Headlines

ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್! – Kannada News | Hassan City Corporation Engineer Keeps Lokayukta Officials Waiting 4 Hours During Raid

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ…

Read More

ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ – Kannada News | Israel Iran Conflict Impact: Cooking Oil Prices Rise in Bengaluru, Karnataka Egg Exporters Face Heavy Loss

ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟImage Credit source: tv9 ಬೆಂಗಳೂರು, ಮಾರ್ಚ್ 5: ಇಸ್ರೇಲ್-ಇರಾನ್ ಸಂಘರ್ಷದಿಂದ (Israel-Iran Conflict) ಉಂಟಾಗಿರುವ ಗಲ್ಫ್ ಯುದ್ಧದ ಭೀತಿಯು ಜಾಗತಿಕವಾಗಿ ತಲ್ಲಣ ಸೃಷ್ಟಿಸಿದೆ. ಇದರ ಪರಿಣಾಮ ಭಾರತದ, ಅದರಲ್ಲೂ ಕರ್ನಾಟಕದ ಜನಸಾಮಾನ್ಯರ ಮೇಲೆ ನೇರವಾಗಿ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವಿಶೇಷವಾಗಿ ಅಡುಗೆ ಎಣ್ಣೆ ಮತ್ತು ಮೊಟ್ಟೆ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ. ಬೆಂಗಳೂರಿನಲ್ಲಿ (Bangalore) ಅಡುಗೆ ಎಣ್ಣೆಯ ದರ (Cooking Oil Prices) ಲೀಟರ್‌ಗೆ 5 ರೂಪಾಯಿ ಏರಿಕೆಯಾಗಿದೆ….

Read More

ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು! – Kannada News | Lokayukta Raids PWD AEE Satishs Residence in Mandya Over Illegal Assets

ಮಂಡ್ಯ, ಮಾರ್ಚ್​ 05: ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಮಂಡ್ಯದ ಬಂಡಿಗೌಡ ಬಡಾವಣೆಯಲ್ಲಿರುವ ಎಇಇ ಸತೀಶ್ ಅವರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು…

Read More

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. Source link

Read More

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..! – Kannada News | South Africa’s Coah Shukri Conrad After Semi FInal Loss vs New Zealand

T20 World Cup 2026: ಟಿ20 ವಿಶ್ವಕಪ್​ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೇರಿದ್ದ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯದಲ್ಲಿ ಸೋತಿದೆ. ಅದು ಕೂಡ ಹೀನಾಯವಾಗಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ…

Read More

Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ – Kannada News | Bihar CM Nitish Kumar Enters Rajya Sabha Race With Fresh Nomination

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ…

Read More

Thursday’s Power: ಗುರುವಾರ ವಿಷ್ಣು ಪೂಜೆ; ಗುರು ಗ್ರಹ, ಮಹಾದಶೆ ಮತ್ತು ಸಮೃದ್ಧಿಯ ರಹಸ್ಯಗಳು – Kannada News | Thursday’s Power: Vishnu Puja, Guru Mahadasha and Prosperity Secrets

ಸನಾತನ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದು ನಿರ್ದಿಷ್ಟ ದೇವತೆ ಹಾಗೂ ಒಂದು ಗ್ರಹಕ್ಕೆ ಸಂಬಂಧಿಸಿದೆ. ಆ ರೀತಿಯಲ್ಲಿ ಗುರುವಾರವು ಬ್ರಹ್ಮಾಂಡದ ರಕ್ಷಕನಾದ ಭಗವಾನ್ ವಿಷ್ಣು ಹಾಗೂ ದೇವತೆಗಳ ಗುರುವಾಗಿರುವ ಬೃಹಸ್ಪತಿ (ಗುರು) ಗ್ರಹಕ್ಕೆ ಸಮರ್ಪಿತವಾಗಿದೆ. ಈ ದಿನ ವಿಷ್ಣುವಿನ ಪೂಜೆ ಮತ್ತು ಉಪವಾಸವನ್ನು ಆಚರಿಸುವುದರಿಂದ ಜೀವನದಲ್ಲಿ ಸಮೃದ್ಧಿ, ಶಾಂತಿ ಮತ್ತು ಸೌಭಾಗ್ಯ ಹೆಚ್ಚುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಗುರುವಾರದಂದು ಗುರು ಗ್ರಹದ ಪೂಜೆ ಮಾಡುವುದರಿಂದ ಜೀವನದಲ್ಲಿರುವ ಅನೇಕ ತೊಂದರೆಗಳು ಕಡಿಮೆಯಾಗುತ್ತವೆ ಮತ್ತು ವ್ಯಕ್ತಿಯ ಸ್ಥಾನಮಾನ,…

Read More

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ – Kannada News | Ethanol Tanker Catches Fire After Accident in Ranebennur, Haveri

ಹಾವೇರಿ, ಮಾರ್ಚ್​​ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್​​ ರಸ್ತೆಗೆ ಟ್ಯಾಂಕರ್​​ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ…

Read More

Video: ಆಹಾ! ಎಂತ ಜೋಡಿ; ಚಿಂತೆಯೆನ್ನೆಲ್ಲಾ ಬಿಟ್ಟು ಬೀಡಿ ಸೇದುತ್ತಾ ಕುಳಿತ ವೃದ್ಧ ದಂಪತಿ – Kannada News | An elderly couple smoking a beedi, video goes viral

ಪ್ರತಿಯೊಬ್ಬ ಹೆಣ್ಣು ಕೂಡ ತನ್ನ ಗಂಡ ತನ್ನನ್ನು ಪ್ರೀತಿಸಲಿ, ಕಾಳಜಿ ವಹಿಸಲಿ ಎಂದು ಬಯಸುವುದು ಸಹಜ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಈ ವೃದ್ಧ ದಂಪತಿಯನ್ನು (elderly couple) ನೋಡಿದ್ರೆ  ನೀವು ಕೂಡ ಎಂತಹ ಜೋಡಿ ಇವರದ್ದು ಅನ್ನುತ್ತೀರಾ.  ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧ ದಂಪತಿಯೂ ಚಿಂತೆಯನ್ನೆಲ್ಲಾ ಬದಿಗೆ ಇಟ್ಟು  ಬೀಡಿ ಸೇದುತ್ತಾ ಕುಳಿತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ ಮಾಡಿ ಈ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. Naveen_gowda_1983 ಹೆಸರಿನ ಇನ್ಸ್ಟಾಗ್ರಾಮ್…

Read More

ಶೇ. 60ರ ಗಡಿ ದಾಟಲಿದೆ ಡಿಎ, ಡಿಆರ್; ಜನವರಿಯ ತುಟ್ಟಿಭತ್ಯೆ ಎಷ್ಟು ಏರಬಹುದು? – Kannada News | Central Govt employees, 7th pay commission DA and DR likely to rise by 2pc in 2026 January June period

ನವದೆಹಲಿ, ಮಾರ್ಚ್ 5: ಜನವರಿಯಿಂದ ಬರಬೇಕಿರುವ ತುಟ್ಟಿಭತ್ಯೆ (DA- Dearness Allowance) ಹೆಚ್ಚಳದ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದ್ದಾರೆ. ಜನವರಿಯಿಂದ ಜಾರಿಗೆ ಬರುವ ತುಟ್ಟಿಭತ್ಯೆ ಹೆಚ್ಚಳವನ್ನು ಮಾರ್ಚ್​ನಲ್ಲಿ ಪ್ರಕಟಿಸಲಾಗುತ್ತದೆ. ಅಂದರೆ ಈ ತಿಂಗಳು ಡಿಎ ಮತ್ತು ಡಿಆರ್ ಅನ್ನು ಘೋಷಿಸಲಾಗುತ್ತದೆ. ವರದಿಗಳ ಪ್ರಕಾರ ಈ ಬಾರಿ ತುಟ್ಟಿಭತ್ಯೆಯನ್ನು ಶೇ. 2ರಷ್ಟು ಮಾತ್ರವೇ ಏರಿಕೆ ಮಾಡಬಹುದು. ಶೇ. 2ರಷ್ಟು ಏರಿಕೆಯಾದರೆ ಏಳನೇ ವೇತನ ಆಯೋಗದಡಿಯಲ್ಲಿ ಸಿಗುವ ತುಟ್ಟಿಭತ್ಯೆ ಶೇ. 60 ದಾಟಿದಂತಾಗುತ್ತದೆ. ಎಂಟನೇ ವೇತನ ಆಯೋಗವು…

Read More