Headlines

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..! – Kannada News | Jasprit Bumrah acknowledged Shivam Dube’s valuable contribution

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ…

Read More

ರಾಜ್​​ಪಾಲ್ ಯಾದವ್ ಅದೃಷ್ಟ ಬದಲಿಸಲಿದೆ ಯೂಟ್ಯೂಬ್? – Kannada News | Rajpal Yadav’s YouTube Comeback: Jail Release, Viral Videos and Debt Solutions

9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಸುಮಾರು 13 ದಿನಗಳನ್ನು ಕಳೆದ ನಂತರ ಪ್ರಸಿದ್ಧ ನಟ ರಾಜ್‌ಪಾಲ್ ಯಾದವ್ (Rajpal Yadav) ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬಂದ ನಂತರ, ರಾಜ್‌ಪಾಲ್ ತಮ್ಮ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಹಲವು ವಿಷಯಗಳನ್ನು ಬಹಿರಂಗಪಡಿಸುತ್ತಿದ್ದಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಆರಂಭಿಸಿ ಅವರು ವಿಡಿಯೋ ಪೋಸ್ಟ್ ಮಾಡುತ್ತಿದ್ದಾರೆ.ಯೂಟ್ಯೂಬ್ ಅವರ ಅದೃಷ್ಟ ಬದಲಿಸೋ ಸೂಚನೆ ಸಿಕ್ಕಿದೆ. ರಾಜ್‌ಪಾಲ್ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊವನ್ನು…

Read More

Video: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್ – Kannada News | Harrowing Highway Footage Shows Truck Dragging Car for 1.5 km on Gwalior Road

ಗ್ವಾಲಿಯರ್, ಮಾರ್ಚ್​ 02: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಘಟನೆಯಲ್ಲಿ ಯಾವುದೇ ಇತರ ಸಾವುನೋವುಗಳು ಸಂಭವಿಸಿಲ್ಲ. ಈ ಘಟನೆ ತೇಕನ್ಪುರ ಮಿತಿಯ ಹೊರಗಿನ ಬಜೇರಾ ಗ್ರಾಮದ ಬಳಿ ನಡೆದಿದೆ. ಈ ಇಡೀ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಕ್ಕಿಯ ನಂತರ, ಕಾರು ಟ್ರಕ್‌ನ ಮುಂಭಾಗದಲ್ಲಿ ಸಿಲುಕಿಕೊಂಡಿತು. ನಿಲ್ಲಿಸುವ ಬದಲು, ಟ್ರಕ್ ಚಾಲಕ ಇನ್ನೂ ವೇಗವಾಗಿ…

Read More

ಗ್ರಹಣ ಸಮಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ: ಧರ್ಮಸ್ಥಳ, ಮಲೆ ಮಹದೇಶ್ವರ ಬೆಟ್ಟ, ಮಂತ್ರಾಲಯಕ್ಕೆ ಹೋಗುವ ಭಕ್ತರ ಗಮನಕ್ಕೆ – Kannada News | March 3 Lunar Eclipse: Temple Timings and Darshan Updates in Karnataka

ಬೆಂಗಳೂರು, ಮಾ.2: ಮಾರ್ಚ್ 3ರಂದು ಚಂದ್ರ ಗ್ರಹಣದ ( Lunar Eclipse) ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ. 2026ರ ಮೊದಲು ಗ್ರಹಣ ಆಗಿರುವ ಕಾರಣ ಕೆಲವೊಂದು ದೇವಾಲಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ಈ ಗ್ರಹಣದ ನಂತರ ಹಲವು ರಾಶಿಗಳಲ್ಲಿ ಬಹುದೊಡ್ಡ ಬದಲಾವಣೆಗಳು ಆಗಲಿದೆ ಎಂದು ದೇವಾಲಯದ ಅರ್ಚಕರು ಹೇಳಿದ್ದಾರೆ. ಇದೀಗ ಯಾವೆಲ್ಲ ದೇವಾಲಯದಲ್ಲಿ ಗ್ರಹಣ ಸಮಯದಲ್ಲಿ ಪ್ರಮುಖ ಬದಲಾವಣೆಗಳು ಆಗಲಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. ಬೇಲೂರು ಚನ್ನಕೇಶವಸ್ವಾಮಿ ದೇವಾಲಯದ ಗರ್ಭಗುಡಿ ನಾಳೆ ಬಂದ್:…

Read More

ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ – Kannada News | Kannada Small Films: OTT Payment Disparity and ‘Theertharoopa Tandeyavarige’ Struggle Revealed

ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದನ್ನು ಖರೀದಿಸಲು ಒಟಿಟಿ ಸಂಸ್ಥೆಗಳು ರೆಡಿ ಇರುತ್ತವೆ. ಆದರೆ, ಸಣ್ಣ ಬಜೆಟ್ ಚಿತ್ರಗಳು ಎಂದರೆ ಒಟಿಟಿ ಸಂಸ್ಥೆಗಳು ನಿರ್ಲಕ್ಷ್ಯ ತೋರಿಸುತ್ತವೆ. ‘ತೀರ್ಥ ರೂಪ ತಂದೆಯವರಿಗೆ’ (Theertharoopa Tandeyavarige) ಚಿತ್ರ ಥಿಯೇಟರ್​​ನಲ್ಲಿ ರಿಲೀಸ್ ಆಗಿ ವಿಮರ್ಶೆಯಲ್ಲಿ ಗೆದ್ದಿದೆ. ಹಾಗಂತ ದೊಡ್ಡ ಮೊತ್ತ ಕೊಟ್ಟು ಚಿತ್ರವನ್ನು ಒಟಿಟಿಯವರು ಖರೀದಿ ಮಾಡಿದರು ಎಂದುಕೊಳ್ಳಬೇಡಿ. ಈ ಚಿತ್ರಕ್ಕೆ ಸಿಗ್ತಿರೋದು ತುಂಬಾನೇ ಸಣ್ಣ ಮೊತ್ತ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ರಿವೀಲ್ ಮಾಡಿದ್ದಾರೆ. ‘ತೀರ್ಥ ರೂಪ…

Read More

ಪಾಕಿಸ್ತಾನದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ..! – Kannada News | PCB set to take a fine of 50 Lakh from each pakistan player

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡದ ಆಟಗಾರರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB)  50 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿರುವ ಹಿನ್ನಲೆ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಿ ಬಿಸಿ ಮುಟ್ಟಿಸಲು ಪಿಸಿಬಿ ಮುಂದಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ತಂಡವು ಈ ಬಾರಿಯ ವಿಶ್ವಕಪ್​ನಲ್ಲಿ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಈ ವೇಳೆ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ…

Read More

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ – Kannada News | Afghanistan Attacks Pakistan’s Nur Khan Airbase, Previously Hit by India

ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು….

Read More

ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ – Kannada News | Bihar Minor Kills 9 Year Old Girl for Complaining About His Drug Fueled Misbehavior

ಪಾಟ್ನಾ, ಮಾರ್ಚ್​ 02: ಮಾದಕದ್ರವ್ಯ ಸೇವಿಸಿ ತನ್ನ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದ ಅಪ್ರಾಪ್ತನ ಬಗ್ಗೆ  ಮನೆಯಲ್ಲಿ ದೂರು ಕೊಟ್ಟಿದ್ದಕ್ಕೆ ಕೋಪಗೊಂಡ ಬಾಲಕ 9 ವರ್ಷದ ಬಾಲಕಿಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಬಿಹಾರದ ಕಟಿಹಾರ್​ನಲ್ಲಿ ನಡೆದಿದೆ. ಕರಣದ ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಆತನನ್ನು ಬಂಧಿಸಲಾಗಿದೆ. ಕೊಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂದಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಒಂದು ದಿನ ಹಿಂದೆ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು…

Read More

ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ – Kannada News | Anant Kumar Hegde Visits Sirsi Marikamba Temple Ahead of Political Second Innings, To Address Hindu Convention on March 8

ಕಾರವಾರ, ಮಾರ್ಚ್​ 2: ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಇದ್ದ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಉತ್ತರ ಕನ್ನಡ ಜಿಲ್ಲೆಯ ಶಕ್ತಿ ದೇವತೆಯಾದ ಶಿರಸಿ ಮಾರಿಕಾಂಬಾ ದೇವಿಯ ಆಶೀರ್ವಾದ ಪಡೆದರು. ಶಿರಸಿಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭ ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಪತ್ನಿಯೊಂದಿಗೆ ದೇವಸ್ಥಾನಕ್ಕೆ…

Read More

ಹುಬ್ಬಳ್ಳಿ ಜನರೇ ಎಚ್ಚರ… ಹೆಸ್ಕಾಂ ಎಂದು ಹೇಳಿಕೊಂಡು ಮನೆಗೆ ಬರ್ತಾರೆ ನಕಲಿ ಬಿಲ್ ಕಲೆಕ್ಟರ್ – Kannada News | Caught! Hubballi’s Fake HESCOM Collector Nabbed by Alert Public

ಹುಬ್ಬಳ್ಳಿ, ಮಾ.2: ಹುಬ್ಬಳ್ಳಿಯ ಆನಂದ ನಗರದಲ್ಲಿ ವಂಚನೆಯ ವಿಭಿನ್ನ ಹಾದಿ ತುಳಿದಿದ್ದ ಖದೀಮನೊಬ್ಬ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಪೊಲೀಸರ ಅತಿಥಿಯಾಗಿದ್ದಾನೆ. ತಾನು ಹೆಸ್ಕಾಂ (HESCOM) ಬಿಲ್ ಕಲೆಕ್ಟರ್ ಎಂದು ಸುಳ್ಳು ಹೇಳಿ ಮನೆಮನೆಗೆ ಹೋಗಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಕಲೆಕ್ಟರ್‌ನನ್ನು ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ಈ ಘಟನೆ ನಡೆದಿದೆ. ಖದೀಮನು ಖಾಕಿ ಸಮವಸ್ತ್ರ ಧರಿಸಿ, ತಾನು ವಿದ್ಯುತ್ ಬಿಲ್ ವಸೂಲಿ ಮಾಡಲು ಬಂದಿರುವುದಾಗಿ ನಂಬಿಸಿದ್ದಾನೆ. ಮನೆ…

Read More