ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಸಮಯ ಕಳೆಯಲು ಕಷ್ಟವಾಗುವುದು – Kannada News | Horoscope March 04 Wednesday 2026; Dina Rashi Bhavishya Today, Checkout the details here

ಮೇಷ ರಾಶಿ:

ಉದ್ಯಮಿಗಳು ತಮ್ಮ ವ್ಯಾಪಾರವನ್ನು ವಿಸ್ತರಿಸಲು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ರೋಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ. ನಿಮ್ಮ‌ ತಾಳ್ಮೆಯನ್ನು ಪರೀಕ್ಷಿಸಲು ಸಂದರ್ಭವು ಬರಬಹುದು.

ವೃಷಭ ರಾಶಿ:

ಸತ್ಪಾತ್ರರಿಗೆ ಸುವಸ್ತುವನ್ನು ದಾನ ಕೊಡಲು ಇಚ್ಛಿಸುವಿರಿ. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಕಲ್ಪನೆಯಲ್ಲಿ ಓಡಾಡುವುದನ್ನು ಕಡಿಮೆ ಮಾಡಿ. ಶರೀರಪೋಷಣೆಗೆ ಬೇಕಾದ ಮಾರ್ಗವನ್ನು ಕಂಡುಕೊಳ್ಳುವಿರಿ. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ. ಯಾರದೋ ಮಾತಿನಿಂದ ಹೂಡಿಕೆ ಮಾಡುವಿರಿ. ಹೃದ್ಯವಾದ ವಿಚಾರಗಳ ಕಡೆ ಗಮನವಿರಲಿ. ಯಾರ ವಿರುದ್ಧವೂ ನಷ್ಟು ಸುಲಭವಾಗಿ ಹೋಗಲಾಗದು.

ಮಿಥುನ ರಾಶಿ:

ಸಂಗಾತಿಯನ್ನು ವಿಧವಾಗಿ ಪರೀಕ್ಷಿಸುವಿರಿ. ಸುಮ್ಮನೇ ದೇಹಾಯಾಸವನ್ನು ಮಾಡಿಕೊಳ್ಳುವಿರಿ. ನಿಮ್ಮ ಮನಸ್ಸು ಮಿಂಚಿನಂತೆ ಕೆಲಸಮಾಡಬಹುದು. ನೆರೆಯವರ ಜೊತೆ ಕಲಹವು ಬೇಡ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಇರುವುದು. ಹೇಗಾದರೂ ಮಾಡಿ ಬೆಳೆಯಬೇಕು ಎನ್ನುವ ಬಯಕೆ ಅತಿಯಾಗಿರುವುದು. ಅಸಹಾಯಕತೆಯು ಸಿಟ್ಟಾಗಿ ಪರಿಣಮಿಸಬಹುದು.

ಕರ್ಕಾಟಕ ರಾಶಿ:

ಸಂಗಾತಿಯ ಆಯ್ಕೆಯಲ್ಲಿ ಗೊಂದಲ ಇರುವುದು. ಇಂದಿನ ಶಕ್ತಿಯು ನಿಮ್ಮ ಕನಸುಗಳ ಕಡೆಗೆ ಮುಂದುವರಿಯಲು ನಿಮ್ಮನ್ನು ಪ್ರೋತ್ಸಾಹಿಸುತ್ತಿದೆ. ನಿಮ್ಮ ಜವಾಬ್ದಾರಿಗಳನ್ನು ಚೆನ್ನಾಗಿ ನಿರ್ವಹಿಸಿ. ಯಾರಿಗಾದರೂ ನಿಜವನ್ನು ತಿಳಿಸಬೇಕಾದರೆ ಮನಸ್ಸಿಗೆ ನೋವಾಗದಂತೆ ತಿಳಿಸಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ‌ ಮಾಡಿ. ಯಾರ ಮಾತನ್ನೂ ನಂಬದ ಸ್ಥಿತಿಯನ್ನು ನೀವೇ ತಂದುಕೊಳ್ಳುವಿರಿ.

ಸಿಂಹ ರಾಶಿ:

ವಿಶೇಷ ವ್ಯಕ್ತಿಯ ಬಗ್ಗೆ ಜನರ ಆಸಕ್ತಿ ಹೆಚ್ಚಾಗುತ್ತದೆ. ನಿಮ್ಮ ಒತ್ತಡವನ್ನು ಸಹೋದ್ಯೋಗಿಗಳ ಮೇಲೆ‌ಹಾಕಿ ಸ್ವಲ್ಪ ಹಗುರಾಗಬಹುದು. ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ನೀವೇ ಆಶ್ಚರ್ಯವಾಗುವಂತೆ ಆಕರ್ಷಕವಾಗಿ‌ ನೀವು ಇಂದು ಕಾಣಲಿದ್ದೀರಿ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳು ಬಳಸಿಕೊಳ್ಳುವರು. ಎಂದೋ ಬಯಸಿದ ವಸ್ತುವುದು ಇಂದು ನಿಮಗೆ ಅನಿರೀಕ್ಷಿತವಾಗಿ ಸಿಗುವುದು.

ಕನ್ಯಾ ರಾಶಿ:

ಆರ್ಥಿಕ ಪರಿಸ್ಥಿತಿ ಸದೃಢವಾಗಿ ಉಳಿಯುತ್ತದೆ. ಕೆಲಸದ ಸ್ಥಳದಲ್ಲಿ ಹೊಸ ಬದಲಾವಣೆಗಳಾಗಲಿವೆ. ಕೆಲಸದ ಒತ್ತಡ ಹೆಚ್ಚಾಗಲಿದೆ. ವೃತ್ತಿ ಸಮಸ್ಯೆಗಳನ್ನು ಪರಿಹರಿಸಲು ಹಿರಿಯರ ಸಹಾಯ ಪಡೆಯಿರಿ. ವಿದೇಶೀಯ ವಸ್ತುಗಳ ಬಳಕೆಯನ್ನು ಮಾಡುವುದು ಕಾರಣಾಂತರಗಳಿಂದ ಇಷ್ಟವಾಗದು. ನಿಮ್ಮ ಅಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳುವಿರಿ. ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು. ನಿಮ್ಮ ಆದಾಯಕ್ಕೆ ತಕ್ಕಂತೆ ಜೀವನವಿರಲಿದೆ.

ತುಲಾ ರಾಶಿ:

ಹೊಸ ಆಸ್ತಿ ಅಥವಾ ಮನೆಯನ್ನು ಖರೀದಿಸುವುದು ಇಂದು ಸಾಧ್ಯ. ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಮನೋವಿಕಾರವನ್ನು ಕಡಿಮೆ‌ ಮಾಡಿಕೊಳ್ಳಿ. ವಿದ್ಯಾರ್ಥಿಗಳು ತಮಗೆ ಬರುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಎಲ್ಲ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಕಾಣಬೇಕಾಗಬಹುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡುವುದಿಲ್ಲ. ನಿಮ್ಮ ಸಹಕಾರವನ್ನು ಬಂಧುಗಳು ಮರೆಯಬಹುದು.

ವೃಶ್ಚಿಕ ರಾಶಿ:

ಹೇಳಿಕೊಳ್ಳುವಷ್ಟು ಆದಾಯವಿಲ್ಲದಿದ್ದರೂ ಅಹಂಕಾರಕ್ಕೇನು ಕೊರತೆ ಇರದು. ನಿಮ್ಮ ಮಾತಿನಿಂದ‌ ಶತ್ರುಗಳು ಹುಟ್ಟಿಕೊಳ್ಳಬಹುದು. ಇಂದು ಕೆಲಸದ ಮೇಲೆ ಗಮನಹರಿಸಲು ನಿಮಗೆ ಸೂಚಿಸಲಾಗಿದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ಅಳತೆಯನ್ನು ಅರಿತು ವ್ಯವಹರಿಸುವುದು ಎಲ್ಲ ದೃಷ್ಟಿಯಿಂದ ಉತ್ತಮ. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು.

ಧನು ರಾಶಿ:

ಸ್ನೇಹಿತರ ನಿರೀಕ್ಷೆಯಲ್ಲಿ ಹೆಚ್ಚಿನ‌ ಸಮಯವು ಕಳೆದುಹೋಗುವುದು. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ. ಮನೆಯ ನಿರ್ವಹಣೆಯನ್ನೂ ಮಾಡಲಾಗದು. ವೃತ್ತಿಯಲ್ಲಿ ನಿಮಗೆ ವಿರಾಮವು ಇಂದು ಸಿಗದೇ ನಿಮ್ಮ ಸ್ವಂತ ಕಾರ್ಯವನ್ನು ಕೈ ಬಿಡಬೇಕಾಗುವುದು. ಗೃಹ ನಿರ್ಮಾಣದ ಕಾರ್ಯವನ್ನು ಕೆಲವು ದಿನ ಮುಂದೂಡುವುದು ಉತ್ತಮ. ಮಕ್ಕಳಿಂದ ದೂರಾಗಬಹುದು. ಹಣದ ಕೊರೆತೆ ಇಲ್ಲದಿದ್ದರೂ ಹಳೆಯ ಮನೆಯನ್ನೇ ಅವಶ್ಯಕತೆಗೆ ಸರಿಯಾಗಿ ಗಟ್ಟಿ ಮಾಡಿಕೊಳ್ಳಿ.

ಮಕರ ರಾಶಿ:

ಸಂಗಾತಿಯ ಸಂಪತ್ತಿನಿಂದ ನಿಮಗೆ ಬೇಕಾದುದನ್ನು ಪಡೆಯುವಿರಿ. ಅತಿಯಾದ ಬಾಯಾರಿಕೆ ಆಗಬಹುದು. ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯ ಪ್ರವೇಶದಿಂದ ಕೋಪಗೊಳ್ಳುವಿರಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ. ನಿಮ್ಮ ವಿನ್ಯಾಸಗಳಿಗೆ ಅನುಮೋದನೆ ಸಿಗದೇ ಇರಬಹುದು. ವಿದ್ಯಾರ್ಥಿಗಳ ಉತ್ಸಾಹವನ್ನು ಕುಗ್ಗಸುವುದು ಬೇಡ. ಸರಿಯಾದ ಮಾರ್ಗವನ್ನು ತೋರಿಸಿ. ನಿಮ್ಮ ಮಕ್ಕಳ ವರ್ತನೆಯಿಂದ ಬೇಸರ ಆಗುವುದು.

ಕುಂಭ ರಾಶಿ:

ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆರೋಗ್ಯದ ಬಗ್ಗೆ ಎಚ್ಚರವಹಿಸಿ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರವಿದ್ದರೂ ಅದನ್ನು ಬಳಸಿಕೊಳ್ಳುವ ಜಾಣತನವೂ ಅಗತ್ಯವಿದೆ. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ.

ಮೀನ ರಾಶಿ:

ಹಳೆಯ ದಾಂಪತ್ಯವಾದರೂ ಸಂತೋಷಕ್ಕೆ ಕೊರತೆ ಇಲ್ಲದಂತೆ ಇರುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ಕಾರ್ಯನಿರ್ವಹಣೆ ಅಸಾಧ್ಯವೆನಿಸಬಹುದು. ಕೆಲವು ಸಂಗತಿಗಳನ್ನು ನಿರೀಕ್ಷಿಸದೇ ಬರಬಹುದು.ವವ್ಯವಹಾರದಲ್ಲಿ ಹೆಚ್ಚಿನ ಲಾಭವು ಬರಬಹುದು. ಪ್ರಸಾರ ಮಾಧ್ಯಮದವರು ದೂರ ಹೀಗಬೇಕಾಗಬಹುದು. ಸಾಹಿತ್ಯ ಕ್ಷೇತ್ರದಲ್ಲಿ ಇರುವವರಿಗೆ ಸಮ್ಮಾನ ಸಿಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪೂರ್ವಾಫಲ್ಗುಣಿ, ಯೋಗ : ಧೃತಿ, ಕರಣ : ಕೌಲವ, ಸೂರ್ಯೋದಯ – 06 – 40 am, ಸೂರ್ಯಾಸ್ತ – 06 – 31 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:36 – 14:05, ಯಮಗಂಡ ಕಾಲ 08:09 – 09:38, ಗುಳಿಕ ಕಾಲ 11:07 – 12:36

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ

ಸಂಜೆ ಸೂರ್ಯಾಸ್ತದ ನಂತರ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ಎಳ್ಳೆಣ್ಣೆಯ ದೀಪ ಹಚ್ಚಿ. ಎಳ್ಳೆಣ್ಣೆಯ ದೀಪವು ಶನಿ ಮತ್ತು ಕುಜ ದೋಷಗಳನ್ನು ಕಡಿಮೆ ಮಾಡಿ, ಮೈಗ್ರೇನ್‌ನಂತಹ ನೋವುಗಳಿಂದ ಮುಕ್ತಿ ನೀಡಲು ಸಹಕಾರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು ಪಡುವಂತೆ ಆಗುತ್ತದೆ. ಉಳಿತಾಯದ ಉದ್ದೇಶಕ್ಕೆ ಖರೀದಿ ಮಾಡಿಟ್ಟಿದ್ದ ಚಿನ್ನ ಅಥವಾ ಬೆಳ್ಳಿಯನ್ನು ಮಾರಾಟ ಮಾಡಿ, ಸದ್ಯದ ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಚಿಂತನೆ ಮಾಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದವರಿಗೆ ಲಾಭ ಸಿಗಲಿದೆ. ಪ್ರಾಫಿಟ್ ಬುಕ್ಕಿಂಗ್ ಗೆ ನಿರ್ಧಾರ ಮಾಡುತ್ತೀರಿ. ತಾಯಿ ಜೊತೆಗೆ ಅಭಿಪ್ರಾಯ ಭೇದ- ಮನಸ್ತಪ ಇದ್ದಲ್ಲಿ ಅದನ್ನು ನಿವಾರಿಸಿಕೊಳ್ಳಲು ಅವಕಾಶ ದೊರೆಯಲಿದೆ. ನೀರಿನ ಮಾರಾಟ ವ್ಯವಹಾರದಲ್ಲಿ ತೊಡಗಿರುವವರು ವಿಸ್ತರಣೆಗೆ ಆಲೋಚಿಸಿ, ಅಗತ್ಯ ಸಿದ್ಧತೆಯಲ್ಲಿ ಬಿಡುವಿಲ್ಲದಷ್ಟು ತನ್ಮಯರಾಗುತ್ತೀರಿ. ಹಲ್ಲು ನೋವಿನ ಸಮಸ್ಯೆ ತೀವ್ರವಾಗಿದ್ದಲ್ಲಿ ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಿನಿಮಾ ರಂಗದಲ್ಲಿ ಅವಕಾಶಕ್ಕಾಗಿ ಪ್ರಯತ್ನ ಮಾಡುತ್ತಾ ಇರುವವರಿಗೆ ಆತ್ಮವಿಶ್ವಾಸ ಹೆಚ್ಚಾಗುವಂಥ ದಿನ ಇದಾಗಿರಲಿದೆ. ನಿಮ್ಮ ಸ್ನೇಹಿತರು ಬಹಳ ದೊಡ್ಡ ಸಹಾಯವನ್ನು ಮಾಡಲಿದ್ದಾರೆ. ಈ ದಿನ ಯಾವುದೇ ಕೆಲಸದಲ್ಲಿ ಮನಸಾರೆ ತೊಡಗಿಕೊಳ್ಳಿ; ನಿಮಗೆ ಎದುರಾಗುವ ಸ್ಪರ್ಧೆ ಬಗ್ಗೆ ಆಲೋಚನೆಯನ್ನೇ ಮಾಡುವುದಕ್ಕೆ ಹೋಗಬೇಡಿ. ಮೈಗ್ರೇನ್ ಸಮಸ್ಯೆ ಇರುವಂಥವರು ಸರಿಯಾದ ಔಷಧೋಪಚಾರದ ಬಗ್ಗೆ ಲಕ್ಷ್ಯವನ್ನು ನೀಡಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ತಟ್ಟೆಯಲ್ಲಿ ಸ್ವಲ್ಪ ಕಲ್ಲು ಉಪ್ಪು (Rock Salt) ಇಟ್ಟು ನಿಮ್ಮ ಮನೆಯ ಅಥವಾ ಕೆಲಸದ ಜಾಗದ ಮೂಲೆಯಲ್ಲಿಡಿ. ಇದು ಸುತ್ತಲಿನ ನಕಾರಾತ್ಮಕತೆಯನ್ನು ಹೀರಿಕೊಳ್ಳುತ್ತದೆ. ಸಂಜೆ ಅದನ್ನು ನೀರಿನಲ್ಲಿ ವಿಸರ್ಜಿಸಿ. ಈ ದಿನ ಅಪ್ಪಿತಪ್ಪಿಯೂ ಕಪ್ಪು ಬಣ್ಣದ ಬಟ್ಟೆ ಧರಿಸಬೇಡಿ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಅಂದುಕೊಳ್ಳದ ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ತೆರಳಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪ್ಲಾನಿಂಗ್- ಪರಿಶ್ರಮ ಜತೆಯಾಗಿ ಅತ್ಯುತ್ತಮ ಫಲಿತಾಂಶ ದೊರೆಯಲಿದೆ. ದಂಪತಿ ಮಧ್ಯೆ ಸಂತೋಷಕರವಾದ ಸಮಯವನ್ನು ಕಳೆಯುವ ಯೋಗ ಇದೆ. ನಿಮ್ಮ ಬಳಿ ಎಷ್ಟು ಹಣ ಇದೆಯೋ ಅಷ್ಟಕ್ಕೆ ಮಾತ್ರ ಸೀಮಿತಗೊಳ್ಳಿ. ಕಡಿಮೆ ಬಡ್ಡಿ- ದೀರ್ಘಾವಧಿ ಹೀಗೆ ಏನೇ ಆಕರ್ಷಣೆಗಳು ಇದ್ದರೂ ಸಾಲ ಪಡೆದುಕೊಳ್ಳಬೇಡಿ. ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಅದೆಷ್ಟೇ ಸಣ್ಣ ಪ್ರಮಾಣದ ಕೆಲಸವಾದರೂ ನೀವೇ ಪೂರ್ಣಗೊಳಿಸುವುದು ಉತ್ತಮ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗಾವಣೆ ಮಾಡಬೇಡಿ. ಒಂದು ವೇಳೆ ತಾಯಿಯ ಅಥವಾ ತಾಯಿ ಸಮಾನರಾದವರ ಆರೋಗ್ಯ ಚಿಂತೆಗೆ ಕಾರಣ ಆಗಲಿದೆ. ಫಾಲೋಅಪ್ ಚೆಕಪ್ ಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಹೂಡಿಕೆ ವಿಚಾರಕ್ಕೆ ಬಂದಲ್ಲಿ ಹೆಚ್ಚಿನ ರಿಸ್ಕ್ ಇರುವಂಥದ್ದರಿಂದ ದೂರ ಇರುವುದು ಒಳ್ಳೆಯದು. ಅನುಭವಿಗಳ ಮಾರ್ಗದರ್ಶನ- ಸಲಹೆ ಕಂಡುಬಂದಲ್ಲಿ ಪಡೆದುಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ಅರಿಶಿನ ಹಾಕಿ ಮನೆಯ ಮೂಲೆ ಮೂಲೆಗೆ ಪ್ರೋಕ್ಷಣೆ ಮಾಡಿ. ಅರಿಶಿನವು ಗುರು ಬಲವನ್ನು ಹೆಚ್ಚಿಸಿ, ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಈ ದಿನ ಯಾರೊಂದಿಗೂ ವಾದಕ್ಕೆ ಇಳಿಯಬೇಡಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ ಸಮಯದಿಂದ ಒಂದು ಅವಕಾಶ ಎಂಬಂತೆ ಎದುರು ನೋಡುತ್ತಾ ಇದ್ದದ್ದು ಅದೀಗ ನಿಮ್ಮ ಕಡೆಗೆ ಬರುವಂಥ ಸುಳಿವು ದೊರೆಯಲಿದೆ. ಮಾನಸಿಕವಾಗಿ ಈ ದಿನ ಬಹಳ ಗಟ್ಟಿಯಾಗಿ ಇರಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಇತರರಿಗೆ ಕಷ್ಟ ಎನಿಸಿದ ವಿಷಯಗಳನ್ನು ಸಹ ಅರ್ಥ ಮಾಡಿಕೊಳ್ಳುವಿರಿ. ಆಧ್ಯಾತ್ಮಿಕ ವ್ಯಕ್ತಿಯೊಬ್ಬರ ಜೊತೆಗಿನ ಒಡನಾಟದಿಂದ ನಿಮ್ಮಲ್ಲಿಯೂ ಕೆಲವು ಬದಲಾವಣೆಗಳು ಆಗಲಿದ್ದು, ಮಾನಸಿಕವಾಗಿ ಒಂದು ಬಗೆಯ ಸಮಾಧಾನ ದೊರೆಯಲಿದೆ. ಫ್ಲ್ಯಾಟ್ ಅಥವಾ ಸೈಟು ಖರೀದಿಗಾಗಿ ಹುಡುಕಾಟ ನಡೆಸುತ್ತಾ ಇರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮಗೆ ಇಷ್ಟವಾದದ್ದನ್ನು ಖರೀದಿ ಮಾಡಿಬಿಡಬೇಕು ಎಂಬ ಚಡಪಡಿಕೆ ನಿಮ್ಮಲ್ಲಿ ಇರಲಿದೆ. ನಿಶ್ಚಿತವಾದ ಆದಾಯ ಬರುವಂತೆ ಮಾಡಿಕೊಳ್ಳಬೇಕು ಎಂಬ ಪ್ರಯತ್ನಗಳು ಗುರಿಯ ಕಡೆಗೆ ಸಾಗಲಿವೆ. ಶಿಕ್ಷಕರಿಗೆ ನಿಯೋಜನೆ ಮೇರೆಗೆ ದೊಡ್ಡ ಜವಾಬ್ದಾರಿಗಳು ನಿರ್ವಹಿಸಬೇಕಾಗಿ ಬರಲಿದೆ. ಆರಂಭದಲ್ಲಿ ಅದು ನಿಮ್ಮಿಂದ ಸಾಧ್ಯವೇ ಎಂಬ ಆತಂಕವಾದರೂ ಇದರಿಂದ ನಿಮಗೆ ಹೆಸರು ಬರುವಂಥ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ – Kannada News | Zaheer Khan Joins BCCI: India’s Fast Bowling Future at NCA Gets New Direction

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ.

Source link

ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು – Kannada News | Kannada Film Industry celebrates 93 years of Sati Sulochana movie

ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ (Sati Sulochana) 1934ರ ಮಾರ್ಚ್ 3ರಂದು ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ (Kannada Film Industry) ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಸೃಜನ್ ಲೋಕೇಶ್ (Srujan Lokesh) ಮತ್ತು ಗಿರಿಜಾ ಲೋಕೇಶ್ ಅವರು ಅತಿಥಿಗಳಾಗಿ ಭಾಗಿಯಾಗಿದ್ದಾರೆ. ‘ಸತಿ ಸುಲೋಚನ’ ಸಿನಿಮಾದಲ್ಲಿ ಸುಬ್ಬಯ್ಯ ನಾಯ್ಡು ಅವರು ನಾಯಕನಾಗಿ ನಟಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಈ ಕಾರ್ಯಕ್ರಮ ಮಾಡಲಾಗಿದೆ. ಅನೇಕ ನಿರ್ಮಾಪಕರು ಪಾಲ್ಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ – Kannada News | Corrupt Chikkaballapur PSI and ASI caught by Lokayukta for land dispute bribe

ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ

ಚಿಕ್ಕಬಳ್ಳಾಪುರ, ಮಾ.3: ಜಮೀನು ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಈಗ ಲೋಕಾಯುಕ್ತ ಪೊಲೀಸರ ಅತಿಥಿಗಳಾಗಿದ್ದಾರೆ. ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಬಂಧಿತ ಆರೋಪಿಗಳು.

ಮೊಟ್ಲೂರು ಗ್ರಾಮದ ರಘು ಎಂಬುವವರ ಜಮೀನು ವಿವಾದಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಅನುಕೂಲಕರವಾಗಿ ‘ಬಿ-ರಿಪೋರ್ಟ್’ (B-Report) ಸಲ್ಲಿಸಲು ಎಎಸ್ಐ ವೆಂಕಟೇಶಪ್ಪ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಪಿಎಸ್ಐ ಶರಣಪ್ಪ ಅವರ ಸೂಚನೆಯ ಮೇರೆಗೆ ಎಎಸ್ಐ ವೆಂಕಟೇಶಪ್ಪ ಈ ಹಣದ ಡೀಲ್ ನಡೆಸುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ಲಂಚದ ಹಣದ ಪೈಕಿ ಮೊದಲ ಕಂತಾಗಿ 70,000 ರೂಪಾಯಿ ಹಣವನ್ನು ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ರಘು ಅವರಿಂದ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಎಎಸ್ಐ ವೆಂಕಟೇಶಪ್ಪ ಅವರನ್ನು ವಶಕ್ಕೆ ಪಡೆದರು. ವೆಂಕಟೇಶಪ್ಪ ಹಣ ಪಡೆದ ಬೆನ್ನಲ್ಲೇ ವಿಚಾರಣೆ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ಶರಣಪ್ಪ ಅವರ ಪಾತ್ರವನ್ನು ಖಚಿತಪಡಿಸಿಕೊಂಡು ಅವರನ್ನೂ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು? – Kannada News | SA vs NZ T20 World Cup Semifinal: Eden Gardens Weather, Pitch & Reserve Day Explained

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ. ಈಗ ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಕೋಲ್ಕತ್ತಾದ ಹವಾಮಾನ ಹೇಗಿರಲಿದೆ? ಈ ಪಂದ್ಯಕ್ಕೆ ಮೀಸಲು ದಿನವಿದೆಯಾ?. ಮೀಸಲು ದಿನದ ನಿಯಮಗಳೇನು? ಹಾಗೆಯೇ ಈಡನ್ ಗಾರ್ಡನ್ಸ್‌ ಪಿಚ್ ಯಾರಿಗೆ ಸಹಕಾರಿಯಾಗಲಿದೆ ಎಂಬ ವರದಿ ಇಲ್ಲಿದೆ.

ಹವಾಮಾನ ಹೇಗಿರುತ್ತದೆ?

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ಆಕಾಶವು ಸ್ಪಷ್ಟವಾಗಿರಲಿದೆ. ಅಂದರೆ ಮಳೆ ಬರುವ ಸಾಧ್ಯತೆ ಇಲ್ಲ. ಆದ್ದರಿಂದ, ಈ ಪಂದ್ಯವನ್ನು ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ವೀಕ್ಷಿಸಬಹುದು. ಕನಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಆದ್ದರಿಂದ, ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಇರಲಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವುದು ಕಷ್ಟಕರವಾಗುತ್ತದೆ. ಆದ್ದರಿಂದ, ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.

ಮೀಸಲು ದಿನ ನಿಗದಿ

ನಿಗದಿಪಡಿಸಿದ ದಿನದಂದು ಮಳೆ ಅಥವಾ ಇತರೆ ಕಾರಣದಿಂದಾಗಿ ಪಂದ್ಯ ನಡೆಯದಿದ್ದರೆ, ಮೀಸಲು ದಿನದಂದು ಪಂದ್ಯವನ್ನು ನಡೆಸಲಾಗುತ್ತದೆ. ಇದರರ್ಥ ಐಸಿಸಿ ಈ ಎರಡು ಸೆಮಿಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದೆ. ಅಂದರೆ ಮಾರ್ಚ್​ 4 ರಂದು ನಡೆಯಬೇಕಿರುವ ಮೊದಲ ಸೆಮಿಫೈನಲ್‌ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ, ಈ ಪಂದ್ಯವನ್ನು ಮಾರ್ಚ್​ 5 ರಂದು ನಡೆಸಲಾಗುತ್ತದೆ. ಆ ದಿನದಂದು ಕೂಡ ಪಂದ್ಯ ನಡೆಯದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್​ಗೇರಲಿದೆ. ಅಂದರೆ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಫೈನಲ್​ಗೆ ಟಿಕೆಟ್ ಪಡೆಯಲಿದೆ.

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

ಈಡನ್ ಗಾರ್ಡನ್ಸ್ ಪಿಚ್ ಯಾರಿಗೆ ಸಹಕಾರಿ?

ಈಡನ್ ಗಾರ್ಡನ್ಸ್‌ನ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಹೀಗಾಗಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯಾಗುವುದರಲ್ಲಿ ಸಂದೇಹವಿಲ್ಲ. ಚೆಂಡು ವಿಕೆಟ್ ಮೇಲೆ ಉತ್ತಮ ಬೌನ್ಸ್ ಪಡೆಯುತ್ತದೆ ಮತ್ತು ಚೆಂಡು ಬ್ಯಾಟ್‌ಗೆ ಬರುತ್ತದೆ. ಅಲ್ಲದೆ ಇಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವುದರಿಂದ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವುದು ಉತ್ತಮ ಆಯ್ಕೆ. ಏಕೆಂದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಗುರಿ ಬೆನ್ನಟ್ಟುವುದು ಸುಲಭವಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ – Kannada News | Davangere Jain Youth and Family Choose Sanyasa: MBA Grads and Parents Embrace Asceticism

ಇಡೀ ದೇಶವೇ ಅಚ್ಚರಿ ಪಟ್ಟುವ ದಿಟ್ಟ ನಿರ್ಧಾರ ತೆಗೆದುಕೊಂಡ ಕುಟುಂಬವೊಂದರ ಕಥೆ ಇದು. ಲೈಫ್​​ನ್ನು ಎಂಜಾಯಿ ಮಾಡಬಬೇಕಾದ ವಯಸ್ಸಿ ಅವರದ್ದು, ಆದರೆ ಸನ್ಯಾಸತ್ವ ಸ್ವೀಕಾರ ಮಾಡುವ ಮೂಲಕ ಆಧ್ಯಾತ್ಮಿಕತೆ ಕಡೆ ಸಾಗಿರುವುದು ಇಡೀ ಜಿಲ್ಲೆಯನ್ನೇ ಅಚ್ಚರಿಗೊಳಿಸಿದೆ. ಇದು ದಾವಣಗೆರೆ ನಗರದ ಚೌಕಿಪೇಟೆಯಲ್ಲಿ ನಡೆದ ಘಟನೆ. ಈ ಪ್ರದೇಶವನ್ನು ದೊಡ್ಡ ವಾಣಿಜ್ಯ ಪ್ರದೇಶ ಎಂದು ಕರೆಯುತ್ತಾರೆ. ಇಲ್ಲಿನ ಜೈನ ಮಂದಿರದ ಬಳಿ ವಿಶೇಷವಾದ ಸಂಭ್ರಮ, ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು ಹಬ್ಬಕ್ಕೆ ಬಂದವರು ಯುವ ಸಮೂಹ,  ಜೈನ ಗುರು ಆಚಾರ್ಯ ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರು ಸಮ್ಮುಖದಲ್ಲಿ ನಾಲ್ವರಿಗೆ ನಾಳೆ (ಮಾ.4) ಸನ್ಯಾಸ ಧೀಕ್ಷೆ ನೀಡಲಾಗುವುದು.

ಧೀಕ್ಷೆಗೂ ಮೊದಲು ರಾಜಬೀದಿಯಲ್ಲಿ ಸನ್ಯಾಸತ್ವ ಪಡೆಯುವರ ಭವ್ಯ ಮೆರವಣಿಯಲ್ಲಿ ಬರುತ್ತಾರೆ. ಇದರಲ್ಲಿ ಮೊದಲೇ ದೀಕ್ಷೆ ಪಡೆಯುವವರು 30 ವರ್ಷದ ಕ್ರುನಾಲಿ ಬೇನ್, ದಾವಣಗೆರೆ ನಗರದ ಕಮಲೇಶ್ ಜೈನ್ ಹಾಗೂ ಬಬಿತಾ ಜೈನ್ ದಂಪತಿಗಳ ಪುತ್ರಿ. ಕ್ರುನಾಲಿ ಜೈನ್ ಪುಣೆಯ ಸಿಂಬೋಸಿಸ್ ಕಾಲೇಜಿನಿಂದ ಎಂಬಿಎ ಮುಗಿಸಿ ಓದು ಮುಗಿದ ಬಳಿಕ ಸನ್ಯಾಸತ್ವಕ್ಕೆ ಮುಂದಾಗಿದ್ದಾರೆ. ಇನ್ನು ಎರಡನೇಯವರು 28 ವರ್ಷದ ದೀಕ್ಷಿತ ಬೇನ್. ಅರುಣ್ ಕುಮಾರ್ ಜೈನ್- ಅನ್ನಪೂರ್ಣ ಬಾಯಿ ದಂಪತಿಗಳ ಪುತ್ರಿ. ಇವರು ದಾವಣಗೆರೆಯಲ್ಲಿ ಬಿಕಾಂ ಮುಗಿಸಿದ್ದಾರೆ. ಈ ಇಬ್ಬರು ಕೋಟ್ಯಾಧೀಶ್ವರರ ಮಕ್ಕಳು. ಮೇಲಾಗಿ ಉನ್ನತ ಶಿಕ್ಷಣ ಪಡೆದವರು. ಸನ್ಯಾಸತ್ವ ಸ್ವೀಕರಿಸಿದ್ರೆ ಮಾತ್ರ ಸುಖ ಎಂದು ಈ ಯುವತಿಯರು ಹೇಳುತ್ತಾರೆ.

ಇನ್ನು ಈ ಇಬ್ಬರು ಯುವತಿಯರು ಸನ್ಯಾಸತ್ವ ಸ್ವೀಕರಿಸಿದ ನಂತರ, ಮತ್ತೆ 52 ವರ್ಷ ಭರತ್ ಜೈನ್ ಹಾಗೂ 50 ವರ್ಷದ ಆರತಿ ಬೇನ್ ಅವರಿಗೆ ಸನ್ಯಾಸತ್ವ ನೀಡಲಾಗುವುದು.  ದಾವಣಗೆರೆಯ ಲಲಿತ್ ಗಾರ್ಮೇಟ್ ನ ಮಾಲೀಕರು. ಎಲ್ಲವನ್ನ ಬಿಟ್ಟು ಆಧ್ಯಾತ್ಮದ ಕಡೆ ಬಂದಿದ್ದಾರೆ. ಇಲ್ಲಿ ಇನ್ನೊಂದು ವಿಶೇಷ ಅಂದ್ರೆ ಈ ದಂಪತಿಗಳಿಗೆ ಇಬ್ಬರು ಗಂಡ ಮಕ್ಕಳಿದ್ದರು. ಅವರಿಬ್ಬರೂ ಮೂರು ವರ್ಷದ ಹಿಂದೆ ಜೈನ್ ಸನ್ಯಾಸತ್ವ ದೀಕ್ಷೆಯನ್ನು ಪಡೆದ್ದಾರೆ. ಈಗ ಅವರ ಹೆಸರು ಮಗ್ನಶೇಖರ್ ವಿಜಯ್ ಜಿ ಮಹಾರಾಜ್ ಹಾಗೂ ಪೂರ್ಣ ಶೇಖರ್ ವಿಜಯ್ ಜಿ ಮಹರಾಜ್ ಎಂದಾಗಿದೆ. ಹೀಗೆ ಇದ್ದ ಇಬ್ಬರು ಗಂಡು ಮಕ್ಕಳು ಸನ್ಯಾಸ ಸ್ವೀಕರಿಸಿ ಮೂರು ವರ್ಷವಾಗಿದೆ. ಈಗ ತಂದೆ ತಾಯಿ ಸಹ ಇದೇ ದಾರಿ ಹಿಡಿದಿದ್ದಾರೆ. ಜೀವನ ನೋಡಿ ಬಿಟ್ಟಿದ್ದೇನೆ. ಇನ್ನೇನಿದ್ದರು ಈ ಜೀವ ದೇವರ ಸೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆಯ ಜೈನ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ

ಕಳೆದ ಕೆಲ ದಿನಗಳ ಹಿಂದೆ ಓರ್ವ ರ್ಯಾಂಕ್ ವಿಜೇತ ಇಂಜಿನೀಯರಿಂಗ್ ಓದಿದವಳು ಸನ್ಯಾಸಿನಿ ಆಗ ಧೀಕ್ಷೆ ಪಡೆದಿದ್ದಳು. ಮುಂದಿನ ವಾರದಲ್ಲಿ ಇನ್ನು ನಾಲ್ವರು ಯುವತಿಯರು ಧೀಕ್ಷೆಗೆ ಸಜ್ಜಾಗಿದ್ದಾರೆ. ಹೀಗೆ ಯುವ ಜನಾಂಗ ಇಂತಹ ಆಧುನಿಕ ಯುಗದಲ್ಲಿ ಸನ್ಯಾಸದಂತಹ ಅತ್ಯಂತ ಕಠಿಣ ವೃತದ ಜೀವನಕ್ಕೆ ಮುಂದಾಗುವುದು ಅಚ್ಚರಿ ಮೂಡಿಸಿದೆ. ಬರಿಗಾಲಿನಲ್ಲಿ ನಡಿಗೆಯಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರವಾಸ ಮಾಡಬೇಕು. ಸೂರ್ಯೋಧಯಕ್ಕೆ ಮೊದಲು ಸೂರ್ಯಾಸ್ತದ ನಂತರ ಆಹಾರ ಸೇವನೆ ನಿಷೇಧ. ಇಂತದ ದಿಟ್ಟ ನಿರ್ಧಾರಕ್ಕೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 10:21 pm, Tue, 3 March 26

Source link

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್ – Kannada News | Phone Tapping Row In Karnataka Politics: HD Kumaraswamy Hits back at Siddaramaiah

ಬೆಂಗಳೂರು, ಮಾರ್ಚ್ 03): ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ  (JDS And BJP) ಸೇರಿಕೊಂಡು ಅಧಿಕಾರ ಹಂಚಿಕೆ ಬಿಕ್ಕಟ್ಟು ಕಾಂಗ್ರೆಸ್​ನೊಳಗಿನ ಕಿಚ್ಚಿಗೆ ಫೋನ್ ಕದ್ದಾಲಿಕೆ (Phone Tapping) ಎನ್ನುವ ತುಪ್ಪ ಸುರಿದಿದ್ದು, ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಸಿಎಂ ಡಿಕೆ ಬಣದ ಮೇಲೆ ನಿಗಾ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆ್ಯಂಡ್ ಟೀಮ್​ನ ಮೇಲೆ ಕುಮಾರಸ್ವಾಮಿ (HD Kumaraswamy) ಪರೋಕ್ಷವಾಗಿ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ಸಹ ವಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸಿದ್ದರಾಮಯ್ಯ ಹೊರಡಿಸಿದ ಪತ್ರಿಕಾ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ ಹೆಚ್ಚು ಬ್ಯುಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ ನಾನೇ ಎಂದು ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಮತ್ತೊಬ್ಬರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಆಸಕ್ತಿ

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ, ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಭಾವಿಸಿದ್ದೇನೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ ಹೆಚ್ಚು ಬ್ಯುಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ.. ನಾನೇ.. ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ. ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳೇ ಮಾತನಾಡುತ್ತಿವೆ. ಆ ಬಗ್ಗೆ ನಾನು ಪ್ರತಿಕ್ರಿಯಿಸಿದ್ದೇನೆ ಅಷ್ಟೇ. ನಿಮ್ಮ ಪುಂಖಾನುಪುಂಖ ಪುರಾಣ ನೋಡಿದರೆ ನಿಮಗೆ ಆಡಳಿತಕ್ಕಿಂತ ಮತ್ತೊಬ್ಬರನ್ನು ಆಡಿಕೊಳ್ಳುವುದರಲ್ಲೇ ಹೆಚ್ಚು ಮುತುವರ್ಜಿ, ಆಸಕ್ತಿ ಇದ್ದಂತಿದೆ. ಪ್ರತಿಪಕ್ಷಗಳು ತಮ್ಮ ಕೆಲಸ ತಾವು ಮಾಡುತ್ತಿವೆ. ಜನರು ದಯೆ ತೋರಿ ನಿಮಗೆ 140 ಸೀಟು ಕೊಟ್ಟರೆ ಆಡಳಿತ ನಡೆಸುವುದು ಬಿಟ್ಟು ಅಡ್ನಾಡಿಗಳಂತೆ ಹಾದಿಬೀದಿಯಲ್ಲಿ ಕಚ್ಚಾಡುತ್ತಿದ್ದೀರಿ. ನಿಮ್ಮ ಪಕ್ಷದಲ್ಲಿನ ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ ಎನ್ನುವ ಅನುಮಾನ ಪ್ರತಿಪಕ್ಷಗಳದ್ದು ಮತ್ತು ಮಾಧ್ಯಮಗಳದ್ದು. ಪ್ರಶ್ನಿಸುವ ಜಾಗದಲ್ಲಿ ಪ್ರತಿಪಕ್ಷಗಳಿವೆ, ಉತ್ತರಿಸಿ. ವಿಷಯಾಂತರ ಬಿಟ್ಟು ಸತ್ಯ ಹೇಳಿ. ಸತ್ಯ ನಿಮ್ಮನೆ ದೇವರು ಅಲ್ಲವೇ? ಸತ್ಯಮೇವ ಜಯತೇ ನಿಮ್ಮ ಸಿದ್ದಸ್ಲೋಗನ್! ಕಥೆ ಕಟ್ಟಿ ಕಾಲಹರಣ ಮಾಡುತ್ತಿರೇಕೆ? ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ ಆಗಿದ್ದೆ.ಸ್ವತಂತ್ರ ಸರಕಾರವೂ ನನ್ನದಲ್ಲ. ಕದ್ದಾಲಿಸುವ ಕರ್ಮ ನನಗೇಕೆ? ನಿಮ್ಮಂತೆ ಸಿದ್ದವನದಲ್ಲಿ ಕೂತು ಮನೆಹಾಳು ಮಾಡೋದಕ್ಕೆ ಶಾಸಕರಿಗೆ ಬ್ರೈನ್ ವಾಶ್ ಮಾಡುವ ಹೀನ ಜಾಯಮಾನ ನನ್ನದಲ್ಲ. ನಿಮ್ಮ ಮೊದಲ ಐದು ವರ್ಷದ ಸರಕಾರವೂ.. ಈಗಿನ ನಿಮ್ಮ ಗುಪ್ತಚರವೂ ರಾಜಕಾರಣವನ್ನು ನಾನು ಕಂಡಿರುವುದೇ ಅಲ್ಲವೇ? ಎಂದು ತಿವಿದಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಗುರುವಿಗೆ ಗುನ್ನ ಇಟ್ಟಿರಿ

ನನ್ನ ಜತೆ ನೇರ ಸಂಘರ್ಷಕ್ಕೆ ಬಂದಾಗಲೆಲ್ಲ ನೀವು ದೇವೇಗೌಡರನ್ನು ಎಳೆದು ತರುತ್ತೀರಿ. ದೇವೇಗೌಡರು ನಿಮ್ಮ ರಾಜಕೀಯ ಗುರು, ನಿಮ್ಮನ್ನು ಗುರುತಿಸಿ ಬೆಳೆಸಿದವರು. ಅದಕ್ಕಾಗಿ ಎಷ್ಟೋ ನಾಯಕರ ವಿರೋಧ ಕಟ್ಟಿಕೊಂಡರು. ಅದೂ ನಿಮಗೂ ಗೊತ್ತಿದೆ. ಆದರೆ, ಸಮಯಕ್ಕೆ ಕಾಯುತ್ತಿದ್ದ ನೀವು ಗುರುವಿಗೆ ಗುನ್ನ ಇಟ್ಟಿರಿ. ಅಷ್ಟರ ಮಟ್ಟಿಗೆ ನಿಮ್ಮ ಕಪಟತನ, ಕುಟಿಲತೆಯನ್ನು ಸ್ವಯಂ ಸ್ಮರಣೆ ಮಾಡುತ್ತಿದ್ದೀರಿ, ಸಂತೋಷ. ದೆಹಲಿಯಲ್ಲಿ ದೇವೇಗೌಡರು ಅಧಿಕಾರ ಕಳೆದುಕೊಂಡಾಗ ನೀವು ಯಾವ ಪಕ್ಷದಲ್ಲಿದ್ದಿರಿ ಎನ್ನುವುದನ್ನು ಅರೆಕ್ಷಣ ನೆನಪು ಮಾಡಿಕೊಳ್ಳಿ. ನಿಮಗೂ ಆತ್ಮಸಾಕ್ಷಿ ಎನ್ನುವುದು ಇರಬೇಕಲ್ಲಾ? ಆಗ ನಿಮ್ಮ ನಾಲಿಗೆಯಿಂದ ಉದುರಿದ್ದ ಸರಣಿ ನುಡಿಮುತ್ತುಗಳನ್ನು ಒಮ್ಮೆ ಪುನಾಸ್ಮರಣೆ ಮಾಡಿಕೊಳ್ಳಿ? ಅವತ್ತು ಅದೇ ಸೀತಾರಾಂ ಕೇಸರಿ ಬಗ್ಗೆ ತಾವು ಏನೇನು ಹೇಳಿದಿರಿ? ಆ ನಂತರದ ಕಾಲದಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಅದೆಷ್ಟು ವಾಚಾಮಗೋಚರ ನಿಂದಿಸಿದ್ದಿರಿ ಎಂಬುದನ್ನು ಜ್ಞಾಪಕ ಮಾಡಿಕೊಳ್ಳಿ ಅಂದಿನ ಘಟನೆಯನ್ನು ನೆನಪಿಸಿ ತಿರುಗೇಟು ನೀಡಿದ್ದಾರೆ.

ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ

ದೇವೇಗೌಡರು ಅಧಿಕಾರವನ್ನು ವಿರೋಚಿತವಾಗಿ ತ್ಯಜಿಸಿದರು. ರಾಜೀನಾಮೆ ಘೋಷಿಸಿದ ಮರುಕ್ಷಣದಲ್ಲೇ ಸಂಸತ್ತಿನಲ್ಲಿಯೇ ವಾಜಪೇಯಿ ಅವರು ಮುಕ್ತ ಬೆಂಬಲ ಕೊಡುತ್ತೇವೆ ಎಂದರೂ ಆ ಅಧಿಕಾರ ಬೇಡವೆಂದು ವಿನಯದಿಂದ ಧಿಕ್ಕರಿಸಿದರು. ಅವರ ಗರಡಿಯಲ್ಲಿ ಪಳಗಿ, ಈಗಲೂ ಬೆಳಗುತ್ತಿರುವ ನೀವೂ ಅಂಥ ಕೆಚ್ಚನ್ನು, ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ. ನಿಮ್ಮ ಕುಚುಕು ಗೆಳೆಯನ ಮೇಲೆ ಪ್ರೀತಿ ತೋರಿಸಿ. ಗುಂಡಿಗೆ ಸಾಲುತ್ತಿಲ್ಲವೇ ಮಿಸ್ಟರ್ ಸಿದ್ದರಾಮಯ್ಯನವರೇ, ಸೋತರೆ ಸೋಲಬೇಕು ಬಾಹುಬಲಿಯಂತೆ! ನಾನು ಸೋತಿದ್ದೇನೆ, ಓಡಿ ಹೋಗಿಲ್ಲ. ನಾನು ರಣಹೇಡಿಯಂತೆ ಪಲಾಯನ ಮಾಡುವುದಿಲ್ಲ, ನೆನಪಿರಲಿ ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:09 pm, Tue, 3 March 26

Source link

Exit mobile version