ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ – Kannada News | This is why Darshan did not act in Bheema Theeradalli movie

ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ ಮಾಡಿದ್ದರು. ಅವರ ಜೊತೆ ದರ್ಶನ್ ಆಪ್ತವಾಗಿದ್ದರೂ ಕೂಡ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಹಾಗಾದ್ರೆ, ದರ್ಶನ್ (Darshan) ಜೊತೆ ಈ ಸಿನಿಮಾವನ್ನು ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ರಾವ್ ಮತ್ತು ಅಣಜಿ ನಾಗರಾಜ್ ಅವರು ಉತ್ತರಿಸಿದ್ದಾರೆ. ‘ಈ ಕತೆಯನ್ನು ತಂದಿದ್ದೇ ದುನಿಯಾ ವಿಜಯ್. ಪಾತ್ರಕ್ಕಾಗಿ ವಿಜಯ್ ಅವರು ಅದಾಗಲೇ ಡ್ರೆಸ್ ಹೊಲಿಸಿಕೊಂಡಿದ್ದರು. ಅವರು ಬಹಳ ಇಷ್ಟಪಟ್ಟು ಮಾಡಿದ ಸಿನಿಮಾ ಇದು. ದುನಿಯಾ ವಿಜಯ್ ಅವರಿಗೆ ಈ ಪಾತ್ರ ತುಂಬಾ ಹೊಂದಿಕೆ ಆಯಿತು’ ಎಂದು ನಿರ್ಮಾಪಕ ಅಣಜಿ ನಾಗರಾಜ್ ಅವರು ಹೇಳಿದ್ದಾರೆ. ಈ ಬಾರಿ ತೆಲುಗಿನಲ್ಲಿ ಕೂಡ ಈ ಸಿನಿಮಾವನ್ನು ಬಿಡುಗಡೆ ಮಾಡಲು ಅವರು ನಿರ್ಧರಿಸಿದ್ದಾರೆ. ತೆಲುಗಿನಲ್ಲಿ ‘ಕಡಪ’ ಎಂದು ಶೀರ್ಷಿಕೆ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ – Kannada News | Iran’s Tehran Mehrabad International airport bombed by US Israel strikes

ಟೆಹ್ರಾನ್, ಮಾರ್ಚ್ 3: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ಪಡೆಗಳ ದಾಳಿ ಮುಂದುವರೆದಿದೆ. ಇಂದು ಟೆಹ್ರಾನ್‌ನಲ್ಲಿ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಇರಾನ್‌ನ (Iran) ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದ್ದರಿಂದ ಸುತ್ತಲೂ ಹೊಗೆಯಿಂದ ಆವೃತವಾಗಿದೆ.

ಅಮೆರಿಕ ಮತ್ತು ಇಸ್ರೇಲ್​ನಿಂದ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಈ ವಿಮಾನ ನಿಲ್ದಾಣ ಛಿದ್ರವಾಗಿದ್ದು, ಕಪ್ಪು ಹೊಗೆಯೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಇಸ್ರೇಲ್ ಪೈಲಟ್‌ಗಳು ಇರಾನ್ ಮತ್ತು ಲೆಬನಾನ್‌ನ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ನಮ್ಮ ರಾಷ್ಟ್ರವು ಹೆಚ್ಚಿನ ಬಲದಿಂದ ಪ್ರತಿಕ್ರಿಯಿಸುತ್ತದೆ. ಯುದ್ಧದಿಂದ ಹಿಂದೆ ಸರಿಯುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಇಸ್ರೇಲ್ ದಾಳಿ – Kannada News | Israel strike hits building linked to Iran Supreme Leader selection panel

ಜೆರುಸಲೇಂ, ಮಾರ್ಚ್ 3: ಇಸ್ರೇಲ್ ಇಂದು ಇರಾನ್‌ನ ತಜ್ಞರ ಮಂಡಳಿಯನ್ನು ಹೊಂದಿರುವ ಕೋಮ್‌ನಲ್ಲಿರುವ ಕಟ್ಟಡದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನ (Iran Conflict) ಹೊಸ ಸುಪ್ರೀಂ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಈ ಮಂಡಳಿ ಹೊಂದಿದೆ. ಹಿಂದಿನ ಇಸ್ರೇಲ್ ದಾಳಿಗಳಲ್ಲಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿ ಸಾವನ್ನಪ್ಪಿದ ನಂತರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಸದಸ್ಯರು ಮತಗಳನ್ನು ಹಾಕುತ್ತಿದ್ದಾಗ ಈ ದಾಳಿ ನಡೆದಿದೆ. ಕೌನ್ಸಿಲ್‌ನ 88 ಸದಸ್ಯರಲ್ಲಿ ಎಷ್ಟು ಮಂದಿ ಆ ಸಮಯದಲ್ಲಿ ಕಟ್ಟಡದೊಳಗೆ ಇದ್ದರು ಅಥವಾ ಎಷ್ಟು ಹಾನಿಯಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇಸ್ರೇಲ್ ಮತ್ತು ಯುಎಸ್ ಪಡೆಗಳು ಟೆಹ್ರಾನ್‌ನಲ್ಲಿರುವ ಪ್ರಮುಖ ಸರ್ಕಾರಿ ಕಟ್ಟಡಗಳನ್ನು ಸಹ ಹೊಡೆದವು. ಇಸ್ರೇಲ್ ರಕ್ಷಣಾ ಪಡೆಗಳ (IDF) ಪ್ರಕಾರ, ದಾಳಿಗಳು ಅಧ್ಯಕ್ಷೀಯ ಕಚೇರಿ ಮತ್ತು ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಟ್ಟಡವನ್ನು ಗುರಿಯಾಗಿಸಿಕೊಂಡವು. ಖಮೇನಿ ಮತ್ತು ಇತರ ಹಿರಿಯ ಇರಾನಿನ ನಾಯಕರ ಹತ್ಯೆಯ ನಂತರ, ಇರಾನ್ ಮಧ್ಯಪ್ರಾಚ್ಯದಲ್ಲಿ ಇಸ್ರೇಲಿ ಮತ್ತು ಅಮೆರಿಕದ ಗುರಿಗಳ ಮೇಲೆ ತನ್ನ ದಾಳಿಯನ್ನು ಹೆಚ್ಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಒಮಾನ್, ಕುವೈತ್​ ನಾಯಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ; ಇರಾನ್ ದಾಳಿಗೆ ಖಂಡನೆ – Kannada News | Iran Israel conflict; PM Modi speaks to leadership in Oman Qatar Kuwait condemns attacks

ನವದೆಹಲಿ, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇಬ್ಬರು ಪ್ರಮುಖ ಗಲ್ಫ್ ನಾಯಕರೊಂದಿಗೆ ಮಾತನಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಕೊಂದ ನಂತರ ಈ ಪ್ರದೇಶವು ನಿರಂತರವಾಗಿ ದಾಳಿಗಳು ಮತ್ತು ಪ್ರತಿದಾಳಿಗಳಿಗೆ ಸಾಕ್ಷಿಯಾಗುತ್ತಿದೆ. ಖಮೇನಿಯ ಸಾವಿಗೆ ಪ್ರತೀಕಾರವಾಗಿ ಇರಾನ್ ಗಲ್ಫ್​ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಧ್ವಂಸ ಮಾಡಿದೆ.

ಪ್ರಧಾನಿ ಮೋದಿ ಅವರು ಭಾರತೀಯ ಸಮುದಾಯದ ಭದ್ರತೆಯ ಬಗ್ಗೆ ಇಬ್ಬರೂ ನಾಯಕರೊಂದಿಗೆ ಚರ್ಚಿಸಿದರು. ಪ್ರಧಾನಿ ಮೋದಿ ಇಂದು ಒಮಾನ್ ರಾಜ ಹೈತಮ್ ಬಿನ್ ತಾರಿಕ್ ಮತ್ತು ಕುವೈತ್‌ನ ಕ್ರೌನ್ ಪ್ರಿನ್ಸ್ ಸಬಾ ಅಲ್-ಖಾಲೆದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾ ಅವರೊಂದಿಗೆ ಮಾತನಾಡಿದರು. ಇಬ್ಬರೊಂದಿಗಿನ ಮಾತುಕತೆಯ ಸಮಯದಲ್ಲಿ ಪ್ರಧಾನಿ ಮೋದಿ ಮಧ್ಯಪ್ರಾಚ್ಯದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಇರಾನ್ ಒಳಗೆ ದೊಡ್ಡ ಪ್ರಮಾಣದ ಮಿಲಿಟರಿ ದಾಳಿಗಳನ್ನು ನಡೆಸಿದ ನಂತರ ಭಾನುವಾರ ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಯಿತು. ಈ ದಾಳಿಗಳು ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು ಮತ್ತು ನೌಕಾ ಹಡಗುಗಳ ಮೇಲೆ ಕೇಂದ್ರೀಕರಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದ ಅತ್ಯಂತ ತೀವ್ರವಾದ ಸಂಘರ್ಷದಲ್ಲಿ ಒಂದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಯಶ್ ನಟನೆಯ ‘ರಾಮಾಯಣ’ ಸಿನಿಮಾಗೆ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸಾಥ್? – Kannada News | Christopher Nolan likely to review final cut of Yash starrer Ramayana movie

ಭಾರತೀಯ ಚಿತ್ರರಂಗದ ಅತ್ಯಂತ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಚಿತ್ರದ ಬಗ್ಗೆ ಈಗ ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ನಿತೇಶ್ ತಿವಾರಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಯಶ್ (Yash), ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರನ್ನು ಒಳಗೊಂಡ ಬೃಹತ್ ತಾರಾಗಣ ಮತ್ತು ಮೇಕಿಂಗ್‌ನಿಂದ ಸುದ್ದಿಯಾಗಿದ್ದ ಈ ಸಿನಿಮಾಗೆ ಈಗ ಹಾಲಿವುಡ್‌ನ ದಿಗ್ಗಜ ನಿರ್ದೇಶಕ ಕ್ರಿಸ್ಟೋಫರ್ ನೋಲನ್ (Christopher Nolan) ಅವರ ಹೆಸರು ತಳುಕು ಹಾಕಿಕೊಂಡಿದೆ. ನೋಲನ್ ಅವರಿಗೂ ‘ರಾಮಾಯಣ’ ಚಿತ್ರತಂಡಕ್ಕೂ ಏನು ಸಂಬಂಧ? ಇಲ್ಲಿದೆ ಉತ್ತರ..

ವರದಿಗಳ ಪ್ರಕಾರ, ಆಸ್ಕರ್ ವಿಜೇತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಮತ್ತು ಅವರ ಆಪ್ತ ಛಾಯಾಗ್ರಾಹಕ, ಅಕಾಡೆಮಿ ಪ್ರಶಸ್ತಿ ವಿಜೇತ ಹೊಯ್ತೆ ವಾನ್ ಹೊಯ್ತೆಮಾ (Hoyte van Hoytema) ಅವರು ‘ರಾಮಾಯಣ’ ಚಿತ್ರದ ಫೈನಲ್ ಕಟ್ ವೀಕ್ಷಿಸಲಿದ್ದಾರೆ ಎನ್ನಲಾಗುತ್ತಿದೆ. ಇವರು ಚಿತ್ರಕ್ಕೆ ಅಧಿಕೃತವಾಗಿ ಕೆಲಸ ಮಾಡದಿದ್ದರೂ, ಚಿತ್ರದ ತಾಂತ್ರಿಕ ಗುಣಮಟ್ಟ ಮತ್ತು ದೃಶ್ಯ ವೈಭವವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡಲಿದ್ದಾರೆ ಎಂಬ ಗುಸುಗುಸು ಹಬ್ಬಿದೆ.

ಈ ಸಂಪರ್ಕ ಸಾಧ್ಯವಾಗಿದ್ದು ಹೇಗೆ?

ಈ ಸುದ್ದಿಗೆ ಪುಷ್ಟಿ ನೀಡುವಂತೆ ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಹೆಸರು ಕೇಳಿಬರುತ್ತಿದೆ. ನಮಿತ್ ಅವರ ಒಡೆತನದ ವಿಶ್ವವಿಖ್ಯಾತ VFX ಸಂಸ್ಥೆ DNEG, ಕ್ರಿಸ್ಟೋಫರ್ ನೋಲನ್ ಅವರ ‘ಇನ್ಸೆಪ್ಷನ್’, ‘ಟೆನೆಟ್’, ‘ಆಪೆನ್‌ಹೈಮರ್’ ಚಿತ್ರಗಳಿಗೆ ಕೆಲಸ ಮಾಡಿದೆ. ಈ ಹಳೆಯ ಬಾಂಧವ್ಯದ ಹಿನ್ನೆಲೆಯಲ್ಲಿ ನೋಲನ್ ಅವರು ‘ರಾಮಾಯಣ’ ಚಿತ್ರಕ್ಕೆ ಬೆಂಬಲ ನೀಡಲು ಒಪ್ಪಿರಬಹುದು ಎಂದು ಹೇಳಲಾಗುತ್ತಿದೆ.

‘ರಾಮಾಯಣ ಕೇವಲ ಭಾರತೀಯ ಸಿನಿಮಾವಾಗದೆ, ಜಾಗತಿಕ ಮಟ್ಟದ ಅದ್ಭುತವಾಗಿ ಹೊರಹೊಮ್ಮಬೇಕು ಎಂಬುದು ಚಿತ್ರತಂಡದ ಗುರಿ. ಇದಕ್ಕಾಗಿ ದೃಶ್ಯ ಕಾವ್ಯದ ಮಾಂತ್ರಿಕ ನೋಲನ್ ಅವರ ಮಾರ್ಗದರ್ಶನ ಪಡೆಯಲು ತಯಾರಿ ನಡೆದಿದೆ’ ಎಂದು ಮೂಲಗಳು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು?

ಒಂದು ಕಡೆ ನೋಲನ್ ಅವರ ಆಗಮನದ ಸುದ್ದಿ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಅವರು ತಮ್ಮದೇ ಆದ ‘ದಿ ಒಡಿಸ್ಸಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದು 2026ರ ಜುಲೈನಲ್ಲಿ ಬಿಡುಗಡೆಯಾಗಲಿದ್ದು, ನೋಲನ್ ಅವರ ಸಂಪೂರ್ಣ ಗಮನ ಅಲ್ಲಿಯೇ ಇರಲಿದೆ. ಹಾಗಾಗಿ, ‘ರಾಮಾಯಣ’ ಚಿತ್ರಕ್ಕೆ ಅವರು ಎಷ್ಟು ಸಮಯ ಮೀಸಲಿಡುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ನಾವು ಗುಲಾಮರಲ್ಲ’: ಸರ್ಕಾರದ ವಿರುದ್ಧ ತಿರುಗಿಬಿದ್ದ ಸರ್ಕಾರಿ ಆಸ್ಪತ್ರೆ ವೈದ್ಯರು – Kannada News | KGMOA Protest: Karnataka Doctors Demand Rights, Threaten Indefinite Strike

ಬೆಂಗಳೂರ, ಮಾ.3: ಒಂದು ಕಡೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಮತ್ತೊಂದು ಕಡೆ ಗುತ್ತಿದಾರರು, ಇದೀಗ ಇವರ ಜತೆಗೆ ಸರ್ಕಾರಿ ವೈದ್ಯರು ಕೂಡ ಸೇರಿಕೊಂಡಿದ್ದಾರೆ, ಸರ್ಕಾರ ಇದೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (KGMOA) ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಗಳು ಸರ್ಕಾರದ ವಿರುದ್ಧ ಸಿಡಿದೆದ್ದಿವೆ. ಪದೇ ಪದೇ ಮನವಿ ಮಾಡಿದರೂ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ, ರಾಜ್ಯದಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ (CHC) ಹೊರರೋಗಿ ಸೇವೆ (OPD) ಸ್ಥಗಿತಗೊಳ್ಳಲಿದೆ. ವೈದ್ಯರು ಕಪ್ಪು ಪಟ್ಟಿ ಧರಿಸಿ ಕೇವಲ ತುರ್ತು ಸೇವೆಗಳನ್ನು ಮಾತ್ರ ನೀಡಲಿದ್ದಾರೆ. ಸರ್ಕಾರ ಸ್ಪಂದಿಸದಿದ್ದರೆ, ತುರ್ತು ಸೇವೆಗಳೂ ಸೇರಿದಂತೆ ಸಂಪೂರ್ಣವಾಗಿ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಮುಷ್ಕರವನ್ನು ಗಂಭೀರವಾಗಿ ಪರಿಗಣಿಸಿದ್ದು, “ಸಾರ್ವಜನಿಕರಿಗೆ ತೊಂದರೆಯಾದರೆ ಶಿಸ್ತು ಕ್ರಮ ಅಥವಾ ಕಾನೂನು ಕ್ರಮ (ESMA ಮಾದರಿ) ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ವೈದ್ಯರು “ನಾವು ಗುಲಾಮರಲ್ಲ, ನಮಗೂ ಗೌರವಯುತ ಬದುಕು ಬೇಕು” ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ

ವೈದ್ಯರ ಪ್ರಮುಖ ಬೇಡಿಕೆಗಳೇನು?

ಮುಂಬಡ್ತಿ ಮತ್ತು ಜ್ಯೇಷ್ಠತಾ ಪಟ್ಟಿ: ಕಳೆದ ಹಲವು ವರ್ಷಗಳಿಂದ ಬಾಕಿ ಇರುವ ವೈದ್ಯರ ಮುಂಬಡ್ತಿ (Promotion) ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಬೇಕು ಮತ್ತು ಜ್ಯೇಷ್ಠತಾ ಪಟ್ಟಿಯನ್ನು ಪರಿಷ್ಕರಿಸಬೇಕು.

ನೇಮಕಾತಿ ನಿಯಮಗಳ ತಿದ್ದುಪಡಿ: 1973 ರಿಂದ ಬದಲಾಗದ ವೃಂದ ಮತ್ತು ನೇಮಕಾತಿ ನಿಯಮಗಳನ್ನು (C&R Rules) ಪ್ರಸ್ತುತ ಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಬೇಕು.

ಔಷಧಿಗಳ ಕೊರತೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಸುಲಿನ್, ಆಂಟಿಬಯೋಟಿಕ್ಸ್ ಸೇರಿದಂತೆ ಅಗತ್ಯ ಔಷಧಿಗಳ ತೀವ್ರ ಕೊರತೆಯಿದ್ದು, ಇದನ್ನು ಕೂಡಲೇ ನೀಗಿಸಬೇಕು.

ಉನ್ನತ ವ್ಯಾಸಂಗಕ್ಕೆ ಅವಕಾಶ: ಸರ್ಕಾರಿ ವೈದ್ಯರು ಸ್ನಾತಕೋತ್ತರ (PG) ವ್ಯಾಸಂಗ ಮಾಡಲು ಇರುವ ನಿರ್ಬಂಧಗಳನ್ನು ಸಡಿಲಿಸಬೇಕು ಮತ್ತು ವೇತನ ಸಹಿತ ರಜೆ ನೀಡಬೇಕು.

ವೇತನ ಮತ್ತು ಭದ್ರತೆ: ಗುತ್ತಿಗೆ ಮತ್ತು ಎನ್.ಎಚ್.ಎಂ (NHM) ಸಿಬ್ಬಂದಿಗೆ ಉದ್ಯೋಗ ಭದ್ರತೆ ಹಾಗೂ ಪ್ರತಿ ತಿಂಗಳು ಮೊದಲ ವಾರದಲ್ಲೇ ವೇತನ ಪಾವತಿಸಬೇಕು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | 2026 T20 World Cup Semi Final: SA vs NZ Match Details, Live Stream, Date and Venue

2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ( 2026 T20 World Cup Semi-Final) ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ನಡುವೆ ನಡೆಯಲಿದೆ. ದಕ್ಷಿಣ ಆಫ್ರಿಕಾ ಸೂಪರ್ 8 ರ ಗ್ರೂಪ್ ಎ ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ನ್ಯೂಜಿಲೆಂಡ್ ಗ್ರೂಪ್ ಬಿ ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ ತಂಡವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಸೋತ ತಂಡಕ್ಕೆ ಟೂರ್ನಿಯಿಂದ ಗೇಟ್​ಪಾಸ ಸಿಗಲಿದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಸಕಲ ತಯಾರಿ ಮಾಡಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿದೆ. ಆದರೆ ಅದಕ್ಕೂ ಮುನ್ನ ಈ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ಆರಂಭವಾಗಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬಿತ್ಯಾದಿ ವಿವರಗಳನ್ನು ನಾವು ನೀಡಲಿದ್ದೇವೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಫೆಬ್ರವರಿ 4 ರಂದು ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್

ಉಭಯ ತಂಡಗಳು

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಿಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಅನ್ರಿಚ್ ನೋಕಿಯಾ, ಕ್ವೆನಾ ಮಫಕಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:39 pm, Tue, 3 March 26

Source link

ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ – Kannada News | They Giving problem to my family: sringeri congress mla TD Rajegowda Alleged with Tears Against Jeevaraj

ಚಿಕ್ಕಮಗಳೂರು, (ಮಾರ್ಚ್ 03): ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ ಎಂದು ಶೃಂಗೇರಿ ಶಾಸಕ ಶಾಸಕ ಟಿಡಿ ರಾಜೇಗೌಡ (sringeri congress mla TD Rajegowda) ಬಹಿರಂಗ ಕಾರ್ಯಕ್ರಮದಲ್ಲೇ ಗಳಗಳನೇ ಅತ್ತಿರುವ ಪ್ರಸಂಗ ನಡೆದಿದೆ. ಬಾಳೆಹೊನ್ನೂರಿನಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಿನ್ನೆ (ಮಾರ್ಚ್ 02) ಹಮ್ಮಿಕೊಂಡಿದ್ದ ಶೃಂಗೇರಿ ಕ್ಷೇತ್ರದ ರೈತರ, ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ನಡೆದ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿಡಿ ರಾಜೇಗೌಡ ಅವರು ಬಿಜೆಪಿ ಮಾಜಿ ಸಚಿವ ಡಿಎನ್‌ ಜೀವರಾಜ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇಬ್ಬರೂ ಮುಂದಿನ ಚುನಾವಣೆಗೆ ನಿಲ್ಲುವುದು ಬೇಡ ಎಂದು ಆಕ್ರೋಶ ಹೊರಹಾಕಿದ್ದಾರೆ.

ಜನಾಂದೋಲನ ಸಮಾವೇಶದಲ್ಲಿ ಕಣ್ಣೀರಿಟ್ಟ ಶಾಸಕ

ಮುಂದೆ ಚುನಾವಣೆಗೆ ಸ್ಪರ್ಧಿಸದಿದ್ದರೂ ಜೀವ ಕೊಟ್ಟ ಕ್ಷೇತ್ರದ ಜನರಿಗಾಗಿ ದುಡಿಯುತ್ತೇನೆ. ನನ್ನ ಜೀವ ತಿಂದಿದ್ದೀರ, ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ. ನಾನು ಚುನಾವಣೆಗೆ ನಿಲ್ಲುವುದಿಲ್ಲ. ನೀವು ಯಾರಾದರೂ ನಿಲ್ಲಿ ಎಂದು ಗದ್ಗದಿತರಾದ ರಾಜೇಗೌಡ, ಕೆಟ್ಟ ಮನಸ್ಥಿತಿಯ ಮನುಷ್ಯ ಕ್ಷೇತ್ರದಲ್ಲಿ ಮತ್ತೆ ಶಾಸಕನಾಗಬಾರದು. ಆದರೆ ಕ್ಷೇತ್ರಕ್ಕೆ ದೊಡ್ಡ ಮಾರಕ. ಯಾರ ಮನೆ ಹೆಣ್ಣು ಮಕ್ಕಳಿಗೆ ಏನು ಮಾಡುತ್ತಾರೋ ಗೊತ್ತಿಲ್ಲ. ಎಲ್ಲೂ ಮುಕ್ತವಾಗಿ ಯಾರೂ ಓಡಾಡುವಂತಿಲ್ಲ ಎಂದು ಮಾಜಿ ಶಾಸಕ ಡಿ ಎನ್ ಜೀವರಾಜ್ ಹೆಸರು ಹೇಳದೆಯೇ ಕಣ್ಣೀರಿಟ್ಟಿದ್ದಾರೆ.

ಮಾಜಿ ಎಂಎಲ್​​ಗೆ ಹಾಲಿ ಶಾಸಕ ಸವಾಲ್

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡುತ್ತಿದ್ದಾರೆ, ನಾನು ಈ ಸಮಾವೇಶದ ಮೂಲಕ ಒಂದು ಘೋಷಣೆ ಮಾಡುತ್ತಿದ್ದೇನೆ. ಈ ಕ್ಷೇತ್ರದಲ್ಲಿ ಜನರಿಗೆ ವಿನಾಕಾರಣ ತೊಂದರೆ ಕೊಡುತ್ತಾ, ಮಹಿಳೆಯರಿಗೆ ತೊಂದರೆ ಕೊಟ್ಟಿರುವುದನ್ನು ಮನದಟ್ಟು ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಲ್ಲ ಅಂತ ಘೋಷಣೆ ಮಾಡಲಿ ಎಂದು ಜೀವರಾಜ್ ಹೆಸರು ಹೇಳದೇ ಶಾಸಕ ರಾಜೇಗೌಡ ಸವಾಲು ಹಾಕಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಕೆಲಸದ ಸ್ಥಳದಲ್ಲಿ ಗೌರವ, ಪ್ರಗತಿ ಸಾಧಿಸಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: What should you do to gain respect and success in the workplace?

ವೃತ್ತಿ ಜೀವನದಲ್ಲಿ ಯಶಸ್ಸಿನ  (success) ಮೆಟ್ಟಿಲೇರಬೇಕು ಎಂಬ ಕನಸ್ಸು ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ,  ಅರ್ಹವಾದ ಗೌರವ ಮತ್ತು ಪ್ರಗತಿ ಸಿಗುವುದಿಲ್ಲ. ಯಶಸ್ಸು ಸಾಧಿಸಲು, ಕೆಲಸದ ಸ್ಥಳದಲ್ಲಿ ಗೌರವ ಗಳಿಸಲು ಕೇವಲ ಕಠಿಣ ಪರಿಶ್ರಮ ಸಾಕಾಗುವುದಿಲ್ಲ, ನಿಮ್ಮ ಬುದ್ಧಿವಂತಿಕೆ ಮತ್ತು ಒಂದಷ್ಟು ನಡವಳಿಕೆಗಳನ್ನು ಅಳವಡಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ಆಚಾರ್ಯ ಚಾಣಕ್ಯರು ಶತಮಾನಗಳ ಹಿಂದೆಯೇ ತಿಳಿಸಿಕೊಟ್ಟಿದ್ದಾರೆ. ನೀವು ಸಹ ಕೆಲಸದಲ್ಲಿ ಯಶಸ್ಸನ್ನು ಗಳಿಸಲು ಬಯಸಿದರೆ ಚಾಣಕ್ಯರ ಈ ಕೆಲವು ರಹಸ್ಯ ಮಂತ್ರಗಳನ್ನು ತಪ್ಪದೆ ಪಾಲಿಸಿ.

ಕೆಲಸದ ಸ್ಥಳದಲ್ಲಿ ಗೌರವ ಗಳಿಸಲು ಪಾಲಿಸಬೇಕಾದ ತತ್ವಗಳು:

ನಮ್ಮ ದೌರ್ಬಲ್ಯವನ್ನು ಯಾರಿಗೂ ಹೇಳಬೇಡಿ: ಆಚಾರ್ಯ ಚಾಣಕ್ಯ ಹೇಳುವಂತೆ, ಒಬ್ಬ ವ್ಯಕ್ತಿಯು ತನ್ನ ದೌರ್ಬಲ್ಯಗಳನ್ನು ಎಂದಿಗೂ ಇತರರಿಗೆ ಬಹಿರಂಗಪಡಿಸಬಾರದು. ನೀವು ಕಚೇರಿಯಲ್ಲಿ ನಿಮ್ಮ ನ್ಯೂನತೆಗಳನ್ನು ಬಹಿರಂಗವಾಗಿ ಹೇಳಿದರೆ, ನಿಮ್ಮ ವಿರೋಧಿಗಳು ಅವುಗಳನ್ನು ಬಳಸಿಕೊಳ್ಳಬಹುದು. ಹಾಗಾಗಿ ನಿಮ್ಮ ದೌರ್ಬಲ್ಯಗಳ ಬಗ್ಗೆ ಕೆಲಸದ ಸ್ಥಳದಲ್ಲಿ ಯಾರೊಂದಿಗೂ ಹಂಚಿಕೊಳ್ಳಬೇಡಿ. ಬದಲಿಗೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯಗಳನ್ನು ನಂಬಿರಿ.

ಇತರರ ತಪ್ಪುಗಳಿಂದ ಕಲಿಯಿರಿ: ಆಚಾರ್ಯ ಚಾಣಕ್ಯರು  ಹೇಳುವಂತೆ ಬುದ್ಧಿವಂತ ವ್ಯಕ್ತಿ ಎಂದರೆ ಆತ ಇತರರ ತಪ್ಪುಗಳಿಂದ ಕಲಿಯುವವನು. ಕಚೇರಿ ವಾತಾವರಣವನ್ನು ಅರ್ಥಮಾಡಿಕೊಳ್ಳಿ, ಇತರರು ವಿಫಲರಾದಾಗ ಅದಕ್ಕೆ ಕಾರಣಗಳೇನು ಎಂಬುದನ್ನು ಗಮನಿಸಿ ಮತ್ತು ಅದೇ ತಪ್ಪುಗಳನ್ನು  ನೀವು ಪುನರಾವರ್ತಿಸುವುದನ್ನು ತಪ್ಪಿಸಿ.

ನಿಮ್ಮ ಯೋಜನೆಗಳನ್ನು ರಹಸ್ಯವಾಗಿಡಿ: ನಿಮ್ಮ ಕೆಲಸ ಅಥವಾ ಯೋಜನೆ ಪೂರ್ಣಗೊಳ್ಳುವವರೆಗೆ ಅದರ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬೇಡಿ. ಇದರಿಂದ ನಿಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ನಿಮ್ಮ ಯೋಜನೆಗಳನ್ನು ಹಂಚಿಕೊಳ್ಳಲೇಬೇಕೆಂದರೆ ನಿಮ್ಮ ಮುಂದಿನ ಹೆಜ್ಜೆಗಳನ್ನು ವಿಶ್ವಾಸಾರ್ಹ ವ್ಯಕ್ತಿಗಳೊಂದಿಗೆ ಮಾತ್ರ ಹಂಚಿಕೊಳ್ಳಿ.

ಶಿಸ್ತು ಮತ್ತು ಸಮಯಕ್ಕೆ ಗೌರವ: ಸಮಯವನ್ನು ಗೌರವಿಸದವರಿಗೆ ಯಶಸ್ಸು ಸಿಗುವುದಿಲ್ಲ. ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದು ಮತ್ತು ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಗಳನ್ನು ಪೂರ್ಣ ಗೊಳಿಸುವುದು, ಇದು ನಿಮಗೆ ವೃತ್ತಿಪರ ಇಮೇಜ್ ನೀಡುತ್ತದೆ. ಅಷ್ಟೇ ಅಲ್ಲದೆ ಇದು ನಿಮಗೆ ಕೆಲಸದ ಸ್ಥಳದಲ್ಲಿ ಯಶಸ್ಸು ಮತ್ತು ಗೌರವವನ್ನು ತಂದುಕೊಡುತ್ತದೆ.

ಇದನ್ನೂ ಓದಿ: ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬಾರದು

ಕೆಲಸ ಪ್ರಾರಂಭಿಸುವ ಮೊದಲು ನಿಮ್ಮನ್ನು ನೀವು  ಕೇಳಬೇಕಾದ 3 ಪ್ರಶ್ನೆಗಳು:

ಚಾಣಕ್ಯನ ಪ್ರಕಾರ, ಯಾವುದೇ ದೊಡ್ಡ ಯೋಜನೆ ಅಥವಾ ಕೆಲಸವನ್ನು ಕೈಗೆತ್ತಿಕೊಳ್ಳುವ ಮೊದಲು, ನಿಮ್ಮನ್ನು ನೀವು ಮೂರು ಪ್ರಶ್ನೆಗಳನ್ನು ಕೇಳಿಕೊಳ್ಳಿ.

  • ನಾನು ಈ ಕೆಲಸ ಏಕೆ ಮಾಡುತ್ತಿದ್ದೇನೆ?
  • ಇದರ ಫಲಿತಾಂಶ ಏನಾಗುತ್ತದೆ?
  • ನಾನು ಇದರಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆಯೇ?

ಈ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರಗಳು ನಿಮ್ಮಲ್ಲಿ ಇದ್ದಾಗ ಮಾತ್ರ ನೀವು ಮುಂದುವರಿಯಬೇಕು. ಈ ಸ್ಪಷ್ಟತೆಯು ನಿಮ್ಮನ್ನು ಕಚೇರಿಯಲ್ಲಿ ಹೆಚ್ಚು ಗಂಭೀರವಾಗಿ ಮತ್ತು ಸಂಯಮದಿಂದ ಕಾಣುವಂತೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ.

ಈ ವಿಮಾನದಲ್ಲಿ ಒಟ್ಟು 350 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ಅಧಿಕಾರಿಗಳು ಸಂತ್ರಸ್ತ ಪ್ರಯಾಣಿಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ರಾತ್ರಿ ಅಬುಧಾಬಿಯಿಂದಲೂ 213 ಪ್ರಯಾಣಿಕರು ಬೆಂಗಳೂರಿಗೆ ಬಂದಿಳಿದಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ಈ ‘ರೆಸ್ಕ್ಯೂ ಮಿಷನ್’ ಸಾಗುತ್ತಿದೆ. ಯುದ್ಧದ ಭೀತಿಯಿಂದಾಗಿ ಆತಂಕದಲ್ಲಿದ್ದ ಪ್ರಯಾಣಿಕರು ಬೆಂಗಳೂರಿನ ಮಣ್ಣಿಗೆ ಕಾಲಿಡುತ್ತಿದ್ದಂತೆ ನಿಟ್ಟುಸಿರು ಬಿಟ್ಟರು. ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದ ಕುಟುಂಬ ಸದಸ್ಯರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ ಮೌಲಾನಾ ಹಸನ್ ಅಲಿ

ಕಳೆದ ರಾತ್ರಿಯಿಂದ ಇಲ್ಲಿಯವರೆಗೆ 1,053 ಪ್ರಯಾಣಿಕರು ಆಗಮಿಸಿದ್ದಾರೆ. ಅಬುಧಾಬಿಯಿಂದ ಮೊದಲ ವಿಮಾನದಲ್ಲಿ ಆಗಮಿಸಿದ್ದ 213 ಜನ ಬಂದಿದ್ದರು. ಮುಂಜಾನೆ ದುಬೈನಿಂದ ಆಗಮಿಸಿದ್ದ ವಿಮಾನದಲ್ಲಿ 490 ಪ್ರಯಾಣಿಕರು ಇದ್ದರು. ಇದೀಗ ದುಬೈನಿಂದ ಬಂದಿಳಿದ ವಿಮಾನದಲ್ಲಿ 350 ಜನರ ಆಗಮನ ಆಗಿದೆ. ಇನ್ನು ಈ ಪ್ರಯಾಣಿಕರನ್ನು ಕೆಐಎಬಿ ಸಿಬ್ಬಂದಿಗಳು ಆತ್ಮೀಯತೆಯಿಂದ ಬರಮಾಡಿಕೊಂಡಿದ್ದಾರೆ. ಇನ್ನು ಪ್ರಯಾಣಿಕರನ್ನು ಅವರವರ ಮನೆಗಳಿಗೆ ಕಳುಹಿಸಿದ ಕೆಲಸವನ್ನೂ ಕೂಡ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version