ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ (JR NTR) ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿಗೆ ಆಗಮಿಸಿದ್ದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಅವರು ಇಲ್ಲಿಗೆ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಅಭಿಮಾನಿಗಳು ಇದಕ್ಕೆ ಅವಕಾಶ ಕೊಡಲಿಲ್ಲ. ಒಂದೇ ಸಮನೆ ಕೂಗುತ್ತಿದ್ದರು. ಆಗ ಜೂನಿಯರ್ ಎನ್ಟಿಆರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ಜೂನಿಯರ್ ಎನ್ಟಿಆರ್ ಕಿಮ್ಸ್ ಘಟಕ ಉದ್ಘಾಟನೆಗೆ ಬರಲು ಒಂದು ಕಾರಣವೂ ಇತ್ತು. 1983ರಲ್ಲಿ ಜೂ ಎನ್ಟಿಆರ್ ಅವರ ತಾತ ಎನ್ಟಿಆರ್ ಅವರೇ ಕಿಮ್ಸ್ಗೆ ಅಡಿಗಲ್ಲು ಹಾಕಿದ್ದರು. 2009ರಲ್ಲಿ ಜೂ ಎನ್ಟಿಆರ್ ಭಾರಿ ರಸ್ತೆ ಅಪಘಾತಕ್ಕೆ ಒಳಾಗಾದಾಗ ಅವರು ಕಿಮ್ಸ್ನಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಇದೇ ಕಾರಣಕ್ಕೆ ಇಂದು ಕಿಮ್ಸ್ನ ಹೊಸ ಘಟಕದ ಉದ್ಘಾಟನೆಗೆ ಅವರು ಆಗಮಿಸಿದ್ದರು. ಅವರನ್ನು ಅಭಿಮಾನಿಗಳು ಖುಷಿಯಿಂದ ಸ್ವಾಗತಿಸಿದರು. ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು.
ಮಾರ್ಚ್ 8 ಮಹಿಳಾ ದಿನಾಚರಣೆ ಆಗಿತ್ತು. ಹೀಗಾಗಿ ಆ ಬಗ್ಗೆ ಅವರು ಮಾತನಾಡಿದರು. ‘ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂದು ಪದೇ ಪದೇ ಹೇಳುವುದು ತನಗೆ ಇಷ್ಟವಿಲ್ಲ. ಪ್ರತಿಯೊಬ್ಬ ಪುರುಷನೂ ಆ ಸಂಸ್ಕೃತಿಯೊಂದಿಗೆ ಹುಟ್ಟಬೇಕು’ ಎಂದರು. ಅಲ್ಲದೆ, ತಮ್ಮ ಮಕ್ಕಳಿಗೂ ಮಹಿಳೆಯರನ್ನು ಗೌರವಿಸುವುದನ್ನು ಹೇಳಿಕೊಡೋದಾಗಿ ಹೇಳಿದರು. ಸಿನಿಮಾ ಮಾತ್ರವಲ್ಲದೆ ಹೊರಗೆಯೂ ತುಂಬಾ ಸಾಧಾರಣವಾಗಿ ವರ್ತಿಸುವ ಎನ್ಟಿಆರ್, ಮಹಿಳೆಯರ ಸುರಕ್ಷತೆ ಮತ್ತು ಗೌರವದ ಬಗ್ಗೆ ತುಂಬಾ ಚೆನ್ನಾಗಿ ಮಾತನಾಡಿದ್ದಕ್ಕಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರು ತಮ್ಮ ಅಭಿಮಾನಿಗಳ ಬಗ್ಗೆಯೂ ಮಾತನಾಡಿದರು ಮತ್ತು ಮನೆಗೆ ಎಚ್ಚರಿಕೆಯಿಂದ ಹೋಗುವಂತೆ ಸಲಹೆ ನೀಡಿದರು.
ಜೂನಿಯರ್ ಎನ್ಟಿಆರ್ ಅವರು ಮಾತು ಆರಂಭಿಸುವಾಗ ಫ್ಯಾನ್ಸ್ ಅವರ ಹೆಸರನ್ನು ಕೂಗಿದರು.. ಆಗ ಫ್ಯಾನ್ಸ್ ಜೂನಿಯರ್ ಎನ್ಟಿಆರ್ ಅವರಿಗೆ ಮಾತನಾಡಲು ಅವಕಾಶ ನೀಡಿಲ್ಲ. ಸುಮ್ಮನಿರಿ, ಸುಮ್ಮನಿರಿ ಎಂದು ಖಡಕ್ ಎಚ್ಚರಿಕೆ ನೀಡಿದ ಬಳಿಕ ಫ್ಯಾನ್ಸ್ ಸುಮ್ಮನಾದರು.
ಬೆಂಗಳೂರು, ಮಾರ್ಚ್ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.
ಎಲ್ಲೆಲ್ಲಿ ಒಣ ಹವೆ?
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಮಾರ್ಚ್ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ
ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.
T20 World Cup 2026: ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ (Team India) ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ಬಾರಿ ಮೂರು ದಾಖಲೆಗಳನ್ನು ಬರೆಯುವ ಮೂಲಕ ಎಂಬುದೇ ವಿಶೇಷ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್ಗಳು.
256 ರನ್ಗಳ ಕಠಿಣ ಗುರಿ ಪಡೆದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಭರ್ಜರಿ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಆ ದಾಖಲೆಗಳಾವುವು ಎಂದು ನೋಡುವುದಾದರೆ….
3 ವಿಶ್ವಕಪ್ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.
3 ವಿಶ್ವಕಪ್ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.
3 ವಿಶ್ವಕಪ್ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.
ಬೆಂಗಳೂರು, ಮಾರ್ಚ್ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶುಭಕಾರ್ಯಗಳಲ್ಲಿ ಪುರುಷರು ಅಂಗವಸ್ತ್ರ ಧರಿಸುವುದರ ಮಹತ್ವವು ಅನಾದಿಕಾಲದಿಂದಲೂ ಆಚರಣೆಯಲ್ಲಿರುವ ಸಂಪ್ರದಾಯವಾಗಿದೆ. ಪೂಜೆ, ಹೋಮ, ಹವನ, ವಿವಾಹ ಹಾಗೂ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರವನ್ನು ಧರಿಸುತ್ತಾರೆ. ಈ ವಸ್ತ್ರವು ಕೇಸರಿ ಅಥವಾ ಬಿಳಿ ಬಣ್ಣದ್ದಾಗಿರಬಹುದು. ಅಂಗವಸ್ತ್ರ ಧರಿಸುವುದು ಕೇವಲ ಸಂಪ್ರದಾಯವಲ್ಲ, ಬದಲಿಗೆ ಸಂಕಲ್ಪ, ವ್ರತ ಹಾಗೂ ಗುರಿಯ ಸಂಕೇತವಾಗಿದೆ.
ಇದು ಸೂರ್ಯ ಮತ್ತು ಚಂದ್ರರ ಶಕ್ತಿಯನ್ನು ಜಾಗೃತಗೊಳಿಸಲು ಸಹಾಯ ಮಾಡುತ್ತದೆ. ಕಾರ್ಯಕ್ರಮಗಳಲ್ಲಿ ಅಂಗವಸ್ತ್ರ ಧರಿಸಿ ಕುಳಿತಾಗ ಏಕಾಗ್ರತೆ ಹೆಚ್ಚುತ್ತದೆ, ಶಿಸ್ತು ಮೂಡುತ್ತದೆ, ಮನಸ್ಸು ನಿರ್ಮಲವಾಗಿ ಚಂಚಲತೆ ಕಡಿಮೆಯಾಗುತ್ತದೆ. ದೇವಸ್ಥಾನಗಳಲ್ಲಿ ಅಥವಾ ಮನೆಯಲ್ಲಿ ದೇವರ ಮುಂದೆ ಕುಳಿತಾಗ ಸಾತ್ವಿಕ ಗುಣಗಳು ವೃದ್ಧಿಯಾಗುತ್ತವೆ. ಪೂಜಾ ಸಮಯದಲ್ಲಿ ಸಕಾರಾತ್ಮಕ ಶಕ್ತಿಗಳು ಶರೀರದಲ್ಲಿ ಸೇರಿ ಪೂಜೆಯ ಫಲವನ್ನು ಉತ್ತಮಗೊಳಿಸುತ್ತವೆ. ಬಿಳಿಯ ವಸ್ತ್ರ ಚಂದ್ರನ ಸಂಕೇತವಾದರೆ, ಕೇಸರಿ ವಸ್ತ್ರ ಕುಜನ ಸಂಕೇತವಾಗಿದೆ. ಸಾಮಾನ್ಯವಾಗಿ ಬಿಳಿಯ ವಸ್ತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಅಂಗವಸ್ತ್ರವು ಏಕಾಗ್ರತೆ, ಶಕ್ತಿ ಹಾಗೂ ಭಕ್ತಿಯನ್ನು ತರುತ್ತದೆ ಎಂದು ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 9, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ, ವಿಶಾಖ ನಕ್ಷತ್ರ, ವ್ಯಾಗತ ಯೋಗ ಮತ್ತು ಗಜ ಕರಣ ಇರತಕ್ಕಂತಹ ಈ ದಿನದ ರಾಹುಕಾಲ ಬೆಳಗಿನ 7 ಗಂಟೆ 59 ನಿಮಿಷದಿಂದ 9 ಗಂಟೆ 29 ನಿಮಿಷದವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭ ಕಾಲವು ಮಧ್ಯಾಹ್ನ 3 ಗಂಟೆ 30 ನಿಮಿಷದಿಂದ 4 ಗಂಟೆ 59 ನಿಮಿಷದ ತನಕ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚರಿಸಲಿದ್ದಾನೆ ಎಂದು ಗುರೂಜಿ ಹೇಳಿದ್ದಾರೆ.
ಇಂದು ಸೋಮವಾರ ಶಿವನ ಕೃಪೆಗೆ ಪಾತ್ರರಾಗುವ ದಿನವಾಗಿದೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನ ರಾಶಿಯವರೆಗಿನ ಎಲ್ಲ ರಾಶಿಗಳ ಆರ್ಥಿಕ ಸ್ಥಿತಿ, ವೈವಾಹಿಕ ಜೀವನ, ವೃತ್ತಿ ಅವಕಾಶಗಳು, ಆರೋಗ್ಯ, ಕುಟುಂಬ ಸಂಬಂಧಗಳು, ಅದೃಷ್ಟ ಬಣ್ಣ, ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ
ಪಾಟ್ನಾ, ಮಾರ್ಚ್ 8: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ, 50 ವರ್ಷದ ನಿಶಾಂತ್ ಕುಮಾರ್ (Nishant Kumar) ರಾಜಕೀಯ ಪ್ರಯಾಣ ಆರಂಭಿಸಿದ್ದಾರೆ. ಇಂದು ಭಾನುವಾರ ಜೆಡಿಯು ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನಿತೀಶ್ ಕುಮಾರ್ ಅವರು ದಶಕಗಳ ನಂತರ ರಾಜ್ಯ ರಾಜಕಾರಣ ತೊರೆದು ರಾಜ್ಯಸಭೆಗೆ ಹೋಗಲು ಅಣಿಯಾಗಿರುವ ಹೊತ್ತಲ್ಲಿ ಅವರ ಪುತ್ರನ ರಾಜಕೀಯ ಪ್ರವೇಶವಾಗಿದೆ.
‘ಸಕ್ರಿಯ ಸದಸ್ಯನಾಗಿ ಪಕ್ಷವನ್ನು ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ. ನನ್ನ ತಂದೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ಅದನ್ನು ಗೌರವಿಸುತ್ತೇನೆ. ಅವರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ. ಪಕ್ಷ ಹಾಗೂ ಜನರ ವಿಶ್ವಾಸ ಉಳಿಸಿಕೊಳ್ಳಲು ಮತ್ತು ಸಂಘಟನೆಯನ್ನು ಬಲಪಡಿಸಲು ಯತ್ನಿಸುತ್ತೇನೆ’ ಎಂದು 50 ವರ್ಷದ ನಿಶಾಂತ್ ಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಂತೆ ನಿತೀಶ್ ಕುಮಾರ್ ಪುತ್ರನೂ ಕೂಡ ಚುನಾವಣಾ ರಾಜಕೀಯದಿಂದ ದೂರವೇ ಇದ್ದವರು. ಸಿದ್ದರಾಮಯ್ಯರಂತೆ ನಿತೀಶ್ ಕುಮಾರ್ ಕೂಡ ವಂಶ ಪಾರಂಪರ್ಯ ರಾಜಕೀಯವನ್ನು ಕಟುವಾಗಿ ವಿರೋಧಿಸುತ್ತಾ ಬಂದವರು. ಆದರೆ, ತಮ್ಮ ರಾಜಕೀಯ ಕೊನೆಯ ದಿನಗಳಲ್ಲಿ ಅವರ ಮಕ್ಕಳು ರಾಜಕೀಯ ಪ್ರವೇಶ ಮಾಡಿದ್ದಾರೆ.
ಡಿಸಿಎಂ ಆಗುತ್ತಾರಾ ನಿಶಾಂತ್?
ಎಂಜಿನಿಯರಿಂಗ್ ಓದಿರುವ ನಿಶಾಂತ್ ಕುಮಾರ್ ಅವರು ನೇರ ರಾಜಕಾರಣಕ್ಕೆ ಹೊಸಬರಾದರೂ ಅಪ್ಪನ ರಾಜಕೀಯ ಮಾರ್ಗದರ್ಶನ ಇದ್ದೇ ಇರುತ್ತದೆ. ಸುದ್ದಿಗಳ ಪ್ರಕಾರ ನಿಶಾಂತ್ ಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಲಾಗಬಹುದು. ಬಿಜೆಪಿ-ಜೆಡಿಯು ಮೈತ್ರಿಕೂಟದ ಈ ಸರ್ಕಾರದಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿ ಆಗಬಹುದು ಎನ್ನಲಾಗಿದೆ. ಇದೇನಾದರೂ ನಿಜವಾದಲ್ಲಿ ಬಿಹಾರದಲ್ಲಿ ಬಿಜೆಪಿ ಪ್ರಪ್ರಥಮ ಬಾರಿಗೆ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿದಂತಾಗುತ್ತದೆ.
ನಿತೀಶ್ ಕುಮಾರ್ ಎರಡು ದಶಕಗಳ ಕಾಲ ಬಿಹಾರ ಮುಖ್ಯಮಂತ್ರಿಯಾಗಿದ್ದಾರೆ. ಬಿಹಾರದ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಸಂಸತ್ನಲ್ಲಿ ಲೋಕಸಭಾ ಸದಸ್ಯರಾಗಿದ್ದಾರೆ. ರಾಜ್ಯಸಭೆಯೊಂದು ಮಾತ್ರವೇ ಬಾಕಿ ಇದೆ. ಈಗ ಆ ಮನೆಯ ಸದಸ್ಯನಾಗಹೊರಟಿದ್ದಾರೆ. ಈ ರೀತಿ ನಾಲ್ಕು ಮನೆಗಳ ಸದಸ್ಯರಾದ ಕೆಲವೇ ಬಿಹಾರೀ ರಾಜಕಾರಣಗಳ ಸಾಲಿಗೆ ನಿತೀಶ್ ನಿಲ್ಲಲಿದ್ದಾರೆ. ಆರ್ಜೆಡಿಯ ಲಾಲೂ ಪ್ರಸಾದ್ ಯಾದವ್ ಮತ್ತು ಬಿಜೆಪಿಯ ಸುಶೀಲ್ ಮೋದಿ ಅವರು ಈ ದಾಖಲೆ ಹೊಂದಿದ್ದಾರೆ.
ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ, ಕಣ್ಣೂರು ಮತ್ತು ವಯನಾಡ್ನಂತಹ ಜಿಲ್ಲೆಗಳಿಂದಲೂ ನೂರಾರು ಯುವಕರು ಮತ್ತು ಮಕ್ಕಳು ಆಗಮಿಸಿದ್ದರು.ಬೆಳಿಗ್ಗೆ 10 ಗಂಟೆಗೆ ಮಳಿಗೆ ತೆರೆಯುವುದಾಗಿ ಹೇಳಿದ್ದರೂ, ಜನರು ಬೆಳಗಿನ ಜಾವ 2:00 ಅಥವಾ 3:00 ಗಂಟೆಯಿಂದಲೇ ಸಾಲುಗಟ್ಟಿ ನಿಂತಿದ್ದರು. ಮಳಿಗೆಯ ಮುಂದೆ ಸೇರಿದ ಸಾವಿರಾರು ಜನರಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಮಳಿಗೆ ತೆರೆಯುತ್ತಿದ್ದಂತೆ ಜನರು ಒಳ ನಗ್ಗಲು ಪ್ರಯತ್ನಿಸಿದರು, ಇದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಘಟನೆಯಲ್ಲಿ ಕೆಲವು ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
2026ರ ಪರಾಭವ ನಾಮ ಸಂವತ್ಸರದ ಯುಗಾದಿಯ ಕನ್ಯಾ ರಾಶಿ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿವರಿಸಿದ್ದಾರೆ. ಉತ್ತರಾ, ಹಸ್ತಾ, ಚಿತ್ತಾ ನಕ್ಷತ್ರದವರಿಗೆ ಈ ಭವಿಷ್ಯ ಅನ್ವಯಿಸುತ್ತದೆ. ಈ ವರ್ಷ ಕನ್ಯಾ ರಾಶಿಯವರಿಗೆ ಮಿಶ್ರಫಲಗಳು ಇರಲಿವೆ. ಆದಾಯ 8 ಇದ್ದರೆ, ವ್ಯಯ 9 ಇರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. ಸುಖ-ದುಃಖಗಳು ಸಮ ಪ್ರಮಾಣದಲ್ಲಿರುತ್ತವೆ.
ಗುರು ಗ್ರಹದ ಸಂಚಾರ ಮತ್ತು ರಾಶ್ಯಾಧಿಪತಿ ಬುಧನ ಪ್ರಭಾವದಿಂದ ಆರ್ಥಿಕವಾಗಿ ಪ್ರಗತಿ, ಉದ್ಯೋಗದಲ್ಲಿ ಯಶಸ್ಸು, ಬಡ್ತಿ, ಪ್ಯಾಕೇಜ್ ಬದಲಾವಣೆ, ವಿದೇಶ ಯೋಗ, ಮತ್ತು ಮಕ್ಕಳ ಸಂತಾನ ಯೋಗ ಕೂಡಿಬರುತ್ತದೆ. ಸರ್ಕಾರಿ ನೌಕರರು, ಶಿಕ್ಷಣ, ಆರೋಗ್ಯ ಕ್ಷೇತ್ರದವರು, ಡಾಕ್ಟರ್, ಸರ್ಜನ್ಗಳು, ಸಿವಿಲ್ ಇಂಜಿನಿಯರ್ಗಳು, ಬಿಲ್ಡರ್ಗಳು ಮತ್ತು ಮಾರ್ಕೆಟಿಂಗ್ ವೃತ್ತಿಯವರಿಗೆ ವಿಶೇಷವಾಗಿ ಶುಭಫಲಗಳು ದೊರೆಯುತ್ತವೆ. ಪ್ರಯಾಣದಿಂದ ಲಾಭ, ವಾಹನ ಯೋಗ, ಮತ್ತು ತಂದೆ-ತಾಯಿಗಳ ಆಶೀರ್ವಾದ ಇರಲಿದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಳ್ಳಾಪುರ, ಮಾರ್ಚ್ 08: ಸಂಬಂಧಿಕರ ಮದುವೆ ಕಾರ್ಯದ ಪ್ರಯುಕ್ತ ಎಲ್ಲಾ ಚಿನ್ನಾಭರಣವನ್ನು ಒತ್ತೆಯಿಟ್ಟು ಅದರಿಂದ ಬಂದ ಹಣವನ್ನು ತೆಗೆದುಕೊಂಡ ಕುಟುಂಬವೊಂದು ಬೆಂಗಳೂರಿನತ್ತ ಹೊರಟಿತ್ತು. ದಾರಿ ಮಧ್ಯೆ ಟೀ ಕುಡಿಯಲು ಕಾರು ನಿಲ್ಲಿಸಿ ಬಾಗಿಲು ತೆಗೆದಿದ್ದೆ ತಡ, ಫಿಲ್ಮಿ ಸ್ಟೈಲ್ನಲ್ಲಿ ಬಂದ ಕಳ್ಳರ ಗ್ಯಾಂಗ್ ಕಾರಿನಲ್ಲಿದ್ದ ಹಣದ ಬ್ಯಾಗ್ ಕದ್ದು(Robbery) ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ ಮತ್ತೊಬ್ಬ ಹಣದ ಸಮೇತ ಪರಾರಿ ಆಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಕೆ.ವಿ ಕ್ಯಾಂಪಸ್ ಬಳಿ ಘಟನೆ ನಡೆದಿದೆ.
ಕಳ್ಳರನ್ನು ಬೆನ್ನಟ್ಟಿ ಹಿಡಿದ ಕ್ರಿಕೆಟ್ ಆಡುತ್ತಿದ್ದ ಯುವಕರು
ಆಂಧ್ರ ಮೂಲದ ಉಷಾ ಹಾಗೂ ಅವರ ಇಬ್ಬರು ಮಕ್ಕಳು, ಸಂಬಂಧಿಕರ ಮದುವೆ ಕಾರ್ಯಕ್ಕೆ ಹಣ ಕೊಡಲು ಆಂಧ್ರದಿಂದ ಬೆಂಗಳೂರಿಗೆ ಹೊರಟಿದ್ದರು. ದಾರಿ ಮಧ್ಯೆ ಚಿಕ್ಕಬಳ್ಳಾಪುರದ ಬಳಿ ತಿಂಡಿ ತಿನ್ನಲು ಅಂತ ಕಾರು ನಿಲ್ಲಿಸಿ ಬಾಗಿಲು ತೆಗೆದಿದ್ದೆ ತಡ, ಅಷ್ಟರಲ್ಲಿ ಬಂದ ಮೂವರು ಅಪರಿಚಿತ ಯುವಕರು ಕಾರಿನಲ್ಲಿದ್ದ ಹಣದ ಬ್ಯಾಗ್ ಎಗರಿಸಿ ಪರಾರಿ ಆಗಿದ್ದಾರೆ. ಉಷಾ ಮಕ್ಕಳು ಜೋರಾಗಿ ಕೂಗಿದ್ದಾರೆ. ಈ ವೇಲೆ ಅಲ್ಲೇ ಕ್ರಿಕೆಟ್ ಆಡುತ್ತಿದ್ದ ಯುವಕರು ಸಹ ಬೆನ್ನಟ್ಟಿ ಇಬ್ಬರು ಕಳ್ಳರನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹಣದ ಬ್ಯಾಗ್ ಸಮೇತ ಕಾರು ಆಂಧ್ರದಿಂದ ಬೆಂಗಳೂರಿಗೆ ಹೊರಟಿತ್ತು. ಕಾರಿನಲ್ಲಿ ಹಣ ಇರುವ ಬಗ್ಗೆ ಹಾಗೂ ಕಾರು ಡೋರ್ ತೆಗೆದಯುತ್ತಿದ್ದಂತೆ ಅಟ್ಯಾಕ್ ಮಾಡಿರುವ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಮತ್ತೊಂದೆಡೆ ಬಂಧಿತ ಕಳ್ಳರು ಕಾರಿನಲ್ಲಿ ಇರುವವರ ಮೇಲೇ ಬೊಟ್ಟುತೋರಿಸಿದ್ದಾರೆ. ಒಟ್ಟಿನಲ್ಲಿ ಪೊಲೀಸರ ತನಿಖೆಯಿಂದ ಸತ್ಯ ಗೊತ್ತಾಗಬೇಕಿದೆ.
ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ.
ವೃಷಭ ರಾಶಿ:
ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ. ಕಚೇರಿ ರಾಜಕೀಯದಿಂದ ದೂರವಿರುವಿರಿ ಹಾಗೂ ಕುಟುಂಬದ ಜೊತೆಗೆ ಹೆಚ್ಚು ಸಮಯ ಕಳೆಯಿರಿ. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ. ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸುಮ್ಮನೆ ಕಾಲಹರಣವಾಗುವುದು ನಿಮಗೆ ಗೊತ್ತಾಗದು.
ಮಿಥುನ ರಾಶಿ:
ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಆದಾಯವನ್ನು ಹೆಚ್ಚಿಸಲು ಹೊಸ ಮಾರ್ಗಗಳನ್ನು ನೋಡಿ. ಹಣ ಸಂಪಾದಿಸಲು ಕಷ್ಟಪಟ್ಟು ಕೆಲಸ ಮಾಡುತ್ತಿರಿ. ಇಂದು ವ್ಯವಹಾರದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಲಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ವಾಹನ ಸವಾರರು ಜಾಗರೂಕತೆ ಅವಶ್ಯಕ.
ಕರ್ಕಾಟಕ ರಾಶಿ:
ಇಂದು ಅವಶ್ಯಕತೆಗಳ ಪೂರೈಕೆಯು ಕಷ್ಟ ಎನಿಸಬಹುದು. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಸಂಗಾತಿಯಿಂದ ಉಡುಗೊರೆಯು ಅನಿರೀಕ್ಷಿತವಾಗಿ ಸಿಗಬಹುದು.
ಸಿಂಹ ರಾಶಿ:
ಹಳೆಯ ಸ್ನೇಹಿತರನ್ನು ಆಕಸ್ಮಿಕವಾಗಿ ಭೇಟಿ ಮಾಡುವ ಸಾಧ್ಯತೆಯಿದೆ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಏನೇ ಮಾಡಿದರೂ ಹೊಸ ಮಾದರಿಯಲ್ಲಿ ಅದು ಇರಲಿದೆ. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಕಛೇರಿಯ ಕೆಲಸವನ್ನು ಹಂಚಿಕೊಂಡು ಮಾಡುವಿರಿ.
ಕನ್ಯಾ ರಾಶಿ:
ವ್ಯಾಪಾರದಲ್ಲಿ ವಿಸ್ತರಣೆಯಾಗಲಿದೆ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಅತಿಯಾದ ವಿಷಾದದಿಂದ ಯಾರ ಜೊತೆಯೂ ಬೆರೆಯುವ ಮನಸ್ಸಿರದು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗಮಾಡಬಹುದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು.
ತುಲಾ ರಾಶಿ:
ಕೆಲವರಿಗೆ ಪೂರ್ವಿಕರ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ಉದರಬಾಧೆಯಿಂದ ಕಷ್ಟಪಡುವಿರಿ. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು.
ವೃಶ್ಚಿಕ ರಾಶಿ:
ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ನಿಮ್ಮ ಕೆಲಸಗಳಿಗೆ ಆತ್ಮಸಾಕ್ಷಿಯೇ ಮುಖ್ಯವಾಗಿರುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಆಪ್ತರ ಜೊತೆ ಮಾಡಿದ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ವಾಸಸ್ಥಳದ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು.
ಧನು ರಾಶಿ:
ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುಬಿರಿ. ಮಕ್ಕಳ ಬಗ್ಗೆ ನಿಮ್ಮ ಭಾವನೆ ತಪ್ಪಾಗಬಹುದು.
ಮಕರ ರಾಶಿ:
ಸಂಬಂಧಗಳಲ್ಲಿ ಉತ್ತಮ ಪರಸ್ಪರ ತಿಳುವಳಿಕೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕೆಲಸದಲ್ಲಿ ಅಡೆತಡೆಗಳ ನಡುವೆಯೂ ಯಶಸ್ಸನ್ನು ಪಡೆಯುತ್ತಾರೆ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಬಹುದು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ. ನಿಮ್ಮ ವರ್ತನೆಯನ್ನು ಇತರರು ಅನುಕರಿಸಿಯಾರು.
ಕುಂಭ ರಾಶಿ:
ಯಾವುದೇ ಅಡೆತಡೆಯಿಲ್ಲದೆ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಮನೆಯ ಬಗ್ಗೆಯೆರ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಆಪ್ತರ ಮಾತಿನ ಮೇಲೆ ಭರವಸೆ ಇಡಿ.
ಮೀನ ರಾಶಿ:
ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಯಾರಿಗೂ ದೊಡ್ಡ ಮೊತ್ತದ ಸಾಲ ನೀಡಬೇಡಿ. ಹಿಂದಿರುಗಿಸಲು ನೀವು ತೊಂದರೆಗಳನ್ನು ಎದುರಿಸಬಹುದು. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು. ಯಾರಿಂದಲಾದರೂ ಹಿತವಚನದ ಅವಶ್ಯಕತೆ ಇರುವುದು. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಹಣದ ವಿಚಾರದಲ್ಲಿ ನಿಮಗೆ ಸರಿಯಾದ ಮಾರ್ಗದರ್ಶನ ಬೇಕಾಗುವುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 06 – 37 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:07 – 09:36, ಯಮಗಂಡ ಕಾಲ 11:06 – 12:35, ಗುಳಿಕ ಕಾಲ 14:04 – 15:34