ಟೀಮ್ ಇಂಡಿಯಾ ಅಭ್ಯಾಸಕ್ಕೆ ‘ಗ್ರಹಣ’ – Kannada News | IND vs ENG: Team India’s practice delayed due to the lunar eclipse

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಮಾರ್ಚ್ 5 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಮಾರ್ಚ್ 3 ರಂದು ಸಂಭವಿಸಿದ ಪೂರ್ಣ ಚಂದ್ರಗ್ರಹಣದ ಕಾರಣದಿಂದಾಗಿ ಅಭ್ಯಾಸದ ಸಮಯವನ್ನು ಸುಮಾರು ಒಂದು ಗಂಟೆ ಕಾಲ ಮುಂದೂಡಲಾಗಿತ್ತು.

ಅಭ್ಯಾಸದ ಮೂಲ ವೇಳಾಪಟ್ಟಿಯಂತೆ ಸಂಜೆ 6:00 ಗಂಟೆಗೆ ಆರಂಭವಾಗಬೇಕಿದ್ದ ತರಬೇತಿಯು, ಗ್ರಹಣದ ಹಿನ್ನೆಲೆಯಲ್ಲಿ ಸಂಜೆ 7:20ಕ್ಕೆ ಆರಂಭಿಸಲಾಯಿತು. ಹಿಂದೂ ಸಂಪ್ರದಾಯದಲ್ಲಿ, ಗ್ರಹಣದ ಸಮಯದಲ್ಲಿ ಯಾವುದರೂ ಪ್ರಮುಖ ಕಾರ್ಯದಲ್ಲಿ ನಿರತರಾಗುವುದು ಒಳಿತಲ್ಲ ಎಂದು ನಂಬಲಾಗುತ್ತದೆ.

ಇತ್ತ ಚಂದ್ರಗ್ರಹಣವು ಮಧ್ಯಾಹ್ನ 3:20 ರಿಂದ ಸಂಜೆ 6:47 ರವರೆಗೆ ಇದ್ದ ಆ ಅವಧಿಯನ್ನು ಅಶುಭ ಎಂದು ಪರಿಗಣಿಸಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು  ಗ್ರಹಣ ಮುಗಿದ ನಂತರವೇ ಮೈದಾನಕ್ಕಿಳಿಯಲು ನಿರ್ಧರಿಸಿತು.

ಅಲ್ಲದೆ ಗ್ರಹಣ ಮುಗಿಯುವವರೆಗೆ ಕ್ರೀಡಾಂಗಣದ ಫ್ಲಡ್‌ಲೈಟ್‌ಗಳನ್ನು ಕೂಡ ಆನ್ ಮಾಡಿರಲಿಲ್ಲ. ಇನ್ನು  ಗ್ರಹಣ ಮುಗಿದ ನಂತರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಅಭಿಷೇಕ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ಕಠಿಣ ತರಬೇತಿಯಲ್ಲಿ ನಿರತರಾಗಿದ್ದರು. ಈ ಅಭ್ಯಾಸದೊಂದಿಗೆ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದೆ.

ಸೆಮಿಫೈನಲ್ ಪಂದ್ಯ ಯಾವಾಗ?

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಇಂದು (ಮಾ.4) ನಡೆಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

ಇನ್ನು ನಾಳೆ, ಮಾರ್ಚ್ 5 ರಂದು ನಡೆಯಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಜಯಗಳಿಸುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಅದರಂತೆ ಈ ನಾಲ್ಕು ತಂಡಗಳಲ್ಲಿ 2 ಟೀಮ್​ಗಳು ಮಾರ್ಚ್ 8 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಇದನ್ನೂ ಓದಿ: 50 ಲಕ್ಷ ರೂ. ದಂಡವಲ್ಲ… ಪಾಕ್ ಆಟಗಾರರನ್ನು ಬ್ಯಾನ್ ಮಾಡಿ!

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು – Kannada News | Congress MLA Returns to Bengaluru After Foreign Trip

ಬೆಂಗಳೂರು, ಮಾರ್ಚ್​ 04: ರಾಜ್ಯ ಕಾಂಗ್ರೆಸ್​ನಲ್ಲಿ ಕುರ್ಚಿಕಾದಾಟದ ನಡುವೆ ವಿದೇಶಕ್ಕೆ ಹಾರಿದ್ದ ಶಾಸಕರು ವಿದೇಶ ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್​ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​​ಪೋರ್ಟ್​ಗೆ ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಆಗಮಿಸಿದ್ದಾರೆ. ಬಹುತೇಕ ಶಾಸಕರು ಮಾಧ್ಯಮಗಳ ಕ್ಯಾಮರಾ ಕಾಣುತ್ತಿದ್ದಂತೆ ತರಾತುರಿಯಲ್ಲಿ ಕಾರು ಹತ್ತಿ ತೆಳಿದ್ದಾರೆ. ಅಧ್ಯಯನ ಮಾಡಲು ಹೋಗಿದ್ದಾಗಿ ಶಾಸಕ ದೇವೇಂದ್ರಪ್ಪ ಹೇಳಿದರೆ, ಅದೆಲ್ಲಾ ಸುಳ್ಳು ಎಂದು ಸಿರುಗುಪ್ಪ ಶಾಸಕ ಬಿಎಂ‌ ನಾಗರಾಜ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆ ಮಧ್ಯೆಯೂ ಅಭಿಮಾನಿಗಳನ್ನು ಮರೆತಿಲ್ಲ ರಶ್ಮಿಕಾ-ವಿಜಯ್; ಮಾದರಿ ಆದ ದಂಪತಿ – Kannada News | Rashmika Mandanna and Vijay Deverakonda’s Post Wedding Fan Meet: A Model Couple’s Heartwarming Gesture

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ವಿವಾಹ ಆದರು. ಇವರು ಮದುವೆ ಆಗಿ ವಾರ ಕಳೆಯುತ್ತಾ ಬಂದರೂ ಅವರ ಸಂಭ್ರಮ ನಿಂತಿಲ್ಲ. ವಿಜಯ್ ಹಾಗೂ ರಶ್ಮಿಕಾ ವಿವಿಧ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಸಾಮಾಜಿಕ ಕೆಲಸ ಆಗುತ್ತಿದೆ. ಈ ಬ್ಯುಸಿ ವೇಳಾಪಟ್ಟಿಯಲ್ಲೂ ಅವರು ಅಭಿಮಾನಿಗಳನ್ನು ಮರೆತಿಲ್ಲ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ತಿರುಪತಿಗೆ ಭೇಟಿ ಕೊಟ್ಟರು. ಇಷ್ಟೇ ಅಲ್ಲ, ವಿಜಯ್ ಹುಟ್ಟೂರಿಗೆ ತೆರಳಿ ಸತ್ಯ ನಾರಾಯಣ ಪೂಜೆಯಲ್ಲಿ ಭಾಗಿ ಆದರು. ಇಂದು (ಮಾರ್ಚ್ 4) ಹೈದರಾಬಾದ್​​ನಲ್ಲಿ ಆರತಕ್ಷತೆ ನಡೆಯಲಿದೆ. ಅದಕ್ಕೂ ಮೊದಲು ಅಭಿಮಾನಿಗಳನ್ನು ರಶ್ಮಿಕಾ-ವಿಜಯ್ ಭೇಟಿ ಮಾಡಿದರು. ಮದುವೆಯಲ್ಲಿ ಕೇವಲ ಆಪ್ತರು ಮಾತ್ರ ಭಾಗಿ ಆಗಿದ್ದರು. ಹೀಗಾಗಿ, ಮದುವೆ ಬಳಿಕ ಅವರು ಅಭಿಮಾನಿಗಳನ್ನು ಭೇಟಿ ಆಗಿದ್ದಾರೆ.

ಮಂಗಳವಾರ ಹೈದರಾಬಾದ್​ನಲ್ಲಿ ಫ್ಯಾನ್ಸ್ ಮೀಟಪ್​ ನಡೆದಿದೆ. ಅಭಿಮಾನಿಗಳ ಜೊತೆ ವಿಜಯ್ ಹಾಗೂ ರಶ್ಮಿಕಾ ಮಾತನಾಡಿದರು. ರಶ್ಮಿಕಾ ಫ್ಯಾನ್​ ಪೇಜ್ ಅವರನ್ನು ಕರೆಯಲಾಗಿತ್ತು ಎನ್ನಲಾಗಿದೆ. ಬಂದ ಪ್ರತಿಯೊಬ್ಬರಿಗೂ ರಶ್ಮಿಕಾ ಹಾಗೂ ವಿಜಯ್ ಶೇಕ್ ಹ್ಯಾಂಡ್ ಮಾಡಿದರು. ಅಭಿಮಾನಿಗೆ ಪ್ರೀತಿಯಿಂದ ಅಪ್ಪುಗೆಯನ್ನೂ ನೀಡಿದರು. ಕೆಲವರಿಗೆ ಆಟೋಗ್ರಾಫ್ ನೀಡಿದರು.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್

ವಿಶೇಷ ಎಂದರೆ ರಶ್ಮಿಕಾ ಹಾಗೂ ವಿಜಯ್ ಖುದ್ದಾಗಿ ಅಭಿಮಾನಿಗಳಿಗೆ ಆಹಾರ ಬಡಿಸಿದ್ದಾರೆ. ರಶ್ಮಿಕಾ ಅವರು ಮಂಗಳಸೂತ್ರ ಹಾಗೂ ಸಿಂಧೂರ ಧರಿಸಿ ಗಮನ ಸೆಳೆದರು. ರಶ್ಮಿಕಾ ಅವರು ಕುರ್ತಾ ಧರಿಸಿದ್ದರು.
ರಶ್ಮಿಕಾ ಅವರು ಅಭಿಮಾನಿಗಳಿಗೆ ಇಷ್ಟು ಪ್ರೀತಿ ತೋರಿಸಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಅಭಿಮಾನಿಗಳನ್ನು ಮರೆತಿಲ್ಲ ಎಂಬ ವಿಷಯವೇ ಸೋಶಿಯಲ್ ಮೀಡಿಯಾದಲ್ಲಿ ಹೈಲೈಟ್ ಆಗುತ್ತಿದೆ. ರಶ್ಮಿಕಾ ಹಾಗೂ ವಿಜಯ್ ಇಬ್ಬರೂ ಸದ್ಯ ಒಂದು ಬ್ರೇಕ್​​ನಲ್ಲಿದ್ದಾರೆ. ಅವರು ಶೀಘ್ರವೇ ಸಿನಿಮಾ ಕೆಲಸಗಳಿಗೆ ಮರಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:03 am, Wed, 4 March 26

Source link

50 ಲಕ್ಷ ರೂ. ದಂಡವಲ್ಲ… ಪಾಕ್ ಆಟಗಾರರನ್ನು ಬ್ಯಾನ್ ಮಾಡಿ! – Kannada News | Shahid Afridi Wants Ban Pakistan Players

T20 World Cup 2026: ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನಕ್ಕೆ ಪಾಕಿಸ್ತಾನ್ ಆಟಗಾರರಿಗೆ ಬಿಸಿ ಮುಟ್ಟಿಸಲು ಪಾಕ್ ಕ್ರಿಕೆಟ್ ಮಂಡಳಿ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಪಾಕಿಸ್ತಾನ್ ಆಟಗಾರರಿಗೆ 50 ಲಕ್ಷ ರೂ. (PKR) ದಂಡ ವಿಧಿಸಲು ಮುಂದಾಗಿದೆ. ಈ ದಂಡದ ಸುದ್ದಿ ಬೆನ್ನಲ್ಲೇ ಮಾಜಿ ನಾಯಕ ಶಾಹಿದ್ ಅಫ್ರಿದಿ ಹಿರಿಯ ಆಟಗಾರರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಪ್ರದರ್ಶನ ನೀಡುತ್ತಿರುವ ಆಟಗಾರರನ್ನು ಕನಿಷ್ಠ ಎರಡು ವರ್ಷಗಳ ಕಾಲ ತಂಡದಿಂದ ಬ್ಯಾನ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಟಗಾರರ ಮೇಲೆ ಕಿಡಿ:

ಬಾಬರ್ ಆಝಂ, ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ಅವರಂತಹ ಪ್ರಮುಖ ಆಟಗಾರರನ್ನು ತಂಡದಿಂದ ಕೈಬಿಟ್ಟು, ಅವರಿಗೆ “ರಿಯಾಲಿಟಿ ಚೆಕ್” ನೀಡಬೇಕು ಎಂದು ಅಫ್ರಿದಿ ಹೇಳಿದ್ದಾರೆ. ತಂಡದ ಹಿರಿಯ ಆಟಗಾರರು ಹಾಗೂ ಅನುಭವಿಗಳೆಂದು ಗುರುತಿಸಿಕೊಂಡಿರುವ ಇವರಿಂದ ಯಾವುದೇ ಪ್ರದರ್ಶನ ಮೂಡಿಬರುತ್ತಿಲ್ಲ. ಹೀಗಾಗಿ ಇವರೆಲ್ಲನ್ನೆಲ್ಲಾ ತಂಡದಿಂದ ಹೊರಗಿಡಬೇಕೆಂದು ಅಫ್ರಿದಿ ಆಗ್ರಹಿಸಿದ್ದಾರೆ.

ದೇಶೀಯ ಕ್ರಿಕೆಟ್‌ಗೆ ಕಳುಹಿಸಿ:

ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚದ ಆಟಗಾರರನ್ನು ತಂಡದಿಂದ ವಜಾಗೊಳಿಸಿ, ಅವರು ಮತ್ತೆ ದೇಶೀಯ ಕ್ರಿಕೆಟ್ ಆಡಿ ಫಾರ್ಮ್ ಕಂಡುಕೊಳ್ಳುವಂತೆ ಮಾಡಬೇಕು ಎಂದು ಅಫ್ರಿದಿ ಆಗ್ರಹಿಸಿದ್ದಾರೆ. ಕೆಲ ಆಟಗಾರರು ವರ್ಷದಿಂದ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇದಾಗ್ಯೂ ಅವರನ್ನು ತಂಡದಿಂದ ಕೈ ಬಿಡುತ್ತಿಲ್ಲ. ಅಂತಹ ಆಟಗಾರರನ್ನು ಕೂಡ ತಂಡದಿಂದ ಕೈ ಬಿಟ್ಟು ಪ್ರಥಮ ದರ್ಜೆ ಕ್ರಿಕೆಟ್ ಆಡುವಂತೆ ಸೂಚಿಸಬೇಕು ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಯುವ ಆಟಗಾರರಿಗೆ ಅವಕಾಶ:

ಹಿರಿಯರನ್ನು ಬೆಂಚ್ ಮೇಲೆ ಕೂರಿಸಿ, ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ನಿರ್ಭೀತ ಯುವ ಆಟಗಾರರಿಗೆ ಇನ್ಮುಂದೆ ಹೆಚ್ಚಿನ ಅವಕಾಶ ನೀಡಬೇಕು. ಈ ಮೂಲಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ತಂಡವನ್ನು ಕಟ್ಟುವ ಕಾಯಕಕ್ಕೆ ಕೈ ಹಾಕಬೇಕೆಂದು ಅಫ್ರಿದಿ ಸಲಹೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಪಾಕ್ ತಂಡದಲ್ಲಿರುವ ಅನುಭವಿ ಹಾಗೂ ಆಕ್ರಮಣಕಾರಿ ಆಟಗಾರ ಫಖರ್ ಝಮಾನ್​ಗೆ ಟಿ20 ನಾಯಕತ್ವ ನೀಡಬೇಕು. ಈ ಮೂಲಕ ಹೊಸ ಪಡೆಯನ್ನು ರೂಪಿಸಲು ಇದು ಸಕಾಲ ಎಂದು ಅಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.

ದಂಡದ ಬಗ್ಗೆ ಅಸಮಾಧಾನ:

ಆಟಗಾರರನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಎರಡು ವರ್ಷಗಳ ಕಾಲ ಬ್ಯಾನ್ ಮಾಡಬೇಕೆಂದು ಆಗ್ರಹಿಸಿರುವ ಶಾಹಿದ್ ಅಫ್ರಿದಿ, ಪಿಸಿಬಿ ಆಟಗಾರರಿಗೆ ವಿಧಿಸಿರುವ 50 ಲಕ್ಷ ರೂ.ಗಳ ದಂಡವು ಅತ್ಯಂತ “ಸಣ್ಣತನದ ನಿರ್ಧಾರ” ಎಂದು ಟೀಕಿಸಿದ್ದಾರೆ. ಅಲ್ಲದೆ ಹಣಕಾಸಿನ ದಂಡಕ್ಕಿಂತ ತಂಡದಲ್ಲಿ ಶಿಸ್ತು ಮತ್ತು ಬದಲಾವಣೆ ಮುಖ್ಯ ಎಂದಿದ್ದಾರೆ.

ಇದನ್ನೂ ಓದಿ: RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..!

ಒಟ್ಟಿನಲ್ಲಿ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಪಾಕಿಸ್ತಾನ್ ತಂಡದಲ್ಲಿ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಗುತ್ತಿದೆ. ಹೀಗಾಗಿ ಮುಂಬರುವ ಸರಣಿ ವೇಳೆ ಹೊಸ ಪಾಕ್ ಪಡೆಯನ್ನು ನಿರೀಕ್ಷಿಸಬಹುದು.

Source link

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ.. – Kannada News | Toxic Movie Why Yash Became super Star here is his strategy

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಮಾರ್ಚ್ 8ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹತಿಯು ಲಭ್ಯವಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಅವರ ಆಲೋಚನೆಯೇ ಕಾರಣ ಎಂದರೂ ತಪ್ಪಾಗಲಾರದು. ಅವರು ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು. ಈ ವಿಡಿಯೋನ ಈಗ ರೀಶೇರ್​​ ಮಾಡಲಾಗುತ್ತಿದೆ.

ಯಶ್ ಅವರು ಒಂದು ಸಿನಿಮಾಗಿಂತ ಒಂದು ಸಿನಿಮಾನ ಉತ್ತಮ ನೀಡುತ್ತಾ ಬಂದರು. ಪ್ರತಿ ಬಾರಿಯೂ ಇದೇ ತಂತ್ರವನ್ನು ಅವರು ಅಳವಡಿಸಿಕೊಳ್ಳುತ್ತಾ ಬರುತ್ತಿದ್ದಾರೆ. ಯಶ್ ಅವರು ಈ ಬಾರಿಯೂ ಅದೇ ತಂತ್ರವನ್ನು ಅನುಸರಿಸಿಕೊಂಡು ಹೋಗಿದ್ದಾರೆ. ಇದು ಅವರ ಜೀವನದ ಮುಖ್ಯ ಗುರಿ ಕೂಡ ಹೌದು.

ಈ ಮೊದಲು ಮಾತನಾಡಿದ್ದ ಯಶ್ ಅವರು, ‘ಒಂದು ಸಿನಿಮಾಗಿಂತ ಮತ್ತೊಂದು ಸಿನಿಮಾ ಉತ್ತಮವಾಗಿರಬೇಕು. ಹಳೆಯ ಸಿನಿಮಾಗಳನ್ನು ಅವು ಮರೆಸಬೇಕು’ ಎಂದು ಯಶ್ ಈ ಮೊದಲು ಮಾತನಾಡಿದ್ದರು. ‘ಕಿರಾತಕ’ ಚಿತ್ರವನ್ನು ಗೂಗ್ಲಿ, ರಾಜಾ ಹುಲಿ ಮರೆಸಿದವು’ ಎಂದೆಲ್ಲ ಅವರು ಹೇಳಿದ್ದರು. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರ ಮರೆಸುವ ರೀತಿಯಲ್ಲಿ ಅವರು ಟಾಕ್ಸಿಕ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ

‘ಟಾಕ್ಸಿಕ್’ ಚಿತ್ರಕ್ಕೆ ಮಲಾಳಂ ನಿರ್ದೇಶಕಿ ಗಿತು ಮೋಹನ್​ ದಾಸ್ ಅವರ ನಿರ್ದೇಶನ ಇದೆ. ಈ ಚಿತ್ರ ಸೂಪರ್ ಹಿಟ್ ಆಗುವ ಸೂಚನೆ ಅಭಿಮಾನಿಗಳಿಗೆ ಸಿಕ್ಕಿದೆ. ಗೀತು ಮೋಹನ್​ ದಾಸ್ ಅವರು ಇನ್ನೂ ಕೆಲವೇ ಸಿನಿಮಾ ಮಾಡಿದ್ದಾರೆ. ಆದರೂ ಅವರನ್ನು ಯಶ್ ಏಕೆ ಆಯ್ಕೆ ಮಾಡಿದರು ಎಂಬುದು ಜನರ ಪ್ರಶ್ನೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾದ ಥೈಲ್ಯಾಂಡ್ ಮಹಿಳೆ, ವರರ ಕಡೆಯಿಂದ ಬಂದಿದ್ದು ಬರೋಬ್ಬರಿ 29 ಲಕ್ಷ ರೂ. ವಧುದಕ್ಷಿಣೆ – Kannada News | Thai Woman Weds Two Austrian Partners in Pattaya, Receives Rs 29 Lakh Dowry

ಥೈಲ್ಯಾಂಡ್, ಮಾರ್ಚ್​ 04: ಥೈಲ್ಯಾಂಡ್(Thailand)​​ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್​ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ವಿವಾಹ ಕಾರ್ಯಕ್ರಮ ಸಾಧಾರಣವಾಗಿದ್ದರೂ ಆಕೆಗೆ ವರರ ಕಡೆಯಿಂದ 29 ಲಕ್ಷ ರೂ. ವಧುದಕ್ಷಿಣೆಯಾಗಿ ಬಂದಿದೆ. 37 ವರ್ಷ ವಯಸ್ಸಿನ ಥಾಯ್ ಮಹಿಳೆ ಡುವಾಂಗ್ಡುವಾನ್ ಕೆಟ್ಸಾರೊ ಎಂಬಾಕೆ ಇಬ್ಬರು ಆಸ್ಟ್ರಿಯನ್ ಪುರುಷರನ್ನು ಒಂದೇ ಮಂಪಟದಲ್ಲಿ ವಿವಾಹವಾಗಿದ್ದಾರೆ.

ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕರಾವಳಿ ಥಾಯ್ ನಗರವಾದ ಪಟ್ಟಾಯದಲ್ಲಿ ಕೆಲಸ ಮಾಡುತ್ತಿದ್ದಾಗ ಡುವಾಂಗ್ಡುವಾನ್ ಆಸ್ಟ್ರಿಯಾದ ನಿವೃತ್ತ ಪೊಲೀಸ್ ಅಧಿಕಾರಿ ರೋಮನ್ ಅವರನ್ನು ಮೊದಲು ಭೇಟಿಯಾದರು.

ಕಾಲಾನಂತರದಲ್ಲಿ, ಅವರ ಸಂಬಂಧವು ಬಲವಾಯಿತು ಮತ್ತು ಇಬ್ಬರು ಸುಮಾರು ಐದು ವರ್ಷಗಳ ಕಾಲ ಒಟ್ಟಿಗೆ ವಾಸಿಸುತ್ತಿದ್ದರು. ನಂತರ ಆಕೆ ಆಸ್ಟ್ರಿಯಾದ ಮತ್ತೊಬ್ಬ ಪೊಲೀಸ್ ಅಧಿಕಾರಿ ಮ್ಯಾಕಿಯನ್ನು ಭೇಟಿಯಾಗಿದ್ದಳು, ಕ್ರಮೇಣವಾಗಿ ಈ ವಿಚಾರ ಮೊದಲು ಇಷ್ಟಪಟ್ಟಿದ್ದ ವ್ಯಕ್ತಿಗೆ ತಿಳಿಯಿತು ಆದರೆ ಯಾರೂ ಜಗಳವಾಡದೆ ಮೂವರು ಒಟ್ಟಿಗೆ ಇರಲು ನಿರ್ಧರಿಸಿದರು.

ಮದುವೆ ಬಗ್ಗೆ ಮಾತನಾಡುವ ಮೊದಲು ತನ್ನ ಕುಟುಂಬಕ್ಕೆ ಈ ಬಗ್​ಗೆ ತಿಳಿಸಿದ್ದಾಳೆ, ತನ್ನ ಪೋಷಕರು ಮತ್ತು ಮಕ್ಕಳೊಂದಿಗೆ ಈ ವಿಚಾರ ಕುರಿತು ಮಾತನಾಡಿದಳು. ಡುವಾಂಗ್ಡುವಾನ್ ಮೂರು ಹೆಣ್ಣುಮಕ್ಕಳ ತಾಯಿ ಮತ್ತು ವರ್ಷಗಳ ಹಿಂದೆ ಕೊನೆಗೊಂಡ ಹಿಂದಿನ ಮದುವೆಯಿಂದ ಇಬ್ಬರು ಮಕ್ಕಳಿದ್ದಾರೆ.

ಮತ್ತಷ್ಟು ಓದಿ: ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ

ಮೊದಲ ಮದುವೆ ಮುರಿದುಬಿದ್ದ ಬಳಿಕ ಆಕೆ ತನ್ನ ಹೆತ್ತವರು ಮತ್ತು ಮಕ್ಕಳನ್ನು ಪೋಷಿಸಲು ಪಟ್ಟಾಯದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದಳು. ಈ ಸಮಯದಲ್ಲಿ ಅವಳು ರೋಮನ್ ಮತ್ತು ನಂತರ ಮ್ಯಾಕಿಯನ್ನು ಭೇಟಿಯಾದಳು. ವರ್ಷಗಳಲ್ಲಿ, ಇಬ್ಬರೂ ಪುರುಷರು ಅವಳ ಕುಟುಂಬವನ್ನು ನೋಡಿಕೊಳ್ಳಲು ಸಹಾಯ ಮಾಡುವಲ್ಲಿ ಸಹಾಯ ಮಾಡಿದ್ದಾರೆ.

ಇಬ್ಬರೂ ಸಂಗಾತಿಗಳು ತೋರಿಸಿದ ಬದ್ಧತೆ ಮತ್ತು ಬೆಂಬಲವನ್ನು ನೋಡಿದ ನಂತರ ಆಕೆಯ ಸಂಬಂಧಿಕರು ಅಂತಿಮವಾಗಿ ಸಂಬಂಧವನ್ನು ಒಪ್ಪಿಕೊಂಡರು.ಈ ವಿವಾಹವು ಸಣ್ಣ ಮತ್ತು ಆತ್ಮೀಯವಾಗಿ ನಡೆದಿದ್ದು, ಮುಖ್ಯವಾಗಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಹಾಜರಿದ್ದರು ಎಂದು ವರದಿಯಾಗಿದೆ. ವಿವಾಹದ ಅಸಾಮಾನ್ಯ ಸ್ವರೂಪದ ಹೊರತಾಗಿಯೂ, ಸಮಾರಂಭವು ಥಾಯ್ ವಿವಾಹಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಸಾಂಪ್ರದಾಯಿಕ ಅಂಶಗಳನ್ನು ಒಳಗೊಂಡಿತ್ತು.

ವರದಿಗಳ ಪ್ರಕಾರ, ಇಬ್ಬರು ವರರು ತಲಾ ಒಂದು ಮಿಲಿಯನ್ ಥಾಯ್ ಬಹ್ತ್ ವಧುದಕ್ಷಿಣೆಯಾಗಿ ನೀಡಿದ್ದಾರೆ, ಇದು ಸರಿಸುಮಾರು 29 ಲಕ್ಷ ರೂ.ಗೆ ಸಮಾನವಾಗಿರುತ್ತದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ – Kannada News | Zee Kannada To Telecast Jodi Number 1 Serial Soon

‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಮೂಲಕ ಜೀ ಕನ್ನಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ ಫನ್ ಗೇಮ್ ಆಡಿಸೋದು, ವಿವಿಧ ಪ್ರಶ್ನೆಗಳನ್ನು ಕೇಳೋದು ‘ಜೋಡಿ ನಂಬರ್ 1’ ರಿಯಾಲಿಟಿ ಶೋನ ಹೈಲೈಟ್ ಆಗಿರುತ್ತದೆ ಎನ್ನಲಾಗಿದೆ. ಈ ಶೋ ಯಾವಾಗಿಂದ ಶುರುವಾಗಲಿದೆ ಎಂಬ ಮಾಹಿತಿ ಇನ್ನೂ ರಿವೀಲ್ ಆಗಿಲ್ಲ. ಅಲ್ಲದೆ, ಈ ಶೋನ ನಡೆಸಿಕೊಡೋರು ಯಾರು ಎಂಬುದು ಕೂಡ ಇನ್ನೂ ರಿವೀಲ್ ಆಗಿಲ್ಲ. ಈ ಶೋಗಾಗಿ ವೀಕ್ಷಕರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Bengaluru Air Quality: ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru, Kalaburgi Air quality is dropping fast, Better AQI elsewhere

ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಅದೇ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವೆಡೆಯ ವಾಯು ಗುಣಮಟ್ಟ 150ಕ್ಕಿಂತ ಹೆಚ್ಚಾಗಿದೆ. ಕಲಬುರ್ಗಿಯ AQI 195 ಇದ್ದು, 200ರ ಗಡಿ ತಲುಪುವ ಆತಂಕ ಎದುರಾಗಿದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –166
  • ಮಂಗಳೂರು-150
  • ಮೈಸೂರು –157
  • ಬೆಳಗಾವಿ – 158
  • ಕಲಬುರ್ಗಿ-195
  • ಶಿವಮೊಗ್ಗ – 153
  • ಬಳ್ಳಾರಿ – 163
  • ಹುಬ್ಬಳ್ಳಿ- 152
  • ಉಡುಪಿ –136
  • ವಿಜಯಪುರ –162

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್​: ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ – Kannada News | Koppal: Hindu Youth Assaulted in Gangavathi by Muslim Group Over Instagram Post on Ali Khamenei death

ಕೊಪ್ಪಳ, ಮಾರ್ಚ್​ 04: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ನಡೆದಿದೆ.

ನಡೆದಿದ್ದೇನು? 

ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಚಂದ್ರಶೇಖರ ಎಂಬಾತನಿಗೆ ಐದಾರು ಮುಸ್ಲಿಂ ಯುವಕರಿಂದ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ

ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ‌ ಬಂದ ಮುಸ್ಲಿಂ ಯುವಕರು ಚಂದ್ರಶೇಖರ ಮೇಲೆ ಹಲ್ಲೆ ಮಾಡಿದ್ದಾರೆ. ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ. ನಮಗೆ ನೋವಾಗಿದೆ ಎಂದು ಚಂದ್ರಶೇಖರಗೆ ಬೈದು ಹಲ್ಲೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಚಂದ್ರಶೇಖರಗೆ ಬೆದರಿಕೆ ಕೂಡ ಹಾಕಿದ್ದಾರೆ. ಹೀಗಾಗಿ ಭಯಭೀತನಾಗಿ ಚಂದ್ರಶೇಖರ, ಮುಸ್ಲಿಂ‌ ಯುವಕರಿಂದ ಜೀವ ಭಯವಿದೆ ಎಂದು ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ

ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡುವ ಮೂಲಕ ವಿಶ್ವದ ದೊಡ್ಡಣ್ಣ ಅಮೆರಿಕ ತನ್ನ ಹಗೆ ತೀರಿಸಿಕೊಂಡಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಪರ ವಿರೋಧ ಚರ್ಚೆಗಳು, ಪ್ರತಿಭಟನೆಗಳು ಶುರುವಾಗಿವೆ. ತಮ್ಮ ಪರಮೋಚ್ಛ ನಾಯಕನ ಹತ್ಯೆಯಿಂದ ಇರಾನ್ ದುಖಃದಲ್ಲಿ ಮುಳುಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ!

ಖಮನೈ ಹತ್ಯೆ ಸುದ್ದಿ ಹೊರ ಬೀಳುತ್ತಿದ್ದಂತೆ ಭಾರತದ ಹಲವು ರಾಜ್ಯಗಳಲ್ಲಿ ಮುಸ್ಲೀಮರು ಪ್ರತಿಭಟನೆ ಮಾಡಿದರು. ಇತ್ತ ಕರ್ನಾಟಕದಲ್ಲೂ ಪ್ರತಿಭಟಿಸಿದರು. ಚಿಕ್ಕಬಳ್ಳಾಪುರದ ಅಲಿಪುರ ಗ್ರಾಮದಲ್ಲೂ ಶೋಕ ಮಡುಗಟ್ಟಿತ್ತು. ಅಂಗಡಿ ಮುಂಗಟ್ಟು ಬಂದ್ ಮಾಡಿದ್ದ ಮುಸ್ಲೀಮರು, ಕಪ್ಪು ಬಾವುಟ ಪ್ರದರ್ಶಿಸಿ ಸಾವಿರಾರು ಸಂಖ್ಯೆಯಲ್ಲಿ ಖಮೇನಿ ಹತ್ಯೆ ಖಂಡಿಸಿ ಮೆರವಣಿಗೆ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..! – Kannada News | Why are RCB playing 2 matches in Raipur

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತವರಿನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಹಿತಕರ ಘಟನೆಯಿಂದಾಗಿ ಪಂದ್ಯ ಆಯೋಜಿಸುವುದನ್ನು ನಿಷೇಧಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರದಿಂದ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದಾಗ್ಯೂ ಆರ್​ಸಿಬಿ 7 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಮಾತ್ರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಇನ್ನುಳಿದ 2 ಪಂದ್ಯಗಳನ್ನು ರಾಯ್​ಪುರದಲ್ಲಿ ಆಡಲು ನಿರ್ಧರಿಸಿದೆ.

ಆರ್​ಸಿಬಿ ರಾಯ್​ಪುರದಲ್ಲಿ ಕಣಕ್ಕಿಳಿಯುತ್ತಿರುವುದೇಕೆ?

ಐಪಿಎಲ್​ನಲ್ಲಿ 7 ಹೋಮ್ ಹಾಗೂ 7 ಅವೇ ಪಂದ್ಯಗಳ ನಿಯಮವಿದೆ. ಅಂದರೆ ತವರು ಮೈದಾನದಲ್ಲಿ 7 ಪಂದ್ಯಗಳು ಎದುರಾಳಿಗಳ ಹೋಮ್​ ಗ್ರೌಂಡ್​ನಲ್ಲಿ 7 ಪಂದ್ಯಗಳನ್ನಾಡಲಾಗುತ್ತದೆ. ಇತ್ತ ತವರಿನಲ್ಲಿಯೇ 7 ಪಂದ್ಯಗಳನ್ನಾಡುತ್ತಾ ಬಂದಿರುವ ಆರ್​ಸಿಬಿ ಇದೀಗ 2 ಮ್ಯಾಚ್​ಗಳಿಗಾಗಿ 2ನೇ ಹೋಮ್​ ಗ್ರೌಂಡ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಛತ್ತೀಸ್‌ಗಢದ ರಾಯ್​ಪುರದಲ್ಲಿ 2 ಮ್ಯಾಚ್​ಗಳನ್ನಾಡಲಿದೆ. ಇದರ ಬೆನ್ನಲ್ಲೇ ಆರ್​ಸಿಬಿ ರಾಯ್​ಪುರದಲ್ಲಿ ಕಣಕ್ಕಿಳಿಯುತ್ತಿರುವುದೇಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ…

  • ಒಪ್ಪಂದ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಲಭ್ಯತೆಯ ಬಗ್ಗೆ ಅನಿಶ್ಚಿತತೆ ಇದ್ದಾಗ, ಆರ್‌ಸಿಬಿ ಫ್ರಾಂಚೈಸಿಯು ಛತ್ತೀಸ್‌ಗಢ ಸರ್ಕಾರದೊಂದಿಗೆ ರಾಯ್‌ಪುರದಲ್ಲಿ ಪಂದ್ಯಗಳನ್ನು ಆಯೋಜಿಸಲು ಮೊದಲೇ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದಂತೆ ಇದೀಗ ರಾಯ್​ಪುರದಲ್ಲಿ 2 ಮ್ಯಾಚ್​ಗಳನ್ನಾಡಲು ನಿರ್ಧರಿಸಲಾಗಿದೆ.
  • ಸುರಕ್ಷತಾ ತನಿಖೆ: 2025ರ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದ ಘಟನೆಯಲ್ಲಿ 11 ಜನರು ಮೃತಪಟ್ಟ ನಂತರ, ಚಿನ್ನಸ್ವಾಮಿ ಕ್ರೀಡಾಂಗಣವು ಕಟ್ಟುನಿಟ್ಟಿನ ಸುರಕ್ಷತಾ ಪರಿಶೀಲನೆಗೆ ಒಳಪಟ್ಟಿತ್ತು. ಈ ಕಾರಣದಿಂದಾಗಿ ಕ್ರೀಡಾಂಗಣದ ಲಭ್ಯತೆಯ ಬಗ್ಗೆ ಅನುಮಾನಗಳಿದ್ದವು.
  • ಪರ್ಯಾಯ ವ್ಯವಸ್ಥೆ: ಕ್ರೀಡಾಂಗಣದ ನವೀಕರಣ ಮತ್ತು ಭದ್ರತಾ ಪರವಾನಗಿ ವಿಳಂಬವಾಗಬಹುದು ಎಂಬ ಕಾರಣಕ್ಕೆ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ‘ಎರಡನೇ ತವರು’ ಆಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು.
  • ಎರಡನೇ ತವರು: ಬೆಂಗಳೂರಿನಲ್ಲಿ ಪಂದ್ಯ ಆಯೋಜನೆಯ ಬಗ್ಗೆ ಗೊಂದಲವಿದ್ದ ಇದ್ದ ಕಾರಣ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜಿಸಲು ಅವಕಾಶ ನೀಡಬೇಕೆಂದು ಆರ್​ಸಿಬಿ ಫ್ರಾಂಚೈಸಿ ಛತ್ತೀಸ್‌ಗಢ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯಂತೆ ಆರ್​ಸಿಬಿ ತಂಡದ ಎರಡನೇ ತವರು ಮೈದಾನವಾಗಿ ರಾಯ್​ಪುರದ ಸ್ಟೇಡಿಯಂ ಅನ್ನು ಆಯ್ಕೆ ಮಾಡಲಾಗಿತ್ತು. ಈ ವೇಳೆ ಮಾಡಿಕೊಂಡ ಒಪ್ಪಂದದಿಂದಾಗಿ ಆರ್​ಸಿಬಿ ತಂಡವು 7 ತವರು ಪಂದ್ಯಗಳಲ್ಲಿ 2 ಮ್ಯಾಚ್​ ಅನ್ನು ಎರಡನೇ ತವರು ಮೈದಾನವಾದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲು ನಿರ್ಧರಿಸಿದೆ.

ಇದನ್ನೂ ಓದಿ: T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಉದ್ಘಾಟನೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ತವರು ಮೈದಾನ ಹೊಂದಿದ್ದರೂ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲೇ ಆಯೋಜಿಸಲಾಗುತ್ತದೆ. ಪ್ರಸ್ತುತ ಮಾಹಿತಿ ಪ್ರಕಾರ ಮಾರ್ಚ್ 28 ರಂದು ನಡೆಯಲಿರುವ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ vs ಕೆಕೆಆರ್ ಇಲ್ಲಾ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದೆ.

Source link

Exit mobile version