ಬಾಲಿವುಡ್‌ನಲ್ಲಿ ಲಿಂಗ ತಾರತಮ್ಯ: ಸಂಭಾವನೆ ವಿಚಾರದಲ್ಲಿ ಕೃತಿ ಸನನ್ ಬೇಸರ – Kannada News | Kriti Sanon opens up about gender pay gap and bias in Hindi Film Industry

ಬಾಲಿವುಡ್‌ನಲ್ಲಿ ನಾಯಕ ನಟರಿಗೆ ಸಿಗುವ ಪ್ರಾಮುಖ್ಯತೆ ಮತ್ತು ಸಂಭಾವನೆ ನಾಯಕಿಯರಿಗೆ ಸಿಗುತ್ತಿಲ್ಲ ಎಂಬ ಚರ್ಚೆ ಇಂದು ನಿನ್ನೆಯದಲ್ಲ. ಈಗ ಇದೇ ವಿಷಯವಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೃತಿ ಸನನ್ (Kriti Sanon) ಧ್ವನಿ ಎತ್ತಿದ್ದಾರೆ. ಚಿತ್ರದ ಬಜೆಟ್ ಕಡಿತ ಮಾಡುವ ಸಂದರ್ಭ ಬಂದಾಗ ಮೊದಲು ಕತ್ತರಿ ಬೀಳುವುದು ನಟಿಯರ ಸಂಭಾವನೆಗೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ‘ಜಿಕ್ಯೂ ಇಂಡಿಯಾ’ ಮ್ಯಾಗಜಿನ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದರು.

‘ಚಿತ್ರದ ಬಜೆಟ್‌ನಲ್ಲಿ ಸಿಂಹಪಾಲು ನಾಯಕ ನಟರಿಗೆ ಹೋಗುತ್ತದೆ. ಆದರೆ ನಿರ್ಮಾಪಕರು ಎಲ್ಲಾದರೂ ಹಣ ಉಳಿಸಬೇಕು ಎಂದುಕೊಂಡರೆ, ಅವರು ಮೊದಲು ಸಂಧಾನ ಮಾಡುವುದು ನಾಯಕಿಯರ ಸಂಭಾವನೆಯಲ್ಲಿ’ ಎಂದು ಕೃತಿ ಸನನ್ ಅವರು ನೇರವಾಗಿ ಹೇಳಿದ್ದಾರೆ. ಈ ಮೊದಲು ಅನೇಕ ನಟಿಯರು ಕೂಡ ಈ ಬಗ್ಗೆ ಧ್ವನಿ ಎತ್ತಿದ್ದರು.

ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡ ಕೃತಿ ಸನನ್, ‘ಚಿತ್ರರಂಗದಲ್ಲಿ ಪುರುಷ ಪ್ರಧಾನ ವ್ಯವಸ್ಥೆ ಇನ್ನೂ ಆಳವಾಗಿ ಬೇರೂರಿದೆ. ನನ್ನ ಸಹನಟ ನನಗಿಂತ ಸೀನಿಯರ್ ಕೂಡ ಆಗಿರಲಿಲ್ಲ. ಆತ ನನಗಿಂತ ಉತ್ತಮವಾದ ಕಾರನ್ನು ಹೊಂದಿದ್ದ ದಿನಗಳು ನನಗೆ ನೆನಪಿವೆ. ಇಲ್ಲಿ ವಿಷಯ ಕಾರಿನದ್ದಲ್ಲ, ಬದಲಿಗೆ ಸಮಾನ ಗೌರವ ನೀಡುವ ಮನಸ್ಥಿತಿಯದ್ದು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟಿಯರನ್ನು ಹೇರ್ ಮತ್ತು ಮೇಕಪ್‌ಗಾಗಿ ನಟರಿಗಿಂತ ಮೊದಲೇ ಸೆಟ್‌ಗೆ ಕರೆಯಲಾಗುತ್ತದೆ. ಆದರೆ ನಟರು ಬಂದ ಮೇಲೆಯೇ ಚಿತ್ರೀಕರಣ ಆರಂಭವಾಗುತ್ತದೆ. ನಟರು ಕಾಯಬಾರದು ಎಂಬ ಕಾರಣಕ್ಕೆ ನಟಿಯರನ್ನು ಮೊದಲೇ ಕರೆಸಿ ಕಾಯಿಸಲಾಗುತ್ತದೆ. ಇಂತಹ ಸಣ್ಣ ಪುಟ್ಟ ವಿಷಯಗಳಲ್ಲೂ ಲಿಂಗ ತಾರತಮ್ಯ ಎದ್ದು ಕಾಣುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್

ಸದ್ಯ ಕೃತಿ ಸನನ್ ತಮ್ಮದೇ ಆದ ಸ್ಕಿನ್ ಕೇರ್ ಬ್ರಾಂಡ್ ಮತ್ತು ನಿರ್ಮಾಣ ಸಂಸ್ಥೆಯ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅಭಿಮಾನಿಗಳು ಅವರ ‘ಕಾಕ್‌ಟೇಲ್ 2’ ಸಿನಿಮಾಗಾಗಿ ಕಾಯುತ್ತಿದ್ದಾರೆ. ಹೋಮಿ ಅದಾಜಾನಿಯಾ ನಿರ್ದೇಶನದ ಈ ಚಿತ್ರದಲ್ಲಿ ಶಾಹಿದ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸುತ್ತಿದ್ದಾರೆ. ಈ ಸಿನಿಮಾ ಜೂನ್ 19ರಂದು ತೆರೆಗೆ ಬರಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ.

ಈ ವಿಡಿಯೋವನ್ನು @travel_sentas ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಪೋಸ್ಟ್ ಆದ ಕೆಲವೇ ಸಮಯದಲ್ಲಿ ಇದು ವೈರಲ್ ಆಗಿ, ಲಕ್ಷಾಂತರ ಮಂದಿ ನೋಡಿದ್ದಾರೆ. ‘‘ಇಷ್ಟು ಅಪಾಯಕಾರಿ ಪ್ರವಾಹದಲ್ಲಿ ಯಾರಾದರೂ ಹೀಗೆ ಶಾಂತವಾಗಿ ಇರೋದು ಹೇಗೆ ಸಾಧ್ಯ?’’ ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಸೂಕ್ಷ್ಮವಾಗಿ ನೋಡಿದರೆ, ನದಿಯ ಹರಿವು ಎಷ್ಟು ಭಯಾನಕವಾಗಿದೆಯೆಂಬುದು ಗೊತ್ತಾಗುತ್ತದೆ. ನೀರು ಬಹಳ ವೇಗವಾಗಿ ಹರಿಯುತ್ತಿರುವುದರಿಂದ, ಸಣ್ಣ ತಪ್ಪು ಕೂಡ ಇಲ್ಲಿ ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಆದರೂ ಆ ವ್ಯಕ್ತಿಯ ಮುಖದಲ್ಲಿ ಭಯವೇ ಇಲ್ಲದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

Viral Video: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ

ಆದರೆ ಈ ಘಟನೆಯ ಹಿನ್ನಲೆ ತಿಳಿದುಕೊಳ್ಳುವುದು ಮುಖ್ಯ. ವರದಿಗಳ ಪ್ರಕಾರ, ಉಗಾಂಡಾದ ಕೆಲವು ಸ್ಥಳೀಯರು ಬಾಲ್ಯದಿಂದಲೇ ಇಂತಹ ಪ್ರವಾಹಗಳಲ್ಲಿ ಬದುಕುತ್ತಾ ಬೆಳೆದಿದ್ದಾರೆ. ಅವರಿಗೆ ನದಿಯ ಸ್ವಭಾವ, ಆಳ, ಅಪಾಯಕಾರಿ ಭಾಗಗಳ ಬಗ್ಗೆ ಚೆನ್ನಾಗಿ ತಿಳಿದಿದೆ. ಹಲವು ವರ್ಷಗಳ ಅನುಭವದ ನಂತರವೇ ಅವರು ಇಂತಹ ಸಾಹಸಗಳನ್ನು ಮಾಡುತ್ತಾರೆ.

ಈ ವಿಡಿಯೋಗೆ ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ಬಂದಿವೆ. ಕೆಲವರು ಇದನ್ನು ಅದ್ಭುತ ದೃಶ್ಯ ಎಂದು ಹೊಗಳಿದರೆ, ಇನ್ನೂ ಕೆಲವರು ಇದು ಎಡಿಟ್ ಅಥವಾ AI ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬರು ಇವನಿಗೆ ಭಯವೇ ಇಲ್ಲ ಎಂದು ತಮಾಷೆ ಮಾಡಿದ್ದಾರೆ. ಒಟ್ಟಿನಲ್ಲಿ, ಈ ವಿಡಿಯೋ ಸಾಹಸ, ಧೈರ್ಯದ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:27 am, Sun, 10 May 26

Source link

Shubman Gill: ಕೊಹ್ಲಿ-ರೋಹಿತ್-ಎಬಿಡಿಗೂ ಸಾಧ್ಯವಾಗದ ಸಾಧನೆ: ಐಪಿಎಲ್​ನಲ್ಲಿ ಶುಭ್​ಮನ್ ಗಿಲ್ ನೂತನ ದಾಖಲೆ – Kannada News | Shubman Gill equals IPL record with 7 consecutive 400+ run season

ಬೆಂಗಳೂರು (ಮೇ. 10): ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಈ ಬಾರಿ ಐಪಿಎಲ್ 2026ರಲ್ಲಿ ಬೊಂಬಾಟ್ ಫಾರ್ಮ್‌ನಲ್ಲಿ ಇದ್ದಾರೆ. ಅವರ ಬ್ಯಾಟಿಂಗ್ ಈ ಸೀಸನ್‌ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿದೆ. ಐಪಿಎಲ್ 2026ರ 52ನೇ ಪಂದ್ಯ ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗಿಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿದ ಅವರು ತಂಡವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ 77 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು.

ಈ ಇನ್ನಿಂಗ್ಸ್‌ನೊಂದಿಗೆ ಗಿಲ್ ಈ ಸೀಸನ್‌ನಲ್ಲಿ 10 ಪಂದ್ಯಗಳಲ್ಲಿ ಒಟ್ಟು 462 ರನ್ ಗಳಿಸಿದ್ದಾರೆ. ಈ ಸಾಧನೆಯ ಮೂಲಕ ಗಿಲ್ ಒಂದು ವಿಶೇಷ ದಾಖಲೆಯ ಕ್ಲಬ್‌ಗೆ ಸೇರಿದ್ದಾರೆ. ಐಪಿಎಲ್‌ನಲ್ಲಿ ಸತತ 7 ಸೀಸನ್‌ಗಳಲ್ಲಿ 400+ ರನ್ ಗಳಿಸಿದ ಮೂರನೇ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಈ ಸಾಧನೆ ಇದುವರೆಗೆ ಕೇವಲ ಸುರೇಶ್ ರೈನಾ ಮತ್ತು ಶಿಖರ್ ಧವನ್ ಮಾತ್ರ ಸಾಧಿಸಿದ್ದರು.

ಸುರೇಶ್ ರೈನಾ: 2008ರಿಂದ 2014ರವರೆಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ನಿರಂತರವಾಗಿ 7 ಸೀಸನ್‌ಗಳಲ್ಲಿ 400+ ರನ್ ಗಳಿಸಿದ್ದರು.

ಶಿಖರ್ ಧವನ್: 2016ರಿಂದ 2022ರವರೆಗೆ ವಿವಿಧ ತಂಡಗಳ ಪರ ಧವನ್ ಇದೇ ಸಾಧನೆ ಮಾಡಿದ್ದಾರೆ.

ಇದೀಗ ಶುಭ್​ಮನ್ ಗಿಲ್ ಕೂಡ ಈ ಎಲೈಟ್ ಪಟ್ಟಿಯಲ್ಲಿ ತಮ್ಮ ಸ್ಥಾನ ಪಡೆದುಕೊಂಡಿದ್ದಾರೆ.

RR vs GT, IPL 2026: ಬೌಲಿಂಗ್‌ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು

ಗಿಲ್ 2022ರಿಂದ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದಾರೆ. ಅದಕ್ಕೂ ಮೊದಲು 2020 ಮತ್ತು 2021ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದರು.

ಇನ್ನೊಂದು ಕಡೆ, ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇನ್ನೂ ವಿರಾಟ್ ಕೊಹ್ಲಿ ಹೆಸರಲ್ಲೇ ಇದೆ. 2016ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ ಕೊಹ್ಲಿ 16 ಪಂದ್ಯಗಳಲ್ಲಿ 973 ರನ್ ಗಳಿಸಿದ್ದರು. ಈ ದಾಖಲೆಯನ್ನು ಇನ್ನೂ ಯಾರೂ ಮುರಿಯಲಿಲ್ಲ. ಹಾಗೇ, ಕೊಹ್ಲಿ ಒಂದೇ ಸೀಸನ್‌ನಲ್ಲಿ 400+ ರನ್ ಗಳಿಸಿರುವುದು ಒಟ್ಟು 11 ಬಾರಿ ಇದು ಇನ್ನೂ ಅಪ್ರತಿಮ ಸಾಧನೆ ಆಗಿದೆ. ಇದರ ನಡುವೆ, ಸತತ ಸೀಸನ್‌ಗಳಲ್ಲಿ 400+ ರನ್ ಗಳಿಸುವ ಸಾಧನೆಯಲ್ಲಿ ಗಿಲ್ ಈಗ ಎಬಿಡಿ ವಿಲಿಯರ್ಸ್ ಅವರನ್ನು ಹಿಂದಿಕ್ಕಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಹೋಟೆಲ್, ಆಟೋ ಗ್ಯಾಸ್ ಅಷ್ಟೇ ಅಲ್ಲ ಈಗ ಮದುವೆ ಕೂಡ ದುಬಾರಿ! – Kannada News | Middle East Crisis Impact: Wedding Costs Surge by 30 Peercent in Karnataka; Imported Decor and Food Become Expensive

ಬೆಂಗಳೂರು, ಮೇ 10: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯು ಕೇವಲ ಪೆಟ್ರೋಲ್, ಡೀಸೆಲ್ ಅಥವಾ ಗ್ಯಾಸ್ ಬೆಲೆಗಳ ಮೇಲೆ ಮಾತ್ರವಲ್ಲದೆ, ಸಾಮಾನ್ಯ ಜನರ ಜೀವನದ ಅವಿಭಾಜ್ಯ ಅಂಗವಾದ ಮದುವೆ (Marriages) ಸಮಾರಂಭಗಳಿಗೂ ಭಾರಿ ಹೊಡೆತ ನೀಡಿದೆ. ಯುದ್ಧದ ಹಿನ್ನೆಲೆಯಲ್ಲಿ ಅಲಂಕಾರಿಕ ವಸ್ತುಗಳು ಮತ್ತು ಕಚ್ಚಾ ಪದಾರ್ಥಗಳ ಆಮದು ಕುಂಠಿತಗೊಂಡಿದ್ದು, ಬೆಂಗಳೂರಿನಲ್ಲಿ ಈ ಬಾರಿ ಮದುವೆಯ ಸೀಸನ್ ಅಧ್ವಾನಗೊಂಡಿದೆ. ಮದುವೆ ಸಂಘಟಕರ ವ್ಯವಹಾರದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿದ್ದು, ಬೆಲೆ ಏರಿಕೆಯ ಕಾರಣದಿಂದಾಗಿ ‘ಅದ್ದೂರಿ ಮದುವೆ’ಗಳು ಈಗ ಸರಳವಾಗುತ್ತಿವೆ ಎಂದು ವರದಿಯಾಗಿದೆ.

ಮುಖ್ಯಾಂಶಗಳು

  • ಆಮದು ಸಾಮಗ್ರಿಗಳ ಕೊರತೆಯಿಂದಾಗಿ ಮದುವೆ ವೆಚ್ಚದಲ್ಲಿ ಶೇ 30 ರಷ್ಟು ಹೆಚ್ಚಳ.
  • ಬೆಲೆ ಏರಿಕೆ ಬಿಸಿಯಿಂದಾಗಿ ಅತಿಥಿಗಳ ಪಟ್ಟಿ ಮತ್ತು ಕಾರ್ಯಕ್ರಮಗಳ ಸಂಖ್ಯೆಯಲ್ಲಿ ಕಡಿತ.
  • ಆಹಾರದ ಮೆನು ಉಳಿಸಿಕೊಳ್ಳಲು ಅಲಂಕಾರ ಮತ್ತು ಇತರೆ ವೆಚ್ಚಗಳಿಗೆ ಕತ್ತರಿ.

ಬಜೆಟ್ ಮೀರಿದ ಮದುವೆ ವೆಚ್ಚ

ಯುದ್ಧ ಮತ್ತು ಅಂತರಾಷ್ಟ್ರೀಯ ಬಿಕ್ಕಟ್ಟಿನಿಂದಾಗಿ ಮದುವೆಯ ಬಜೆಟ್ ಶೇ 30 ರಿಂದ 40 ರಷ್ಟು ಏರಿಕೆಯಾಗಿದೆ ಎಂದು ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ. ಒಂದು ವರ್ಷದ ಹಿಂದೆಯೇ ಮದುವೆ ಯೋಜನೆ ರೂಪಿಸಿದ್ದರೂ, ಪ್ರಸ್ತುತ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಅನಿವಾರ್ಯವಾಗಿ ಕಾರ್ಯಕ್ರಮಗಳನ್ನು ಕಡಿತಗೊಳಿಸಲಾಗುತ್ತಿದೆ. ವಿದೇಶಿ ಹೂವುಗಳು ಮತ್ತು ಅಲಂಕಾರಿಕ ವಸ್ತುಗಳ ಲಭ್ಯತೆ ಕಡಿಮೆಯಾಗಿದ್ದು, ಐಷಾರಾಮಿ ಮದುವೆಗಳ ಸಂದರ್ಭದಲ್ಲೂ ಜನರು ಅನಿವಾರ್ಯವಾಗಿ ಸ್ಥಳೀಯ ವಸ್ತುಗಳ ಮೊರೆ ಹೋಗಬೇಕಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಉಲ್ಲೇಖಿಸಿದೆ.

ಆಹಾರದ ಮೇಲೆ ಹೆಚ್ಚಿನ ಪ್ರಭಾವ

ಭಾರತೀಯ ಮದುವೆಗಳಲ್ಲಿ ಊಟಕ್ಕೆ ಅತಿ ಹೆಚ್ಚಿನ ಪ್ರಾಮುಖ್ಯತೆ ಇರುತ್ತದೆ. ಗ್ಯಾಸ್ ಮತ್ತು ದಿನಸಿ ಪದಾರ್ಥಗಳ ಬೆಲೆ ಏರಿಕೆಯಾದರೂ, ಜನರು ಆಹಾರದ ಮೆನು ಬದಲಿಸಲು ಇಷ್ಟಪಡುತ್ತಿಲ್ಲ. ಬದಲಾಗಿ, ಹೋಟೆಲ್‌ಗಳು ಮತ್ತು ಕ್ಯಾಟರಿಂಗ್ ಸಂಸ್ಥೆಗಳು ಅಡುಗೆಗಾಗಿ ಅತಿ ಹೆಚ್ಚು ಗ್ಯಾಸ್ ಬಳಸುವ ಪದಾರ್ಥಗಳ ಬದಲಿಗೆ ಪರ್ಯಾಯ ವ್ಯವಸ್ಥೆಗಳನ್ನು ಹುಡುಕುತ್ತಿವೆ. ಕಾರ್ಮಿಕರ ಕೊರತೆಯೂ ಮದುವೆ ಉದ್ಯಮಕ್ಕೆ ದೊಡ್ಡ ಸವಾಲಾಗಿ ಪರಿಣಾಮ ಬೀರಿದೆ.

ಚಳಿಗಾಲದ ಮದುವೆಗಳಿಗೆ ಭೀತಿ

ಸದ್ಯಕ್ಕೆ ಮಾರುಕಟ್ಟೆಯಲ್ಲಿ ಹಳೆಯ ಸ್ಟಾಕ್ ಇರುವುದರಿಂದ ಬೆಲೆಗಳು ಸ್ವಲ್ಪ ಮಟ್ಟಿಗೆ ನಿಯಂತ್ರಣದಲ್ಲಿವೆ. ಆದರೆ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಹೀಗೆಯೇ ಮುಂದುವರಿದು ಆಮದು ಸ್ಥಗಿತಗೊಂಡರೆ, ಬರುವ ಚಳಿಗಾಲದ ಮದುವೆ ಸೀಸನ್ ವೇಳೆ ಬೆಲೆಗಳು ಇನ್ನೂ ಗಗನಕ್ಕೇರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಒಟ್ಟಿನಲ್ಲಿ ಯುದ್ಧದ ಪರಿಣಾಮವು ಮದುವೆ ಮನೆಯ ಸಂಭ್ರಮದ ಮೇಲೆ ಆರ್ಥಿಕ ಹೊರೆಯಾಗಿ ಪರಿಣಮಿಸಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ – Kannada News | Challakere Prepares for D. Sudhakars Final Rites and Public Viewing

ಚಿತ್ರದುರ್ಗ, ಮೇ 10: ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ (65) ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ತಂಡದ ತವರು ಮೈದಾನ ಬದಲಾಗಲು ಇದುವೇ ಕಾರಣ!

Source link

RR vs GT, IPL 2026: ಬೌಲಿಂಗ್‌ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು – Kannada News | Jofra Archer flopped in bowling What did captain Yashasvi Jaiswal say after the defeat

ಬೆಂಗಳೂರು (ಮೇ. 10): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಐಪಿಎಲ್ 2026ರಲ್ಲಿ ತನ್ನ ತವರಿನ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ ಮೂರನೇ ಸೋಲನ್ನು ಕಂಡಿತು. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ 77 ರನ್‌ಗಳಿಂದ ಸೋತಿತು. ನಿಯಮಿತ ನಾಯಕ ರಿಯಾನ್ ಪರಾಗ್ ಗಾಯದ ಕಾರಣದಿಂದ ಹೊರಗುಳಿದ ಕಾರಣ, ಯಶಸ್ವಿ ಜೈಸ್ವಾಲ್ ಕ್ಯಾಪ್ಟನ್ ಜವಾಬ್ದಾರಿ ನಾಯಕತ್ವ ವಹಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 229 ರನ್‌ಗಳ ದೊಡ್ಡ ಮೊತ್ತ ಕಲೆಹಾಕಿತು. ಇದನ್ನು ಬೆನ್ನತ್ತಿದ ರಾಜಸ್ಥಾನ ತಂಡ 152 ರನ್‌ಗಳಿಗೆ ಮಾತ್ರ ಸೀಮಿತವಾಯಿತು. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ತಂಡ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಆರ್ಚರ್ ಬಗ್ಗೆ ಜೈಸ್ವಾಲ್ ಸಮರ್ಥನೆ

ಈ ಪಂದ್ಯದಲ್ಲಿ ಜೋಫ್ರಾ ಆರ್ಚರ್ ನಿರೀಕ್ಷಿತ ಮಟ್ಟದಲ್ಲಿ ಬೌಲಿಂಗ್ ಮಾಡಲಿಲ್ಲ. ತಮ್ಮ ಮೊದಲ ಓವರ್‌ನಲ್ಲೇ 11 ಎಸೆತಗಳನ್ನು ಎಸೆದು 18 ರನ್‌ಗಳನ್ನು ಬಿಟ್ಟುಕೊಟ್ಟರು. ತಮ್ಮ ಸ್ಪೆಲ್‌ನಲ್ಲಿ ಅವರು 3 ಓವರ್‌ಗಳಲ್ಲಿ 46 ರನ್‌ಗಳನ್ನು ನೀಡಿದರು. ಆದರೂ ನಾಯಕ ಜೈಸ್ವಾಲ್ ಅವರ ಪರ ನಿಂತು ಮಾತನಾಡಿದರು.

‘‘ಕ್ರಿಕೆಟ್‌ನಲ್ಲಿ ಎಲ್ಲ ದಿನವೂ ಒಂದೇ ರೀತಿಯ ಪ್ರದರ್ಶನ ಸಾಧ್ಯವಿಲ್ಲ. ಕೆಲ ದಿನಗಳು ನಮ್ಮದಾಗುತ್ತವೆ, ಕೆಲ ದಿನಗಳು ಹಾಗಾಗುವುದಿಲ್ಲ. ಆದರೆ ಆರ್ಚರ್ ಇತ್ತಿಚಿನ ಪಂದ್ಯಗಳಲ್ಲಿ ನಮ್ಮ ತಂಡಕ್ಕೆ ಉತ್ತಮವಾಗಿ ಸಹಕರಿಸಿದ್ದಾರೆ. ಅವರು ಮತ್ತೆ ಶೀಘ್ರದಲ್ಲೇ ಉತ್ತಮವಾಗಿ ಮರಳುತ್ತಾರೆ ಎಂಬ ವಿಶ್ವಾಸ ನನಗಿದೆ’’ ಎಂದು ಜೈಸ್ವಾಲ್ ಹೇಳಿದರು.

ಪವರ್‌ಪ್ಲೇನಲ್ಲಿ ಒತ್ತಡ

ಗುಜರಾತ್ ತಂಡದ ಶುಭ್​ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಪವರ್‌ಪ್ಲೇನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ ಬೌಲರ್‌ಗಳ ಮೇಲೆ ಭಾರೀ ಒತ್ತಡ ಹೇರಿದರು. ಆರಂಭಿಕ ಓವರ್‌ಗಳಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

RR vs GT: ಗುಜರಾತ್ ಸಾಂಘಿಕ ಪ್ರದರ್ಶನಕ್ಕೆ ಮಣಿದ ರಾಜಸ್ಥಾನ

ಈ ಬಗ್ಗೆ ಜೈಸ್ವಾಲ್ ಮಾತನಾಡುತ್ತಾ, ‘‘ನಾವು ಸರಿಯಾದ ಲೈನ್ ಮತ್ತು ಲೆಂಗ್ತ್‌ನಲ್ಲಿ ಬೌಲಿಂಗ್ ಮಾಡಲು ಪ್ರಯತ್ನಿಸಿದ್ದೇವೆ. ಆದರೆ ಎದುರಾಳಿ ಬ್ಯಾಟ್ಸ್‌ಮನ್‌ಗಳು ತುಂಬಾ ಚೆನ್ನಾಗಿ ಆಡಿದರು. ಬೌಂಡರಿಗಳನ್ನು ಹೇಗೆ ತಡೆಯಬೇಕು ಎಂಬುದರ ಬಗ್ಗೆ ನಾವು ಯೋಚಿಸಿದ್ದೇವೆ. ಆದರೆ ಅದು ಅವರಿಂದ ಒಳ್ಳೆಯ ಪ್ರದರ್ಶನವಾಗಿತ್ತು’’ ಎಂದರು.

ಮುಂದಿನ ಪಂದ್ಯಕ್ಕೆ ಗಮನ

‘‘ಈ ಪಂದ್ಯದಿಂದ ನಾವು ಕಲಿಯಬೇಕಾದುದನ್ನು ಗಮನಿಸುತ್ತೇವೆ. ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ನಾವು ಸಿದ್ಧರಾಗುತ್ತೇವೆ’’ ಎಂದು ಜೈಸ್ವಾಲ್ ತಿಳಿಸಿದ್ದಾರೆ.

ಗುಜರಾತ್ ದೊಡ್ಡ ಜಿಗಿತ

ಈ ಪಂದ್ಯಕ್ಕೂ ಮೊದಲು ಐದನೇ ಸ್ಥಾನದಲ್ಲಿ ಸಂಕಷ್ಟದಲ್ಲಿದ್ದ ಗುಜರಾತ್ ಈಗ ಎರಡನೇ ಸ್ಥಾನಕ್ಕೆ ಜಿಗಿದಿದೆ. ಏತನ್ಮಧ್ಯೆ, ಇಲ್ಲಿಯವರೆಗೆ ಟೂರ್ನಿಯಲ್ಲಿ ಪ್ರಾಬಲ್ಯ ಹೊಂದಿದ್ದ ರಾಜಸ್ಥಾನ ತಂಡವು ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಜಿಟಿ 11 ಪಂದ್ಯಗಳಿಂದ ಏಳು ಗೆಲುವು ಮತ್ತು ನಾಲ್ಕು ಸೋಲುಗಳೊಂದಿಗೆ, 14 ಅಂಕಗಳನ್ನು ಹೊಂದಿದೆ. ಅತ್ತ ರಾಜಸ್ಥಾನಕ್ಕೆ ಈ ಸೋಲು ದುಃಸ್ವಪ್ನವಾಗಿದೆ. ಈ ಋತುವಿನಲ್ಲಿ ರಾಜಸ್ಥಾನ್ ಮೊದಲ ಬಾರಿಗೆ ಅಗ್ರ ನಾಲ್ಕರಿಂದ ಹೊರಬಿದ್ದಿದೆ. 11 ಪಂದ್ಯಗಳಿಂದ ಆರು ಗೆಲುವುಗಳು ಮತ್ತು ಐದು ಸೋಲುಗಳೊಂದಿಗೆ, ರಾಯಲ್ಸ್ 12 ಅಂಕಗಳನ್ನು ಹೊಂದಿ ಐದನೇ ಸ್ಥಾನಕ್ಕೆ ಕುಸಿದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ – Kannada News | Major Records Damaged as Rainwater Floods PWD Office in Bengaluru; Files Dried Like Papads

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು!

ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ.

ಮುಖ್ಯಾಂಶಗಳು

  • ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ.
  • ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಸ್ವಾಧೀನ ಮತ್ತು ಪರಿಹಾರದ ಕಡತಗಳು ನೀರು ಪಾಲು.
  • ಒದ್ದೆಯಾಗಿರುವ ಸರ್ಕಾರಿ ಫೈಲ್‌ಗಳನ್ನು ಹಪ್ಪಳದಂತೆ ಕಚೇರಿ ಮುಂದೆ ಒಣಗಿಸುತ್ತಿರುವ ಅಧಿಕಾರಿಗಳು

ಅಧಿಕಾರಿಗಳ ಎಡವಟ್ಟು

ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ನೆಲಮಹಡಿಯಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ನೀರು ನುಗ್ಗಿತ್ತು. ಈ ಸಂದರ್ಭದಲ್ಲಿ ಭೂಸ್ವಾಧೀನ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಪ್ರಮುಖ ಕಡತಗಳು ಸಂಪೂರ್ಣವಾಗಿ ಒದ್ದೆಯಾಗಿವೆ. ದಾಖಲೆಗಳ ಮಹತ್ವ ಅರಿತೂ ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸದ ಅಧಿಕಾರಿಗಳ ಬೇಜವಾಬ್ದಾರಿತನವೇ ಈ ಎಡವಟ್ಟಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ D. Sudhakar Passes Away: ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ

ಸಾರ್ವಜನಿಕರ ಆಕ್ರೋಶ

ಪ್ರಸ್ತುತ ಹಾನಿಗೊಳಗಾದ ಫೈಲ್‌ಗಳನ್ನು ಕಚೇರಿಯ ಮುಂಭಾಗದಲ್ಲಿ ಹಪ್ಪಳ ಒಣಗಿಸುವ ರೀತಿಯಲ್ಲಿ ಬಿಸಿಲಿಗೆ ಹಾಕಲಾಗಿದೆ. ದಾಖಲೆಗಳಲ್ಲಿನ ಬರಹಗಳು ಮತ್ತು ಟಿಪ್ಪಣಿಗಳು ಅಳಿಸಿ ಹೋಗಿರುವ ಆತಂಕವಿದ್ದು, ಆಡಳಿತ ವ್ಯವಸ್ಥೆಯ ಈ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟ್ಯಂತರ ರೂಪಾಯಿ ಮೊತ್ತದ ವ್ಯವಹಾರಗಳ ಮಾಹಿತಿಯುಳ್ಳ ಈ ದಾಖಲೆಗಳ ನಾಶದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫಿಫಾ ವಿಶ್ವಕಪ್ 2026: ಉದ್ಘಾಟನಾ ಸಮಾರಂಭದಲ್ಲಿ ಮಿಂಚಲಿರುವ ನೋರಾ ಫತೇಹಿ – Kannada News | Indian dancer Nora Fatehi to perform live at FIFA World Cup 2026 Opening Ceremony Toronto

ಭಾರತೀಯ ಚಿತ್ರರಂಗದ ಖ್ಯಾತ ನಟಿ, ಅದ್ಭುತ ನೃತ್ಯಗಾರ್ತಿ ನೋರಾ ಫತೇಹಿ (Nora Fatehi) ಅವರು ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಭಾರತದ ಹೆಸರನ್ನು ರಾರಾಜಿಸುವಂತೆ ಮಾಡುತ್ತಿದ್ದಾರೆ. 2026ರ ಫಿಫಾ ವಿಶ್ವಕಪ್‌ನ (FIFA World Cup 2026) ಕೆನಡಾ ಆವೃತ್ತಿಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ನೃತ್ಯ ಪ್ರದರ್ಶನದ ಜೊತೆಗೆ ಹಾಡನ್ನೂ ಹಾಡಲಿದ್ದಾರೆ. ಈ ಉದ್ಘಾಟನಾ ಸಮಾರಂಭವು ಜೂನ್ 12ರಂದು ಕೆನಡಾದ ಟೊರೊಂಟೊದಲ್ಲಿರುವ ಬಿಎಂಒ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ನೋರಾ ಫತೇಹಿ ಅವರು ಈ ಬಾರಿ ಕೇವಲ ನೃತ್ಯಕ್ಕೆ ಸೀಮಿತವಾಗದೆ, ಗಾಯಕಿಯಾಗಿಯೂ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಗಾಯಕರ ಜೊತೆಗೆ ನೋರಾ ವೇದಿಕೆ ಹಂಚಿಕೊಳ್ಳಲಿದ್ದಾರೆ. 2022ರ ಫಿಫಾ ವಿಶ್ವಕಪ್ ಫೈನಲ್‌ನಲ್ಲೂ ನೋರಾ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಈಗ ಎರಡನೇ ಬಾರಿಗೆ ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ಅವಕಾಶ ಪಡೆದಿದ್ದಾರೆ.

ಭಾರತದಲ್ಲಿ ಹೆಸರು ಗಳಿಸಿರುವ ನೋರಾ ಫತೇಹಿ ಅವರ ಪ್ರತಿಭೆಗೆ ಈಗ ಜಾಗತಿಕ ಮಟ್ಟದಲ್ಲಿ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿಂದೆ ಟಿ20 ವಿಶ್ವಕಪ್ ಸಂಬಂಧಿತ ಕಾರ್ಯಕ್ರಮಗಳಲ್ಲೂ ಅವರು ಕಾಣಿಸಿಕೊಂಡಿದ್ದರು. ಈಗ ಫಿಫಾ ಉದ್ಘಾಟನಾ ಸಮಾರಂಭದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅವರ ವೃತ್ತಿಜೀವನದ ಮೈಲಿಗಲ್ಲು ಎನ್ನಲಾಗಿದೆ.

‘ಟೊರೊಂಟೊದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವು ಕೆನಡಾದ ಅಸ್ಮಿತೆ ಮತ್ತು ಫಿಫಾ ವಿಶ್ವಕಪ್‌ನ ಶಕ್ತಿಯನ್ನು ಪ್ರತಿಬಿಂಬಿಸಲಿದೆ’ ಎಂದು ಫಿಫಾ ಅಧ್ಯಕ್ಷ ಜಿಯಾನಿ ಇನ್ಫಾಂಟಿನೊ ತಿಳಿಸಿದ್ದಾರೆ. ನೋರಾ ಫತೇಹಿ ಅವರು ಫುಟ್ಬಾಲ್ ಪ್ರೇಮಿಗಳನ್ನು ತಮ್ಮ ಹಾಡು ಮತ್ತು ನೃತ್ಯದ ಮೂಲಕ ರಂಜಿಸಲು ಸಿದ್ಧರಾಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ.

ಇದನ್ನೂ ಓದಿ: ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ

ಒಂದೆಡೆ ಫಿಫಾ ಸುದ್ದಿ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ನೋರಾ ಫತೇಹಿ ಅವರ ಹೊಸ ಐ-ಪಾಪ್ ಹಾಡು ‘ಬಾಡಿ ರೋಲ್’ ಬಿಡುಗಡೆಯಾಗುತ್ತಿದೆ. ಖ್ಯಾತ ರ‍್ಯಾಪರ್ ಹನಿ ಸಿಂಗ್ ಅವರೊಂದಿಗೆ ನೋರಾ ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಇದು ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: RCB vs MI ಪಂದ್ಯಕ್ಕೆ 5 ಆಟಗಾರರು ಅಲಭ್ಯ

Source link

Exit mobile version