಮಟ್ಟವು ಸುಮಾರು 34µg/m³ ಮತ್ತು PM10 ಮಟ್ಟವು 40µg/m³ ದಾಖಲಾಗಿದೆ. ಇದು ವಾಹನಗಳ ದಟ್ಟಣೆ ಮತ್ತು ರಸ್ತೆ ಬದಿಯ ಧೂಳಿನಿಂದ ಉಂಟಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಬೆಂಗಳೂರಿನ ಆರ್ಕ್ ಸೆರೆನ್ ಕೌಂಟಿ ಮತ್ತು ಆದರ್ಶ್ ಪಾಮ್ ರಿಟ್ರೀಟ್‌ನಂತಹ ಪ್ರದೇಶಗಳಲ್ಲಿ ವಾಯು ಗುಣಮಟ್ಟವು ಕಳಪೆ ಮಟ್ಟಕ್ಕೆ ತಲುಪಿದ್ದು, 100ರ ಗಡಿ ದಾಟಿದೆ. ಆದರೆ, ಹೆಬ್ಬಾಳ ಮತ್ತು ಪೀಣ್ಯದಂತಹ ಕೆಲವು ಕಡೆಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದೆ. ನಗರದ ಒಟ್ಟಾರೆ AQI ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 43% ಏರಿಕೆಯಾಗಿದೆ. ಅಂದರೆ ಮಾಲಿನ್ಯ ಹೆಚ್ಚಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 111
  • ಮಂಗಳೂರು-100
  • ಮೈಸೂರು – 86
  • ಬೆಳಗಾವಿ – 110
  • ಕಲಬುರ್ಗಿ-84
  • ಶಿವಮೊಗ್ಗ –96
  • ಬಳ್ಳಾರಿ – 106
  • ಹುಬ್ಬಳ್ಳಿ- 118
  • ಉಡುಪಿ –100
  • ವಿಜಯಪುರ – 82

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಮತ್ತು ರಸ್ತೆ ಕಾಮಗಾರಿಗಳು ಇದಕ್ಕೆ ಮುಖ್ಯ ಕಾರಣವೆನ್ನಲಾಗಿದೆ. ಉಸಿರಾಟದ ಸಮಸ್ಯೆ ಇರುವವರು ಮತ್ತು ಮಕ್ಕಳು ಹೊರಗಡೆ ಹೆಚ್ಚು ಸಮಯ ಕಳೆಯುವಾಗ ಮಾಸ್ಕ್ ಧರಿಸುವುದು ಸೂಕ್ತ. ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಗಾಳಿಯಲ್ಲಿನ ಧೂಳಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ! – Kannada News | Karnataka Rain Update: Rain and Thunderstorm Alerts for Bengaluru and Coastal Regions

ಮುಂದಿನ 4 ದಿನಗಳಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು, ಮೇ 12: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮುಖ್ಯಾಂಶಗಳು

  • ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ
  • ರಾಜ್ಯದಲ್ಲಿ ಯೆಲ್ಲೋ ಅಲರ್ಟ್​

ಎಲ್ಲೆಲ್ಲಿ ಮಳೆ?

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ.ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಗರಿಷ್ಠ ತಾಪಮಾನ 33°C ದಾಟುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಮುಂದುವರಿಯಲಿದ್ದರೂ, ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34.8°C ಮತ್ತು ಕನಿಷ್ಠ ತಾಪಮಾನ 23.8°C ಆಸುಪಾಸಿನಲ್ಲಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್​

ಮೇ 15 ಮತ್ತು 16ರಂದು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. 64.5 ಮಿ.ಮೀ ಇಂದ 115.5 ಮಿ.ಮೀ ಮಳೆಯಾಗಲಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ; ಮೊದಲ ರಿಚ್ ಸಿಎಂ ಯಾರು? – Kannada News | Thalapathi Vijay’s Rs 648 Cr Net Worth: India’s Second Richest CM and Tamil Nadu MLA

ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್ ಅವರ ಆಸ್ತಿ 648 ಕೋಟಿ ರೂಪಾಯಿ. ಅವರು ತಮಿಳುನಾಡಿನ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿಯೂ ಆಗಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ಆಸ್ತಿ 931 ಕೋಟಿ ರೂ.ಗಳಿಗೂ ಹೆಚ್ಚು.

ತಮಿಳುನಾಡಿನ ಅತ್ಯಂತ ಶ್ರೀಮಂತ ಶಾಸಕಿ ಲಿಮಾ ರೋಸ್ ಮಾರ್ಟಿನ್. ಅವರ ಆಸ್ತಿ 5,863 ಕೋಟಿ ರೂ. ಲಿಮಾ ರೋಸ್ ಮಾರ್ಟಿನ್ ಲಾಲ್ಗುಡಿಯ ಎಐಎಡಿಎಂಕೆ ಶಾಸಕಿ. ಎರಡನೇ ಸ್ಥಾನದಲ್ಲಿರುವ ಶಾಸಕ ದಳಪತಿ ವಿಜಯ್. ಮೂರನೇ ಸ್ಥಾನದಲ್ಲಿರುವ ವಿಜಯ್ ಅವರ ಟಿವಿಕೆ ಪಕ್ಷದ ಶಾಸಕ ಅಧವ್ ಅರ್ಜುನ್, ಅವರ ಆಸ್ತಿ 534 ಕೋಟಿ ರೂ.

ವಿಜಯ್ ಬಳಿ ಏನಿದೆ?

ಚುನಾವಣಾ ಅಫಿಡವಿಟ್ ಪ್ರಕಾರ, ವಿಜಯ್ ಒಟ್ಟು 648.85 ಕೋಟಿ ರೂಪಾಯಿಗಳ ಆಸ್ತಿ ಹೊಂದಿದ್ದಾರೆ. ಇದರಲ್ಲಿ 426.20 ಕೋಟಿ ರೂಪಾಯಿಗಳ ಚರ ಆಸ್ತಿಗಳು ಮತ್ತು 222.65 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಗಳು ಸೇರಿವೆ. ವಿಜಯ್ 7.63 ಕೋಟಿ ರೂಪಾಯಿಗಳ ಸಾಲವನ್ನು ಸಹ ಹೊಂದಿದ್ದಾರೆ.

ವಿಜಯ್ ಬ್ಯಾಂಕಿನಲ್ಲಿ 330.48 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ಅವರ ಬಳಿ 19.37 ಲಕ್ಷ ರೂ. ಮೌಲ್ಯದ ಷೇರುಗಳಿವೆ. ಅವರು ಸಾಕಷ್ಟು ಸಾಲ ನೀಡಿದ್ದಾರೆ. ಇಷ್ಟೇ ಅಲ್ಲ, ವಿಜಯ್ ಬಳಿ 13.52 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 7 ಕಾರುಗಳಿವೆ. ಅವರ ಸಂಗ್ರಹದಲ್ಲಿರುವ ಅತ್ಯಂತ ದುಬಾರಿ ಕಾರು ಟಾಟಾ ಕ್ಯಾರವಾನ್ ಮತ್ತು ಅದರ ಬೆಲೆ 6 ಕೋಟಿ ರೂ.ಗಳಿಗಿಂತ ಹೆಚ್ಚು. ಅವರ ಬಳಿ 6.47 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳಿವೆ.

ಇದನ್ನೂ ಓದಿ: ಸಿಎಂ ಆಗಾಯ್ತು, ಚಿತ್ರರಂಗದ ಈ ಸಂಪ್ರದಾಯ ಬದಲಿಸ್ತಾರಾ ದಳಪತಿ ವಿಜಯ್?

ವಿಜಯ್ ಅವರ ಬಳಿ 222 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಸ್ಥಿರ ಆಸ್ತಿ ಇದೆ. ಇದರಲ್ಲಿ 117 ಕೋಟಿ ರೂಪಾಯಿ ಮೌಲ್ಯದ ಬಂಗಲೆಗಳು ಮಾತ್ರ ಅವರ ಹೆಸರಿನಲ್ಲಿವೆ. ವಿಜಯ್ ಅವರ ಹೆಸರಿನಲ್ಲಿ 10 ಬಂಗಲೆಗಳು ಮತ್ತು ಅವರ ಪತ್ನಿಯ ಹೆಸರಿನಲ್ಲಿ 1 ಬಂಗಲೆ ಇದೆ. ಇದರ ಹೊರತಾಗಿ, ಅವರು 82.81 ಕೋಟಿ ರೂಪಾಯಿ ಮೌಲ್ಯದ ವಾಣಿಜ್ಯ ಕಟ್ಟಡವನ್ನು ಹೊಂದಿದ್ದಾರೆ. ಅವರು 20 ಲಕ್ಷ ರೂಪಾಯಿ ಮೌಲ್ಯದ ಕೃಷಿ ಭೂಮಿ ಮತ್ತು 22 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಹೊಂದಿದ್ದಾರೆ.

ಚಂದ್ರಬಾಬು ನಾಯ್ಡು ಅತ್ಯಂತ ಶ್ರೀಮಂತ ಮುಖ್ಯಮಂತ್ರಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ಅವರ ಆಸ್ತಿ 931.83 ಕೋಟಿ ರೂ. ಚಂದ್ರಬಾಬು ನಾಯ್ಡು ಅವರ ಬಳಿ 10.38 ಕೋಟಿ ರೂ. ಸಾಲವಿದೆ. ನಾಯ್ಡು ಅವರ ಬಳಿ 810.42 ಕೋಟಿ ರೂ. ಮೌಲ್ಯದ ಚರ ಆಸ್ತಿ ಮತ್ತು 121.41 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟಿಮ್ ಡೇವಿಡ್​​ಗೆ ದುಬಾರಿ ಆಯ್ತು ಅಶ್ಲೀಲ ಸನ್ನೆ; ಬ್ಯಾನ್ ಭೀತಿ – Kannada News | Tim David Fined 30 for Obscene Gesture in RCB vs MI Match; Faces Ban Threat

ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ನಡುವಿನ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ ವಿವಾದದಿಂದಲೂ ಸುದ್ದಿಯಲ್ಲಿದೆ. ರಾಯಪುರದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ನಡೆದುಕೊಂಡ ರೀತಿ ಚರ್ಚೆಗೆ ಕಾರಣ ಆಗಿತ್ತು. ಅವರು ಓಪನ್ ಆಗಿ ಮುಂಬೈ ಆಟಗಾರರಿಗೆ ಮಧ್ಯ ಬೆಟ್ಟು ತೋರಿಸಿದ್ದರು. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿದೆ.

ಪಂದ್ಯದ ಕೊನೆಯ ಎಸೆತದವರೆಗೂ ಸಾಗಿದ ಈ ರೋಚಕ ಹೋರಾಟದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿತು. ಜಯದ ಸಂಭ್ರಮದಲ್ಲಿದ್ದಾಗ ಟಿಮ್ ಡೇವಿಡ್ ಅವರು ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದರು. ಅವರು ಪಂದ್ಯ ಮುಗಿದ ನಂತರ ಅಸಭ್ಯವಾಗಿ ‘ಮಧ್ಯದ ಬೆರಳು’ ತೋರಿಸುವ ಸನ್ನೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದು ಐಪಿಎಲ್ ನಿಯಮ 2.6 ರ ಅಡಿಯಲ್ಲಿ ‘ಅಸಭ್ಯ, ಆಕ್ಷೇಪಾರ್ಹ ಅಥವಾ ಅವಮಾನಕರ’ ವರ್ತನೆ ಎಂದು ಪರಿಗಣಿಸಲಾಗಿದೆ.

ದಂಡದ ವಿವರ:

ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ಮ್ಯಾಚ್ ರೆಫರಿ ಅಮಿತ್ ಶರ್ಮಾ, ಟಿಮ್ ಡೇವಿಡ್ ಅವರಿಗೆ ದಂಡ ವಿಧಿಸಿದ್ದಾರೆ. ಪಂದ್ಯದ ಸಂಭಾವನೆಯಲ್ಲಿ ಶೇ. 30ರಷ್ಟು ದಂಡ ವಿಧಿಸಿದ್ದು ಅಲ್ಲದೆ, ಎರಡು ಡಿಮೆರಿಟ್ ಪಾಯಿಂಟ್‌ಗಳನ್ನು ನೀಡಲಾಗಿದೆ. ಟಿಮ್ ಡೇವಿಡ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ವಿಧಿಸಲಾದ ದಂಡಕ್ಕೆ ಸಮ್ಮತಿಸಿದ್ದಾರೆ. ಟಿಮ್ ಡೇವಿಡ್ ಅವರಿಗೆ ಈಗ 2 ಡಿಮೆರಿಟ್ ಪಾಯಿಂಟ್ಸ್ ನೀಡಲಾಗಿದೆ. ಅಂದರೆ, ಅವರು ಮುಂದಿನ ಪಂದ್ಯಗಳಲ್ಲಿ ಇನ್ನು ಕೇವಲ 2 ಪಾಯಿಂಟ್ಸ್ ಪಡೆದರೂ ಒಂದು ಪಂದ್ಯದ ನಿಷೇಧ ಎದುರಿಸಬೇಕಾಗುತ್ತದೆ.

ಪಂದ್ಯದ ಹೈಲೈಟ್ಸ್:

ಈ ಪಂದ್ಯವು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್, ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿಗೆ ಸಿಲುಕಿ ಆರಂಭಿಕ ಆಘಾತ ಅನುಭವಿಸಿತು. ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅಲ್ಪ ಮೊತ್ತಕ್ಕೆ ಔಟಾದರು. ಆದರೆ ತಿಲಕ್ ವರ್ಮಾ ಮತ್ತು ನಮನ್ ಧೀರ್ ಅವರ ಹೋರಾಟದಿಂದ ಮುಂಬೈ 166 ರನ್ ಗಳಿಸಿತು.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​​ ವಿರುದ್ಧ ‘ಅಸಭ್ಯ’ವಾಗಿ ಸಂಭ್ರಮಿಸಿದ ಟಿಮ್ ಡೇವಿಡ್

ಗುರಿ ಬೆನ್ನಟ್ಟಿದ ಆರ್‌ಸಿಬಿ ಕೂಡ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದಾಗ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕೃನಾಲ್ ಪಾಂಡ್ಯ 46 ಎಸೆತಗಳಲ್ಲಿ 73 ರನ್ ಚಚ್ಚಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ಕೊನೆಯ ಓವರ್‌ನಲ್ಲಿ ಭುವನೇಶ್ವರ್ ಕುಮಾರ್ ಅವರ ಸಿಕ್ಸರ್ ಮತ್ತು ರಸಿಖ್ ಸಲಾಮ್ ಅವರ ಸಮಯೋಚಿತ ಆಟದಿಂದ ಆರ್‌ಸಿಬಿ ಗೆಲುವಿನ ನಗೆ ಬೀರಿತು. ಗೆಲುವಿನ ನಂತರದ ಟಿಮ್ ಡೇವಿಡ್ ಮಾಡಿದ ಈ ಸನ್ನೆ ಈಗ ಅವರಿಗೆ ಆರ್ಥಿಕವಾಗಿ ನಷ್ಟ ತಂದೊಡ್ಡಿದೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ – Kannada News | Karnataka Implements New Excise Policy from May 11: Cheap Liquor Prices to Rise, Premium Brands Get Cheaper

ಬೆಂಗಳೂರು, ಮೇ 12: ಕರ್ನಾಟಕ (Karnataka) ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು (New Excise Policy) ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ ಮದ್ಯದ ದರವನ್ನು ಏರಿಕೆ ಮಾಡಲಿದ್ದು, ಪ್ರೀಮಿಯಂ ಅಥವಾ ವಿದೇಶಿ ಬ್ರಾಂಡ್‌ಗಳ ಮದ್ಯದ ಬೆಲೆ ಇಳಿಕೆಯಾಗಲಿದೆ.

ಮುಖ್ಯಾಂಶಗಳು

  • 16 ಸ್ಲ್ಯಾಬ್‌ಗಳಿದ್ದ ಅಬಕಾರಿ ತೆರಿಗೆ ವ್ಯವಸ್ಥೆಯನ್ನು 8 ಸ್ಲ್ಯಾಬ್‌ಗಳಿಗೆ ಇಳಿಸಿದ ಸರ್ಕಾರ.
  • ಸಾಮಾನ್ಯ ಮದ್ಯದ ಬೆಲೆ (180 ಮಿ.ಲೀ) 20-30% ರಷ್ಟು ಏರಿಕೆ; ಪ್ರೀಮಿಯಂ ಬ್ರಾಂಡ್‌ಗಳ ಬೆಲೆ 16-20% ರಷ್ಟು ಇಳಿಕೆ.
  • ಸ್ಥಳೀಯ ಮದ್ಯ ತಯಾರಕರಿಗಿಂತ ಬಹುರಾಷ್ಟ್ರೀಯ ಕಂಪನಿಗಳಿಗೆ (MNC) ಹೆಚ್ಚಿನ ಲಾಭವಾಗುವ ಆತಂಕ.

ಬಜೆಟ್ ಮದ್ಯಕ್ಕೆ ಬರೆ

ಹೊಸ ನೀತಿಯಿಂದಾಗಿ ಸಾಮಾನ್ಯ ಜನರು ಹೆಚ್ಚಾಗಿ ಬಳಸುವ ವಿಸ್ಕಿ, ರಮ್, ಬ್ರಾಂಡಿ ಮತ್ತು ವೋಡ್ಕಾಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ. ವಿಶೇಷವಾಗಿ 180 ಮಿ.ಲೀ (ಕ್ವಾರ್ಟರ್) ಟೆಟ್ರಾ ಪ್ಯಾಕ್ ಮತ್ತು ಬಾಟಲಿಗಳ ಬೆಲೆ ಶೇ 20 ರಿಂದ 30 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕ ಬ್ರೂವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್ (KBDA) ಪ್ರಕಾರ, ಮೊದಲ ಐದು ಸ್ಲ್ಯಾಬ್‌ಗಳಲ್ಲಿರುವ ಹೆಚ್ಚುವರಿ ಅಬಕಾರಿ ಸುಂಕವನ್ನು (AED) ಶೇ 20-30 ರಷ್ಟು ಹೆಚ್ಚಿಸಲಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ. ಕಳೆದ ವರ್ಷ 63 ರೂಪಾಯಿ ಇದ್ದ ಕ್ವಾರ್ಟರ್ ಬೆಲೆ, ಇತ್ತೀಚಿನ ಏರಿಕೆಯ ನಂತರ 80 ರೂಪಾಯಿಗೆ ತಲುಪಿತ್ತು. ಈಗ ಹೊಸ ನೀತಿಯಿಂದಾಗಿ ಅದು 105 ರೂಪಾಯಿಗೆ ಏರಿಕೆಯಾಗುವ ಲಕ್ಷಣಗಳಿವೆ.

ಶ್ರೀಮಂತರ ಮದ್ಯ ಅಗ್ಗ

ಇನ್ನೊಂದೆಡೆ, ಶ್ರೀಮಂತರು ಬಳಸುವ ಅಥವಾ ವಿದೇಶಿ ಮೂಲದ ಪ್ರೀಮಿಯಂ ಬ್ರಾಂಡ್‌ಗಳಾದ ಡಿಯಾಜಿಯೊ, ಪೆರ್ನಾಡ್ ರಿಕಾರ್ಡ್ ಮತ್ತು ಯುನೈಟೆಡ್ ಸ್ಪಿರಿಟ್ಸ್‌ನಂತಹ ಕಂಪನಿಗಳ ಮದ್ಯದ ಬೆಲೆ ಶೇ 16 ರಿಂದ 20 ರಷ್ಟು ಇಳಿಕೆಯಾಗಲಿದೆ. 6 ರಿಂದ 8ನೇ ಸ್ಲ್ಯಾಬ್‌ನಲ್ಲಿ ಬರುವ ಈ ಪಾನೀಯಗಳ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 10-15 ರಷ್ಟು ಕಡಿಮೆ ಮಾಡಲಾಗಿದೆ. ಇದರಿಂದ ಬಹುರಾಷ್ಟ್ರೀಯ ಕಂಪನಿಗಳಿಗೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

ಸ್ಥಳೀಯ ಕಂಪನಿಗಳಿಗೆ ಸಂಕಷ್ಟ

ಸರ್ಕಾರದ ಈ ಕ್ರಮವು ಸ್ಥಳೀಯ ಮದ್ಯ ತಯಾರಿಕಾ ಘಟಕಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಕೆಬಿಡಿಎ ಆತಂಕ ವ್ಯಕ್ತಪಡಿಸಿದೆ. ದೊಡ್ಡ ಕಂಪನಿಗಳು ಬೆಲೆ ಏರಿಳಿತವನ್ನು ಸರಿದೂಗಿಸಿಕೊಳ್ಳಬಲ್ಲವು. ಆದರೆ ಬಜೆಟ್ ಮದ್ಯವನ್ನೇ ನೆಚ್ಚಿಕೊಂಡಿರುವ ಸಣ್ಣ ಪ್ರಾದೇಶಿಕ ಘಟಕಗಳು ವ್ಯವಹಾರ ಕುಸಿತದ ಭೀತಿಯಿಂದಾಗಿ ಮುಚ್ಚುವ ಹಂತಕ್ಕೆ ತಲುಪಬಹುದು ಎಂದು ಸಂಘದ ಸದಸ್ಯರು ದೂರಿದ್ದಾರೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ!

ರಾಜ್ಯದ ಅಬಕಾರಿ ಆದಾಯಕ್ಕೆ ಶೇ 70-75 ರಷ್ಟು ಕೊಡುಗೆ ನೀಡುವ ಸಾಮಾನ್ಯ ಮದ್ಯದ ಮೇಲೆಯೇ ಹೆಚ್ಚಿನ ತೆರಿಗೆ ಹೊರೆ ಬಿದ್ದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ ವರೆಗೆ ಇರಲಿವೆ ಎಂದು ಗುರೂಜಿ ತಿಳಿಸಿದ್ದಾರೆ.

 

 

Source link

Daily Devotional: ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ? – Kannada News | Santana Dosha: The Impact of Postponing Children According to Astrology

ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು.

ಜಾತಕದಲ್ಲಿ ಸಂತಾನ ಸ್ಥಾನವಾದ ಐದನೇ ಮನೆಯನ್ನು ನಿರ್ಲಕ್ಷಿಸಿದಾಗ, ಗುರು ಗ್ರಹದ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದು ದಂಪತಿಗಳಿಬ್ಬರ ಮೇಲೂ ಪರಿಣಾಮ ಬೀರಿ ಕಷ್ಟಗಳನ್ನು ತರಬಹುದು. ಸಂತಾನ ವಿಳಂಬದಿಂದಾಗಿ ಸರ್ಪ ಶಾಪ ಮತ್ತು ಸಂತಾನ ದೋಷಗಳು ಕಾಡುತ್ತವೆ. ಶನಿಯು ಐದನೇ ಮನೆಯನ್ನು ದೃಷ್ಟಿಸಿದಾಗ ಶಾಶ್ವತವಾಗಿ ಸಂತಾನವಿಲ್ಲದ ಪರಿಸ್ಥಿತಿ ಉಂಟಾಗಬಹುದು. ಗರ್ಭಪಾತವು ಮಂಗಳ ಗ್ರಹದ ಕೋಪಕ್ಕೆ ಕಾರಣವಾಗಿ ಪಿತೃ ದೋಷಗಳನ್ನು ತರಬಹುದು. ಆದ್ದರಿಂದ, ಸರಿಯಾದ ಸಮಯದಲ್ಲಿ ಸಂತಾನವನ್ನು ಹೊಂದುವುದು ದೈವಾನುಗ್ರಹ ಮತ್ತು ಜೀವನದ ಪರಿಪೂರ್ಣತೆಗೆ ಅತ್ಯಗತ್ಯ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

 

 

Source link

‘ದೃಶ್ಯಂ 3’ ಚಿತ್ರದಲ್ಲಿ ಭಾರೀ ಬದಲಾವಣೆ; ಕನ್ನಡ ವರ್ಷನ್ ಕಥೆ ಏನು? – Kannada News | Drishyam 3: Major Changes What’s the Story for Kannada, Hindi and Malayalam Versions?

‘ದೃಶ್ಯಂ’ ಚಿತ್ರದ ಸರಣಿಗೆ ಭಾರತ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಈಗ ಎಲ್ಲರ ಕಣ್ಣು ‘ದೃಶ್ಯಂ 3’ ಮೇಲಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಪನೋರಮಾ ಸ್ಟುಡಿಯೋಸ್‌ನ ಅಭಿಷೇಕ್ ಪಾಠಕ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಜಯ್ ದೇವಗನ್ ಅಭಿನಯದ ಹಿಂದಿ ಆವೃತ್ತಿಯು ಮೋಹನ್‌ಲಾಲ್ ಅವರ ಮಲಯಾಳಂ ಆವೃತ್ತಿಗಿಂತ ಭಿನ್ನವಾಗಿರಲಿದೆ ಎಂದು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ಅವರು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ.

ಹಿಂದಿ ‘ದೃಶ್ಯಂ 3’ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆಯಂತೆ. ಸಣ್ಣಪುಟ್ಟ ಪ್ಯಾಚ್‌ವರ್ಕ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರವನ್ನು ಅಕ್ಟೋಬರ್ 2ರಂದು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಮಲಯಾಳಂನಲ್ಲಿ ಮೇ 21ಕ್ಕೆ ತೆರೆಗೆ ಬರಲಿದೆ. ವಿಶೇಷವೆಂದರೆ, ಮಲಯಾಳಂ ಆವೃತ್ತಿಯು ಕೌಟುಂಬಿಕ ಡ್ರಾಮಾಕ್ಕೆ ಹೆಚ್ಚು ಒತ್ತು ನೀಡಿದರೆ, ಹಿಂದಿ ಆವೃತ್ತಿಯನ್ನು ಪಕ್ಕಾ ‘ಫ್ಯಾಮಿಲಿ ಥ್ರಿಲ್ಲರ್’ ಆಗಿ ರೂಪಿಸಲಾಗಿದೆ. ಹಿಂದಿ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಕಥೆಯ ಹಾದಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕ್ಲೈಮ್ಯಾಕ್ಸ್ ಕೂಡ ಪ್ರೇಕ್ಷಕರಿಗೆ ದೊಡ್ಡ ಶಾಕ್ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ದೃಶ್ಯಂ 3’ ಟೀಸರ್: ಜಾರ್ಜ್ ಕುಟ್ಟಿಗೆ ಮೊದಲ ಬಾರಿ ಭಯವಾಗಿದೆ

‘ದೃಶ್ಯಂ’ ಅಂತಹ ಸಿನಿಮಾಗಳನ್ನು ಬರೆಯುವಾಗ ಮೊದಲು ಕ್ಲೈಮ್ಯಾಕ್ಸ್ ಸಿದ್ಧಪಡಿಸಿಕೊಳ್ಳಬೇಕು ಎಂದು ಅಭಿಷೇಕ್ ಹೇಳಿದ್ದಾರೆ. ಜೀತು ಜೋಸೆಫ್ ಅವರ ಮಲಯಾಳಂ ಡ್ರಾಫ್ಟ್ ಮತ್ತು ತಮ್ಮ ಹಿಂದಿ ಡ್ರಾಫ್ಟ್ ನಡುವೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಅಂತಿಮವಾಗಿ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸುವಂತಹ ಚಿತ್ರಕಥೆಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡದ ‘ದೃಶ್ಯ 3’ ಕಥೆ ಏನು?:

ಹಿಂದಿ ಮತ್ತು ಮಲಯಾಳಂನಲ್ಲಿ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿದ್ದರೆ, ಕನ್ನಡದ ಪ್ರೇಕ್ಷಕರಿಗೂ ಒಂದು ಸಿಹಿ ಸುದ್ದಿಯಿದೆ. ಕನ್ನಡದಲ್ಲೂ ‘ದೃಶ್ಯ 3’ ಬರಲಿದೆ. ಆದರೆ, ಅದು ಸದ್ಯಕ್ಕಂತೂ ಸೆಟ್ಟೇರುವುದಿಲ್ಲ. ಮೂಲಗಳ ಪ್ರಕಾರ, ಕನ್ನಡ ಆವೃತ್ತಿಯಲ್ಲಿ ಯಾವುದೇ ದೊಡ್ಡ ಬದಲಾವಣೆಗಳನ್ನು ಮಾಡದೆ, ಮಲಯಾಳಂನ ಮೂಲ ಕಥೆಯನ್ನೇ ಅನುಸರಿಸುವ ಸಾಧ್ಯತೆ ಹೆಚ್ಚಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಅಭಿಮಾನಿಗಳು ಈ ಚಿತ್ರಕ್ಕಾಗಿ ಸ್ವಲ್ಪ ಸಮಯ ಕಾಯಲೇಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version