ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ ನೋಡಿ – Kannada News | Bengaluru HSR Layout Treasure Hunt: Builder Digs Apartment Basement for Nidhi

ಬೆಂಗಳೂರು, ಮಾರ್ಚ್​ 04: ಇತ್ತೀಚೆಗೆ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಗೆಯುವಾಗ ನಿಧಿ ಪತ್ತೆಯಾಗಿದ್ದ ವಿಚಾರ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಬೆಂಗಳೂರಿನಲ್ಲೊಂದು ಘಟನೆ ಬೆಳಕಿಗೆ ಬಂದಿದೆ. ನಿಧಿ ಆಸೆಗಾಗಿ ಬಿಲ್ಡರ್​ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದಿರುವ ಘಟನೆ ಬೆಂಗಳೂರಿನ HRS ಲೇಔಟ್​ನಲ್ಲಿ ಎಳ್ಳುಕುಂಟೆಯಲ್ಲಿ ನಡೆದಿದೆ. ಸದ್ತ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​ನ ಹಿಂಭಾಗದಲ್ಲಿ ಅಗೆದಿರುವುದಾಗಿ ಬಿಲ್ಡರ್ ಸುಧಾಕರ್ ನಾಯ್ಡು ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಅಪಾರ್ಟ್​ಮೆಂಟ್​ನ ಹಿಂಭಾಗದಲ್ಲಿ ಹಳೆಯ ವೀರಗಲ್ಲು ಇದೆ. ಅದರ ಕೆಳಗಡೆ ನಿಧಿ ಇದೆ ಎಂದು ಸುಧಾಕರ್ ನಾಯ್ಡು ನಂಬಿದ್ದ. ಕಾಂಪೌಂಡ್​ಗೆ ತಗಡಿನ ಶೀಟ್ ಹೊಡೆದು ಕವರ್ ಮಾಡಿ, ಅಪಾರ್ಟ್​ಮೆಂಟ್​ನ ಬೇಸ್ಮೆಂಟ್ ಸ್ಥಳದಲ್ಲಿ ಅಗೆದಿದ್ದಾನೆ. ಸದ್ಯ ವಿಚಾರ ಗೊತ್ತಾಗಿ ಸುಧಾಕರ್​ಗೆ ಜನರು ಕ್ಲಾಸ್​ ತೆಗೆದುಕೊಂಡಿದ್ದಾರೆ. ಹೆಚ್ಎಸ್ಆರ್ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather in Karnataka, Clear sky in Bengaluru

ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ

ಬೆಂಗಳೂರು, ಮಾರ್ಚ್​ 04: ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಎಲ್ಲೆಲ್ಲಿ ಒಣ ಹವೆ?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕನ್ನಡದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಶುರು ಮಾಡಿದ್ದು ಗಿಲ್ಲಿ ಅಲ್ಲ, ಹಾಗಿದ್ರೆ? – Kannada News | Not Gilli Nata Vishnuvardhan Is The first Person to Do a Property Comedy

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ (Gilli Nata) ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಪ್ರಾಪರ್ಟಿ ಕಾಮಿಡಿ ಮೂಲಕ ಗಮನ ಸೆಳೆದರು. ಬಿಗ್ ಬಾಸ್​​ ಅಲ್ಲಿ ಅವರು ಈ ಬಗ್ಗೆ ಅಷ್ಟಾಗಿ ಮಾತನಾಡಿಲ್ಲ. ಪ್ರಾಪರ್ಟಿ ಕಾಮಿಡಿ ಮಾಡಿಯೇ ಇಲ್ಲ ಎಂದರೂ ತಪ್ಪಾಗಲಾರದು. ಈಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಮಾಡಿದವರು ಯಾರು ಎಂಬುದನ್ನು ಹೇಳಲಾಗಿದೆ. ಹಾಗಾದರೆ, ಗಿಲ್ಲಿ ನಟ ಅವರಿಗಿಂತ ಮೊದಲು ಪ್ರಾಪರ್ಟಿ ಕಾಮಿಡಿ ಮಾಡಿದ್ದು ಯಾರು ಎಂಬುದನ್ನು ತಿಳಿಯೋಣ.

ಬಿಗ್ ಬಾಸ್​​ಗಿಂತ ಮೊದಲು ಗಿಲ್ಲಿ ನಟ ಅವರು ಪ್ರಾಪರ್ಟಿ ಕಾಮಿಡಿ ಮಾಡುತ್ತಿದ್ದರು. ಅವರು ಜೀ ಕನ್ನಡದ ವೇದಿಕೆ ಮೇಲೆ ಅನೇಕ ಬಾರಿ ಪ್ರಾಪರ್ಟಿ ಕಾಮಿಡಿ ಮಾಡಿದ್ದರು. ಪ್ರಾಪರ್ಟಿ ಕಾಮಿಡಿ ಎಂದರೆ ಎರಡು ವಸ್ತುಗಳನ್ನು ಇಟ್ಟುಕೊಂಡು ಅಥವಾ ಎರಡು ಶಬ್ದ ಇಟ್ಟುಕೊಂಡು ಅದಕ್ಕೆ ಹೊಸ ಅರ್ಥವನ್ನು ನೀಡೋದು. ಈ ರೀತಿಯ ಕಾಮಿಡಿಯನ್ನು ಗಿಲ್ಲಿ ಸಾಕಷ್ಟು ಬಾರಿ ಮಾಡಿದ್ದಾರೆ. ಈ ರೀತಿ ಮೊದಲು ಮಾಡಿದ್ದು ವಿಷ್ಣುವರ್ಧನ್ ಅವರು.

ವೈರಲ್ ವಿಡಿಯೋದಲ್ಲಿ ಗಿಲ್ಲಿಯ ಪ್ರಾಪರ್ಟಿ ಕಾಮಿಡಿಯನ್ನು ತೋರಿಸಲಾಗಿದೆ. ಅವರಿಗಿಂತ ಮೊದಲು ಈ ರೀತಿ ಕಾಮಿಡಿ ಮಾಡಿದ್ದು ವಿಷ್ಣುವರ್ಧನ್ ಎಂದು ತೋರಿಸಲಾಗಿದೆ. ಸಿನಿಮಾ ಒಂದರಲ್ಲಿ ದೋಸೆ ಹಾಗೂ ಈರುಳ್ಳಿಯನ್ನು ತಂದಿಟ್ಟು ಅದರಲ್ಲಿಯೇ ಅವರು ಪ್ರಾಪರ್ಟಿ ಕಾಮಿಡಿ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿತ್ತು. ಅನೇಕರು ಇದನ್ನು ಒಪ್ಪಿದ್ದಾರೆ. ಈ ಹಿಂದಿನ ಸಿನಿಮಾಗಳಲ್ಲಿ ಪ್ರಾಪರ್ಟಿ ಕಾಮಿಡಿ ಸಾಕಷ್ಟು ಬಳಕೆ ಆಗುತ್ತಿತ್ತು.

ಇದನ್ನೂ ಓದಿ: ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ

ಗಿಲ್ಲಿ ನಟ ಅವರು ಸದ್ಯ ವಿವಿಧ ಉತ್ಸವಗಳಲ್ಲಿ ಭಾಗಿ ಆಗುತ್ತಿದ್ದಾರೆ. ಸಿನಿಮಾ ನಿರ್ದೇಶನ ಮಾಡುವ ಆಲೋಚನೆ ಅವರಿಗೆ ಇದೆ. ಈ ವಿಷಯದಲ್ಲಿ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅವರು ಇನ್​​ಸ್ಟಾದಲ್ಲಿ 2 ಮಿಲಿಯನ್​ಗೂ ಅಧಿಕ ಹಿಂಬಾಲಕರನ್ನು ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ನಾನು ಸಾವಿಗಾಗಿ ಕೋರಿದೆ’; ಡಾರ್ಲಿಂಗ್ ಕೃಷ್ಣ ಸಿನಿಮಾ ನಟಿಯ ತಿಹಾರ್ ಜೈಲು ಅನುಭವ – Kannada News | Sandeepa Virk Tihar Jail Nightmare: I Prayed for Death Actress’s Ordeal Recounted

ನಟಿ ಹಾಗೂ ಸೋಶಿಯಲ್ ಮೀಡಿಯಾ ಇನ್​​ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅವರು ಇತ್ತೀಚೆಗೆ ನಾಲ್ಕು ತಿಂಗಳು ತಿಹಾರ್ ಜೈಲಿನಲ್ಲಿ ಕಳೆದು ಬಂದಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಅವರಿಗೆ ಸಾಕಷ್ಟು ತೊಂದರೆಯನ್ನುಂಟು ಮಾಡಿದೆ. ದೆಹಲಿ ಹೈಕೋರ್ಟ್ 2025ರ ಡಿಸೆಂಬರ್​ ಅಲ್ಲಿ ಜಾಮೀನು ನೀಡಿತು. ಈಗ ಅವರು ತಿಹಾರ್ ಜೈಲಿನ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ.

‘ನನ್ನ ಶತ್ರುವಿಗೂ ತಿಹಾರ್ ಜೈಲಿಗೆ ಹೋಗಲಿ ಎಂದು ನಾನು ಬಯಸುವುದಿಲ್ಲ. ನಾನು ಮೊದಲ ಬಾರಿಗೆ ಅಲ್ಲಿಗೆ ಹೋದಾಗ, ನಾನು ಈ ಸ್ಥಳಕ್ಕೆ ಅರ್ಹನಲ್ಲ ಎಂದು ಹೇಳಿಕೊಂಡೆ. ಜೀವನದಲ್ಲಿ ಏನಾದರೂ ಸಂಭವಿಸಿದರೆ ಕರ್ಮ ಎನ್ನುತ್ತಾರೆ. ಬಹುಶಃ ನಾನು ಹಿಂದಿನ ಜನ್ಮದಲ್ಲಿ ತಿಳಿದೋ ಅಥವಾ ತಿಳಿಯದೆಯೋ ಕೆಲವು ತಪ್ಪುಗಳನ್ನು ಮಾಡಿರಬಹುದು. ಅದಕ್ಕೆ ಹೀಗೆ ಆಗುತ್ತಿದೆ ಎಂದು ಮೊದಲ ದಿನ ನಾನು ಶೌಚಾಲಯಕ್ಕೆ ಹೋದಾಗ ನನಗೆ ಅನಿಸಿತು’ ಎಂದು ಅವರು ಹೇಳಿದ್ದಾರೆ.

‘ಸಾವು ಬಂದು ನನ್ನನ್ನು ಕರೆದುಕೊಂಡು ಹೋಗಲಿ ಎಂದು ನಾನು ಪ್ರಾರ್ಥಿಸುತ್ತಿದ್ದೆ. ನಾನು ಜೈಲಿನಲ್ಲಿರುವಾಗ ಪಾಲಕರು ನಮ್ಮನ್ನು ನೋಡಲು ಬರೋದು ನಿಜಕ್ಕೂ ಕೆಟ್ಟ ಭಾವನೆ . ನನ್ನಿಂದಾಗಿ ಅವರು ಅಲ್ಲಿಗೆ ಬರಬೇಕಾಗಿ ಬಂದಿದ್ದಕ್ಕಾಗಿ ನಾನು ಅವರಲ್ಲಿ ಕ್ಷಮೆಯಾಚಿಸಿದೆ. ನಾನು ಹೇಗೆ ಎಂದು ಅವರಿಗೆ ತಿಳಿದಿದ್ದರಿಂದ ಪೋಷಕರು ಮತ್ತು ಒಡಹುಟ್ಟಿದವರು ನನ್ನ ಬೆಂಬಲಕ್ಕೆ ನಿಂತರು’ ಎಂದು ಅವರು ಹೇಳಿದರು.

ಸೆರೆವಾಸದ ಸಮಯದಲ್ಲಿ ಎದುರಿಸಿದ ದೈಹಿಕ ಮತ್ತು ಮಾನಸಿಕ ಒತ್ತಡದ ಬಗ್ಗೆ ಅವರು ವಿವರಿಸಿದರು.
‘ತಿಹಾರ್ ಜೈಲಿನ ಒಳಗೆ 500 ಜನರೊಂದಿಗೆ ವಾಸಿಸುವುದು ಎಷ್ಟು ಕಷ್ಟ ಎಂದು ಊಹಿಸಿ. ಅದು ದೇಶದ ಒಳಗಿನ ರಾಜಕೀಯದಂತೆ. ನನ್ನ ಆರೋಗ್ಯ ತೀವ್ರವಾಗಿ ಹದಗೆಟ್ಟಿತು. ಒತ್ತಡದಿಂದಾಗಿ ನಾನು ಸೊರಗಿಹೋದೆ.
ಮತ್ತೊಬ್ಬರ ಸಹಾಯ ಇಲ್ಲದೆ ನಿಲ್ಲಲು ಸಹ ಸಾಧ್ಯವಾಗಲಿಲ್ಲ. ಇಂದಿಗೂ, ನಾನು ಅದರ ಬಗ್ಗೆ ಯೋಚಿಸಿದಾಗ, ನಾನು ಅಳುತ್ತೇನೆ’ ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್

ಲೋಕಲ್ ಟ್ರೇನ್ ಹೆಸರಿನ ಸಿನಿಮಾ 2022ರಲ್ಲಿ ಬಂತು. ಡಾರ್ಲಿಂಗ್ ಕೃಷ್ಣ ಇದಕ್ಕೆ ಹೀರೋ. ಈ ಚಿತ್ರದಲ್ಲಿ ಸಂದೀಪಾ ನಟಿಸಿದ್ದರು. ‘ಅಂಬಾಸಿಡರ್’ ಹೆಸರಿನ ಕನ್ನಡ ಸಿನಿಮಾದಲ್ಲಿಯೂ ಅವರು ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ – Kannada News | Chhattisgarh Axe Murder: Son Kills Father, Dumps Body in Tank, Eats Biryani Peacefully

ಛತ್ತೀಸ್​ಗಢ, ಮಾರ್ಚ್​ 04: ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ.

ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್ ಲೆಡಾ ಮನೆ ಕೆಲವೇ ಕೆಲವು ಮೀಟರ್ ದೂರದಲ್ಲಿತ್ತು. ಇಬ್ಬರ ಮನೆಗಳ ಮಧ್ಯೆ ಕೇವಲ ಎರಡು ಮನೆಗಳಿದ್ದವು.

ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಪ್ರಕಾರ, ಹೋಳಿಕಾ ದಹನ್ ದಿನ ರಾತ್ರಿ 11 ಗಂಟೆ ಸುಮಾರಿಗೆ ಪ್ರಭಾತ್ ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ, ಅವರ ತಂದೆ ಬೈದಿದ್ದರು. ಬಳಿಕ ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಕೋಪದ ಭರದಲ್ಲಿ ಪ್ರಭಾತ್ ಮನೆಯೊಳಗೆ ಇಟ್ಟಿದ್ದ ಕೊಡಲಿಯನ್ನು ಎತ್ತಿಕೊಂಡು ತಂದೆಯ ತಲೆಗೆ ಹಲವು ಬಾರಿ ಹೊಡೆದಿದ್ದಾನೆ. ಪರಾಸ್​ಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಲೆ ಮಾಡಿದ ನಂತರ ಆರೋಪಿಯು ಶವವನ್ನು ಎಳೆದುಕೊಂಡು ಹೋಗಿ ಮನೆಯ ಪಕ್ಕದಲ್ಲಿರುವ ಸಣ್ಣ ನೀರಿನ ಟ್ಯಾಂಕ್​​ಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ. ಶವವನ್ನು ವಿಲೇವಾರಿ ಮಾಡಿದ ನಂತರ ಹತ್ತಿರದ ಅಂಗಡಿಗೆ ಹೋಗಿ ಬಿರಿಯಾನಿ ಕೊಂಡು ಮನೆಗೆ ಬಂದು ತಿಂದು ಕಂಬಳಿ ಹೊದ್ದು ನೆಮ್ಮದಿಯಿಂದ ನಿದ್ರಿಸಿದ್ದಾನೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ

ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಸಮಯದಲ್ಲಿ ಕೋಪದಲ್ಲಿ ಹಲ್ಲೆ ನಡೆಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಮಗ ತನ್ನ ತಂದೆಯ ತಲೆಗೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ತಂದೆ ಮೃತಪಟ್ಟಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಅಪರಾಧಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸ್ಥಳದಿಂದ ತೆಗೆದ ಛಾಯಾಚಿತ್ರಗಳು ಅಪರಾಧ ಸ್ಥಳ, ಪೊಲೀಸರು ಪ್ರದೇಶವನ್ನು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ! – Kannada News | T20 World Cup 2026 Semi final have Extra 90 Minutes

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ನಾಳೆ (ಮಾ.5) ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ. ಈ ನಿರ್ಣಾಯಕ ಪಂದ್ಯಗಳಿಗೆ ಮೀಸಲು ದಿನವನ್ನು ಘೋಷಿಸಲಾಗಿದೆ.

ಅಂದರೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಈ ಮ್ಯಾಚ್​ ಅನ್ನು ಮರು ದಿನ ಮುಂದುವರೆಸಲಾಗುತ್ತದೆ. ಆದರೆ ಅದಕ್ಕೂ ಮುನ್ನ ನಿಗದಿತ ದಿನದಂದೇ ಪಂದ್ಯವನ್ನು ಆಯೋಜಿಸಲು ಕೆಲ ವಿಶೇಷ ನಿಯಮಗಳನ್ನು ರೂಪಿಸಲಾಗಿದೆ.  ಆ ನಿಯಮವೆಂದರೆ…

ಹೆಚ್ಚುವರಿ ಸಮಯ: ಪಂದ್ಯದ ನಿಗದಿತ ದಿನದಂದು ಪಂದ್ಯವನ್ನು ಪೂರ್ಣಗೊಳಿಸಲು ಹೆಚ್ಚುವರಿ 90 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ಅಂದರೆ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಕಾರಣಾಂತರಗಳಿಂದ ಮ್ಯಾಚ್ ವಿಳಂಬವಾದರೆ ಹೆಚ್ಚುವರಿ 90 ನಿಮಿಷಗಳನ್ನು ಬಳಸಲಾಗುತ್ತದೆ.

ಉದಾಹರಣೆಗೆ: 7 ಗಂಟೆಗೆ ಶುರುವಾಗಬೇಕಿರುವ ಪಂದ್ಯವು ಕಾರಣಾಂತರಗಳಿಂದ 8 ಗಂಟೆಗೆ ಆರಂಭವಾದರೆ ಯಾವುದೇ ಓವರ್​ ಕಡಿತ ಮಾಡಲಾಗುವುದಿಲ್ಲ. ಬದಲಾಗಿ ಹೆಚ್ಚುವರಿ 90 ನಿಮಿಷಗಳಲ್ಲಿನ 60 ನಿಮಿಷಗಳನ್ನು ಬಳಸಲಾಗುತ್ತದೆ. ಅಂದರೆ 11 ಗಂಟೆಗೆ ಮುಗಿಯುವ ಪಂದ್ಯವನ್ನು 12 ಗಂಟೆಯವರೆಗೆ ನಡೆಸಲಾಗುತ್ತದೆ.

ಹೆಚ್ಚುವರಿ 90 ನಿಮಿಷಗಳನ್ನು ಬಳಸುವ ಮೂಲಕ ಸಂಪೂರ್ಣ 20 ಓವರ್​ ಪಂದ್ಯಗಳ ಪಂದ್ಯವನ್ನು ಆಯೋಜಿಸಲು ಈ ನಿಯಮವನ್ನು ಪರಿಚಯಿಸಲಾಗಿದೆ. ಅದರಂತೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಇನ್ನಿತರೆ ಸಮಸ್ಯೆ ಎದುರಾದರೆ 90 ನಿಮಿಷಗಳನ್ನು ಬಳಸುವ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಮೀಸಲು ದಿನ: ಒಂದು ವೇಳೆ ನಿಗದಿತ ದಿನದಂದು ಪಂದ್ಯ ಸಾಧ್ಯವಾಗದಿದ್ದರೆ, ಮೀಸಲು ದಿನದಂದು ಆಟ ಮುಂದುವರಿಯಲಿದೆ. ಅಲ್ಲದೆ ಮೀಸಲು ದಿನದಂದು 90 ನಿಮಿಷಗಳ ಬದಲಿಗೆ 120 ನಿಮಿಷಗಳ ಹೆಚ್ಚುವರಿ ಸಮಯ ಲಭ್ಯವಿರುತ್ತದೆ. ಅಂದರೆ ಇಲ್ಲಿ ಹೆಚ್ಚುವರಿ 2 ಗಂಟೆಗಳನ್ನು ನೀಡುವ ಮೂಲಕ ಮೀಸಲು ದಿನದಲ್ಲಿ ಪಂದ್ಯವನ್ನು ಪೂರ್ಣಗೊಳಿಸಲಿದ್ದಾರೆ.

ಪಂದ್ಯ ರದ್ದು: ಮೀಸಲು ದಿನದಂದು ಹೆಚ್ಚುವರಿ 120 ನಿಮಿಷಗಳನ್ನು ಬಳಸಿ ಕೂಡ ಪಂದ್ಯ ಪೂರ್ಣಗೊಳಿಸಲು ಅಥವಾ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಮಾತ್ರ ಮ್ಯಾಚ್ ಅನ್ನು ರದ್ದುಗೊಳಿಸಲಾಗುತ್ತದೆ. ಈ ರದ್ದುಗೊಳಿಸುವ ಮುನ್ನ ಉಭಯ ತಂಡಗಳಿಗೆ 10 ಓವರ್​ಗಳ ಮ್ಯಾಚ್ ಆಡಿಸಲು ಸಾಧ್ಯವೇ ಎಂಬುದನ್ನು ನೋಡಲಿದ್ದಾರೆ.

ಕನಿಷ್ಠ ಓವರ್‌ಗಳು: ಸೆಮಿಫೈನಲ್ ಫಲಿತಾಂಶ ಬರಬೇಕಾದರೆ ಎರಡೂ ತಂಡಗಳು ಕನಿಷ್ಠ 10 ಓವರ್‌ಗಳನ್ನಾದರೂ ಆಡುವುದು ಕಡ್ಡಾಯ. ಹೀಗೆ 10 ಓವರ್​ಗಳನ್ನು ಆಡಿದರೆ ಮಾತ್ರ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ವಿಜಯಿಯನ್ನು ನಿರ್ಧರಿಸಲಿದ್ದಾರೆ.

ಫೈನಲ್​ ಅರ್ಹತೆ: ಮೀಸಲು ದಿನವೂ ಮಳೆಯಿಂದಾಗಿ ಪಂದ್ಯ ನಡೆಯದಿದ್ದರೆ, 10 ಓವರ್​ಗಳ ಮ್ಯಾಚ್ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಸೆಮಿಫೈನಲ್ ಪಂದ್ಯವನ್ನು ರದ್ದು ಮಾಡಲಾಗುತ್ತದೆ. ಹೀಗೆ ಪಂದ್ಯ ರದ್ದಾದರೆ ‘ಸೂಪರ್ 8’ ಹಂತದ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡವು ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

ಸೂಪರ್-8 ಅಂಕ ಪಟ್ಟಿ: ಸೂಪರ್-8 ಸುತ್ತಿನ ಗ್ರೂಪ್-1 ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ತಂಡವು ಅಗ್ರಸ್ಥಾನದಲ್ಲಿದ್ದರೆ, ಭಾರತ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಗ್ರೂಪ್-2 ಅಂಕಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ದ್ವಿತೀಯ ಸ್ಥಾನದಲ್ಲಿದೆ.

ಇಂಗ್ಲೆಂಡ್ vs ಸೌತ್ ಆಫ್ರಿಕಾ: ಒಂದು ವೇಳೆ ಸೆಮಿಫೈನಲ್ ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ ಸೂಪರ್-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನಗಳಲ್ಲಿರುವ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಫೈನಲ್​ಗೆ ಅರ್ಹತೆ ಪಡೆಯಲಿದೆ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಸೆಮಿಫೈನಲ್ ವೇಳಾಪಟ್ಟಿ:

  • ಸೆಮಿಫೈನಲ್ 1: ಸೌತ್ ಆಫ್ರಿಕಾ vs ನ್ಯೂಝಿಲೆಂಡ್ (ಮಾರ್ಚ್ 4) – ಈಡನ್ ಗಾರ್ಡನ್ಸ್ ಸ್ಟೇಡಿಯಂ​, ಕೊಲ್ಕತ್ತಾ
  • ಸೆಮಿಫೈನಲ್ 2: ಭಾರತ vs ಇಂಗ್ಲೆಂಡ್ (ಮಾರ್ಚ್ 5)- ವಾಂಖೆಡೆ ಸ್ಟೇಡಿಯಂ, ಮುಂಬೈ

Published On – 7:33 am, Wed, 4 March 26

Source link

Daily Devotional: ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ? – Kannada News | Lunar Eclipse March 04: Can Women Embrace Sanyasa According to Scriptures?

ಬೆಂಗಳೂರು, ಮಾರ್ಚ್​​ 04: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನ್ಯಾಸಿಗಳು ಮತ್ತು ಸನ್ಯಾಸಿನಿಯರನ್ನು ಗೌರವಯುತವಾಗಿ ದೇವತಾ ಸ್ವರೂಪಿಗಳೆಂದು ಕಾಣಲಾಗುತ್ತದೆ. ಸನ್ಯಾಸ ಎಂದರೆ ತಲೆ ಬೋಳಿಸಿಕೊಂಡು, ಕಾಷಾಯ ವಸ್ತ್ರ ಧರಿಸಿ, ರುದ್ರಾಕ್ಷಿ ಮಾಲೆಗಳನ್ನು ಧರಿಸಿ, ಬ್ರಾಹ್ಮೀ ಮುಹೂರ್ತದಲ್ಲಿ ಜಪತಪಗಳನ್ನು ಮಾಡಿ, ಹೋಮಹವನಗಳನ್ನು ನಿರ್ವಹಿಸಿ, ಭಿಕ್ಷೆಯಿಂದ ಪಡೆದ ಆಹಾರವನ್ನು ಸ್ವೀಕರಿಸುವುದು. ಸನ್ಯಾಸಿನಿಯರ ಪ್ರಥಮ ಕರ್ತವ್ಯ ಧರ್ಮಜಾಗೃತಿ, ಸಂಸ್ಕೃತಿಯ ಉದ್ಧಾರ ಮತ್ತು ಲೋಕಕ್ಷೇಮವನ್ನು ಬಯಸುವುದು.

ಹಿಂದೂ ಧರ್ಮದಲ್ಲಿ ಸ್ತ್ರೀಯರಿಗೆ ಅಪಾರ ಗೌರವವಿದೆ; “ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾಃ”. ಮಹಿಳೆಯರನ್ನು ಮನೆಯ ಮಹಾಲಕ್ಷ್ಮಿ, ಜಗತ್ತಿನ ಶಿಕ್ಷಕಿ ಎಂದೂ ಬಣ್ಣಿಸಲಾಗಿದೆ. ಈ ಕಾಲಮಾನಕ್ಕೆ ತಕ್ಕಂತೆ, ಮಹಿಳೆಯರು ಸನ್ಯಾಸಿನಿಯರಾಗುವುದು ಸಮಂಜಸ. ಆತ್ಮರಕ್ಷಣೆ, ತಾಳ್ಮೆ, ಸಹನೆ ಮತ್ತು ನಿಷ್ಠೆಯಂತಹ ಗುಣಗಳು ಮಹಿಳೆಯರಲ್ಲಿ ಅಂತರ್ಗತವಾಗಿವೆ. ರಾಮಕೃಷ್ಣ ಮಠದಂತಹ ಸಂಸ್ಥೆಗಳಲ್ಲಿ ಅನೇಕ ಮಹಿಳೆಯರು ಧರ್ಮಜಾಗೃತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದ್ದರಿಂದ, ಮಹಿಳೆಯರು ಸನ್ಯಾಸಿನಿಯರಾಗುವುದು ಸಮಕಾಲೀನ ಸನ್ನಿವೇಶದಲ್ಲಿ ತಪ್ಪಲ್ಲ ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

Source link

Horoscope Today 4th​​ March​: ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 4, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ, ಪುಬ್ಬಾ ನಕ್ಷತ್ರ, ಧೃತಿ ಯೋಗ ಮತ್ತು ಕವಲವಕರಣ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ.

ಇಂದು ಹೋಳಿ, ರಾಷ್ಟ್ರೀಯ ಸುರಕ್ಷತಾ ದಿನ ಹಾಗೂ ವಸಂತೋತ್ಸವದ ಆರಂಭವಾಗಿದೆ. ಬಾಗೂರು ಪ್ರಸನ್ನ ಚನ್ನಕೇಶವರಥ ಮತ್ತು ಹೊಳೆನರಸೀಪುರ ಲಕ್ಷ್ಮೀನರಸಿಂಹ ಸ್ವಾಮಿಗಳ ರಥೋತ್ಸವಗಳು ನಡೆಯಲಿವೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭಫಲ, ಆರೋಗ್ಯ, ಆರ್ಥಿಕ ಸ್ಥಿತಿ, ವೃತ್ತಿ ಪ್ರಗತಿ, ವೈವಾಹಿಕ ವಿಷಯಗಳು, ವಿದ್ಯಾರ್ಥಿಗಳಿಗೆ ಲಾಭ, ಹೂಡಿಕೆ ಹಾಗೂ ಕಾನೂನು ವಿಷಯಗಳಲ್ಲಿನ ಯೋಗದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

 

Source link

Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ – Kannada News | Mojtaba Khamenei: Iran’s New Supreme Leader Appointed After Father’s Death

ಟೆಹ್ರಾನ್, ಮಾರ್ಚ್​ 04: ಇರಾನ್(Iran)​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ. ಇರಾನ್​​ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಫೆಬ್ರವರಿ 28ರಂದು ಟೆಹ್ರಾನ್​​ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು.

ಆ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಇರಾನ್ ಏಳು ದಿನಗಳ ಸಾರ್ವಜನಿಕ ರಜೆಯೊಂದಿಗೆ 40 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ದೇಶಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಮುಖ ನಗರಗಳು ಮತ್ತು ಸರ್ಕಾರಿ ಕಟ್ಟಡಗಳ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಮೊಜ್ತಬಾ ಖಮೇನಿ ಯಾರು?
ಮೊಜ್ತಬಾ ಖಮೇನಿ 1969ರಲ್ಲಿ ಮಶಾದ್ ನಗರದಲ್ಲಿ ಜನಿಸಿದರು, ಧಾರ್ಮಿಕ ಶಿಕ್ಷಣವನ್ನು ಪಡೆದರು. ಇರಾನ್-ಇರಾಕ್ ಯುದ್ಧದ ಅಂತಿಮ ಹಂತಗಳಲ್ಲಿ ಅವರು ಕ್ರಾಂತಿಕಾರಿ ಗಾರ್ಡ್​​ನಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರನ್ನು ಬಹಳ ಹಿಂದಿನಿಂದಲೂ ತಂದೆ ತೆಗೆದುಕೊಳ್ಳುವ ನಿರ್ಧಾರಗಳ ಹಿಂದೆ ಇವರು ನಿಂತಿದ್ದರು, ಅವರಿಗೆ ತುಂಬಾ ಹತ್ತಿರವಾಗಿದ್ದರು ಎನ್ನಲಾಗಿದೆ. ಅವರು ಎಂದೂ ಸರ್ಕಾರಿ ಹುದ್ದೆಗಳನ್ನು ಹೊಂದಿಲ್ಲವಾದರೂ ಅವರು ತಮ್ಮ ತಂದೆಗೆ ವಿಶ್ವಾಸಾರ್ಹ ಸಲಹೆಗಾರರಾಗಿದ್ದರು. ಅವರು ಮಿಲಿಟರಿ ಮತ್ತು ಅರೆಸೈನಿಕ ಪಡೆಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು.

ಇರಾನ್‌ನ ಶಿಯಾ ದೇವಪ್ರಭುತ್ವ ವ್ಯವಸ್ಥೆಯಲ್ಲಿ ಸುಪ್ರೀಂ ಲೀಡರ್ ಅತ್ಯಂತ ಶಕ್ತಿಶಾಲಿ ಸ್ಥಾನವಾಗಿದೆ. ಈ ಹುದ್ದೆಯನ್ನು ಹೊಂದಿರುವ ವ್ಯಕ್ತಿ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿರುತ್ತಾರೆ ಮತ್ತು ದೇಶದ ಪ್ರಮುಖ ರಾಜಕೀಯ, ಮಿಲಿಟರಿ ಮತ್ತು ಕಾರ್ಯತಂತ್ರದ ನಿರ್ಧಾರಗಳ ಮೇಲೆ ಅಂತಿಮ ನಿರ್ಧಾರವನ್ನು ಹೊಂದಿರುತ್ತಾರೆ.

ಇರಾನ್ ಪ್ರಸ್ತುತ ಮಿಲಿಟರಿ ಮತ್ತು ರಾಜಕೀಯ ಉದ್ವಿಗ್ನತೆಯ ಅವಧಿಯನ್ನು ಎದುರಿಸುತ್ತಿದೆ. ಮೊಜ್ತಾಬಾ ಅವರನ್ನು ಸುಪ್ರೀಂ ಲೀಡರ್ ಆಗಿ ಬಡ್ತಿ ನೀಡಿರುವುದು ದೇಶವು ತನ್ನ ಪ್ರಸ್ತುತ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವುದಿಲ್ಲ ಎಂದು ಸೂಚಿಸುತ್ತದೆ. ಆದಾಗ್ಯೂ, ಅಧಿಕೃತ ಘೋಷಣೆ ಮತ್ತು ಆಂತರಿಕ ಪ್ರತಿಕ್ರಿಯೆಗಳ ನಂತರವೇ ಈ ನಾಯಕತ್ವ ಬದಲಾವಣೆಯು ಇರಾನಿನ ರಾಜಕೀಯ ಮತ್ತು ಪ್ರಾದೇಶಿಕ ಚಲನಶೀಲತೆಯ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದು ಇನ್ನಷ್ಟೆ ಸ್ಪಷ್ಟವಾಗಬೇಕಿದೆ.

ಮತ್ತಷ್ಟು ಓದಿ: ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ

2009ರಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಅವರ ಹೆಸರು ಕೇಳಿಬಂದಿತ್ತು, ಪ್ರತಿಭಟನೆಗಳನ್ನು ಕಠಿಣವಾಗಿ ಹತ್ತಿಕ್ಕುವಲ್ಲಿ ಅವರ ಪಾತ್ರವಿದೆ. ಈಗ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ನೇಮಿಸಿರುವುದು ದೇಶದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. 1979ರ ಕ್ರಾಂತಿಯ ಸಮಯದಲ್ಲಿ ವಂಶಾವಳಿಯ ಆಧಾರದ ಮೇಲೆ ಅಧಿಕಾರ ವರ್ಗಾವಣೆಗೆ ವಿರೋಧವಿತ್ತು. ಆದ್ದರಿಂದ ಕೆಲವರು ಅವರ ಆಯ್ಕೆಯನ್ನು ಪ್ರಶ್ನಿಸುತ್ತಿದ್ದಾರೆ.

ಪ್ರಸ್ತುತ ಮಿಲಿಟರಿ ಬೆಂಬಲದಿಂದಾಗಿ ಮೊಜ್ತಬಾ ಖಮೇನಿ ಅವರನ್ನು ಬಲಿಷ್ಠ ನಾಯಕ ಎಂದು ಪರಿಗಣಿಸಲಾಗಿದೆ. ಮುಂಬರುವ ದಿನಗಳು ಅವರ ನಾಯಕತ್ವ ದೇಶವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯುತ್ತದೆ ಎಂಬುದನ್ನು ನೋಡಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್ – Kannada News | Satish Cadabam’s Controversial Video: Won’t Delete Even if CM Asks

ಸತೀಶ್ ಕ್ಯಾಡಬಾಮ್ (Satish) ಅವರು ಸದಾ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ. ಒಂದಲ್ಲಾ ಒಂದು ವಿಷಯದ ಮೂಲಕ ಅವರು ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿದ್ದರು. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸಿಟ್ಟಾಗಿದ್ದರು. ಸುದೀಪ್ ಆಪ್ತ ಬಳಗದಲ್ಲಿರೋ ರಜತ್ ಹಾಗೂ ಸುದೀಪ್ ಕೂಡ ಸಿಟ್ಟಾಗಿದ್ದರು. ಈಗ ಈ ಬಗ್ಗೆ ಸತೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಚಾಲೆಂಜ್ ಕೂಡ ಹಾಕಿದ್ದಾರೆ.

ಸತೀಶ್ ಅವರು ಕೆಲ ದಿನಗಳ ಹಿಂದೆ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ಮೂತ್ರ ಮಾಡುತ್ತಿರೋದು ಕಂಡು ಬಂದಿದೆ. ಇಷ್ಟೇ ಆಗಿದ್ದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ, ಅವರು ಇದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿರೋದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ರಜತ್ ಹಾಗೂ ವಿನಯ್ ಗೌಡ ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಕ್ಲಾಸ್ ಕೂಡ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್

ಎಸ್​​ಎಸ್​ ಟಿವಿ ಯೂಟ್ಯೂಬ್​ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸತೀಶ್ ಮಾತನಾಡಿದರು. ‘ನಾನು ಮೂತ್ರ ಮಾಡಿದ್ರೂ ಸುದ್ದಿ ಆಗುತ್ತೆ ಅಂತ ಹೇಳಿದ್ದೆ. ಅದನ್ನ ತೋರಿಸೋಕೆ ವಿಡಿಯೋ ಮಾಡಿದ್ದು. ಆ ವಿಡಿಯೋಗೆ ಹಾಡು ಹೆಚ್ಚು ಸೂಕ್ತ ಅನಿಸುತ್ತಿತ್ತು. ಅದಕ್ಕೆ ಹಾಕಿದೆ’ ಎಂದು ಅವರು ಹೇಳಿದ್ದಾರೆ. ಇನ್ನು, ಯಾವುದೇ ಕಾರಣಕ್ಕೂ ವಿಡಿಯೋನ ತೆಗೆಯಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

‘ನಾನು ಕಮೆಂಟ್ಸ್ ನೋಡಿಲ್ಲ. ಹೀಗಾಗಿ, ಯಾರು ಏನು ಹೇಳಿದ್ರೋ ಗೊತ್ತಿಲ್ಲ. ನಾನು ಮೀಟರ್​​​ಲೆಸ್ ಆಗಿದ್ರೆ ವಿಡಿಯೋ ತೆಗೆಯುತ್ತಿದ್ದೆ. ನಾನು ಮೀಟರ್ ಇರುವವನು. ಹೀಗಾಗಿ, ವಿಡಿಯೋನ ಹಾಗೆಯೇ ಇಟ್ಟಿದ್ದೇನೆ. ಸಿಎಂ ಬಂದು ಹೇಳಿದ್ರೂ ವಿಡಿಯೋ ತೆಗೆಯಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:06 am, Wed, 4 March 26

Source link

Exit mobile version