Headlines

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ – Kannada News | Tamil Nadu CM Vijay meets DMK President MK Stalin at their residence

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸಿಎಂ ವಿಜಯ್ ಅವರನ್ನು ಆತ್ಮೀಯವಾಗಿ ಮನೆಗೆ ಸ್ವಾಗತಿಸಿದರು. ಹಸ್ತಲಾಘವ ನೀಡುವ ಮೂಲಕ ವಿಜಯ್ ಅವರಿಗೆ ಸ್ವಾಗತ ನೀಡಿದ ಸ್ಟಾಲಿನ್ ಬಳಿಕ ಹೂಗುಚ್ಛ ನೀಡಿ, ರೇಷ್ಮೆ ಶಾಲು ಹೊದಿಸಿದರು. ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ…

Read More

ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ – Kannada News | Sunil Bharti Mittal urges India companies to double down on investments

ಸುನಿಲ್ ಭಾರ್ತಿ ಮಿತ್ತಲ್Image Credit source: PTI ನವದೆಹಲಿ, ಮೇ 11: ಜಾಗತಿಕವಾಗಿ ಪಶ್ಚಿಮ ಏಷ್ಯಾದಲ್ಲಿ (Middle East) ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದರೂ, ಭಾರತೀಯ ಉದ್ಯಮಿಗಳು ಹಿಂಜರಿಯದೆ ದೇಶದ ಒಳಗಿನ ಹೂಡಿಕೆಯನ್ನು ದುಪ್ಪಟ್ಟುಗೊಳಿಸಬೇಕು ಎಂದು ಭಾರ್ತಿ ಎಂಟರ್‌ಪ್ರೈಸಸ್ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ (Sunil Bharti Mittal) ಅವರು ಕರೆ ನೀಡಿದ್ದಾರೆ. ಜಾಗತಿಕ ಹೊಯ್ದಾಟಗಳ ನಡುವೆ ಭಾರತೀಯ ಆರ್ಥಿಕ ಬೆಳವಣಿಗೆ ಸರಾಗವಾಗಿ ಮುಂದುವರಿಯುವಂತಾಗಲು ಉದ್ಯಮಗಳು ದೊಡ್ಡ ಪಾತ್ರ ವಹಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು…

Read More

IPL 2026: ಗೇಲಿ ಮಾಡಿದ್ದ ಕೆಕೆಆರ್​ಗೆ ತಕ್ಕ ತಿರುಗೇಟು ನೀಡುತ್ತಾ ಆರ್​ಸಿಬಿ? – Kannada News | IPL 2026: RCB vs KKR Match 57 Playoff Hopes and Revenge Battle Heats Up!

ಐಪಿಎಲ್ 2026 (IPL 2026) ರ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR)​ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಅದರಲ್ಲೂ ಆರ್​ಸಿಬಿಗೆ ಹೋಲಿಸಿದರೆ, ಕೆಕೆಆರ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದರಷ್ಟೇ ಕೆಕೆಆರ್​ಗೆ ಪ್ಲೇಆಫ್ ಕನಸು ಜೀವಂತ, ಇಲ್ಲದಿದ್ದರೆ ಅದು ಕೂಡ ಲೀಗ್ ಹಂತದಲ್ಲೇ ಹೊರಬೀಳಲಿದೆ. ಹೀಗಾಗಿ ರಹಾನೆ ಪಡೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಆರ್​ಸಿಬಿ,…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ – Kannada News | Sringeri postal vote controversy: supreme Court Stays On Karnataka Hight Recount Order

ನವದೆಹಲಿ, (ಮೇ 11): ಶೃಂಗೇರಿ (sringeri) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ (supreme Court) ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ (Karnataka High Court) ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮೊನ್ನೆ ಅಷ್ಟೇ ಮರು…

Read More

ಕನ್ನಡದ ಕಲಾವಿದರು ನಟಿಸಿದ ‘ಕೃಷ್ಣಾವತಾರಂ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ – Kannada News | Sushmitha Bhat Karthik Jayaram starrer Krishnavataram movie declared Tax Free in Uttar Pradesh

ಪೌರಾಣಿಕ ಕಥಾಹಂದರ ಹೊಂದಿರುವ ‘ಕೃಷ್ಣಾವತಾರಂ’ (Krishnavataram) ಚಿತ್ರಕ್ಕೆ ಈಗ ದೊಡ್ಡ ಮನ್ನಣೆ ಸಿಕ್ಕಿದೆ. ಚಿತ್ರದ ಸಾಂಸ್ಕೃತಿಕ ಮಹತ್ವ ಮತ್ತು ಜನಪ್ರಿಯತೆಯನ್ನು ಪರಿಗಣಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತ (Tax-Free) ಎಂದು ಘೋಷಿಸಿದ್ದಾರೆ. ಇದರಿಂದಾಗಿ ಚಿತ್ರತಂಡಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗಿದೆ. ಹಿಂದಿ, ತೆಲುಗು, ತಮಿಳಿನಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಕನ್ನಡದ ಕಲಾವಿದರಾದ ಕಾರ್ತಿಕ್ ಜಯರಾಮ್ (ಜೆಕೆ), ಸುಷ್ಮಿತಾ ಭಟ್ (Sushmitha Bhat) ಕೂಡ ನಟಿಸಿದ್ದಾರೆ ಎಂಬುದು…

Read More

IPL 2026: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | IPL 2026: RCB vs KKR Playoff Battle – Date, Time, Venue, Live Stream and Squads for Top Spot

ಆರ್​​ಸಿಬಿಯ (RCB) ಎರಡನೇ ತವರು ಮೈದಾನದವಾದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎರಡು ವಿಕೆಟ್‌ಗಳಿಂದ ಸೋಲಿಸಿದ ಆರ್​ಸಿಬಿ ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಗಿದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೂ ಏರಿತು. ಇದೀಗ ಈ ಅಗ್ರಸ್ಥಾನದಲ್ಲಿ ಮುಂದುವರೆಯಬೇಕಾದರೆ ಆರ್​ಸಿಬಿ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಲೀಗ್ ಹಂತದಲ್ಲಿ ಆರ್​​ಸಿಬಿ ಈಗಾಗಲೇ 11 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋತಿದೆ. ಆರ್​​ಸಿಬಿ ಬಳಿ ಪ್ರಸ್ತುತ 14 ಅಂಕಗಳಿವೆ….

Read More

TV9 Kannada News Live: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಹಾಕಿದ್ಯಾರು? – Kannada News | TV9 Kannada News Live: Dearness Allowance Hike for State Government Employees; Bomb Threat to PM Modi Event Investigated

ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾರ್ಯಕ್ರಮದ ವೇಳೆ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಲೋಹಿತ್​​ ಎಂಬಾತ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ಪರಿಶೀಲನೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತ ಲೋಹಿತ್ ಮನೆಯಲ್ಲಿ ಇಂದು ಕೋರಮಂಗಲ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಜಂಟಿಯಾಗಿ ಶೋಧ ಮಾಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ,  ಲೋಹಿತ್ ಸದಾ ನಶೆಯಲ್ಲಿರುತ್ತಿದ್ದ ಮತ್ತು ಮನೆಯಲ್ಲಿ ಒಬ್ಬೊಬ್ಬನೇ…

Read More

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ – Kannada News | Finance Expert Rudramurthy Talks about PM Narendra Modi advised save fuel

ಬೆಂಗಳೂರು, (ಮೇ 11): ಯುದ್ಧದಿಂದ ಮತ್ತೆ ಇಂಧನ (fuel) ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ…

Read More

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು….

Read More

ತಮಿಳುನಾಡಿನ ಎಐಎಡಿಎಂಕೆಯಲ್ಲಿ ಬಿಕ್ಕಟ್ಟು; ಷಣ್ಮುಗಂ ನೇತೃತ್ವದ ಬಣದಿಂದ ಇಪಿಎಸ್ ರಾಜೀನಾಮೆಗೆ ಒತ್ತಾಯ – Kannada News | Tamil Nadu AIADMK MLAs split into two groups after Tamil Nadu elections Edappadi K Palaniswami

ಚೆನ್ನೈ, ಮೇ 11: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಹೀನಾಯ ಸೋಲಿನಿಂದಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕುವ ಮತ್ತು ಹೊಸ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡುವ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧದ ಎಲ್ಲ ಭಿನ್ನಮತೀಯರು ಒಟ್ಟಾಗಿ ಕೆಲಸ ಮಾಡಿ ಸಾಧ್ಯವಾದಷ್ಟು ಬೇಗ ಸಾಮಾನ್ಯ ಸಮಿತಿ ಸಭೆ ಕರೆಯಲು ನಿರ್ಧರಿಸಲಾಗಿದೆ. ಎಐಎಡಿಎಂಕೆಯ ಉನ್ನತ ಮೂಲಗಳ ಪ್ರಕಾರ, ಪಕ್ಷದ ಹಿರಿಯ ನಾಯಕ ಸಿ.ವಿ ಷಣ್ಮುಗಂ ಅವರೊಂದಿಗೆ ಇರುವ…

Read More