ಅಂಜನಾದ್ರಿಗೆ 2 ಕೋಟಿ ರೂ. ಚಿನ್ನಾಭರಣ ಕಾಣಿಕೆ: ಹಲವು ಅನುಮಾನಗಳಿಗೆ ಕಾರಣವಾಯ್ತು ಉದ್ಯಮಿಯ ಬಿಲ್ – Kannada News | Anjanadri Temple Gold Donation Row: Businessman Mahesh Reddy’s Released Bill Raises Doubts

ಕೊಪ್ಪಳ, ಮೇ 11: ನಗರದ ಸುಪ್ರಸಿದ್ಧ ಅಂಜನಾದ್ರಿ ಬೆಟ್ಟದ (Anjanadri Betta) ಆಂಜನೇಯ ಸ್ವಾಮಿಗೆ ಹೈದರಾಬಾದ್​​ ಮೂಲದ ಉದ್ಯಮಿ ಮಹೇಶ ರೆಡ್ಡಿ ನೀಡಿದ್ದ 2.50 ಕೋಟಿ ಮೌಲ್ಯದ ಚಿನ್ನದ (Gold) ಆಭರಣಗಳು ಅಸಲಿಗೆ ಬಂಗಾರವೇ ಅಲ್ಲ ಎಂಬ ಸ್ಫೋಟಕ ಸತ್ಯ ಬಯಲಾಗಿದೆ. ಹೀಗಾಗಿ ಆಭರಣ ಖರೀದಿಯ ಅಧಿಕೃತ ಬಿಲ್ ನೀಡುವಂತೆ ಜಿಲ್ಲಾಡಳಿತ ನೋಟಿಸ್ ಬೆನ್ನಲ್ಲೇ, ಇದೀಗ ಉದ್ಯಮಿ ಬಿಲ್ ಬಿಡುಗಡೆ ಮಾಡಿದ್ದು, ಆದರೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮುಖ್ಯಾಂಶಗಳು

  • ಕೊಪ್ಪಳ ಜಿಲ್ಲಾಡಳಿತ ನೋಟಿಸ್ ಬೆನ್ನಲ್ಲೇ ಬಂಗಾರ ಖರೀದಿ ಬಿಲ್ ಬಿಡುಗಡೆ ಮಾಡಿದ ಉದ್ಯಮಿ
  • ಹಲವು ಅನುಮಾನಗಳಿಗೆ ಕಾರಣವಾದ ಬಂಗಾರ ಖರೀದಿ ಬಿಲ್​​
  • 8 ದಿನಗಳಲ್ಲಿ ಇಷ್ಟೆಲ್ಲಾ ಆಭರಣಗಳು ತಯಾರಿಸಲು ಹೇಗೆ ಸಾಧ್ಯ?

ಮೇ 8ರಂದು ಅಂಜನಾದ್ರಿ ದೇವಸ್ಥಾನಕ್ಕೆ ಪ್ರಭಾವಳಿ, ಚಕ್ರ, ಗದೆ ಸೇರಿದಂತೆ ವಿವಿಧ ಚಿನ್ನದ ವಸ್ತುಗಳನ್ನು ಮಹೇಶ್ ರೆಡ್ಡಿ ಕುಟುಂಬ ಸಮೇತ ಬಂದು ದೇಣಿಗೆ ನೀಡಿದ್ದರು. ಈ ದೇಣಿಗೆಗೆ ಸಂಬಂಧಿಸಿದಂತೆ ಖರೀದಿ ಬಿಲ್ ಸಲ್ಲಿಸುವಂತೆ ಜಿಲ್ಲಾಡಳಿತವು ಕಳೆದ ಎರಡು ದಿನಗಳಿಂದ ನೋಟಿಸ್ ನೀಡಿತ್ತು. ಅದರಂತೆ ಇಂದು ಉದ್ಯಮಿ ಮಹೇಶ್ ರೆಡ್ಡಿ ಬಿಲ್ ಸಲ್ಲಿಸಿದ್ದಾರೆ.

ಇದನ್ನೂ ಓದಿ: 2.5 ಕೋಟಿ ರೂ. ಮೌಲ್ಯದ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಅಂಜನಾದ್ರಿ ದೇಣಿಗೆಯಲ್ಲಿ ಮಹಾ ಗೋಲ್‌ಮಾಲ್?

ಸಲ್ಲಿಕೆಯಾದ ಬಿಲ್‌ನ ಪ್ರಕಾರ, 2026ರ ಎಪ್ರಿಲ್ 28ರಂದು ಹೈದರಾಬಾದ್‌ನ ತಿರುಮಾಲ್ ಜುವೆಲ್ಲರ್ಸ್‌ನಲ್ಲಿ 1400 ಗ್ರಾಂ ಚಿನ್ನವನ್ನು ಖರೀದಿಸಲಾಗಿದೆ. ಎಎಂಆರ್ ಕಂಪನಿ ಹೆಸರಿನಲ್ಲಿ ಬಿಡುಗಡೆಯಾಗಿರುವ ಬಿಲ್‌ನ ಮೊತ್ತ 2 ಕೋಟಿ 20 ಲಕ್ಷದ 42 ಸಾವಿರ ರೂಪಾಯಿ ಆಗಿದೆ. ಆದರೆ ಬಿಲ್ ಬಿಡುಗಡೆ ದಿನಾಂಕವನ್ನು ಏಪ್ರಿಲ್ 24 ಎಂದು ನಮೂದಿಸಲಾಗಿದ್ದು, ಇದು ಗೊಂದಲಕ್ಕೆ ಕಾರಣವಾಗಿದೆ.

ಇದು ಕೇವಲ ಪ್ರಚಾರದ ಗಿಮಿಕ್ಕಾ?

ಸುಂದರ ಕಲಾಕೃತಿ ಹೊಂದಿರುವ ಪ್ರಭಾವಳಿ, ಚಕ್ರ, ಆಂಜನೇಯನ ಗದೇ ಸೇರಿ 12 ಆಭರಣಗಳನ್ನ ಮಹೇಶ್ ರೆಡ್ಡಿ ನೀಡಿದ್ದರು. ಬಂಗಾರ ಖರೀದಿಯ ಬಳಿಕ 08 ದಿನಗಳಲ್ಲಿ, ಇಷ್ಟೆಲ್ಲಾ ತಯಾರು ಮಾಡಲು ಹೇಗೆ ಸಾಧ್ಯವಾಯಿತು ಎನ್ನುವ ಅನುಮಾನ ಶುರುವಾಗಿದೆ. ಇನ್ನು ಜಿಲ್ಲಾಡಳಿತ ಇದನ್ನ ಪರಿಶೀಲನೆ ನಡೆಸಿದ ಬಳಿಕ, ಆಭರಣದಲ್ಲಿ 1400 ಗ್ರಾಂ ಬಂಗಾರ ಇರುವುದು ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲಾಡಳಿತ ಖಜಾನೆಗೆ ಆಭರಣಗಳನ್ನ ಜಮಾ ಮಾಡಿಕೊಂಡಿಲ್ಲ. ಇದು ಕೇವಲ ಪ್ರಚಾರದ ಗಿಮಿಕ್ಕಾ ಎಂಬ ಪ್ರಶ್ನೆ ಇದೀಗ ಭಕ್ತರಲ್ಲಿ ಮೂಡಿದೆ.

ಘಟನೆ ಹಿನ್ನೆಲೆ

ಉದ್ಯಮಿ ಮಹೇಶ ರೆಡ್ಡಿ ಮೇ 08ರಂದು ಕಿಷ್ಕಿಂಧಾ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಭರ್ಜರಿ ದೇಣಿಗೆ ನೀಡಿದ್ದರು. ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಗೆಳೆಯರೂ ಆಗಿರುವ ಮಹೇಶ ರೆಡ್ಡಿ, ಸ್ವಾಮಿಗೆ ಪ್ರಭಾವಳಿ, ಚಕ್ರ ಹಾಗೂ ಗದೆಯನ್ನು ದಾನವಾಗಿ ಅರ್ಪಿಸಿದ್ದರು. 2.50 ಕೋಟಿ ಮೌಲ್ಯದ ಬಂಗಾರದ ಆಭರಣಗಳು ಎಂದು ಸ್ವತಃ ಜನಾರ್ದನ ರೆಡ್ಡಿ ಅವರೇ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು. ಆದರೆ, ದೇಣಿಗೆ ಸ್ವೀಕರಿಸಿದ ಬಳಿಕ ಜಿಲ್ಲಾಡಳಿತ ಈ ಆಭರಣಗಳನ್ನು ತಾಂತ್ರಿಕ ಪರಿಶೀಲನೆಗೆ ಒಳಪಡಿಸಿದಾಗ ಅಸಲಿ ಬಣ್ಣ ಬಯಲಾಗಿದೆ.

ಇದನ್ನೂ ಓದಿ: ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ತಜ್ಞರ ತಂಡ ಪರಿಶೀಲಿಸಿದಾಗ ಅಷ್ಟು ದೊಡ್ಡ ಆಭರಣಗಳಲ್ಲಿ ಇದ್ದದ್ದು ಕೇವಲ 250 ರಿಂದ 300 ಗ್ರಾಂ ಬಂಗಾರ ಮಾತ್ರ. ಕೋಟಿ ಬೆಲೆ ಬಾಳುತ್ತದೆ ಎಂದು ಹೇಳಲಾದ ಆಭರಣಗಳು ಅಸಲಿಗೆ ತಾಮ್ರದ ಮೇಲೆ ಬಂಗಾರದ ಲೇಪನ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪರೀಶಿಲನೆ ವೇಳೆ ಬಯಲು ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ – Kannada News | Tamil Nadu CM Vijay meets DMK President MK Stalin at their residence

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸಿಎಂ ವಿಜಯ್ ಅವರನ್ನು ಆತ್ಮೀಯವಾಗಿ ಮನೆಗೆ ಸ್ವಾಗತಿಸಿದರು. ಹಸ್ತಲಾಘವ ನೀಡುವ ಮೂಲಕ ವಿಜಯ್ ಅವರಿಗೆ ಸ್ವಾಗತ ನೀಡಿದ ಸ್ಟಾಲಿನ್ ಬಳಿಕ ಹೂಗುಚ್ಛ ನೀಡಿ, ರೇಷ್ಮೆ ಶಾಲು ಹೊದಿಸಿದರು.

ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಡಿಎಂಕೆ ತೀವ್ರ ಚುನಾವಣಾ ಸ್ಪರ್ಧೆಯಲ್ಲಿ ತೊಡಗಿತ್ತು. ವಿಜಯ್ ಕೂಡ ಡಿಎಂಕೆ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದ್ದರು. ನಿನ್ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗಲೂ ಸಿಎಂ ವಿಜಯ್ ಡಿಎಂಕೆ ಸರ್ಕಾರ ಭಾರೀ ಸಾಲ ಮಾಡಿ ಹೋಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಸ್ಟಾಲಿನ್ ಕೂಡ ತಿರುಗೇಟು ನೀಡಿದ್ದರು. ಅದರ ಬೆನ್ನಲ್ಲೇ ಇಬ್ಬರೂ ನಾಯಕರು ಮುಖಾಮುಖಿ ಭೇಟಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೋದಿ ಕರೆಗೆ ಏರ್​ಟೆಲ್ ಮುಖ್ಯಸ್ಥರ ಬೆಂಬಲ; ಭಾರತದಲ್ಲಿ ಹೂಡಿಕೆ ಹೆಚ್ಚಿಸುವಂತೆ ಭಾರತೀಯ ಉದ್ಯಮಗಳಿಗೆ ಸುನೀಲ್ ಮಿತ್ತಲ್ ಕರೆ – Kannada News | Sunil Bharti Mittal urges India companies to double down on investments

ಸುನಿಲ್ ಭಾರ್ತಿ ಮಿತ್ತಲ್Image Credit source: PTI

ನವದೆಹಲಿ, ಮೇ 11: ಜಾಗತಿಕವಾಗಿ ಪಶ್ಚಿಮ ಏಷ್ಯಾದಲ್ಲಿ (Middle East) ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದರೂ, ಭಾರತೀಯ ಉದ್ಯಮಿಗಳು ಹಿಂಜರಿಯದೆ ದೇಶದ ಒಳಗಿನ ಹೂಡಿಕೆಯನ್ನು ದುಪ್ಪಟ್ಟುಗೊಳಿಸಬೇಕು ಎಂದು ಭಾರ್ತಿ ಎಂಟರ್‌ಪ್ರೈಸಸ್ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ (Sunil Bharti Mittal) ಅವರು ಕರೆ ನೀಡಿದ್ದಾರೆ. ಜಾಗತಿಕ ಹೊಯ್ದಾಟಗಳ ನಡುವೆ ಭಾರತೀಯ ಆರ್ಥಿಕ ಬೆಳವಣಿಗೆ ಸರಾಗವಾಗಿ ಮುಂದುವರಿಯುವಂತಾಗಲು ಉದ್ಯಮಗಳು ದೊಡ್ಡ ಪಾತ್ರ ವಹಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯನ್ನು ಸುನೀಲ್ ಮಿತ್ತಲ್ ಪುನರುಚ್ಚರಿಸಿದ್ದಾರೆ.

ಭಾರತೀಯ ಉದ್ಯಮ ಒಕ್ಕೂಟ (CII) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಾಗತಿಕ ಸವಾಲುಗಳ ನಡುವೆಯೂ ಭಾರತವು ಹೂಡಿಕೆಗೆ ಅತ್ಯಂತ ಸುರಕ್ಷಿತ ಮತ್ತು ಆಕರ್ಷಕ ತಾಣವಾಗಿ ಹೊರಹೊಮ್ಮಿದೆ ಎಂದು ಅಭಿಪ್ರಾಯಪಟ್ಟರು. ಜಾಗತಿಕ ರಾಜಕೀಯ ಸಂಘರ್ಷಗಳು ಮಾರುಕಟ್ಟೆಯ ಮೇಲೆ ಪ್ರಭಾವ ಬೀರಬಹುದು. ಆದರೆ ಭಾರತೀಯ ಕಂಪನಿಗಳು ದೀರ್ಘಾವಧಿಯ ಲಾಭವನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯ ಮತ್ತು ಉತ್ಪಾದನಾ ವಲಯದಲ್ಲಿ ತಮ್ಮ ಹೂಡಿಕೆಯನ್ನು ಹೆಚ್ಚಿಸಬೇಕು ಎಂದು ಮಿತ್ತಲ್ ಒತ್ತಿಹೇಳಿದ್ದಾರೆ.

ಇದನ್ನೂ ಓದಿ: ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ

ಚೀನಾ ಮತ್ತು ಯುರೋಪ್‌ ದೇಶಗಳ ಆರ್ಥಿಕತೆಗೆ ಹೋಲಿಸಿದರೆ ಭಾರತದ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಈ ಸ್ಥಿರತೆಯನ್ನು ಬಳಸಿಕೊಂಡು ಭಾರತೀಯ ಉದ್ಯಮಗಳು (India Inc) ವಿಶ್ವಮಟ್ಟದಲ್ಲಿ ತನ್ನ ಪ್ರಾಬಲ್ಯ ಸಾಧಿಸಬೇಕು ಎಂದರು.

ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಯು ತೈಲ ಬೆಲೆ ಮತ್ತು ಸರಬರಾಜು ಸರಪಳಿಯ ಮೇಲೆ ಪರಿಣಾಮ ಬೀರಬಹುದು. ಆದರೆ ಭಾರತದ ಬಲವಾದ ಆಂತರಿಕ ಬೇಡಿಕೆಯು ಇಂತಹ ಆಘಾತಗಳನ್ನು ತಡೆದುಕೊಳ್ಳುವ ಶಕ್ತಿ ಹೊಂದಿದೆ ಎಂದು ಭಾರ್ತಿ ಏರ್ಟೆಲ್​ನ ಮುಖ್ಯಸ್ಥರಾದ ಅವರು ವಿಶ್ವಾಸ ವ್ಯಕ್ತಪಡಿಸಿದರು. ತಂತ್ರಜ್ಞಾನ ಮತ್ತು ಡಿಜಿಟಲ್ ವಲಯದಲ್ಲಿ ಭಾರತ ಸಾಧಿಸುತ್ತಿರುವ ಪ್ರಗತಿಯನ್ನು ಶ್ಲಾಘಿಸಿದ ಅವರು, ಮುಂಬರುವ ದಿನಗಳಲ್ಲಿ ಉದ್ಯೋಗ ಸೃಷ್ಟಿಗೆ ಈ ವಲಯಗಳು ಪ್ರಮುಖವಾಗಿವೆ ಎಂದರು.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

‘ಇದು ಸಂಕಷ್ಟದ ಸಮಯ. ಒಂದು ದೇಶವಾಗಿ ನಾವು ಬಹಳ ವೇಗದಲ್ಲಿ ಬೆಳೆಯುತ್ತಿದ್ದೇವೆ. ಕೆಲವೊಮ್ಮೆ ಪರಿಸ್ಥಿತಿಗಳು ಯಾರದೇ ನಿಯಂತ್ರಣ ತಪ್ಪಿ ಉದ್ಭವಿಸಿಬಿಡುತ್ತವೆ. ಮಧ್ಯಪ್ರಾಚ್ಯದ ಇವತ್ತಿನ ಪರಿಸ್ಥಿತಿಯು ಜಾಗತಿಕ ಆರ್ಥಿಕತೆಗಳ ಮೇಲೆ ಬಹಳ ಒತ್ತಡ ತಂದಿದೆ. ಇಂಥ ಹೊತ್ತಲ್ಲಿ ಭಾರತೀಯ ಕಂಪನಿಗಳು ಆಮದು ಕಡಿಮೆ ಮಾಡಬೇಕು. ನವೀಕರಿಸಬಹುದಾದ ಇಂಧನದ ಅಳವಡಿಕೆ ಹೆಚ್ಚಿಸಬೇಕು. ದೇಶೀಯವಾಗಿ ಹೂಡಿಕೆಗಳನ್ನು ಹೆಚ್ಚಿಸಬೇಕು ಎಂದು ಮಿತ್ತಲ್ ಕರೆ ನೀಡಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗೇಲಿ ಮಾಡಿದ್ದ ಕೆಕೆಆರ್​ಗೆ ತಕ್ಕ ತಿರುಗೇಟು ನೀಡುತ್ತಾ ಆರ್​ಸಿಬಿ? – Kannada News | IPL 2026: RCB vs KKR Match 57 Playoff Hopes and Revenge Battle Heats Up!

ಐಪಿಎಲ್ 2026 (IPL 2026) ರ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR)​ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಅದರಲ್ಲೂ ಆರ್​ಸಿಬಿಗೆ ಹೋಲಿಸಿದರೆ, ಕೆಕೆಆರ್​ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದರಷ್ಟೇ ಕೆಕೆಆರ್​ಗೆ ಪ್ಲೇಆಫ್ ಕನಸು ಜೀವಂತ, ಇಲ್ಲದಿದ್ದರೆ ಅದು ಕೂಡ ಲೀಗ್ ಹಂತದಲ್ಲೇ ಹೊರಬೀಳಲಿದೆ. ಹೀಗಾಗಿ ರಹಾನೆ ಪಡೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಆರ್​ಸಿಬಿ, ಲೀಗ್ ಆರಂಭಕ್ಕೂ ಮುನ್ನ ಕೆಕೆಆರ್ ಫ್ರಾಂಚೈಸಿ ಮಾಡಿದ್ದ ಅವಮಾನಕ್ಕೆ ತಕ್ಕ ತಿರುಗೇಟು ನೀಡಲು ತಯಾರಾಗಿದೆ.

ಪ್ರೋಮೋದಲ್ಲಿ ಆರ್​ಸಿಬಿಗೆ ಅವಮಾನ

ವಾಸ್ತವವಾಗಿ ಐಪಿಎಲ್ ಆರಂಭಕ್ಕೂ ಮುನ್ನ ಕೆಕೆಆರ್ ಫ್ರಾಂಚೈಸಿ ತನ್ನ ತಂಡದ ನೂತನ ಜೆರ್ಸಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿತ್ತು. 1:38 ನಿಮಿಷಗಳ ವಿಡಿಯೋದಲ್ಲಿ ಕೆಕೆಆರ್ ತನ್ನ ಕೆಲವು ಐತಿಹಾಸಿಕ ಸಾಧನೆಗಳನ್ನು ನೆನಪು ಮಾಡಲು ಪ್ರಯತ್ನಿಸಿತ್ತು. ಇದರಲ್ಲಿ ಹೆಚ್ಚಿನದಾಗಿ ಆರ್​ಸಿಬಿ ವಿರುದ್ಧ ಕೆಕೆಆರ್ ತಂಡದ ಪಾರುಪತ್ಯ ಹೇಗಿತ್ತು ಎಂಬುದನ್ನು ಹೇಳುವುದರ ಜೊತೆಗೆ ಉದ್ದೇಶಪೂರ್ವಕವಾಗಿಯೇ ಆರ್​​ಸಿಬಿಯನ್ನು ಅಣಕಿಸುವ ಕೆಲಸ ಮಾಡಿತ್ತು.

ಕೆಕೆಆರ್ ಫ್ರಾಂಚೈಸಿ ಬಿಡುಗಡೆ ಮಾಡಿದ್ದ ಆ ವಿಡಿಯೋದಲ್ಲಿ ಮೊದಲಿಗೆ ಟ್ರಾಫಿಕ್ ಸಿಗ್ನಲ್‌ ತೋರಿಸಲಾಗಿದ್ದು, ಆ ಸಿಗ್ನಲ್​ನ ಒಂದು ದೀಪದಲ್ಲಿ 49 ಎಂದು ಬರೆಯಲಾಗಿತ್ತು. ಸಾಮಾನ್ಯವಾಗಿ ಇದು 49 ಸೆಕೆಂಡುಗಳನ್ನು ಅರ್ಥೈಸುತ್ತದೆಯಾದರೂ, ಇಲ್ಲಿ ತನ್ನ ಬುದ್ಧಿ ಬಳಸಿರುವ ಕೆಕೆಆರ್, ಹಾಲಿ ಚಾಂಪಿಯನ್ ಬೆಂಗಳೂರು ತಂಡವನ್ನು 49 ರನ್​ಗಳಿಗೆ ಆಲೌಟ್ ಮಾಡಿದ್ದನ್ನು ನೆನಪಿಸುವ ಕೆಲಸ ಮಾಡಿತ್ತು.

ವಾಸ್ತವವಾಗಿ, 2017 ರ ಆವೃತ್ತಿಯಲ್ಲಿ ಕೆಕೆಆರ್ ಹಾಗೂ ಆರ್​ಸಿಬಿ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಕೆಕೆಆರ್ 131 ರನ್ ಕಲೆಹಾಕಿತ್ತು. ಈ ಗುರಿ ಬೆನ್ನಟ್ಟಿದ್ದ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್ ಆಗಿ, ಐಪಿಎಲ್ ಇತಿಹಾಸದಲ್ಲೇ ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಮೊದಲ ತಂಡವೆಂಬ ಮುಜುಗರದ ದಾಖಲೆಗೆ ಕೊರಳೊಡ್ಡಿತ್ತು.

158 ರನ್ ನೆನಪಿಸಿದ್ದ ಕೆಕೆಆರ್

ಇದಾದ ಬಳಿಕ ಸಿನಿಮಾ ಚಿತ್ರೀಕರಣದಲ್ಲಿ 158ನೇ ಟೇಕ್ ಎಂಬುದನ್ನು ಬಳಸಿರುವ ಕೆಕೆಆರ್ ಮತ್ತೆ ಆರ್​ಸಿಬಿಯನ್ನು ಅಣಕಿಸುವ ಕೆಲಸ ಮಾಡಿತ್ತು. ಐಪಿಎಲ್ ಮೊದಲ ಆವೃತ್ತಿಯಲ್ಲಿ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಕೆಕೆಆರ್ ಪರ ಆಡಿದ್ದ ಬ್ರೆಂಡನ್ ಮೆಕಲಮ್ ಬರೋಬ್ಬರಿ 158 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಆ ಪಂದ್ಯದಲ್ಲೂ ಆರ್​ಸಿಬಿ ಹೀನಾಯವಾಗಿ ಸೋತಿತ್ತು.

IPL 2026: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು?

ಅದೇ ರೀತಿ, ಒಂದು ಸ್ಥಳದಲ್ಲಿ, 105/0 6 ಓವರ್‌ಗಳು ಎಂದು ಬರೆಯಲಾಗಿತ್ತು. ಇದು 2017 ರಲ್ಲಿ ಆರ್‌ಸಿಬಿ ವಿರುದ್ಧದ ಪಂದ್ಯದ ಪವರ್‌ಪ್ಲೇನಲ್ಲಿ ಕೆಕೆಆರ್‌ ದಾಖಲಿಸಿದ ಅತ್ಯಧಿಕ ಸ್ಕೋರ್ ಆಗಿತ್ತು. ಈ ಎಲ್ಲಾ ಹಳೆಯ ಘಟನೆಗಳನ್ನು ನೆನಪಿಸುತ್ತಾ ಆರ್​ಸಿಬಿಯನ್ನು ಜರಿಯುವ ಕೆಲಸವನ್ನು ಕೆಕೆಆರ್ ಮಾಡಿತ್ತು. ಇದೀಗ ಆರ್​ಸಿಬಿ, ಕೆಕೆಆರ್​ಗೆ ಸರಿಯಾದ ಪಾಠ ಕಲಿಸಲು ಸಜ್ಜಾಗಿದೆ. ಇತ್ತ ಅಭಿಮಾನಿಗಳು ಕೂಡ ಆರ್​ಸಿಬಿ, ಕೆಕೆಆರ್​ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದನ್ನು ನೋಡಲು ಕಾದು ಕುಳಿತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:50 pm, Mon, 11 May 26

Source link

ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ – Kannada News | Sringeri postal vote controversy: supreme Court Stays On Karnataka Hight Recount Order

ನವದೆಹಲಿ, (ಮೇ 11): ಶೃಂಗೇರಿ (sringeri) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ (supreme Court) ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ (Karnataka High Court) ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮೊನ್ನೆ ಅಷ್ಟೇ ಮರು ಮತ ಎಣಿಕೆಯಲ್ಲಿ ಗೆದ್ದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್​​ಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

Published On – 4:51 pm, Mon, 11 May 26

Source link

ಕನ್ನಡದ ಕಲಾವಿದರು ನಟಿಸಿದ ‘ಕೃಷ್ಣಾವತಾರಂ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ – Kannada News | Sushmitha Bhat Karthik Jayaram starrer Krishnavataram movie declared Tax Free in Uttar Pradesh

ಪೌರಾಣಿಕ ಕಥಾಹಂದರ ಹೊಂದಿರುವ ‘ಕೃಷ್ಣಾವತಾರಂ’ (Krishnavataram) ಚಿತ್ರಕ್ಕೆ ಈಗ ದೊಡ್ಡ ಮನ್ನಣೆ ಸಿಕ್ಕಿದೆ. ಚಿತ್ರದ ಸಾಂಸ್ಕೃತಿಕ ಮಹತ್ವ ಮತ್ತು ಜನಪ್ರಿಯತೆಯನ್ನು ಪರಿಗಣಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತ (Tax-Free) ಎಂದು ಘೋಷಿಸಿದ್ದಾರೆ. ಇದರಿಂದಾಗಿ ಚಿತ್ರತಂಡಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗಿದೆ. ಹಿಂದಿ, ತೆಲುಗು, ತಮಿಳಿನಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಕನ್ನಡದ ಕಲಾವಿದರಾದ ಕಾರ್ತಿಕ್ ಜಯರಾಮ್ (ಜೆಕೆ), ಸುಷ್ಮಿತಾ ಭಟ್ (Sushmitha Bhat) ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

ಕೇವಲ ತೆರಿಗೆ ಮುಕ್ತಗೊಳಿಸುವುದು ಮಾತ್ರವಲ್ಲದೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಈ ಚಿತ್ರದ ವಿಶೇಷ ಪ್ರದರ್ಶನಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿಗಳು ಮಾಹಿತಿ ಇಲಾಖೆಗೆ ಸೂಚನೆ ನೀಡಿದ್ದಾರೆ. ಇಂದಿನ ಮಕ್ಕಳು ಮತ್ತು ಯುವಜನತೆ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ಬೆರೆಯುವಂತಾಗಲಿ ಎಂಬುದು ಅವರ ಈ ಆದೇಶದ ಹಿಂದಿನ ಉದ್ದೇಶವಾಗಿದೆ.

ಈ ಘೋಷಣೆಯ ಸಂದರ್ಭದಲ್ಲಿ ‘ಕೃಷ್ಣಾವತಾರಂ’ ಚಿತ್ರತಂಡದವರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ನಿರ್ಮಾಪಕರಾದ ಸಜ್ಜನ್ ರಾಜ್ ಕುರುಪ್, ಶೋಭಾ ಸಂತ ಹಾಗೂ ಪೂನಂ ಶ್ರಾಫ್ ಗಜ್ಜರ್, ನಿರ್ದೇಶಕ ಹಾರ್ದಿಕ್ ಗಜ್ಜರ್ ಮತ್ತು ಮುಖ್ಯ ಭೂಮಿಕೆಯ ನಟರಾದ ಸಿದ್ಧಾರ್ಥ್ ಗುಪ್ತಾ ಮತ್ತು ಸಂಸ್ಕೃತಿ ಜಯಾನ ಈ ವೇಳೆ ಉಪಸ್ಥಿತರಿದ್ದರು.

‘ಕೃಷ್ಣಾವತಾರಂ’ ಚಿತ್ರದ ಟ್ರೇಲರ್:

ಮೂರು ಭಾಗಗಳ ಸಿನಿಮಾ ಸರಣಿಯ ಮೊದಲ ಭಾಗವಾಗಿರುವ ‘ಕೃಷ್ಣಾವತಾರಂ: ಪಾರ್ಟ್ 1’ (ಹೃದಯ) ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಅದ್ದೂರಿ ದೃಶ್ಯವೈಭವ, ಸುಮಧುರ ಸಂಗೀತ ಮತ್ತು ಕಲಾವಿದರ ನಟನೆಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ಸಿದ್ಧಾರ್ಥ್ ಗುಪ್ತಾ, ಸಂಸ್ಕೃತಿ ಜಯಾನ, ಸುಷ್ಮಿತಾ ಭಟ್ ಮತ್ತು ನಿವಾಶಿನಿ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ತ್ರಿಶಾಗೆ ಒಲಿದು ಬಂದ ಬಿಗ್ ಆಫರ್; ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿ?

‘ಕೃಷ್ಣಾವತಾರಂ ಪಾರ್ಟ್ 1’ ಚಿತ್ರವು ಭಾನುವಾರ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 3.25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಮೊದಲ ವಾರಾಂತ್ಯದ ಒಟ್ಟು ಕಲೆಕ್ಷನ್ ಸುಮಾರು 6.75 ಕೋಟಿ ರೂಪಾಯಿ ತಲುಪಿದೆ. ಈ ಚಿತ್ರದ ತೆಲುಗು ಮತ್ತು ತಮಿಳು ಆವೃತ್ತಿಗಳು ಕೂಡ ಬಿಡುಗಡೆಯಾಗಿದ್ದು, ಅವುಗಳಿಂದ ಸುಮಾರು 50 ಲಕ್ಷ ರೂಪಾಯಿ ಗಳಿಕೆಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | IPL 2026: RCB vs KKR Playoff Battle – Date, Time, Venue, Live Stream and Squads for Top Spot

ಆರ್​​ಸಿಬಿಯ (RCB) ಎರಡನೇ ತವರು ಮೈದಾನದವಾದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎರಡು ವಿಕೆಟ್‌ಗಳಿಂದ ಸೋಲಿಸಿದ ಆರ್​ಸಿಬಿ ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಗಿದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೂ ಏರಿತು. ಇದೀಗ ಈ ಅಗ್ರಸ್ಥಾನದಲ್ಲಿ ಮುಂದುವರೆಯಬೇಕಾದರೆ ಆರ್​ಸಿಬಿ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಲೀಗ್ ಹಂತದಲ್ಲಿ ಆರ್​​ಸಿಬಿ ಈಗಾಗಲೇ 11 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋತಿದೆ. ಆರ್​​ಸಿಬಿ ಬಳಿ ಪ್ರಸ್ತುತ 14 ಅಂಕಗಳಿವೆ. ಲೀಗ್ ಹಂತದಲ್ಲಿ ಉಳಿದಿರುವ 3 ಪಂದ್ಯಗಳನ್ನು ಗೆದ್ದರೆ ಆರ್​ಸಿಬಿ ಬಳಿ 20 ಅಂಕಗಳು ಇರಲಿದ್ದು ಖಚಿತವಾಗಿ ಟಾಪ್ 2 ಸ್ಥಾನ ಪಡೆಯಲಿದೆ. ಹೀಗಿರುವಾಗ ಆರ್​ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಕೆಕೆಆರ್ (KKR) ತಂಡವನ್ನು ಎದುರಿಸಲಿದ್ದು, ಈ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ.

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಮೇ 13 ರಂದು ನಡೆಯಲಿದೆ.

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದಲ್ಲಿ ನಡೆಯಲಿದೆ.

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಎಷ್ಟು ಗಂಟೆಗೆ ಆರಂಭ?

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಆರ್​​ಸಿಬಿ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ 57ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಟಿಮ್ ಡೇವಿಡ್, ಜಾಕೋಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಜೋಶ್ ಹ್ಯಾಜಲ್‌ವುಡ್, ನುವಾನ್ ತುಷಾರ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ರಸಿಖ್ ದಾರ್, ಭುವನೇಶ್ವರ್ ಕುಮಾರ್, ಜೋರ್ಡಾನ್ ಕಾಕ್ಸ್, ವೆಂಕಟ್ ಸಿಂಗ್, ಸುಯಶ್ ಲ್ಯೂನ್ ಕಾಕ್ಸ್, ವೆಂಕಟ್ ಸಿಂಗ್ ಶರ್ಮಾ, ಭುವನೇಶ್ವರ್ ಕುಮಾರ್ ಕಾನಿಷ್ಕ್ ಚೌಹಾಣ್, ಅಭಿನಂದನ್ ಸಿಂಗ್, ಮಂಗೇಶ್ ಯಾದವ್, ಫಿಲ್ ಸಾಲ್ಟ್, ಸಾತ್ವಿಕ್ ದೇಸ್ವಾಲ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ.

RCB vs MI: ಮುಂಬೈ ವಿರುದ್ಧ ಕೃನಾಲ್, ಭುವಿ ಕೆಚ್ಚೆದೆಯ ಆಟಕ್ಕೆ ಆರ್​​ಸಿಬಿಗೆ ಒಲಿದ ಜಯ

ಕೋಲ್ಕತ್ತಾ ನೈಟ್ ರೈಡರ್ಸ್​: ಅಜಿಂಕ್ಯ ರಹಾನೆ(ನಾಯಕ), ಫಿನ್ ಅಲೆನ್, ಆಂಗ್ಕ್ರಿಶ್ ರಘುವಂಶಿ(ವಿಕೆಟ್ ಕೀಪರ್), ರಿಂಕು ಸಿಂಗ್, ಕ್ಯಾಮರೂನ್ ಗ್ರೀನ್, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಅನುಕುಲ್ ರಾಯ್, ಸುನಿಲ್ ನರೈನ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ, ವರುಣ್ ಚಕ್ರವರ್ತಿ, ರಮಣದೀಪ್ ಸಿಂಗ್, ತೇಜಸ್ವಿ ದಹಿಯಾ, ನವದೀಪ್ ಸೈನಿ, ಟಿಮ್ ಸೀಫರ್ಟ್, ರಚಿನ್ ರವೀಂದ್ರ, ಬ್ಲೆಸಿಂಗ್ ಮುಜರಬಾನಿ, ಮಥೀಶ ಪತಿರಾನ, ರಾಹುಲ್ ತ್ರಿಪಾಠಿ, ಸಾರ್ಥಕ್ ರಂಜನ್, ಪ್ರಶಾಂತ್ ಸೋಲಂಕಿ, ಸೌರಭ್ ದುಬೆ, ಉಮ್ರಾನ್ ಮಲಿಕ್, ದಕ್ಷ್ ಕಮ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

TV9 Kannada News Live: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಹಾಕಿದ್ಯಾರು? – Kannada News | TV9 Kannada News Live: Dearness Allowance Hike for State Government Employees; Bomb Threat to PM Modi Event Investigated

ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾರ್ಯಕ್ರಮದ ವೇಳೆ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಲೋಹಿತ್​​ ಎಂಬಾತ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ಪರಿಶೀಲನೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತ ಲೋಹಿತ್ ಮನೆಯಲ್ಲಿ ಇಂದು ಕೋರಮಂಗಲ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಜಂಟಿಯಾಗಿ ಶೋಧ ಮಾಡಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ,  ಲೋಹಿತ್ ಸದಾ ನಶೆಯಲ್ಲಿರುತ್ತಿದ್ದ ಮತ್ತು ಮನೆಯಲ್ಲಿ ಒಬ್ಬೊಬ್ಬನೇ ಕಿರುಚಾಡುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯ ಡೈರಿ ಹಾಗೂ ಮೊಬೈಲ್ ಫೋನ್‌ ಅನ್ನು ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ಚುರುಕು​​
  • ಕರ್ನಾಟಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 1.5ರಷ್ಟು ಹೆಚ್ಚಿದ ಸರ್ಕಾರ
  • ದಳಪತಿ ವಿಜಯ್ ಸಂಭಾವನೆ ಎಷ್ಟು ಗೊತ್ತಾ?

ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ಸರ್ಕಾರ: ತುಟ್ಟಿಭತ್ಯೆ ಶೇ.1.5ರಷ್ಟು ಹೆಚ್ಚಳ

ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು ಶೇ.1.5ರಷ್ಟು ಹೆಚ್ಚಿಸಿ ಸೋಮವಾರ ಆದೇಶ ಹೊರಡಿಸಿದೆ. ಪ್ರಸ್ತುತ ಶೇ.14.25ರಷ್ಟಿರುವ ತುಟ್ಟಿಭತ್ಯೆಯನ್ನು ಶೇ.15.75ಕ್ಕೆ ಹೆಚ್ಚಿಸಲಾಗಿದೆ. ಈ ಹೆಚ್ಚಳವು 2026ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. 2024ರ ಪರಿಷ್ಕೃತ ವೇತನ ಶ್ರೇಣಿಯನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ ಈ ಪರಿಷ್ಕೃತ ತುಟ್ಟಿಭತ್ಯೆ ಅನ್ವಯವಾಗಲಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಅಡುಗೆ ಎಣ್ಣೆ ದರ ಪ್ರತಿ ಲೀಟರ್‌ಗೆ 3 ರೂ ಏರಿಕೆ: ಕಡಿಮೆ ಬಳಕೆ ಮೋದಿ ಕರೆ

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ & ಜಾಗತಿಕ ತೈಲ ಮಾರ್ಗವಾದ ಹೊರ್ಮುಜ್ ಬಂದ್ ಆಗಿ ಜಗತ್ತೇ ಸಂಕಷ್ಟದ ಸುಳಿಗೆ ಸಿಲುಕಿದೆ.. ಭಾರತಕ್ಕೂ ಕೂಡ ತೈಲ ಅಭಾವದ ಹೊಡೆತ ಬಿದ್ದಿದೆ. ಈ ಮಧ್ಯೆ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ದರವು ಪ್ರತಿ ಲೀಟರ್‌ಗೆ 3 ರೂಪಾಯಿಗಳಷ್ಟು ಏರಿಕೆಯಾಗಿದೆ. ಈ ಹಿಂದೆ ಲೀಟರ್‌ಗೆ 138 ರೂಪಾಯಿ ಇದ್ದ ಅಡುಗೆ ಎಣ್ಣೆಯ ಬೆಲೆ ಇದೀಗ 141 ರೂಪಾಯಿಗೆ ತಲುಪಿದೆ. ಇತ್ತ ಪ್ರಧಾನಿ ಮೋದಿ ಕೂಡ ಅಡುಗೆ ಎಣ್ಣೆ ಕಡಿಮೆ ಬಳಸುವಂತೆ ಸಲಹೆ ನೀಡಿದ್ದಾರೆ.

ಸಿಎಂ ಆದ ಬಳಿಕ ದಳಪತಿ ವಿಜಯ್ ಸಂಭಾವನೆ ಎಷ್ಟು ಗೊತ್ತಾ?

ನಟ ದಳಪತಿ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿ ಅಧಿಕಾರ ಸ್ವೀಕರಿಸುವ ಮೂಲಕ ಚಿತ್ರರಂಗದಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಪ್ರತಿ ಸಿನಿಮಾಗೆ 100 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆಯುತ್ತಿದ್ದ ಅವರು, ಇದೀಗ ಜನರ ಸೇವೆಗಾಗಿ ಬಣ್ಣದ ಪ್ರಪಂಚವನ್ನು ತೊರೆದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​? ಸ್ಫೋಟಕ ಸುಳಿವು ಪತ್ತೆ

ಸದ್ಯ ಸಿಎಂ ಆಗಿರುವ ವಿಜಯ್ ಅವರ ಮಾಸಿಕ ಮೂಲ ವೇತನ 2,05,000 ರೂ.ಗಳಾಗಿದ್ದು, ವಿವಿಧ ಭತ್ಯೆಗಳನ್ನು ಸೇರಿಸಿದರೆ ಒಟ್ಟು ವೇತನ ಸುಮಾರು 2,85,000 ರೂ. ಆಗಲಿದೆ. ಅಂದರೆ ವಾರ್ಷಿಕವಾಗಿ ಅವರು 34.20 ಲಕ್ಷ ರೂ. ಪಡೆಯಲಿದ್ದಾರೆ. ಇದರೊಂದಿಗೆ ಅವರಿಗೆ ಸರ್ಕಾರಿ ಬಂಗಲೆ, ಬುಲೆಟ್ ಪ್ರೂಫ್ ಎಸ್‌ಯುವಿ ಕಾರು, Z+ ದರ್ಜೆಯ ಭದ್ರತೆ ಮತ್ತು ಉಚಿತ ಪ್ರಯಾಣ ಸೌಲಭ್ಯಗಳು ದೊರೆಯಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:15 pm, Mon, 11 May 26

Source link

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ – Kannada News | Finance Expert Rudramurthy Talks about PM Narendra Modi advised save fuel

ಬೆಂಗಳೂರು, (ಮೇ 11): ಯುದ್ಧದಿಂದ ಮತ್ತೆ ಇಂಧನ (fuel) ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಮಾತನಾಡಿದ್ದು, ಇಂಧನ ದರ ಏರಿಕೆಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

Source link

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ.

ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು. ಇದರಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿ ಗ್ರಾಹಕರಿಗೆ ಅನುಕೂಲವಾಗಿತ್ತು. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಆಮದು ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಮತ್ತೆ ಸುಂಕ ಏರಿಸಬಹುದು ಎಂಬ ಆತಂಕ ಮಾರುಕಟ್ಟೆಯಲ್ಲಿ ಮನೆಮಾಡಿದೆ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನಿನ್ನೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗ, ಚಿನ್ನದ ಖರೀದಿ ಮಾಡಬೇಡಿ ಎಂದು ನೇರವಾಗಿಯೇ ಜನತೆಯಲ್ಲಿ ಕೇಳಿಕೊಂಡಿದ್ದರು. ಇದು ಚಿನ್ನದ ಮೇಲಿನ ಸುಂಕವನ್ನು ಸರ್ಕಾರ ಏರಿಸಬಹುದು ಎನ್ನುವ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿರುವುದು ಹೌದು.

ಅತಿಹೆಚ್ಚು ಚಿನ್ನ ಆಮದು ಮಾಡಿಕೊಳ್ಳುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತ 72 ಬಿಲಿಯನ್ ಡಾಲರ್​ನಷ್ಟು ಮೌಲ್ಯದ ಚಿನ್ನದ ಆಮದು ಮಾಡಿಕೊಂಡಿದೆ. ಇದರಿಂದ ಫಾರೆಕ್ಸ್ ನಿಧಿ ಸಂಗ್ರಹದ ಮೇಲೆ ಒತ್ತಡ ಬೀರಬಹುದು. ಇದೇ ಹಿನ್ನೆಲೆಯಲ್ಲಿ ಮೋದಿ ಅವರು ಚಿನ್ನದ ಖರೀದಿ ಕಡಿಮೆ ಮಾಡಿ ಎಂದು ಜನರಿಗೆ ಕರೆ ಕೊಟ್ಟಿರುವುದು.

ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ

ಆದರೆ, ಚಿನ್ನದ ಮೇಲೆ ಆಮದು ಸುಂಕ ಏರಿಸುವ ಇರಾದೆ ಇಲ್ಲ ಎಂದು ಸರ್ಕಾರದ ಮೂಲಗಳು ಹೇಳಿರುವುದು ಗಮನಾರ್ಹ. ಆದರೆ, ಅಧಿಕೃತವಾಗಿ ಸರ್ಕಾರದಿಂದ ಹೇಳಿಕೆ ಬರುವವರೆಗೂ ಅಂದಾಜಿಸುವುದು ಕಷ್ಟ. ಸರ್ಕಾರ ಈ ಮುಂಚೆ ಇದ್ದ ಮಟ್ಟಕ್ಕೆ ಆಮದು ಸುಂಕ ಏರಿಸಿದರೆ ಅಶ್ಚರ್ಯ ಪಡುವಂಥದ್ದು ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version