ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ! – Kannada News | Watermelon Canter Overturns in Doddaballapura, Driver Escapes Unhurt
ದೊಡ್ಡಬಳ್ಳಾಪುರ, ಮಾರ್ಚ್ 04: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ.ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಈ ಕ್ಯಾಂಟರ್, ಅನಿರೀಕ್ಷಿತವಾಗಿ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್ಗಳನ್ನು ದಾಟಿ ಪಕ್ಕದ ಪಳ್ಳಕ್ಕೆ ಬಂದು ಬಿದ್ದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್ನಲ್ಲಿದ್ದ ಸಾವಿರಾರು ಕಲ್ಲಂಗಡಿಗಳು ರಸ್ತೆಯ ಮೇಲೆ ಹಾಗೂ ಸುತ್ತಮುತ್ತ…