National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ – Kannada News | National Technology Day 2026: Why is National Technology Day celebrated? Here is the information

ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest

ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸಲು ಪ್ರತಿವರ್ಷ ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸವೇನು?

ವಾಸ್ತವವಾಗಿ, ಮೇ 11 ರಂದು, ಭಾರತವು ರಾಜಸ್ಥಾನದ ಪೋಖ್ರಾನ್‌ನಲ್ಲಿ ಒಂದಲ್ಲ, ಎರಡಲ್ಲ, ಮೂರು ಪರಮಾಣು ಬಾಂಬ್‌ಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಪರೀಕ್ಷೆಗೆ ಆಪರೇಷನ್ ಶಕ್ತಿ ಎಂದು ಹೆಸರಿಡಲಾಯಿತು. ಡಾ. ಎಪಿಜೆ ಅಬ್ದುಲ್ ಕಲಾಂ ನೇತೃತ್ವ ವಹಿಸಿದ್ದರು  ಆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದರು. ಈ ಪರೀಕ್ಷೆಗಳೊಂದಿಗೆ, ಭಾರತವು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡ ಆರನೇ ರಾಷ್ಟ್ರವಾಯಿತು. ಅಲ್ಲದೆ ಮೇ 11 ರಂದು   “ತ್ರಿಶೂಲ್” ಕ್ಷಿಪಣಿಯ ಯಶಸ್ವಿ ಪರೀಕ್ಷೆ ಮತ್ತು ಸ್ಥಳೀಯ ವಿಮಾನ “ಹಂಸ-3” ನ ಮೊದಲ ಹಾರಾಟವು  ಯಶಸ್ವಿಯಾಗಿ ನಡೆಯಿತು. ಈ ಐತಿಹಾಸಿಕ ಸಾಧನೆಗಳ ಗೌರವಾರ್ಥವಾಗಿ, ಭಾರತ ಸರ್ಕಾರವು 1999 ರಿಂದ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಅಂದಿನಿಂದ ಪ್ರತಿವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ?

ರಾಷ್ಟ್ರೀಯ ತಂತ್ರಜ್ಞಾನ ದಿನದ ಮಹತ್ವವೇನು?

  • ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವ ಹಿಂದಿನ ಪ್ರಮುಖ ಉದ್ದೇಶವೆಂದರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆಗಳನ್ನು ಗೌರವಿಸುವುದು. ಇದರ ಜೊತೆಗೆ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಸಹ ಇದರ ಉದ್ದೇಶವಾಗಿದೆ.
  • ಈ ದಿನವು ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಯನ್ನು ಆಚರಿಸುವ ಸಂದರ್ಭವಾಗಿದೆ.
  • ಈ ದಿನವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಯುವಜನರನ್ನು ಪ್ರೇರೇಪಿಸುತ್ತದೆ.
  • ಈ ದಿನವು ರಾಷ್ಟ್ರೀಯ ಭದ್ರತೆಯಲ್ಲಿ ತಂತ್ರಜ್ಞಾನದ ಪ್ರಮುಖ ಪಾತ್ರವನ್ನು ನಮಗೆ ನೆನಪಿಸುತ್ತದೆ.
  • ಈ ದಿನವು ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ.
  • ಅಲ್ಲದೆ ಈ ದಿನದಂದು ಭಾರತದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜ್ಞಾನಿಗಳನ್ನು ಗೌರವಿಸಲಾಗುತ್ತದೆ.
  • ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯಂದು, ಶಾಲೆಗಳು, ಕಾಲೇಜುಗಳು ಮತ್ತು ಇತರ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ – Kannada News | Optical Illusion: Find the golden coin in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: stock.adobe.com

ಆಪ್ಟಿಕಲ್‌ ಇಲ್ಯೂಷನ್‌ (Optical Illusion) , ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವಿನ ಸಮಯವನ್ನು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದರಲ್ಲಿ ತಮ್ಮ ಸಮಯ ಕಳೆಯುತ್ತಾರೆ. ಆದರೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ ಮುದ್ದಾದ ಶ್ವಾನಗಳಿವೆ. ಈ ಸಾಕು ಪ್ರಾಣಿಗಳ ನಡುವೆ ಚಿನ್ನದ ನಾಣ್ಯವೊಂದಿದೆ. ನೀವು 10 ಸೆಕೆಂಡುಗಳೊಳಗೆ ಈ ನಾಣ್ಯವನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಬಹುದೊಡ್ಡ ಸವಾಲು. ಈ ಒಗಟು ಬಿಡಿಸಿ ನೀವು ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಒಗಟಿನ ಚಿತ್ರ ಮೊದಲಿಗೆ ಕಷ್ಟವೆನಿಸಬಹುದು. ಆದರೆ ನೀವು ಬುದ್ದಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಸಹಕಾರಿಯಾಗಿದೆ. ನೀವು ಈ ಚಿತ್ರದಲ್ಲಿ ಹಚ್ಚ ಹಸಿರಿನ ಸಸ್ಯಗಳ ನಡುವೆ ಮುದ್ದು ಮುದ್ದಾದ ಶ್ವಾನಗಳನ್ನು ನೋಡಿರಬಹುದು. ಇಲ್ಲಿ ಚಿನ್ನದ ನಾಣ್ಯವನ್ನು ಮರೆ ಮಾಡಲಾಗಿದೆ. ಮೇಲೆ ನೀಡಲಾಗಿರುವ 10 ಸೆಕೆಂಡುಗಳೊಳಗೆ ಈ ಒಗಟನ್ನು ಬಿಡಿಸಬೇಕು. ಈ ಸವಾಲನ್ನು ಸ್ವೀಕರಿಸಲು ನೀವು ರೆಡಿ ಇದ್ದೀರಾ.

ಇದನ್ನೂ ಓದಿ: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ಚಿನ್ನದ ನಾಣ್ಯ ನಿಮ್ಮ ಕಣ್ಣಿಗೆ ಬಿದ್ದಿತೇ?

ಈ ಒಗಟಿನ ಆಟಗಳು ನಿಮ್ಮ ಮೆದುಳನ್ನು ಕೆರೆದುಕೊಳ್ಳುವಂತೆ ಮಾಡುತ್ತದೆ.  ಈಗ ನೀವು ಇಲ್ಲಿರುವ ಚಿನ್ನದ ನಾಣ್ಯವನ್ನು ಹುಡುಕಬೇಕು. ಎಷ್ಟೇ ಪ್ರಯತ್ನ ಪಟ್ಟರೂ ಚಿನ್ನದ ನಾಣ್ಯವನ್ನು ಹುಡುಕಲು ಸಾಧ್ಯವಾಗುತ್ತಿಲ್ಲವೇ. ನಾವು ನಿಮಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಶ್ವಾನಗಳಿರುವ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಒಂದೊಂದು ಭಾಗಗಳನ್ನು ವಿಂಗಡಿಸಿಕೊಳ್ಳಿ. ಈ ಸಲಹೆ ಆಧರಿಸಿ ಒಗಟು ಬಿಡಿಸಲು ಪ್ರಯತ್ನಿಸಿ. ಏನೇ ಮಾಡಿದ್ರು ಚಿನ್ನದ ನಾಣ್ಯ ಕಾಣಿಸಿಲ್ಲ ಎಂದಾದರೆ ನಾವೇ ಈ ಕೆಳಗಿನ ಚಿತ್ರದಲ್ಲಿ ಚಿನ್ನದ ನಾಣ್ಯವನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಒಂದು ಊಸರವಳ್ಳಿ; ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಕೈ ಪಕ್ಷವನ್ನು ಕುಟುಕಿದ ಅಣ್ಣಾಮಲೈ – Kannada News | Annamalai Presents Critical Analysis of Congresss Political Stance and Southern State Dynamics

ಚೆನ್ನೈ, ಮೇ 11: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University) ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಕಾಂಗ್ರೆಸ್ ಪಕ್ಷವನ್ನು ‘ಊಸರವಳ್ಳಿ’ಗೆ (Chameleon) ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ, ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಅವರ ಸಮ್ಮುಖದಲ್ಲೇ ಅಣ್ಣಾಮಲೈ ಈ ಟೀಕೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಭಾಷೆಯನ್ನೇ ಇಷ್ಟು ವರ್ಷ ಬಳಸುತ್ತಿತ್ತು, ಆದರೆ ಈಗ ರಾತ್ರೋರಾತ್ರಿ ನಟ ವಿಜಯ್ ಅವರ ಪಕ್ಷದತ್ತ ಒಲವು ತೋರುತ್ತಿದೆ. ಈ ಬದಲಾವಣೆಯನ್ನು ಕಂಡು “ಊಸರವಳ್ಳಿಯೂ ಕೂಡ ಇಷ್ಟು ವೇಗವಾಗಿ ಬಣ್ಣ ಬದಲಿಸುವುದಿಲ್ಲ” ಎಂದು ಅಣ್ಣಾಮಲೈ ಲೇವಡಿ ಮಾಡಿದ್ದಾರೆ.

ಅಣ್ಣಾಮಲೈ ಮಾತನಾಡಿರುವ ವಿಡಿಯೋ

ಪರಾವಲಂಬಿ ರಾಜಕೀಯ: ಕಾಂಗ್ರೆಸ್ ಸ್ವತಂತ್ರ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಅಧಿಕಾರದಲ್ಲಿರುವ ಪ್ರಾದೇಶಿಕ ಪಕ್ಷಗಳ ಮೇಲೆ ಸವಾರಿ ಮಾಡುತ್ತಾ ತನ್ನ ನಿಲುವನ್ನು ಬದಲಾಯಿಸಿಕೊಳ್ಳುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗಿಗಳೋ ಅಥವಾ ರೋಬೋಟ್‌ಗಳೋ?: ಕಂಪನಿಯ ವಿಚಿತ್ರ ನಿಯಮಕ್ಕೆ ‘ನೋ’ ಎಂದ ಯುವತಿ

ಕಾಂಗ್ರೆಸ್ ಪಕ್ಷ ಯಾವುದಾದರೂ ಒಂದು ದಕ್ಷಿಣ ರಾಜ್ಯವನ್ನು ಗೆದ್ದು ಬಿಟ್ಟರೆ ಸಾಕು, ದಕ್ಷಿಣ ಭಾರತ ಬೇರೆ, ಕೇರಳ ಬೇರೆ, ತಮಿಳುನಾಡು ಬೇರೆ, ಆಂಧ್ರ ಬೇರೆ, ತೆಲಂಗಾಣ ಬೇರೆ ಎಂದು ಯಾರಾದರೂ ಒಬ್ಬ ಕಾಂಗ್ರೆಸ್ ಸಂಸದ ಟ್ವೀಟ್ ಮಾಡಲು ಆರಂಭಿಸುತ್ತಾರೆ. ಶಶಿ ತರೂರ್ ಅವರು ಇಂತಹ ಸಂಸದರಿಗೆ ಆಪ್ತರಾಗಿದ್ದಾರೆ ಎಂದು ಅಣ್ಣಾಮಲೈ ಬೇಸರ ವ್ಯಕ್ತಪಡಿಸಿದ್ದಾರೆ.

ಶಶಿ ತರೂರ್ ಅವರು ವಿಶ್ವಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಗೌರವಾನ್ವಿತ ವ್ಯಕ್ತಿ. ಆದರೆ ಅವರು ಕಾಂಗ್ರೆಸ್ ಪಕ್ಷದ ಭಾಷೆ ಮಾತನಾಡಲು ಶುರು ಮಾಡಿದರೆ ವಿವಾದಗಳು ಸೃಷ್ಟಿಯಾಗುತ್ತವೆ. ಕೇರಳ ಕಾಂಗ್ರೆಸ್‌ನಲ್ಲಿನ ಮುಖ್ಯಮಂತ್ರಿ ಆಯ್ಕೆಯ ಗೊಂದಲವನ್ನು ಮುಚ್ಚಿಡಲು ಸ್ಟ್ಯಾನ್‌ಫೋರ್ಡ್‌ನಲ್ಲಿ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದೂ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಲಕ್ಷಾಂತರ ಜನರ ಮತಗಳನ್ನು ತೆಗೆದುಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಅವರು ತಿರುಗೇಟು ನೀಡಿದರು.

ಹಳೆಯ ಕಾಲದ ಕಾಂಗ್ರೆಸ್: ಅಣ್ಣಾಮಲೈ

ಭಾರತವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ, ಆದರೆ ಕಾಂಗ್ರೆಸ್ ಇನ್ನೂ 1960ರ ದಶಕದಲ್ಲೇ ಉಳಿದುಕೊಂಡಿದೆ. ಇಂದಿನ ಯುವ ಪೀಳಿಗೆ ಅಭಿವೃದ್ಧಿ ಪರ ರಾಜಕೀಯವನ್ನು ಬಯಸುತ್ತಿದೆ. ಹಳೆಯ ಕಾಲದ ವೈಫಲ್ಯಗಳಿಗೆ ಈಗಿನ ಬಿಜೆಪಿ ಸರ್ಕಾರವನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಅಣ್ಣಾಮಲೈ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಇದನ್ನೂ ಓದಿ: ವಿಜಯ್ ಮಂತ್ರಿಮಂಡಲ; ಎಂಜಿಆರ್ ಒಡನಾಡಿ, ವೈದ್ಯ, ಸಂಘಟನಾ ಚತುರ, ಯುವತಿ, ಚಿತ್ರ ನಟ ಮೊದಲಾದವರು…

ಚಮಿಲಿಯನ್ ಅಲ್ಲ ತಮಿಳಿಯನ್ ಅಂತ ಅಂದಿದ್ದು

ತಮ್ಮ ಮುಂದೆಯೇ ಕಾಂಗ್ರೆಸ್ ಅನ್ನು ಊಸರವಳ್ಳಿ ಎಂದು ಜರಿದ ಅಣ್ಣಾಮಲೈಗೆ ಶಶಿ ತರೂರ್ ಸೌಮ್ಯವಾಗಿಯೇ ತರಾಟೆಗೆ ತೆಗೆದುಕೊಂಡರು. ಅಣ್ಣಮಲೈ ಅವರು ತಮಿಳುನಾಡು ಕಾಂಗ್ರೆಸ್ ಅನ್ನು ಚಮಿಲಿಯನ್ ಅಲ್ಲ ತಮಿಳಿಯನ್ ಎಂದು ಹೇಳಿರಬಹುದು ಎಂದು ತರೂರ್ ತಮಾಷೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!

ಬೆಂಗಳೂರು, ಮೇ 11: ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡಿಮೆ ವೇತನ ಮತ್ತು ಸಂಬಳ ಪಾವತಿಯಲ್ಲಿ ವಿಳಂಬದಿಂದ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅಡುಗೆಮನೆಯಲ್ಲಿ ತರಕಾರಿ ತೊಳೆಯುವುದು, ಹೆಚ್ಚುವುದು ಮತ್ತು ಇತರ ಸಹಾಯಕ ಕೆಲಸಗಳನ್ನು ನಿರ್ವಹಿಸುವ ಈ ಕಾರ್ಮಿಕರಿಗೆ ತಿಂಗಳಿಗೆ 7,000 ರೂಪಾಯಿ ವೇತನ ನೀಡಲಾಗುತ್ತದೆ. ಈ ಮೊತ್ತವು ಅತ್ಯಂತ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆಗೆ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ, ಕಾರ್ಮಿಕರಿಗೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಸಂಬಳ ಪಾವತಿಯಾಗಿಲ್ಲ. ಮತ್ತು ವಿದ್ಯುತ್, ನೀರು ಮತ್ತು ಇತರ ಬಿಲ್‌ಗಳನ್ನು ಪಾವತಿಸುವುದು ಸವಾಲಾಗಿದೆ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ವೇತನ ಪಾವತಿ ಮಾಡುವುದು ತಮ್ಮ ಏಕೈಕ ಬೇಡಿಕೆಯಾಗಿದೆ ಎಂದು ಕಾರ್ಮಿಕರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!

ಚಿಕ್ಕಬಳ್ಳಾಪುರ, ಮೇ 11: ಅನಿಲ್ ಎಂಬ ರೈತರ ಚಿಕ್ಕಬಳ್ಳಾಪುರ ಜಿಲ್ಲೆಯ ಅಡ್ಡಗಲ್ ಗ್ರಾಮದಲ್ಲಿ ಸೇಬು ಬೆಳೆದು ಯಶಸ್ಸಿನ ಕಥೆ ಬರೆದಿದ್ದಾರೆ. ಸಾಮಾನ್ಯವಾಗಿ ತಂಪಾದ ವಾತಾವರಣದಲ್ಲಿ ಬೆಳೆಯುವ ಸೇಬನ್ನು, ಬಿಸಿಲಿನ ವಾತಾವರಣವಿರುವ ಚಿಕ್ಕಬಳ್ಳಾಪುರದಲ್ಲಿ ಬೆಳೆಸುವುದು ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಅನಿಲ್ ಅವರು, ಹೊಸ ಪ್ರಯತ್ನವಾಗಿ ಸೇಬು ಕೃಷಿಯತ್ತ ಆಸಕ್ತಿ ವಹಿಸಿದರು.

ಗುಬ್ಬಿಯ ಶೇಷಣ್ಣ ಅವರ ಮಾರ್ಗದರ್ಶನ ಪಡೆದ ಅನಿಲ್, ಅವರ ಸಲಹೆಯಂತೆ ಸಸಿಗಳನ್ನು ನೆಟ್ಟರು. ಇದು ಅವರ ಮೊದಲ ಬೆಳೆಯಾಗಿದ್ದು, ಒಂದು ಎಕರೆಯಲ್ಲಿ ಸುಮಾರು 400 ಗಿಡಗಳನ್ನು ನೆಡಲಾಗಿದೆ. ಪ್ರತಿ ಗಿಡದಿಂದ 10 ರಿಂದ 15 ಕೆಜಿ ಸೇಬು ಇಳುವರಿ ನಿರೀಕ್ಷಿಸಲಾಗಿದೆ. ಅಂದಾಜು 5 ಲಕ್ಷ ರೂಪಾಯಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಅನಿಲ್ ಅವರ ಈ ಪ್ರಯೋಗವು ಯಶಸ್ವಿಯಾಗಿದೆ. ಅವರ ಸಾಧನೆ ಇತರ ರೈತರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾಖಲೆಯ ಅರ್ಧಶತಕ ಸಿಡಿಸಿ ಸಿಎಸ್​ಕೆ ಆಟಗಾರ ತೋರಿಸಿದ ಚೀಟಿಯಲ್ಲೇನಿತ್ತು? – Kannada News | What was written on CSK star Urvil Patel’s chit?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉರ್ವಿಲ್ ಪಟೇಲ್ ಅಕ್ಷರಶಃ ಅಬ್ಬರಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದ ಅತಿ ವೇಗದ ಫಿಫ್ಟಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಆದರೆ, ಈ ಐತಿಹಾಸಿಕ ಸಾಧನೆಗಿಂತ ಹೆಚ್ಚಾಗಿ ಮೈದಾನದಲ್ಲಿ ಉರ್ವಿಲ್ ಸಂಭ್ರಮಿಸಿದ ರೀತಿ ಮತ್ತು ಅವರು ಪ್ರದರ್ಶಿಸಿದ ಒಂದು ಸಣ್ಣ ಚೀಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದೆ. ಅಷ್ಟಕ್ಕೂ ಆ ಚೀಟಿಯಲ್ಲೇನಿತ್ತು? ಎಂದು ನೋಡುವುದಾದರೆ…

ಉರ್ವಿಲ್ ಪಟೇಲ್ ಅರ್ಧಶತಕದ ಸಂಭ್ರಮದ ವೇಳೆ ತೋರಿಸಿದ ಚೀಟಿಯಲ್ಲಿ ತಮ್ಮ ತಂದೆ ಮುಖೇಶ್ ಪಟೇಲ್ ಅವರಿಗಾಗಿ ಬರೆದ ಸಾಲುಗಳಿದ್ದವು. ಇಂಗ್ಲಿಷ್ ಮತ್ತು ಗುಜರಾತಿ ಭಾಷೆಯಲ್ಲಿದ್ದ ಆ ಸಂದೇಶ ಹೀಗಿತ್ತು:

  • “This is for you, Papa” (ಅಪ್ಪಾ, ಇದು ನಿಮಗಾಗಿ).
  •  “તમારું સપનું આજે પૂરું થયું,ક્રિકેટર મોટું બનીને બતાવ્યું.” (ಇಂದು ನಾನು ದೊಡ್ಡ ಕ್ರಿಕೆಟಿಗನಾಗಿ ನಿಮ್ಮ ಕನಸನ್ನು ನನಸು ಮಾಡಿ ತೋರಿಸಿದ್ದೇನೆ).

ಅಲ್ಲದೆ, ಅದರಲ್ಲಿ ತಮ್ಮ ಕುಲದೇವತೆಗಳ ಹೆಸರನ್ನು ಉಲ್ಲೇಖಿಸಿ, ಅವರ ಆಶೀರ್ವಾದದಿಂದಲೇ ಈ ಸಾಧನೆ ಸಾಧ್ಯವಾಯಿತು ಎಂದು ಬರೆದುಕೊಂಡಿದ್ದರು.

ದಾಖಲೆಗಳ ಸುರಿಮಳೆ:

ಈ ಪಂದ್ಯದಲ್ಲಿ ಉರ್ವಿಲ್ ಪಟೇಲ್ ಕೇವಲ ಚೀಟಿಯಿಂದ ಮಾತ್ರವಲ್ಲ, ಬ್ಯಾಟಿಂಗ್ ಮೂಲಕವೂ ಇತಿಹಾಸ ಸೃಷ್ಟಿಸಿದರು. ಆ ದಾಖಲೆಗಳಾವುವು ಎಂದು ನೋಡುವುದಾದರೆ…

    • ಅತಿ ವೇಗದ ಫಿಫ್ಟಿ: 13 ಎಸೆತಗಳಲ್ಲಿ 50 ರನ್ ಪೂರೈಸುವ ಮೂಲಕ ಐಪಿಎಲ್‌ನ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದರು.
    •  ಸಿಕ್ಸರ್‌ಗಳ ಅಬ್ಬರ: ಐಪಿಎಲ್​ ಇನಿಂಗ್ಸ್‌ನ ಮೊದಲ 8 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಉರ್ವಿಲ್ ಪಟೇಲ್ ಹಿನ್ನೆಲೆ:

ಮಧ್ಯಮ ವರ್ಗದ ಕುಟುಂಬದಿಂದ ಬಂದ ಉರ್ವಿಲ್ ಪಟೇಲ್ ಅವರನ್ನು ಕ್ರಿಕೆಟಿಗನನ್ನಾಗಿ ಮಾಡಲು ಅವರ ತಂದೆ ಸಾಕಷ್ಟು ಕಷ್ಟಪಟ್ಟಿದ್ದರು. ಐಪಿಎಲ್‌ನಂತಹ ದೊಡ್ಡ ವೇದಿಕೆಯಲ್ಲಿ ಮಗ ಅಬ್ಬರಿಸುವುದನ್ನು ನೋಡುವುದು ಅವರ ದೊಡ್ಡ ಕನಸಾಗಿತ್ತು. ಹೀಗಾಗಿಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ದಾಖಲೆಯ ಅರ್ಧಶತಕವನ್ನು ಉರ್ವಿಲ್ ಪಟೇಲ್ ತಮ್ಮ ತಂದೆಗೆ ಅರ್ಪಿಸಿದ್ದರು.

Source link

ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ, ಮನೆಯಿಂದಲ್ಲೇ ಕೆಲಸ ಮಾಡಿ: ಪ್ರಧಾನಿ ಮೋದಿ ನೀಡಿದ ‘ಆರ್ಥಿಕ ಶಿಸ್ತಿನ’ ಕರೆ! – Kannada News | Foreign Exchange Conservation: PM Modi Urges Citizens to Halt Gold Purchase and Save Fuel

ಹೈದರಾಬಾದ್‌, ಮೇ.11: ಜಿಲ್ಲೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಅವರು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ವಿದೇಶಿ ಪ್ರಯಾಣವನ್ನು ತಪ್ಪಿಸಿ, ಸಾಧ್ಯವಾದಷ್ಟು ಮೆಟ್ರೋ ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಿದ್ದಾರೆ. ವಿದ್ಯುತ್ ವಾಹನಗಳ ಬಳಕೆಗೆ ಉತ್ತೇಜನ ನೀಡಿದ್ದು, ಮನೆಯಿಂದಲೇ ಕೆಲಸ ಮಾಡುವ, ಆನ್‌ಲೈನ್ ಸಭೆಗಳನ್ನು ನಡೆಸುವ ಮೂಲಕ ವೆಚ್ಚಗಳನ್ನು ಕಡಿಮೆಗೊಳಿಸುವಂತೆ ಮಧ್ಯಮ ವರ್ಗದ ಜನರಿಗೆ ಕರೆ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವ ಮೂಲಕ ದೇಶದ ವಿದೇಶಿ ವಿನಿಮಯವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮೋದಿ ಒತ್ತಿ ಹೇಳಿದ್ದಾರೆ. ಅಡುಗೆ ಎಣ್ಣೆ ಬಳಕೆಯ ತಗ್ಗಿಸುವಿಕೆಯು ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಸಿದ್ದಾರೆ. ದೇಶದ ಆರ್ಥಿಕ ಸ್ಥಿರತೆಗೆ ಈ ಕ್ರಮಗಳು ಸಹಕಾರಿ ಆಗಲಿವೆ ಎಂದು ಅವರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ಗೆಲುವಿಗೆ ಕಾರಣವಾದ 4 ಎಸೆತಗಳು..!

ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಮ್ಯಾಚ್​ನಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಆರ್​ಸಿಬಿ ತಂಡದ ಈ ಗೆಲುವಿಗೆ ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಎಷ್ಟು ಕಾರಣರೋ,  ಮುಂಬೈ ಇಂಡಿಯನ್ಸ್ ತಂಡದ ಸೋಲಿಗೆ​ ರಾಜ್​ ಬಾವ ಕೂಡ ಅಷ್ಟೇ ಕಾರಣರು.

ಏಕೆಂದರೆ ಈ ಮ್ಯಾಚ್​ನ ಅಂತಿಮ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ 15 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ರಾಜ್​ ಬಾವ ಬರೋಬ್ಬರಿ 10 ಎಸೆತಗಳನ್ನು ಎಸೆದಿದ್ದರು. ಅಂದರೆ ಹೆಚ್ಚುವರಿ ಮೂರು ಎಸೆತಗಳೇ ಮುಂಬೈ ಇಂಡಿಯನ್ಸ್ ಪಾಲಿಗೆ ಮುಳುವಾಯಿತು.

ರಾಜ್​ ಬಾವ ಕೊನೆಯ ಓವರ್​:

ಮೊದಲ ಎಸೆತವನ್ನು ವೈಡ್ ಎಸೆದಿದ್ದ ರಾಜ್ ಬಾವ, ಮರು ಎಸೆತದಲ್ಲಿ ನೋ ಬಾಲ್ ಮಾಡಿದರು. ಪರಿಣಾಮ ಆರ್​ಸಿಬಿ ತಂಡಕ್ಕೆ 2 ರನ್​ಗಳು ಸಿಕ್ಕವು. ಇನ್ನು ಫ್ರಿಹಿಟ್ ಎಸೆತದಲ್ಲಿ ಒಂದು ರನ್ ನೀಡಿದರು.

ಇದಾದ ಬಳಿಕ ಮತ್ತೊಂದು ವೈಡ್ ಎಸೆದರು. ಇದರಿಂದ ಎಕ್ಸ್​ಟ್ರಾ ಇನ್ನೊಂದು ರನ್ ಸಿಕ್ಕಿತು. ಆ ಬಳಿಕ ರೊಮಾರಿಯೊ ಶೆಫರ್ಡ್ ವಿಕೆಟ್ ಪಡೆದರು. ಆದರೆ ಆ ಬಳಿಕ ಭುವನೇಶ್ವರ್ ಕುಮಾರ್​​ಗೆ ಬಾನ್ಸರ್ ಎಸೆಯಲು ಹೋಗಿ ಮತ್ತೊಂದು ವೈಡ್ ನೀಡಿದರು. ಮರು ಎಸೆತದಲ್ಲಿ ಭುವಿ ಸಿಕ್ಸ್ ಸಿಡಿಸಿದರು. ಇನ್ನು 5ನೇ ಎಸೆತದಲ್ಲಿ ಒಂದು ರನ್ ಕಲೆಹಾಕುವ ಮೂಲಕ ರಾಸಿಖ್ ದಾರ್​ಗೆ ಸ್ಟ್ರೈಕ್ ನೀಡಿದರು.

ಅದರಂತೆ ಅಂತಿಮ ಎಸೆತದಲ್ಲಿ ಆರ್​ಸಿಬಿ ತಂಡಕ್ಕೆ 2 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ರಾಸಿಖ್ ನೀಡಿದ ಕ್ಯಾಚ್ ಕೈಚೆಲ್ಲುವ ಮೂಲಕ ರಾಜ್ ಬಾವ 2 ರನ್​ ಬಿಟ್ಟು ಕೊಟ್ಟರು. ಈ ಮೂಲಕ ಆರ್​ಸಿಬಿ ತಂಡ ಕೊನೆಯ ಓವರ್​ನಲ್ಲಿ ರೋಚಕ ಗೆಲುವು ದಾಖಲಿಸಿತು.

ಅಂದರೆ ಇಲ್ಲಿ ರಾಜ್​ ಬಾವ ಕೊನೆಯ ಓವರ್​ನಲ್ಲಿ ಮೂರು ವೈಡ್ ಹಾಗೂ ಒಂದು ನೋ ಬಾಲ್ ಎಸೆಯುವ ಮೂಲಕ ಒಟ್ಟು 10 ಎಸೆತಗಳನ್ನು ಎಸೆದಿದ್ದರು. ಈ ಹೆಚ್ಚುವರಿ 4 ಎಸೆತಗಳ ಮೂಲಕ ಆರ್​ಸಿಬಿ  5 ರನ್​ಗಳನ್ನು ಕಲೆಹಾಕಿದ್ದರು. ಅಂದರೆ ರಾಜ್​ ಬಾವ ಎಸೆದ ಹೆಚ್ಚುವರಿ ಎಸೆತಗಳೇ ಆರ್​ಸಿಬಿ ಗೆಲುವಿಗೆ ಕಾರಣವಾಯ್ತು ಎಂದರೆ ತಪ್ಪಾಗಲಾರದು.

 

 

Source link

“ನಾವು ಯಾವಾಗ ಇರ್ತೀವೋ ಗೊತ್ತಿಲ್ಲ..”: ಸಾವಿನ ಬಗ್ಗೆ ಸುಳಿವು ನೀಡಿದ್ದ ಸಚಿವ ಸುಧಾಕರ್ – Kannada News | Minister D. Sudhakar’s Last Speech Goes Viral: “Life is Like a Bulb, It May Switch Off Anytime

ಚಿತ್ರದುರ್ಗ ಮೇ.11: ಕರ್ನಾಟಕ ಸರ್ಕಾರದ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ನಂತರ, ಅವರು ಇತ್ತೀಚೆಗೆ ಶಾರದಾ ಆಶ್ರಮದ ಭೂಮಿಪೂಜೆ ವೇಳೆ ಆಡಿದ್ದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಜೀವನದ ಕ್ಷಣಿಕತೆಯ ಬಗ್ಗೆ ಅವರು ಆಡಿದ್ದ ಈ ಮಾತುಗಳು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿವೆ. “ನಾವು ಇವತ್ತು ಇರ್ತೀವೋ ಇಲ್ಲವೋ ಗೊತ್ತಿಲ್ಲ. ನಮ್ಮ ಜೀವನ ಒಂದು ರೀತಿ ಬಲ್ಬ್ ಇದ್ದಂತೆ, ಯಾವಾಗ ಸ್ವಿಚ್ ಆಫ್ ಆಗುತ್ತೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಜೀವನದ ಅನಿಶ್ಚಿತತೆಯನ್ನು ವಿವರಿಸಿದ್ದರು. “ಇದ್ದಷ್ಟು ದಿನ ಧಾರ್ಮಿಕವಾಗಿ, ಭಗವಂತನ ಸ್ಮರಣೆಯಲ್ಲಿ ಕಳೆಯಬೇಕು. ಒಬ್ಬೊಬ್ಬರದ್ದು ಒಂದೊಂದು ನಂಬಿಕೆ ಇರುತ್ತದೆ. ಕೆಲವರು ಕಾಯಕವೇ ಕೈಲಾಸ ಎನ್ನುತ್ತಾರೆ, ಮತ್ತೆ ಕೆಲವರು ಪರೋಪಕಾರವೇ ಭಗವಂತನ ಸೇವೆ ಎನ್ನುತ್ತಾರೆ” ಎಂದು ಅವರು ಕಿವಿಮಾತು ಹೇಳಿದ್ದರು. ಇಡೀ ಭಾಷಣದಲ್ಲಿ ಅವರು ಪರೋಪಕಾರ ಮತ್ತು ಸಮಾಜ ಸೇವೆಯ ಮಹತ್ವದ ಬಗ್ಗೆ ಒತ್ತಿ ಹೇಳಿದ್ದರು. ಸಚಿವ ಸುಧಾಕರ್ ಅವರು ಈ ಮಾತುಗಳನ್ನು ಆಡುವಾಗ ತಮಗೆ ಸಾವಿನ ಮುನ್ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಈಗ ಸಾರ್ವಜನಿಕರಲ್ಲಿ ಮೂಡಿದೆ. ಅವರ ಈ ವೈರಲ್ ವಿಡಿಯೋ ಕಂಡು ಚಿತ್ರದುರ್ಗದ ಜನತೆ ಹಾಗೂ ಅವರ ಬೆಂಬಲಿಗರು ಕಂಬನಿ ಮಿಡಿಯುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ! – Kannada News | Security Breach: Explosives Found on PM Modi’s Route Near Art of Living in Bengaluru

ರಾಮನಗರ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು (Explosive) ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9ಗೆ ಲಭ್ಯವಾಗಿದೆ.

ಮುಖ್ಯಾಂಶಗಳು

  • ಮೋದಿ ಬರುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿ ಆತಂಕ.
  •  ಪೊಲೀಸ್ ಪೇದೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ; ಬಾಂಬ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ.
  •  ಪ್ರಕರಣ ಭೇದಿಸಲು ಆರು ವಿಶೇಷ ತಂಡಗಳ ರಚನೆ; ಕ್ವಾರಿಗಳ ಮೇಲೆ ಪೊಲೀಸರ ಕಣ್ಣು.

ಏನಾಗಿತ್ತು?

ನಿನ್ನೆ (ಮೇ 10) ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು. ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಈ ಬಾಕ್ಸ್ ಅನ್ನು ಗಮನಿಸಿದ್ದರು.

ಬಾಕ್ಸ್‌ನಲ್ಲಿ ಏನಿತ್ತು?

ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ (Bomb Squad) ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಮ್ಯಾಚ್ ಬಾಕ್ಸ್ ಹಾಗೂ ಎರಡು ಬ್ಯಾಟರಿಗಳು ಕಂಡುಬಂದಿದ್ದವು. ಆರೋಪಿಯು ಸ್ಫೋಟಕಗಳನ್ನು ಬಾಕ್ಸ್‌ನಲ್ಲಿಟ್ಟು ಸುತ್ತಲೂ ಟೇಪ್ ಅಂಟಿಸಿದ್ದನು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಸಂಪೂರ್ಣ ಭದ್ರತೆ ಖಚಿತವಾದ ನಂತರವಷ್ಟೇ ಪ್ರಧಾನಿ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಇದನ್ನೂ ಓದಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆ ಬಗ್ಗೆ ಕೇಂದ್ರ ವಲಯ ಡಿಐಜಿ ಮಾಹಿತಿ

ತನಿಖೆಯ ಹಾದಿ

ಈ ಗಂಭೀರ ಪ್ರಕರಣವನ್ನು ಭೇದಿಸಲು ಕಗ್ಗಲಿಪುರ ಠಾಣೆ ಪೊಲೀಸರು ಆರು ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುವುದರ ಜೊತೆಗೆ, ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದ ಕ್ವಾರಿಗಳಲ್ಲಿ ಬಳಕೆಯಾಗುವ ಜಿಲೆಟಿನ್ ಕಡ್ಡಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೋದಿ ಸಂಚಾರಕ್ಕೂ ಹಿಂದಿನ ದಿನವೇ ಬಾಂಬ್ ಸ್ಕ್ವಾಡ್ ತಪಾಸಣೆ ನಡೆದಿತ್ತಾದರೂ ಬೆಳಗಿನ ಜಾವ ಈ ಬಾಕ್ಸ್ ಅನ್ನು ಅಲ್ಲಿ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕೇಂದ್ರ ವಲಯದ ಡಿಐಜಿ ಗಿರೀಶ್ ಅವರು ಈ ಬಗ್ಗೆ ಮಾಹಿತಿ ನೀಡಿ, ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ. ನಿನ್ನೆ ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:14 am, Mon, 11 May 26

Source link

Exit mobile version