ನಟಿ ಶಿಲ್ಪಾ ಶೆಟ್ಟಿ ಏಕಾಏಕಿ ಸಿಟ್ಟಾಗಿದ್ದೇಕೆ? ಇಲ್ಲಿದೆ ವಿವರ – Kannada News | Fake Statement on Reservation Goes Viral: Actress Shilpa Shetty Furious Over Fake Posts

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರಿನಲ್ಲಿ ಹರಡಲಾಗುತ್ತಿರುವ ಜಾತಿ ಮೀಸಲಾತಿ ಕುರಿತಾದ ವಿವಾದಾತ್ಮಕ ಪೋಸ್ಟ್‌ಗಳ ವಿರುದ್ಧ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಪೋಸ್ಟ್‌ಗಳಲ್ಲಿ ಉಲ್ಲೇಖಿಸಲಾಗಿರುವ ಮಾತುಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ. ಅದೆಲ್ಲವೂ ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ದಾರಿತಪ್ಪಿಸುವ ಇಂತಹ ವದಂತಿಗಳನ್ನು ಯಾರೂ ನಂಬಬಾರದು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವೈದ್ಯರ ಚಿಕಿತ್ಸೆ ಹೆಸರಲ್ಲಿ ಹರಡಲಾಗಿತ್ತು ಸುಳ್ಳು ಸುದ್ದಿ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್…

Read More

ಫಿಲ್ಮ್​ಫೇರ್: ಲಂಕೇಶ್, ಇಂದ್ರಜಿತ್ ಬಳಿಕ ಸಮರ್ಜಿತ್​ಗೂ ಒಲಿದ ಪ್ರತಿಷ್ಠಿತ ಪ್ರಶಸ್ತಿ – Kannada News | Samarjit Lankesh gets Best Debut Actor Filmfare award for Gowri Movie

ಇತ್ತೀಚೆಗೆ ಕೇರಳದ ಕೊಚ್ಚಿಯಲ್ಲಿ 70ನೇ ಫಿಲ್ಮ್‌ಫೇರ್ ಪ್ರಶಸ್ತಿ (Filmfare awards) ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಯಿತು. ‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಸಮರ್ಜಿತ್‍ ಲಂಕೇಶ್‍ (Samarjit Lankesh) ಅವರು ‘ಅತ್ಯುತ್ತಮ ನವನಟ’ ಪ್ರಶಸ್ತಿ ಪಡೆದುಕೊಂಡರು. ವಿಶೇಷ ಏನೆಂದರೆ, ಲಂಕೇಶ್‍ ಕುಟುಂಬಕ್ಕೆ ಸಿಗುತ್ತಿರುವ ಮೂರನೆಯ ಫಿಲ್ಮ್​ಫೇರ್ ಪ್ರಶಸ್ತಿ ಇದು. ಈ ಮೊದಲು ಲಂಕೇಶ್ ಮತ್ತು ಇಂದ್ರಜಿತ್ ಲಂಕೇಶ್ ಅವರು ಕೂಡ ಫಿಲ್ಮ್​ಫೇರ್ ಪ್ರಶಸ್ತಿ ಪಡೆದಿದ್ದರು. ಕನ್ನಡದ ಜನಪ್ರಿಯ ಸಾಹಿತಿ ಹಾಗೂ ‘ಲಂಕೇಶ್…

Read More

SSLC Exam 2 Time Table: 10ನೇ ತರಗತಿಯಲ್ಲಿ ಫೇಲ್ ಆದವರಿಗೆ ಮತ್ತೊಂದು ಚಾನ್ಸ್: ಪರೀಕ್ಷೆ-2 ವೇಳಾಪಟ್ಟಿ ಪ್ರಕಟ – Kannada News | Karnataka SSLC exam 2 time table Announced By KSEAB, here Is date And Fee details

ಬೆಂಗಳೂರು, (ಏಪ್ರಿಲ್ 23): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2026)   ಪ್ರಕಟವಾಗಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.94.10 ಫಲಿತಾಂಶ ಬಂದಿದೆ. ಇನ್ನು ಜಿಲ್ಲೆಗಳಲ್ಲಿ 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಕೊನೆ ಸ್ಥಾನದಲ್ಲಿದೆ. ಇನ್ನು ಪಾಸಾದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮುಂದೆ ಯಾವ ಕಾಲೇಜಿ ಏನು ಅಂತೆಲ್ಲಾ ಚರ್ಚೆಯಲ್ಲಿ ತೊಡಗಿದ್ದಾರೆ….

Read More

IPL 2026 Final: ಟಾಸ್ ಸೋತರೆ ಏನಾಗಲಿದೆ? ಗೆದ್ದರೆ ಏನು ಆಯ್ಕೆ ಮಾಡಬೇಕು?

ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಮೇ 31) ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯ ಜರುಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆಲ್ಲುವ ತಂಡ ಏನನ್ನು ಆಯ್ಕೆ ಮಾಡಿಕೊಳ್ಳಬೇಕು? ಟಾಸ್ ಸೋತರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ನರೇಂದ್ರ ಮೋದಿ ಸ್ಟೇಡಿಯಂ ಪಿಚ್‌ನ ಗುಣಲಕ್ಷಣಗಳು: ಕೆಂಪು ಮತ್ತು ಕಪ್ಪು…

Read More

ಮಗಳ ಸರ್ಕಾರಿ ನೌಕರಿಗಾಗಿ ಸಾಹುಕಾರ್ ಅಕ್ರಮ ಎಸಗಿರೋದು ಅಕ್ಷಮ್ಯ ಅಪರಾಧ; ಕೆಪಿಎಸ್‌ಸಿ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಲು ಯತ್ನಾಳ್ ಆಗ್ರಹ – Kannada News | Karnataka KPSC Fraud: Chairman Sahukar Faces Nepotism Charges, HC Denies Stay

ಬೆಂಗಳೂರು, ಜು.16: ಲಕ್ಷಾಂತರ ಯುವಕರ ಭವಿಷ್ಯವನ್ನು ನಿರ್ಧರಿಸುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರು ತಮ್ಮ ಮಗಳಿಗೆ ಸರ್ಕಾರಿ ಹುದ್ದೆ ಕೊಡಿಸಲು ನಕಲಿ ಆದಾಯ ಪ್ರಮಾಣ ಪತ್ರ ಸೃಷ್ಟಿಸಿ ಅಕ್ರಮ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಈ ಕಾರಣಕ್ಕೆ ಕೆಪಿಎಸ್​​​ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿರುವ ರಾಜ್ಯಪಾಲರ ಆದೇಶದ ವಿರುದ್ಧ ಇದೀಗ ಕಾನೂನು ಹೋರಾಟ ನಡೆಯುತ್ತಿದೆ. ಇದರ ಹೊತ್ತಿನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್​​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ…

Read More

ಇಲಿಯಾನಾ ದಕ್ಷಿಣ ಭಾರತ ಚಿತ್ರರಂಗದಿಂದ ಬ್ಯಾನ್ ಆಗಿದ್ದೇಕೆ? ರಹಸ್ಯ ಬಿಚ್ಚಿಟ್ಟ ನಿರ್ಮಾಪಕ – Kannada News | Why Ileana D’Cruz left South India film Industry

ಇಲಿಯಾನ ಡಿ ಕ್ರೂಜ್ (ileana d’cruz) , ಒಂದು ಸಮಯದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗಿನಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದಿದ್ದರು, ತೆಲುಗಿನ ಹಲವಾರು ಸ್ಟಾರ್ ನಟರುಗಳೊಟ್ಟಿಗೆ ನಟಿಸಿದ್ದರು. ಅವರ ಸಪೂರ ದೇಹ, ಕೋಲು ಮುಖ, ಒಳ್ಳೆಯ ನಟನೆ ಅವರಿಗೆ ಸಾಕಷ್ಟು ಅಭಿಮಾನಿಗಳು ಮತ್ತು ಅವಕಾಶಗಳನ್ನು ತಂದುಕೊಟ್ಟಿತ್ತು. ಒಟ್ಟೊಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದ ಇಲಿಯಾನಾ ಡಿ ಕ್ರೂಜ್, ಇದ್ದಕ್ಕಿಂತಲೇ ತೆಲುಗು ಚಿತ್ರರಂಗದಿಂದ ಮರೆಯಾದರು. ಇದಕ್ಕೆ ಕಾರಣ ಏನೆಂದು ಇದೀಗ ನಿರ್ಮಾಪಕರೊಬ್ಬರು ಹೆಳಿದ್ದಾರೆ. ಇಲಿಯಾನಾ…

Read More

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ – Kannada News | Manchu Manoj is getting ready to play villain in Nandamuri Balakrishna’s movie

ನಂದಮೂರಿ ಬಾಲಕೃಷ್ಣ (Nandamuri Balakrishna) ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ. ಇಂದು (ಮೇ 20) ಮಂಚು ಮನೋಜ್ ಅವರ ಜನ್ಮದಿನವಾಗಿದ್ದು, ವಿಶೇಷ ಸಂದರ್ಭದಲ್ಲಿ ಚಿತ್ರತಂಡವು ಈ ಅಧಿಕೃತ…

Read More

FIFA World Cup 2026: ಪೆನಾಲ್ಟಿ ಶೂಟೌಟ್‌ನಲ್ಲಿ 2 ಬಲಿಷ್ಠ ತಂಡಗಳು ಕಿಕ್ ಔಟ್..! – Kannada News | Germany and Netherlands Knocked Out in FIFA World Cup 2026

ಫಿಫಾ ವಿಶ್ವಕಪ್​ ರೌಂಡ್ ಆಫ್ 32 ಸುತ್ತಿನಲ್ಲಿ ಭರ್ಜರಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯೊಂದಿಗೆ ವಿಶ್ವಕಪ್ ಅಂಗಳದ ಎರಡು ಬಲಿಷ್ಠ ತಂಡಗಳಾದ ಜರ್ಮನಿ ಹಾಗೂ ನೆದರ್​ಲ್ಯಾಂಡ್ಸ್ ತಂಡಗಳು ಹೊರಬಿದ್ದಿವೆ. ಸದಾ ವಿಶ್ವಕಪ್ ರೇಸ್‌ನಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಈ ಯುರೋಪಿಯನ್ ಬಲಿಷ್ಠ ತಂಡಗಳಿಗೆ ಕ್ರಮವಾಗಿ ಪರಾಗ್ವೆ ಮತ್ತು ಮೊರಾಕೊ ತಂಡಗಳು ಸೋಲುಣಿಸಿವೆ. ಜರ್ಮನಿಗೆ ಬಿಗ್ ಶಾಕ್! ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಜರ್ಮನಿ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಸೋತಿರುವುದು ಇದೇ ಮೊದಲು. ಫಿಲಡೆಲ್ಫಿಯಾ ಸ್ಟೇಡಿಯಂ ನಲ್ಲಿ ನಡೆದ ಈ ಪಂದ್ಯದಲ್ಲಿ ಪರಾಗ್ವೆ…

Read More

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ, 11 ಮಕ್ಕಳು ಸೇರಿ 13 ಮಂದಿ ಸಾವು – Kannada News

ಕಾಬೂಲ್, ಜೂನ್ 10: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ(Airstrike) ನಡೆಸಿದೆ. ಈ ಘಟನೆಯಲ್ಲಿ 11 ಮಂದಿ ಮಕ್ಕಳು ಸೇರಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯ ಏಷ್ಯಾದ ಪ್ರಾದೇಶಿಕ ಸ್ಥಿರತೆ ಮತ್ತು ಗಡಿ ಭದ್ರತೆಯ ದೃಷ್ಟಿಯಿಂದ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಗಡಿ ಪ್ರದೇಶಗಳಲ್ಲಿ ಇತ್ತೀಚೆಗೆ ಕಂಡುಬಂದಿರುವ ಮಿಲಿಟರಿ ಚಟುವಟಿಕೆಗಳು ಜಾಗತಿಕ ಗಮನ ಸೆಳೆದಿವೆ. ಗಡಿಯಲ್ಲಿ ಶಾಂತಿ ಮೂಡಿಸಲು ಮತ್ತು ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಲು ಅಂತಾರಾಷ್ಟ್ರೀಯ…

Read More

ಕಲೆ, ಪಾಚಿ ಕಟ್ಟಿದ ಪ್ಲಾಸ್ಟಿಕ್‌ ಬಕೆಟ್‌ಗಳನ್ನು ನಿಮಿಷದಲ್ಲೇ ಕ್ಲೀನ್‌ ಮಾಡುತ್ತೆ ಈ ಮನೆಮದ್ದು – Kannada News | These home remedies can help you clean stains stuck on plastic buckets and mugs

ಸಾಮಾನ್ಯವಾಗಿ ಪ್ರತಿ ಮನೆಗಳಲ್ಲೂ ಬಾತ್‌ರೂಮ್‌ಗಳಲ್ಲಿ ಪ್ಲಾಸ್ಟಿಕ್‌ ಬಕೆಟ್‌ (plastic buckets), ಮಗ್‌ಗಳನ್ನೇ ಬಳಸುವುದು. ಇವುಗಳ ನಿರಂತರ ಬಳಕೆಯಿಂದಾಗಿ, ಬಕೆಟ್‌ಗಳ ಹೊಳಪು ಕಳೆದುಹೋಗುತ್ತದೆ ಮತ್ತು ಅದರ ಮೇಲೆ ಹಳದಿ ಬಣ್ಣದ ಕೊಳೆ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ, ಬಕೆಟ್ ತುಂಬಾ ಕೊಳಕಾಗಿ ಕಾಣುತ್ತದೆ. ಹಾಗಾಗಿ ಇವುಗಳನ್ನು ಸ್ವಚ್ಛಗೊಳಿಸಲು ಹೆಚ್ಚಿನವರು ದುಬಾರಿ ಕ್ಲೀನರ್‌ಗಳ ಮೊರೆ ಹೋಗುತ್ತಾರೆ. ಆದರೆ ಇವುಗಳು ಅಷ್ಟು ಪರಿಣಾಮಕಾರಿಯಾಗಿ ಬಕೆಟ್‌ಗಳ ಕೊಳೆಗಳನ್ನು ತೆಗೆದುಹಾಕುವುದಿಲ್ಲ. ಬಕೆಟ್‌ನ ಮೂಲ ಹೊಳಪು ಹೆಚ್ಚಾಗಿ ಹಿಂತಿರುಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಈ ಕೆಲವು ಸರಳ ಮನೆಮದ್ದುಗಳನ್ನು ಬಳಸಿಕೊಂಡು…

Read More