Headlines

ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ – Kannada News | Child Injured After Getting Too Close to Lion Enclosure in Viral Clip

ಮೃಗಾಲಯಕ್ಕೆ ಭೇಟಿ ನೀಡಿದಾಗ ಮೈಯಲ್ಲಾ ಕಣ್ಣಾಗಿರಬೇಕು, ಯಾವ ಪ್ರಾಣಿಗಳು ಎಲ್ಲಿಂದ ಹೇಗೆ ಬಂದು ದಾಳಿ ಮಾಡುತ್ತವೆ ಎಂದು ಹೇಳುವುದು ಕಷ್ಟ. ಹಾಗೆಯೇ ಆನ್​ಲೈನ್​​ ಅಲ್ಲಿ ವೈರಲ್ ಆದ ವಿಡಿಯೋದಲ್ಲಿ ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಸಿಂಹ(Lion) ಹೇಗೆ ದಾಳಿ ಮಾಡಿತು ಎಂಬುದನ್ನು ನೋಡಬಹುದು. ಬಾಲಕಿ ಬೋನ್ ಬಳಿ ನಿಂತು ಸಿಂಹಗಳನ್ನು ವೀಕ್ಷಿಸುತ್ತಿರುವಾಗ ಬೋನ್​ ಆಚೆಗೆ ಸಿಂಹ ತನ್ನ ಕೈಚಾಚಿ ಬಾಲಕಿಯನ್ನು ಹಿಡಿದಿದೆ. ಆಕೆ ಅದರಿಂದ ಬಿಡಿಸಿಕೊಳ್ಳಲು ಹರಸಾಹಸ ಪಡುತ್ತಿರುವಾಗ ಆಕೆಯ ತಂದೆ ಕೂಡಲೇ ಓಡಿ ಬಂದು…

Read More

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ – Kannada News | Aapki EV Fraud: Bengaluru Customers Duped Rs35 Cr in Electric Bike Loan Scam with Bank Collusion

ಬೆಂಗಳೂರು, ಮಾ.3: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಿಸುವ ನೆಪದಲ್ಲಿ ಬರೋಬ್ಬರಿ 35 ಕೋಟಿ ರೂಪಾಯಿ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ‘ಆಪ್ಕಿ ಇವಿ’ (Aapki EV) ಶೋರೂಂ ಮಾಲೀಕರು ಸುಮಾರು 3,250 ಜನರಿಗೆ ಸಬ್ಸಿಡಿ ಆಸೆ ತೋರಿಸಿ ಲೋನ್ ಸುಳಿಗೆ ಸಿಲುಕಿಸಿದ್ದಾರೆ. ಕೇವಲ 20,000 ರೂ. ಡಿಪಾಸಿಟ್ ಮಾಡಿದರೆ ಸಾಕು, ಉಳಿದ ಹಣ ಕೇಂದ್ರ ಸರ್ಕಾರದ ಸಬ್ಸಿಡಿಯಡಿ ಪಾವತಿಯಾಗುತ್ತದೆ ಎಂದು ನಂಬಿಸಲಾಗಿತ್ತು. ಬೈಕ್ ನೀಡುವ ನೆಪದಲ್ಲಿ ಗ್ರಾಹಕರಿಂದ ಆಧಾರ್, ಪಾನ್ ಕಾರ್ಡ್ ಪಡೆದ ಶೋರೂಂ ಮಾಲೀಕರು,…

Read More

ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ – Kannada News | War in the Middle East: MLC Bhojegowda Reveals Harrowing Experience in Dubai

ಬೆಂಗಳೂರು, ಮಾರ್ಚ್​ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್‌ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಪ್ರತಿಯೊಬ್ಬರೂ ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರೂ ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ – Kannada News | Bengaluru’s Bande Mahakali Temple: Special Eclipse Pujas and Graha Dosha Remedies

ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನImage Credit source: Pinterest ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ಬಹುತೇಕ ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ಯಾಕೆಂದರೆ ಗ್ರಹಣ ಎಂದರೆ ಕತ್ತಲು. ಮಹಾಕಾಳಿಯು ಕತ್ತಲೆಯ ಅಧಿದೇವತೆ ಮತ್ತು ಕಾಲದ ಸಂಹಾರಕಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣಕ್ಕೆ ಕಾರಣರಾದ ರಾಹು ಮತ್ತು ಕೇತುಗಳು ತಾಮಸಿಕ ಗ್ರಹಗಳು. ಇವುಗಳ ಪ್ರಭಾವವನ್ನು ನಿಯಂತ್ರಿಸುವ ಶಕ್ತಿ ಕೇವಲ ಮಹಾಕಾಳಿಗೆ ಮಾತ್ರ ಇದೆ. ಆದ್ದರಿಂದ ಗ್ರಹಣ ಕಾಲದಲ್ಲಿ ಕಾಳಿಯ ಉಪಾಸನೆ ಮಾಡುವುದರಿಂದ…

Read More

ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್ – Kannada News | Lunar Eclipse 2026: Major Karnataka Temples Closed After Noon Pooja; Reopening After Grahana Moksha

ಬೆಂಗಳೂರು, ಮಾರ್ಚ್​ 3: ಚಂದ್ರ ಗ್ರಹಣದ ಕಾರಣ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿವೆ. ಬೆಂಗಳೂರಿನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳ ನಂತರ ಮಧ್ಯಾಹ್ನ 12:30ಕ್ಕೆ ಬಾಗಿಲು ಮುಚ್ಚಲಾಯಿತು. ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ತೆರೆಯಲಾಗುತ್ತದೆ. ಬೆಳಗಾವಿಯ ಪ್ರಸಿದ್ಧ ಕಪಿಲೇಶ್ವರ ದೇಗುಲದಲ್ಲಿ ಶಿವಲಿಂಗವನ್ನು ಬಿಲ್ವಪತ್ರೆಯಿಂದ ಮುಚ್ಚಿ, ಗರ್ಭಗುಡಿಯನ್ನು ಬಂದ್ ಮಾಡಲಾಗಿದೆ. ಸಂಜೆ 7 ಗಂಟೆಯ ನಂತರ ವಿಶೇಷ ಪೂಜೆಗಳೊಂದಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಅದೇ ರೀತಿ…

Read More

15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ: 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ – Kannada News | Notorious Burglar Wanted in 15 Theft Cases Arrested in Bengaluru; Gold and Cash Worth Rs 1.4 Crore Seized

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬಾತನೇ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 1.40 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19.5 ಲಕ್ಷ ರೂಪಾಯಿ ನಗದು ಮತ್ತು 711 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಾಜ್ ಸುಮಾರು ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ಮಾಡಿಕೊಂಡಿದ್ದ. ಈತನ ವಿರುದ್ಧ ಬೆಂಗಳೂರಿನ ಮಾದನಾಯಕನಹಳ್ಳಿ…

Read More

Iran Earthquake: ಇರಾನ್​​ನಲ್ಲಿ ಅಮೆರಿಕ, ಇಸ್ರೇಲ್ ದಾಳಿ ಮದ್ಯೆ 4.3 ತೀವ್ರತೆಯ ಭೂಕಂಪ – Kannada News | Iran Earthquake: 4.3 Magnitude Quake Hits Iran, Epicenter Reported in Gerash Amid Tensions With United States and Israel

ಟೆಹ್ರಾನ್, ಮಾರ್ಚ್​ 03: ಇರಾನ್​ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಕಳೆದ ಮೂರು ದಿನಗಳಿಂದ ನಿರಂತರ ದಾಳಿ ನಡೆಸುತ್ತಿವೆ. ಇದರ ನಡುವೆ ಇಂದು 4.3 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ದಕ್ಷಿಣ ಇರಾನ್​​ನ ಗೆರಾಶ್ ನಗರದ ಬಳಿ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಭೂಕಂಪವು ಸುಮಾರು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸಿದ ಸಂಘಟಿತ ಮಿಲಿಟರಿ ದಾಳಿಗಳಿಂದಾಗಿ ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ಅವಧಿಯ ಮಧ್ಯೆ ಈ ಭೂಕಂಪ ಸಂಭವಿಸಿದೆ, ದಾಳಿ…

Read More

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! – Kannada News | Karnataka Govt Jobs: Statewide Protests Erupt Demanding Vacancy Fill and FRBM Act Repeal

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು! ಧಾರವಾಡ, ಮಾರ್ಚ್​ 03: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ (Dharwad) ಬೃಹತ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಧಾರವಾಡದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜನಸಾಮಾನ್ಯರ ವೇದಿಕೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ರೈತ ಸೇನಾ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರು ತಿಂಗಳಿನಿಂದ ನೀವು ಏನು ಮಾಡುತ್ತಿದ್ದಿರಿ ಎಂದ ವೇದಿಕೆ ಸಂಚಾಲಕ ಜನಸಾಮಾನ್ಯರ…

Read More

ಹೀಗಾದ್ರೆ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವೆ ಫೈನಲ್! – Kannada News | If semi finals washed out south africa and England Will Play Final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡು ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್​ಗೆ ಅರ್ಹತೆ ಪಡೆಯಲಿದ್ದಾರೆ ಎಂಬ…

Read More

Srikalahasti Temple: ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Srikalahasti Temple: Open During Eclipses? Rahu Ketu’s Abode and Unique Grahan Pujas

ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನ ಸಾಮಾನ್ಯವಾಗಿ ಗ್ರಹಣ ಬಂತೆಂದರೆ ಸಾಕು, ಇಡೀ ಭಾರತದಾದ್ಯಂತ ಆಧ್ಯಾತ್ಮಿಕ ಮೌನ ಆವರಿಸುತ್ತದೆ. ಆಕಾಶದಲ್ಲಿ ಚಂದ್ರ ಅಥವಾ ಸೂರ್ಯ ಮರೆಯಾಗುತ್ತಿದ್ದಂತೆ, ಭೂಮಿಯ ಮೇಲಿನ ಪ್ರಸಿದ್ಧ ದೇವಸ್ಥಾನಗಳ ಬಾಗಿಲುಗಳು ಮುಚ್ಚಲ್ಪಡುತ್ತವೆ. ಗ್ರಹಣಕ್ಕೆ ಕನಿಷ್ಠ ಆರು ಗಂಟೆಗಳ ಮೊದಲೇ ಗರ್ಭಗುಡಿಯ ದ್ವಾರಗಳನ್ನು ಮುಚ್ಚುವುದು, ಗ್ರಹಣ ಮುಗಿದ ನಂತರ ದೇವಸ್ಥಾನವನ್ನು ಶುದ್ಧೀಕರಿಸಿ ‘ಸಂಪ್ರೋಕ್ಷಣೆ’ ಮಾಡುವುದು ಶತಮಾನಗಳಿಂದ ನಡೆದು ಬಂದ ಪದ್ಧತಿ. ಆದರೆ, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿ ಎಂಬ ಪವಿತ್ರ ಕ್ಷೇತ್ರದಲ್ಲಿ ಮಾತ್ರ ದೃಶ್ಯವೇ ಬೇರೆ!…

Read More