ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ – Kannada News | Big Twist To Chikkaballapur tejaswini Murder Case: Lover Kills for She toucher For Money

ಚಿಕ್ಕಬಳ್ಳಾಪುರ, (ಮಾರ್ಚ್ 02): ನಗರದ ಶಾಂತಿನಗರ ಬಡಾವಣೆ ನಿವಾಸಿ ತೇಜಸ್ವಿನಿಗೆ (tejaswini )ಇನ್ನು 30 ವರ್ಷ ವಯಸ್ಸು. ತಂದೆ-ತಾಯಿಗೆ ಒಬ್ಬಳೇ ಹೆಣ್ಣು ಮಗಳು. ಮನೆಯಲ್ಲಿ ಬಡತನವಿದ್ದರೂ ಈಕೆಗೇನು ಕೊರತೆ ಇರಲಿಲ್ಲ. ಗಂಡ ಮಕ್ಕಳ ಜೊತೆ ಸುಖವಾಗಿರಬೇಕಿದ್ದ ಈಕೆ ಏನೇನೋ ಮಾಡಲು ಹೋಗಿ ಕೊನೆಗೆ ಹೆಣವಾಗಿದ್ದಾಳೆ. ತೇಜಸ್ವಿನಿ 20ನೇ ವಯಸ್ಸಿನಲ್ಲೇ ಓಡಿ ಹೋಗಿ ಲವ್ ಮ್ಯಾರೇಜ್ ಆಗಿದ್ದಳು. ಒಂದು ಮಗು ಆದ ಬಳಿಕ ಕುಟುಂಬ ಕಲಹ ಉಂಟಾಗಿ ಆತನನ್ನು ದೂರ ಮಾಡಿ ಮತ್ತೊಬ್ಬನ ಜೊತೆ ಓಡಿ ಹೋಗಿ ಮದ್ವೆಯಾಗಿದ್ದಳು. ಆಗ ಮತ್ತೊಂದು ಮಗುವಾದ ಬಳಿಕ ಆತನಿಂದ ದೂರವಾಗಿ ಮಕ್ಕಳೊಂದಿಗೆ ಪ್ರತ್ಯೇಕವಾಸವಾಗಿದ್ದಳು. ಇದೇ ಸಂದರ್ಭದಲ್ಲಿ ಸಂದೀಪ್ ಎನ್ನುವ ಯುವಕನನ್ನು ಬುಟ್ಟಿಗೆ ಹಾಕಿಕೊಂಡು ಆತನೊಂದಿಗೆ ಲಿವಿಂಗ್ ರಿಲೇಶನ್ ಶಿಪ್​​ನಲ್ಲಿದ್ದಳು. ಇದಾಗಿ ಸ್ವಲ್ಪ ದಿನದಲ್ಲೇ ಬರ್ಬರವಾಗಿ ಹತ್ಯೆಯಾಗಿದ್ದಾಳೆ.

ಇಬ್ಬರನ್ನು ಮದುವೆಯಾಗಿದ್ದ ತೇಜಸ್ವಿನಿ

ತೇಜಸ್ವಿನಿಗೆ 20 ವರ್ಷ ತುಂಬುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಸೀಕಲ್ ಗ್ರಾಮದ ಶ್ರೀನಿವಾಸ್ ಎನ್ನುವಾತನನ್ನು ಪ್ರೀತಿಸಿ, ಮನೆಯಲ್ಲಿ ಹೇಳದೇ, ಕೇಳದೇ ಆತನಿಂದೆ ಹೋಗಿದ್ದಳು. ಆತನನ್ನೇ ಮದುವೆ ಮಾಡಿಕೊಂಡಿದ್ದಳು. ಇಬ್ಬರಿಗೆ ಯುವರಾಜ್ ಎನ್ನುವ ಮಗ ಹುಟ್ಟಿದ್ದ. ಆದರೆ ಕುಟುಂಬ ಕಲಹ ಹಿನ್ನಲೆ ಗಂಡ ಶ್ರೀನಿವಾಸನನ್ನು ತೊರೆದು ತವರುಮನೆಯಲ್ಲಿ ನೆಲೆಸಿದ್ದಳು. ಇನ್ನು ತೇಜಸ್ವಿನಿ 8 ವರ್ಷಗಳ ಹಿಂದೆ ಗಂಡ ಶ್ರೀನಿವಾಸನನ್ನು ತೊರೆದು ತವರು ಮನೆಯಲ್ಲಿದ್ದಾಗ 5 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿ ಗ್ರಾಮದ ಚಂದ್ರಶೇಖರ್‍ನನ್ನು ಪ್ರೀತಿಸಿ, ಆತನಿಂದೆ ಹೋಗಿದ್ದಳು. ನಂತರ ಆತನನ್ನೇ ಮದುವೆ ಮಾಡಿಕೊಂಡಿದ್ದು, ಇಬ್ಬರಿಗೂ ಜನಿಸಿದ 3 ವರ್ಷದ ಹೆಣ್ಣು ಮಗಳಿದ್ದಾಳೆ.

ಇದನ್ನೂ ಓದಿ; ಗಂಡನನ್ನ ತೊರೆದು ಬಂದ ಪ್ರೇಯಿಸಿಗೆ ಚಾಕುವಿನಿಂದ ಇರಿದ ಪ್ರಿಯಕರ: ಮಕ್ಕಳು ಅನಾಥ

ಇಬ್ಬರನ್ನೂ ಬಿಟ್ಟು ಮತ್ತೊಬ್ಬನ ಜತೆ ಲವ್ವಿಡವ್ವಿ

ಇನ್ನು ಚಂದ್ರಶೇಖರ್ ಜೊತೆ ಸಂಸಾರ ಸಾಕಾದ ಕಾರಣ ಆತನನ್ನು ತೊರೆದು, ಚಿಕ್ಕಬಳ್ಳಾಪುರದಲ್ಲಿ ವಾಸವಾಗಿದ್ದಳು. ನಗರದ ಹೋಟೆಲ್‍ಗಳಲ್ಲಿ ಪಾತ್ರೆ ತೊಳೆದುಕೊಂಡು ಅಲ್ಲಿ-ಇಲ್ಲಿ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕಿಕೊಂಡಿದ್ದಳು. ಹೀಗೆ ಮದುವೆಯೊಂದರ ರಿಷೆಪ್ಷನಿಸ್ಟ್ ಕೆಲಸಕ್ಕೆ ಹೋಗಿದ್ದಾಗ ಸಂದೀಪ್ ಎನ್ನುವ ಯುವಕ ಪರಿಚಯವಾಗಿದ್ದು, ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಎರಡು ಗಂಡಂದಿರನ್ನು ಬಿಟ್ಟು ಇದೀಗ ಪರಿಯಚವಾದ ಸಂದೀಪ್ ನೊಂದಿಗೆ 3ನೇ ಮದುವೆಗೆ ಸನ್ನದ್ದಳಾಗಿದ್ದಳು.

ಮಂಚದಲ್ಲಿದ್ದಾಗಲೇ ಚಾಕು ಇರಿತ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತಮ್ಮನಹಳ್ಳಿ ಗ್ರಾಮದ ಸಂದೀಪ್ ಹಾಗೂ ತೇಜಸ್ವಿನಿ ಪ್ರೇಮದ ಕಡಲಲ್ಲಿ ತೇಲಾಡುತ್ತಿದ್ದು, ಕೊನೆಗೆ ಚಿಕ್ಕಬಳ್ಳಾಪುರದಲ್ಲಿ ಸಂದೀಪ್​​ನೊಂದಿಗೆ ಲಿವಿಂಗ್ ರಿಲೇಶಷನ್ ಶಿಪ್​​ನಲ್ಲಿದ್ದಳು. ಹೀಗಿರುವಾಗ ಫೆಬ್ರವರಿ 25 ರಂದು ಬೆಳಿಗ್ಗೆ 4 ಗಂಟೆ ಸಮಯದಲ್ಲಿ ಮಂಚದ ಮೇಲಿದ್ದ ಜೋಡಿಗೆ ಅದೇನಾಯ್ತೋ ಗೊತ್ತಿಲ್ಲ. ಇಬ್ಬರು ಕಿತ್ತಾಡಿಕೊಂಡಿದ್ದು, ಈ ವೇಳೆ ಸಂದೀಪ್ ತೇಜಸ್ವಿನಿಯ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಬಳಿ ಸಂದೀಪ್ ತಾನೇ ಆಕೆಯನ್ನು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ. ನಿದ್ದೆಗಣ್ಣಲ್ಲಿ ಮಂಚದ ಮೇಲಿಂದ ಕೆಳಗೆ ಬಿದ್ದಾಗ ಏನೋ ಚುಚ್ಚಿಕೊಂಡಿದೆ ಎಂದು ವೈದ್ಯರಿಗೆ ಹೇಳಿ, ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದ.

ಹಣ, ಎಣ್ಣೆಗಾಗಿ ಪೀಡಿಸುತ್ತಿದ್ದಳು

ಅನುಮಾನಗೊಂಡು ಮನೆಯಲ್ಲಿದ್ದ ತೇಜಸ್ವಿನಿ ಮಗನನ್ನು ವಿಚಾರಿಸಿದಾಗ ಸತ್ಯ ಬಯಲಾಗಿತ್ತು. ತಾಯಿ ಹಾಗೂ ಸಂದೀಪ್ ರಾತ್ರಿ ಜಗಳ ಮಾಡಿಕೊಂಡಿದ್ದರು. ಸಂದೀಪ್‍ನೇ ತಾಯಿಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆಂದು ತನ್ನ ಸಂಬಂಧಿಕರಿಗೆ ತಿಳಿಸಿದ್ದ. ಇನ್ನು ಮೃತಳ ಅಣ್ಣ ಗಿರೀಶ್ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಪೊಲೀಸರು ಆರೋಪಿ ಸಂದೀಪ್‍ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಪ್ರಿಯತಮೆ ತೇಜಸ್ವಿನಿ ತನ್ನನ್ನು ಮದುವೆ ಮಾಡಿಕೊಳ್ಳುವಂತೆ ಹಾಗೂ ಹಣ, ಎಣ್ಣೆಗಾಗಿ ಪೀಡಿಸುತ್ತಿದ್ದಳು. ಇದರಿಂದ ಹತಾಶನಾಗಿ ಚಾಕುವಿನಿಂದ ಚುಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆ.

ಹೀಗೆ ಇಬ್ಬರು ಗಂಡಂದಿರನ್ನು ಬಿಟ್ಟು ಮತ್ತೊಬ್ಬನ ಜತೆ ಸೇರಿ ತೇಜಸ್ವಿನಿ ಹತ್ಯೆಯಾಗಿದ್ದು, ಮತ್ತೊಂದೆಡೆ ತಮ್ಮದಲ್ಲದ ತಪ್ಪಿಗೆ ತೇಜಸ್ವಿನಿಯ ಚಿಕ್ಕಮಕ್ಕಳು ಅನಾಥವಾಗಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ – Kannada News | Ayatollah Khamenei’s Wife Mansoureh Khojasteh Killed In US Israel Attack

ಟೆಹ್ರಾನ್, ಮಾರ್ಚ್ 2: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು.

ಇರಾನ್‌ನ ಮಶಾದ್‌ನಲ್ಲಿ ಜನಿಸಿದ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (ಐಆರ್‌ಐಬಿ) ಮಾಜಿ ಉಪ ನಿರ್ದೇಶಕ ಹಸನ್ ಖೋಜಸ್ತೆ ಬಘರ್ಜಾದೆಹ್ ಅವರ ಸಹೋದರಿಯಾಗಿದ್ದ 79 ವರ್ಷದ ಮನ್ಸೌರೆಹ್ ಖೋಜಸ್ತೆಹ್ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದಾಗ ಟೆಹ್ರಾನ್‌ನಲ್ಲಿರುವ ತಮ್ಮ ಮನೆಯಲ್ಲಿ ಖಮೇನಿ ಅವರೊಂದಿಗೆ ಇದ್ದರು. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಖಮೇನಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಮನ್ಸೌರೆಹ್ ಖೋಜಸ್ತೆಹ್ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!

ಖಮೇನಿ ಮತ್ತು ಮನ್ಸೌರೆಹ್ ಖೋಜಸ್ತೆಹ್ 1964ರಲ್ಲಿ ವಿವಾಹವಾದರು. ಅವರಿಗೆ 6 ಮಕ್ಕಳು. ಅವರಲ್ಲಿ 4 ಗಂಡು ಮಕ್ಕಳು (ಮೊಸ್ತಫಾ, ಮೊಜ್ತಬಾ, ಮಸೌದ್ ಮತ್ತು ಮೇಸಮ್) ಮತ್ತು ಇಬ್ಬರು ಹೆಣ್ಣುಮಕ್ಕಳು (ಹೋಡಾ ಮತ್ತು ಬೋಶ್ರಾ). ಖಮೇನಿಯ ಸಾವು ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿಯನ್ನು ತೀವ್ರವಾಗಿ ಉಲ್ಬಣಗೊಳಿಸಿದೆ. ಇರಾನ್ ತನ್ನ ಸರ್ವೋಚ್ಚ ನಾಯಕನ ಸಾವಿಗೆ ಸೇಡು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ.

ಇರಾನ್ ಗಲ್ಫ್ ರಾಷ್ಟ್ರಗಳ ಅನೇಕ ಯುಎಸ್ ವಾಯುನೆಲೆಗಳನ್ನು ಸಹ ಗುರಿಯಾಗಿಸಿಕೊಂಡಿದೆ. ಇರಾನ್ ಇಸ್ರೇಲ್ ಅನ್ನು ಸಹ ಗುರಿಯಾಗಿಸಿಕೊಂಡಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ಸಹ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ – Kannada News | Mallikarjuna Mutya POSCO Case: Victim Statement Recorded in Shahapur Court

ಮಲ್ಲಿಕಾರ್ಜುನ ಮುತ್ಯಾImage Credit source: google

ಯಾದಗಿರಿ, ಮಾರ್ಚ್​ 02: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ.

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಹಿನ್ನಲೆ ಇಂದು ಶಹಾಪುರ ಜೆಎಂಸಿ ಕೋರ್ಟ್ ನ್ಯಾಯಾಧೀಶರ ಮುಂದೆ ಸಂತ್ರಸ್ತ ಹೇಳಿಕೆ ದಾಖಲಿಸಲಾಗಿದೆ. ಬಳಿಕ ಬಾಲಕಿ ಹೇಳಿಕೆಯ ದಾಖಲು ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಹೀಗಾಗಿ ಸಂತ್ರಸ್ತ ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾ ಭವಿಷ್ಯ ನಿಂತಿದೆ.

ಇದನ್ನೂ ಓದಿ: ಪೋಕ್ಸೋ ಕೇಸ್​​:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್

ಇನ್ನು ತಮ್ಮ ವಿರುದ್ಧದ ಪೋಕ್ಸೋ ಕೇಸ್​ ರದ್ದು ಕೋರಿ, ಮಲ್ಲಿಕಾರ್ಜುನ ಮುತ್ಯಾ ಕೂಡ ಇತ್ತೀಚೆಗೆ ಕಲಬುರಗಿ ಹೈಕೋರ್ಟ್ ಮೋರೆ ಹೋಗಿದ್ದರು. ಪ್ರಕರಣದ ವಿಚಾರಣೆಯನ್ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿತ್ತು. ಮಲ್ಲಿಕಾರ್ಜುನ ಮುತ್ಯಾ ತೆರೆಮರೆಯಲ್ಲೇ ಇದ್ದು, ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆ ಮೂಲಕ ತಾವು ಎಲ್ಲಿಗೆ ಹೋಗಿದ್ದೇನೆ ಎನ್ನುವುದನ್ನು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು

ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ಹರಿಬಿಟ್ಟ ಬೆನ್ನಲ್ಲೇ ಸಂತ್ರಸ್ತೆ ಬಾಲಕಿಯ ಪೋಷಕರು ಕೂಡ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಕಿಡಿಗೇಡಿಗಳು ವಿಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಅಪ್ಪಾ ಅವರದ್ದೂ ಯಾವುದೇ ತಪ್ಪಿಲ್ಲ, ಅವರು ದೇವರ ಸಮಾನ ಎಂದು ಹೇಳಿದ್ದರು.

ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ಭಕ್ತ ಸಮೂಹ

ಇನ್ನು ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ಭಕ್ತ ಸಮೂಹ ನಿಂತಿದೆ. ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಹೋರಾಟ ಸಮಿತಿ ಹಾಗೂ ಮಠದ ಭಕ್ತರ ನೇತೃತ್ವದಲ್ಲಿ ಇಂದು ಕಲಬುರಗಿಯಲ್ಲಿ ಬೃಹತ್ ಮೆರವಣಿಗೆ ಮಾಡಲಾಗಿದೆ. ಮಲ್ಲಿಕಾರ್ಜುನ ಮುತ್ಯಾ ಭಾವಚಿತ್ರ ಹಿಡಿದು ಅವರ ಜೊತೆಯಲ್ಲಿ ನಾವು ನಿಲ್ಲುತ್ತೇವೆ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಹೋರಾಟಕ್ಕೆ ಸಾಥ್ ನೀಡಿದ ವಿವಿಧ ಮಠಾಧೀಶರಿಂದ ಪೋಕ್ಸೋ ಕೇಸ್​ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP – Kannada News | Kolar SP Shivanshu Rajput talks about Woman Attempts Suicide after Killed Her Two Children

ಕೋಲಾರ, (ಮಾರ್ಚ್ 02): ಕೌಟುಂಬಿಕ ಕಲಹದ (Family Dispute)  ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ  ತಾಯಿ (Mother) ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ (Kolar) ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಅಲ್ಲಿದ್ದ ಪ್ರವಾಸಿ ಮಿತ್ರ ಸಿಬ್ಬಂದಿ ಅನುಮಾನ ಬಂದು ನೋಡಿದ್ದಾರೆ, ಅಷ್ಟೊತ್ತಿಗಾಗಲೇ ಆಕೆ ತನ್ನಿಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿದ್ದಳು. ನಂತರ ತಾನೂ ಕೂಡಾ ನೀರಿನಲ್ಲಿ ಮುಳುಗಿ ಆತ್ಮಹತ್ಯಗೆ ಪ್ರಯತ್ನಿಸುತ್ತಿದ್ದ ವೇಳೆ ಪ್ರವಾಸಿ ಮಿತ್ರ ಶ್ರೀನಿವಾಸ್​ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಮೃತ ಮಕ್ಕಳು ಹಾಗೂ ಮಹಿಳೆಯನ್ನು ಕೋಡಗುರ್ಕಿ ಗ್ರಾಮದ ಉಷಾ(28) ಹಾಗೂ ಮೂರು ವರ್ಷದ ಮಕ್ಕಳಾದ ಹರ್ಷಿತ್ ಮತ್ತು ಹಿತೇಶ್ ಎಂದು ತಿಳಿದುಬಂದಿದೆ.

ಉಷಾ ಮತ್ತು ಮುರಳಿ ದಂಪತಿಗಳ ಮೂರು ವರ್ಷದ ಅವಳಿ ಮಕ್ಕಳಿವರು, ಉಷಾ ಮನೆಯಲ್ಲಿ ಗಲಾಟೆ ಮಾಡಿಕೊಂಡು ಇಂದು ಬೆಳಗ್ಗೆ ಸುಮಾರು 9.30 ಗಂಟೆಗೆ ಬೂದಿಕೋಟಿಗೆ ಆಗಮಿಸಿ ಅಲ್ಲಿರುವಂತಹ ಪ್ರವಾಸತಾಣವಾದ ಹೈದರಾಲಿ ಕೋಟೆಗೆ ತನ್ನ ಇಬ್ಬರು ಅವಳಿ ಮಕ್ಕಳೊಂದಿಗೆ ಒಳಹೋಗಿದ್ದಾರೆ. ಮೊದಲೇ ಸಾಯಬೇಕೆಂದು ನಿರ್ಧಾರ ಮಾಡಿಕೊಂಡು ಬಂದಿದ್ದ ಉಷಾ ಕೋಟೆಯ ಎಲ್ಲಡೆ ಸುತ್ತಾಡಿ ಅಲ್ಲಿಯೇ ಇದ್ದಂತಹ ಸಂಪಿನೊಳಗೆ ತನ್ನ ಇಬ್ಬರು ಅವಳಿ ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲಿಯ ಇದ್ದಂತಹ ಕೆಲ ಪ್ರವಾಸಿಗರು ಕೂಡಲೇ ಉಷಾ ಅವರನ್ನು ರಕ್ಷಣೆ ಮಾಡಿದ್ದಾರೆ. ಆದ್ರೆ ಮಕ್ಕಳಿಬ್ಬರು ರಕ್ಷಣೆ ಮಾಡುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಇನ್ನು ತಾಯಿ ಉಷಾ ತನ್ನ ಕೌಟುಂಬಿಕ ಕಲಹಕ್ಕೆ ಮುದ್ದಾದ ಇಬ್ಬರು ಮಕ್ಕಳು ಪ್ರಪಂಚ ನೋಡುವ ಮೊದಲು ಜೀವ ತೆತ್ತಿದ್ದಾರೆ. ಇನ್ನು ಈ ಬಗ್ಗೆ ಕೋಲಾರ ಎಸ್ಪಿ ಮಾತನಾಡಿದ್ದು, ಘಟನೆಗೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು

Source link

‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ – Kannada News | Om Prakash Rao Anaji Nagaraj talk about Bheema Theeradalli movie re release

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮ ನಿರ್ದೇಶಕರು ತುಂಬಾ ಅಡ್ವಾನ್ಸ್ ಆಗಿ ಇಂಥ ಸಿನಿಮಾ ಮಾಡಿದ್ದರು. ನಮ್ಮ ಸಿನಿಮಾ ನೋಡಿ ಬೇರೆಯವರು ಸ್ಫೂರ್ತಿ ಪಡೆದಿದ್ದಾರೆ ಎನಿಸುತ್ತದೆ. ಇದು ರಿಯಲಿಸ್ಟಿಕ್ ಕಥೆ ಇರುವ ಸಿನಿಮಾ. ನಮ್ಮ ಇಡೀ ತಂಡ ಬಹಳ ಕಷ್ಟಪಟ್ಟು ಈ ಸಿನಿಮಾ ಮಾಡಿದ್ದೆವು’ ಎಂದು ನಿರ್ಮಾಪಕ ಅಣಜಿ ನಾಗರಾಜ್ (Anaji Nagaraj) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ! – Kannada News | Iran claims its missiles hit Israel PM Benjamin Netanyahu’s office

ಜೆರುಸಲೇಂ, ಮಾರ್ಚ್ 2: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ (Iran-Israel Conflict) ಮೇಲೆ ದಾಳಿ ನಡೆಸಿದ್ದರಿಂದ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಇರಾನ್​ನಲ್ಲಿ ನೂರಾರು ಜನರು ಮೃತಪಟ್ಟಿದ್ದು, ವಾಯುನೆಲೆಗಳು ಛಿದ್ರವಾಗಿದೆ. ಹೀಗಾಗಿ, ಅದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯ ಮೇಲೆ ದಾಳಿ ಮಾಡಿದ್ದಾಗಿ ಇರಾನ್ ಘೋಷಿಸಿದೆ. ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿದೆ ಎಂದು ಇರಾನ್‌ನ ಐಆರ್‌ಜಿಸಿ ಹೇಳಿಕೊಂಡಿದ್ದರೂ ಇಸ್ರೇಲ್ ಅದನ್ನು ನಿರಾಕರಿಸಿದೆ.

ಇರಾನಿನ ಕ್ರಾಂತಿಕಾರಿ ಗಾರ್ಡ್‌ಗಳು ಎಂದೂ ಕರೆಯಲ್ಪಡುವ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಯಶಸ್ವಿಯಾಗಿ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಆದರೆ, ಈ ದಾಳಿ ನಡೆದಾಗ 76 ವರ್ಷದ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯಲ್ಲಿದ್ದರೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು?

“ಖೇಬರ್ ಶೇಕನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ಗುರಿಯಿಟ್ಟು ನಡೆಸಲಾದ ದಾಳಿಯಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರ ಕಚೇರಿ ಮತ್ತು ಆಡಳಿತದ ವಾಯುಪಡೆಯ ಕಮಾಂಡರ್ ಸ್ಥಳವು ನಾಶವಾಯಿತು” ಎಂದು ಐಆರ್‌ಜಿಸಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ, ಇಸ್ರೇಲ್ ಈ ಹೇಳಿಕೆಯನ್ನು ನಿರಾಕರಿಸಿದೆ. ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ

ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ನಂತರ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಇರಾನ್ ಈ ಪ್ರದೇಶದಲ್ಲಿ ಇಸ್ರೇಲಿ ಮತ್ತು ಇರಾನಿನ ನೆಲೆಗಳನ್ನು ಗುರಿಯಾಗಿಸಿಕೊಂಡು ಪ್ರತೀಕಾರ ತೀರಿಸಿಕೊಂಡಿದೆ. ಭಾನುವಾರ, ಜೆರುಸಲೆಮ್ ಬಳಿಯ ಇಸ್ರೇಲ್‌ನ ಬೀಟ್ ಶೆಮೆಶ್ ನಗರದಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದರು ಮತ್ತು ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು? – Kannada News | EPFO decides interest rate for EPF accounts for 26fy

ನವದೆಹಲಿ, ಮಾರ್ಚ್ 2: ಈ ಹಣಕಾಸು ವರ್ಷಕ್ಕೆ ಇಪಿಎಫ್ ಅಕೌಂಟ್​ಗಳಿಗೆ ನೀಡಬೇಕಿರುವ ಬಡ್ಡಿ ಹಣವನ್ನು (EPF interest rate) ನಿರ್ಧರಿಸಲಾಗಿದೆ. ವರದಿ ಪ್ರಕಾರ 2025-26ರ ವರ್ಷಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿದರ ನಿಗದಿ ಮಾಡಲಾಗಿದೆ. ಕಳೆದ ವರ್ಷವೂ ಇಷ್ಟೇ ಬಡ್ಡಿ ದರ ಇತ್ತು. ಸತತ ಮೂರು ವರ್ಷದಿಂದ ಇಪಿಎಫ್​ಒ ಶೇ. 8.25 ಬಡ್ಡಿ ನೀಡುತ್ತಿದೆ. 2022-23ರಲ್ಲಿ ಇಪಿಎಫ್ ವಾರ್ಷಿಕ ಬಡ್ಡಿ ದರ ಶೇ. 8.15 ಇತ್ತು. 2023-24ರಲ್ಲಿ ಅದನ್ನು ಶೇ. 8.25ಕ್ಕೆ ಏರಿಸಲಾಯಿತು. ನಂತರ ಅದೇ ದರವನ್ನು ಮುಂದುವರಿಸಿಕೊಂಡು ಬರಲಾಗಿದೆ.

ಇಪಿಎಫ್​ಒದ ಕೇಂದ್ರೀಯ ಟ್ರಸ್ಟ್​ಗಳ ಮಂಡಳಿಯ (ಸಿಬಿಟಿ) 239ನೇ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನಸುಖ್ ಮಾಂಡವೀಯ ನೇತೃತ್ವದಲ್ಲಿ ಈ ಸಭೆ ನಡೆದಿದೆ.

ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ?

ಹಿಂದಿನ ವರ್ಷಗಳಲ್ಲಿ ಇದ್ದ ಇಪಿಎಫ್ ಬಡ್ಡಿದರಗಳು

  • 2025-26: ಶೇ. 8.25
  • 2024-25: ಶೇ. 8.25
  • 2023-24: ಶೇ. 8.25
  • 2022-23: ಶೇ. 8.15
  • 2021-22: ಶೇ. 8.10
  • 2020-21: ಶೇ. 8.50
  • 2019-20: ಶೇ. 8.50
  • 2018-19: ಶೇ. 8.65
  • 2017-18: ಶೇ. 8.55
  • 2016-17: ಶೇ. 8.65
  • 2015-16: ಶೇ. 8.8
  • 2014-15: ಶೇ. 8.75
  • 2013-14: ಶೇ. 8.75
  • 2012-13: ಶೇ. 8.5
  • 2011-12: ಶೇ. 8.25

ಈ ಹಣಕಾಸು ವರ್ಷ ಮುಗಿದ ಬಳಿಕ ಇಪಿಎಫ್ ಹಣಕ್ಕೆ ಬಡ್ಡಿ ಹಣ ಸೇರ್ಪಡೆಯಾಗುತ್ತದೆ. ಅಂದರೆ ಮಾರ್ಚ್ ಕಳೆದ ನಂತರ ಇಪಿಎಫ್ ಬಡ್ಡಿ ಹಣ ಜಮೆ ಆಗುವುದನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

ಇಪಿಎಫ್ ಬಡ್ಡಿ ದರ ಹೇಗೆ ನಿರ್ಧಾರವಾಗುತ್ತದೆ?

ಇಪಿಎಫ್​ಒ ಸಂಸ್ಥೆ ತನ್ನ ನಿಧಿಯಲ್ಲಿರುವ ಎಲ್ಲಾ ಹಣವನ್ನೂ ನಿರ್ದಿಷ್ಟ ಹೂಡಿಕೆಗಳಿಗೆ ಹಾಕುತ್ತದೆ. ಅದರಲ್ಲಿ ಬಂದಿರುವ ಆದಾಯವನ್ನು ಆಧಾರವಾಗಿಟ್ಟುಕೊಂಡು ಬಡ್ಡಿ ಹಣ ನಿರ್ಧರಿಸುತ್ತದೆ. ಪ್ರತಿಯೊಂದು ಇಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ಈ ಬಡ್ಡಿ ಹಣ ಸೇರ್ಪಡೆಯಾಗುತ್ತದೆ.

ನೀವು ಉಮಾಂಗ್ ಆ್ಯಪ್ ಅಥವಾ ಇಪಿಎಫ್ ವೆಬ್​ಸೈಟ್​ಗೆ ಹೋಗಿ ಲಾಗಿನ್ ಆಗಿ, ಅಲ್ಲಿ ಪಾಸ್​ಬುಕ್ ಓಪನ್ ಮಾಡಿ ಪಿಎಫ್ ಬ್ಯಾಲನ್ಸ್ ಪರೀಕ್ಷಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ – Kannada News | Minister Madhu Bangarappa Students’ First Ever Flight, Wins Hearts for His Birthday

ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ.‌ ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಇನ್ನು ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ ಪೋಷಕರೊಂದಿಗೆ ವಿಮಾನಯಾನ ಭಾಗ್ಯ ಸಿಕ್ಕಿದೆ. ಇಂದು (ಮಾರ್ಚ್ 02) ಮೊದಲ ಬಾರಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು, ಸಚಿವರ ಜೊತೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿ ಫುಲ್ ಖುಷ್ ಆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ ಆಗಿಲ್ಲ. 630 ಕೋಟಿ ರೂ ಬೃಹತ್ ಮೊತ್ತದ ರಾಷ್ಟ್ರೀಯ ಹೆದ್ದಾರಿ 373ಕ್ಕೆ ಭೂಸ್ವಾಧೀನ ಗುಮ್ಮ ಕಾಡುತ್ತಿದ್ದು, ನಿತ್ಯವೂ ಸಾವಿರಾರು ವಾಹನಗಳು ಓಡಾಡುವ ರಸ್ತೆಯ ಕಾಮಗಾರಿ ಬೇಗನೆ ಮುಗಿಯಲಿ ಎನ್ನುವ ಆಗ್ರಹ ಕೇಳಿ ಬಂದಿದೆ.

ದೇಶದಲ್ಲಿ ರಾಷ್ಟೀಯ ಹೆದ್ದಾರಿಗಳ ನಿರ್ಮಾಣ ಶರವೇಗದಲ್ಲಿ ಆಗುತ್ತಿದೆ ಎನ್ನುವ ಮಾತುಗಳನ್ನ ಕೇಂದ್ರ ಸರ್ಕಾರ ಹೆದ್ದಾರಿ ಸಚಿವರು ಪದೇ ಪದೇ ಹೇಳೋದನ್ನ ಕೇಳಿದ್ದೇವೆ. ಆದರೆ ಹಾಸನ ಜಿಲ್ಲೆಯ ಐತಿಹಾಸಿಕ ನಗರ, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ಶ್ರೀ ಚನ್ನಕೇಶವಸ್ವಾಮಿ ದೇವಾಲಯವಿರುವ ಬೇಲೂರಿನಿಂದ ಮೈಸೂರಿನ ಬಿಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 373 ಗ್ರಾಮೀಣ ರಸ್ತೆಗಿಂತಲೂ ಕಡೆಯಾಗಿದೆ. ಸಹಸ್ರಾರು ವಾಹನಗಳು ಓಡಾಡುವ ರಸ್ತೆಯಲ್ಲಿ ಗುಂಡಿಗಳು ಒಂದೆಡೆಯಾದರೆ ಎರಡು ವರ್ಷಗಳ ಹಿಂದೆ ಚತುಷ್ಪತ ರಸ್ತೆ ನಿರ್ಮಾಣಕ್ಕೆಂದು ಅಲ್ಲಲ್ಲಿ ಇರುವ ರಸ್ತೆಯನ್ನ ಬಗೆದು ಮಾಡಿರುವ ಅವಾಂತರ ವಾಹನ ಸವಾರರಿಗೆ ದೊಡ್ಡ ತಲೆನೋವು ತರಿಸಿದೆ.

ಇದನ್ನೂ ಓದಿ: ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಹತ್ತಾರು ವಿಘ್ನ: ಕಾಮಗಾರಿ ಮುಗಿಯೋದು ಯಾವಾಗ?

ಹಾಸನದಿಂದ ಸುಮಾರು 35 ಕಿ.ಮೀಟರ್ ಸೇರಿ ಬೇಲೂರಿನಿಂದ ಬಿಳಿಕೆರೆವರೆಗಿನ ಈ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 630 ಕೋಟಿ ರೂ ಹಣ ಮೀಸಲಿಟ್ಟಿದೆ. ಆದರೆ ರಸ್ತೆಗೆ ಬೇಕಾದ ಭೂಸ್ವಾಧೀನ ಮಾಡುವಲ್ಲಿ ಅಧಿಕಾರಿಗಳು ಮಾಡಿರುವ ವಿಳಂಬದಿಂದಾಗಿ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಎನ್ನೋದು ಸ್ಥಳೀಯ ಶಾಸಕರ ಆಕ್ರೋಶ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ, ರಾಜ್ಯದ ಲೋಕೋಪಯೋಗಿ ಸಚಿವರು ಕಾಮಗಾರಿ ಬಗ್ಗೆ ಉತ್ಸಾಹ ತೋರಿದ್ದಾರೆ, ಆದರೆ ಭೂಸ್ವಾಧೀನ ಪ್ರಕ್ರಿಯೆ ಮಾಡುವಲ್ಲಿ ಅಧಿಕಾರಿಗಳು ಮಾಡಿದ ವಿಳಂಬದಿಂದ ಸಮಸ್ಯೆ ಆಗಿದೆ ಎನ್ನುವುದು ಜನಪ್ರತಿನಿಧಿಗಳ ಆರೋಪ.

ಹೆಚ್ಚುವರಿಯಾಗಿ 100 ಕೋಟಿ ರೂ ಹಣ ಬೇಕು

ಹಾಸನದಿಂದ ಬೇಲೂರಿಗೆ ತೆರಳಲಿರುವ ಮಾರ್ಗ ಇದೀಗ ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ. ಬೇಲೂರು ಮೂಲಕ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾದ ಚಿಕ್ಕಮಗಳೂರು, ಶೃಂಗೇರಿ, ಹೊರನಾಡು ಸೇರಿ ಚಾರ್ಮಾಡಿ ಘಾಟ್ ಮೂಲಕ ಮಂಗಳೂರಿನ ಕಡೆಗೆ ತೆರಳಲು ಇರುವುದು ಕೂಡ ಇದೇ ಮಾರ್ಗ. ಹಾಗಾಗಿಯೇ ಐದು ವರ್ಷಗಳ ಹಿಂದೆಯೇ ಈ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಮೀಸಲಿಟ್ಟಿತ್ತು. ಆದರೆ ಇಲ್ಲಿಗೆ ಮೀಸಲಿಟ್ಟ ಹಣವನ್ನ ಬೇರೊಂದು ಕಾಮಗಾರಿಗೆ ವರ್ಗಾವಣೆ ಮಾಡಿದ್ದರಿಂದ ಯೋಜನೆ ನೆನೆಗುದಿಗೆ ಬಿದ್ದಿತ್ತು. ಬಳಿಕ ವರ್ಷದ ಹಿಂದೆ ಮತ್ತೆ ಈ ಯೋಜನೆಗೆ ಮರುಜೀವ ಬಂದು, ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ಅಲ್ಲಲ್ಲಿ ರಸ್ತೆಯನ್ನ ಬಗೆದು, ಮರಳನ್ನು ಕಡಿಯುವುದಕ್ಕೆ ಶುರು ಮಾಡಿದ್ದರು. ಆದರೆ ಈ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ 109 ಕೋಟಿ ರೂ ಹಣವನ್ನ ಮೀಸಲಿಡಲಾಗಿದ್ದು, ಹಾಸನ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಹಾಸನ ನಗರದ ಸುತ್ತಮುತ್ತಲ ಭೂಮಿಯ ಮೌಲ್ಯ ದುಪ್ಪಟ್ಟಾಗಿದೆ. ಹಾಗಾಗಿ ಹೆಚ್ಚುವರಿಯಾಗಿ 100 ಕೋಟಿ ರೂ ಹಣ ಬೇಕು ಎನ್ನೋದು ಒಂದೆಡೆಯಾದರೆ ಭೂಸ್ವಾಧೀನ ಪ್ರಕ್ರಿಯೆ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಭೂಸ್ವಾಧೀನ ಅಧಿಕಾರಿ ಕಚೇರಿ ಬೆಂಗಳೂರಿನಲ್ಲಿದ್ದು, ಜನರೊಂದಿಗೆ ಸಂವಹನಕ್ಕೆ ಕೂಡ ಸಮಸ್ಯೆ ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಕಾಮಗಾರಿ ನಿಧಾನವಾಗಿರುವ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಭೂಸ್ವಾಧೀನ ಅಧಿಕಾರಿಗಳ ಕಚೇರಿಯನ್ನು ಕೂಡ ಹಾಸನದಲ್ಲಿ ತೆರೆಯುವ ಬಗ್ಗೆ ಕೂಡ ಚರ್ಚೆ ನಡೆಸಲಾಗಿದ್ದು. ಶೀಘ್ರ ಕಾಮಗಾರಿ ಆರಂಭಿಸುವುದಾಗಿ ಹಾಸನ ಡಿಸಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!

ಹಾಸನ ಜಿಲ್ಲೆಯ ಅತೀ ಹೆಚ್ಚು ವಾಹನ ಸಂಚಾರ ಇರುವ ರಸ್ತೆಗಳಲ್ಲಿ ಹಾಸನ ಬೇಲೂರು ರಸ್ತೆಯೂ ಒಂದು ರಾಜ್ಯದ ಹಲವು ಪ್ರಮುಖ ಧಾರ್ಮಿಕ ಕೇಂದ್ರ, ಪ್ರವಾಸಿತಾಣಗಳಿಗೆ ಇದೇ ಪ್ರಮುಖ ಮಾರ್ಗವಾಗಿದ್ದು, ವಾಹನಗಳ ಓಡಾಟ ಹೆಚ್ಚಿರುವ  ಕಾರಣ ಚತುಷ್ಪಥ ರಸ್ತೆ ಆಗಬೇಕು ಎನ್ನೋದು ಹಲವು ವರ್ಷದ ಯೋಜನೆ. ಅದಕ್ಕಾಗಿ ಹಣವೂ ಮೀಸಲಿಡಲಾಗಿದೆ. ಕಾಮಗಾರಿಯೂ ಶುರುವಾಗಿದೆ. ಆದರೆ ಸಣ್ಣ ಪುಟ್ಟ ತೊಡಕುಗಳನ್ನ ನಿವಾರಣೆ ಮಾಡುವಲ್ಲಿ ಆಗಿರುವ ನಿರ್ಲಕ್ಷ್ಯ ಇಡೀ ಯೋಜನೆಯನ್ನೇ ಮಂಕಾಗಿಸಿದ್ದು, ಈ ಬಗ್ಗೆ ಸರ್ಕಾರ ಯೋಜನೆ ಸಾಕಾರಕ್ಕೆ ಅಗತ್ಯ ಕ್ರಮವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು? – Kannada News | Yash fans upset after Toxic team released only audio track of Tabaahi song

ಹತ್ತಾರು ಕಾರಣಗಳಿಂದ ‘ಟಾಕ್ಸಿಕ್’ (Toxic) ಸಿನಿಮಾ ಹೈಪ್ ಸೃಷ್ಟಿಸುತ್ತಿದೆ. ಈ ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ದೇಶಾದ್ಯಂತ ಇರುವ ಯಶ್ (Yash) ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್ ನೋಡಿದ ಎಲ್ಲರಿಗೂ ಕೌತುಕ ಹೆಚ್ಚಿದೆ. ಆದರೆ ಮೊದಲ ಹಾಡು ಬಿಡುಗಡೆ ಆದ ಬಳಿಕ ಕೆಲವರಿಗೆ ನಿರಾಸೆ ಆಗಿದೆ. ಹೌದು, ಮಾರ್ಚ್ 2ರಂದು ರಿಲೀಸ್ ಆದ ‘ತಬಾಹಿ..’ (Tabaahi) ಹಾಡಿನ ಬಗ್ಗೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

‘ತಬಾಹಿ’ ಹಾಡು ರಿಲೀಸ್ ಆಗಲಿದೆ ಎಂದು ಎರಡು ದಿನಗಳ ಮುಂಚೆಯೇ ತಿಳಿಸಲಾಗಿತ್ತು. ಅದಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು. ವಿಶಾಲ್ ಮಿಶ್ರಾ ಅವರು ಈ ಹಾಡಿಗೆ ಸಂಗೀತ ನೀಡಿದ್ದಾರೆ ಎಂಬ ಕಾರಣದಿಂದ ಹೈಪ್ ಜಾಸ್ತಿ ಆಗಿತ್ತು. ಅಲ್ಲದೇ ಈ ಹಾಡಿನಲ್ಲಿ ಕಿಯಾರಾ ಅಡ್ವಾಣಿ ಮತ್ತು ಯಶ್ ಅವರು ಜೋಡಿಯಾಗಿ ಕಾಣಿಸಿಕೊಂಡಿರುವುದರಿಂದ ಅವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್ ಎಗ್ಸೈಟ್ ಆಗಿದ್ದರು.

‘ಜೀ ಮ್ಯೂಸಿಕ್’ ಮೂಲಕ ‘ತಬಾಹಿ’ ಹಾಡು ರಿಲೀಸ್ ಆಯಿತು. ಆದರೆ ಒಂದು ಟ್ವಿಸ್ಟ್ ಎದುರಾಯಿತು. ‘ಟಾಕ್ಸಿಕ್’ ಚಿತ್ರತಂಡದವರು ಈಗ ಬಿಡುಗಡೆ ಮಾಡಿರುವುದು ಕೇವಲ ಆಡಿಯೋ ಸಾಂಗ್! ಇದರಲ್ಲಿ ಯಾವುದೇ ದೃಶ್ಯಗಳು ಕಾಣಿಸಿಲ್ಲ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ನೋಡಲು ಕಾದಿದ್ದ ಎಲ್ಲರಿಗೂ ನಿರಾಸೆ ಆಗಿದೆ.

‘ತಬಾಹಿ’ ಹಾಡು:

ಯೂಟ್ಯೂಬ್​​ನಲ್ಲಿ ಈ ಹಾಡಿಗೆ ಕಮೆಂಟ್ ಮಾಡಿದ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ‘ವಿಡಿಯೋ ಎಲ್ಲಿದೆ? ಕೇವಲ ಆಡಿಯೋ ಟ್ರ್ಯಾಕ್ ಮಾತ್ರ ರಿಲೀಸ್ ಮಾಡುತ್ತೇನೆ ಅಂತ ಮೊದಲೇ ಹೇಳಬೇಕಿತ್ತು’ ಎಂದು ಅಭಿಮಾನಿಗಳು ಬೇಸರದಿಂದ ಕಮೆಂಟ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು 6 ಹಾಡುಗಳು ಇರಲಿವೆ. ಇನ್ನುಳಿದ ಹಾಡುಗಳನ್ನು ಯಾವ ರೀತಿ ರಿಲೀಸ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ

‘ತಬಾಹಿ’ ಹಾಡಿನ ಕನ್ನಡ ವರ್ಷನ್​​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಸಾಹಿತ್ಯ ಗಮನಿಸಿದರೆ ಈ ಹಾಡು ಸಖತ್ ರೊಮ್ಯಾಂಟಿಕ್ ಆಗಿ ಮೂಡಿಬಂದಿರುವ ಸಾಧ್ಯತೆ ಇರುತ್ತದೆ. ಈಗಲೇ ಆ ದೃಶ್ಯಗಳನ್ನು ತೋರಿಸಿದರೆ ಕಥೆಯ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇರುತ್ತದೆ. ಚಿತ್ರಮಂದಿರದಲ್ಲಿ ಇದನ್ನು ಸರ್ಪ್ರೈಸ್ ಆಗಿ ತೋರಿಸುವ ಉದ್ದೇಶದಿಂದ ಚಿತ್ರತಂಡದವರು ವಿಡಿಯೋ ಸಾಂಗ್ ಬಿಡುಗಡೆ ಮಾಡಿಲ್ಲ ಎಂಬ ಅಭಿಪ್ರಾಯ ಕೂಡ ಕೇಳಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version