RCB vs DC IPL 2026 Live Score: ಆರ್​ಸಿಬಿಗೆ ಡೆಲ್ಲಿ ಸವಾಲು – Kannada News | Royal Challengers Bengaluru vs Delhi Capitals IPL 2026 Live Cricket Score RCB vs DC Match on 18th April latest news in Kannada

ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ, ಆರ್​​ಸಿಬಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಗಳಿಂದ ಹೊರಬರಲು ಪ್ರಯತ್ನಿಸಲಿದೆ.

Source link

SRH vs CSK: ಧೋನಿ ಕಣಕ್ಕಿಳಿಯಲಿದ್ದಾರಾ? – Kannada News | Will MS Dhoni play in CSK vs SRH Match?

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.  ಹೈದರಾಬಾದ್‌ನ ಉಪ್ಪಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಧೋನಿ ಒಂದೇ ಒಂದು ಪಂದ್ಯವಾಡಿಲ್ಲ. ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅವರು ಆಡುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿದೆ.

ಗಾಯದ ಸಮಸ್ಯೆ:

ಸೀಸನ್ ಆರಂಭಕ್ಕೂ ಮುನ್ನ ತರಬೇತಿಯ ಅವಧಿಯಲ್ಲಿ ಉಂಟಾದ ಸ್ನಾಯು ಸೆಳೆತದಿಂದ (Calf Strain) ಧೋನಿ ಬಳಲುತ್ತಿದ್ದಾರೆ. ಇದೇ ಕಾರಣದಿಂದ ಅವರು ಈ ಆವೃತ್ತಿಯ ಮೊದಲ ಐದು ಪಂದ್ಯಗಳಿಂದ ಹೊರಗುಳಿದಿದ್ದರು. ಇಂದಿನ ಪಂದ್ಯಕ್ಕಾಗಿ ಅವರು ತಂಡದೊಂದಿಗೆ ಹೈದರಾಬಾದ್‌ಗೆ ಪ್ರಯಾಣಿಸಿದ್ದಾರಾದರೂ, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ತಿಳಿದುಬಂದಿದೆ.

ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ:

ಶುಕ್ರವಾರ ಸಂಜೆ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಧೋನಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ. ಅವರು ಲಯಬದ್ಧವಾಗಿ ಬ್ಯಾಟ್ ಬೀಸುತ್ತಿರುವುದು ಅಭಿಮಾನಿಗಳಲ್ಲಿ ಆಶಾವಾದ ಮೂಡಿಸಿದೆಯಾದರೂ, ಟೂರ್ನಿಯ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು ಮ್ಯಾನೇಜ್‌ಮೆಂಟ್ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಿದೆ.

ಧೋನಿ ಬದಲು ಯಾರು?

ಧೋನಿ ಅವರ ಗೈರುಹಾಜರಿಯಲ್ಲಿ ಕೇರಳದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ. ಪ್ರಸ್ತುತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಚೆನ್ನೈ ತಂಡಕ್ಕೆ ಇಂದಿನ ಪಂದ್ಯ ಗೆಲ್ಲುವುದು ಅತ್ಯಂತ ಅವಶ್ಯಕವಾಗಿದೆ.

ವಾಪಸಾತಿ ಯಾವಾಗ?

ಮೂಲಗಳ ಪ್ರಕಾರ, ಏಪ್ರಿಲ್ 23 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದ ಮೂಲಕ ಧೋನಿ ಮೈದಾನಕ್ಕೆ ಮರಳುವ ಸಾಧ್ಯತೆಯಿದೆ. ಹೀಗಾಗಿ ಥಲಾ ಕಂಬ್ಯಾಕ್​ಗಾಗಿ ಸಿಎಸ್​ಕೆ ಅಭಿಮಾನಿಗಳು ಮತ್ತಷ್ಟು ದಿನಗಳು ಕಾಯಬೇಕಾಗಿ ಬರಬಹುದು.

ಇದನ್ನೂ ಓದಿ: ದಿಗ್ಗಜರ ದಾಖಲೆಯೇ ಉಡೀಸ್: ಹೊಸ ಚರಿತ್ರೆ ಬರೆದ ಸ್ಮೃತಿ ಮಂಧಾನ

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಖಲೀಲ್ ಅಹ್ಮದ್ (ಔಟ್).

Source link

ಮೈನಡುಗಿಸುವ ವಿಡಿಯೋ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದ ಸೈನಿಕ ಆಯತಪ್ಪಿ ಬಿದ್ದೇ ಬಿಟ್ರು! – Kannada News | Army Personnel Injured During Parachute Training in Ballari: Soldier Airlifted to Bengaluru After 50 Foot Fall

ಬಳ್ಳಾರಿ, ಏಪ್ರಿಲ್ 18: ಪ್ಯಾರಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಸುಮಾರು 417 ಸೈನಿಕರ ತಂಡ ಪ್ಯಾರಚೂಟ್ ಜಿಗಿತದ ತರಬೇತಿಯಲ್ಲಿ ನಿರತವಾಗಿತ್ತು. ಈ ವೇಳೆ ಚಿನ್ನರಾಜ್ ಅವರು ಪ್ಯಾರಚೂಟ್ ಮೂಲಕ ಜಿಗಿಯುವಾಗ ತಾಂತ್ರಿಕ ತೊಂದರೆ ಅಥವಾ ಆಯತಪ್ಪಿದ ಕಾರಣ ಸುಮಾರು 50 ಅಡಿ ಎತ್ತರದಿಂದ ನೇರವಾಗಿ ನೆಲಕ್ಕೆ ಬಿದ್ದಿದ್ದಾರೆ. ಘಟನೆಯ ತೀವ್ರತೆಗೆ ಅವರ ಕಾಲಿನ ಮೂಳೆ ಮುರಿದಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿಗೆ ಏರ್‌ಲಿಫ್ಟ್

ಗಾಯಗೊಂಡ ಸೈನಿಕನನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಾಯದ ತೀವ್ರತೆ ಹೆಚ್ಚಿದ್ದ ಕಾರಣ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಅದರಂತೆ ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಯೋಧನನ್ನು ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್

Source link

ದಿಗ್ಗಜರ ದಾಖಲೆಯೇ ಉಡೀಸ್: ಹೊಸ ಚರಿತ್ರೆ ಬರೆದ ಸ್ಮೃತಿ ಮಂಧಾನ – Kannada News | Smriti Mandhana Creates History in T20I Cricket

ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್‌ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Source link

ಆಫ್ರಿಕಾದಿಂದ ಬಂದ ಚೀತಾಗಳು ಹೇಗಿವೆ ನೋಡಿ! – Kannada News | Bengaluru’s Bannerghatta Park Welcomes 4 Cheetahs from South Africa: Quarantined

ಬೆಂಗಳೂರು, ಏಪ್ರಿಲ್ 18: ದಕ್ಷಿಣ ಆಫ್ರಿಕಾದಿಂದ ತರಲಾಗಿರುವ ನಾಲ್ಕು ಚೀತಾಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ಆಗಮಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಡರಾತ್ರಿ ತರಲಾಗಿರುವ ಈ ಎರಡು ಗಂಡು ಹಾಗೂ ಎರಡು ಹೆಣ್ಣು ಚೀತಾಗಳನ್ನು 40 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ.

ಉದ್ಯಾನವನದ ವೈದ್ಯರ ನಿಗಾದಲ್ಲಿ ಅವುಗಳ ಆರೋಗ್ಯ ಮತ್ತು ಚಲನವಲನಗಳನ್ನು ನಿಗಾ ವಹಿಸಲಾಗುತ್ತಿದೆ. ಈ ಅವಧಿ ಬಳಿಕ ತಜ್ಞರ ಪರಿಶೀಲನೆ ನಡೆಸಿ, ಚೀತಾಗಳು ಸ್ಥಳೀಯ ಹವಾಮಾನಕ್ಕೆ ಹೊಂದಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಸದ್ಯ ಚೀತಾಗಳು ಪುನರ್ವಸತಿ ಕೇಂದ್ರದ ಕ್ವಾರಂಟೈನ್ ಪಂಜರದಲ್ಲಿ ಸುರಕ್ಷಿತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಕ್ಷಯ ತೃತೀಯ ಏಪ್ರಿಲ್ 19 ಅಥವಾ 20ಕ್ಕೋ? ಗೊಂದಲ ಬೇಡ, ಇಲ್ಲಿದೆ ನಿಖರ ಮುಹೂರ್ತದ ಮಾಹಿತಿ! – Kannada News | Akshaya Tritiya 2026: April 19 or 20? Exact Muhurta and Date Clarity

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಶಾಶ್ವತ ಸಮೃದ್ಧಿಯ ಸಂಕೇತ. ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಬರುವ ಈ ದಿನದಂದು ಯಾವುದೇ ಕೆಲಸ ಮಾಡಿದರೂ ಅದು ‘ಕ್ಷಯ’ವಾಗುವುದಿಲ್ಲ (ನಾಶವಾಗುವುದಿಲ್ಲ) ಎಂಬ ನಂಬಿಕೆಯಿದೆ. ಆದರೆ ಈ ಬಾರಿ ಹಬ್ಬದ ದಿನಾಂಕದ ಬಗ್ಗೆ ಜನರಲ್ಲಿ ಗೊಂದಲವಿದೆ. ಅದಕ್ಕೆ ಪಂಚಾಂಗ ರೀತ್ಯಾ ಉತ್ತರ ಇಲ್ಲಿದೆ.

ಮುಹೂರ್ತ ಮತ್ತು ಸರಿಯಾದ ದಿನಾಂಕ:

ಪಂಚಾಂಗದ ಪ್ರಕಾರ, ಈ ಬಾರಿಯ ಸಮಯ ಹೀಗಿದೆ:

  • ದಿನಾಂಕ: ಏಪ್ರಿಲ್ 19, 2026 (ಭಾನುವಾರ)
  • ತೃತೀಯಾ ತಿಥಿ ಆರಂಭ: ಏಪ್ರಿಲ್ 19ರ ಬೆಳಿಗ್ಗೆ 10:49 ಗಂಟೆಗೆ.
  • ತೃತೀಯಾ ತಿಥಿ ಅಂತ್ಯ: ಏಪ್ರಿಲ್ 20ರ ಬೆಳಿಗ್ಗೆ 07:27 ಗಂಟೆಗೆ.
  • ಪೂಜೆ ಮತ್ತು ಖರೀದಿಗೆ ಶುಭ ಮುಹೂರ್ತ: ಏಪ್ರಿಲ್ 19ರ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:20 ರವರೆಗೆ.

ಏಪ್ರಿಲ್ 20ರಂದು ಆಚರಿಸುವುದು ಏಕೆ?

ಶಾಸ್ತ್ರದ ಪ್ರಕಾರ, ಸೂರ್ಯೋದಯದ ಸಮಯದಲ್ಲಿ ಯಾವ ತಿಥಿ ಇರುತ್ತದೆಯೋ, ಅಂದೇ ಹಬ್ಬವನ್ನು ಆಚರಿಸುವ ‘ಉದಯ ತಿಥಿ’ ಸಂಪ್ರದಾಯವೂ ಇದೆ. ಏಪ್ರಿಲ್ 20ರ ಸೂರ್ಯೋದಯದ ಸಮಯದಲ್ಲಿ ತೃತೀಯಾ ತಿಥಿ ಇರುವುದರಿಂದ ಕೆಲವರು ಅಂದು ಆಚರಿಸುತ್ತಾರೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಈ ದಿನದ ವಿಶೇಷತೆಗಳೇನು?

  • ಪರಶುರಾಮ ಜಯಂತಿ: ಅಕ್ಷಯ ತೃತೀಯದಂದೇ ಶ್ರೀವಿಷ್ಣುವಿನ ಆರನೇ ಅವತಾರವಾದ ಭಗವಾನ್ ಪರಶುರಾಮರ ಜನ್ಮದಿನವನ್ನು ಆಚರಿಸಲಾಗುತ್ತದೆ.
  • ಸರ್ವಸಿದ್ಧಿ ದಿನ: ಇದು ವರ್ಷದ ಅತ್ಯಂತ ಶಕ್ತಿಶಾಲಿ ಮತ್ತು ಸಕಾರಾತ್ಮಕ ದಿನಗಳಲ್ಲಿ ಒಂದಾಗಿದೆ. ಮದುವೆ, ಗೃಹಪ್ರವೇಶ, ಹೊಸ ಉದ್ಯೋಗ ಅಥವಾ ಉದ್ಯಮ ಆರಂಭಿಸಲು ಈ ದಿನದಂದು ಬೇರೆ ಯಾವುದೇ ವಿಶೇಷ ಮುಹೂರ್ತ ನೋಡುವ ಅಗತ್ಯವಿಲ್ಲ (ಅಬೂಜ ಮುಹೂರ್ತ).
  • ಖರೀದಿಯ ಮಹತ್ವ: ಈ ದಿನ ಕಾರು, ಮನೆ ಅಥವಾ ಆಭರಣಗಳನ್ನು ಖರೀದಿಸುವುದರಿಂದ ಜೀವನದಲ್ಲಿ ಅಭಿವೃದ್ಧಿ ಮತ್ತು ಯಶಸ್ಸು ಲಭಿಸುತ್ತದೆ ಎಂಬುದು ಜನರ ನಂಬಿಕೆ.

ಅಕ್ಷಯ ಎಂದರೆ ಏನು?

‘ಅಕ್ಷಯ’ ಎಂದರೆ ಎಂದಿಗೂ ಕಡಿಮೆಯಾಗದ್ದು. ಈ ದಿನದಂದು ಮಾಡಿದ ಪ್ರಾರ್ಥನೆ, ದಾನ ಮತ್ತು ಪೂಜೆಯ ಫಲವು ಭಕ್ತರೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ಇದು ಕೇವಲ ಸಂಪತ್ತಿನ ಹಬ್ಬವಲ್ಲ, ಇದು ಸಕಾರಾತ್ಮಕತೆಯ ಸಂಕೇತವೂ ಹೌದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ! – Kannada News | R Ashoka Slams Congress: Siddaramaiah Hunts Rats, while DK Shivakumar Targets Tigers Amid Karnataka CM Power Tussle

ಬೆಂಗಳೂರು, ಏಪ್ರಿಲ್ 18: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ. ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ದರೆ, ಡಿಕೆ ಶಿವಕುಮಾರ್ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಕ್ಯಾಬಿನೆಟ್‌ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್‌ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ. ದಾವಣಗೆರೆಯ ಜಬ್ಬಾರ್ ಮತ್ತು ಸಿಎಂ ಕಾರ್ಯದರ್ಶಿಯಾಗಿದ್ದ ನಜೀರ್‌ರನ್ನು ಸಹ ಗೇಟ್ ಪಾಸ್ ನೀಡಿ ಹೊರಹಾಕಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲವಿಲ್ಲ. ಒಟ್ಟಾರೆ ಕಾಂಗ್ರೆಸ್ ಪಕ್ಷವು ನಾಯಕತ್ವವಿಲ್ಲದೆ ಬೀದಿ ಭಿಕಾರಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿವಾಹಕ್ಕೂ ಮೊದಲು ನಯನತಾರಾ-ವಿಘ್ನೇಶ್ ಮಧ್ಯೆ ಆಗಿತ್ತು ಒಪ್ಪಂದ; ಇನ್ನೂ ಇದೆ ಆ ಡೀಲ್ – Kannada News | Vignesh Shivan and Nayanthara: Their Work Life Balance Secret for a Happy Marriage

ವಿಘ್ನೇಶ್ ಶಿವನ್ ಹಾಗೂ ನಯನತಾರಾ ಅವರು (Nayanthara) ವಿವಾಹ ಆಗಿ ನಾಲ್ಕು ವರ್ಷ ಕಳೆಯುತ್ತಾ ಬಂದಿದೆ. 2022ರಲ್ಲಿ ಇವರು ಮದುವೆ ಆದರು. ಈಗ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ನಯನತಾರಾ ಅವರು ವಿವಿಧ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ವಿಘ್ನೇಶ್ ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ವಿಘ್ನೇಶ್ ಅವರು ದಾಂಪತ್ಯದ ಬಗ್ಗೆ ಒಂದು ಅಚ್ಚರಿಯ ವಿಷಯ ಬಿಟ್ಟುಕೊಟ್ಟಿದ್ದಾರೆ.

ವಿಘ್ನೇಶ್ ನಿರ್ದೇಶನದ ‘ಲವ್ ಇನ್ಶೂರೆನ್ಸ್ ಕಂಪನಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಪ್ರದೀಪ್ ರಂಗನಾಥನ್ ನಾಯಕ. ಈ ಚಿತ್ರದ ಪ್ರಚಾರದ ವೇಳೆ ವಿಘ್ನೇಶ್ ಅವರು ಪತ್ನಿ ಜೊತೆ ಹೇಗೆ ಬಾಳುತ್ತಿದ್ದೇನೆ ಎಂಬುದನ್ನು ಹೇಳಿದ್ದಾರೆ. ವಿವಾಹಕ್ಕೂ ಮೊದಲೇ ಆದ ಒಂದು ಒಪ್ಪಂದದ ವಿಷಯ ರಿವೀಲ್ ಮಾಡಿದ್ದಾರೆ.

ಸಿಂಹ ದಿನವೂ ಬೇಟೆ ಆಡುವುದಿಲ್ಲ. ಒಮ್ಮೆ ಬೇಟೆ ಆಡಿ ಆಹಾರ ತಿಂದ ಬಳಿಕ ಅದರ ಎದುರು ಯಾವುದೇ ಪ್ರಾಣಿ ಹೋದರೂ ತಿನ್ನೋದಿಲ್ಲ ಎಂಬುದು ವಿಘ್ನೇಶ್ ಮಾತು. ಇದೇ ಪಾಲಿಸಿ ಜೀವನದಲ್ಲೂ ಅಳವಡಿಸಿಕೊಂಡಿದ್ದಾರೆ. ವರ್ಷದಲ್ಲಿ 265 ದಿನ ಮಾತ್ರ ಕೆಲಸ ಮಾಡುವ ಅವರು ಉಳಿದ 100 ದಿನವನ್ನು ತಮಗಾಗಿ ಮೀಸಲಿಡುತ್ತಾರೆ. ಈ ಸಂದರ್ಭದಲ್ಲಿ ಏನೇ ಆದರೂ ಅವರು ಸಿನಿಮಾ ಬಗ್ಗೆ ಆಗಲೀ ಅಥವಾ ಇನ್ನಾವುದೇ ವಿಷಯದ ಬಗ್ಗೆ ಚಿಂತಿಸೋದಿಲ್ಲ. ಆ ಸಮಯವನ್ನು ಅವರು ಸಂಪೂರ್ಣವಾಗಿ ಕುಟುಂಬಕ್ಕೆ ಮೀಸಲಿಡುತ್ತಾರೆ.

‘ನಾವು ಸಿಂಹ ಬೇಟೆ ಆಡಿದಂತೆ ಬದುಕಬೇಕು ಎಂದು ಪ್ರೀತಿಸುತ್ತಿದ್ದ ಕಾಲದಲ್ಲೇ ಒಪ್ಪಂದ ಮಾಡಿಕೊಂಡಿದ್ದೆವು. ಬೇಟೆ ಬಳಿಕ ವಿಶ್ರಾಂತಿ. ಹಾಗೆಯೇ ನಾವು ವರ್ಷದಲ್ಲಿ 265 ದಿನ ಕೆಲಸ ಮಾಡುತ್ತೇವೆ ಮತ್ತು ಉಳಿದ 100 ದಿನ ವಿಶ್ರಾಂತಿ ಪಡೆಯುತ್ತೇವೆ’ ಎಂದು ವಿಘ್ನೇಶ್ ಹೇಳಿದ್ದಾರೆ.

ಇದನ್ನೂ ಓದಿ: ವಿಘ್ನೇಶ್ ಶಿವನ್​ನಿಂದ ವಿಚ್ಛೇದನ ಪಡೆಯೋ ವಿಚಾರ: ನಯನತಾರಾ ಕಡೆಯಿಂದಲೇ ಸಿಕ್ತು ಸ್ಪಷ್ಟನೆ

ಅನೇಕ ಸೆಲೆಬ್ರಿಟಿಗಳು ಈ ನಿಯಮ ಪಾಲನೆ ಮಾಡುತ್ತಾರೆ. ಇದರಿಂದ ಅವರಿಗೆ ಕೆಲಸದ ಜೊತೆಗೆ ವೈಯಕ್ತಿಕ ಜೀವನಕ್ಕೂ ಸಮಯ ಕೊಟ್ಟಂತೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! – Kannada News | Maharashtra RTO Officer Threatened in Bengaluru for Crackdown on Unregistered Autos

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ!

ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಕೆಟ್ ಟೂರ್ನಮೆಂಟ್​ಗೆ ಬಂದಿದ್ದ ಅಧಿಕಾರಿ

ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ ಪ್ರಸಾದ್ ಶಿವದಾಸ್ ನಾಲ್ವಡೆ ಕಳೆದ ವಾರ ಬೆಂಗಳೂರುಗೆ ಆಗಮಿಸಿ, ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು.

ಏಪ್ರಿಲ್ 12ರಂದು ಗುಣಿ ಅಗ್ರಹಾರ ಪ್ರದೇಶದಲ್ಲಿದ್ದ ವೇಳೆ ಅವರಿಗೆ ಈ ಬೆದರಿಕೆ ಕರೆ ಬಂದಿದ್ದರಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿಯೇ ಈ ಪ್ರಕರಣ ದಾಖಲಾಗಿದ್ದು, ಕರೆ ಮಾಡಿದವರ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್

ಆಟೋ ಚಾಲಕರ ಮೇಲೆ ಕಠಿಣ ಕ್ರಮ ಕೈಗೊಂಡಿದ್ದಕ್ಕೆ ಬೆದರಿಕೆ

ಅಧಿಕಾರಿಗೆ ರವಿ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದ್ದು, ಆಟೋ ಚಾಲಕರಿಗೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದೀರಿ, ಇದರ ಪರಿಣಾಮ ನಿಮ್ಮ ಕುಟುಂಬದ ಮೇಲೆ ಬೀಳುತ್ತದೆ ಎಂದು ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ದಾಖಲೆ ಇಲ್ಲದ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ಗ್ಯಾಂಗ್ ಸಂಪರ್ಕಗಳ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:08 pm, Sat, 18 April 26

Source link

Exit mobile version