ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 30: ಸಿಎಲ್​​ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್​​ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹೀಗಾಗಿ ಸಿಎಲ್​​ಪಿ ಸಭೆಗೂ ಮೊದಲೇ ರಾಜ್ಯಪಾಲರನ್ನು ಡಿಕೆಶಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ. ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ (Coordination Committee)’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.

ಮುಖ್ಯಾಂಶಗಳು

  • ‘ಸಮನ್ವಯ ಸಮಿತಿ’ ರಚಿಸುವಂತೆ ಸಿದ್ದರಾಮಯ್ಯ ಕೋರಿದ್ದ ಮನವಿಯನ್ನು ತಳ್ಳಿಹಾಕಿದ ಹೈಕಮಾಂಡ್.
  • ಸಮನ್ವಯಕ್ಕೆ ಕೆಪಿಸಿಸಿ ಅಧ್ಯಕ್ಷರೇ ಇದ್ದಾರೆ ಎಂದು ಸಂದೇಶ.
  • ಸಿದ್ದರಾಮಯ್ಯ ಅವರ ಮೂಲಕವೇ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಲು ಹೈಕಮಾಂಡ್ ತೀರ್ಮಾನ.

ಸಿದ್ದರಾಮಯ್ಯ ಮನವಿ ಏನು? ತಿರಸ್ಕರಿಸಲು ಕಾರಣವೇನು?

ನೂತನ ಸಚಿವ ಸಂಪುಟದಲ್ಲಿ ಸಾಕಷ್ಟು ಸಂಖ್ಯೆಯ ಹಿರಿಯ ಸಚಿವರು ಇರಲಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಪಕ್ಷದ ನಡುವೆ ಯಾವುದೇ ರೀತಿಯ ಗೊಂದಲಗಳು ಉಂಟಾಗಬಾರದು ಎನ್ನುವ ದೂರದೃಷ್ಟಿಯಿಂದ ಸಿದ್ದರಾಮಯ್ಯ ಸಮನ್ವಯ ಸಮಿತಿಯ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ. ಆದರೆ, ಈ ಮನವಿಯನ್ನು ನಿರಾಕರಿಸಿರುವ ಕಾಂಗ್ರೆಸ್ ಹೈಕಮಾಂಡ್, ‘ರಾಜ್ಯದಲ್ಲಿ ಯಾವುದೇ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿಲ್ಲ. ಕಾಂಗ್ರೆಸ್ ಪಕ್ಷವೇ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಿರುವುದರಿಂದ ಪ್ರತ್ಯೇಕ ಸಮನ್ವಯ ಸಮಿತಿಯ ಅಗತ್ಯವೇ ಇಲ್ಲ. ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯದ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರೇ ನಿಭಾಯಿಸಲಿದ್ದಾರೆ’ ಎಂದು ಸ್ಪಷ್ಟಪಡಿಸಿದೆ. ಸಿಎಂ ಪಟ್ಟದಿಂದ ಕೆಳಗಿಳಿಯುತ್ತಿದ್ದಂತೆಯೇ ಹೈಕಮಾಂಡ್ ಸಿದ್ದರಾಮಯ್ಯ ಅವರ ಮಾತಿಗೆ ಮೊದಲಿನಷ್ಟು ಮನ್ನಣೆ ನೀಡುತ್ತಿಲ್ಲವೇ ಎಂಬ ಅನುಮಾನಕ್ಕೆ ಇದು ಆಸ್ಪದ ಮಾಡಿಕೊಟ್ಟಿದೆ.

ಕಾವೇರಿ ನಿವಾಸಕ್ಕೆ ನಾಯಕರ ದಂಡು

ಈ ಎಲ್ಲಾ ರಾಜಕೀಯ ವಿದ್ಯಮಾನಗಳ ನಡುವೆಯೂ ಬೆಂಗಳೂರಿನ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಶಾಸಕರು ಮತ್ತು ಪ್ರಮುಖ ನಾಯಕರ ಭೇಟಿ ಮುಂದುವರಿದಿದೆ. ಹಿರಿಯ ನಾಯಕ ಕೆಜೆ ಜಾರ್ಜ್, ಶಾಸಕ ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕಿಸ್ ಬಾನು ಸೇರಿದಂತೆ ಹಲವು ಪ್ರಮುಖರು ಕಾವೇರಿ ನಿವಾಸಕ್ಕೆ ಧಾವಿಸಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಇಂದು ಸಂಜೆ ಸಿಎಲ್‌ಪಿ ಸಭೆ

ಇಂದು ಸಂಜೆ 4 ಗಂಟೆಗೆ ಕರೆಯಲಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಹೊಸ ಇತಿಹಾಸ ಬರೆಯಲು ಹೈಕಮಾಂಡ್ ಮುಂದಾಗಿದೆ. ಶಿಷ್ಟಾಚಾರದಂತೆ ಶಾಸಕಾಂಗ ಪಕ್ಷದ ನೂತನ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ಶಾಸಕರ ಮೇಲಿದ್ದರೂ, ಯಾವುದೇ ಭಿನ್ನಾಭಿಪ್ರಾಯ ಮೂಡದಂತೆ ತಡೆಯಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ. ಸಭೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರ ಮೂಲಕವೇ ಡಿಕೆ ಶಿವಕುಮಾರ್ ಅವರ ಹೆಸರನ್ನು ನೂತನ ಸಿಎಲ್‌ಪಿ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಲು ಹೈಕಮಾಂಡ್ ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ಅವರು ಹೆಸರು ಸೂಚಿಸಿದ ಬಳಿಕ ಅದಕ್ಕೆ ಶಾಸಕರು ಅಧಿಕೃತ ಅನುಮೋದನೆ ನೀಡಲಿದ್ದಾರೆ. ಪ್ರಸ್ತಾವನೆ ಪ್ರಕ್ರಿಯೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಧನ್ಯವಾದ ಭಾಷಣ ಮಾಡಲಿದ್ದಾರೆ. ತದನಂತರ ನೂತನ ಶಾಸಕಾಂಗ ಪಕ್ಷದ ನಾಯಕರು ಸರ್ಕಾರ ರಚನೆಯ ಹಕ್ಕು ಮಂಡಿಸಲು ಲೋಕಭವನ (ರಾಜಭವನ) ಕ್ಕೆ ಅಧಿಕೃತ ಮಾಹಿತಿ ರವಾನಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ (Ajith Kumar) ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ (ಮಾರ್ಚ್ 24, 2023) ಅಜಿತ್ ಅವರ ತಂದೆ ಪಿ. ಸುಬ್ರಮಣ್ಯಂ ಅವರು ತಮ್ಮ 85ನೇ ವಯಸ್ಸಿನಲ್ಲಿಯೇ ನಿಧನರಾಗಿದ್ದರು.

ಕಾರ್​ ರೇಸ್ ಹಿನ್ನೆಲೆಯಲ್ಲಿ ದುಬೈನಲ್ಲಿದ್ದ ನಟ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈಗೆ ಹಿಂತಿರುಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಪಾಲವಾಕ್ಕಂನಲ್ಲಿರುವ ಅಜಿತ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ತಾಯಿಯ ಜೊತೆ ಕೊನೆಯದಾಗಿ ಮಾತನಾಡಲು ಅಜಿತ್​ಗೆ ಸಾಧ್ಯವಾಗಲೇ ಇಲ್ಲ.

ಅಜಿತ್ ತಾಯಿಯ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಅಜಿತ್ ಹಾಗೂ ಅವರ ಕುಟುಂಬಕ್ಕೆ ನನ್ನ ಸಾಂತ್ವನ’ ಎಂದು ಕಮಲ್ ಹಾಸನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್, ಬಿಜೆಪಿ ನಾಯಕ ಕೆ. ಅಣ್ಣಾಮಲೈ ಸೇರಿದಂತೆ ಅನೇಕರು ಅಜಿತ್ ತಾಯಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಅಜಿತ್ ಕೊನೆಯದಾಗಿ ಕಾಣಿಸಿಕೊಂಡಿದ್ದು ಕಳೆದ ವರ್ಷ ರಿಲೀಸ್ ಆದ ‘ವಿದುಮುಯಾರ್ಚಿ’ ಹಾಗೂ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ. ಸದ್ಯಕ್ಕೆ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅವರಿಗೆ ಕಾರ್ ರೇಸ್ ಎಂದರೆ ಇಷ್ಟ. ಅವರು ತಮ್ಮದೇ ತಂಡ ಆರಂಭಿಸಿದ್ದು, ಇದರಲ್ಲೇ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:26 pm, Sat, 30 May 26

Source link

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 404 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ಪೊಲೀಸ್ ಮತ್ತು ರಕ್ಷಣಾ ಇಲಾಖೆಯ ಉದ್ಯೋಗಗಳಿಗಾಗಿ ಕಾಯುತ್ತಿರುವ ದೇಶದ ಯುವಕ-ಯುವತಿಯರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಶಸ್ತ್ರ ಸೀಮಾ ಬಲ್ (SSB), ಕ್ರೀಡಾ ಕೋಟಾದಡಿಯಲ್ಲಿ (Sports Quota) ಹೆಚ್ಚಿನ ಸಂಖ್ಯೆಯ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 404 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ ಅರ್ಹ ಕ್ರೀಡಾಪಟುಗಳು ಈ ಉತ್ತಮ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದವರಿಗೆ ಆಕರ್ಷಕ ಸಂಬಳ ಮತ್ತು ಭತ್ಯೆಗಳೊಂದಿಗೆ ಕೇಂದ್ರ ಸರ್ಕಾರಿ ಕೆಲಸ ಲಭಿಸಲಿದೆ.

ಹುದ್ದೆಗಳಿಗೆ ವಿವಿಧ ಕ್ರೀಡಾ ಹಿನ್ನೆಲೆ:

ಈ ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ವಿವಿಧ ಕ್ರೀಡಾ ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಾಲಿಬಾಲ್, ಕಬಡ್ಡಿ, ಅಥ್ಲೆಟಿಕ್ಸ್, ಶೂಟಿಂಗ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಫುಟ್‌ಬಾಲ್, ಹಾಕಿ, ಈಜು, ಕುಸ್ತಿ, ಯೋಗಾಸನ, ಜೂಡೋ, ಟೇಕ್ವಾಂಡೋ, ಪವರ್‌ಲಿಫ್ಟಿಂಗ್ ಸೇರಿದಂತೆ ಇನ್ನು ಪ್ರಮುಖ ಕ್ರೀಡಾ ವಿಭಾಗಗಳ ಕ್ರೀಡಾಪಟುಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಹತೆ:

ವಿದ್ಯಾರ್ಹತೆಯ ವಿಷಯಕ್ಕೆ ಬಂದರೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಅಭ್ಯರ್ಥಿಗಳು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ರಾಜ್ಯ ಅಥವಾ ದೇಶವನ್ನು ಪ್ರತಿನಿಧಿಸಿರಬೇಕು. ಹಿರಿಯ ಅಥವಾ ಕಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಅಥವಾ ‘ಖೇಲೋ ಇಂಡಿಯಾ’ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯಸ್ಸು ಮತ್ತು ಮೀಸಲಾತಿ ವಿವರ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 23 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಾವಳಿಗಳನ್ವಯ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ದೈಹಿಕ ಅರ್ಹತೆಗಳ ವಿಷಯದಲ್ಲಿ, ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ 170 ಸೆಂ.ಮೀ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 157 ಸೆಂ.ಮೀ ಎತ್ತರ ನಿಗದಿಪಡಿಸಲಾಗಿದೆ. ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ಎತ್ತರದಲ್ಲಿ ಸಡಿಲಿಕೆ ಇರಲಿದ್ದು, ಪುರುಷ ಅಭ್ಯರ್ಥಿಗಳಿಗೆ ಎದೆಯ ಅಳತೆಯ ನಿರ್ದಿಷ್ಟ ಮಾನದಂಡಗಳು ಅನ್ವಯಿಸುತ್ತವೆ. ಜೊತೆಗೆ ಅಭ್ಯರ್ಥಿಗಳ ಬಿಎಂಐ (BMI) 18 ರಿಂದ 25 ರ ನಡುವೆ ಇರಬೇಕಾಗುತ್ತದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಆಕರ್ಷಕ ಮೂಲ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,700 ರಿಂದ ರೂ. 69,100 ರವರೆಗೆ ಆಕರ್ಷಕ ಮೂಲ ವೇತನದೊಂದಿಗೆ ಕೇಂದ್ರ ಸರ್ಕಾರದ ಇತರೆ ಭತ್ಯೆಗಳು ಮತ್ತು ಪಿಂಚಣಿ ಸೌಲಭ್ಯಗಳು ಸಿಗಲಿವೆ. ಅರ್ಜಿ ಶುಲ್ಕದ ವಿವರ ನೋಡುವುದಾದರೆ, ಸಾಮಾನ್ಯ (General), EWS ಮತ್ತು OBC ಅಭ್ಯರ್ಥಿಗಳಿಗೆ ರೂ. 100 ಶುಲ್ಕವಿದ್ದು, SC, ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಿಗೆ ಅಭ್ಯರ್ಥಿಗಳ ಕ್ರೀಡಾ ಸಾಧನೆ ಮತ್ತು ಪದಕಗಳ ಆಧಾರದ ಮೇಲೆ ಅಂಕಗಳನ್ನು ನೀಡಿ, ತದನಂತರ ಪ್ರಮಾಣಪತ್ರ ಪರಿಶೀಲನೆ, ದೈಹಿಕ ಗುಣಮಟ್ಟ ಪರೀಕ್ಷೆ (PST) ಹಾಗೂ ವೈದ್ಯಕೀಯ ತಪಾಸಣೆಯನ್ನು ನಡೆಸಿ ಅಂತಿಮ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಶಸ್ತ್ರ ಸೀಮಾ ಬಲ್‌ನ ಅಧಿಕೃತ ವೆಬ್‌ಸೈಟ್ ಆದ ssb.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನಾಂಕವಾಗಿದೆ. ದೇಶದ ಸೇವೆ ಮಾಡಲು ಬಯಸುವ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿರುವ ಯುವಜನತೆಗೆ ಇದೊಂದು ಅತ್ಯುತ್ತಮ ಮತ್ತು ಗೌರವಾನ್ವಿತ ಅವಕಾಶವಾಗಿದ್ದು, ಕೊನೆಯ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ! ಬಿಹಾರಿ ಯುವಕನ ವಿಡಿಯೋ ವೈರಲ್

ಬೆಂಗಳೂರು, ಮೇ 30: ಟ್ರಾಫಿಕ್ ಕಿರಿಕಿರಿ, ದುಬಾರಿ ಮನೆ ಬಾಡಿಗೆ ಹಾಗೂ ಒಂಟಿತನ ಕಾಡುತ್ತಿದ್ದರೂ ಸಹ ಜನ ಯಾಕೆ ಬೆಂಗಳೂರು (Bengaluru) ಬಿಟ್ಟು ಹೋಗಲು ಇಷ್ಟಪಡುವುದಿಲ್ಲ ಎಂಬುದನ್ನು ಬಿಹಾರ ಮೂಲದ ಯುವಕನೊಬ್ಬ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಮುಖ್ಯಾಂಶಗಳು

  • ಟ್ರಾಫಿಕ್ ಹಾಗೂ ದುಬಾರಿ ಬಾಡಿಗೆ ಇದ್ದರೂ ಬೆಂಗಳೂರು ಬಿಡಲು ಜನ ಒಪ್ಪುತ್ತಿಲ್ಲ.
  • ಸಿಲಿಕಾನ್ ಸಿಟಿಯ ಅದ್ಭುತ ಹವಾಮಾನವೇ ವಲಸಿಗರನ್ನು ಸೆಳೆಯಲು ಮುಖ್ಯ ಕಾರಣವಾಗಿದೆ.
  • ವರ್ಕ್ ಫ್ರಮ್ ಹೋಮ್ ನೀಡಿದರೆ ಜನರು ಊರಿಗೆ ಮರಳುತ್ತಾರೆ ಎಂದಿದ್ದಾರೆ ನೆಟ್ಟಿಗರು.

ದುಬಾರಿ ಬಾಡಿಗೆ, ಟ್ರಾಫಿಕ್ ಇದ್ದರೂ ಸಿಟಿ ಬಿಡಲ್ಲ ಜನ

ಇನ್‌ಸ್ಟಾಗ್ರಾಮ್‌ನಲ್ಲಿ ತನಗಾದ ಅನುಭವವನ್ನು ಹಂಚಿಕೊಂಡಿರುವ ಅಂಕಿತ್ ಎಂಬ ಯುವಕ, ಇದು ಬೆಂಗಳೂರು.. ಜನ ಇಲ್ಲಿಗೆ ಬರುತ್ತಾರೆ, ಆದರೆ ಬಂದ ಮೇಲೆ ಇಲ್ಲಿಂದ ಹೋಗಲು ಇಷ್ಟಪಡುವುದಿಲ್ಲ. ಇಲ್ಲಿ ಒಂಟಿತನ, ಆತಂಕ ಮತ್ತು ದೈನಂದಿನ ಟ್ರಾಫಿಕ್ ಕಿರಿಕಿರಿ ಇದ್ದರೂ ಜನ ಇಲ್ಲೇ ಇರಲು ಬಯಸುತ್ತಾರೆ. ನಮ್ಮ ಸಂಬಳದ ಅರ್ಧಕ್ಕಿಂತ ಹೆಚ್ಚು ಭಾಗ ಇಲ್ಲಿನ ದೊಡ್ಡ ಅಪಾರ್ಟ್‌ಮೆಂಟ್‌ಗಳ ಬಾಡಿಗೆಗೇ ಖರ್ಚಾಗುತ್ತದೆ. ದೆಹಲಿ, ಗುರುಗ್ರಾಮ್, ಹೈದರಾಬಾದ್, ಮುಂಬೈ ಅಥವಾ ಚೆನ್ನೈನಲ್ಲೂ ಐಟಿ ಕಂಪನಿಗಳಿಲ್ಲವೇ? ಖಂಡಿತ ಇವೆ. ಆದರೆ, ಬೆಂಗಳೂರಿನ ಅದ್ಭುತ ಹವಾಮಾನ (Weather) ನಮ್ಮನ್ನು ಬೇರೆಲ್ಲೂ ಹೋಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅಂಕಿತ್ ಅವರ ಈ ಮಾತುಗಳು ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳು ಮತ್ತು ವಲಸಿಗರ ಮನಸ್ಸು ಮುಟ್ಟಿದ್ದು, ವಿಡಿಯೋಗೆ ಭಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ

ಅಂಕಿತ್ ವಿಡಿಯೋಗೆ ಇನ್‌ಸ್ಟಾಗ್ರಾಮ್‌ನಲ್ಲಿ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು, ಇದು ನೂರಕ್ಕೆ ನೂರು ನಿಜ. ಮೂರ್ನಾಲ್ಕು ದಶಕಗಳ ಮುನ್ನ ಜನ ಕನಸುಗಳನ್ನು ಬೆನ್ನಟ್ಟಿ ಮುಂಬೈಗೆ ಹೋಗುತ್ತಿದ್ದರು, ಈಗ ಆ ಸ್ಥಾನವನ್ನು ಬೆಂಗಳೂರು ತುಂಬಿದೆ ಎಂದು ಸಹಮತ ವ್ಯಕ್ತಪಡಿಸಿದ್ದಾರೆ.

ಆದರೆ, ಎಲ್ಲರೂ ಈ ಮಾತನ್ನು ಒಪ್ಪಿಕೊಂಡಿಲ್ಲ. ಮತ್ತೊಬ್ಬ ಬಳಕೆದಾರ, ನಮಗೆ ವರ್ಕ್ ಫ್ರಮ್ ಹೋಮ್ (WFH) ನೀಡಿ ನೋಡಿ, ಹೊರಗಿನಿಂದ ಬಂದ ಶೇಕಡಾ 80 ರಷ್ಟು ಜನ ತಮ್ಮ ತಮ್ಮ ಸ್ವಗ್ರಾಮಗಳಿಗೆ ಮರಳುತ್ತಾರೆ. ಬೆಂಗಳೂರಿನ ಹವಾಮಾನವನ್ನು ಅತಿಯಾಗಿ ವೈಭವೀಕರಿಸಲಾಗುತ್ತಿದೆ. ಇಲ್ಲಿನ ಟ್ರಾಫಿಕ್ ಮತ್ತು ಮನೆ ಬಾಡಿಗೆ ಜೀವನವನ್ನು ನರಕವಾಗಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇಷ್ಟೆಲ್ಲಾ ಸವಾಲುಗಳಿದ್ದರೂ ಬೆಂಗಳೂರು ತನ್ನ ಹವಾಮಾನದ ಮೂಲಕ ದೇಶದಾದ್ಯಂತ ಜನರನ್ನು ಆಕರ್ಷಿಸುತ್ತಿರುವುದು ಮಾತ್ರ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರೇ ‘ಚಾಂಪಿಯನ್ಸ್​’!

Source link

ಪಂಚಕುಲದಲ್ಲಿ ಡಿಆರ್‌ಡಿಒ ಹೈ-ಪವರ್ ಬಾಂಬ್ ಪರೀಕ್ಷೆ: ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚನೆ

ಪಂಚಕುಲ, ಮೇ 30: ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮೇ 31 ರಂದು ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಿಗೆ ಪರೀಕ್ಷಾ ಅವಧಿಯಲ್ಲಿ ಮನೆಯೊಳಗೇ ಇರುವಂತೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಗಳ ಪರೀಕ್ಷೆಯಲ್ಲಿ ಪರಿಣತಿ ಹೊಂದಿರುವ ಡಿಆರ್‌ಡಿಒದ ಪ್ರಮುಖ ಪ್ರಯೋಗಾಲಯವಾದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯ (TBRL) ಈ ಹೈ-ಪವರ್ ಬಾಂಬ್ ಪರೀಕ್ಷೆಯನ್ನು ನಡೆಸುತ್ತಿದೆ.

2 ಕಿಲೋಮೀಟರ್ ವ್ಯಾಪ್ತಿ ಅಪಾಯಕಾರಿ ವಲಯ
ಡಿಆರ್‌ಡಿಒ ವಿಜ್ಞಾನಿಗಳು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಈ ಸ್ಫೋಟವು ಎಷ್ಟು ಶಕ್ತಿಶಾಲಿಯಾಗಿರಲಿದೆ ಎಂದರೆ, ಬಾಂಬ್‌ನ ತೀಕ್ಷ್ಣ ತುಣುಕುಗಳು (Splinters) ಗಾಳಿಯಲ್ಲಿ ಬರೋಬ್ಬರಿ 1.5 ಕಿಲೋಮೀಟರ್‌ಗಳಷ್ಟು ದೂರದವರೆಗೆ ಚಿಮ್ಮುವ ಸಾಧ್ಯತೆ ಇದೆ.

ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ಸ್ಫೋಟ ನಡೆಯುವ ಸ್ಥಳದ ಸುತ್ತಲಿನ 2 ಕಿಲೋಮೀಟರ್ ವ್ಯಾಪ್ತಿಯನ್ನು ಸ್ಪ್ಲಿಂಟರ್ ಅಪಾಯದ ವಲಯ ಎಂದು ಘೋಷಿಸಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಈ ವಲಯದೊಳಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸುರಕ್ಷತಾ ಸಲಹೆಗಳು ಮತ್ತು ಹಳ್ಳಿಗಳ ಪಟ್ಟಿ
TBRL ತಂತ್ರಜ್ಞಾನ ನಿರ್ದೇಶಕ ಸಿ. ಸರ್ಕಾರ್ ಅವರು ಪಂಚಕುಲ ಜಿಲ್ಲಾಧಿಕಾರಿಗೆ ಕಳುಹಿಸಿರುವ ಅಧಿಕೃತ ಪತ್ರದ ಪ್ರಕಾರ, ಈ ಕೆಳಗಿನ ಗ್ರಾಮಗಳ ನಿವಾಸಿಗಳು ಪರೀಕ್ಷೆಯ ಸಮಯದಲ್ಲಿ ಜಾಗರೂಕರಾಗಿರಬೇಕು ಮತ್ತು ಅನಗತ್ಯ ಓಡಾಟವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.

ಭಾನು ಮತ್ತು ಬಿಲ್ಲಾ ಗ್ರಾಮಗಳು, ಆಸ್ರೆವಾಲಿ, ನಗ್ಗಲ್, ಮೋಗಿನಂದ್, ಕಿಶನ್‌ಗಢ, ಟಿಎಂವಿ ಕಾಲೋನಿ ಮತ್ತು ರಾಮಗಢ ಮುನ್ಸಿಪಲ್ ವ್ಯಾಪ್ತಿಯ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ.

ಮತ್ತಷ್ಟು ಓದಿ: ಡಿಆರ್​​​ಡಿಒ ಅಭಿವೃದ್ಧಿಪಡಿಸುತ್ತಿರುವ ಶಸ್ತ್ರಾಸ್ತ್ರಗಳು ಮತ್ತವುಗಳ ಸಾಮರ್ಥ್ಯ; ಇಲ್ಲಿದೆ ಪಟ್ಟಿ

ವಾಯುಪಡೆ ಅಧಿಕಾರಿಗಳ ಮೇಲ್ವಿಚಾರಣೆ
ಈ ಇಡೀ ಪರೀಕ್ಷಾರ್ಥ ಪ್ರಯೋಗವನ್ನು ಕಟ್ಟುನಿಟ್ಟಾದ ಅಂತರರಾಷ್ಟ್ರೀಯ ಭದ್ರತಾ ಮಾನದಂಡಗಳ ಅಡಿಯಲ್ಲಿ ನಡೆಸಲಾಗುತ್ತಿದ್ದು, ಭಾರತೀಯ ವಾಯುಪಡೆಯ (IAF) ಹಿರಿಯ ಅಧಿಕಾರಿಗಳು ಇದರ ನೇರ ಮೇಲ್ವಿಚಾರಣೆ ವಹಿಸಲಿದ್ದಾರೆ.

ಇದು ಭಾರತೀಯ ರಕ್ಷಣಾ ವ್ಯವಸ್ಥೆಯ ಬಲವರ್ಧನೆಗಾಗಿ ನಡೆಯುವ ನಿಯಮಿತ ಮತ್ತು ಯೋಜಿತ ಪರೀಕ್ಷೆಯಾಗಿದೆ. ಹೀಗಾಗಿ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಅಧಿಕಾರಿಗಳು ನೀಡುವ ಸುರಕ್ಷತಾ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ವಿನಂತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:46 am, Sat, 30 May 26

Source link

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!

ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್

ತೆಲುಗು ನಟ ರಾಮ್ ಚರಣ್ ಮತ್ತು ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ನಟನೆಯ, ಬುಚಿ ಬಾಬು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗಿದೆ. ಸ್ಪೋರ್ಟ್ಸ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಜಗಪತಿ ಬಾಬು ಹಾಗೂ ಕನ್ನಡದ ಹಿರಿಯ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಯೂಟ್ಯೂಬ್‌ನಲ್ಲಿ ವೈರಲ್ ಆಗಿರುವ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದ್ದು, ಜೂನ್ 4 ರಂದು ಸಿನಿಮಾ ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ.

ಚಿತ್ರದ ಬಿಡುಗಡೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ದೇಶದ ಹಲವು ಪ್ರಮುಖ ನಗರಗಳಲ್ಲಿ ಸರಣಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಪ್ರಚಾರದ ಸಂದರ್ಭದಲ್ಲಿ ರಾಮ್ ಚರಣ್ ಮತ್ತು ಶಿವರಾಜ್ ಕುಮಾರ್ ಒಟ್ಟಿಗೆ ಇರುವ ಇತ್ತೀಚಿನ ಫೋಟೋವೊಂದು ಈಗ ಎಲ್ಲರ ಗಮನ ಸೆಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ಡಾ. ರಾಜ್‌ಕುಮಾರ್ ಅವರ ಕಾಲದ ಹಳೆಯ ನೆನಪುಗಳನ್ನು ಮತ್ತು ಉಭಯ ಕುಟುಂಬಗಳ ನಡುವಿನ ಆತ್ಮೀಯ ಬಾಂಧವ್ಯವನ್ನು ಮತ್ತೊಮ್ಮೆ ಮರುಕಳಿಸುವಂತೆ ಮಾಡಿದೆ.

ಆರಂಭದಿಂದಲೂ ಚಿರಂಜೀವಿ ಮತ್ತು ಡಾ. ರಾಜ್‌ಕುಮಾರ್ ಕುಟುಂಬಗಳ ನಡುವೆ ಉತ್ತಮ ಸ್ನೇಹವಿತ್ತು. ಹಿಂದೆ ರಾಜ್‌ಕುಮಾರ್ ಕುಟುಂಬದ ಸ್ವಂತ ನಿರ್ಮಾಣ ಸಂಸ್ಥೆಯಾದ ‘ಶ್ರೀ ವಜ್ರೇಶ್ವರಿ ಕಂಬೈನ್ಸ್’ನ ಬೆಳ್ಳಿ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ಚಿರಂಜೀವಿ ಹಾಗೂ ರಾಜ್‌ಕುಮಾರ್ ಅವರು ಅತ್ಯಂತ ಆತ್ಮೀಯವಾಗಿ ಭೇಟಿಯಾಗಿದ್ದರು.

ಈಗ ‘ಪೆದ್ದಿ’ ಚಿತ್ರದ ಪ್ರಚಾರದ ಸಂದರ್ಶನವೊಂದರಲ್ಲಿ ನಿರೂಪಕರು ಅಂದಿನ ಆ ಹಳೆಯ ಅಪರೂಪದ ಫೋಟೋವನ್ನು ತೋರಿಸಿ, ಅದನ್ನು ಮರುಸೃಷ್ಟಿಸುವಂತೆ ವಿನಂತಿಸಿದರು. ತಕ್ಷಣವೇ ಶಿವಣ್ಣ ಅವರು ರಾಮ್ ಚರಣ್ ಅವರನ್ನು ಅಪ್ಪಿಕೊಂಡು ಅಕ್ಕರೆ ವ್ಯಕ್ತಪಡಿಸುವ ಮೂಲಕ ಅಂದಿನ ತಂದೆಯರ ಸ್ನೇಹದ ಕ್ಷಣವನ್ನು ಮರುಸೃಷ್ಟಿಸಿದರು.

ಇದನ್ನೂ ಓದಿ: ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ

ಈ ಚಿತ್ರದ ಮೂಲಕ ಮತ್ತೊಂದು ಕಾಕತಾಳೀಯ ಹಾಗೂ ವಿಶೇಷ ಸಂಗತಿಯೂ ಬೆಳಕಿಗೆ ಬಂದಿದೆ. ಜಾನ್ವಿ ಕಪೂರ್ ಅವರ ತಾಯಿ, ದಿವಂಗತ ನಟಿ ಶ್ರೀದೇವಿ ಅವರು 1974ರಲ್ಲಿ ಡಾ. ರಾಜ್‌ಕುಮಾರ್ ನಟನೆಯ ಸೂಪರ್ ಹಿಟ್ ‘ಭಕ್ತ ಕುಂಬಾರ’ ಚಿತ್ರದಲ್ಲಿ ಬಾಲನಟಿಯಾಗಿ ನಟಿಸಿದ್ದರು. ಇಂದು ಶಿವರಾಜ್ ಕುಮಾರ್ ಹಾಗೂ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ‘ಪೆದ್ದಿ’ ಚಿತ್ರದ ಮೂಲಕ ಒಟ್ಟಾಗಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI

ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು ಈವರೆಗೂ ಮುಂಚೂಣಿಯಲ್ಲಿತ್ತು. ಆದರೆ ರಾಜ್ಯ ಕಾಂಗ್ರೆಸ್​​ನ ಅಧ್ಯಕ್ಷ ಗಾದಿಗೆ ಈಗ ಮತ್ತೋರ್ವರ ಹೆಸರು ಸಪ್ರೈಸ್​ ಎಂಟ್ರಿ ಆಗಿರೋದು ಭಾರಿ ಕುತೂಹಲ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಹರಿಪ್ರಸಾದ್​​ ಎಂಟ್ರಿ!

ಕೆಪಿಸಿಸಿ ಅಧ್ಯಕ್ಷರ ರೇಸ್​​ನಲ್ಲಿ ಬಿ.ಕೆ.ಹರಿಪ್ರಸಾದ್ ಹೆಸರು ದಿಢೀರ್​​ ಮುನ್ನೆಲೆಗೆ ಬಂದಿದ್ದು, ಒಬಿಸಿ ಕೋಟಾದಡಿ ಪಕ್ಷದ ಅಧ್ಯಕ್ಷ ಗಾದಿಯನ್ನು ಅವರಿಗೆ ನೀಡುವ ಸಂಬಂಧವೂ ಚರ್ಚೆ ನಡೆದಿದೆ. ಮಂತ್ರಿಸ್ಥಾನಕ್ಕೆ ಸತೀಶ್ ಪಟ್ಟು ಹಿಡಿದರೆ ಕಾಂಗ್ರೆಸ್‌ ಹೈಕಮಾಂಡ್ ಎದುರು ಹರಿಪ್ರಸಾದ್ ಹೆಸರು ಪ್ರಸ್ತಾಪ ಸಾಧ್ಯತೆ ಇದ್ದು, ಹರಿಪ್ರಸಾದ್​ಗೆ ಕೆ.ಸಿ.ವೇಣುಗೋಪಾಲ್ ಬೆಂಬಲ ಕೂಡ ಇದೆ ಎನ್ನಲಾಗಿದೆ. ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿಯೇ ಹಿರಿಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಪ್ರಸ್ತಾಪವನ್ನೂ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: 4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಭಾರಿ ಇಕ್ಕಟ್ಟು!

ಹೈಕಮಾಂಡ್​​ಗೆ ತಲೆನೋವಾಗಿದ್ದೇನು?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮೊದಲಿನಿಂದಲೂ ಮುಂಚೂಣಿಯಲ್ಲಿತ್ತು. ಮಂತ್ರಿ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನೂ ಸತೀಶ್​​ ಬೇಡಿಕೆ ಇಟ್ಟಿದ್ದರು. ಆದರೆ ಅವರ ಈ ಬೇಡಿಕೆಯೇ ಹೈಕಮಾಂಡ್​​ಗೆ ತಲೆನೋವಾಗಿದೆ ಎನ್ನಲಾಗ್ತಿದೆ. ಒಂದು ವ್ಯಕ್ತಿ, ಒಂದು ಸ್ಥಾನ ಎಂಬ ನೀತಿಯನ್ನು ಕಾಂಗ್ರೆಸ್ ಹೈಕಮಾಂಡ್ ಅನುಸರಿಸುತ್ತಿದೆ. ಈ ನೀತಿಯು ಈಗಾಗಲೇ ಅನೇಕ ರಾಜ್ಯಗಳಲ್ಲಿ ಜಾರಿಯಲ್ಲಿದೆ. ಹಾಗಾಗಿ, ಜಾರಕಿಹೊಳಿ ಅವರ ಈ ಬೇಡಿಕೆ ಹೈಕಮಾಂಡ್‌ಗೆ ಸವಾಲಾಗಿದೆ.

ಸತೀಶ್​​ ಲೆಕ್ಕಾಚಾರವೇನು?

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಾತ್ರ ಸ್ವೀಕರಿಸಿದರೆ, ಬೆಳಗಾವಿ ಜಿಲ್ಲೆಯಲ್ಲಿ ಅವರ ರಾಜಕೀಯ ಹಿಡಿತ ದುರ್ಬಲಗೊಳ್ಳಬಹುದು ಎಂಬ ಆತಂಕದಲ್ಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಲಕ್ಷ್ಮಣ ಸವದಿ ಅವರಂತಹವರು ಜಿಲ್ಲಾ ಉಸ್ತುವಾರಿ ಸಚಿವರಾದರೆ, ಜಾರಕಿಹೊಳಿಯವರ ರಾಜಕೀಯ ಪ್ರಭಾವ ಕುಸಿಯುವ ಸಾಧ್ಯತೆಯಿದೆ. ಅವರ ಅಹಿಂದಾ ರಾಜಕಾರಣದ ಮೇಲೂ ಇದರ ಪರಿಣಾಮ ಉಂಟಾಗಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version