ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | We are giving big guarantee to Bengaluru People On May 13 Announced By DK Shivakumar

ಬೆಂಗಳೂರು, (ಮೇ 11): ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಏನು ಗಿಫ್ಟ್ ಕೊಡಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada

ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ.

ಮುಖ್ಯಾಂಶಗಳು

  • ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​
  • ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆ
  • ಸಾರ್ವಜನಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶ

ಪೊಲೀಸ್ ಇಲಾಖೆಗೆ ಸವಾಲಾದ ಮನೆ ಕಳ್ಳತನ ಪ್ರಕರಣಗಳು

ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಗಳಲ್ಲಿಯೂ ಮನೆಗಳಿಗೆ ಬೀಗ ಹಾಕಿ ಕುಟುಂಬ ಸಮೇತರಾಗಿ ಹೊರ ಊರುಗಳಿಗೆ ತೆರಳುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಇದೇ ಸಂದರ್ಭವನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಳ್ಳರು ಮನೆಗಳತನ ನಡೆಸುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಆತಂಕ ಮೂಡಿಸಿದ್ದವು. ವಿಶೇಷವಾಗಿ ಹಬ್ಬ-ಹರಿದಿನಗಳು, ಮದುವೆ ಸಮಾರಂಭಗಳು ಹಾಗೂ ಬೇಸಿಗೆ ರಜಾ ಅವಧಿಯಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿತ್ತು.

ಏನಿದು ಲಾಕ್ಡ್ ಹೌಸ್ ಬಿಟ್ ಸಿಸ್ಟಮ್? 

ಈ ಹಿನ್ನೆಲೆದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ಹೊಸ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಗಳಿಗೆ ಬೀಗ ಹಾಕಿ ಕೆಲವು ದಿನಗಳ ಕಾಲ ಹೊರಗಡೆ ಹೋಗುವವರು ತಮ್ಮ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಬೀಟ್ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಬಹುದು. ಮನೆ ಮಾಲೀಕರು ನೀಡುವ ವಿವರಗಳನ್ನು ಪೊಲೀಸ್ ಇಲಾಖೆ ದಾಖಲಿಸಿಕೊಂಡು, ಆ ಮನೆಗಳ ಮೇಲೆ ವಿಶೇಷ ನಿಗಾವಹಿಸುವ ವ್ಯವಸ್ಥೆ ಕಲ್ಪಿಸಲಾಗುವುದು

ಇದನ್ನೂ ಓದಿ; ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು

ಬೀಟ್ ಪೊಲೀಸ್ ಸಿಬ್ಬಂದಿ ನಿಯಮಿತವಾಗಿ ಆ ಮನೆಗಳ ಸುತ್ತಮುತ್ತ ಗಸ್ತು ತಿರುಗಿ ಪರಿಶೀಲನೆ ನಡೆಸಲಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಕಂಡುಬಂದರೆ ತಕ್ಷಣ ಕ್ರಮಕೈಗೊಳ್ಳಲಾಗುತ್ತದೆ. ಇದರಿಂದ ಮನೆ ಕಳ್ಳತನ ಪ್ರಕರಣಗಳನ್ನು ತಡೆಯುವುದರ ಜೊತೆಗೆ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಹೆಚ್ಚಿಸುವ ಉದ್ದೇಶ ಇಲಾಖೆ ಹೊಂದಿದೆ. ಈ ಯೋಜನೆಯ ಮತ್ತೊಂದು ವಿಶೇಷ ಅಂಶವೆಂದರೆ ಸಾರ್ವಜನಿಕರ ಮತ್ತು ಪೊಲೀಸರ ನಡುವಿನ ನೇರ ಸಂಪರ್ಕ ಹಾಗೂ ವಿಶ್ವಾಸವನ್ನು ಬಲಪಡಿಸುವುದು. ಮನೆ ಖಾಲಿ ಇರುವ ಮಾಹಿತಿ ನೀಡಿದ ನಂತರ ಸಂಬಂಧಪಟ್ಟ ಬೀಟ್ ಅಧಿಕಾರಿಗಳು ಮನೆ ಮಾಲೀಕರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿದ್ದರೆ ತುರ್ತು ಮಾಹಿತಿ ನೀಡುತ್ತಾರೆ. ಕೆಲ ಪ್ರದೇಶಗಳಲ್ಲಿ ಪೊಲೀಸ್ ವಾಹನಗಳ ಮೂಲಕ ರಾತ್ರಿ ಪಹರೆ ಹೆಚ್ಚಿಸುವ ಯೋಜನೆಯೂ ರೂಪಿಸಲಾಗಿದೆ.

ಎಸ್​​​ಪಿ ಹರಿರಾಮ್‌ ಶಂಕರ್​​ ಹೇಳಿದ್ದಿಷ್ಟು

ಈ ಯೋಜನೆ ಕೇವಲ ಕಳ್ಳತನ ತಡೆಯುವ ಕಾರ್ಯಕ್ರಮವಲ್ಲ, ಬದಲಾಗಿ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಪ್ರಯತ್ನವಾಗಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸಿದರೆ ಅಪರಾಧ ಪ್ರಕರಣಗಳನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಎಸ್​​​ಪಿ ಹರಿರಾಮ್‌ ಶಂಕರ್​​ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗೆ ‘ಕೂಲ್’ ಅನುಭವ: ಉರಿಬಿಸಿಲಿನ ನಡುವೆ ನೆರಳಿನ ಆಸರೆ ನೀಡಿದ ಪರ್ಯಾಯ ಶೀರೂರು ಮಠ

ಒಟ್ಟಾರೆ, ಲಾಕ್ಡ್ ಹೌಸ್ ಬಿಟ್ ಸಿಸ್ಟಮ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಜನಸಾಮಾನ್ಯರ ಆಸ್ತಿಪಾಸ್ತಿಗಳಿಗೆ ಹೆಚ್ಚುವರಿ ಭದ್ರತೆಯ ಕವಚವಾಗುವ ನಿರೀಕ್ಷೆ ಮೂಡಿಸಿದೆ. ಮನೆಗಳಿಗೆ ಬೀಗ ಹಾಕಿ ಹೊರಗಡೆ ತೆರಳುವ ನಾಗರಿಕರಿಗೆ ಈ ಯೋಜನೆ ಹೆಚ್ಚಿನ ನೆಮ್ಮದಿ ನೀಡಲಿದ್ದು, ಕಳ್ಳರ ಚಟುವಟಿಕೆಗಳಿಗೂ ಬ್ರೇಕ್​ ಬೀಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿದೇಶದಲ್ಲಿ ನಡೆಯುವ ಟಿ20 ಲೀಗ್​ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್ – Kannada News | Rahul Dravid Co Owner of European T20 League Team; R. Ashwin Captains Dublin Guardians

ತಮ್ಮ ಕೋಚಿಂಗ್​ ಅಡಿಯಲ್ಲಿ ಟೀಂ ಇಂಡಿಯಾವನ್ನು 2024 ರ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ್ದ ಕನ್ನಡಿಗ ರಾಹುಲ್​ ದ್ರಾವಿಡ್ (Rahul Dravid) ಅದಾದ ಬಳಿಕ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದಾದ ನಂತರ ಐಪಿಎಲ್ (IPL) ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಆ ಹುದ್ದೆಗೂ ವಿದಾಯ ಹೇಳಿದ್ದರು. ಪ್ರಸ್ತುತ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್ ಲೋಕದತ್ತ ವಾಲಿರುವ ಗೋಡೆ, ವಿದೇಶದಲ್ಲಿ ನಡೆಯಲ್ಲಿರುವ ಟಿ20 ಲೀಗ್​ನಲ್ಲಿ ತಂಡವೊಂದಕ್ಕೆ ಸಹ ಮಾಲೀಕರಾಗಿದ್ದಾರೆ. ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ರಾಹುಲ್ ಮಾಲೀಕತ್ವದ ತಂಡಕ್ಕೆ ಆರ್. ಅಶ್ವಿನ್ ನಾಯಕನಾಗಿ ಆಯ್ಕೆಯಾಗಿದ್ದಾರೆ.

ವಾಸ್ತವವಾಗಿ ರಾಹುಲ್ ದ್ರಾವಿಡ್ ಐರ್ಲೆಂಡ್‌ನಲ್ಲಿ ನಡೆಯಲಿರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್​ನಲ್ಲಿ ತಂಡವನ್ನು ಖರೀದಿಸಿದ್ದಾರೆ. ರಾಹುಲ್ ದ್ರಾವಿಡ್ ಡಬ್ಲಿನ್ ಗಾರ್ಡಿಯನ್ಸ್‌ ತಂಡದ ಸಹ-ಮಾಲೀಕರಾಗಿದ್ದು, ಈ ತಂಡದ ಒಡೆತನ ಭಾರತೀಯ ಕಂಪನಿಯ ಕೈಯಲ್ಲಿದೆ. ದ್ರಾವಿಡ್ ಒಡೆತನದ ಈ ಡಬ್ಲಿನ್ ಗಾರ್ಡಿಯನ್ಸ್ ತಂಡಕ್ಕೆ ಭಾರತದ ಮಾಜಿ ಆಫ್-ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ಈ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.

ರಾಹುಲ್ ದ್ರಾವಿಡ್ ಪ್ರತಿಕ್ರಿಯೆ

ರಾಹುಲ್ ದ್ರಾವಿಡ್ ಭಾರತ ಪರ 164 ಟೆಸ್ಟ್ ಪಂದ್ಯಗಳು ಮತ್ತು 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಮಾತ್ರವಲ್ಲದೆ 2021 ರಿಂದ 2024 ರವರೆಗೆ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ಕ್ರಿಕೆಟ್​ನಲ್ಲಿ ಮತ್ತೊಂದು ಇನ್ನಿಂಗ್ಸ್ ಆರಂಭಿಸಿರುವ ದ್ರಾವಿಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್​ನಲ್ಲಿ ಭಾಗಿಯಾಗಿರುವುದು ನಿಜಕ್ಕೂ ಅದ್ಭುತವಾಗಿದೆ. ಯುರೋಪ್‌ನಲ್ಲಿ ಕ್ರಿಕೆಟ್‌ನ ಮೇಲಿನ ಉತ್ಸಾಹವನ್ನು ನಾನು ಯಾವಾಗಲೂ ಪ್ರೀತಿಸುತ್ತೇನೆ. ಆಟಗಾರರು ಆಟವನ್ನು ಆಡುವ ಉತ್ಸಾಹ ಅದ್ಭುತವಾಗಿದೆ ಎಂದಿದ್ದಾರೆ.

ದ್ರಾವಿಡ್ ತಂಡಕ್ಕೆ ಅಶ್ವಿನ್ ನಾಯಕ

ಭಾರತ ಕ್ರಿಕೆಟ್​ನೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿರುವ ರವಿಚಂದ್ರನ್ ಅಶ್ವಿನ್ ಗಾರ್ಡಿಯನ್ಸ್ ತಂಡದ ನಾಯಕರಾಗಿರುತ್ತಾರೆ. ಅಶ್ವಿನ್ ಐಪಿಎಲ್‌ನಿಂದಲೂ ನಿವೃತ್ತರಾಗಿರುವುದರಿಂದ ಅವರಿಗೆ ಪ್ರಪಂಚದಾದ್ಯಂತದ ಲೀಗ್‌ಗಳಲ್ಲಿ ಆಡಲು ಅವಕಾಶವಿದೆ. ಐರ್ಲೆಂಡ್, ಸ್ಕಾಟ್ಲೆಂಡ್ ಮತ್ತು ನೆದರ್‌ಲ್ಯಾಂಡ್ಸ್ ಕ್ರಿಕೆಟ್ ಮಂಡಳಿಗಳ ಸಹಯೋಗದೊಂದಿಗೆ ಇಟಿಪಿಎಲ್ ಅನ್ನು ಆಯೋಜಿಸಲಾಗುತ್ತಿದೆ.

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಲೀಗ್‌ನಲ್ಲಿ ಆಮ್ಸ್ಟರ್‌ಡ್ಯಾಮ್, ರೋಟರ್‌ಡ್ಯಾಮ್, ಬೆಲ್‌ಫಾಸ್ಟ್, ಡಬ್ಲಿನ್, ಗ್ಲ್ಯಾಸ್ಗೋ ಮತ್ತು ಎಡಿನ್‌ಬರ್ಗ್‌ ಎಂಬ ಆರು ತಂಡಗಳು ಸೇರಿವೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಈ ಲೀಗ್​ನ ಸೃಷ್ಟಿಕರ್ತರಾಗಿದ್ದು, ಅವರು ಭಾರತೀಯ ಖಾಸಗಿ ಕಂಪನಿಯಾದ ರೂಲ್ಸ್ ಸ್ಪೋರ್ಟ್ ಟೆಕ್ ಸಹಯೋಗದೊಂದಿಗೆ ಈ ಲೀಗ್ ಅನ್ನು ನಡೆಸಲಿದ್ದಾರೆ. ಪಂದ್ಯಾವಳಿಯು ಆಗಸ್ಟ್ 26 ರಿಂದ ಸೆಪ್ಟೆಂಬರ್ 20 ರವರೆಗೆ ನಡೆಯಲಿದ್ದು, ಮೊದಲ ಆವೃತ್ತಿಯ ಪಂದ್ಯಗಳು ದಿ ಹೇಗ್ ಮತ್ತು ಡಬ್ಲಿನ್‌ನಲ್ಲಿ ನಡೆಯಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಅಪ್ರೂವರ್ ಆಗುವ ಮನವಿಗೆ ಇಡಿ ತೀವ್ರ ವಿರೋಧ – Kannada News | Jacqueline Fernandez legal trouble ED opposes approver plea Sukesh Chandrasekhar case

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತಾನು ಅಪ್ರೂವರ್ (ಮಾಫಿ ಸಾಕ್ಷಿ) ಆಗಲು ಅನುಮತಿ ನೀಡಬೇಕೆಂದು ಜಾಕ್ವೆಲಿನ್ ಸಲ್ಲಿಸಿದ್ದ ಅರ್ಜಿಯನ್ನು ಜಾರಿ ನಿರ್ದೇಶನಾಲಯ (ED) ಸೋಮವಾರ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಬಲವಾಗಿ ವಿರೋಧಿಸಿದೆ. ಜಾಕ್ವೆಲಿನ್ ಈ ಪ್ರಕರಣದಲ್ಲಿ ಕೇವಲ ಸಂತ್ರಸ್ತೆಯಲ್ಲ, ಬದಲಿಗೆ ಅವರು ಅಪರಾಧದ ಹಣದ ಪ್ರಮುಖ ಫಲಾನುಭವಿ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

ಜಾಕ್ವೆಲಿನ್ ಅವರ ಪಾತ್ರವು ಸಣ್ಣ ಮಟ್ಟದ್ದಲ್ಲ. ಅವರು ಹಣ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳಿದೆ. ತನಿಖೆಯ ಉದ್ದಕ್ಕೂ ಜಾಕ್ವೆಲಿನ್ ಅಸಮರ್ಪಕ ಮತ್ತು ಅಸಮಂಜಸ ಹೇಳಿಕೆಗಳನ್ನು ನೀಡಿದ್ದಾರೆ. ನಗದು ವ್ಯವಹಾರಗಳು, ದುಬಾರಿ ಉಡುಗೊರೆಗಳು ಮತ್ತು ಬ್ಯಾಂಕ್ ವಹಿವಾಟುಗಳ ಬಗ್ಗೆ ಅವರು ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಇಡಿ ಆರೋಪಿಸಿದೆ.

ಸುಕೇಶ್ ಚಂದ್ರಶೇಖರ್ ಅವರ ಅಪರಾಧ ಹಿನ್ನೆಲೆ ತಿಳಿದಿದ್ದರೂ ಜಾಕ್ವೆಲಿನ್ ಅವರೊಂದಿಗೆ ಸಂಪರ್ಕ ಮುಂದುವರಿಸಿದ್ದರು. ಅವರಿಗೆ ನೀಡಲಾದ ದುಬಾರಿ ಉಡುಗೊರೆಗಳು ಮತ್ತು ಹಣಕಾಸಿನ ಸವಲತ್ತುಗಳು ಅಕ್ರಮ ಹಣದಿಂದಲೇ ಬಂದಿವೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ತನಿಖಾಧಿಕಾರಿಗಳು ಪುರಾವೆಗಳನ್ನು ಎದುರಿಟ್ಟಾಗ ಮಾತ್ರ ಅವರು ಕೆಲವು ವಿಷಯಗಳನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರನ್ನು ಅಪ್ರೂವರ್ ಆಗಿ ಪರಿಗಣಿಸುವುದು ಪ್ರಕರಣದ ಗಂಭೀರತೆಯನ್ನು ಕುಗ್ಗಿಸುತ್ತದೆ ಎಂದು ಇಡಿ ಹೇಳಿದೆ.

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ನಡೆಯುತ್ತಿರುವ ಈ ತನಿಖೆಯಲ್ಲಿ ತಾನು ಅಧಿಕಾರಿಗಳಿಗೆ ಸಹಕರಿಸಲು ಸಿದ್ಧವಿರುವುದಾಗಿ ಹೇಳಿದ್ದ ಜಾಕ್ವೆಲಿನ್, ಈ ಮೂಲಕ ಪ್ರಕರಣದಿಂದ ಸ್ವಲ್ಪ ಮಟ್ಟಿನ ವಿನಾಯಿತಿ ಪಡೆಯಲು ಯೋಜಿಸಿದ್ದರು. ಆದರೆ, ಇಡಿ ಸಲ್ಲಿರುವ ಈ ಆಕ್ಷೇಪಾರ್ಹ ವರದಿಯು ಜಾಕ್ವೆಲಿನ್ ಅವರ ಮುಂದಿನ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ.

ಇದನ್ನೂ ಓದಿ: ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ ಹೆಸರಲ್ಲಿ 25 ಕೋಟಿ ರೂ. ದೇಣಿಗೆ ನೀಡಿದ ಸುಕೇಶ್

ನಟಿ ಪಿಂಕಿ ಇರಾನಿ ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿದ ಇತರ ವ್ಯಕ್ತಿಗಳ ಜೊತೆಗಿನ ಒಡನಾಟದ ಬಗ್ಗೆಯೂ ಜಾಕ್ವೆಲಿನ್ ಫರ್ನಾಂಡಿಸ್ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ಇಡಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಈ ಬೆಳವಣಿಗೆಯಿಂದಾಗಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸದ್ಯಕ್ಕೆ ಕಾನೂನು ಸಂಕಷ್ಟದಿಂದ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿ​ಗೆ 30 ಶಾಸಕರ ಬೆಂಬಲ – Kannada News | AIADMK split into 2 Camps 17 MLAs back EPS as leader 30 others supporting Shanmugam

ನವದೆಹಲಿ, ಮೇ 11: ಎಐಎಡಿಎಂಕೆ ಪಕ್ಷ ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ. ಇದು ರಾಜಕೀಯ ವಲಯಗಳಲ್ಲಿ ಕುತೂಹಲ ಸೃಷ್ಟಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಎಐಎಡಿಎಂಕೆ ಕೇವಲ 47 ಸ್ಥಾನಗಳನ್ನು ಗೆದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಕಾರಣದಿಂದಾಗಿ ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಅವರ ಬಗ್ಗೆ ಅತೃಪ್ತರಾಗಿದ್ದಾರೆಂದು ಹೇಳಲಾಗುತ್ತಿದೆ. ಶಾಸಕಾಂಗ ಸಮಿತಿ ನಾಯಕನ ಸ್ಥಾನಕ್ಕೆ ಪಳನಿಸ್ವಾಮಿ ಅವರಿಗೆ ಎಐಎಡಿಎಂಕೆಯ ಕೇವಲ 17 ಶಾಸಕರು ಬೆಂಬಲ ಸೂಚಿಸಿದ್ದಾರೆ.

ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪಕ್ಷದ 30 ಶಾಸಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇಂದು ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗುತ್ತಿದ್ದಂತೆ ಎಐಎಡಿಎಂಕೆ ಶಾಸಕರು 2 ಗುಂಪುಗಳಾಗಿ ವಿಂಗಡಿಸಲ್ಪಟ್ಟು ವಿಧಾನಸಭೆಯೊಳಗೆ ಕುಳಿತಿದ್ದರು.

ಇದನ್ನೂ ಓದಿ: ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆಯೋ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು?

ಕಳೆದ ಕೆಲವು ದಿನಗಳಿಂದ ಎಐಎಡಿಎಂಕೆ 2 ಬಣಗಳಾಗಿ ವಿಭಜನೆಯಾಗಿದೆ ಎಂಬ ವರದಿಗಳು ಹೊರಬಿದ್ದಿವೆ. ಅಂದರೆ, 30 ಶಾಸಕರು ಸಿ.ವಿ. ಷಣ್ಮುಗಂ ನೇತೃತ್ವದ ಬಣದಲ್ಲಿದ್ದಾರೆ ಎಂದು ಹೇಳಲಾಗುತ್ತಿದ್ದರೆ, ಉಳಿದ ಶಾಸಕರು ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಸಿ.ವಿ. ಷಣ್ಮುಗಂ ನೇತೃತ್ವದಲ್ಲಿ 30 ಶಾಸಕರು ಎಡಪ್ಪಾಡಿ ಪಳನಿಸ್ವಾಮಿ ಅವರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ ಓ.ಎಸ್. ಮಣಿಯನ್ ನೇತೃತ್ವದಲ್ಲಿ ಕೇವಲ 17 ಶಾಸಕರು ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಶಾಸಕಾಂಗ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸ್ಪೀಕರ್ ಕರುಪ್ಪಯ್ಯ ಅವರಿಗೆ ಬೆಂಬಲ ಪತ್ರವನ್ನು ಸಲ್ಲಿಸಿದರು. ಉಳಿದ 30 ಶಾಸಕರು ಅವರನ್ನು ಬೆಂಬಲಿಸಲಿಲ್ಲ. ಈ ಹಿನ್ನೆಲೆಯಲ್ಲಿ ಕೆಲವು ಸಮಯದ ಹಿಂದೆ, ಸಿ.ವಿ. ಷಣ್ಮುಗಂ ನೇತೃತ್ವದ 30 ಶಾಸಕರು ಎಸ್.ಪಿ. ವೇಲುಮಣಿ ಅವರನ್ನು ಬೆಂಬಲಿಸಿ ಸ್ಪೀಕರ್‌ಗೆ ಬೆಂಬಲ ಪತ್ರವನ್ನು ಸಲ್ಲಿಸಿದರು. ಈ ಪತ್ರದಲ್ಲಿ ವೇಲುಮಣಿ ಅವರನ್ನು ಶಾಸಕಾಂಗ ಸಮಿತಿಯ ಅಧ್ಯಕ್ಷರನ್ನಾಗಿ ಮತ್ತು ಸಿ. ವಿಜಯಭಾಸ್ಕರ್ ಅವರನ್ನು ಪಕ್ಷದ ಸಚೇತಕರನ್ನಾಗಿ ಮಾಡಬೇಕೆಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ

ಇದಲ್ಲದೆ, ಸಿ.ವಿ. ಷಣ್ಮುಗಂ ನೇತೃತ್ವದ 30 ಎಐಎಡಿಎಂಕೆ ಶಾಸಕರು ತಮಿಳುನಾಡು ವೆಟ್ರಿ ಕಳಗಂ ನಾಯಕ ಮತ್ತು ಮುಖ್ಯಮಂತ್ರಿ ವಿಜಯ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಭೇಟಿ ಮಾಡಲು ಅವರು ಸಮಯ ಕೋರಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:31 pm, Mon, 11 May 26

Source link

ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health

ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ.  ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್‌ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು ತ್ಯಜಿಸುವ ಮೂಲಕ ಆರೋಗ್ಯಕ ಜೀವನವನ್ನು ನಡೆಸಿ.

ಆರೋಗ್ಯಕರ ಜೀವನಕ್ಕಾಗಿ ಇಂದೇ ಈ ಅಭ್ಯಾಸಗಳನ್ನು ತ್ಯಜಿಸಿ:

 ದೀರ್ಘಕಾಲದವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳುವುದು: ಅನೇಕ ಸಂದರ್ಭದಲ್ಲಿ ಹೆಚ್ಚಿನವರು ಮೂತ್ರವನ್ನು ತಡೆದಿಟ್ಟುಕೊಳ್ಳುತ್ತಾರೆ. ಆ ಕ್ಷಣಕ್ಕೆ ಇದರ ಪರಿಣಾಮ ಆರೋಗ್ಯದ ಮೇಲೆ ಬೀರದಿದ್ದರೂ ನಂತರದಲ್ಲಿ ಹಲವು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ವಾಸ್ತವವಾಗಿ, ಮೂತ್ರವು ಮೂತ್ರಕೋಶದಲ್ಲಿ ಸಿಕ್ಕಿಹಾಕಿಕೊಂಡಾಗ, ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯಬಹುದು, ಇದು ಮೂತ್ರನಾಳದ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಮೂತ್ರವನ್ನು ತಡೆದಿಟ್ಟುಕೊಳ್ಳುವ ಅಭ್ಯಾಸವನ್ನು ಬಿಟ್ಟು ಬಿಡಿ.

ಬಾಯಿ ತೆರೆದು ಮಲಗುವುದು: ಕೆಲವರು ಬಾಯಿ ತೆರೆದು ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಸಣ್ಣದಾಗಿ ಕಂಡರೂ ಇದು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ಬಾಯಿ ತೆರೆದು ಮಲಗುವುದರಿಂದ ನಿದ್ರೆಯ ಗುಣಮಟ್ಟ ಕಡಿಮೆಯಾಗಬಹುದು ಅಲ್ಲದೆ ಈ ಸ್ಥಿತಿಯು ಹೃದಯರಕ್ತನಾಳದ ಕಾಯಿಲೆ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ದೀರ್ಘಕಾಲ ತಪ ಸ್ಥಾನದಲ್ಲಿ ಕುಳಿತುಕೊಳ್ಳುವುದು: ದೀರ್ಘಕಾಲ ಒಂದೇ ಸ್ಥಾನದಲ್ಲಿ ಅಥವಾ  ತಪ್ಪು ಸ್ಥಾನದಲ್ಲಿ ಕುಳಿತುಕೊಳ್ಳುವುದು ಕೂಡ ಆರೋಗ್ಯಕ್ಕೆ ಹಾನಿಕಾರಕ. ಉದಾಹರಣೆಗೆ ದೀರ್ಘ ಕಾಲ ಬಾಗಿ ಕುಳಿತುಕೊಳ್ಳುವುದು ಅಥವಾ ಕೆಲಸ ಮಾಡುವುದು, ಇದು ಬೆನ್ನು ಮತ್ತು ಕುತ್ತಿಗೆಯ ಮೇಲೆ ಹೆಚ್ಚುವರಿ ಒತ್ತಡವನ್ನುಂಟು ಮಾಡುತ್ತದೆ. ಇದಲ್ಲದೆ, ದೀರ್ಘಕಾಲದವರೆಗೆ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವುದರಿಂದ ನಂತರ ಇದು ಕೀಲುಗಳ ಸಮಸ್ಯೆಗಳಿಗೂ ಕಾರಣವಾಗಬಹುದು.

ಶೌಚಾಲಯದಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದು:  ಹೆಚ್ಚಿನ ಜನರು ಮೊಬೈಲ್ ಫೋನ್ ನೋಡುತ್ತಾ ಶೌಚಾಲಯದಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಹೀಗೆ ದೀರ್ಘಕಾಲ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದಲ್ಲ. ಹೆಚ್ಚು ಹೊತ್ತು ಶೌಚಾಲಯದಲ್ಲಿ ಕುಳಿತುಕೊಳ್ಳುವುದರಿಂದ ರಕ್ತನಾಳಗಳ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ, ಇದು ಮೂಲವ್ಯಾಧಿ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಅಬ್ಬಬ್ಬಾ… ಮನೆಯಲ್ಲಿ ನಾಯಿ ಸಾಕುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

ಮುಖವನ್ನು ಆಗಾಗ್ಗೆ ಮುಟ್ಟುವುದು: ನಿಮ್ಮ ಮುಖವನ್ನು ಆಗಾಗ್ಗೆ ಸ್ಪರ್ಶಿಸುವ ಅಭ್ಯಾಸವಿದ್ದರೆ, ಇಂದೇ ಈ ಅಭ್ಯಾಸವನ್ನು ಬದಲಾಯಿಸಿ. ಏಕೆಂದರೆ ನಮ್ಮ ಕೈಗಳು ದಿನವಿಡೀ ಅನೇಕ ವಸ್ತುಗಳನ್ನು ಸ್ಪರ್ಶಿಸುತ್ತವೆ, ಅವು ಬ್ಯಾಕ್ಟೀರಿಯಾಗಳನ್ನು ಸಂಗ್ರಹಿಸುತ್ತವೆ. ಅದೇ ಕೈಗಳಿಂದ ನಿಮ್ಮ ಮುಖವನ್ನು ಸ್ಪರ್ಶಿಸುವುದರಿಂದ ಚರ್ಮದ ಸೋಂಕು, ದದ್ದುಗಳು ಮತ್ತು ಕಿರಿಕಿರಿ ಉಂಟಾಗುತ್ತದೆ.

ಅವಸರದಲ್ಲಿ ತಿನ್ನುವುದು: ನಮ್ಮಲ್ಲಿ ಅನೇಕರು ಆಹಾರವನ್ನು ಗಡಿಬಿಡಿಯಲ್ಲಿ ಬೇಗ ಬೇಗನೇ ತಿಂದು ಮುಗಿಸುತ್ತಾರೆ. ಈ ಅಭ್ಯಾಸ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಇದು ಅಗತ್ಯಕ್ಕಿಂತ ಹೆಚ್ಚು ತಿನ್ನುವಂತೆ ಮಾಡುತ್ತದೆ, ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ. ಹಾಗಾಗಿ ಯಾವಾಗಲೂ ನಿಧಾನವಾಗಿ ಜಗಿದು ಆಹಾರವನ್ನು ಸೇವಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

TV9 Kannada News Live: ಶೆಡ್​​ಗೆ ಬೆಂಕಿ ತಗುಲಿ ಮಕ್ಕಳಿಬ್ಬರು ದಹನ; ಬೆಟ್ಟದಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ – Kannada News | TV9 Kannada News Live: Two Children Die in Bengaluru Fire Accident; Engineer Dies by Suicide After Jumping Off Hill

ಅತ್ನಿ ಅವಘಡ, ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ Image Credit source: tv9 kannada

ಬೆಂಗಳೂರು, ಮೇ 11: ನಗರದ ಕೊತ್ತನೂರು ಸಮೀಪದ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ (fire tragedy) ತಗುಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅರ್ಜುನ್ (5) ಮತ್ತು ಆಶಾ (3) ಮೃತ ಮಕ್ಕಳು. ಮತ್ತೊಂದು ಪ್ರಕರಣದಲ್ಲಿ PWD ಸಹಾಯಕ ಇಂಜಿನಿಯರ್​​ ಬೆಟ್ಟದಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ಮಂಜುಪ್ರಸಾದ್​​ (33) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್​.

ನಡೆದಿದ್ದೇನು?

ದುರ್ಗಪ್ಪ ಮತ್ತು ಸಾವಿತ್ರಿ ದಂಪತಿ ಕಳೆದ ಆರು ತಿಂಗಳಿಂದ ಇಬ್ಬರು ಮಕ್ಕಳೊಂದಿಗೆ ನಾರಾಯಣಪುರದ ಶೆಡ್‌ಗಳಲ್ಲಿ ವಾಸವಾಗಿದ್ದರು. ಜೆಸಿಎಸ್ ಕಂಪನಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ, ಕಳೆದ ಒಂದು ವಾರದಿಂದ ಊರಿಗೆ ಹೋಗಿದ್ದರು. ಕೆಲಸ ಅಂತ ಇಂದು ಬೆಂಗಳೂರಿಗೆ ಮರಳಿದ್ದಾರೆ. ಕೆಲಸ ಮಾಡುವ ಸ್ಥಳಕ್ಕೆ ಮಕ್ಕಳನ್ನು ಕರೆದುಕೊಂಡು ಬರಬೇಡಿ ಎಂದು ಮೇಸ್ತ್ರಿ ಸೂಚಿಸಿದ್ದರಿಂದ ತಾಯಿ ಮಕ್ಕಳನ್ನು ಅಜ್ಜಿಯ ಜೊತೆ ಶೆಡ್‌ನಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು.

ಮಧ್ಯಾಹ್ನ ಸುಮಾರು 1 ಗಂಟೆಗೆ ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಬಹಿರ್ದೆಸೆಗೆ ಹೋಗಿದ್ದಾರೆ. ಅವರು ಹಿಂತಿರುಗಿ ಬರುವಷ್ಟರಲ್ಲಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ. ಸದ್ಯ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.

ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ

ಪಾವಗಡ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುಪ್ರಸಾದ್ (33) ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರಿನ ಸತ್ಯಮಂಗಲ ನಿವಾಸಿಯಾಗಿದ್ದ ಮಂಜುಪ್ರಸಾದ್, ಅವರ ತಾಯಿ ಒಂದೂವರೆ ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಂಜುಪ್ರಸಾದ್, ಕೊರಟಗೆರೆಯಲ್ಲಿ ಸಂಬಂಧಿಕರಿಗೆ ಮೊಬೈಲ್ ಮತ್ತು ಮನೆಯ ಕೀ ಕೊಟ್ಟಿದ್ದರು. ಬಳಿಕ ಮೀಟಿಂಗ್ ಇದೆ ಎಂದು ಹೇಳಿ ದೇವರಾಯನದುರ್ಗಕ್ಕೆ ಬಂದು ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನ ಓದಿ: ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ?

ಕುಟುಂಬಸ್ಥರು ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದ ಕೂಡಲೇ ಕ್ಯಾತ್ಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಹುಟ್ಟುಹಬ್ಬದ ದಿನವೇ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಹುಟ್ಟು ಹಬ್ಬದ ದಿನವೇ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಳಗಾವಿ ನಗರದ ಅಜಂ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರು ವಸತಿ ನಿಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಾವೇರಿ ಬಿಎಸ್‌ಸಿ ಅಂತಿಮ‌ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇನ್ನು ಮೂರು ತಿಂಗಳ ಹಿಂದಷ್ಟೇ ವಿದ್ಯಾರ್ಥಿನಿಗೆ ಎಂಗೇಜ್ಮೆಂಟ್ ಆಗಿತ್ತು. ಪೊಲೀಸ ಪೇದೆಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಬಳಿ ಕಾರ್ಯಕ್ರಮ ಆಯೋಜನೆ ವಿಚಾರಕ್ಕೆ ಗಲಾಟೆ: ಸೋದರರ ನಡುವೆ ಮಾರಾಮಾರಿ

ಮನೆ ಬಳಿ ಸಂಗೀತ ಕಾರ್ಯಕ್ರಮ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸೋದರರ ನಡುವೆ ಗಲಾಟೆ ನಡೆದು ಹಲ್ಲೆ ನಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲಗಾರ ವಡ್ಡು ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ ಮತ್ತು ನೆತ್ರಾವತಿ, ಮಂಜುನಾಥ್ ಹಾಗೂ ಭಾರತಿ ದಂಪತಿ ಮೇಲೆ ಕೋಲಿನಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ನಾಪತ್ತೆಯಾಗಿದ್ದ ದಲಿತ ಮಹಿಳೆ ಮೂರು ದಿನದ ಬಳಿಕ ಶವವಾಗಿ ಪತ್ತೆ: ಸಾವಿನ ಸುತ್ತ ಹತ್ತಾರು ಅನುಮಾನ

ಮನೆಯಂಗಳದಲ್ಲಿ ಸಂಗೀತ ಕಾರ್ಯಕ್ರಮ ಮಾಡಲು ಚಂದ್ರಶೇಖರ ಯೋಜಿಸಿದ್ದರು. ಆದರೆ ನಮಗೆ ವಯಸ್ಸಾಗಿದೆ, ಇಲ್ಲಿ ಬೇಡ ಎಂದು ಮಂಜುನಾಥ್ ವಿರೋಧ ವ್ಯಕ್ತಪಡಿಸಿದ್ದರು. ಆದರೂ ನಾವು ಇಲ್ಲೇ ಮಾಡುತ್ತೇವೆ ಎಂದು ಚಂದ್ರಶೇಖರ ಪಟ್ಟು ಹಿಡಿದಿದ್ದರು. ಈ ವಿವಾದಕ್ಕೆ ಸಂಬಂಧಿಸಿ ಮಂಜುನಾಥ್ ಠಾಣೆ ಮೆಟ್ಟಿಲೇರಿದ್ದರೂ ನ್ಯಾಯ ಸಿಕ್ಕಿರಲಿಲ್ಲ. ಪೊಲೀಸರಿಂದ ಚಂದ್ರಶೇಖರ್​​ಗೆ ಬೆಂಬಲ ಸಿಗುತ್ತಿದ್ದಂತೆ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೊನೆಯ ಎಸೆತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಆರ್​ಸಿಬಿಗೆ ಯಾವ ಸ್ಥಾನ? – Kannada News | IPL Last Ball Wins: RCB Now 4th After Raipur Victory Over Mumbai Indians

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್‌ನಲ್ಲಿ ಕೊನೆಯ ಎಸೆತದಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದುಕೊಂಡಿದೆ. ಚೆನ್ನೈ ತಂಡವು 2008 ರಲ್ಲಿ ಕೊನೆಯ ಎಸೆತದಲ್ಲಿ ಮೊದಲ ಗೆಲುವು ಸಾಧಿಸಿತು. ನಂತರ, 2012 ರಲ್ಲಿ ಮೂರು ಗೆಲುವು, 2019, 2020, 2021, 2022 ಮತ್ತು 2023 ರಲ್ಲಿಯೂ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿದೆ (PC- IPL X).

Source link

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1 – Kannada News | Mangaluru Kukke Subrahmanya Temple records Rs 167.89 crore annual income, retains top spot for 15th consecutive year

ಮಂಗಳೂರು, (ಮೇ 11): ಕರ್ನಾಟಕ ಮುಜರಾಯಿ ಇಲಾಖೆ (karnataka muzrai department) ಆಧೀನದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು (Kukke subramanya Temple) ಸತತ 15ನೇ ವರ್ಷವು ಸಹ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೌದು.. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರೋಬ್ಬರಿ 167.89 ಲಕ್ಷ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯವು ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಮೂಲಕ ಕಳೆದ 2024-25ನೇ ಸಾಲಿನ 155 ಕೋಟಿ ರೂ. ಆದಾಯವನ್ನು ಮೀರಿ ಸುಮಾರು 12 ಕೋಟಿ ರೂ. ಹೆಚ್ಚುವರಿ ಆದಾಯ ದಾಖಲಿಸಿದೆ.

  • 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ 167,89,09,080.77 ರು. ಆದಾಯ.
  • ಈ ಮೂಲಕ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಮುಜರಾಯಿ ದೇವಸ್ಥಾನಗಳ ಪೈಕಿ ಮೊದಲ ಸ್ಥಾನ.
  • 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ

2024-2025ನೇ ಸಾಲಿನಲ್ಲಿ 155.95 ಕೋಟಿ ರೂ. ಆದಾಯ ಗಳಿಸಿದ್ದ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಹಣಕಾಸು ವರ್ಷದಲ್ಲಿ 167.89 ಕೋಟಿ ರೂ. ದಾಖಲೆಯ ಆದಾಯ ಗಳಿಸುವ ಮೂಲಕ ಸತತ 15ನೇ ವರ್ಷವೂ ರಾಜ್ಯದ ನಂ.1 ಮುಜರಾಯಿ ದೇವಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಹರಕೆ, ಕಾಣಿಕೆ ಹುಂಡಿ, ಹೂಡಿಕೆಗಳಿಂದ ಬರುವ ಬಡ್ಡಿ ಆದಾಯದ ಪ್ರಮುಖ ಮೂಲಗಳಾಗಿವೆ.

ಇದನ್ನೂ ಓದಿ: ಅಂಜನಾದ್ರಿಗೆ 2 ಕೋಟಿ ರೂ. ಚಿನ್ನಾಭರಣ ಕಾಣಿಕೆ: ಹಲವು ಅನುಮಾನಗಳಿಗೆ ಕಾರಣವಾಯ್ತು ಉದ್ಯಮಿಯ ಬಿಲ್

ಪ್ರಥಮ ಬಾರಿಗೆ 167 ಕೋಟಿ ರೂ.ಗೂ ಅಧಿಕ ಆದಾಯ

ಒಟ್ಟು 167.89 ಕೋಟಿ ರೂಪಾಯಿ ಆದಾಯದಲ್ಲಿ 85,20,14,531.42 ರು. ಖರ್ಚಾಗಿದೆ. 2024-2025ನೇ ಸಾಲಿನಲ್ಲಿ 155 ಕೋಟಿ ರೂ ಆದಾಯ ಗಳಿಸಿತ್ತು. ಈ ಬಾರಿ 167,89,09,080.77 ರೂ. ಆದಾಯ ಗಳಿಸುವ ಮೂಲಕ ಈ ಆರ್ಥಿಕ ವರ್ಷದಲ್ಲಿ ಕಳೆದ ಆರ್ಥಿಕ ವರ್ಷದಿಂದ ಸುಮಾರು 12 ಕೋಟಿ ರೂ. ಅಧಿಕ ಆದಾಯ ಗಳಿಸಿದೆ. ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಬರುತ್ತದೆ. ಕಳೆದ 14 ವರ್ಷಗಳಿಂದ ನಿರಂತರವಾಗಿ ಆದಾಯ ಗಳಿಕೆಯಲ್ಲಿ ರಾಜ್ಯದ ನಂಬರ್ ದೇವಸ್ಥಾನವಾಗಿ ಹೊರ ಹೊಮ್ಮಿರುವ ಕುಕ್ಕೆ, 15ನೇ ವರ್ಷವೂ ತನ್ನ ಅಗ್ರಸ್ಥಾನವನ್ನು ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ.

ಯಾವುದರಿಂದ ಎಷ್ಟು ಆದಾಯ?

ಗುತ್ತಿಗೆಗಳಿಂದ 2,53,09,230.00 ರೂ., ಧಾನ್ಯಗಳ ಇಳುವರಿ ಮತ್ತು ತೋಟದ ಉತ್ಪನ್ನದಿಂದ 10,50,323.00 ರೂ., ಕಟ್ಟಡ ಮತ್ತು ಅಂಗಡಿಗಳ ಬಾಡಿಗೆಯಿಂದ 94,46,470.00 ರೂ., ಕಾಣಿಕೆಯಿಂದ 5,47,43,244.45 ರೂ., ಇ ಹುಂಡಿಯಿಂದ 38,01,676.80 ರೂ., ಕಾಣಿಕೆ ಹುಂಡಿಯಿಂದ 24,69,63,576.00 ರೂ, ಹರಿಕೆ ಸೇವೆಗಳಿಂದ 64,08,90,940.51 ರೂ., ಅನುದಾನದಿಂದ 1,67,956.00 ರೂ., ಹೂಡಿಕೆಯಿಂದ ಬಂದ ಬಡ್ಡಿ 49,11,07,412 ರೂ., ಉಳಿತಾಯ ಖಾತೆ ಹಾಗೂ ಇತರ ಬಡ್ಡಿ 41,80,588.00 ರೂ., ಸ್ವೀಪ್ ವ್ಯವಹಾದಿಂದ ಬಂದ ಬಡ್ಡಿ 12,90,390.00 ರೂ., ಇತರ ಬಾಬ್ತುಗಳು 3,20,31,937.00 ರೂ., ಛತ್ರ ಸಂರಕ್ಷಣಾ ವಂತಿಗೆ 6,93,66,026.00 ರೂ., ಅನ್ನಸಂತರ್ಪಣೆ ನಿಧಿಯಿಂದ 9,14,71,606.01 ರೂ., ಅಭಿವೃದ್ದಿ ನಿಧಿ 14,17,284.00 ರೂ., ಶಾಶ್ವತ ಸೇವಾ ಮೂಲ ಧನ 56,70,421 ರೂ. ಹೀಗೆ ಒಟ್ಟು 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ. ಆದಾಯ ದೇವಳಕ್ಕೆ ಬಂದಿದೆ.

ಯಾವ ವರ್ಷ ಎಷ್ಟು ಆದಾಯ?

2006-07ರಲ್ಲಿ ದೇವಳದ ಆದಾಯವು 19.76 ಕೋಟಿ ರೂ., 2007-08ರಲ್ಲಿ 24.44 ಕೋಟಿ ರೂ., 2008-09ರಲ್ಲಿ 31 ಕೋಟಿ ರೂ., 2009-10ರಲ್ಲಿ 38.51 ಕೋಟಿ ರೂ., 2011-12ರಲ್ಲಿ 56.24 ಕೋಟಿ ರೂ., 2012-13ರಲ್ಲಿ 66.76 ಕೋಟಿ ರೂ., 2013-14ರಲ್ಲಿ 68 ಕೋಟಿ ರೂ., 2014-15ರಲ್ಲಿ 77 ಕೋಟಿ 60 ಲಕ್ಷ ರೂ., 2015-16ರಲ್ಲಿ 88 ಕೋಟಿ 83 ಲಕ್ಷ, 2016-17ರಲ್ಲಿ 89 ಕೋಟಿ 65 ಲಕ್ಷ ರೂ., 2017-18ರಲ್ಲಿ 95 ಕೋಟಿ 92 ಲಕ್ಷ ರೂ., 2018-19ರಲ್ಲಿ 92 ಕೋಟಿ 09 ಲಕ್ಷ ರೂ, 2019-20ರಲ್ಲಿ 98 ಕೋಟಿ 92 ಲಕ್ಷ, 2020-21ರಲ್ಲಿ 68 ಕೋಟಿ 94 ಲಕ್ಷ., 2021-22 ರಲ್ಲಿ 72 ಕೋಟಿ 73 ಲಕ್ಷ, 2022-23ರಲ್ಲಿ 123 ಕೋಟಿ 64 ಲಕ್ಷ, 2023-24ನೇ ಸಾಲಿನಲ್ಲಿ 146 ಕೋಟಿ 1 ಲಕ್ಷ, 2024-25ನೇ ಸಾಲಿನಲ್ಲಿ 155 ಕೋಟಿ 95 ಲಕ್ಷ ಆದಾಯ ಗಳಿಸಿ ಸತತ 14 ವರ್ಷ ರಾಜ್ಯದ ನಂಬರ್ ವನ್ ಆದಾಯ ಗಳಿಕೆಯ ದೇವಸ್ಥಾನವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ.

ಟಿಎಂಸಿ ಪರವಾಗಿ ಹಾಜರಾದ ಹಿರಿಯ ವಕೀಲ ಕಲ್ಯಾಣ್ ಬ್ಯಾನರ್ಜಿ ನ್ಯಾಯಾಲಯಕ್ಕೆ ತಿಳಿಸಿದ್ದು, ಕನಿಷ್ಠ 31 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಐಆರ್ ಪ್ರಕ್ರಿಯೆಯ ಸಮಯದಲ್ಲಿ ತೆಗೆದುಹಾಕಲಾದ ಮತದಾರರ ಸಂಖ್ಯೆಗಿಂತ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ. ಒಬ್ಬ ಟಿಎಂಸಿ ಅಭ್ಯರ್ಥಿ ಕೇವಲ 862 ಮತಗಳಿಂದ ಸೋತಿದ್ದಾರೆ, ಆ ಕ್ಷೇತ್ರವೊಂದರಲ್ಲೇ 5,000ಕ್ಕೂ ಹೆಚ್ಚು ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವಿನ ಒಟ್ಟಾರೆ ಮತಗಳ ವ್ಯತ್ಯಾಸವು ಸುಮಾರು 32 ಲಕ್ಷ ಮತಗಳಾಗಿದ್ದು, ಮತದಾರರ ಹೆಸರುಗಳನ್ನು ತೆಗೆದುಹಾಕುವುದನ್ನು ಪ್ರಶ್ನಿಸುವ 35 ಲಕ್ಷಕ್ಕೂ ಹೆಚ್ಚು ಮೇಲ್ಮನವಿಗಳು ಇನ್ನೂ ವಿಲೇವಾರಿಗೆ ಬಾಕಿ ಇವೆ ಎಂದು ಅವರು ವಾದಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠವು ಈ ವಿಷಯವನ್ನು ವಿಚಾರಣೆ ನಡೆಸಿತು. ಸೋಲಿನ ಅಂತರವು ಡಿಲೀಟ್ ಮಾಡಲಾದ ಮತದಾರರ ಸಂಖ್ಯೆಗಿಂತ ನಿಜವಾಗಿಯೂ ಕಡಿಮೆಯಿದ್ದರೆ, ಬಾಧಿತ ಪಕ್ಷಗಳು ನ್ಯಾಯಾಲಯದ ಮುಂದೆ ಸೂಕ್ತ ಅರ್ಜಿಯನ್ನು ಸಲ್ಲಿಸಲು ಮುಕ್ತವಾಗಿವೆ ಎಂದು ಪೀಠವು ಹೇಳಿದೆ.

ಇದನ್ನೂ ಓದಿ: West Bengal CM: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿ, 207 ಸ್ಥಾನಗಳಲ್ಲಿ ಜಯ ಗಳಿಸಿತು. ಈ ಮೂಲಕ ಟಿಎಂಸಿಯ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದುಕೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version