ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ – Kannada News | Afghanistan Attacks Pakistan’s Nur Khan Airbase, Previously Hit by India

ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account

ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು. ಹಲವು ತಿಂಗಳುಗಳ ಬಳಿಕ ಹೇಗೋ ಸುಧಾರಿಸಿಕೊಂಡು ನಿರ್ಮಾಣಕಾರ್ಯ ಪೂರ್ಣಗೊಳಿಸಿತ್ತು.

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಪಾಕಿಸ್ತಾನದಲ್ಲಿರುವ ಹಲವಾರು ಪ್ರಮುಖ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಪಾಕಿಸ್ತಾನದೊಳಗಿನ ಪ್ರಮುಖ ವಾಯುನೆಲೆಗಳು ಮತ್ತು ಮಿಲಿಟರಿ ಸೌಲಭ್ಯಗಳ ಮೇಲೆ ತನ್ನ ಪಡೆಗಳು ಡ್ರೋನ್ ದಾಳಿ ನಡೆಸಿವೆ ಎಂದು ತಾಲಿಬಾನ್ ಹೇಳಿಕೊಂಡಿದೆ.

ರಾವಲ್ಪಿಂಡಿಯಲ್ಲಿರುವ ಪ್ರಮುಖ ಮಿಲಿಟರಿ ವಾಯುನೆಲೆಯಾದ ನೂರ್ ಖಾನ್ ವಾಯುನೆಲೆಯು ದಾಳಿಗೊಳಗಾದ ಪ್ರಮುಖ ಪ್ರದೇಶಗಳಲ್ಲಿ ಒಂದಾಗಿದೆ. ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ 12 ನೇ ಡಿವಿಷನ್ ಪ್ರಧಾನ ಕಚೇರಿ ಮತ್ತು ಖೈಬರ್ ಪಖ್ತುನ್ಖ್ವಾದ ಮೊಹಮ್ಮದ್ ಏಜೆನ್ಸಿಯಲ್ಲಿರುವ ಖ್ವಾಜೈ ಮಿಲಿಟರಿ ಶಿಬಿರದ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ

ಕಾಬೂಲ್, ಬಾಗ್ರಾಮ್ ಮತ್ತು ಇತರ ಸ್ಥಳಗಳ ಮೇಲೆ ಪಾಕಿಸ್ತಾನದ ಮಿಲಿಟರಿ ದಾಳಿಗಳಿಗೆ ಪ್ರತೀಕಾರವಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಫ್ಘಾನಿಸ್ತಾನ ಹೇಳಿದೆ. ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ 415 ಅಫ್ಘಾನ್ ತಾಲಿಬಾನ್ ಸಿಬ್ಬಂದಿಯನ್ನು ಕೊಂದಿದ್ದು 580 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

2,600 ಕಿ.ಮೀ.ಗೂ ಹೆಚ್ಚು ಉದ್ದದ ಗಡಿಯಲ್ಲಿ 53 ಸ್ಥಳಗಳ ಮೇಲೆ ಅಫ್ಘಾನ್ ತಾಲಿಬಾನ್ ದಾಳಿಕೋರರು ದಾಳಿ ನಡೆಸಿದ್ದಾರೆ.ಘಟನೆಗೆ ಪ್ರತಿಯಾಗಿ ಪಾಕಿಸ್ತಾನ ಗುರುವಾರ ರಾತ್ರಿ ‘ಗಜಬ್ ಲಿಲ್ ಹಕ್’ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕಾರ್ಯಾಚರಣೆಯ ಸಮಯದಲ್ಲಿ 185 ಟ್ಯಾಂಕ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಫಿರಂಗಿ ಬಂದೂಕುಗಳು ನಾಶವಾಗಿವೆ ಎಂದುಹೇಳಲಾಗಿದೆ.

ಇದಕ್ಕೂ ಮೊದಲು, ಪಾಕಿಸ್ತಾನದ ಸಂಸದೀಯ ವ್ಯವಹಾರಗಳ ಸಚಿವ ಡಾ. ತಾರಿಕ್ ಫಜಲ್ ಚೌಧರಿ, ಅಫ್ಘಾನ್ ತಾಲಿಬಾನ್ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದರು. ಮಿಲಿಟರಿ ಕಾರ್ಯಾಚರಣೆ ಮುಕ್ತಾಯಗೊಂಡಿದೆ ಎಂದು ಸೂಚಿಸುವ ಸಾಮಾಜಿಕ ಮಾಧ್ಯಮ ವರದಿಗಳನ್ನು ಅವರು ನಿರಾಕರಿಸಿದರು.

ಮತ್ತೊಂದೆಡೆ, ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಅಫ್ಘಾನ್ ಕಡೆಯವರು ಹೇಳಿಕೊಂಡರೂ, ಪಾಕಿಸ್ತಾನಿ ಅಧಿಕಾರಿಗಳು ಈ ಹೇಳಿಕೆಯನ್ನು ತಿರಸ್ಕರಿಸಿದರು.
ತಾಲಿಬಾನ್ ಪ್ರಕಾರ, ಪಾಕಿಸ್ತಾನ ಮತ್ತೆ ಅಫ್ಘಾನ್ ವಾಯುಪ್ರದೇಶವನ್ನು ಉಲ್ಲಂಘಿಸಿದರೆ ಅಥವಾ ಆಕ್ರಮಣಕಾರಿ ಕ್ರಮ ಕೈಗೊಂಡರೆ, ಅದು ಹೆಚ್ಚು ಕಠಿಣ ಮತ್ತು ನಿರ್ಣಾಯಕ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ – Kannada News | Bihar Minor Kills 9 Year Old Girl for Complaining About His Drug Fueled Misbehavior

ಪಾಟ್ನಾ, ಮಾರ್ಚ್​ 02: ಮಾದಕದ್ರವ್ಯ ಸೇವಿಸಿ ತನ್ನ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದ ಅಪ್ರಾಪ್ತನ ಬಗ್ಗೆ  ಮನೆಯಲ್ಲಿ ದೂರು ಕೊಟ್ಟಿದ್ದಕ್ಕೆ ಕೋಪಗೊಂಡ ಬಾಲಕ 9 ವರ್ಷದ ಬಾಲಕಿಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಬಿಹಾರದ ಕಟಿಹಾರ್​ನಲ್ಲಿ ನಡೆದಿದೆ. ಕರಣದ ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಆತನನ್ನು ಬಂಧಿಸಲಾಗಿದೆ.

ಕೊಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂದಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಒಂದು ದಿನ ಹಿಂದೆ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಮರುದಿನ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಆಕೆಯ ಶವ ಹತ್ತಿರದ ಮೆಕ್ಕೆಜೋಳದ ಹೊಲದಿಂದ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಅದೇ ಗ್ರಾಮದ 13 ವರ್ಷದ ಬಾಲಕ ಆರೋಪಿಯಾಗಿದ್ದು, ಬಾಲಕಿ ಹೊಲದ ಕಡೆಗೆ ಹೋಗುತ್ತಿದ್ದಾಗ ಹರಿತವಾದ ಆಯುಧದಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಾಲಕ ಮಾದಕ ವ್ಯಸನಿಯಾಗಿದ್ದ ಮತ್ತು ಆಗಾಗ ಮಾದಕ ದ್ರವ್ಯ ಸೇವಿಸುತ್ತಿದ್ದ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಗ್ರಾಮಸ್ಥರ ಪ್ರಕಾರ, ಬಲಿಪಶು ಇತ್ತೀಚೆಗೆ ತನ್ನ ಪೋಷಕರಲ್ಲಿ ತನ್ನ ಆತನ ವರ್ತನೆಯ ಬಗ್ಗೆ ದೂರು ನೀಡಿದ್ದಳು, ನಂತರ ಕುಟುಂಬ ಸದಸ್ಯರು ಬಾಲಕನ ಬಳಿ ಹೋಗಿ ಗದರಿದ್ದರು ಎಂದು ವರದಿಯಾಗಿದೆ. ಅದಕ್ಕೆ ಕೋಪಗೊಂಡ ಆತ ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದ್ದ.

ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದವು. ಕೆಲವೇ ಗಂಟೆಗಳಲ್ಲಿ ಪ್ರಕರಣವನ್ನು ಬಗೆಹರಿಸಲಾಗಿದೆ ಮತ್ತು ಬಾಲಾಪರಾಧಿಗಳಿಗೆ ಅನ್ವಯಿಸುವ ಕಾನೂನಿನಡಿಯಲ್ಲಿ ಅಪರಾಧ ಎಸಗಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿ ತನ್ನ ಪೋಷಕರಿಗೆ ನೀಡಿದ ದೂರಿನ ಮೇರೆಗೆ ಆರೋಪಿ ಕೋಪದಿಂದ ವರ್ತಿಸಿರಬಹುದು ಎಂದು ಸ್ಥಳೀಯ ನಿವಾಸಿ ಎಂಡಿ ಅಸ್ಲಾಂ ಆರೋಪಿಸಿದ್ದಾರೆ. ಘಟನೆಯನ್ನು ದೃಢಪಡಿಸಿದ ಹಿರಿಯ ಪೊಲೀಸ್ ಅಧಿಕಾರಿ ರಂಜನ್ ಕುಮಾರ್ ಸಿಂಗ್, ಕಾಣೆಯಾದ ಬಾಲಕಿಯನ್ನು ಹರಿತವಾದ ಆಯುಧದಿಂದ ಕೊಲ್ಲಲಾಗಿದೆ ಎಂದು ಹೇಳಿದ್ದಾರೆ.

ಕೊಲೆಗೆ ಬಳಸಲಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಆರೋಪಿ ಅಪ್ರಾಪ್ತನನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಬಾಲಾಪರಾಧಿ ನ್ಯಾಯ ನಿಬಂಧನೆಗಳ ಪ್ರಕಾರ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ – Kannada News | Anant Kumar Hegde Visits Sirsi Marikamba Temple Ahead of Political Second Innings, To Address Hindu Convention on March 8

ಕಾರವಾರ, ಮಾರ್ಚ್​ 2: ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಇದ್ದ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಉತ್ತರ ಕನ್ನಡ ಜಿಲ್ಲೆಯ ಶಕ್ತಿ ದೇವತೆಯಾದ ಶಿರಸಿ ಮಾರಿಕಾಂಬಾ ದೇವಿಯ ಆಶೀರ್ವಾದ ಪಡೆದರು. ಶಿರಸಿಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭ ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಪತ್ನಿಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗಡೆ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಎರಡು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆ ಉತ್ತರ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವಗಳಲ್ಲಿ ಒಂದಾಗಿದೆ.

ಲೋಕಸಭೆ ಟಿಕೆಟ್ ಕೈ ತಪ್ಪಿದ ಬಳಿಕ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದಿದ್ದ ಹೆಗಡೆ, ಇದೀಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮಾರ್ಚ್ 8ರಿಂದ ಅವರು ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲಿರುವುದಾಗಿ ತಿಳಿದುಬಂದಿದ್ದು, ಅದೇ ದಿನ ಭಟ್ಕಳದಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಜನರೇ ಎಚ್ಚರ… ಹೆಸ್ಕಾಂ ಎಂದು ಹೇಳಿಕೊಂಡು ಮನೆಗೆ ಬರ್ತಾರೆ ನಕಲಿ ಬಿಲ್ ಕಲೆಕ್ಟರ್ – Kannada News | Caught! Hubballi’s Fake HESCOM Collector Nabbed by Alert Public

ಹುಬ್ಬಳ್ಳಿ, ಮಾ.2: ಹುಬ್ಬಳ್ಳಿಯ ಆನಂದ ನಗರದಲ್ಲಿ ವಂಚನೆಯ ವಿಭಿನ್ನ ಹಾದಿ ತುಳಿದಿದ್ದ ಖದೀಮನೊಬ್ಬ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಪೊಲೀಸರ ಅತಿಥಿಯಾಗಿದ್ದಾನೆ. ತಾನು ಹೆಸ್ಕಾಂ (HESCOM) ಬಿಲ್ ಕಲೆಕ್ಟರ್ ಎಂದು ಸುಳ್ಳು ಹೇಳಿ ಮನೆಮನೆಗೆ ಹೋಗಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಕಲೆಕ್ಟರ್‌ನನ್ನು ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ಈ ಘಟನೆ ನಡೆದಿದೆ. ಖದೀಮನು ಖಾಕಿ ಸಮವಸ್ತ್ರ ಧರಿಸಿ, ತಾನು ವಿದ್ಯುತ್ ಬಿಲ್ ವಸೂಲಿ ಮಾಡಲು ಬಂದಿರುವುದಾಗಿ ನಂಬಿಸಿದ್ದಾನೆ.

ಮನೆ ಮನೆಗೆ ಹೋಗಿ ಬಿಲ್ ಬಾಕಿ ಇದೆ ಎಂದು ಹೇಳಿ 1,000 ರೂ. ದಿಂದ 2,000 ರೂ. ವರೆಗೆ ಹಣ ವಸೂಲಿ ಮಾಡುತ್ತಿದ್ದ. ಗ್ರಾಹಕರು ರಸೀದಿ ಕೇಳಿದಾಗ “ಈಗ ಸರ್ವರ್ ಡೌನ್ ಇದೆ, ನಾಳೆ ತಂದು ಕೊಡುತ್ತೇನೆ” ಎಂದು ನಂಬಿಸಿ ಹಣದೊಂದಿಗೆ ಪರಾರಿಯಾಗುತ್ತಿದ್ದ. ಹಲವು ಮನೆಗಳಲ್ಲಿ ಹಣ ಪಡೆದ ಬಳಿಕವೂ ರಸೀದಿ ನೀಡದಿದ್ದಾಗ ಅನುಮಾನಗೊಂಡ ಸ್ಥಳೀಯರು ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಹೆಸ್ಕಾಂ ಸಿಬ್ಬಂದಿ ಅಲ್ಲ ಎಂಬುದು ಬಹಿರಂಗವಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಮುಳ್ಳುಹಂದಿಯ ಡೆಡ್ಲಿ ಅಟ್ಯಾಕ್​ಗೆ ಚಿರತೆ ಸಾವು!

ವಿಡಿಯೋ ಇಲ್ಲಿದೆ ನೋಡಿ:

ತಕ್ಷಣವೇ ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹಳೆ ಹುಬ್ಬಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹೆಸ್ಕಾಂ ಸಿಬ್ಬಂದಿ ಮನೆಗೆ ಬಂದಾಗ ಕಡ್ಡಾಯವಾಗಿ ಅಧಿಕೃತ ಗುರುತಿನ ಚೀಟಿ (ID Card) ಕೇಳಿ. ಹಣ ಪಾವತಿಸಿದ ತಕ್ಷಣ ಡಿಜಿಟಲ್ ಅಥವಾ ಭೌತಿಕ ರಸೀದಿ ಪಡೆಯಿರಿ. ಯಾವುದೇ ಅನುಮಾನವಿದ್ದರೆ ತಕ್ಷಣ ಸ್ಥಳೀಯ ಹೆಸ್ಕಾಂ ಕಚೇರಿ ಸಂಪರ್ಕಿಸಿ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | IND vs WI: Sanju Samson credits Virat Kohli and Rohit Sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು.

ಸಂಜು ಸ್ಯಾಮ್ಸನ್ ಅವರ ಅಜೇಯ ಇನಿಂಗ್ಸ್​​ನೊಂದಿಗೆ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್ ಬಾರಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿತು. ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಯಾಮ್ಸನ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.

ಈ ಪಂದ್ಯದ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್, ನಾನು ಆಟವಾಡಲು ಪ್ರಾರಂಭಿಸಿದ ದಿನದಿಂದ, ದೇಶಕ್ಕಾಗಿ ಆಡಲು ಕನಸು ಕಾಣಲು ಪ್ರಾರಂಭಿಸಿದ ದಿನದಿಂದ, ನಾನು ಕಾಯುತ್ತಿದ್ದ ದಿನ ಇದು ಎಂದು ನಾನು ಭಾವಿಸುತ್ತೇನೆ . ಇಂತಹದೊಂದು ಇನಿಂಗ್ಸ್ ಆಡುವುದು ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ.

ನಾನು ಯಾವಾಗಲೂ ಬಹಳಷ್ಟು ಏರಿಳಿತಗಳನ್ನು ಹೊಂದಿರುವ ವಿಶೇಷ ಪ್ರಯಾಣವನ್ನು ಹೊಂದಿದ್ದೇನೆ. ಆದರೆ ನಾನು ನನ್ನನ್ನು ಅನುಮಾನಿಸುತ್ತಲೇ ಇದ್ದೆ, ಯೋಚಿಸುತ್ತಲೇ ಇದ್ದೆ, ನಾನು ಅಂತಹದೊಂದು ಇನಿಂಗ್ಸ್ ಆಡಬಹುದೇ? ಇದಾಗ್ಯೂ ನಾನು ನನ್ನ ಮೇಲೆ ನಂಬಿಕೆಯಿಟ್ಟಿದ್ದೆ. ಇದೀಗ ಎಲ್ಲವೂ ನಿಜಯವಾಗಿದೆ. ಅಂತಹದೊಂದು ಇನಿಂಗ್ಸ್ ಆಡಲು  ಆಶೀರ್ವದಿಸಿದ್ದಕ್ಕಾಗಿ ಸರ್ವಶಕ್ತ ಭಗವಂತನಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಇದೇ ವೇಳೆ ಬ್ಯಾಟಿಂಗ್‌ನಲ್ಲಿನ ನಿಮ್ಮ ಪಾತ್ರದ ಸ್ಪಷ್ಟತೆಯ ಬಗ್ಗೆ ಕೇಳಿದಾಗ, ನಾನು ಬಹಳ ಸಮಯದಿಂದ ಈ ಸ್ವರೂಪವನ್ನು ಆಡುತ್ತಿದ್ದೇನೆ. ಸುಮಾರು 10 ರಿಂದ 12 ವರ್ಷಗಳಿಂದ ಐಪಿಎಲ್ ಆಡುತ್ತಿದ್ದೇನೆ ಮತ್ತು ಕಳೆದ 10 ವರ್ಷಗಳಿಂದ ದೇಶಕ್ಕಾಗಿ ಆಡುತ್ತಿದ್ದೇನೆ.

ನಾನು ತಂಡದಲ್ಲಿದ್ದರೂ ಆಡುವ ಅವಕಾಶ ಸಿಗದಿದ್ದಾಗ, ಬೆಂಚ್ ಮೇಲೆ ಕುಳಿತು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಪಂದ್ಯವನ್ನು ಹೇಗೆ ಮುಗಿಸುತ್ತಾರೆ ಎಂಬುದನ್ನು ಗಮನಿಸುತ್ತಿದ್ದೆ.

ನಾನು ಸುಮಾರು 50-60 ಪಂದ್ಯಗಳನ್ನು ಆಡಿದ್ದರೂ, ಹೊರಗಿನಿಂದ ಸುಮಾರು 100 ಪಂದ್ಯಗಳನ್ನು ವೀಕ್ಷಿಸಿರುವುದು ನನಗೆ ಹೆಚ್ಚಿನ ಪಕ್ವತೆಯನ್ನು ನೀಡಿದೆ.

ಬೃಹತ್ ಗುರಿ ಬೆನ್ನಟ್ಟುವಾಗ ತಾಳ್ಮೆಯಿಂದ ಇರುವುದು ಮತ್ತು ಪ್ರತಿ ಎಸೆತವನ್ನು ಹೇಗೆ ಎದುರಿಸಬೇಕು ಎಂಬುದನ್ನು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರಿಂದ ಕಲಿತಿದ್ದೇನೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಟಕ್ಕೆ ಅನುಗುಣವಾಗಿ ತಮ್ಮ ಆಟವನ್ನು ಹೇಗೆ ಬದಲಾಯಿಸುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ಹಾಗಾಗಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತ ಚೇಸ್ ಮಾಡುವಾಗ ನಾನು ಸಹ ಅದೇ ತಂತ್ರವನ್ನು ಪಾಲಿಸಿದ್ದೇನೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಇದನ್ನೂ ಓದಿ: Sanju Samson: ಶತಕ ಮಿಸ್… ವಿರಾಟ್ ಕೊಹ್ಲಿ ದಾಖಲೆ ಉಡೀಸ್

ಈ ಮೂಲಕ ತನ್ನ ಭರ್ಜರಿ ಬ್ಯಾಟಿಂಗ್​ನ ಶ್ರೇಯಸ್ಸಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ಕಾರಣ ಎಂದು ಸಂಜು ಸ್ಯಾಮ್ಸನ್ ಪರೋಕ್ಷವಾಗಿ ಹೇಳಿದ್ದಾರೆ.

Published On – 9:21 am, Mon, 2 March 26

Source link

ಬೆಂಚ್​ನಲ್ಲಿ ಕೂತು ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾರನ್ನು ನೋಡಿದ್ದೇನೆ..! – Kannada News | Ind vs wi sanju samson credits virat kohli and rohit sharma

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಬರೋಬ್ಬರಿ 195 ರನ್​ ಕಲೆಹಾಕಿದ್ದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 97 ರನ್ ಬಾರಿಸಿದ್ದರು.

ಸಂಜು ಸ್ಯಾಮ್ಸನ್ ಅವರ ಅಜೇಯ ಇನಿಂಗ್ಸ್​​ನೊಂದಿಗೆ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್ ಬಾರಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿತು. ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಯಾಮ್ಸನ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.

ಈ ಪಂದ್ಯದ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್, ನಾನು ಆಟವಾಡಲು ಪ್ರಾರಂಭಿಸಿದ ದಿನದಿಂದ, ದೇಶಕ್ಕಾಗಿ ಆಡಲು ಕನಸು ಕಾಣಲು ಪ್ರಾರಂಭಿಸಿದ ದಿನದಿಂದ, ನಾನು ಕಾಯುತ್ತಿದ್ದ ದಿನ ಇದು ಎಂದು ನಾನು ಭಾವಿಸುತ್ತೇನೆ . ಇಂತಹದೊಂದು ಇನಿಂಗ್ಸ್ ಆಡುವುದು ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ.

ನಾನು ಯಾವಾಗಲೂ ಬಹಳಷ್ಟು ಏರಿಳಿತಗಳನ್ನು ಹೊಂದಿರುವ ವಿಶೇಷ ಪ್ರಯಾಣವನ್ನು ಹೊಂದಿದ್ದೇನೆ. ಆದರೆ ನಾನು ನನ್ನನ್ನು ಅನುಮಾನಿಸುತ್ತಲೇ ಇದ್ದೆ, ಯೋಚಿಸುತ್ತಲೇ ಇದ್ದೆ, ನಾನು ಅಂತಹದೊಂದು ಇನಿಂಗ್ಸ್ ಆಡಬಹುದೇ? ಇದಾಗ್ಯೂ ನಾನು ನನ್ನ ಮೇಲೆ ನಂಬಿಕೆಯಿಟ್ಟಿದ್ದೆ. ಇದೀಗ ಎಲ್ಲವೂ ನಿಜಯವಾಗಿದೆ. ಅಂತಹದೊಂದು ಇನಿಂಗ್ಸ್ ಆಡಲು  ಆಶೀರ್ವದಿಸಿದ್ದಕ್ಕಾಗಿ ಸರ್ವಶಕ್ತ ಭಗವಂತನಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಇದೇ ವೇಳೆ ಬ್ಯಾಟಿಂಗ್‌ನಲ್ಲಿನ ನಿಮ್ಮ ಪಾತ್ರದ ಸ್ಪಷ್ಟತೆಯ ಬಗ್ಗೆ ಕೇಳಿದಾಗ, ನಾನು ಬಹಳ ಸಮಯದಿಂದ ಈ ಸ್ವರೂಪವನ್ನು ಆಡುತ್ತಿದ್ದೇನೆ. ಸುಮಾರು 10 ರಿಂದ 12 ವರ್ಷಗಳಿಂದ ಐಪಿಎಲ್ ಆಡುತ್ತಿದ್ದೇನೆ ಮತ್ತು ಕಳೆದ 10 ವರ್ಷಗಳಿಂದ ದೇಶಕ್ಕಾಗಿ ಆಡುತ್ತಿದ್ದೇನೆ.

ನಾನು ತಂಡದಲ್ಲಿದ್ದರೂ ಆಡುವ ಅವಕಾಶ ಸಿಗದಿದ್ದಾಗ, ಬೆಂಚ್ ಮೇಲೆ ಕುಳಿತು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಪಂದ್ಯವನ್ನು ಹೇಗೆ ಮುಗಿಸುತ್ತಾರೆ ಎಂಬುದನ್ನು ಗಮನಿಸುತ್ತಿದ್ದೆ.

ನಾನು ಸುಮಾರು 50-60 ಪಂದ್ಯಗಳನ್ನು ಆಡಿದ್ದರೂ, ಹೊರಗಿನಿಂದ ಸುಮಾರು 100 ಪಂದ್ಯಗಳನ್ನು ವೀಕ್ಷಿಸಿರುವುದು ನನಗೆ ಹೆಚ್ಚಿನ ಪಕ್ವತೆಯನ್ನು ನೀಡಿದೆ.

ಬೃಹತ್ ಗುರಿ ಬೆನ್ನಟ್ಟುವಾಗ ತಾಳ್ಮೆಯಿಂದ ಇರುವುದು ಮತ್ತು ಪ್ರತಿ ಎಸೆತವನ್ನು ಹೇಗೆ ಎದುರಿಸಬೇಕು ಎಂಬುದನ್ನು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರಿಂದ ಕಲಿತಿದ್ದೇನೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಟಕ್ಕೆ ಅನುಗುಣವಾಗಿ ತಮ್ಮ ಆಟವನ್ನು ಹೇಗೆ ಬದಲಾಯಿಸುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ಹಾಗಾಗಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತ ಚೇಸ್ ಮಾಡುವಾಗ ನಾನು ಸಹ ಅದೇ ತಂತ್ರವನ್ನು ಪಾಲಿಸಿದ್ದೇನೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಇದನ್ನೂ ಓದಿ: Sanju Samson: ಶತಕ ಮಿಸ್… ವಿರಾಟ್ ಕೊಹ್ಲಿ ದಾಖಲೆ ಉಡೀಸ್

ಈ ಮೂಲಕ ತನ್ನ ಭರ್ಜರಿ ಬ್ಯಾಟಿಂಗ್​ನ ಶ್ರೇಯಸ್ಸಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ಕಾರಣ ಎಂದು ಸಂಜು ಸ್ಯಾಮ್ಸನ್ ಪರೋಕ್ಷವಾಗಿ ಹೇಳಿದ್ದಾರೆ.

Source link

ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ – Kannada News | Davangere Wrestling: Iran’s Mirza, India’s Raviraj Draw at Duggamma Fair

ದಾವಣಗೆರೆ, ಮಾ.2: ಇಲ್ಲಿನ ದೇವತೆ ದುಗ್ಗಮ್ಮನ ಜಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದರೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಬೆವರಳಿಸಿದ ಮಿರ್ಜಾ, ಭಾರತೀಯರ ಪ್ರೀತಿ ಮತ್ತು ಕ್ರೀಡಾಭಿಮಾನವನ್ನು ಹಾಡಿ ಹೊಗಳಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯವು ಭಾರೀ ಕುತೂಹಲ ಮೂಡಿಸಿತ್ತು. ಮಹಾರಾಷ್ಟ್ರದ ಪುಣೆಯ ಖ್ಯಾತ ಕುಸ್ತಿಪಟು ರವಿರಾಜ್ ಹಾಗೂ ಇರಾನ್‌ನ ಮಿರ್ಜಾ ನಡುವೆ ನಡೆದ ಈ ಕಾಳಗದಲ್ಲಿ ಇಬ್ಬರೂ ಸಮಬಲದ ಪೈಪೋಟಿ ನೀಡಿದರು. ರಂಭದಿಂದಲೇ ಇಬ್ಬರೂ ಪಟುಗಳು ದಾಳಿ ಮತ್ತು ಪ್ರತಿದಾಳಿಗಳ ಮೂಲಕ ವಿರಾರು ಪ್ರೇಕ್ಷಕರನ್ನು ರಂಜಿಸಿದರು. ಅಂತಿಮವಾಗಿ ಪಂದ್ಯವು ಸಮಬಲದಲ್ಲಿ ಅಂತ್ಯಗೊಂಡಿತು. ಸ್ಪಷ್ಟ ಜಯಶಾಲಿ ಯಾರು ಎಂಬುದು ನಿರ್ಧಾರವಾಗದಿದ್ದರೂ, ಇಬ್ಬರ ಹೋರಾಟಕ್ಕೆ ಅಭಿಮಾನಿಗಳು ಮನಸೋತು ಚಪ್ಪಾಳೆ ತಟ್ಟಿದರು. “ನನ್ನ ದೇಶದಲ್ಲಿ ಪರಿಸ್ಥಿತಿ ಸರಿಯಿಲ್ಲದಿದ್ದರೂ, ಇಲ್ಲಿನ ಜನರ ಪ್ರೀತಿ ನನಗೆ ಧೈರ್ಯ ನೀಡಿದೆ. ಹಿಂದುಸ್ತಾನದ ಕ್ರೀಡಾಭಿಮಾನ ಮತ್ತು ಇಲ್ಲಿನ ಮಣ್ಣಿನ ಸಂಸ್ಕೃತಿ ಅದ್ಭುತ” ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್ – Kannada News | The Kerala Story 2: Box Office Rises Amid Love Jihad Controversy and Court Battle

‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದವು. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಚಿತ್ರದ ರಿಲೀಸ್​​ಗೆ ಕೋರ್ಟ್ ತಡೆನೀಡಿತ್ತು. ಆ ಬಳಿಕ ತೆರವನ್ನು ತೆಗೆಯಲಾಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 75 ಲಕ್ಷ ರೂಪಾಯಿ ಮಾತ್ರ. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಧೂಳೆಬ್ಬಿಸಿದೆ.

‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಓಝಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನ ಮಾಡಿದ್ದಾರೆ.ಈ ಚಿತ್ರದ ರಿಲೀಸ್​ಗೆ ಕೇರಳ ಹೈಕೋರ್ಟ್ ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿತ್ತು. ಶುಕ್ರವಾರ ಸಿನಿಮಾ ತೆರೆಗೆ ಬಂದಿದೆ.

ಮೊದಲ ದಿನ ಈ ಚಿತ್ರ 75 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 4.65 ಕೋಟಿ ರೂಪಾಯಿ ಹಾಗೂ 5 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ ಅಲ್ಲಿ ಏರಿಕೆ ಕಂಡಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಲವ್ ಜಿಹಾದ್ ಕುರಿತ ಕಥೆಯನ್ನು ಹೇಳಲಾಗುತ್ತಿದೆ. ಈ ಕಾರಣದಿಂದ ಸಿನಿಮಾ ವಿವಾದ ಸೃಷ್ಟಿಸಿದೆ.

ಇದನ್ನೂ ಓದಿ: ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್

ಈ ಮೊದಲು ರಿಲೀಸ್ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ, ಹಿಂದೂ ಯುವತಿಯರನ್ನು ಯಾವ ರೀತಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಿ, ಅವರನ್ನು ಐಸಿಸ್​​ಗೆ ಸೇರ್ಪಡೆ ಮಾಡುತ್ತಾರೆ ಎಂಬುದನ್ನು ತೋರಿಸಲಾಗಿತ್ತು. ಈ ಚಿತ್ರಕ್ಕೆ ಪಶ್​ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳು ಬ್ಯಾನ್ ಹೇರುವ ಪ್ರಯತ್ನ ಮಾಡಿ ವಿಫಲರಾಗಿದ್ದವು. ಈಗ ವಿಪುಲ್ ಅಮೃತ್​ಲಾಲ್ ಶಾ ನಿರ್ಮಾಣದ ಸಿನಿಮಾ ವಿವಾದ ಸೃಷ್ಟಿಸುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ – Kannada News | BMTC Bus Breaks Down on Railway Track Near Anekal, Major Accident Averted After Traffic Chaos

ಆನೇಕಲ್, ಮಾರ್ಚ್​ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್​​​ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಕೌಟ್​ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ

Source link

Exit mobile version