ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು? – Kannada News | Karnataka Governor Rejects Joint Session Speech; Constitutional Crisis Expected
ಬೆಂಗಳೂರು, ಜನವರಿ 21: ನಾಳೆಯಿಂದ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ನಿಯಮದಂತೆ ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಬೇಕು. ಆದರೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ಗವರ್ನರ್ ನಿರಾಕರಿಸಿರುವ ಹಿನ್ನೆಲೆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರು ಆರಂಭಿಸಬೇಕು. ಆದರೆ ಗವರ್ನರ್ ನಡೆ ಗಮನಿಸಿದೆ ನಾಳೆಯಿಂದ ವಿಶೇಷ ಅಧಿವೇಶನ ಆರಂಭವಾಗುವ ಸಾಧ್ಯತೆಯಿಲ್ಲ ಎನ್ನುವ ಮಾತುಗಳೀಗ ಕೇಳಿಬಂದಿವೆ. ಈ ನಡುವೆ ಲೋಕಭವನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ನಿಯೋಗ…