Headlines

ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ – Kannada News | Union Minister Pralhad Joshi Defends NEET Reforms, Says Modi Government Bringing Tough Anti Paper Leak Measures

ಬೆಂಗಳೂರು, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ವಿರೋಧ ಪಕ್ಷಗಳ ಟೀಕೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ‘ಟಿವಿ9’ ಜತೆ ಮಾತನಾಡಿದ ಅವರು, 2024ರ ಪರೀಕ್ಷಾ (ಅನುಚಿತ ವಿಧಾನಗಳ ತಡೆ) ಕಾಯಿದೆಯನ್ನು ಉಲ್ಲೇಖಿಸಿ, ಈ ಕಾನೂನು 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡವನ್ನು ಒಳಗೊಂಡಿದೆ ಎಂದರು. ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷಗಳು…

Read More

ಮಾಘ ಮಾಸ ಹುಣ್ಣಿಮೆ: ಟಿ ನರಸೀಪುರದ ಕಾವೇರಿ ನದಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರ ದಂಡು – Kannada News | Magha Purnima: Devotees Throng Triveni Sangama at T Narsipur for Holy Dip

ಮೈಸೂರು, ಫೆಬ್ರವರಿ 1: ಟಿ. ನರಸೀಪುರದಲ್ಲಿರುವ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯ ಪುಣ್ಯಸ್ನಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಕಾವೇರಿ, ಕಬಿನಿ ಮತ್ತು ಕಪಿಲಾ ನದಿಗಳು ಸೇರುವ ಈ ಸಂಗಮ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ, ಮಧ್ಯರಾತ್ರಿಯಿಂದಲೇ ಸಹಸ್ರಾರು ಭಕ್ತರು ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಪುಣ್ಯಸ್ನಾನದ ನಂತರ, ಭಕ್ತರು ಸಮೀಪದಲ್ಲಿರುವ ಐತಿಹಾಸಿಕ ಗುಂಜಾ ನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ…

Read More

ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ – Kannada News | Phone Tapping Row: Union Minister Pralhad joshi Mocks about Siddaramaiah And DK Shivakumar relationship

ಹುಬ್ಬಳ್ಳಿ, (ಮಾರ್ಚ್ 04): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಾಲು-ಜೇನಿನ ಸಂಬಂಧವಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅವರು ನಾವು ಮಾಡ್ತಿಲ್ಲ ಎಂದು ಗೃಹ ಸಚಿವರು ನಿರಾಕರಿಸಿಲ್ಲ. ಯಾರದ್ದು ಮಾಡ್ತಿದ್ದಾರೆ ಪೋನ್ ಕದ್ದಾಲಿಕೆಯನ್ನು ವಿರೋಧ…

Read More

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ; ಹಣ ಎಣಿಸುವಾಗ ನಿಯಮಗಳನ್ನು ಹೇಗೆ ಉಲ್ಲಂಘಿಸಲಾಯಿತು? – Kannada News | Ram Temple donation row SIT Probe on SBI operational protocol financial records

ನವದೆಹಲಿ, ಜೂನ್ 30: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಡುವೆ ಸಹಿ ಹಾಕಲಾದ ಒಪ್ಪಂದದಲ್ಲಿ ಹಲವಾರು ಲೋಪಗಳನ್ನು ವಿಶೇಷ ತನಿಖಾ ತಂಡ (SIT) ತನಿಖೆ ವೇಳೆ ಕಂಡುಹಿಡಿದಿದೆ. ರಾಮ ಮಂದಿರದ (Ram Temple Donation Row) ಭದ್ರತೆ ಮತ್ತು ಕಣ್ಗಾವಲು ನಿಬಂಧನೆಗಳನ್ನು ಏಕೆ ಪಾಲಿಸಲಿಲ್ಲ ಮತ್ತು ಇದಕ್ಕೂ ಕಳ್ಳತನಕ್ಕೂ ಯಾವುದಾದರೂ ಸಂಬಂಧವಿದೆಯೇ ಎಂದು ತನಿಖಾ ಸಂಸ್ಥೆಗಳು ಈಗ ತನಿಖೆ ನಡೆಸುತ್ತಿವೆ. ಮೂಲಗಳ ಪ್ರಕಾರ, ಫೆಬ್ರವರಿ 2025ರಲ್ಲಿ…

Read More

IPL 2026 Final: ಫೈನಲ್ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

IPL 2026 Final: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್​ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಮಳೆ ಬಂದರೆ ಪಂದ್ಯ ಆಯೋಜಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ… ಫೈನಲ್ ಪಂದ್ಯವನ್ನು ಪೂರ್ಣಗೊಳಿಸಲು ಐಪಿಎಲ್ ರೈನ್ ರೂಲ್ಸ್ ಅನ್ನು ಪರಿಚಯಿಸಲಾಗಿದೆ. ಈ ನಿಯಮಗಳ ಮೂಲಕ ಐಪಿಎಲ್​ನ ಅಂತಿಮ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ….

Read More

Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ! – Kannada News | Kitchen Sink Vastu: 5 Things NOT to Keep Under Your Sink for Home Prosperity

ನಮ್ಮ ಮನೆಯ ಅಡುಗೆಮನೆಯು ಕೇವಲ ಅಡುಗೆ ತಯಾರಿಸುವ ಸ್ಥಳವಲ್ಲ, ಬದಲಾಗಿ ಅದು ಇಡೀ ಕುಟುಂಬಕ್ಕೆ ಚೈತನ್ಯ ಮತ್ತು ಆರೋಗ್ಯವನ್ನು ನೀಡುವ ಶಕ್ತಿ ಕೇಂದ್ರ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಮನೆಯ ಸಮೃದ್ಧಿ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ. ಅಡುಗೆಮನೆಯನ್ನು ಎಷ್ಟು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುತ್ತೇವೆಯೋ, ಅಷ್ಟು ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ. ಆದರೆ, ಅನೇಕ ಮನೆಗಳಲ್ಲಿ ಜಾಗದ ಉಳಿತಾಯಕ್ಕಾಗಿ ಅಥವಾ ಅರಿವಿಲ್ಲದೆ ಅಡುಗೆಮನೆಯ ಸಿಂಕ್ ಅಡಿಯಲ್ಲಿ ಬೇಡದ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತದೆ. ಈ ಸಣ್ಣ ತಪ್ಪು ಹೇಗೆ ದೊಡ್ಡ…

Read More

ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್ – Kannada News | Hormuz Strait Tariff War: Trump’s 20 percent Fee Sparks Iran Counter and Global Oil Crisis

ಟೆಹ್ರಾನ್, ಜುಲೈ 14: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ನಿಯಂತ್ರಣ ಮತ್ತು ಸುಂಕದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ಇರಾನ್ ನಡುವೆ ತೀವ್ರ ಮಾತಿನ ಚಕಿಮಕಿ ನಡೆದಿದೆ. ಜಲಸಂಧಿಯ ಮೂಲಕ ಹಾದು ಹೋಗುವ ವಿಶ್ವದ ಎಲ್ಲಾ ವಾಣಿಜ್ಯ ಹಡಗುಗಳ ಸರಕುಗಳ ಮೇಲೆ ಬರೋಬ್ಬರಿ ಶೇ.20ರಷ್ಟು ಸುರಕ್ಷತಾ ಶುಲ್ಕ ವಿಧಿಸುವ ಟ್ರಂಪ್ ಯೋಜನೆ ಬಗ್ಗೆ ಇರಾನ್ ತಮಾಷೆ ಮಾಡಿದೆ. ಇದಕ್ಕೆ ಎಕ್ಸ್​​ ಪೋಸ್ಟ್​ ಮೂಲಕ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಸಯ್ಯದ್…

Read More

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್! – Kannada News

ಮುಂಬೈ ಟಿ20 ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಕ್ಸ್ ಅಂಧೇರಿ  ಹಾಗೂ ನಮೋ ಬಾಂದ್ರಾ ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್ಕ್ಸ್ ಅಂಧೇರಿ ತಂಡಕ್ಕೆ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಪಂದ್ಯದ ಮೊದಲ ಓವರ್‌ನಲ್ಲೇ ಎರಡು ಪ್ರಮುಖ ವಿಕೆಟ್ ಕಿತ್ತ ಅರ್ಜುನ್ ಬಾಂದ್ರಾ ಬ್ಲಾಸ್ಟರ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ…

Read More

ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು! – Kannada News | Karnataka Rain Update: Gokarna Temple Submerged Amid Heavy Rain; North Karnataka Faces Drought Scare

ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಒಂದೆಡೆ ವರುಣನ ಆರ್ಭವಿದ್ದರೆ, ಇನ್ನೊಂದೆಡೆ ಬರಗಾಲದ ಆತಂಕ ಎದುರಾಗಿದೆ. ಕಾರವಾರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಗೋಕರ್ಣದಲ್ಲಂತೂ ನಿರಂತರ 36 ಗಂಟೆಗಳ ಮಳೆಗೆ ಗೋಕರ್ಣದ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನೀರು ನುಗ್ಗಿ, ಆತ್ಮಲಿಂಗವೂ ಜಲಾವೃತವಾಗಿದೆ. ಗೋಕರ್ಣದ ಬೀದಿಗಳು ಹಾಗೂ ಅಂಗಡಿಗಳು ನೀರಿನಿಂದ ಆವೃತವಾಗಿ ಭಕ್ತರು, ವ್ಯಾಪಾರಿಗಳು ಪರದಾಡಿದರು. ಕುಮಟಾ-ಸಿದ್ದಾಪುರ ರಾಜ್ಯ ಹೆದ್ದಾರಿಯೂ ಹೊಳೆಯಂತಾಗಿತ್ತು. ಆದರೆ ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟು ಬರಗಾಲದ ಆತಂಕ ಶುರುವಾಗಿದೆ. ಕೊಪ್ಪಳ, ಬೀದರ್ ಸೇರಿ…

Read More

ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಶೀಘ್ರದಲ್ಲೇ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ – Kannada News | New Vande Bharat sleeper train to To Run on Guwahati Kolkata Route it has advanced safety system, world class coaches

ನವದೆಹಲಿ, ಜನವರಿ 1: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು (Vande Bharat Sleeper Train) ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಲಿದ್ದಾರೆ. ಕೊಲ್ಕತ್ತಾದಿಂದ ಗುವಾಹಟಿಗೆ ಹೋಗುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಮುಂದಿನ 15-20 ದಿನಗಳಲ್ಲಿ ಅಂದರೆ ಜನವರಿ 18 ಅಥವಾ 19ರ ಸುಮಾರಿಗೆ ವಂದೇ ಭಾರತ್ ಸ್ಲೀಪರ್ ರೈಲಿನ ಉದ್ಘಾಟನೆ ನಡೆಯುವ ನಿರೀಕ್ಷೆಯಿದೆ ಎಂದು ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್…

Read More