ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe

ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಶ್ವಾನ ದಳ (Dog Squad) ಮತ್ತು ಬಾಂಬ್ ನಿಷ್ಕ್ರಿಯ ದಳ (Bomb Disposal Squad), ನಿವಾಸದ ಮೂಲೆ ಮೂಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿವೆ. ಸುಮಾರು ಒಂದು ತಿಂಗಳ ಹಿಂದೆ ಇದೇ ರೀತಿ ಜಿಲ್ಲಾಧಿಕಾರಿಗಳ ಕಚೇರಿಗೂ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದೀಗ ನೇರವಾಗಿ ಅವರ ಮನೆಗೇ ಬೆದರಿಕೆ ಬಂದಿರುವುದು ಗಂಭೀರ ವಿಷಯವಾಗಿ ಪರಿಣಮಿಸಿದೆ. ದಾವಣಗೆರೆ ನಗರ ಪೊಲೀಸರು ಈಗಾಗಲೇ ತಾಂತ್ರಿಕ ತಂಡದ ನೆರವಿನೊಂದಿಗೆ 112 ಕ್ಕೆ ಕರೆ ಮಾಡಿದ ವ್ಯಕ್ತಿಯ ಲೋಕೇಶನ್ ಪತ್ತೆ ಹಚ್ಚಲು ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದೊಂದು ಹುಸಿ ಬಾಂಬ್ ಕರೆಯೇ ಅಥವಾ ಗಂಭೀರ ಸಂಚೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿ: ಕನಿಷ್ಠ 101 ಮಂದಿ ಕಣ್ಮರೆ – Kannada News | Submarine Attack on Iranian Ship off Sri Lanka Coast; 101 Missing, 78 Injured in Major Maritime Incident

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಹಡಗಿನ ಮೇಲೆ ಸಬ್​ಮರೀನ್ ದಾಳಿImage Credit source: @clashreport

ಕೊಲಂಬೋ, ಮಾರ್ಚ್​ 4: ಇರಾನ್ ಹಾಗೂ ಇಸ್ರೇಲ್ ಸೇನಾ ಸಂಘರ್ಷ (Iran Isreal Conflict) ತೀವ್ರಗೊಂಡಿದ್ದು, ಭಾರತದ ನೆರೆಯ ಶ್ರೀಲಂಕಾ ಕರಾವಳಿ ವರೆಗೂ ಅದರ ಬಿಸಿ ತಟ್ಟತೊಡಗಿದೆ. ಶ್ರೀಲಂಕಾ ಸಮುದ್ರ ಗಡಿಯೊಳಗೆ ಇರಾನ್‌ಗೆ ಸೇರಿದ ಹಡಗೊಂದಕ್ಕೆ ಬುಧವಾರ ಸಬ್‌ಮರೀನ್ ಮೂಲಕ ದಾಳಿ ನಡೆಸಲಾಗಿದೆ ಎಂದು ಅಂತರರಾಷ್ಟ್ರೀಯ ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ. ಈ ದಾಳಿಯ ಪರಿಣಾಮ ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದು, 78 ಮಂದಿ ಗಾಯಗೊಂಡಿದ್ದಾರೆ.

ದಾಳಿಯಿಂದ ಹಡಗಿಗೆ ತೀವ್ರ ಹಾನಿಯಾಗಿ ಮುಳುಗಿದೆ ಎನ್ನಲಾಗಿದೆ. ಇದಕ್ಕೂ ಮೊದಲು, ಶ್ರೀಲಂಕಾದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿ, ಮುಳುಗುತ್ತಿರುವ ಇರಾನ್ ಹಡಗಿನಲ್ಲಿ ಇದ್ದ 30 ಮಂದಿಯನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ ಎಂದು ತಿಳಿಸಿತ್ತು. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರ ಶೋಧ ಕಾರ್ಯ ನಡೆಯುತ್ತಿದೆ. ದಾಳಿ ಹಿನ್ನಲೆ ಮತ್ತು ಕಾರಣಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

(ಸುದ್ದಿ ಅಪ್​ಡೇಟ್ ಆಗುತ್ತಿದೆ)

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 4:13 pm, Wed, 4 March 26

Source link

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲ ಪತ್ನಿ ಇದ್ದರೂ ಸಹ ಶಿಕ್ಷಕ ಸಿದ್ದೇಶ, ಚೆನ್ನಮ್ಮಳನ್ನ ವಿವಾಹವಾಗಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆಯೇ ಸಿದ್ದೇಶ ಹಾಗೂ ಚೆನ್ನಮ್ಮ ಮದುವೆಯಾಗಿದ್ದಾರೆ. ಆದ್ರೆ, ಪತಿ ಸಿದ್ದೇಶ ಮನೆಗೆ ಬರುತ್ತಿಲ್ಲ ಎಂದು ಪತ್ನಿ ಚೆನ್ನಮ್ಮ ಕೋಪಗೊಂಡಿದ್ದು, ಸಿದ್ದೇಶ ಇರುವ ಶಾಲೆಗೆ ಬಂದು ಗಲಾಟೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ರೆ, ಅವರು ಟೀಚರ್ ಆಗಿದ್ರೆ ನನಗೆ ಗಂಡ. ಮನೆಗೆ ಬರುತ್ತಿಲ್ಲ. ಅದಕ್ಕೆ ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ.

ಇದನ್ನೂ ನೋಡಿ: ಪತಿ ಮನೆಗೆ ಬಾರದ್ದಕ್ಕೆ ಸಿಟ್ಟು: ಶಾಲೆಗೆ ಬಂದು ಮುಖ್ಯ ಶಿಕ್ಷಕನ 2ನೇ ಪತ್ನಿಯ ಹೈಡ್ರಾಮಾ

Source link

ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ – Kannada News | ICC T20 Rankings: Indian Stars Soar, Sanju Samson Jumps 25 Spots After WC Heroics

ತಿಲಕ್ ವರ್ಮಾ ಕೂಡ ಒಂದು ಸ್ಥಾನ ಮೇಲಕ್ಕೆ ಜಿಗಿದು ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಹಿನ್ನಡೆ ಅನುಭವಿಸಿದ್ದು, ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಒಳ್ಳೆಯ ಸುದ್ದಿ ಏನೆಂದರೆ ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದು, ಅಗ್ರ ಸ್ಥಾನದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ.

Source link

ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ – Kannada News | Love Mocktail 3 movie will release on March 19 after Toxic film postponed

ಮಾರ್ಚ್ 19ರಂದು ‘ಟಾಕ್ಸಿಕ್’ (Toxic) ಸಿನಿಮಾ ನೋಡಲು ಸಿನಿಪ್ರಿಯರು ಕಾದಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ. ಈಗ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಲ್ಲಿ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾವನ್ನು ಬಿಡುಗಡೆ ಮಾಡಲು ಡಾರ್ಲಿಂಗ್ ಕೃಷ್ಣ ಸಜ್ಜಾಗಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ್ದಾರೆ.

ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗುವ ವೀಕೆಂಡ್ ಸೇರಿದಂತೆ ಮಾರ್ಚ್ 19 ಎಲ್ಲ ರೀತಿಯಿಂದಲೂ ಚಿತ್ರತಂಡಗಳಿಗೆ ಸೂಕ್ತವಾದ ದಿನಾಂಕ. ಆ ದಿನಾಂಕದಂದು ‘ಟಾಕ್ಸಿಕ್’ ಬಿಡುಗಡೆ ಆಗದಿದ್ದರೂ, ಅದೇ ದಿನ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ಬಿಡುಗಡೆ ಮಾಡಲು ‘ಕೆವಿಎನ್’ ಸಂಸ್ಥೆ ತೀರ್ಮಾನಿಸಿದೆ. ಈ ಸಿನಿಮಾವನ್ನು ಕೆವಿಎನ್ ಸಂಸ್ಥೆ ವಿತರಿಸುತ್ತಿದೆ.

‘ಲವ್ ಮಾಕ್ಟೇಲ್ 3’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿದ್ದಾರೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೆ ಹೋಗುತ್ತಲೇ ‘ಲವ್ ಮಾಕ್ಟೇಲ್ 3’ ಪಾಲಿಗೆ ಅದೃಷ್ಟ ಖುಲಾಯಿಸಿದೆ. ಈ ಚಿತ್ರವನ್ನು ಏಪ್ರಿಲ್ 10ರಂದು ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ, ಯುಗಾದಿ ರಜೆಯಂದೇ ‘ಲವ್ ಮಾಕ್ಟೇಲ್ 3’ ತೆರೆಕಾಣಿಸಲು ಚಿತ್ರತಂಡ ತೀರ್ಮಾನಿಸಿದೆ.

ಮಾರ್ಚ್ 19ರ ಸಮಯದಲ್ಲಿ ಯುಗಾದಿ, ರಂಜಾನ್ ಮುಂತಾದ ಹಬ್ಬಗಳಿಗೆ ಸಾಲು ಸಾಲು ರಜೆಗಳು ಇರಲಿವೆ. ಸಿನಿಮಾದ ಬಾಕ್ಸ್ ಆಫೀಸ್​​ ಗಳಿಕೆಗೆ ಅದು ಪ್ರಶಸ್ತವಾದ ಸಮಯ. ಅಂತಹ ಲಾಭದಾಯಕ ದಿನಾಂಕವು ‘ಲವ್ ಮಾಕ್ಟೇಲ್ 3’ ಸಿನಿಮಾಗೆ ಸಿಕ್ಕಿದೆ. ‘ಕ್ರಿಸ್‌ಮಿ’ ಬ್ಯಾನರ್ ಮೂಲಕ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಲವ್ ಮಾಕ್ಟೇಲ್ 3: ಹೊಸ ಹಾಡು ರಿಲೀಸ್

‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಹಿಟ್ ಆಗಿದ್ದರಿಂದ ‘ಲವ್ ಮಾಕ್ಟೇಲ್ 3’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರೇಚಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರು ನಟಿಸಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾತ್ರಿ ಈ ಆಹಾರಗಳ ಸೇವನೆ ಮಾಡುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ವಿಷ ಸೇವಿಸುತ್ತಿದ್ದೀರಿ ಎಂದರ್ಥ! – Kannada News | Nighttime Eating: What Not to Eat

ರಾತ್ರಿಯ ನಿದ್ದೆ (Sleep) ಮನುಷ್ಯನಿಗೆ ತುಂಬಾ ಮುಖ್ಯ. ಈ ಸಮಯದಲ್ಲಿ ದೇಹಕ್ಕೆ ವಿಶ್ರಾಂತಿ ಬೇಕಾಗಿರುತ್ತದೆ. ಹಾಗಾಗಿ ರಾತ್ರಿ ಸೇವನೆ ಮಾಡುವ ಆಹಾರ ಎಲ್ಲಾ ರೀತಿಯಿಂದಲೂ ಬಹಳ ಮುಖ್ಯವಾಗಿರುತ್ತದೆ. ಸೂರ್ಯ ಮುಳುಗಿದ ನಂತರ ನಮ್ಮ ಜೀರ್ಣಕ್ರಿಯೆ ನಿಧಾನಗೊಳ್ಳುವುದರಿಂದ ರಾತ್ರಿ ಯಾವ ಆಹಾರವನ್ನು, ಎಷ್ಟು ಪ್ರಮಾಣದಲ್ಲಿ ಸೇವಿಸುತ್ತೇವೆ ಎಂಬುದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ರಾತ್ರಿ ಸರಿಯಾದ ಆಹಾರ ಪದ್ಧತಿ ಪಾಲಿಸದಿದ್ದರೆ ದೇಹಕ್ಕೆ ಸರಿಯಾಗಿ ವಿಶ್ರಾಂತಿ ಸಿಗುವುದಿಲ್ಲ. ಹೊಟ್ಟೆ ತುಂಬಿರುವ ಅನುಭವ, ಗ್ಯಾಸ್ಟ್ರಿಕ್, ಆಸಿಡಿಟಿ, ಎದೆ ಉರಿ, ನಿದ್ರೆಯಲ್ಲಿರುವಾಗ ಮಧ್ಯೆ ಮಧ್ಯೆ ಎಚ್ಚರವಾಗುವುದು ಅಥವಾ ಬೆಳಿಗ್ಗೆ ಎದ್ದ ತಕ್ಷಣ ದಣಿವು ಕಾಣಿಸಿಕೊಳ್ಳುವುದೆಲ್ಲವೂ ಸೇವಿಸುತ್ತಿರುವ ಆಹಾರ ಸರಿಯಾಗಿಲ್ಲ ಎಂಬುದರ ಲಕ್ಷಣಗಳಾಗಿವೆ. ಮತ್ತೆ ಕೆಲವರಿಗೆ ಬೆವರು, ಬೆಳಿಗ್ಗೆ ತಲೆ ಭಾರವಾಗಿರುವುದು, ತೂಕ ಹೆಚ್ಚಳ, ಮಲಬದ್ಧತೆ ಹಾಗೂ ದಿನವಿಡೀ ಸುಸ್ತು ಕಾಣಿಸಿಕೊಳ್ಳಬಹುದು. ಇವೆಲ್ಲವೂ ರಾತ್ರಿ ಊಟದ ಸಮಯ, ಅಭ್ಯಾಸಗಳು ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತವೆ. ಹಾಗಾಗಿ ರಾತ್ರಿ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಮತ್ತು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಈ ಸ್ಟೋರಿಯಲ್ಲಿ ತಿಳಿಸಿರುವ ಸಲಹೆಗಳನ್ನು ತಪ್ಪದೆ ಪಾಲಿಸಿ.

ರಾತ್ರಿ ಯಾವ ಆಹಾರಗಳನ್ನು ತಿನ್ನಬಾರದು?

  • ರಾತ್ರಿ ಜೀರ್ಣಿಸಿಕೊಳ್ಳಲು ಕಷ್ಟಕರವಾದ ಮತ್ತು ಹೊಟ್ಟೆಗೆ ಒತ್ತಡ ನೀಡುವ ಆಹಾರಗಳ ಸೇವನೆ ಮಾಡಬಾರದು.
  • ಎಣ್ಣೆಯಲ್ಲಿ ಕರಿದ ಮತ್ತು ಅತಿ ಮಸಾಲೆಯುಕ್ತ ಆಹಾರಗಳು ಜೀರ್ಣಕ್ರಿಯೆ ಹದಗೆಡಿಸಿ ಆಸಿಡಿಟಿ ಹೆಚ್ಚಿಸಬಹುದು.
  • ಹೆಚ್ಚು ಸಿಹಿ ಪದಾರ್ಥಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಅಸ್ಥಿರಗೊಳಿಸಿ ನಿದ್ರೆಗೆ ಅಡ್ಡಿಪಡಿಸಬಹುದು.
  • ಹೆಚ್ಚು ಉಪ್ಪು ಇರುವ ಆಹಾರಗಳು ದೇಹದಲ್ಲಿ ನೀರನ್ನು ಹಿಡಿದುಕೊಳ್ಳುವ ಕಾರಣ ಊತ ಮತ್ತು ಅಸ್ವಸ್ಥತೆ ಉಂಟಾಗಬಹುದು.
  • ಪ್ರೊಸೆಸ್ಡ್ ಮತ್ತು ಜಂಕ್ ಫುಡ್‌ಗಳಲ್ಲಿ ಇರುವ ಕೊಬ್ಬು ಜೀರ್ಣಕ್ರಿಯೆಯನ್ನು ಮತ್ತಷ್ಟು ನಿಧಾನಗೊಳಿಸುತ್ತದೆ.
  • ರಾತ್ರಿ ಚಹಾ, ಕಾಫಿ ಅಥವಾ ಕೆಫೀನ್ ಇರುವ ಪಾನೀಯಗಳನ್ನು ಸೇವಿಸಬಾರದು.
  • ತುಂಬಾ ತಂಪಾದ ಅಥವಾ ಹಾಲು ಉತ್ಪನ್ನಗಳು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗೆ ಕಾರಣವಾಗಬಹುದು.

ರಾತ್ರಿ ಸಮಯದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು?

  • ರಾತ್ರಿ ಸಮಯದಲ್ಲಿ ಹಗುರ ಮತ್ತು ಸುಲಭವಾಗಿ ಜೀರ್ಣವಾಗುವ ಆಹಾರ ಸೇವಿಸುವುದು ಉತ್ತಮ.
  • ಕಡಿಮೆ ಪ್ರಮಾಣದಲ್ಲಿ ಬೇಯಿಸಿದ ತರಕಾರಿಗಳು
  • ದಾಲ್ (ಬೇಳೆ)
  • ರೊಟ್ಟಿ ಅಥವಾ ಸ್ವಲ್ಪ ಅನ್ನ
  • ಖಿಚ್ಡಿ ಅಥವಾ ಸೂಪ್ನಿ
  • ಯಮಿತ ಪ್ರಮಾಣದಲ್ಲಿ ಮೊಸರು ಅಥವಾ ಮಜ್ಜಿಗೆ.

ಇದನ್ನೂ ಓದಿ: ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕು ಅಂದ್ರೆ ಮಲಗುವ ಮೊದಲು ಈ ಆಹಾರಗಳನ್ನು ಸೇವನೆ ಮಾಡಬೇಡಿ

ಉತ್ತಮ ಆರೋಗ್ಯಕ್ಕಾಗಿ ಇನ್ನಷ್ಟು ಸಲಹೆಗಳು:

  • ಮಲಗುವ ಸಮಯಕ್ಕೆ ಕನಿಷ್ಠ ಎರಡು ರಿಂದ ಮೂರು ಗಂಟೆಗಳ ಮೊದಲು ರಾತ್ರಿ ಊಟ ಮಾಡಬೇಕು.
  • ಊಟದ ತಕ್ಷಣ ಮಲಗುವುದನ್ನು ತಪ್ಪಿಸಿ, ಸ್ವಲ್ಪ ಹೊತ್ತು ವಾಕಿಂಗ್ ಮಾಡಿ.
  • ಟಿವಿ ಅಥವಾ ಮೊಬೈಲ್ ನೋಡುತ್ತಾ ಊಟ ಮಾಡುವುದನ್ನು ಬಿಡಿ, ಇದರಿಂದ ಹೊಟ್ಟೆ ತುಂಬಿದಾಗ ತಿಳಿಯುತ್ತದೆ.
  • ರಾತ್ರಿ ಹೊತ್ತು ಹೆಚ್ಚು ನೀರು ಅಥವಾ ತುಂಬಾ ತಣ್ಣಗಿರುವ ನೀರನ್ನು ಕುಡಿಯಬಾರದು.
  • ಬೆಳಿಗ್ಗೆ ಏಳುವ ಮತ್ತು ರಾತ್ರಿ ನಿದ್ರೆ ಮಾಡುವ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು.
  • ಒತ್ತಡವನ್ನು ಕಡಿಮೆ ಮಾಡಿಕೊಂಡು ರಾತ್ರಿ ಚೆನ್ನಾಗಿ ನಿದ್ರೆ ಮಾಡಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

DSSSB Recruitment 2026: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು! – Kannada News | DSSSB Recruitment 2026: Apply for Delhi Govt Jobs; 10th Pass to Graduates Eligible

ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂಬ ಹಂಬಲ ಹೊತ್ತಿರುವ ಯುವಜನತೆಗೆ ಈಗ ಸುಸಮಯ ಒದಗಿಬಂದಿದೆ. ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ, 10ನೇ ತರಗತಿಯಿಂದ ಹಿಡಿದು ವೃತ್ತಿಪರ ಪದವೀಧರರವರೆಗೆ ಎಲ್ಲರಿಗೂ ಅವಕಾಶ ಕಲ್ಪಿಸುತ್ತಿದೆ.

ವಿವಿಧ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳು:

ಈ ನೇಮಕಾತಿಗೆ ಶೈಕ್ಷಣಿಕ ಅರ್ಹತೆಗಳನ್ನು ಹುದ್ದೆಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ. ಕೆಲವು ಹುದ್ದೆಗಳಿಗೆ, 10 ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ, ಹಲವರಿಗೆ, ಐಟಿಐ, ಪದವಿ ಅಥವಾ ವೃತ್ತಿಪರ ಪದವಿ ಅಗತ್ಯವಿದೆ. ಉದಾಹರಣೆಗೆ, ಪುಸ್ತಕ ಬೈಂಡರ್‌ಗೆ ಐಟಿಐ, ಜೂನಿಯರ್ ಲ್ಯಾಬ್ ಅಸಿಸ್ಟೆಂಟ್‌ಗೆ 12 ನೇ ತರಗತಿ ಅಥವಾ ಪದವಿ, ಜೂನಿಯರ್ ಕಾನೂನು ಅಧಿಕಾರಿಗೆ ಕಾನೂನು ಪದವಿ ಮತ್ತು ವರದಿಗಾರರಿಗೆ ಪದವಿ ಅಗತ್ಯವಿದೆ. ತಾಂತ್ರಿಕ ಹುದ್ದೆಗಳಿಗೆ, ಬಿಇ, ಬಿಟೆಕ್ ಅಥವಾ ಸಂಬಂಧಿತ ವಿಷಯದಲ್ಲಿ ಪದವಿ ಅಗತ್ಯವಿದೆ.

ವಯಸ್ಸಿನ ಮಿತಿ ಮತ್ತು ವೇತನ:

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ರಿಂದ 21 ವರ್ಷಗಳು ಮತ್ತು ಗರಿಷ್ಠ ವಯಸ್ಸು 30 ರಿಂದ 35 ವರ್ಷಗಳು, ಇದು ಹುದ್ದೆಗೆ ಅನುಗುಣವಾಗಿ ಬದಲಾಗುತ್ತದೆ. ಆಯ್ಕೆಯು ಲಿಖಿತ ಪರೀಕ್ಷೆಯನ್ನು ಆಧರಿಸಿರುತ್ತದೆ, ಇದರಲ್ಲಿ ಟೈಯರ್-1 ಮತ್ತು ಟೈಯರ್-2 ಪರೀಕ್ಷೆಗಳು ಒಳಗೊಂಡಿರಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ 18,000 ರಿಂದ 1,42,400 ರೂ. ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ನಿಮ್ಮದೇ ಜಿಲ್ಲೆಯ ಆಧಾರ್ ಕೇಂದ್ರಗಳಲ್ಲಿ ಉದ್ಯೋಗವಕಾಶ

ಅರ್ಜಿ ಶುಲ್ಕ ಮತ್ತು ಫಾರ್ಮ್ ಭರ್ತಿ ಮಾಡುವ ವಿಧಾನ:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಆದರೆ ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕು. ಶುಲ್ಕ ಪಾವತಿಸಿದ ಬಳಿಕ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಮುದ್ರಣ (Print-out) ತೆಗೆದಿಟ್ಟುಕೊಳ್ಳುವುದು ಮುಂದಿನ ಪ್ರಕ್ರಿಯೆಗಳಿಗೆ ಸಹಕಾರಿಯಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ – Kannada News | Phone Tapping Row: Union Minister Pralhad joshi Mocks about Siddaramaiah And DK Shivakumar relationship

ಹುಬ್ಬಳ್ಳಿ, (ಮಾರ್ಚ್ 04): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ ಪಕ್ಷದವರದು ಮಾಡ್ತಿದ್ದಾರಾ? ಅಥವಾ ಡಿ ಕೆ‌ ಶಿವಕುಮಾರ್ ಅವರದು ಮಾಡ್ತಿದ್ದಾರೆ? ಈ ಬಗ್ಗೆ ಮೊದಲು ನ್ಯಾಯಾಂಗ ತನಿಖೆಯಾಗಲಿ ಎಂದಿದ್ದಾರೆ. ಅಲ್ಲದೇ ನಿಮ್ಮದು ಹಾಲು ಜೇನು ಅಲ್ಲಆಲ್ಕೋಹಾಲ್ ಜೇನು ಇರಬೇಕೆಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

Source link

ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ – Kannada News | CRPF 38 Battalion Celebrates Holi 2026 with Enthusiasm in Poonch, Jammu and Kashmir, Video goes viral

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ.

ವಿಡಿಯೋ ಕೃಪೆ: ಎಎನ್​ಐ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್​​ ಟೋಪಿ: ನಾಲ್ವರ ವಿರುದ್ಧ ದೂರು ದಾಖಲು – Kannada News | Bengaluru MBBS Seat Scam: 25 Lakh Fraud, FIR Filed Against Four Persons

ಬೆಂಗಳೂರು, ಮಾರ್ಚ್​​ 04: ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS 318(4), 318(2) ಸೇರಿ ಒಟ್ಟು 8 ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಇರೋದೇನು?

ವಂಚನೆ ಬಗ್ಗೆ ಆಯೇಷಾ ಖಥುಮ್​ ಅವರ ತಂದೆ ಲಾಲ್ ಬಾಬು ಅವರ ದೂರಿನಂತೆ ಆರೋಪಿಗಳ ವಿರುದ್ಧ ಕೇಸ್​​ ದಾಖಲಾಗಿದೆ. ದ್ವಿತೀಯ ಪಿಯುಸಿ ಮತ್ತು NLT ಪರೀಕ್ಷೆಗಳನ್ನು ಬರೆದಿದ್ದ ಯುವತಿ MBBSಗೆ ಸೇರಿಕೊಳ್ಳುವ ಬಗ್ಗೆ ಯೋಚಿಸಿ, ಒಳ್ಳೆಯ ಕಾಲೇಜಿನಲ್ಲಿ ಸೀಟ್​​ಗಾಗಿ ಪ್ರಯತ್ನಿಸುತ್ತಿದ್ದರು. ಈ ನಡುವೆ ಪರಿಚಯದ ಸೈಯದ್‌ ತಬ್ರೇಜ್ ಮೂಲಕ ಶಂಶೇರ್ ಬೇಗ್ ಎಂಬಾತನ ಪರಿಚಯವಾಗಿತ್ತು. ಈತ ತನಗೆ ಕಿಮ್ಸ್‌ ಮೆಡಿಕಲ್ ಕಾಲೇಜಿನ ಪ್ರೆಸಿಡೆಂಟ್ ಪರಿಚಯವಿರುವುದಾಗಿ ಹೇಳಿ ಡಾ. ಶರತ್ ಕೆ.ಪಿ. ಎಂಬುವವರನ್ನು ಪರಿಚಯಿಸಿದ್ದ. ಅದರಂತೆ ಬನಶಂಕರಿ 2ನೇ ಹಂತದಲ್ಲಿನ ಕಿಮ್ಸ್‌ ಮೆಡಿಕಲ್ ಕಾಲೇಜಿನಲ್ಲಿ ಶರತ್​​ನ ಭೇಟಿಯಾಗಿದ್ದರು. ಈ ವೇಳೆ ಇದೇ ಕಾಲೇಜಿನಲ್ಲಿ ಆಯೇಷಾ ಖಥುಮ್​​ಗೆ ಸೀಟ್​​ ಕೊಡಿಸೋದಾಗಿ ನಂಬಿಸಿ ಶೈಕ್ಷಣಿಕ ದಾಖಲೆಗಳನ್ನು ಪಡೆಯಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ವಾಣಿಜ್ಯ, ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ ಕೆಇಆರ್​ಸಿ; ವಿರೋಧದ ನಡುವೆ ವಿದ್ಯುತ್​​ ದರ ಏರಿಕೆ

ನಂತರ ಹೋಟೆಲ್​​ ಒಂದರಲ್ಲಿ ಭೇಟಿಯಾಗಿದ್ದ ಆರೋಪಿಗಳು ಡೊನೇಶನ್​​ ಆಗಿ 25 ಲಕ್ಷ ಹಣ ಕೊಟ್ಟರೆ ಸೀಟ್​​ ಪಕ್ಕಾ ಎಂದಿದ್ದರು. ಇವರ ಮಾತು ನಂಬಿ ಯುವತಿ ಕಡೆಯವರು ಹಂತ ಹಂತವಾಗಿ ಯುಪಿಐ, ಚೆಕ್​​ ರೂಪದಲ್ಲಿ 10 ಲಕ್ಷ ರೂ. ಹಣ ನೀಡಿದ್ದಾರೆ. ಬಳಿಕ ಆರೋಪಿಗಳ ಡಿಮ್ಯಾಂಡ್​​ ಹಿನ್ನೆಲೆ ಉಳಿದವ 15 ಲಕ್ಷವನ್ನ ನಗದು ರೂಪದಲ್ಲಿ ನೀಡಲಾಗಿದೆ. ಪೂರ್ತಿ ಹಣ ಕೈಸೇರಿದ ಮೇಲೆ ಆರೋಪಿಗಳು ತಮ್ಮ ಅಸಲಿ ರೂಪ ತೋರಿಸಿದ್ದು, ಮೆಡಿಕಲ್ ಸೀಟ್ ಕೊಡಿಸದೇ ವಂಚಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಡಾ. ಕೆ.ಪಿ ಶರತ್ ಎಂಬ ವ್ಯಕ್ತಿ ಕಿಮ್ಸ್​​ ಕಾಲೇಜಿನ ಪ್ರೆಸಿಡೆಂಟ್​​ ಅಲ್ಲ ಎಂಮಬ ವಿಚಾರ ಬಯಲಾಗಿದೆ. ಅಂತಿಮವಾಗಿ ತಾವು ಮೋಸ ಹೋಗಿದ್ದು ಅರಿತ ಯುವತಿ ಕಡೆಯವರು ಈ ಬಗ್ಗೆ ಪೊಲೀಸರ ಮೊರೆ ಹೋಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version