RCB vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs DC Playing XI Royal Challengers Bengaluru vs Delhi Capitals Today IPL 2026 match Confirmed playing 11 details with name in Kannada

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದ್ದು, ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು, ಸತತ ಎರಡು ಪಂದ್ಯಗಳನ್ನು ಸೋತಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸಲಿದೆ. ಈ ಪಂದ್ಯವು ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡಕ್ಕೂ ಬಹಳ ಮುಖ್ಯವಾಗಿದೆ. ಆರ್‌ಸಿಬಿ ಮೊದಲ ಸ್ಥಾನ ತಲುಪಲು ಈ ಪಂದ್ಯವನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ಹಾದಿಗೆ ಬರಲು ಗೆಲುವು ಅಗತ್ಯ.

ಟಾಸ್ ಗೆದ್ದ ಡೆಲ್ಲಿ

ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರರೇ ಉಭಯ ತಂಡಗಳಲ್ಲಿ ಆಡಲಿದ್ದಾರೆ.

ಮುಖಾಮುಖಿ ದಾಖಲೆ

ಇಲ್ಲಿಯವರೆಗೆ, ಎರಡೂ ತಂಡಗಳು 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯಧಿಕ 215 ರನ್ ಗಳಿಸಿದರೆ, 135 ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ವಿರುದ್ಧ 196 ರನ್‌ಗಳ ಅತ್ಯಧಿಕ ಸ್ಕೋರ್ ದಾಖಲಿಸಿದರೆ, 95 ಅತ್ಯಂತ ಕಡಿಮೆ ಸ್ಕೋರ್ ಆಗಿದೆ.

RCB vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

ಉಭಯ ತಂಡಗಳ ಪ್ಲೇಯಿಂಗ್ 11

ಆರ್​ಸಿಬಿ: ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ರಸಿಖ್ ಸಲಾಂ, ಮತ್ತು ಜೋಶ್ ಹ್ಯಾಜಲ್‌ವುಡ್.

ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್ (ನಾಯಕ), ವಿಪ್ರಾಜ್ ನಿಗಮ್, ಆಕಿಬ್ ನಬಿ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಲುಂಗಿ ಎನ್‌ಗಿಡಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:07 pm, Sat, 18 April 26

Source link

ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ – Kannada News | Hunasihal Farmer’s Life at Risk: Protesting Wind Power Company’s Crop Destruction and Harassment

ಕೊಪ್ಪಳ, ಏ.18: ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ವಿಂಡ್ ಪವರ್ ಕಂಪನಿಯ ದೌರ್ಜನ್ಯದ ವಿರುದ್ಧ ರೈತನೊಬ್ಬ ಆಕ್ರೋಶ ವ್ಯಕ್ತಪಡಿಸಿ, ಸುಮಾರು 400 ಮೀಟರ್ ಎತ್ತರದ ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತಿದ್ದಾನೆ. ಮಧ್ಯಾಹ್ನದ ಸುಡುವ ಬಿಸಿಲನ್ನೂ ಲೆಕ್ಕಿಸದೆ ರೈತ ನಡೆಸುತ್ತಿರುವ ಈ ಪ್ರತಿಭಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹುಣಸಿಹಾಳ ಗ್ರಾಮದ ರೈತ ನಾಗರಾಜ್ ಗೊಂದಿ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಶೇಂಗಾ ಬೆಳೆಯನ್ನು ಪವರ್ ಗ್ರೀಡ್ ವಿಂಡ್ ಪವರ್ ಸಿಬ್ಬಂದಿಗಳು ಹಾಳು ಮಾಡಿದ್ದಾರೆ. ಹೈ ಟೆನ್ಷನ್ ವಿದ್ಯುತ್ ವೈರ್ ಕನೆಕ್ಷನ್ ನೀಡುವ ಉದ್ದೇಶದಿಂದ ರೈತನ ಅನುಮತಿ ಇಲ್ಲದೆ ಜಮೀನಿನೊಳಗೆ ಟ್ರ್ಯಾಕ್ಟರ್ ಓಡಿಸಿ ಬೆಳೆಯನ್ನು ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಪರಿಹಾರ ನೀಡುವಂತೆ ಕೇಳಿದ ರೈತನ ಮೇಲೆ ವಿಂಡ್ ಪವರ್ ಸಿಬ್ಬಂದಿಗಳು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ರೈತ ಇಂದು ಬೆಳಿಗ್ಗೆ 9 ಗಂಟೆಯಿಂದಲೇ ವಿದ್ಯುತ್ ಕಂಬ ಏರಿ ಕುಳಿತಿದ್ದಾರೆ.ಪ್ರತಿಭಟನೆ ನಡೆಸುತ್ತಿರುವ ರೈತ ನಾಗರಾಜ್ ಅವರು ಈಗಾಗಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. 38 ಡಿಗ್ರಿ ಸೆಲ್ಸಿಯಸ್ ಇರುವ ಸುಡುವ ಬಿಸಿಲಿನಲ್ಲಿ ಅವರು ಎತ್ತರದ ಕಂಬದ ಮೇಲೆ ಕುಳಿತಿರುವುದು ಅವರ ಪ್ರಾಣಕ್ಕೆ ಅಪಾಯ ತಂದೊಡ್ಡಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.ರೈತ ಕಂಬ ಏರಿ ಹಲವು ಗಂಟೆಗಳಾದರೂ ಇದುವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಾಧಾನಪಡಿಸುವ ಅಥವಾ ಮಾತುಕತೆ ನಡೆಸುವ ಪ್ರಯತ್ನ ಮಾಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ – Kannada News | GBA Final Voter List: 5 Bengaluru City Corporations Release Updated Electoral Roll

ಗ್ರೇಟರ್ ಬೆಂಗಳೂರು ಪ್ರಾಧಿಕಾರImage Credit source: newsfirstprime

ಬೆಂಗಳೂರು, ಏಪ್ರಿಲ್​ 18: ಜಿಬಿಎ ಚುನಾವಣೆ (GBA Election) ಅವಧಿಯನ್ನು ಮುಂದೂಡುವ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಮಧ್ಯೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತಪಟ್ಟಿಯನ್ನು (Voter List) ಬಿಡುಗಡೆ ಮಾಡಿದೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಜಿಬಿಎ ಒಟ್ಟು 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಅಂತಿಮ ಪಟ್ಟಿಯಲ್ಲಿ 88,95,361 ಮತದಾರರನ್ನು ಗುರುತು ಮಾಡಲಾಗಿದೆ.

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಹೇಳಿದ್ದಿಷ್ಟು 

ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಪ್ರತಿಕ್ರಿಯಿಸಿದ್ದು, ಒಟ್ಟು 88,95,361 ಮತದಾರರ ಪೈಕಿ ಪುರುಷ ಮತದಾರರು 45,69,752, ಮಹಿಳಾ ಮತದಾರರು 43,21,143, ಇತರೆ 1,633 ಮತದಾರರು ಇದ್ದಾರೆ. ಬೆಂಗಳೂರು ದಕ್ಷಿಣ ವಾರ್ಡ್ 51 (ಸುಬ್ರಮಣ್ಯಪುರ)ರಲ್ಲಿ ಅತಿ ಹೆಚ್ಚು ಅಂದರೆ 54,026 ಮತದಾರರಿದ್ದಾರೆ. ಬೆಂಗಳೂರು ಪೂರ್ವ ವಾರ್ಡ್ 16(ಕೊತ್ತೂರು)ನಲ್ಲಿ 10,940 ಅತಿ ಕಡಿಮೆ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಆಯೋಗಕ್ಕೆ ಸರ್ಕಾರ ಪತ್ರ, ಕಾರಣವೇನು?

ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಕರಡು ಮತದಾರರ ಪಟ್ಟಿಯನ್ನ ಮಾರ್ಚ್ 9ರಂದು ಬಿಡುಗಡೆ ಮಾಡಲಾಗಿತ್ತು. ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗಿತ್ತು. ಆಕ್ಷೇಪಣೆ ಬಂದ ಬಳಿಕ ಎಲ್ಲವನ್ನು ಪರಿಶೀಲನೆ ಮಾಡಿ ಸರಿಪಡಿಸಲಾಗಿದೆ. ಇದೀಗ ಅಂತಿಮ‌ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಅಂತಿಮ ಮತದಾರರ ಪಟ್ಟಿಯಲ್ಲಿ 88,95,361 ಮತದಾರರನ್ನ ಗುರುತು ಮಾಡಲಾಗಿದೆ. ಒಟ್ಟು 369 ವಾರ್ಡ್‌ಗಳಿವೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಹೇಳಿದ್ದಾರೆ.

ಜಿಬಿಎ ಚುನಾವಣೆ ಮುಂದೂಡುವ ವಿಚಾರ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ 

ಜೂನ್ ಅಂತ್ಯದೊಳಗೆ ಜಿಬಿಎ ಚುನಾವಣೆ ಮಾಡಿ ಮುಗಿಸುವಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಈ ಹಿಂದೆಯೇ ಸುಪ್ರೀಂಕೋರ್ಟ್ ನಿರ್ದೇಶಿಸಿತ್ತು. ಆದರೆ ಸದ್ಯ ಜಿಬಿಎ ಚುನಾವಣೆ ಅವಧಿಯನ್ನು ಮುಂದೂಡುವಂತೆ ಸರ್ಕಾರವೇ ಆಯೋಗಕ್ಕೆ ಪತ್ರ ಬರೆದಿದೆ. ಈ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​​ನಲ್ಲಿ ಒಳಬೇಗುದಿ ಹೆಚ್ಚಾಗಿದೆ. ಇನ್ನು ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಅದಕ್ಕೆ ಜಿಬಿಎ ಚುನಾವಣೆ ಮುಂದೂಡಿ ಅಂತ ಚುನಾವಣಾ ಆಯೋಗಕ್ಕೆ ಹೇಳಿದ್ದಾರೆ. ಚುನಾವಣೆಯಲ್ಲಿ ಸೋಲಾಗುವುದನ್ನು ತಪ್ಪಿಸಲು ಹೀಗೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಟಾಕ್ಸಿಕ್’ ಪಾತ್ರದ ಬಗ್ಗೆ ಮಾತನಾಡಿದ ಕಿಯಾರಾ ಅಡ್ವಾಣಿ: ಹೇಳಿದ್ದೇನು? – Kannada News | Kiara Advani talks about Toxic movie and her character in it

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಸದ್ಯಕ್ಕೆ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಸಿನಿಮಾ ಇದೀಗ ಜೂನ್ 4ಕ್ಕೆ ಬಿಡುಗಡೆ ಮುಂದೂಡಿಕೊಂಡಿದ್ದು, ಸಿನಿಮಾದ ಪ್ರಚಾರ ಇದೀಗ ನಿಧಾನಕ್ಕೆ ಆರಂಭವಾಗಿದೆ. ‘ರಾಮಾಯಣ’ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​ನ ಸಿನಿಮಾಕಾನ್ 2026ನಲ್ಲಿ ಭಾಗಿ ಆಗಿರುವ ಯಶ್ ಅವರಿಗೆ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಬಹಳ ಪ್ರಶ್ನೆಗಳು ಎದುರಾಗಿದ್ದು, ಯಶ್ ಸಹ ‘ಟಾಕ್ಸಿಕ್’ ಬಗ್ಗೆ ಕುತೂಹಲಕಾರಿ ಅಂಶಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದೀಗ ಪ್ರತಿಷ್ಠಿತ ಬ್ರ್ಯಾಂಡ್ ಕೊಲ್ಯಾಬರೇಷನ್​​ನಲ್ಲಿ ನಟಿ ಕಿಯಾರಾ ಅಡ್ವಾಣಿ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಕಿಯಾರಾ ಅಡ್ವಾಣಿ, ಇತ್ತೀಚೆಗಷ್ಟೆ ಬ್ರ್ಯಾಂಡ್ ಶೂಟ್ ಒಂದರಲ್ಲಿ ಭಾಗವಹಿಸಿದ್ದ ಕಿಯಾರಾ ಅಡ್ವಾಣಿ, ತಮ್ಮ ಸಿನಿಮಾ, ಖಾಸಗಿ ಜೀವನ, ತಾಯ್ತನ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ ತಮ್ಮ ಪಾತ್ರದ ಬಗ್ಗೆಯೂ ಮಾತನಾಡಿದ್ದಾರೆ. ಅವರು ಮಾತುಗಳಿಂದ ‘ಟಾಕ್ಸಿಕ್’ ಸಿನಿಮಾದ ಅವರ ನಾಡಿಯಾ ಪಾತ್ರ ಬಹಳ ಭಿನ್ನವಾದ ಮತ್ತು ಸವಾಲಿನ ಪಾತ್ರ ಹಾಗೂ ಅದು ಮಾಸ್ ಮಸಾಲ ಸಿನಿಮಾದ ನಾಯಕಿಯ ಪಾತ್ರದಂತೆ ಖಂಡಿತ ಇಲ್ಲ ಎಂಬುದು ತಿಳಿಯುತ್ತಿದೆ.

‘ಟಾಕ್ಸಿಕ್’ ಸಿನಿಮಾದ ನಾಡಿಯಾ ಪಾತ್ರ ನಾನು ಈ ವರೆಗೆ ಕೇಳಿರುವ ಭಿನ್ನ ರೀತಿಯ ಪಾತ್ರ. ಬಹಳ ಭಿನ್ನವಾದ ಪೋಷಣೆಯನ್ನು ಆ ಪಾತ್ರ ಒಳಗೊಂಡಿದೆ. ನನ್ನ ಪಾತ್ರಕ್ಕೆ ಅಷ್ಟು ಭಿನ್ನವಾದ ಕ್ಯಾರೆಕ್ಟರ್ ಆರ್ಕ್ ಅನ್ನು ಈ ವರೆಗೆ ನಾನು ನೋಡಿರಲಿಲ್ಲ. ನಿರ್ದೇಶಕಿ ಗೀತು ಮೋಹನ್​​ದಾಸ್ ‘ನಾಡಿಯಾ’ ಪಾತ್ರವನ್ನು ಬರೆದಿರುವ ರೀತಿ ಮತ್ತು ಆ ಪಾತ್ರಕ್ಕೆ ನೀಡಿರುವ ಪ್ರಾಮುಖ್ಯತೆ ಮತ್ತು ಭಿನ್ನತೆ ನನಗೆ ಬಹಳ ಹಿಡಿಸಿತು’ ಎಂದಿದ್ದಾರೆ ಕಿಯಾರಾ ಅಡ್ವಾಣಿ.

ಇದನ್ನೂ ಓದಿ:‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್

‘ನನ್ನ ವೃತ್ತಿ ಜೀವನದಲ್ಲಿ ನಾನು ಸವಾಲುಗಳನ್ನು ತೆಗೆದುಕೊಳ್ಳಲು ರೆಡಿಯಾಗುತ್ತಿರುವಾಗಲೇ ಈ ಪಾತ್ರ ನನಗೆ ಬಂತು. ಇದು ಸರಿಯಾದ ಸಮಯ ಎನಿಸಿ ಈ ಪಾತ್ರವನ್ನು ನಾನು ಒಪ್ಪಿಕೊಂಡೆ. ನಾನು ‘ನಾಡಿಯಾ’ ಅಂಥಹಾ ಸವಾಲಿನ ಪಾತ್ರದಲ್ಲಿ ಬೆರೆತು ಹೋದೆ, ನನ್ನನ್ನು ನಾನು ನಿರ್ದೇಶಕಿಗೆ ಮತ್ತು ಆ ಪಾತ್ರಕ್ಕೆ ಒಪ್ಪಿಸಿಕೊಂಡು ಬಿಟ್ಟೆ. ಪಾತ್ರ ಚೆನ್ನಾಗಿ ಮೂಡಿಬಂದಿದ್ದು, ಸಿನಿಮಾ ಬಿಡುಗಡೆಗೆ ಉತ್ಸುಕಳಾಗಿದ್ದೇನೆ’ ಎಂದಿದ್ದಾರೆ ಕಿಯಾರಾ ಅಡ್ವಾಣಿ.

ಕಿಯಾರಾ ಅಡ್​ವಾಣಿ ‘ನಾಡಿಯಾ’ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಅವರಷ್ಟೆ ಅಲ್ಲದೆ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ಸಹ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಜೂನ್ 4ಕ್ಕೆ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಯಚೂರು: ಬಯಲಾಟದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳು ಸಾವು, ತಾಯಿ-ಮಗಳ ಕಾಲು ಕಟ್! – Kannada News | Bail Marchad: Old Building Collapse Claims 2 Young Lives, Severely Injures 4

ರಾಯಚೂರು, ಏ.18: ಜಿಲ್ಲೆಯ ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಹೃದಯವಿದ್ರಾವಕ ಘಟನೆಯಲ್ಲಿ, ಹಳೆಯ ಕಟ್ಟಡದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಕಾಲುಗಳು ಕತ್ತರಿಸಲ್ಪಟ್ಟಿವೆ. ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಯಲಾಟವನ್ನು ನೋಡಲು ಗ್ರಾಮಸ್ಥರೆಲ್ಲರೂ ಸಂಭ್ರಮದಿಂದ ಜಮಾಯಿಸಿದ್ದರು. ಈ ವೇಳೆ ಅನೇಕರು ಗ್ರಾಮದ ಚಾವಡಿ ಕಟ್ಟೆಯ ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಹಳೆಯದಾಗಿದ್ದ ಚಾವಡಿ ಕಟ್ಟಡದ ಮೇಲ್ಭಾಗದಲ್ಲಿದ್ದ ಸಿಮೆಂಟ್‌ನ ನಾಮಫಲಕದ ಬೋರ್ಡ್ ಆಯತಪ್ಪಿ ಕೆಳಗೆ ಕುಳಿತಿದ್ದವರ ಮೇಲೆ ಬಿದ್ದಿದೆ. ಇನ್ನು ಮೃತರನ್ನು ವಿಶ್ವನಾಥ್ (8 ವರ್ಷ) ಹಾಗೂ ಸನ್ವಿತಾ (1.6 ವರ್ಷ) ಎಂದು ಗುರುತಿಸಲಾಗಿದೆ. ದುರಂತದ ತೀವ್ರತೆಗೆ ಸಿಮೆಂಟ್ ಬೋರ್ಡ್ ಅಡಿಯಲ್ಲಿ ಸಿಲುಕಿದ ಬಸಮ್ಮ (38) ಅವರ ಒಂದು ಕಾಲು ಕಟ್‌ ಆಗಿದ್ದರೆ, ಅವರ ಮಗಳು ಲಕ್ಷ್ಮಿ (17) ಅವರ ಎರಡು ಕಾಲುಗಳು ಕಟ್‌ ಆಗಿವೆ. ಇವರ ಜೊತೆಗೆ ವಿಶಾಲಮ್ಮ (20) ಮತ್ತು 4 ವರ್ಷದ ಮಗು ಯಲ್ಲಮ್ಮ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Source link

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು! – Kannada News | Arabail Ghat Car Fire: Accident Revealed as Murder of Most Wanted Criminal Nitish Daple

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು

ಉತ್ತರ ಕನ್ನಡ, ಏಪ್ರಿಲ್ 18: ಏಪ್ರಿಲ್ 8ರಂದು ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ಸಂಭವಿಸಿತ್ತು. ಆರಂಭದಲ್ಲಿ ಇದನ್ನು ಅಪಘಾತ (Accident) ಎಂದು ಹೇಳಲಾಗಿತ್ತು. ಆದರೆ ಪ್ರಕರಣಕ್ಕೆ ಈಗ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

50ಕ್ಕೂ ಹೆಚ್ಚು ಪ್ರಕರಣದ ಆರೋಪಿಯಾಗಿದ್ದ ನಿತೀಶ್!

ಮೃತನು ಬೆಳಗಾವಿ ಮೂಲದ ನಿತೀಶ್ ಡಾಪಳೆ ಎಂದು ಗುರುತಿಸಲಾಗಿದ್ದು, ಅವನು 50ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಅವನನ್ನು ಹುಬ್ಬಳ್ಳಿಯಲ್ಲಿ ತನ್ನ ಸಹಚರರೇ ಕೊಲೆ ಮಾಡಿರುವುದು ಗೊತ್ತಾಗಿದೆ. ಕೊಲೆ ಮಾಡಿದ ಬಳಿಕ ನಿತೀಶ್ ಶವವನ್ನು ಕಾರಿನಲ್ಲಿ ಹಾಕಿ ಅರಬೈಲ್ ಘಟ್ಟಕ್ಕೆ ತಂದು, ಸಾಕ್ಷ್ಯ ನಾಶ ಮಾಡಲು ಕಾರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಆರು ಆರೋಪಿಗಳಲ್ಲಿ ಮೂವರ ಬಂಧನ

ಈ ಪ್ರಕರಣದಲ್ಲಿ ಒಟ್ಟು ಆರು ಮಂದಿಯ ಹೆಸರು ಕೇಳಿಬಂದಿದ್ದು, ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಯೀಮ್ ಮೌಲಾ, ದಾದಾ ಪೀರ್ ಮತ್ತು ಸೋಯಬ್ ಎಂದು ಗುರುತಿಸಲಾಗಿದ್ದು, ಇವರು ಹುಬ್ಬಳ್ಳಿ ಮೂಲದವರು. ಉಳಿದ ಶಾನು, ಜಮೀರ್ ಹಾಗೂ ಆಯುಬ್ ಎಂಬ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ಮುಂದುವರೆಸಿದ್ದಾರೆ. ಈ ಪ್ರಕರಣ ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ! – Kannada News | Navanagar: Rent Dispute Leads Youth to Climb Telecom Tower; Police Begin Rescue

ಬಾಗಲಕೋಟೆ, ಏಪ್ರಿಲ್ 18: ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ನವನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಐಸ್ ಫ್ಯಾಕ್ಟರಿ ಸಮೀಪದ ಟವರ್ ಮೇಲೆ ಯುವಕ ಕುಳಿತಿದ್ದು, ಮನವೊಲಿಸಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್​ – Kannada News | Viral Hotel Room Drama: Mother Catches Daughter with Boyfriend; Video Sparks Debate

ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter

“ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ.

ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ:

ಮಗಳ ಮೇಲೆ ಅನುಮಾನಗೊಂಡ ತಾಯಿ, ಗ್ರಾಮದ ಕೆಲವರ ಸಹಾಯದೊಂದಿಗೆ ಲಾಡ್ಜ್‌ ಮೇಲೆ ದಾಳಿ ನಡೆಸಿದ್ದಾರೆ. ರೂಮಿನ ಬಾಗಿಲು ತೆರೆದಾಗ ಮಗಳು ತನ್ನ ಪ್ರಿಯಕರನ ಜೊತೆ ಇರುವುದು ಕಂಡುಬಂದಿದೆ. ಇದನ್ನು ಕಂಡು ಆಕ್ರೋಶಗೊಂಡ ತಾಯಿ, ಸ್ಥಳದಲ್ಲೇ ಮಗಳ ಕೆನ್ನೆಗೆ ಬಾರಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಆಕೆಯ ಜೊತೆಗಿದ್ದ ಯುವಕನಿಗೂ ಸರಿಯಾಗಿಯೇ ಧರ್ಮದೇಟು ನೀಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಪೊಲೀಸರ ಮಧ್ಯಪ್ರವೇಶ:

ಹೋಟೆಲ್ ರೂಮ್‌ನಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ, ಅಲ್ಲಿಗೆ ಬಂದ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಕೋಪಗೊಂಡ ತಾಯಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ವಾತಾವರಣ ತೀರಾ ಉದ್ವಿಗ್ನಗೊಂಡಿದ್ದು, ರೂಮಿನಲ್ಲಿದ್ದ ಯಾರೋ ಒಬ್ಬರು ಈ ಇಡೀ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಈಗ ‘ಎಕ್ಸ್’ (ಟ್ವಿಟ್ಟರ್) ಸೇರಿದಂತೆ ವಿವಿಧ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿರುವ ಪಕ್ಷಿಯನ್ನು ಕಂಡುಹಿಡಿಯಬಲ್ಲಿರಾ

ಇದು ನಿಜವೋ ಅಥವಾ ‘ಸ್ಕ್ರಿಪ್ಟೆಡ್’ ವಿಡಿಯೋವೋ?

@desHi__chora ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಕೇವಲ ಒಂದೇ ದಿನದಲ್ಲಿ 7 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಆದರೆ, ವಿಡಿಯೋ ನೋಡಿದ ಬಹುಪಾಲು ನೆಟ್ಟಿಗರು ಇದು ನಿಜವಾದ ಘಟನೆಯಲ್ಲ ಎಂದು ವಾದಿಸುತ್ತಿದ್ದಾರೆ. “ಇದು ಕೇವಲ ಸೋಷಿಯಲ್ ಮೀಡಿಯಾದಲ್ಲಿ ವ್ಯೂಸ್ ಮತ್ತು ಸಬ್‌ಸ್ಕ್ರೈಬರ್ಸ್‌ಗಳನ್ನು ಹೆಚ್ಚಿಸಿಕೊಳ್ಳಲು ಮಾಡಿದ ‘ಸ್ಕ್ರಿಪ್ಟೆಡ್’ ಅಥವಾ ನಕಲಿ ವಿಡಿಯೋ ಇರಬಹುದು” ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಚಾರಕ್ಕಾಗಿ ನಾಟಕೀಯ ವಿಡಿಯೋಗಳನ್ನು ಚಿತ್ರೀಕರಿಸಿ ವೈರಲ್ ಮಾಡುವುದು ಸಾಮಾನ್ಯವಾಗುತ್ತಿರುವುದು ಜನರ ಈ ಅನುಮಾನಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಈ ‘ಹೈಡ್ರಾಮಾ’ ವಿಡಿಯೋ ಮಾತ್ರ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿರುವುದಂತೂ ಸುಳ್ಳಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PSL 2026: ಜೊತೆಯಾಗಿ ಕಣಕ್ಕಿಳಿದ ‘ಮೂಲ’ ಮತ್ತು ‘ಬದಲಿ’ ಆಟಗಾರ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಕ್ರಿಕೆಟ್ ಪ್ರೇಮಿಗಳನ್ನು ಅಚ್ಚರಿಗೊಳಿಸುವಂತಹ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಒಬ್ಬ ಆಟಗಾರ ತಂಡದಿಂದ ಹೊರಹೋದಾಗ ಅವರ ಜಾಗಕ್ಕೆ ‘ಬದಲಿ’ (Replacement) ಆಟಗಾರ ಬರುತ್ತಾರೆ. ಆದರೆ, ಏಪ್ರಿಲ್ 17 ರಂದು ಲಾಹೋರ್ ಖಲಂದರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು ತನ್ನ ‘ಬದಲಿ’ ಆಟಗಾರ ದಿನೇಶ್ ಚಂಡಿಮಲ್ ಮತ್ತು ‘ಹೊರಹೋಗಬೇಕಿದ್ದ’ ಬೆವನ್ ಜೇಕಬ್ಸ್ ಇಬ್ಬರನ್ನೂ ಒಂದೇ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಣಕ್ಕಿಳಿಸಿದೆ.

ಯಾಕೆ ಹೀಗಾಯ್ತು?

ನ್ಯೂಝಿಲೆಂಡ್‌ನ ಯುವ ಆಟಗಾರ ಬೆವನ್ ಜೇಕಬ್ಸ್ ಅವರು ರಾಷ್ಟ್ರೀಯ ತಂಡದ ಜವಾಬ್ದಾರಿಗಾಗಿ ಪಿಎಸ್‌ಎಲ್‌ನಿಂದ ಅರ್ಧದಲ್ಲೇ ನಿರ್ಗಮಿಸಬೇಕಿತ್ತು. ಈ ಹಿನ್ನೆಲೆಯಲ್ಲಿ, ಏಪ್ರಿಲ್ 16 ರಂದು ಕ್ವೆಟ್ಟಾ ಗ್ಲಾಡಿಯೇಟರ್ಸ್ ಮ್ಯಾನೇಜ್‌ಮೆಂಟ್ ಶ್ರೀಲಂಕಾದ ಹಿರಿಯ ಆಟಗಾರ ದಿನೇಶ್ ಚಂಡಿಮಲ್ ಅವರನ್ನು ಜೇಕಬ್ಸ್ ಬದಲಿಗೆ ತಂಡಕ್ಕೆ ಸೇರಿಸಿಕೊಳ್ಳುವುದಾಗಿ ಅಧಿಕೃತವಾಗಿ ಘೋಷಿಸಿತ್ತು. ಆದರೆ, ಮಾರನೇ ದಿನದ ಪಂದ್ಯದ ಲೈನ್‌ಅಪ್ ನೋಡಿದ ಅಭಿಮಾನಿಗಳಿಗೆ ಅಚ್ಚರಿ ಕಾದಿತ್ತು – ಅಲ್ಲಿ ಇಬ್ಬರೂ ಆಟಗಾರರ ಹೆಸರಿತ್ತು!

ಈ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ ತಂಡದ ಜನರಲ್ ಮ್ಯಾನೇಜರ್ ನಬೀಲ್ ಹಶ್ಮಿ, ಪಂದ್ಯದ ದಿನದಂದು ಸ್ಟಾರ್ ಆಟಗಾರ ಟಾಮ್ ಕರ್ರನ್ ಅವರು ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಕರ್ರನ್ ಹೋಟೆಲ್‌ನಲ್ಲಿಯೇ ವಿಶ್ರಾಂತಿ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದ್ದರಿಂದ, ತಂಡವು ತನ್ನ ಲಭ್ಯವಿರುವ ಅತ್ಯುತ್ತಮ ಆಯ್ಕೆಯನ್ನು ಬಳಸಿಕೊಳ್ಳಲು ನಿರ್ಧರಿಸಿತು.

ಹೀಗಾಗಿ, ಜೇಕಬ್ಸ್ ನಿರ್ಗಮನಕ್ಕೂ ಮುನ್ನವೇ ಚಂಡಿಮಲ್ ಅವರನ್ನು ಟಾಮ್ ಕರ್ರನ್ ಅವರ ಸ್ಥಾನಕ್ಕೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಯಿತು. ಈ ಅನಿರೀಕ್ಷಿತ ಬದಲಾವಣೆಯಿಂದಾಗಿ ‘ಮೂಲ’ ಮತ್ತು ‘ಬದಲಿ’ ಆಟಗಾರ! ಇಬ್ಬರೂ ಏಕಕಾಲದಲ್ಲಿ ಮೈದಾನಕ್ಕಿಳಿಯುವಂತಾಯಿತು.

ಪಂದ್ಯದಲ್ಲಿ ಜೇಕಬ್ಸ್ ಪ್ರದರ್ಶನ:

ಇನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕೊನೆಯ ಪಂದ್ಯವಾಡಿದ ಬೆವನ್ ಜೇಕಬ್ಸ್, ಕೇವಲ 6 ಎಸೆತಗಳಲ್ಲಿ 14 ರನ್ ಗಳಿಸುವ ಮೂಲಕ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದರು. ಇದಾದ ಬೆನ್ನಲ್ಲೇ ಅವರು ಬಾಂಗ್ಲಾದೇಶ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮತ್ತೊಂದೆಡೆ ಬದಲಿಯಾಗಿ ಬಂದ ದಿನೇಶ್ ಚಂಡಿಮಲ್ ಕೇವಲ 3 ರನ್​ಗಳಿಸಿ ನಿರಾಸೆ ಮೂಡಿಸಿದರು.

ಇದಾಗ್ಯೂ ಈ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ನೀಡಿದ 135 ರನ್​ಗಳ ಗುರಿಯನ್ನು ಬೆನ್ನತ್ತಿ ಕ್ವೆಟ್ಟಾ ಗ್ಲಾಡಿಯೇಟರ್ಸ್  ತಂಡ 6 ವಿಕೆಟ್​ಗಳ ಜಯ ಸಾಧಿಸಿದೆ.

ಇದನ್ನೂ ಓದಿ: ದಿಗ್ಗಜರ ದಾಖಲೆಯೇ ಉಡೀಸ್: ಹೊಸ ಚರಿತ್ರೆ ಬರೆದ ಸ್ಮೃತಿ ಮಂಧಾನ

ಅಂದಹಾಗೆ ಕ್ರಿಕೆಟ್ ಇತಿಹಾಸದಲ್ಲಿ ಇಂತಹ ತಾಂತ್ರಿಕ ಬದಲಾವಣೆಗಳು ಅಪರೂಪವಾಗಿದ್ದು, ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡದ ಈ ನಿರ್ಧಾರವು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಯಿತು.

 

 

Source link

RCB vs DC IPL 2026 Live Score: ಆರ್​ಸಿಬಿಗೆ ಡೆಲ್ಲಿ ಸವಾಲು – Kannada News | Royal Challengers Bengaluru vs Delhi Capitals IPL 2026 Live Cricket Score RCB vs DC Match on 18th April latest news in Kannada

ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ, ಆರ್​​ಸಿಬಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಗಳಿಂದ ಹೊರಬರಲು ಪ್ರಯತ್ನಿಸಲಿದೆ.

Source link

Exit mobile version