ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ.

ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಡಾ. ವಾಣಿ ರೆಡ್ಡಿ ಅವರು ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ದೇಹದಲ್ಲಿ ಸೋಂಕು (Infection) ಹರಡಿ ಚಿಕಿತ್ಸೆ ಫಲಿಸದೆ ನರ್ಮದಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!

ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ. ಶಸ್ತ್ರಚಿಕಿತ್ಸೆಯ ವೇಳೆ ಕರಳು ಕತ್ತರಿಸಿರುವುದನ್ನು ಮರೆಮಾಚಲಾಗಿತ್ತು. ಈಗ ನರ್ಮದಾ ಸಾವಿಗೆ ಕಾರಣರಾದ ಡಾ. ವಾಣಿ ರೆಡ್ಡಿ ಮತ್ತು ಡಾ. ನಾರಾಯಣಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಟಿವಿ9 ಗೆ ಪ್ರತಿಕ್ರಿಯಿಸಿರುವ ಡಾ. ವಾಣಿ ರೆಡ್ಡಿ, “ನರ್ಮದಾ ಅವರ ಸಣ್ಣ ಕರಳು ಅಂಟಿಕೊಂಡಿತ್ತು, ಅದನ್ನು ಬಿಡಿಸುವಾಗ ಸ್ವಲ್ಪ ಹಾನಿಯಾಗಿತ್ತು (Damage). ಹಿರಿಯ ವೈದ್ಯ ಡಾ. ನಾರಾಯಣಸ್ವಾಮಿ ಮೂಲಕ ಕೂಡಲೇ ಚಿಕಿತ್ಸೆ ಕೊಡಿಸಲಾಗಿತ್ತು. ಮೂರು ದಿನದ ಹಿಂದೆ ಅವರು ಗುಣಮುಖರಾಗಿ ಮನೆಗೆ ಹೋಗಿದ್ದರು. ಮನೆಯಲ್ಲಿ ಏನಾಯಿತೋ ಗೊತ್ತಿಲ್ಲ, ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ” ಎಂದು ಹೇಳಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಆಗ್ರಹ ಕೇಳಿಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ ಅಂಪೈರ್ ನೀಡಿದ ತೀರ್ಪು.

ಈ ಪಂದ್ಯದ 17ನೇ 2ನೇ ಎಸೆತವನ್ನು ಕೃನಾಲ್ ಪಾಂಡ್ಯ ಸಿಕ್ಸರ್​ನತ್ತ ಬಾರಿಸಿದ್ದರು. ಆದರೆ ಚೆಂಡು ಬೌಂಡರಿ ಲೈನ್ ದಾಟುವ ಮುನ್ನ ನಮನ್ ಧೀರ್ ಹಿಡಿದಿದ್ದರು. ಅಲ್ಲದೆ ಅದನ್ನು ರಿಲೇ ಕ್ಯಾಚ್​ಗಾಗಿ ತಿಲಕ್ ವರ್ಮಾರತ್ತ ಎಸೆದಿದ್ದರು. ಆದರೆ ಈ ಕ್ಯಾಚ್ ಅನ್ನು ತಿಲಕ್ ವರ್ಮಾ ಹಿಡಿದಿರಲಿಲ್ಲ.

ಅಷ್ಟೇ ಅಲ್ಲದೆ ಕಾಲು ಬೌಂಡರಿ ಲೈನ್​ಗೆ ತಾಗಿದೆ ಎಂದು ನಮನ್ ಧೀರ್ ಜೊತೆ ಹೇಳುತ್ತಿರುವುದನ್ನು ಗಮನಿಸಿದ ಕೃನಾಲ್ ಪಾಂಡ್ಯ ಸಿಕ್ಸ್ ಆಗಿದೆ ಎಂದು ರನ್ ಓಡಿರಲಿಲ್ಲ. ಆದರೆ ಮೂರನೇ ಅಂಪೈರ್ ಪರಿಶೀಲನೆ ವೇಳೆ ನಮನ್ ಧೀರ್ ಕಾಲು ಬೌಂಡರಿ ಗೆರೆಗೆ ತಾಗಿರಲಿಲ್ಲ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು ‘ಎಡವಟ್ಟು’

ಹೀಗಾಗಿ ಮೂರನೇ ಅಂಪೈರ್ ಸಿಕ್ಸ್ ನೀಡಿರಲಿಲ್ಲ. ಇತ್ತ ರನ್ ಓಡದ ಕಾರಣ ಡಾಟ್ ಬಾಲ್ ಆಯಿತು. ಆದರೆ ಅಂಪೈರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಡಗೌಟ್ ಬಳಿ ನಾಲ್ಕನೇ ಅಂಪೈರ್ ಜೊತೆ ತೀವ್ರ ವಾಗ್ವಾದಕ್ಕಿಳಿದರು.

ಶಿಕ್ಷೆಗೆ ಕಾರಣವೇನು?

ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸುವಾಗ ಆ್ಯಂಡಿ ಫ್ಲವರ್  ಅವರು ಬಳಸಿದ ಕೆಲವು ‘ಅಸಭ್ಯ ಪದಗಳು’ ಮೈದಾನದ ಮೈಕ್ರೋಫೋನ್‌ನಲ್ಲಿ ಸೆರೆಯಾಗಿದ್ದವು. ಇದು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ರ (ಪಂದ್ಯದ ಅವಧಿಯಲ್ಲಿ ಅಸಭ್ಯ ಭಾಷೆಯ ಬಳಕೆ) ಅಡಿಯಲ್ಲಿ ‘ಲೆವೆಲ್ 1’ ಅಪರಾಧವೆಂದು ಪರಿಗಣಿಸಲಾಗಿದೆ.

ಅದರಂತೆ  ಮ್ಯಾಚ್ ರೆಫರಿ ಅಮಿತ್ ಶರ್ಮಾ ಅವರು ವಿಧಿಸಿದ ಈ ದಂಡವನ್ನು ಫ್ಲವರ್ ಒಪ್ಪಿಕೊಂಡಿದ್ದಾರೆ. ಅದರಂತೆ ಇದೀಗ ಆ್ಯಂಡಿ ಫ್ಲವರ್​ಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.

Source link

ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ – Kannada News | WFH, cut on gold, petrol, fertilizer, edible oil usage, know how Modi’s tasklist helps Indian economy

ನವದೆಹಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಿರ್ದಿಷ್ಟವಾಗಿ ಒಂದಷ್ಟು ಕಾರ್ಯಗಳ ಪಟ್ಟಿ ಮಾಡಿ, ಅದನ್ನು ಮಾಡಲು ಯತ್ನಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕೋವಿಡ್ ಕಾಲದಲ್ಲಿ ತುರ್ತಾಗಿ ಜಾರಿಯಾದ ವರ್ಕ್ ಫ್ರಂ ಹೋಮ್ ಅನ್ನು ಮಾಡಬೇಕೆಂಬ ಕರೆಯೂ ಅದರಲ್ಲಿ ಒಳಗೊಂಡಿದೆ. ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದೂ ಮೋದಿ ಅವರು ಕರೆ ಕೊಟ್ಟಿದ್ದಾರೆ. ಮೋದಿ ಅವರ ಈ ಕರೆಗಳು ಮುಂಬರುವ ದೊಡ್ಡ ವಿದ್ಯಮಾನದ ಮುನ್ಸೂಚನೆ ಇರಬಹುದೇ ಎಂದು ಹಲವರು ಶಂಕಿಸಿದ್ದಾರೆ. ವಾಸ್ತವದಲ್ಲಿ ಪ್ರಧಾನಿಗಳು ಯಾಕೆ ಈ ಕರೆ ನೀಡಿದರು? ಕೋವಿಡ್​ನಂತಹ ವಿಪತ್ತು ಕಾದಿದೆಯಾ?

ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಸಂದೇಶಗಳಿವು…

  1. ವರ್ಕ್ ಫ್ರಂ ಹೋಮ್​ಗೆ ಆದ್ಯತೆ ನೀಡಿ.
  2. ಸ್ವಂತ ವಾಹನ ಬದಲು ಸಾರ್ವಜನಿಕ ಸಾರಿಗೆ, ಮೆಟ್ರೋಗಳನ್ನು ಬಳಸಿ.
  3. ಕಾರ್ ಬೇಕೆಂದರೆ ಕಾರ್​ಪೂಲ್​ಗೆ ಪ್ರಯತ್ನಿಸಿ. ಎಲೆಕ್ಟ್ರಿಕ್ ವಾಹನಗಳನ್ನು ಬಳಸಿ.
  4. ಕೃಷಿಕರು ರಾಸಾಯನಿಕ ರಸಗೊಬ್ಬರ ಬಳಕೆಯನ್ನು ಶೇ. 50ರಷ್ಟು ಕಡಿಮೆ ಮಾಡಿ. ಸಾವಯವ ಕೃಷಿ ವಿಧಾನ ಅನುಸರಿಸಿ
  5. ಕೃಷಿಯಲ್ಲಿ ಡೀಸಲ್ ಪಂಪ್ ಬದಲು ಸೋಲಾರ್ ಪಂಪ್​ಗಳನ್ನು ಬಳಸಿ
  6. ಒಂದು ವರ್ಷ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸಬೇಡಿ
  7. ಒಂದು ವರ್ಷ ಜನರು ವಿದೇಶಕ್ಕೆ ಪ್ರಯಾಣಿಸುವುದನ್ನು ಮುಂದೂಡಿಕೆ ಮಾಡಿ
  8. ಅಡುಗೆ ಎಣ್ಣೆ ಬಳಕೆ ಮಿತಿಗೊಳಿಸಿ
  9. ವಿದೇಶೀ ಉತ್ಪನ್ನಗಳ ಬದಲು ಸ್ವದೇಶೀ ಪದಾರ್ಥಗಳನ್ನು ಬಳಸಿ.

ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ

ನರೇಂದ್ರ ಮೋದಿ ಅವರ ಈ ಕರೆಗೆ ಏನು ಕಾರಣ?

ನರೇಂದ್ರ ಮೋದಿ ಅವರು ದೇಶದ ವಿದೇಶೀ ವಿನಿಮಯ ಮೀಸಲು ನಿಧಿಯನ್ನು ಉಳಿಸುವ ಉದ್ದೇಶದಿಂದ ಈ ಮೇಲಿನ ಕರೆಗಳನ್ನು ನೀಡಿದ್ದಾರೆ. ಮೇಲೆ ಅವರು ನೀಡಿರುವ ಸಲಹೆಗಳನ್ನು ಗಮನಿಸಿದರೆ ಅವೆಲ್ಲವೂ ಕೂಡ ಆಮದು ಪದಾರ್ಥಗಳಿಗೆ ಸಂಬಂಧಿಸಿದ್ದೇ ಆಗಿವೆ. ಪೆಟ್ರೋಲಿಯಂ ಉತ್ಪನ್ನಗಳು, ಚಿನ್ನ, ಅಡುಗೆ ಎಣ್ಣೆ, ವಿದೇಶೀ ಬ್ರ್ಯಾಂಡ್ ವಸ್ತುಗಳು ಇವೆಲ್ಲವನ್ನೂ ಆಮದು ಮಾಡಿಕೊಳ್ಳುತ್ತಿದ್ದೇವೆ. ಇದರಿಂದ ದೇಶದ ಕರೆಂಟ್ ಅಕೌಂಟ್ ಡೆಫಿಸಿಟ್ ಗಣನೀಯವಾಗಿ ಹೆಚ್ಚುತ್ತಿದೆ.

ಆಮದು ವೆಚ್ಚದಲ್ಲಿ ಚಿನ್ನದ ಪಾಲು ಶೇ. 9

ಚೀನಾ ಬಿಟ್ಟರೆ ಅತಿಹೆಚ್ಚು ಚಿನ್ನವನ್ನು ಆಮದು ಮಾಡಿಕೊಳ್ಳುವ ದೇಶವೆಂದರೆ ಭಾರತವೇ. ಪ್ರತೀ ವರ್ಷ 700-800 ಟನ್ ಚಿನ್ನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. 2025-26ರ ವರ್ಷದಲ್ಲಿ ಭಾರತದಿಂದ 72 ಬಿಲಿಯನ್ ಡಾಲರ್​ನಷ್ಟು ಚಿನ್ನದ ಆಮದು ಮಾಡಲಾಗಿದೆ. ಭಾರತದ ಒಟ್ಟು ಆಮದು ವೆಚ್ಚದಲ್ಲಿ ಚಿನ್ನದ ಪಾಲೇ ಶೇ. 9ರಷ್ಟಿದೆ.

ಇನ್ನು, ಭಾರತ 2025-26ರಲ್ಲಿ 134.7 ಬಿಲಿಯನ್ ಡಾಲರ್ ಮೊತ್ತದಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿದೆ. ರಸಗೊಬ್ಬರ ಹಾಗೂ ಅಡುಗೆ ಎಣ್ಣೆಗಳೂ ಸಾಕಷ್ಟು ಆಮದಾಗುತ್ತವೆ. 2025-26ರಲ್ಲಿ ಭಾರತದ ಒಟ್ಟು ಆಮದು ವೆಚ್ಚ 775 ಬಿಲಿಯನ್ ಡಾಲರ್ ಇದೆ. ಮೋದಿ ತಿಳಿಸಿದ ಈ ಮೇಲಿನ ನಾಲ್ಕು ಪದಾರ್ಥಗಳ ಆಮದುಗಳೇ 240.7 ಬಿಲಿಯನ್ ಡಾಲರ್ ಇದೆ. ಭಾರತದ ಶೇ. 31.1ರಷ್ಟು ಆಮದು ವೆಚ್ಚ ಈ ನಾಲ್ಕು ವಸ್ತುಗಳಿಂದ ಆಗುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್ ಒಂದು ಊಸರವಳ್ಳಿ; ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಕೈ ಪಕ್ಷವನ್ನು ಕುಟುಕಿದ ಅಣ್ಣಾಮಲೈ

2025-26ರಲ್ಲಿ ನಾಲ್ಕು ಪ್ರಮುಖ ಆಮದು ಪದಾರ್ಥಗಳು

  • ಕಚ್ಚಾ ತೈಲ: 134.7 ಬಿಲಿಯನ್ ಡಾಲರ್
  • ಚಿನ್ನ: 72 ಬಿಲಿಯನ್ ಡಾಲರ್
  • ಅಡುಗೆ ಎಣ್ಣೆ: 19.5 ಬಿಲಿಯನ್ ಡಾಲರ್
  • ರಸಗೊಬ್ಬರ: 14.5 ಬಿಲಿಯನ್ ಡಾಲರ್

ನರೇಂದ್ರ ಮೋದಿ ಅವರು ನೀಡಿರುವ ಕರೆಯನ್ನು ಅರ್ಧದಷ್ಟಾದರೂ ಪಾಲನೆ ಆದರೆ ಭಾರತದ ಆಮದು ವೆಚ್ಚ ಶೇ. 20ರಷ್ಟು ಕಡಿಮೆ ಆಗಬಹುದು. ಟ್ರೇಡ್ ಡೆಫಿಸಿಟ್ ಕೂಡ ಗಣನೀಯವಾಗಿ ತಗ್ಗಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:49 am, Mon, 11 May 26

Source link

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! – Kannada News | NIA, Raw and NSG Join Probe into Explosives Found on PM Modi’s Route in Bengaluru

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ!

ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು (Gilatine) ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಭಾವಿ ತನಿಖಾ ಸಂಸ್ಥೆಗಳಾದ ಎನ್ಐಎ (NIA), ರಾ (RAW) ಮತ್ತು ಕೇಂದ್ರ ಗುಪ್ತಚರ ಇಲಾಖೆ (IB) ಅಧಿಕಾರಿಗಳು ಈಗ ತನಿಖಾ ಕಣಕ್ಕೆ ಇಳಿದಿದ್ದಾರೆ.

ಮುಖ್ಯಾಂಶಗಳು

  •  ಜಿಲೆಟಿನ್ ಪತ್ತೆ ಪ್ರಕರಣದ ತನಿಖೆಗೆ ಎನ್ಐಎ ಮತ್ತು ರಾ ಅಧಿಕಾರಿಗಳ ಎಂಟ್ರಿ.
  •  ಬಾಕ್ಸ್ ಉದ್ದೇಶಪೂರ್ವಕವಾಗಿ ಇಟ್ಟಿರುವ ಶಂಕೆ; ಎನ್‌ಎಸ್‌ಜಿಯಿಂದ ಭದ್ರತಾ ಲೋಪದ ಮಾಹಿತಿ ಸಂಗ್ರಹ.
  •  ಸ್ಥಳದಲ್ಲಿ ಸಿಸಿಟಿವಿ ಇಲ್ಲದಿದ್ದರೂ ಪ್ರವೇಶ ದ್ವಾರಗಳ ದೃಶ್ಯಾವಳಿಗಳ ತೀವ್ರ ತಪಾಸಣೆ ಪ್ರಗತಿಯಲ್ಲಿದೆ.

ಸ್ಥಳ ಪರಿಶೀಲನೆ ಮತ್ತು ಮಾಹಿತಿ ಸಂಗ್ರಹ

ರಾಷ್ಟ್ರೀಯ ತನಿಖಾ ದಳದ (NIA) ಡಿವೈಎಸ್‌ಪಿ ನೇತೃತ್ವದ ತಂಡವು ಸ್ಫೋಟಕ ಪತ್ತೆಯಾದ ವಡೇರಹಳ್ಳಿ ಗೇಟ್ ಸಮೀಪದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀನಿವಾಸ್ ಗೌಡ ಅವರಿಂದ ಎನ್ಐಎ ಅಧಿಕಾರಿಗಳು ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿಯವರ ಭದ್ರತೆಯ ಜವಾಬ್ದಾರಿ ಹೊರುವ ಎನ್‌ಎಸ್‌ಜಿ (NSG) ಪಡೆಯ ಮುಖ್ಯಸ್ಥರು ಕೂಡ ರಾಜ್ಯ ಪೊಲೀಸ್ ಇಲಾಖೆಯಿಂದ ತನಿಖಾ ಪ್ರಗತಿಯ ವರದಿಯನ್ನು ತರಿಸಿಕೊಂಡಿದ್ದಾರೆ.

ಉದ್ದೇಶಪೂರ್ವಕ ಕೃತ್ಯದ ಶಂಕೆ

ರಾಮನಗರ ಡಿವೈಎಸ್‌ಪಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಾಥಮಿಕ ತನಿಖೆಯಲ್ಲಿ ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ. ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್‌ಗಳನ್ನು ಯಾರೋ ಉದ್ದೇಶಪೂರ್ವಕವಾಗಿಯೇ ಅಲ್ಲಿ ಇಟ್ಟಿದ್ದಾರೆ ಎಂಬುದು ತನಿಖೆ ವೇಳೆ ದೃಢಪಟ್ಟಿದೆ. ಆದರೆ, ಸ್ಫೋಟಕಗಳನ್ನು ಯಾವ ನಿಖರ ಸಮಯದಲ್ಲಿ ತಂದು ಇರಿಸಲಾಗಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಫೋಟಕ ಪತ್ತೆಯಾದ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವುದು ತನಿಖಾ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!

ಸಿಸಿಟಿವಿ ಮತ್ತು ಗಡಿ ತಪಾಸಣೆ

ಘಟನಾ ಸ್ಥಳದಲ್ಲಿ ಕ್ಯಾಮೆರಾ ಇಲ್ಲದಿದ್ದರೂ, ಆ ರಸ್ತೆಯ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಜಾಲಾಡುತ್ತಿದ್ದಾರೆ. ಕಗ್ಗಲಿಪುರ ಠಾಣೆ ಪೊಲೀಸರು ಮತ್ತು ಎನ್ಐಎ ತಂಡ ಜಂಟಿಯಾಗಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇಟ್ಟಿವೆ. ಅಂತರರಾಜ್ಯ ಅಥವಾ ಅಂತರಜಿಲ್ಲಾ ನಂಟು ಈ ಕೃತ್ಯದ ಹಿಂದೆ ಇದೆಯೇ ಎಂಬ ನಿಟ್ಟಿನಲ್ಲಿ ‘ರಾ’ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಅತ್ಯಂತ ಬಿಗಿ ಭದ್ರತೆಯ ನಡುವೆಯೂ ಇಂತಹ ಭದ್ರತಾ ಲೋಪ ಸಂಭವಿಸಿರುವುದು ಕೇಂದ್ರ ಮತ್ತು ರಾಜ್ಯದ ಭದ್ರತಾ ಏಜೆನ್ಸಿಗಳಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಮೌಳಿ ನೀರಿನ ಸಮಸ್ಯೆಗೆ ಸಿಕ್ಕಿತು ಪರಿಹಾರ; ಶೂಟ್​​ನಲ್ಲಿ ಪ್ರಿಯಾಂಕಾ ಭಾಗಿ – Kannada News | SS Rajamouli’s Varanasi: Priyanka Chopra Joins Mahesh Babu Film, Production Updates

ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ನಟ ಮಹೇಶ್ ಬಾಬು ಮೊದಲ ಬಾರಿಗೆ ಒಂದಾಗುತ್ತಿರುವ ಸಿನಿಮಾ ‘ವಾರಣಾಸಿ’ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೊಂದು ಅಡ್ವೆಂಚರ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಚೋಪ್ರಾ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದಾರೆ.

ರಾಜಮೌಳಿ ಅವರ ಈ ಸಿನಿಮಾಗೆ ನೀರಿನ ಶಾರ್ಟೇಜ್ ಉಂಟಾಗಿದೆ ಎಂದು ವರದಿ ಆಗಿತ್ತು. ನಿರ್ದೇಶಕರು 150 ಟ್ಯಾಂಕರ್ ನೀರನ್ನು ಕೇಳಿದ್ದರು. ಆದರೆ, ಬೇಸಿಗೆ ಆಗಿರುವುದರಿಂದ ಅಷ್ಟೊಂದು ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೈದರಾಬಾದ್ ಜಲ ಮಂಡಳಿ ಹೇಳಿತ್ತು. ಈಗ ಇದಕ್ಕೆ ರಾಜಮೌಳಿ ಬೇರೆಯ ಅರೇಂಜ್​​ಮೆಂಟ್ಸ್​ ಮಾಡಿದ್ದಾರೆ ಎಂಬುದು ತಿಳಿಯುತ್ತಿದೆ. ಏಕೆಂದರೆ, ಪ್ರಿಯಾಂಕಾ ಚೋಪ್ರಾ ಅವರು ಸಿನಿಮಾದ ಶೂಟ್​​​ನಲ್ಲಿ ಭಾಗವಹಿಸುತ್ತಿದ್ದಾರೆ.

ಇತ್ತೀಚೆಗೆ ಪ್ರಿಯಾಂಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಪ್ರಿಯಾಂಕಾ ಚೋಪ್ರಾ, ‘ವಾರಣಾಸಿ, ಹಿಯರ್ ವಿ ಗೋ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಸಿನಿಮಾದ ಹೊಸ ಶೆಡ್ಯೂಲ್‌ನಲ್ಲಿ ಭಾಗವಹಿಸುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಹಿಂದೆ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಚಿತ್ರೀಕರಣವು ನೀರಿನ ಅಭಾವದ ಕಾರಣದಿಂದಾಗಿ ಸ್ಥಗಿತಗೊಂಡಿತ್ತು ಎಂದು ವರದಿಯಾಗಿತ್ತು. ಇದೀಗ ಅಡೆತಡೆಗಳನ್ನು ನಿವಾರಿಸಿಕೊಂಡು ಚಿತ್ರತಂಡ ಶೂಟ್​​ನಲ್ಲಿ ಬ್ಯುಸಿ ಆಗಿದೆ.

ಈ ಬಿಗ್ ಬಜೆಟ್ ಸಿನಿಮಾದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರದ ಪೋಸ್ಟರ್ ರಿಲೀಸ್ ಆಗಿ ಟ್ರೋಲ್ ಆಗಿತ್ತು. ಇವರ ಜೊತೆಗೆ ಬಹುಭಾಷಾ ನಟರಾದ ಆರ್. ಮಾಧವನ್ ಮತ್ತು ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ಚಿತ್ರದ ತೂಕವನ್ನು ಹೆಚ್ಚಿಸಿದೆ. ಕೆ.ಎಲ್. ನಾರಾಯಣ ಮತ್ತು ಎಸ್.ಎಸ್. ಕಾರ್ತಿಕೇಯ ಅವರು ಈ ಅದ್ದೂರಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.ರಾಜಮೌಳಿ ಸಿನಿಮಾಗಳಿಗೆ ಇವರ ಸಂಗೀತ ಇರೋದು ಸಾಮಾನ್ಯ ಆಗಿದೆ. ಇನ್ನು ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದು, ಈ ಸಿನಿಮಾ ಭಾರತೀಯ ಚಿತ್ರರಂಗದ ಮಟ್ಟಿಗೆ ಮತ್ತೊಂದು ‘ಬಾಹುಬಲಿ’ ಅಥವಾ ‘ಆರ್.ಆರ್.ಆರ್’ ಮಾದರಿಯ ಸಂಚಲನ ಸೃಷ್ಟಿಸುವುದು ಗ್ಯಾರಂಟಿ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ಚಿತ್ರತಂಡದ ಯೋಜನೆಯಂತೆ ‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಮಹೇಶ್ ಬಾಬು ಅವರ ಹೊಸ ಲುಕ್ ಮತ್ತು ರಾಜಮೌಳಿ ಅವರ ಮೇಕಿಂಗ್ ಶೈಲಿಯನ್ನು ನೋಡಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ.

https://tv9kannada.com/entertainment

Source link

ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು ‘ಎಡವಟ್ಟು’

ಕ್ರಿಕೆಟ್ ಅಂಗಳದಲ್ಲಿ ಕ್ಷಣಕ್ಷಣಕ್ಕೂ ರೋಚಕತೆ! ಒಂದೆಡೆ ಅದ್ಭುತ ಫೀಲ್ಡಿಂಗ್ ಸಾಹಸ, ಇನ್ನೊಂದೆಡೆ ಸಹ ಆಟಗಾರರ ನಡುವೆಯೇ ಕಿತ್ತಾಟ. ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಅಭಿಮಾನಿಗಳು ಕಂಡಿದ್ದು ಬರೀ ಕ್ರಿಕೆಟ್ ಮಾತ್ರವಲ್ಲ, ಮೈದಾನದಲ್ಲಿ ಮಿಂಚಿನಂತೆ ಸಂಭವಿಸಿದ ನಾಟಕೀಯ ಬೆಳವಣಿಗೆಗಳು!

ನಮನ್ ಧೀರ್ ಮತ್ತು ತಿಲಕ್ ವರ್ಮಾ ನಡುವಿನ ಆ ಒಂದು ‘ತಪ್ಪು ಗ್ರಹಿಕೆ’ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು ಎಂದರೆ ತಪ್ಪಾಗಲಾರದು. ಅಷ್ಟಕ್ಕೂ ಬೌಂಡರಿ ಲೈನ್ ಬಳಿ ನಡೆದ ಆ ಹೈ-ಡ್ರಾಮಾ ಏನು? ಇಲ್ಲಿ ಯಾರದ್ದು ತಪ್ಪು? ಇಲ್ಲಿದೆ ಸಂಪೂರ್ಣ ಮಾಹಿತಿ…

ಪಂದ್ಯದ 18ನೇ ಓವರ್‌ನಲ್ಲಿ ಆರ್‌ಸಿಬಿ ಬ್ಯಾಟರ್ ಕೃನಾಲ್ ಪಾಂಡ್ಯ ಹೊಡೆದ ಚೆಂಡನ್ನು ಬೌಂಡರಿ ಗೆರೆಯ ಬಳಿ ನಮನ್ ಧೀರ್ ಅದ್ಭುತವಾಗಿ ಹಿಡಿದರು. ಆದರೆ ಚೆಂಡು ಹಿಡಿದ ಬೆನ್ನಲ್ಲೇ ನಿಯಂತ್ರಣ ಕಳೆದುಕೊಂಡ  ನಮನ್​ ಧೀರ್ ಇನ್ನೇನು ಬೌಂಡರಿ ದಾಟಬೇಕು ಅನ್ನುವಷ್ಟರಲ್ಲಿ, ಚೆಂಡನ್ನು ಹತ್ತಿರವೇ ಇದ್ದ ತಿಲಕ್ ವರ್ಮಾ ಕಡೆಗೆ ಎಸೆದರು.

ಆದರೆ, ನಮನ್ ಅವರ ಕಾಲು ಬೌಂಡರಿ ಲೈನ್ ಮುಟ್ಟಿದೆ ಎಂದು ಭಾವಿಸಿದ ತಿಲಕ್ ವರ್ಮಾ, ಚೆಂಡನ್ನು ಹಿಡಿಯಲು ಪ್ರಯತ್ನಿಸಲೇ ಇಲ್ಲ! ಈ ತಪ್ಪು ಗ್ರಹಿಕೆಯು ಮುಂಬೈ ಇಂಡಿಯನ್ಸ್ ಪಾಲಿಗೆ ಮುಳುವಾಯ್ತು. ಏಕೆಂದರೆ  ರಿಪ್ಲೇನಲ್ಲಿ ನಮನ್ ಧೀರ್ ಕಾಲು ಬೌಂಡರಿ ಗೆರೆಗೆ ತಾಗಿಲ್ಲ ಎಂಬುದು ಸ್ಪಷ್ಟವಾಯಿತು. ತಿಲಕ್ ವರ್ಮಾ ಅವರ ನಿರ್ಲಕ್ಷ್ಯದಿಂದಾಗಿ ಒಂದು ಸುಲಭದ ವಿಕೆಟ್ ಕೈತಪ್ಪಿತು.

ಇದರಿಂದ ಕೋಪಗೊಂಡ ನಮನ್ ಧೀರ್ ಮೈದಾನದಲ್ಲೇ ತಿಲಕ್ ಮೇಲೆ ವಾಕ್ಸಮರ ನಡೆಸಿದರು. ಇಬ್ಬರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಆ ಬಳಿಕ ನಮನ್​ ಧೀರ್​ಗೆ ಹಸ್ತಲಾಘವ ನೀಡಿ ತಿಲಕ್ ವರ್ಮಾ ಗೊಂದಲವನ್ನು ಬಗೆಹರಿಸಿಕೊಂಡರು.

ಆದರೆ ಈ ಒಂದು ಕ್ಯಾಚ್ ತಪ್ಪಿದ್ದು ಮುಂಬೈ ಇಂಡಿಯನ್ಸ್ ಪಾಲಿಗೆ ದುಬಾರಿಯಾಯಿತು. ಏಕೆಂದರೆ ಮರು ಎಸೆತದಲ್ಲೇ ಕೃನಾಲ್ ಪಾಂಡ್ಯ ಸಿಕ್ಸರ್ ಸಿಡಿಸಿದ್ದರು. ಇದಾಗ್ಯೂ ಅದೇ ಓವರ್​ನ ಕೊನೆಯ ಎಸೆತದಲ್ಲಿ ತಿಲಕ್ ವರ್ಮಾ ಗಾಳಿಯಲ್ಲಿ ಹಾರಿ ಅದ್ಭುತವಾದ ‘ಜಗ್ಲಿಂಗ್ ಕ್ಯಾಚ್’ ಹಿಡಿದರು.

ಅಷ್ಟರಲ್ಲಾಗಲೇ ಪಂದ್ಯವು ಆರ್​ಸಿಬಿ ಕಡೆಗೆ ವಾಲಿತ್ತು. ಅಂತಿಮವಾಗಿ ಕೊನೆಯ ಓವರ್​ನಲ್ಲಿ 15 ರನ್ ಬಾರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

 

 

Source link

ವಿಚಿತ್ರ ಫ್ಯಾಷನ್ ಸ್ಟೈಲ್​​​ನಲ್ಲಿ ಬಂದ ತಮನ್ನಾ ಭಾಟಿಯಾ; ಸಾಕಷ್ಟು ಟೀಕೆ – Kannada News | Tamannaah Bhatia’s Comic Con Outfit: Viral ‘Weird Fashion’ Sparks Debate and Trolling

ಸೆಲೆಬ್ರಿಟಿಗಳ ಉಡುಗೆ ಬಗ್ಗೆ ಆಗಾಗ ಚರ್ಚೆ ನಡೆಯುತ್ತಲೇ ಇರುತ್ತದೆ. ಅವರು ಹಾಕುವ ಚಿತ್ರ-ವಿಚಿತ್ರ ಉಡುಗೆ ಚರ್ಚೆ ಆಗುತ್ತದೆ. ಈಗ ನಟಿ ತಮನ್ನಾ ಭಾಟಿಯಾ ಅವರ (Tamannah Bhatia) ಹೊಸ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂಬೈನಲ್ಲಿ ನಡೆದ ‘ಕಾಮಿಕ್ ಕಾನ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮನ್ನಾ ಉಡುಗೆಯ ಶೈಲಿ ಅನೇಕರಿಗೆ ವಿಚಿತ್ರವಾಗಿ ಕಂಡಿದೆ. ಕೆಲವರು ಇದನ್ನು ಟ್ರೋಲ್ ಮಾಡಿದ್ದಾರೆ.

ತಮನ್ನಾ ಈ ಕಾರ್ಯಕ್ರಮಕ್ಕೆ ಬಿಳಿ ಬಣ್ಣದ ಕ್ರಾಪ್ ಟೀ-ಶರ್ಟ್ ಮತ್ತು ತಿಳಿ ನೀಲಿ ಬಣ್ಣದ ಡೆನಿಮ್ ಜೀನ್ಸ್ ಧರಿಸಿದ್ದರು. ಆದರೆ, ಈ ಜೀನ್ಸ್ ಪ್ಯಾಂಟ್ ವಿನ್ಯಾಸವು ಅತ್ಯಂತ ವಿಭಿನ್ನವಾಗಿತ್ತು. ಪ್ಯಾಂಟ್‌ನ ಸೊಂಟದ ಭಾಗದಲ್ಲಿ ದೊಡ್ಡದಾದ ಕಟ್​ಗಳಿದ್ದು, ಅವುಗಳನ್ನು ಚೈನ್‌ನಿಂದ ಜೋಡಿಸಲಾಗಿತ್ತು. ಇದು ನೋಡಲು ಜೀನ್ಸ್ ಪ್ಯಾಂಟ್ ಜಾರಿ ಬೀಳುತ್ತಿರುವಂತೆ ಭಾಸವಾಗುತ್ತಿದ್ದುದರಿಂದ ಅನೇಕ ನೆಟ್ಟಿಗರು ಇದನ್ನು ‘ವಿಚಿತ್ರ ಫ್ಯಾಷನ್’ ಎಂದು ಕರೆದಿದ್ದಾರೆ.

ಕೆಲವರಿಗೆ ಅವರ ಡ್ರೆಸ್ ಮುಜುಗ ತಂದಿದೆ. ಆದರೆ, ತಮನ್ನಾ ಈ ಡ್ರೆಸ್​​ ಅನ್ನು ತುಂಬಾನೇ ಇಷ್ಟಪಟ್ಟಿದ್ದಾರೆ. ವಿಡಿಯೋದಲ್ಲಿ ತಮನ್ನಾ ಕ್ಯಾಮೆರಾಗಳಿಗೆ ಪೋಸ್ ನೀಡುತ್ತಾ ನಕ್ಕಿದ್ದಾರೆ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ‘ಇದು ಯಾವ ತರಹದ ಡ್ರೆಸ್?’, ‘ಫ್ಯಾಷನ್ ಹೆಸರಲ್ಲಿ ಏನೆಲ್ಲಾ ಮಾಡ್ತಾರೆ’ ಎಂಬಂತಹ ಟೀಕೆಗಳು ಕೇಳಿಬಂದಿವೆ. ಇನ್ನು ಕೆಲವರು ಅವರ ಈ ಧೈರ್ಯದ ಫ್ಯಾಷನ್ ಆಯ್ಕೆಯನ್ನು ಬೆಂಬಲಿಸಿದ್ದಾರೆ.

ಸಾಮಾನ್ಯವಾಗಿ ಕಾಮಿಕ್ ಕಾನ್‌ನಂತಹ ಕಾರ್ಯಕ್ರಮಗಳಲ್ಲಿ ಸೆಲೆಬ್ರಿಟಿಗಳು ಇಂತಹ ವಿಭಿನ್ನ ಉಡುಗೆಗಳನ್ನು ಧರಿಸುವುದು ಸಾಮಾನ್ಯ. ತಮನ್ನಾ ಅವರು ಕೂಡ ಇದೇ ಉದ್ದೇಶದಿಂದ ಈ ‘ರಿಸ್ಕಿ’ ಫ್ಯಾಷನ್ ಟ್ರೈ ಮಾಡಿರಬಹುದು ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಕಿರಿಯ ನಟನೊಟ್ಟಿಗೆ ತಮನ್ನಾ ಭಾಟಿಯಾ ಸಿನಿಮಾ, ಬೋಲ್ಡ್ ಪಾತ್ರದಲ್ಲಿ ನಟಿ

ತಮನ್ನಾ ಭಾಟಿಯಾ ಅವರು ವಿಜಯ್ ವರ್ಮಾ ಜೊತೆ ಡೇಟ್ ಮಾಡಿ ಸುದ್ದಿ ಆಗಿದ್ದರು. ಆ ಬಳಿಕ ಬ್ರೇಕಪ್ ಆಯಿತು. ಈಗ ತಮನ್ನಾ ಭಾಟಿಯಾ ಅವರು ಸಿನಿಮಾ ಕೆಲಸಗಳ ಮೇಲೆ ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ! – Kannada News | CM Siddaramaiah Hails Joseph Vijay’s Historic Win; Focus on Inter State Cooperation

ಬೆಂಗಳೂರು, ಮೇ.11 : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಜಯ್ ಅವರಿಗೆ ಶುಭಾಶಯ ಕೋರಿದ ಸಿದ್ದರಾಮಯ್ಯ ಅವರು, ತಮಿಳುನಾಡಿನ ಅಭಿವೃದ್ಧಿಗಾಗಿ ಅವರ ಆಡಳಿತ ಯಶಸ್ವಿಯಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ನೆರೆಹೊರೆಯ ರಾಜ್ಯಗಳಾದ ಕರ್ನಾಟಕ ಮತ್ತು ತಮಿಳುನಾಡು ನಡುವೆ ಸೌಹಾರ್ದಯುತ ಸಂಬಂಧವನ್ನು ಮುಂದುವರಿಸುವ ಮತ್ತು ಅಂತರ್-ರಾಜ್ಯ ವಿಷಯಗಳಲ್ಲಿ ಸಹಕಾರದಿಂದ ಕೆಲಸ ಮಾಡುವ ಕುರಿತು ಇಬ್ಬರು ನಾಯಕರು ಆಶಯ ವ್ಯಕ್ತಪಡಿಸಿದರು ಎನ್ನಲಾಗಿದೆ. ಸಿನಿಮಾ ರಂಗದಿಂದ ರಾಜಕೀಯಕ್ಕೆ ಬಂದು ಮೊದಲ ಪ್ರಯತ್ನದಲ್ಲೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ವಿಜಯ್ ಅವರ ಸಾಧನೆಯನ್ನು ಸಿದ್ದರಾಮಯ್ಯ ಅವರು ಶ್ಲಾಘಿಸಿದರು. ದಕ್ಷಿಣ ಭಾರತದ ರಾಜಕೀಯದಲ್ಲಿ ಈ ಹೊಸ ಬದಲಾವಣೆಯು ಉಭಯ ರಾಜ್ಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ವೇಗ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ – Kannada News | National Technology Day 2026: Why is National Technology Day celebrated? Here is the information

ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest

ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸಲು ಪ್ರತಿವರ್ಷ ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸವೇನು?

ವಾಸ್ತವವಾಗಿ, ಮೇ 11 ರಂದು, ಭಾರತವು ರಾಜಸ್ಥಾನದ ಪೋಖ್ರಾನ್‌ನಲ್ಲಿ ಒಂದಲ್ಲ, ಎರಡಲ್ಲ, ಮೂರು ಪರಮಾಣು ಬಾಂಬ್‌ಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಪರೀಕ್ಷೆಗೆ ಆಪರೇಷನ್ ಶಕ್ತಿ ಎಂದು ಹೆಸರಿಡಲಾಯಿತು. ಡಾ. ಎಪಿಜೆ ಅಬ್ದುಲ್ ಕಲಾಂ ನೇತೃತ್ವ ವಹಿಸಿದ್ದರು  ಆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದರು. ಈ ಪರೀಕ್ಷೆಗಳೊಂದಿಗೆ, ಭಾರತವು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡ ಆರನೇ ರಾಷ್ಟ್ರವಾಯಿತು. ಅಲ್ಲದೆ ಮೇ 11 ರಂದು   “ತ್ರಿಶೂಲ್” ಕ್ಷಿಪಣಿಯ ಯಶಸ್ವಿ ಪರೀಕ್ಷೆ ಮತ್ತು ಸ್ಥಳೀಯ ವಿಮಾನ “ಹಂಸ-3” ನ ಮೊದಲ ಹಾರಾಟವು  ಯಶಸ್ವಿಯಾಗಿ ನಡೆಯಿತು. ಈ ಐತಿಹಾಸಿಕ ಸಾಧನೆಗಳ ಗೌರವಾರ್ಥವಾಗಿ, ಭಾರತ ಸರ್ಕಾರವು 1999 ರಿಂದ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಅಂದಿನಿಂದ ಪ್ರತಿವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ?

ರಾಷ್ಟ್ರೀಯ ತಂತ್ರಜ್ಞಾನ ದಿನದ ಮಹತ್ವವೇನು?

  • ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವ ಹಿಂದಿನ ಪ್ರಮುಖ ಉದ್ದೇಶವೆಂದರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆಗಳನ್ನು ಗೌರವಿಸುವುದು. ಇದರ ಜೊತೆಗೆ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಸಹ ಇದರ ಉದ್ದೇಶವಾಗಿದೆ.
  • ಈ ದಿನವು ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಯನ್ನು ಆಚರಿಸುವ ಸಂದರ್ಭವಾಗಿದೆ.
  • ಈ ದಿನವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಯುವಜನರನ್ನು ಪ್ರೇರೇಪಿಸುತ್ತದೆ.
  • ಈ ದಿನವು ರಾಷ್ಟ್ರೀಯ ಭದ್ರತೆಯಲ್ಲಿ ತಂತ್ರಜ್ಞಾನದ ಪ್ರಮುಖ ಪಾತ್ರವನ್ನು ನಮಗೆ ನೆನಪಿಸುತ್ತದೆ.
  • ಈ ದಿನವು ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ.
  • ಅಲ್ಲದೆ ಈ ದಿನದಂದು ಭಾರತದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜ್ಞಾನಿಗಳನ್ನು ಗೌರವಿಸಲಾಗುತ್ತದೆ.
  • ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯಂದು, ಶಾಲೆಗಳು, ಕಾಲೇಜುಗಳು ಮತ್ತು ಇತರ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ – Kannada News | Optical Illusion: Find the golden coin in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: stock.adobe.com

ಆಪ್ಟಿಕಲ್‌ ಇಲ್ಯೂಷನ್‌ (Optical Illusion) , ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವಿನ ಸಮಯವನ್ನು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದರಲ್ಲಿ ತಮ್ಮ ಸಮಯ ಕಳೆಯುತ್ತಾರೆ. ಆದರೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ ಮುದ್ದಾದ ಶ್ವಾನಗಳಿವೆ. ಈ ಸಾಕು ಪ್ರಾಣಿಗಳ ನಡುವೆ ಚಿನ್ನದ ನಾಣ್ಯವೊಂದಿದೆ. ನೀವು 10 ಸೆಕೆಂಡುಗಳೊಳಗೆ ಈ ನಾಣ್ಯವನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಬಹುದೊಡ್ಡ ಸವಾಲು. ಈ ಒಗಟು ಬಿಡಿಸಿ ನೀವು ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಒಗಟಿನ ಚಿತ್ರ ಮೊದಲಿಗೆ ಕಷ್ಟವೆನಿಸಬಹುದು. ಆದರೆ ನೀವು ಬುದ್ದಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಸಹಕಾರಿಯಾಗಿದೆ. ನೀವು ಈ ಚಿತ್ರದಲ್ಲಿ ಹಚ್ಚ ಹಸಿರಿನ ಸಸ್ಯಗಳ ನಡುವೆ ಮುದ್ದು ಮುದ್ದಾದ ಶ್ವಾನಗಳನ್ನು ನೋಡಿರಬಹುದು. ಇಲ್ಲಿ ಚಿನ್ನದ ನಾಣ್ಯವನ್ನು ಮರೆ ಮಾಡಲಾಗಿದೆ. ಮೇಲೆ ನೀಡಲಾಗಿರುವ 10 ಸೆಕೆಂಡುಗಳೊಳಗೆ ಈ ಒಗಟನ್ನು ಬಿಡಿಸಬೇಕು. ಈ ಸವಾಲನ್ನು ಸ್ವೀಕರಿಸಲು ನೀವು ರೆಡಿ ಇದ್ದೀರಾ.

ಇದನ್ನೂ ಓದಿ: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ಚಿನ್ನದ ನಾಣ್ಯ ನಿಮ್ಮ ಕಣ್ಣಿಗೆ ಬಿದ್ದಿತೇ?

ಈ ಒಗಟಿನ ಆಟಗಳು ನಿಮ್ಮ ಮೆದುಳನ್ನು ಕೆರೆದುಕೊಳ್ಳುವಂತೆ ಮಾಡುತ್ತದೆ.  ಈಗ ನೀವು ಇಲ್ಲಿರುವ ಚಿನ್ನದ ನಾಣ್ಯವನ್ನು ಹುಡುಕಬೇಕು. ಎಷ್ಟೇ ಪ್ರಯತ್ನ ಪಟ್ಟರೂ ಚಿನ್ನದ ನಾಣ್ಯವನ್ನು ಹುಡುಕಲು ಸಾಧ್ಯವಾಗುತ್ತಿಲ್ಲವೇ. ನಾವು ನಿಮಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಶ್ವಾನಗಳಿರುವ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಒಂದೊಂದು ಭಾಗಗಳನ್ನು ವಿಂಗಡಿಸಿಕೊಳ್ಳಿ. ಈ ಸಲಹೆ ಆಧರಿಸಿ ಒಗಟು ಬಿಡಿಸಲು ಪ್ರಯತ್ನಿಸಿ. ಏನೇ ಮಾಡಿದ್ರು ಚಿನ್ನದ ನಾಣ್ಯ ಕಾಣಿಸಿಲ್ಲ ಎಂದಾದರೆ ನಾವೇ ಈ ಕೆಳಗಿನ ಚಿತ್ರದಲ್ಲಿ ಚಿನ್ನದ ನಾಣ್ಯವನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version