ಹೈದರಾಬಾದ್​​ಗೆ ನಾಳೆ ಪ್ರಧಾನಿ ಮೋದಿ ಭೇಟಿ; 9,400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ – Kannada News | PM Narendra Modi To Visit Telangana Tomorrow to Launch Rs 9400 crore infrastructure projects

ಹೈದರಾಬಾದ್, ಮೇ 9: ನಾಳೆ ತೆಲಂಗಾಣ ರಾಜ್ಯದ ಮೂಲಸೌಕರ್ಯದ ಅಭಿವೃದ್ಧಿಯಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಅನಾವರಣಗೊಳ್ಳಲಿದೆ. ರಾಜ್ಯದ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಭಾನುವಾರ) ಹೈದರಾಬಾದ್​​ನಲ್ಲಿ 9,400 ಕೋಟಿ ರೂ. ಮೌಲ್ಯದ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ 2.30ಕ್ಕೆ ಗಚಿಬೌಲಿಯ HIC ಕೇಂದ್ರದಲ್ಲಿ ನಡೆಯಲಿದೆ.

ಪ್ರಧಾನಿ ಮೋದಿ ಉದ್ಘಾಟಿಸಲಿರುವ ಪ್ರಮುಖ ಯೋಜನೆಗಳು:

ರಸ್ತೆ ವಿಸ್ತರಣೆ (ರೂ. 3,180 ಕೋಟಿ):

ಹೈದರಾಬಾದ್-ಪಣಜಿ ಆರ್ಥಿಕ ಕಾರಿಡಾರ್ (NH-167)ನ ಭಾಗವಾಗಿ ಗುಡೇಬಲ್ಲೂರಿನಿಂದ ಮೆಹಬೂಬ್‌ನಗರವರೆಗಿನ 4 ಪಥಗಳ ರಸ್ತೆ ನಿರ್ಮಾಣಕ್ಕೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ತೆಲಂಗಾಣ ಮತ್ತು ಕರ್ನಾಟಕದ ನಡುವಿನ ಸಾರಿಗೆ ಸಂಪರ್ಕವನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ

ಜಹೀರಾಬಾದ್ ಕೈಗಾರಿಕಾ ಪ್ರದೇಶ (ರೂ. 2,360 ಕೋಟಿ):

ಕೈಗಾರಿಕಾ ವಲಯವನ್ನು ಬಲಪಡಿಸುವ ಮೂಲಕ ಜಹೀರಾಬಾದ್ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಲಾಗುವುದು. ಇದು ಸ್ಥಳೀಯವಾಗಿ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ.

ರೈಲ್ವೆ ಯೋಜನೆಗಳು (ರೂ. 1,550 ಕೋಟಿ):

ಕಾಜಿಪೇಟೆ-ವಿಜಯವಾಡ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯ (ರೂ. 1,250 ಕೋಟಿ) ವಿವಿಧ ವಿಭಾಗಗಳ ಪೂರ್ಣಗೊಂಡ ಕಾಮಗಾರಿಗಳನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಕಾಜಿಪೇಟೆಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ರೈಲ್ ಅಂಡರ್ ರೈಲ್ ಬೈಪಾಸ್ ಮಾರ್ಗವನ್ನು ಸಹ ಉದ್ಘಾಟಿಸಲಾಗುವುದು.

ಪಿಎಂ ಮಿತ್ರ ಪಾರ್ಕ್ – ವಾರಂಗಲ್ (ರೂ. 1,700 ಕೋಟಿ):

ವಾರಂಗಲ್‌ನಲ್ಲಿ ಅತ್ಯಾಧುನಿಕ ‘ಪಿಎಂ ಮಿತ್ರ ಪಾರ್ಕ್’ (ಕಾಕತೀಯ ಮೆಗಾ ಜವಳಿ ಪಾರ್ಕ್) ಅನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಇದು ಜವಳಿ ಉದ್ಯಮದಲ್ಲಿ ತೆಲಂಗಾಣಕ್ಕೆ ಅಂತಾರಾಷ್ಟ್ರೀಯ ಮನ್ನಣೆ ತರಲಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಪ್ರಮಾಣವಚನಕ್ಕೆ ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಗ್ರೀನ್‌ಫೀಲ್ಡ್ ಪಿಒಎಲ್ ಟರ್ಮಿನಲ್ (ರೂ. 610 ಕೋಟಿ):

ಹೈದರಾಬಾದ್‌ನ ಮಲ್ಕಾಪುರದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ಮಿಸಿರುವ ಅತ್ಯಾಧುನಿಕ ಗ್ರೀನ್‌ಫೀಲ್ಡ್ ಪಿಒಎಲ್ ಟರ್ಮಿನಲ್ ಅನ್ನು ಸಹ ಈ ಸಂದರ್ಭದಲ್ಲಿ ಉದ್ಘಾಟಿಸಲಾಗುವುದು.

ತೆಲಂಗಾಣದ ರಾಜ್ಯಪಾಲರು, ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಅಶ್ವಿನಿ ವೈಷ್ಣವ್, ಜಿ. ಕಿಶನ್ ರೆಡ್ಡಿ ಮತ್ತು ಇತರ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಎಂಆರ್​​ಸಿಎಲ್​​ನಿಂದ ಮಹತ್ವದ ಮಾಹಿತಿ: ಎಂದಿನಂತೆ ನಾಳೆಯೂ ಮೆಟ್ರೋ ಒಡಾಟ; ಇಲ್ಲ ಯಾವುದೇ ಬದಲಾವಣೆ – Kannada News | BMRCL Withdraws Disruption: Namma Metro Services Normal on May 10th in Bengaluru

ಬೆಂಗಳೂರು, ಮೇ 09: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ ಎಂದು BMRCL ತಿಳಿಸಿದೆ.

  • ನಾಳೆ (ಮೇ10) ಎಂದಿನಂತೆ ನಮ್ಮ ಮೆಟ್ರೋ ರೈಲುಗಳ ಸಂಚಾರ
  • ನಿರ್ವಹಣಾ ಕಾಮಗಾರಿ ಹಿನ್ನೆಲೆ ವ್ಯತ್ಯಯ ಪ್ರಕಟಣೆ ಹಿಂಪಡೆದ BMRCL
  • ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ವೇಳಾಪಟ್ಟಿಯಂತೆ ರೈಲುಗಳ ಓಡಾಟ

ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ಪ್ರಕಟಣೆ ಹಿಂಪಡೆದ BMRCL

ಮೇ 10ರಂದು ನೇರಳೆ ಮಾರ್ಗದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕುರಿತು ಮೇ 8ರಂದು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಭಾನುವಾರ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ಸೇವೆಗಳು ಬೆಳಿಗ್ಗೆ 05 ಗಂಟೆಯಿಂದಲೇ ಸಾಮಾನ್ಯ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ನಿರ್ವಹಣಾ ಕಾಮಗಾರಿಹ ಹಿನ್ನೆಲೆ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ರ ವರೆಗೆ ಸ್ಥಗಿತಗೊಳ್ಳಲಿದೆ ಎಂದು ಈ ಹಿಂದೆ ಬಿಎಂಆರ್​​ಸಿಎಲ್​​ ತಿಳಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:53 pm, Sat, 9 May 26

Source link

Weekly Horoscope: ನಿಮ್ಮ ರಾಶಿಗನುಗುಣವಾಗಿ ಮೇ 10ರಿಂದ 16ರವರೆಗಿನ ವಾರ ಭವಿಷ್ಯ ತಿಳಿಯಿರಿ – Kannada News | Weekly Horoscope May 10 16, 2026: Rahu Ketu Challenges and Zodiac Predictions

2026ರ ಮೇ 10ರಿಂದ 16ರವರೆಗೆ ಎರಡನೇ ವಾರದಲ್ಲಿ ಎಲ್ಲ ಗ್ರಹರು ರಾಹು ಮತ್ತು ಕೇತುವಿನಿಂದ ಬಂಧಿಸಲ್ಪಟ್ಟಿದ್ದಾರೆ. ಹಾಗಾಗಿ ಕಾರ್ಯದಲ್ಲಿ ಪೂರ್ಣ ಯಶಸ್ಸು ಸಿಗದೇ ಹೋಗಬಹುದು. ಫಲದಲ್ಲಿ ಹಿನ್ನಡೆಯಾದರೂ ಪ್ರಯತ್ನ ಸಾಗುತ್ತಿರಲಿ.

​ಮೇಷ:

​ಈ ವಾರ ನಿಮಗೆ ಹೊಸ ಹುರುಪು ಇರಲಿದೆ. ವೃತ್ತಿಯಲ್ಲಿ ಭಡ್ತಿಯ ಯೋಗವಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು, ಎಚ್ಚರವಿರಲಿ. ಹಣಕಾಸಿನ ಹರಿವು ಉತ್ತಮವಾಗಿದ್ದು, ಹಳೆಯ ಸಾಲಗಳಿಂದ ಮುಕ್ತಿ ಪಡೆಯುವಿರಿ. ಸಂಗಾತಿಯೊಂದಿಗೆ ಮಧುರ ಸಮಯ ಕಳೆಯುವಿರಿ.

ವೃಷಭ:

​ನಿಮ್ಮ ತಾಳ್ಮೆಯೇ ನಿಮ್ಮ ಶಕ್ತಿ. ಕೆಲಸದಲ್ಲಿ ಒತ್ತಡವಿದ್ದರೂ ಯಶಸ್ಸು ನಿಮ್ಮದಾಗಲಿದೆ. ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಈ ವಾರ ಸಕಾಲ. ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆಯಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ಉಳಿತಾಯದತ್ತ ಗಮನಹರಿಸಿ.

ಮಿಥುನ:

ನಿಮಗೆ ​ಮಾತು ಬೆಳ್ಳಿ, ಮೌನ ಬಂಗಾರ ಎಂಬುದು ನೆನಪಿರಲಿ. ವಿವಾದಗಳಿಂದ ದೂರವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಏಕಾಗ್ರತೆ ಅಗತ್ಯ. ಪ್ರೀತಿಪಾತ್ರರಿಂದ ಅನಿರೀಕ್ಷಿತ ಉಡುಗೊರೆ ಲಭಿಸಲಿದೆ. ದೈಹಿಕ ವ್ಯಾಯಾಮದತ್ತ ಆಸಕ್ತಿ ತೋರುವಿರಿ.

ಕರ್ಕಾಟಕ:

ನಿಮ್ಮ ​ಭಾವನೆಗಳ ಮೇಲೆ ಹತೋಟಿಯಿರಲಿ. ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವ್ಯಾಪಾರದಲ್ಲಿ ಲಾಭದಾಯಕ ಒಪ್ಪಂದಗಳು ಕೈಗೂಡಲಿವೆ. ದೂರದ ಪ್ರಯಾಣದಿಂದ ಲಾಭವಿದೆ. ಹೊಸ ಸ್ನೇಹಿತರ ಪರಿಚಯವಾಗಲಿದ್ದು, ನಿಮ್ಮ ಕಾರ್ಯಗಳಿಗೆ ಅವರಿಂದ ಬೆಂಬಲ ಸಿಗಲಿದೆ.

​ಸಿಂಹ:

ನಿಮ್ಮ ಆತ್ಮವಿಶ್ವಾಸ ಉತ್ತುಂಗದಲ್ಲಿರುತ್ತದೆ. ಕಚೇರಿಯಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ. ಕೌಟುಂಬಿಕ ಸಮಸ್ಯೆಗಳು ಬಗೆಹರಿಯಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಗಳಾಗುವಿರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ವಾರದ ಅಂತ್ಯಕ್ಕೆ ಶುಭ ಸುದ್ದಿ ಕೇಳುವಿರಿ.

ಕನ್ಯಾ :

​ಯೋಜನೆಗಳ ಅನುಷ್ಠಾನಕ್ಕೆ ಮುನ್ನಡೆಯುವಿರಿ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ಪಡೆಯಿರಿ. ಚರ್ಮದ ಸಮಸ್ಯೆಗಳ ಬಗ್ಗೆ ಜಾಗ್ರತೆಯಿರಲಿ. ಕ್ರಿಯಾತ್ಮಕ ಕೆಲಸಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವಿರಿ.

ತುಲಾ:

ನಿಮಗೆ ​ಬದುಕಿನಲ್ಲಿ ಸಮತೋಲನ ಕಾಯ್ದುಕೊಳ್ಳಲಾಗದು. ಸಂಗಾತಿಯ ಬೆಂಬಲದಿಂದ ಕಷ್ಟಗಳು ದೂರವಾಗಲಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೊಸ ವಾಹನ ಖರೀದಿಸುವ ಯೋಗವಿದೆ. ಮನಸ್ಸಿಗೆ ಶಾಂತಿ ನೀಡುವ ಪ್ರವಾಸ ಕೈಗೊಳ್ಳಿ. ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಹೆಚ್ಚಿನ ಮನ್ನಣೆ ಸಿಗಲಿದೆ.

ವೃಶ್ಚಿಕ:

​ರಹಸ್ಯ ಶತ್ರುಗಳ ಬಗ್ಗೆ ಜಾಗರೂಕರಾಗಿರಿ. ಕೆಲಸದಲ್ಲಿ ಅಡೆತಡೆಗಳು ಎದುರಾದರೂ ನಿಮ್ಮ ಧೈರ್ಯದಿಂದ ಜಯಿಸುವಿರಿ. ದೈಹಿಕ ಶ್ರಮ ಹೆಚ್ಚಾಗಬಹುದು. ಹಠಮಾರಿತನ ಬಿಟ್ಟು ಹೊಂದಾಣಿಕೆಯಿಂದ ನಡೆಯಿರಿ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ಶಿವನ ಆರಾಧನೆ ಮಾಡಿ.

ಧನುಸ್ಸು:

ಭಾಗ್ಯೋದಯದವಾಗಲಿದೆ. ಕೈಗೆತ್ತಿಕೊಂಡ ಕೆಲಸಗಳು ಸುಸೂತ್ರವಾಗಿ ನೆರವೇರುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳು ಹೆಚ್ಚಾಗಲಿವೆ. ದೂರದ ಸಂಬಂಧಿಕರಿಂದ ಸಹಾಯ ದೊರೆಯಲಿದೆ. ಆರೋಗ್ಯ ಸುಧಾರಿಸಲಿದ್ದು, ಉತ್ಸಾಹದಿಂದ ಕೆಲಸ ಮಾಡುವಿರಿ.

​ಮಕರ:

​ಕೆಲಸದ ಹೊರೆ ಹೆಚ್ಚಾಗಲಿದೆ, ವಿಶ್ರಾಂತಿಗೆ ಸಮಯ ಮೀಸಲಿಡಿ. ಭೂಮಿ ಸಂಬಂಧಿತ ವ್ಯವಹಾರಗಳಲ್ಲಿ ಜಾಗ್ರತೆಯಿರಲಿ. ಮಕ್ಕಳ ಸಾಧನೆಯಿಂದ ಹೆಮ್ಮೆ ಪಡುವಿರಿ. ನಿಮ್ಮ ಮೃದು ಸ್ವಭಾವದಿಂದ ಎಲ್ಲರ ಮನ ಗೆಲ್ಲುವಿರಿ. ವಾರದ ಮಧ್ಯಭಾಗದಲ್ಲಿ ಆರ್ಥಿಕವಾಗಿ ಸ್ವಲ್ಪ ಬಿಕ್ಕಟ್ಟು ಎದುರಾಗಬಹುದು.

ಕುಂಭ :

ಹೊಸ ಆಲೋಚನೆಗಳು ಫಲ ನೀಡಲಿವೆ. ತಾಂತ್ರಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ಅವಕಾಶಗಳು ಒದಗಿ ಬರಲಿವೆ. ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ಪ್ರೇಮ ಜೀವನದಲ್ಲಿ ಸುಧಾರಣೆ ಕಂಡುಬರಲಿದೆ. ಆರೋಗ್ಯದಲ್ಲಿ ಚೇತರಿಕೆ ಇರಲಿದೆ.

ಮೀನ:

​ಕನಸುಗಳು ನನಸಾಗುವ ಸಮಯ. ಅನಿರೀಕ್ಷಿತ ಧನಲಾಭದ ಯೋಗವಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ. ವಿದೇಶ ಪ್ರಯಾಣದ ಆಸೆ ಈಡೇರಬಹುದು. ನಿಮ್ಮ ಕ್ರಿಯಾಶೀಲತೆಗೆ ಸೂಕ್ತ ವೇದಿಕೆ ದೊರೆಯಲಿದೆ. ಶಿಸ್ತಿನ ಜೀವನಶೈಲಿಯನ್ನು ರೂಢಿಸಿಕೊಳ್ಳಿ. ದಾನಧರ್ಮಗಳಲ್ಲಿ ಆಸಕ್ತಿ ತೋರುವಿರಿ.

– ಲೋಹಿತ ಹೆಬ್ಬಾರ್

Source link

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, here is the list of movies and web series

ಗಿಲ್ಲಿ ನಟ, ಗೌರವ್ ಶೆಟ್ಟಿ, ಸಾಧು ಕೋಕಿಲ ಇನ್ನೂ ಕೆಲವು ಹಾಸ್ಯ ಕಲಾವಿದರು ಒಟ್ಟಿಗೆ ನಟಿಸಿರುವ ಹಾಸ್ಯಮಯ ಕೌಟುಂಬಿಕ ಸಿನಿಮಾ ‘ಸೂಪರ್​ ಹಿಟ್’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಸನ್ ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು.

Source link

ಬೆಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ ಮೇ 10ರಂದು ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ: ಮಾಹಿತಿ ಇಲ್ಲಿದೆ – Kannada News | Bengaluru Traffic Alert: PM Modi Visit May 10; Check Route Changes and Restrictions

ಬೆಂಗಳೂರು, ಮೇ 09: ನಾಳೆ (ಮೇ 10) ಬೆಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ನರೇಂದ್ರ ಮೋದಿಯವರು ಭಾಗಿಯಾಗಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಠಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಾರ ನಿರ್ಬಂಧಿತ ಪ್ರದೇಶಗಳು

  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿ.ಜಿ.ಸಿ.ಎ ಕಚೇರಿವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)
  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)

ಇದನ್ನೂ ಓದಿ: ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ; ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು

  • ​ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
  • ​HAL ವಿಮಾನ ನಿಲ್ದಾಣ ಗೇಟ್ ನಂ. 30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ
  • HAL ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿವರೆಗೆ

ಪಾರ್ಕಿಂಗ್ ಸ್ಥಳಗಳು

  • HAL ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್).
  • ಸಾರ್ವಜನಿಕರಿಗೆ- ಸರ್ ಎಸ್.ಎಂ.ವಿ, ಕಾಲೇಜು ಮೈದಾನ, HAL ಬಸ್ ಯಾರ್ಡ್

ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಪರ್ಯಾಯ ಮಾರ್ಗ

ತುಮಕೂರು ರಸ್ತೆಯಿಂದ ಕನಕಪುರ ರಸ್ತೆ: ತುಮಕೂರು ರಸ್ತೆಯಿಂದ ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್​​ ಬಳಿ ಬಲ ತಿರುವು ಪಡೆದು ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು. ತುಮಕೂರು ರಸ್ತೆಯಲ್ಲಿ ನಗರದ ಒಳಭಾಗದಿಂದ ಬಂದು ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವವರಿಗೂ ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕವೇ ತೆರಳಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದುಬಾರಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಕಿರುತೆರೆ ನಟಿ ಮೋಕ್ಷಿತಾ ಪೈ – Kannada News | Mokshitha Pai Buys Mahindra XUV400 EV Car Post Big Boss Jagaddhatri Actress Invests

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ತಮ್ಮ ಕನಸಿನ ಹೊಸ ಕಾರನ್ನು ಮನೆಗೆ ತಂದಿದ್ದು, ಈ ಸಂಭ್ರಮದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಹೆಸರಿನ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮೊದಲು ಈ ಕಾರು ಅವರ ಮನೆಗೆ ಬಂದಿದೆ.

ಇತ್ತೀಚೆಗೆ ಪೆಟ್ರೋಲ್​-ಡೀಸೆಲ್ ಕಾರುಗಳ ಬದಲು ಎಲೆಕ್ಟ್ರಿಕ್ ಕಾರುಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದಾರೆ. ಮೋಕ್ಷಿತಾ ಕೂಡ ಹಾಗೆಯೇ ಮಾಡಿದ್ದಾರೆ. ಅವರು ಮಹೀಂದ್ರಾ ಕಂಪನಿಯ XUV400 EV ಖರೀದಿಸಿದ್ದಾರೆ. ಆಕರ್ಷಕವಾದ ಕೆಂಪು ಬಣ್ಣದ ಈ ಕಾರು ಪರಿಸರ ಸ್ನೇಹಿಯಾಗಿದ್ದು, ಪ್ರೀಮಿಯಂ ಫೀಚರ್‌ಗಳನ್ನು ಹೊಂದಿದೆ. ಇದರ ಮೌಲ್ಯ ಅಂದಾಜು 17 ಲಕ್ಷದಿಂದ 20 ಲಕ್ಷ ರೂಪಾಯಿ ಎಂದು ಹೇಳಲಾಗುತ್ತಿದೆ. ತಮ್ಮ ಕುಟುಂಬದೊಂದಿಗೆ ಶೋರೂಮ್‌ಗೆ ತೆರಳಿ ಪೂಜೆ ಸಲ್ಲಿಸಿ ಹೊಸ ವಾಹನವನ್ನು ಬರಮಾಡಿಕೊಂಡಿದ್ದಾರೆ. ಅಭಿಮಾನಿಗಳು ನಟಿಗೆ ಶುಭಾಶಯ ಕೋರುತ್ತಿದ್ದಾರೆ.

ಮಹೀಂದ್ರಾ ಕಂಪನಿಯ ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿ ಇದಾಗಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 456 ಕಿ.ಮೀ ವರೆಗೆ ಚಲಿಸುವ ಸಾಮರ್ಥ್ಯ ಹೊಂದಿದೆ. ಇದು ಕೇವಲ 8.3 ಸೆಕೆಂಡುಗಳಲ್ಲಿ 0 ಇಂದ 100 ಕಿ.ಮೀ ವೇಗವನ್ನು ತಲುಪಬಲ್ಲದು. ಆಟೋಮ್ಯಾಟಿಕ್ ಕಾರು ಮಾತ್ರ ಇದರಲ್ಲಿ ಲಭ್ಯವಿದೆ.

ಮೋಕ್ಷಿತಾ ಹಿನ್ನೆಲೆ

‘ಪಾರು’ ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಮೋಕ್ಷಿತಾ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ ದೊಡ್ಡ ಮಟ್ಟದ ಬ್ರೇಕ್ ನೀಡಿತು. ಅವರ ನೇರ ನಡೆ-ನುಡಿ ಮತ್ತು ಆಟದ ವೈಖರಿ ಜನರಿಗೆ ಇಷ್ಟವಾಗಿತ್ತು. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಅವರಿಗೆ ಅವಕಾಶಗಳು ಮತ್ತು ಜನಪ್ರಿಯತೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

ಜಗದ್ಧಾತ್ರಿ ಧಾರಾವಾಹಿ ಮೇಲೆ ನಿರೀಕ್ಷೆ

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಜಗದ್ಧಾತ್ರಿ’ ಧಾರಾವಾಹಿಯಲ್ಲಿ ಮೋಕ್ಷಿತಾ ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದ್ದು, ಮೋಕ್ಷಿತಾ ಮುಖ ಎಲ್ಲಿಯೂ ರಿವೀಲ್ ಆಗಿಲ್ಲ. ಧಾರಾವಾಹಿ ಪ್ರಸಾರ ಆಗುವುದಕ್ಕೂ ಮೊದಲೇ ಮೋಕ್ಷಿತಾ ಅವರು ಹೊಸ ಕಾರು ಖರೀದಿಸಿರುವುದು ಅವರ ವೃತ್ತಿಜೀವನದ ಪಾಸಿಟಿವ್ ಬೆಳವಣಿಗೆಯನ್ನು ಸೂಚಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:02 pm, Sat, 9 May 26

Source link

ವಿಜಯ್​ಗೆ ಸಿಗಲಿದೆಯಾ ವಿಸಿಕೆ ಬೆಂಬಲ; ಸುಳಿವು ನೀಡಿದ ಎಐಎಡಿಎಂಕೆ ನಾಯಕ ಪಳನಿಸ್ವಾಮಿ – Kannada News | VCK chief Thirumavalavan will officially announce stance on support to TVK by evening

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ವಿಜಯ್ (Vijay) ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್, ಸಿಪಿಐ, ಸಿಪಿಎಂ ಪಕ್ಷ ಬೆಂಬಲ ಘೋಷಿಸಿರುವುದರಿಂದ 116 ಶಾಸಕರು ವಿಜಯ್ ಕಡೆಗಿದ್ದಾರೆ. ಆದರೆ, ಬಹುಮತಕ್ಕೆ ಇನ್ನೂ 2 ಸ್ಥಾನಗಳ ಅಗತ್ಯವಿದೆ. ಇದೀಗ ವಿಸಿಕೆ ತನ್ನ ಬೆಂಬಲ ನೀಡುತ್ತದೆಯೇ? ಇಲ್ಲವೇ? ಎಂಬುದು ಇಂದು ಸಂಜೆಯೊಳಗೆ ಗೊತ್ತಾಗಲಿದೆ. ಇಂದು ಸಂಜೆ 4 ಗಂಟೆಯ ಬಳಿಕ ತಮ್ಮ ಬೆಂಬಲ ಯಾವ ಪಕ್ಷಕ್ಕೆ ಎಂಬುದನ್ನು ಘೋಷಿಸುವುದಾಗಿ ವಿಸಿಕೆ ತಿಳಿಸಿದೆ. ಹೀಗಾಗಿ, ಇಂದು ಸಂಜೆಯೊಳಗೆ ತಮಿಳುನಾಡಿನ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿಯುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ವಿಸಿಕೆ ಇಂದು ಸಂಜೆ ಟಿವಿಕೆಗೆ ಬೆಂಬಲ ಘೋಷಿಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಎಐಎಡಿಎಂಕೆ ನಾಯಕ ಪಳನಿಸ್ವಾಮಿ ಈ ಬಗ್ಗೆ ಸುಳಿವು ನೀಡಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ರಚಿಸುವ ಪಕ್ಷಕ್ಕೆ ನನ್ನ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದರಿಂದ ವಿಜಯ್ ಅವರಿಗೆ ಬಹುಮತ ಸಿಕ್ಕಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ತಮಿಳುನಾಡಿನ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷವು ಡಿಎಂಕೆ ಮೈತ್ರಿಕೂಟವನ್ನು ತೊರೆದು ತಮಿಳುನಾಡು ವಿಕ್ಟರಿ ಪಾರ್ಟಿಯನ್ನು ಸೇರಿಕೊಂಡಿತು. ಈ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವಲ್ಲದೆ ಸಂಸತ್ತಿನ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಅದು ಮೈತ್ರಿಕೂಟದಲ್ಲಿ ಮುಂದುವರಿಯುತ್ತದೆ ಎಂದು ವರದಿಯಾಗಿದೆ. ಇದರ ನಂತರ, ತಮಿಳುನಾಡು ವಿಕ್ಟರಿ ಪಾರ್ಟಿಗೆ ಬೆಂಬಲ 112ಕ್ಕೆ ಏರಿತು.

ಇದನ್ನೂ ಓದಿ: ಶಾಸಕರ ನಕಲಿ ಬೆಂಬಲದ ಪತ್ರ ನೀಡಿದ್ದಕ್ಕೆ ಟಿವಿಕೆ ನಾಯಕ ವಿಜಯ್ ವಿರುದ್ಧ ದೂರು ದಾಖಲು

ಅದರ ನಂತರ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್ವಾದಿ (ಸಿಪಿಐಎಂ) ಪಕ್ಷಗಳು ಹೊರಗಿನಿಂದ ತಮ್ಮ ಬೆಂಬಲವನ್ನು ಘೋಷಿಸಿದ್ದವು. ಆದ್ದರಿಂದ, ತಮಿಳುನಾಡು ವಿಕ್ಟರಿ ಪಾರ್ಟಿಗೆ 116 ಶಾಸಕರ ಬೆಂಬಲವಿದೆ. ಇದನ್ನು ನಿರ್ಧರಿಸುವ ಪ್ರಮುಖ ಪಕ್ಷವೆಂದರೆ ವಿಸಿಕೆಯಾಗಿದೆ.

ವಿಸಿಕೆ ನಾಯಕ ತಿರುಮಾವಲವನ್ ನಿನ್ನೆ ಈ ಕುರಿತು ಪೋಸ್ಟ್ ಒಂದನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಅವರು, “ಆಡಳಿತದಲ್ಲಿ ಪಾಲು, ಅಧಿಕಾರದಲ್ಲಿ ಪಾಲು; ಈಗ ನಮ್ಮ ಸಮಯ” ಎಂದು ಹೇಳಿದ್ದರು. ಇದಾದ ನಂತರ ತಿರುಮಾವಲವನ್ ಇದ್ದಕ್ಕಿದ್ದಂತೆ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರನ್ನು ವೈಯಕ್ತಿಕವಾಗಿ ಭೇಟಿಯಾದರು.

ಇದನ್ನೂ ಓದಿ: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ ನಾಯಕ ದಿನಕರನ್

ವಿಸಿಕೆ ಇದೀಗ ಟಿವಿಕೆ ಜೊತೆ ಮೈತ್ರಿಕೂಟ ರಚಿಸುವ ಅಥವಾ ಬೆಂಬಲ ನೀಡುವ ಬಗ್ಗೆ ಇಂದು ಸಂಜೆ ಘೋಷಣೆ ಮಾಡಲಾಗುವುದು ಎಂದು ಹೇಳಿದೆ. ವಿಸಿಕೆ ಮುಖ್ಯಸ್ಥ ತಿರುಮಾವಲವನ್ ಶನಿವಾರ ಸಂಜೆ ಟಿವಿಕೆಗೆ ಬೆಂಬಲ ನೀಡುವ ಬಗ್ಗೆ ಅಧಿಕೃತವಾಗಿ ನಿಲುವು ಪ್ರಕಟಿಸಲಿದ್ದಾರೆ. ತಿರುಮಾವಲವನ್ ಸಂಜೆ 4 ಗಂಟೆಗೆ ಘೋಷಣೆ ಮಾಡಲಿದ್ದಾರೆ ಎಂದು ವಿಸಿಕೆ ವಕ್ತಾರ ಕೆ.ಕೆ ಪವಲನ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ ಬಗ್ಗೆ ಸಚಿವ ಮುನಿಯಪ್ಪ ಹೇಳಿದ್ದಿಷ್ಟು – Kannada News | KH Muniyappa Speaks on Roster Point Issue in Internal Reservation Posts

ಬೆಂಗಳೂರು, ಮೇ 09: ಕರ್ನಾಟಕ ಸರ್ಕಾರವು ನಾಗಮೋಹನ್‌ದಾಸ್ ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಚಾರಿತ್ರಿಕ ನಿರ್ಧಾರವನ್ನು ಕೈಗೊಂಡಿದೆ. ದಶಕಗಳಿಂದ ಬಾಕಿ ಉಳಿದಿದ್ದ ರೋಸ್ಟರ್ ಬಿಂದುವಿನ ಸಮಸ್ಯೆಗಳು ಮತ್ತು ಗೊಂದಲಗಳಿಗೆ ಈ ನಿರ್ಧಾರವು ಸ್ಪಷ್ಟ ಪರಿಹಾರವನ್ನು ನೀಡುವ ಗುರಿ ಹೊಂದಿದೆ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 4೦ ವರ್ಷದ ಸಂಘಸಂಸ್ಥೆಗಳ ದಲಿತ ಸಂಘ ಸಮಿತಿಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರೋಸ್ಟರ್ ಬಿಂದುವಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೂತ್ರವನ್ನು ಅಳವಡಿಸಲಾಗಿದೆ. 15 ಬಿಂದುಗಳವರೆಗೆ ಸಮಸ್ಯೆ ಇಲ್ಲ. ಆದರೆ, 14, 8, 9, ಅಥವಾ 3 ಬಿಂದುಗಳು ಬಂದಾಗ, ಉದಾಹರಣೆಗೆ, 15ರಲ್ಲಿ 12 ಬಿಂದುಗಳು ಸಾಮಾನ್ಯ ವರ್ಗಕ್ಕೆ ಹೋಗಿ, 3 ಬಿಂದುಗಳು ಎಸ್ಸಿ-ಎ, ಬಿ, ಸಿ ಗೆ ಬರುತ್ತವೆ. 14 ಬಿಂದುಗಳಿದ್ದಾಗ ಎ ಮತ್ತು ಬಿ ಗುಂಪುಗಳಿಗೆ ಸಿಕ್ಕಿ, ಸಿ ಗುಂಪಿಗೆ ಸಿಗದಿರುವಂತಹ ಸಮಸ್ಯೆಗಳು ಎದುರಾಗುತ್ತಿದ್ದವು. ಇದನ್ನು ಪರಿಹರಿಸಲು, ಷೆಡ್ಯೂಲ್ಡ್ ಕಾಸ್ಟ್ ಅಡಿಯಲ್ಲಿ ಬರುವ 101 ಜಾತಿಗಳೆಲ್ಲವೂ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ – Kannada News | Hubballi Acid Attack: 6 Month Old Baby and 4 Others Injured in Domestic Dispute

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ.

  • ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ
  • ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದ ಘಟನೆ
  • ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಶುರುವಾಗಿದ್ದ ಜಗಳ

ಇದನ್ನೂ ಓದಿ: ಜಗದ್ಗುರುಗಳ ಸಮ್ಮುಖದಲ್ಲಿ ಸ್ವಾಮೀಜಿ-ಭಕ್ತರ ಸಂಧಾನ; ಏನಿದು ಕುಂದಗೋಳ ಮಠದ ವಿವಾದ?

ನಾದಿನಿಯರ ವಿಚಾರವಾಗಿ ಸುರೇಶ್ ಮತ್ತು ಆತನ ಪತ್ನಿ ರಾಜೇಶ್ವರಿ ನಡುವೆ ಜಗಳ ನಡೆದಿತ್ತು. ನಾದಿನಿಯರ ಫೋಟೋ ತೆಗೆಯದಂತೆ ಗಂಡನಿಗೆ ರಾಜೇಶ್ವರಿ ತಾಕೀತು ಮಾಡಿದ್ದರೂ ಮತ್ತೆ  ಫೋಟೋ ತೆಗೆದು ಸುರೇಶ್ ಕಿರಿಕ್ ಮಾಡುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವಿನ ಜಗಳ ಆ್ಯಸಿಡ್​​ ದಾಳಿಯ ಹಂತಕ್ಕೆ ಹೋಗಿದೆ. ಘಟನೆಯಲ್ಲಿ ಶ್ರುತಿ ಹಾಗೂ ರೇಷ್ಮಾ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ವತಃ ಆರೋಪಿ ಸುರೇಶ್​ ಬೈಲ್​ ಪತ್ತಾರ(33) ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಇನ್ನು ಆರೋಪಿ ಸುರೇಶ್​ ಬೈಲ್​ ಪತ್ತಾರ ತಾಮ್ರ, ಹಿತ್ತಾಳೆ ಕೆಲಸಗಳನ್ನು ಮಾಡಿಕೊಂಡಿದ್ದ. ನಾದಿನಿಯರ ವಿಚಾರ ಸಂಬಂಧದ ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ತಾಮ್ರ, ಹಿತ್ತಾಳೆ ತೊಳೆಯಲು ಬಳಸುತ್ತಿದ್ದ ಕೆಮಿಕಲ್​​ನಿಂದಲೇ ಈತ ಕುಟುಂಬದ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಸುರೇಶ್​​ ಮೈಮೇಲೆಯೂ ಆ್ಯಸಿಡ್​​ ಚೆಲ್ಲಿದ ಪರಿಣಾಮ ಆತನೂ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ಒಟ್ಟಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳವೀಗ ಇಬ್ಬರ ಜೀವವನ್ನು ಅಪಾಯಕ್ಕೆ ನೂಕಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ – Kannada News | Mysore Pak, Grand Meal Prepared for Fans at BS Yediyurappa Abhimanotsava

ಚಿತ್ರದುರ್ಗ, ಮೇ 09: ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಪ್ರವೇಶ ದ್ವಾರಗಳನ್ನು ಏಳು ಸುತ್ತಿನ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ಕಟೌಟ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕೆ ಬಿ.ಎಸ್.ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು ಕಾರ್ಯನಿರ್ವಹಿಸುತ್ತಿದ್ದು, ಮೈಸೂರ್ ಪಾಕ್, ಮೊಸರನ್ನ, ಟೊಮೆಟೊ ಬಾತ್, ಪಲಾವ್, ಮೆಂತ್ಯ ಪಲಾವ್ ಸೇರಿದಂತೆ ವಿವಿಧ ಖಾದ್ಯಗಳ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version