Headlines

TV9 Kannada News Live: ಅನಿಲ್ ಅಂಬಾನಿಗೆ ಇಡಿ ಭಾರಿ ಬಿಗ್ ಶಾಕ್; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 10 August 2026 Monsoon, Bengaluru UB City Hotel Raids, Politics Cinema Latest Updates Online

Breaking News Today Live Updates in Kannada: ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದಲ್ಲಿ 295 ಪೊಲೀಸರ 23 ವಿಶೇಷ ತಂಡಗಳು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ, ಸೂಕ್ತ ದಾಖಲೆಗಳಿಲ್ಲದ 15 ಬಾಂಗ್ಲಾದೇಶಿ ಪ್ರಜೆಗಳನ್ನು ಬೇಗೂರು ಹಾಗೂ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ಯುಬಿ ಸಿಟಿಯ 5 ಹೋಟೆಲ್‌ಗಳ ಮೇಲೆ ದಾಳಿ ನಡೆಸಿದ್ದು, ಸ್ಕೈ ಹೋಟೆಲ್‌ನಲ್ಲಿ 51 ಕೆಜಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆ ಅಡುಗೆಮನೆ ಸೀಲ್ ಮಾಡಿದ್ದಾರೆ. ರಾಯಲ್ ಚೈನ್‌ನಲ್ಲೂ 55 ಕೆಜಿ ಮಾಂಸ ಜಪ್ತಿ…

Read More

ಭಾರತದಲ್ಲೇ 500 ಕೋಟಿ ರೂಪಾಯಿ ಕ್ಲಬ್ ಸೇರಿದ ಸ್ಪೈಡರ್ ಮ್ಯಾನ್ – Kannada News | Spider Man Brand New Day Enters Rs 500 Crore Club In India Box Office

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ (Spider Man) ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ. ಈ ಸಿನಿಮಾ 11 ದಿನ ಪೂರೈಸಿದೆ. ಇಂದಿನ ಗಳಿಕೆಯನ್ನು ಸೇರಿಸಿದರೆ, ಭಾರತದಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್ 500 ಕೋಟಿ ರೂಪಾಯಿ ಗಡಿಯನ್ನು ದಾಟಲಿದೆ. ಈ ಮೂಲಕ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಅಧಿಕೃತವಾಗಿ 500 ಕೋಟಿ ರೂಪಾಯಿ ಕ್ಲಬ್ ಸೇರಿದ ಸಾಧನೆ ಮಾಡಿದೆ. ಚಿತ್ರದ ದಿನದ ಗಳಿಕೆಯನ್ನು ಗಮನಿಸಿದರೆ, ಮೊದಲ ದಿನವೇ 60.60 ಕೋಟಿ…

Read More

ಟರ್ಕಿ ಮತ್ತು ಪಾಕಿಸ್ತಾನದೊಂದಿಗಿನ ಸೌದಿ ರಕ್ಷಣಾ ಒಪ್ಪಂದದ ನಂತರ ಸೌದಿ ಅರಾಮ್ಕೋ ತೈಲ ಸಂಸ್ಕರಣಾಗಾರದ ಮೇಲೆ ಭೀಕರ ಡ್ರೋನ್ ದಾಳಿ – Kannada News | Saudi Aramco Jizan Targeted: Houthi Drone Strike Escalates Yemen Saudi Tensions

ಸೌದಿ ಅರೇಬಿಯಾ, ಆ.10: ಯೆಮೆನ್‌ನ ಇರಾನ್ ಬೆಂಬಲಿತ ‘ಹೌತಿ’ (Houthi) ಬಂಡುಕೋರರು ಸೌದಿ ಅರೇಬಿಯಾದ ನೈಋತ್ಯ ಭಾಗದಲ್ಲಿರುವ ಪ್ರಮುಖ ತೈಲ ಸಂಸ್ಥೆ ‘ಸೌದಿ ಅರಾಮ್ಕೋ’ದ ಜಿಜಾನ್ (Jazan) ಸಂಸ್ಕರಣಾಗಾರದ ಮೇಲೆ ರವಿವಾರ ಭೀಕರ ಡ್ರೋನ್ ದಾಳಿ ನಡೆಸಿದ್ದಾಗಿ ಹೊಣೆ ಹೊತ್ತುಕೊಂಡಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಸೌದಿಯ ಇಂಧನ ಮೂಲಸೌಕರ್ಯದ ಮೇಲೆ ಬಂಡುಕೋರರು ನಡೆಸಿದ ಎರಡನೇ ಪ್ರಮುಖ ದಾಳಿ ಇದಾಗಿದೆ. ಹೌತಿ ಸೇನಾ ವಕ್ತಾರ ಯಹ್ಯಾ ಸಾರಿ (Yahya Saree) ಮಾತನಾಡಿ, “ಜಿಜಾನ್‌ನಲ್ಲಿರುವ ಅರಾಮ್ಕೋ ತೈಲ ಸಂಸ್ಕರಣಾಗಾರದ ಮೇಲೆ…

Read More

Rukmini Vasanth: ‘ಟಾಕ್ಸಿಕ್’ ಚಿತ್ರಕ್ಕಾಗಿ ರುಕ್ಮಿಣಿ ಪಡೆದ ಸಂಭಾವೆ ವಿಷಯ ರಿವೀಲ್ – Kannada News | Rukmini Vasanth Charges Massive Remuneration For Yash Starrer Toxic Movie

ಕನ್ನಡ ಚಿತ್ರರಂಗದ ಖ್ಯಾತ ನಟಿಯರಲ್ಲಿ ರುಕ್ಮಿಣಿ ವಸಂತ್ ಒಬ್ಬರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದಲ್ಲಿ  (Toxic Movie) ಮೆಲಿಸ್ಸಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಗ್ಲಿಂಪ್ಸ್‌ನಲ್ಲಿ ರುಕ್ಮಿಣಿ ಲುಕ್ ಅಪಾರ ಗಮನ ಸೆಳೆದಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರದಲ್ಲಿ ಅವರ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾದಲ್ಲಿ ಅವರನ್ನು ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ. ‘ಟಾಕ್ಸಿಕ್’ ಚಿತ್ರಕ್ಕಾಗಿ ರುಕ್ಮಿಣಿ ಸುಮಾರು 3 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು…

Read More

ರಸ್ತೆ ಗುಂಡಿಯಲ್ಲಿ ‘ಕೆರೆ-ದಂಡೆ’ ಆಟ: ಹಾಳಾದ ರಸ್ತೆ ವಿರುದ್ಧ ಯುವಕರ ವಿಶಿಷ್ಟ ಪ್ರತಿಭಟನೆ – Kannada News | Mangaluru Roads: Pothole ‘Kere Dande’ Protest by Youth Demands Immediate Repair

ಮಂಗಳೂರು, ಆ.10: ರಸ್ತೆಯಲ್ಲಿ ಬಿದ್ದಿರುವ ಬೃಹತ್ ಗುಂಡಿ ಹಾಗೂ ಅದರಲ್ಲಿ ನಿಂತಿರುವ ಕೆಸರು ನೀರಿಗೆ ಆಡಳಿತದ ಗಮನ ಸೆಳೆಯಲು ಯುವಕರ ಗುಂಪೊಂದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ರಸ್ತೆಯ ಸ್ಥಿತಿ ಶೋಚನೀಯವಾಗಿದ್ದು, ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಳ್ಳದಿರುವುದನ್ನು ಖಂಡಿಸಿ, ಸ್ಥಳೀಯ ಯುವಕರು ಈ ರಸ್ತೆ ಗುಂಡಿಯನ್ನೇ ಅಂಗಳವನ್ನಾಗಿ ಮಾಡಿಕೊಂಡು ‘ಕೆರೆ-ದಂಡೆ’ ಆಟವಾಡುವ ಮೂಲಕ ತಮ್ಮ ಆಕ್ರೋಶ ಹಾಗೂ ವಿಡಂಬನಾತ್ಮಕ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ….

Read More

Bidadi Township: ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ ದೇವೇಗೌಡರ ಸಾಥ್ – Kannada News | JDS Padayatra Bidadi Township Protest: Deve Gowda Joins Day 2 March Against Greater Bengaluru Project

ಬೆಂಗಳೂರು, ಆಗಸ್ಟ್ 10: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜನತಾ ದಳ (ಸೆಕ್ಯುಲರ್) ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೆಂಬಲವೂ ದೊರೆತಿದೆ. ನಿಖಿಲ್ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ಇಂದು 16 ಕಿಲೋಮೀಟರ್ ದೂರ ಹೆಜ್ಜೆ ಹಾಕಲಿದ್ದಾರೆ. ಪಾದಯಾತ್ರೆಯು ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯಿಂದ ಮೈಸೂರು ರಸ್ತೆ ನೈಸ್ ಜಂಕ್ಷನ್ ವರೆಗೆ ಸಾಗಲಿದೆ. ನಿನ್ನೆ, ಪಾದಯಾತ್ರೆಯ ಮೊದಲ…

Read More

ಸ್ಟಾರ್ ಗುರುತಿಗೆ ಸ್ಪಷ್ಟನೆ ನೀಡಿದ ವಿವಿಎಸ್ ಲಕ್ಷ್ಮಣ್! – Kannada News | VVS Laxman Breaks Silence on India Stars’ Injury Setbacks Ahead of SL Test Series

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾವನ್ನು ಕಾಡುತ್ತಿರುವ ಇಂಜುರಿ ತಲೆನೋವಿನ ಬಗ್ಗೆ ಬಿಸಿಸಿಐ ತರಬೇತಿ ಕೇಂದ್ರದ (CoE) ಮುಖ್ಯಸ್ಥ ಹಾಗೂ ಭಾರತದ ಮಾಜಿ ದಿಗ್ಗಜ ಬ್ಯಾಟರ್ ವಿವಿಎಸ್ ಲಕ್ಷ್ಮಣ್ ಕೊನೆಗೂ ಮೌನ ಮುರಿದಿದ್ದಾರೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್, ನಿತೀಶ್ ರೆಡ್ಡಿ ಅವರಂತಹ ಆಲ್‌ರೌಂಡರ್‌ಗಳ ದೈಹಿಕ ಸಾಮರ್ಥ್ಯದ ಸವಾಲುಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗೆಯೇ ಆಸ್ಟರ್‌ರಿಸ್ ಚಿಹ್ನೆ ಯಾಕೆ ನೀಡುತ್ತಿದ್ದೇವೆ ಎಂಬುದಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಿತೀಶ್ ಬ್ಯಾಟಿಂಗ್ ಮತ್ತು ಬೌಲಿಂಗ್…

Read More

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ತೀವ್ರ ಕಾರ್ಯಾಚರಣೆ: 15 ಬಾಂಗ್ಲಾದೇಶಿಗರ ಬಂಧನ – Kannada News | 15 Bangladeshi Nationals Arrested in Bengaluru During Special Police Drive Against Illegal Immigrants

ಬೆಂಗಳೂರು, ಆಗಸ್ಟ್ 10: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಪೊಲೀಸರು ಶನಿವಾರ ಮುಂಜಾನೆ ಹಠಾತ್ ಜಂಟಿ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ 15 ಬಾಂಗ್ಲಾದೇಶಿ (Bangladeshi) ಪ್ರಜೆಗಳನ್ನು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ ವ್ಯಾಪ್ತಿಯಲ್ಲಿ ಈ ವಿಶೇಷ ಪರಿಶೀಲನಾ ಕಾರ್ಯಾಚರಣೆ ನಡೆದಿದ್ದು, ಅಕ್ರಮ ವಲಸಿಗರ ಪತ್ತೆಗಾಗಿ ಪೊಲೀಸರು ಬೃಹತ್ ಜಾಲ ಬೀಸಿದ್ದಾರೆ. 29 ಸ್ಥಳಗಳ ಮೇಲೆ ಏಕಕಾಲಕ್ಕೆ ಮುಂಜಾನೆ ದಾಳಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಗುರುತಿಸಲು ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ…

Read More

ವೇದಿಕೆ ಮೇಲೆ ನಟಿಗೆ ಲಿಪ್​​ಲಾಕ್ ಮಾಡಿದ ಅಭಿಮಾನಿ; ತಳ್ಳಿದರೂ ಬಿಡದ ಫ್ಯಾನ್ – Kannada News | Nikita Rawal Shocked as Female Fan Kisses Her on the Lips During Red Carpet Event

ರೆಡ್ ಕಾರ್ಪೆಟ್ ಕಾರ್ಯಕ್ರಮಗಳು ಯಾವಾಗಲೂ ಝಗಮಗಿಸುತ್ತವೆ. ಆದರೆ ಕೆಲವೊಮ್ಮೆ ಇಲ್ಲಿ ನಟಿಯರಿಗೆ ಕಹಿ ಅನುಭವಗಳೂ ಎದುರಾಗುತ್ತವೆ. ‘ಗರಂ ಮಸಾಲಾ’ ಸಿನಿಮಾ ಖ್ಯಾತಿಯ ನಟಿ ನಿಕಿತಾ ರಾವಲ್ ಅವರಿಗೆ ಇತ್ತೀಚೆಗೆ ಇಂತಹದ್ದೇ ಒಂದು ಶಾಕಿಂಗ್ ಘಟನೆ ನಡೆದಿದೆ. ವೇದಿಕೆಯ ಮೇಲೆ ಅಭಿಮಾನಿಯೊಬ್ಬಳು ನಿಕಿತಾಗೆ ಹಠಾತ್ತಾಗಿ ಲಿಪ್ ಕಿಸ್ ಕೊಟ್ಟಿದ್ದಾಳೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಸ್ತುತ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ನಿಕಿತಾ ರಾವಲ್ ರೆಡ್ ಕಾರ್ಪೆಟ್ ಮೇಲೆ ಪೋಸ್ ನೀಡುತ್ತಿದ್ದರು. ಛಾಯಾಗ್ರಾಹಕರು…

Read More

ಸಿರಾಜ್ ಸಿಡಿಲಬ್ಬರ…. ಬ್ಯಾಟ್ ಚೆಕ್ ಮಾಡಿದ ಶ್ರೀಲಂಕಾ ಆಟಗಾರರು! – Kannada News | Sri Lankan Players Playfully Check Siraj’s Bat After Cameo

ಭಾರತ ಮತ್ತು ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಕೊಲಂಬೊದಲ್ಲಿ ನಡೆದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಶ್ರೀಲಂಕಾ ಇಲೆವೆನ್​ ವಿರುದ್ಧ ನಡೆದ ಈ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಿರಾಜ್ ಕೇವಲ 15 ಎಸೆತಗಳಲ್ಲಿ 32 ರನ್ ಚಚ್ಚುವ ಮೂಲಕ ಟೀಮ್ ಇಂಡಿಯಾಗೆ ರೋಚಕ ಜಯ ತಂದುಕೊಟ್ಟಿದ್ದರು. ಸಿರಾಜ್ ಸಿಡಿಲಬ್ಬರ: ಕೊಲಂಬೊದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ…

Read More