Headlines

PM Modi Speech Live ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಗೆದ್ದ ಬಿಜೆಪಿ, ಮೋದಿ ಭಾಷಣದ ನೇರಪ್ರಸಾರ – Kannada News | PM Narendra Modi Speech on BJP Victory in West Bengal, Assam, Puducherry Assembly Election Latest News in Kannada

ನವದೆಹಲಿ, (ಮೇ 04): ಪಂಚ ರಾಜ್ಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಬಹುತಮದತ್ತ ಪಡೆದುಕೊಂಡಿದೆ. ಇನ್ನು ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಭರ್ಜರಿ ಗೆಲುವಿನತ್ತ ಸಾಗುತ್ತಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಬಹುಮತ ಪಡೆದಕೊಂಡಿದ್ದು, ಇದರೊಂದಿಗೆ 15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇನ್ನು ಈ ಅಭೂತ ಪೂರ್ವ ಗೆಲುವನ್ನು…

Read More

Optical Illusion: ಈ ಚಿತ್ರದಲ್ಲಿ o ಅಕ್ಷರಗಳ ನಡುವೆ ಇರುವ ಸೊನ್ನೆಯನ್ನು ಗುರುತಿಸಬಲ್ಲಿರಾ – Kannada News | Optical illusion: If your eyes are sharp, can you tell where the zero is in this picture

ಆಪ್ಟಿಕಲ್‌ ಇಲ್ಯೂಷನ್‌ Image Credit source: Tv9 Telugu ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮ ನೀಡುವುದು ಮಾತ್ರವಲ್ಲ, ಬುದ್ಧಿವಂತಿಕೆಗೆ ಸವಾಲಾಗಿದೆ. ಈ ಇಲ್ಯೂಷನ್ ಚಿತ್ರವನ್ನು ನೋಡುವಾಗ ಸುಲಭವಾಗಿ ಕಂಡರೂ ಒಗಟು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದೀಗ ವೈರಲ್ ಆಗಿರುವ ಒಗಟಿನ ಚಿತ್ರದಲ್ಲಿ o ಅಕ್ಷರಗಳ ನಡುವೆ ಅಡಗಿರುವ ಸೊನ್ನೆಯನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯಾವಕಾಶ 10 ಸೆಕೆಂಡುಗಳು ಮಾತ್ರ…

Read More

‘ಸರ್ವಮ್ ಮಾಯಾ’ ಚಿತ್ರದಲ್ಲಿ ಅಂಥದ್ದೇನಿದೆ? ಕ್ಲೈಮ್ಯಾಕ್ಸ್ ಅರ್ಥವೇನು? – Kannada News | Nivin Pauly’s Comeback: Sarvam Maya Review and Why It’s a Must Watch on Hotstar

ನಿವೀನ್ ಪೌಳಿ (Nivin Pauly) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಆದರೆ, ಅವರಿಗೆ ಇತ್ತೀಚೆಗೆ ಗೆಲುವು ಸಿಕ್ಕಿರಲಿಲ್ಲ. ಆದರೆ, ‘ಸರ್ವಮ್ ಮಾಯಾ’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅಂಥದ್ದೇನಿದೆ? ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದು ಏಕೆ? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿದೆ ಉತ್ತರ. ಈ ಸಿನಿಮಾ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ ಜೊತೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಪ್ರಭೇಂದು (ನಿವೀನ್ ಪೌಳಿ) ದೊಡ್ಡ ಗಿಟಾರ್ ವಾದಕ ಆಗಬೇಕು…

Read More

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್ – Kannada News

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ. ‘ಡಾನ್ 3’ ಚಿತ್ರದ…

Read More

ಒಂದೇ ಓವರ್​ನಲ್ಲಿ 3 ವಿಕೆಟ್​: ಟೀಮ್ ಇಂಡಿಯಾಗೆ ರೋಚಕ ಜಯ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡ ರೋಚಕ ಜಯ ಸಾಧಿಸಿದೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರುತುರಾಜ್ ಗಾಯಕ್ವಾಡ್ (101) ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ಎ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 277 ರನ್​ ಕಲೆಹಾಕಿತು. 278 ರನ್​ಗಳ ಗುರಿ…

Read More

ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್​​: ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದ ಬಮೂಲ್

ಬೆಂಗಳೂರು, ಮಾರ್ಚ್​​ 12: ಬೆಂಗಳೂರು ಸಹಕಾರ ಹಾಲು ಒಕ್ಕೂಟ (BAMUL) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿದೆ. ಸರ್ಕಾರದಿಂದಲೂ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಬಮೂಲ್​ನಿಂದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ ಮಾರ್ಚ್ 31ವರೆಗೆ ಹಾಲು ಹಾಕಿರುವವರಿಗೆ ಇದು ಲಭ್ಯವಾಗಲಿದೆ. ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು  ಇನ್ನು ಈ ಬಗ್ಗೆ ಬಮೂಲ್​ ಅಧ್ಯಕ್ಷ ಡಿ.ಕೆ.ಸುರೇಶ್​​ ಪ್ರತಿಕ್ರಿಯಿಸಿದ್ದು,…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!

ಗದಗ, ಜುಲೈ 15: ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಕ್ಷೇತ್ರದ…

Read More

ಹಾವೇರಿ: ಧಗಧಗನೆ ಹೊತ್ತಿ ಉರಿದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಜಸ್ಟ್ ಮಿಸ್ – Kannada News | Haveri Bus Fire Accident: 17 Passengers Escaped Narrowly as KSRTC Pallakki Bus Caught Fire Near Ranebennur

ಹಾವೇರಿ, ಮೇ 5: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ…

Read More

ನಾವು ಫ್ರೆಂಡ್ಸ್; ಭಾರತ ಸೇರಿದಂತೆ 5 ದೇಶಗಳಿಗೆ ಹಾರ್ಮುಜ್ ಪ್ರವೇಶಕ್ಕೆ ಇರಾನ್ ಅನುಮತಿ

ಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಮಧ್ಯೆ ಇರಾನ್ ಭಾರತಕ್ಕೆ ಗುಡ್ ನ್ಯೂಸ್ ನೀಡಿದೆ. ಇಂಧನ ಹಡಗುಗಳ ಸಾಗಾಟಕ್ಕೆ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿಯೊಳಗೆ (Strait of Hormuz) ಪ್ರವೇಶಿಸಲು ಭಾರತಕ್ಕೆ ಅನುಮತಿ ನೀಡಲಾಗಿದೆ. ವಿಶ್ವದ ತೈಲದ ಐದನೇ ಒಂದು ಭಾಗದಷ್ಟು ಹಡಗುಗಳ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿರುವ ಪರ್ಷಿಯನ್ ಕೊಲ್ಲಿಯ ಕಿರಿದಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಕಳೆದ ತಿಂಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ ಇರಾನ್ ಬಂದ್ ಮಾಡಿತ್ತು. ಇದೀಗ…

Read More